Author: main-admin

ಗದಗ: ನಗರಸಭೆ ಉಪಾಧ್ಯಕ್ಷೆಯ ಪುತ್ರ ಸಹಿತ ನಾಲ್ವರನ್ನು ಹತ್ಯೆಗೈದ ಘಟನೆ ನಗರದ ದಾಸರ ಓಣಿಯಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದೆ. ಹತ್ಯೆಗೀಡಾದವರನ್ನು ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ (27) ಹಾಗೂ ಕೊಪ್ಪಳ ಮೂಲದ ಸಂಬಂಧಿಕರಾದ ಪರಶುರಾಮ (55) ಪತ್ನಿ ಲಕ್ಷ್ಮೀ (45) ಪುತ್ರಿ ಆಕಾಂಕ್ಷಾ (16) ಎಂದು ಗುರುತಿಸಲಾಗಿದೆ. ಇವರು ಏಪ್ರಿಲ್‌ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್ ನ ಮದುವೆ ನಿಶ್ಚಿತಾರ್ಥ ಕಾರ್ಯಕ್ರಮಕ್ಕಾಗಿ ಆಗಮಿಸಿದ್ದರು. ರಾತ್ರಿ ವೇಳೆ ಮನೆಯ ಮೊದಲನೇ ಮಹಡಿಯ ಕೋಣೆಯಲ್ಲಿ ಮಲಗಿದ್ದ ಈ ಮೂವರನ್ನು ಕೊಲೆ ಮಾಡಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಬಾಗಿಲು ಸದ್ದು ಕೇಳಿ ಅನುಮಾನಗೊಂಡು ಮನೆ ಮಂದಿ ಪೊಲೀಸರಿಗೆ ಫೋನಾಯಿಸುತ್ತಿರುವಾಗಲೇ ತಪ್ಪಿಸಿಕೊಂಡಿದ್ದಾರೆನ್ನಲಾಗಿದೆ. ಘಟನಾ ಸ್ಥಳಕ್ಕೆ ಎಸ್ಪಿ ಬಿ ಎಸ್ ನೇಮಗೌಡ, ಹೆಚ್ಚುವರಿ ಎಸ್ಪಿ ಎಂ ಬಿ ಸಂಕದ, ಡಿವೈಎಸ್ಪಿ, ಸಿಪಿಐ ಸೇರಿ ಹಲವು ಅಧಿಕಾರಿಗಳು ಭೇಟಿ ನೀಡಿದ್ದು, ಶ್ವಾನದಳ, ಫಾರೆನ್ಸಿಕ್ ತಂಡಗಳಿಂದ ಪರಿಶೀಲನೆ ನಡೆಯುತ್ತಿದೆ.

Read More

ಉಡುಪಿ ಮತ್ತು ಕುಂದಾಪುರ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ (ಎನ್‌ಎಚ್‌) ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಮೃತರನ್ನು ಹೇರೂರು ನಿವಾಸಿ ಕೃಷ್ಣ ಗಾಣಿಗ ಎಂದು ಗುರುತಿಸಲಾಗಿದ್ದು, ಸಂತೆಕಟ್ಟೆಯಿಂದ ಬ್ರಹ್ಮಾವರಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ರಸ್ತೆ ದುರಸ್ತಿ ಕಾಮಗಾರಿಯಿಂದಾಗಿ ಸಂಚಾರ ವ್ಯತ್ಯಯ ಉಂಟಾಗಿ ರಸ್ತೆಯನ್ನು ಏಕ ಪಥಕ್ಕೆ ಇಳಿಸಿದ ಘಟನೆ ನಡೆದಿದೆ. ದುರದೃಷ್ಟವಶಾತ್ ಎದುರಿನಿಂದ ಬರುತ್ತಿದ್ದ ಲಾರಿಗೆ ಕೃಷ್ಣ ಡಿಕ್ಕಿ ಹೊಡೆದು ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೃಷ್ಣ ಅವರು ಉಡುಪಿ ನಗರ ಪಾಲಿಕೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಗಿ ಪ್ರಯಾಣಿಕರು ಪರದಾಡಿದರು. ಈ ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಹುಬ್ಬಳ್ಳಿ ನಗರದಲ್ಲಿ ಹಾಡು ಹಗಲೇ ಕಾರ್ಪೊರೇಟರ್ ಪುತ್ರಿ ಯನ್ನು ಭೀಕರವಾಗಿ ಕೊಲೆ ಮಾಡಿದ್ದು,ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿ ನೇಹ ಹಿರೇಮಠ ಎನ್ನುವ ಯುವತಿಯನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆಗೈಯಲಾಗಿದೆ.ಹುಬ್ಬಳ್ಳಿ ಧಾರವಾಡ ಪಾಲಿಕೆ ಸದಸ್ಯ ನಿರಂಜನ್ ಹಿರೇಮಠ ಪುತ್ರಿ ನೇಹ ಎಂದು ಹೇಳಲಾಗುತ್ತಿದೆ.ಇದರಿಂದ ಹುಬ್ಬಳ್ಳಿ ಜನತೆ ಬೆಚ್ಚಿಬಿದ್ದಿದ್ದಾರೆ ಹಾಡು ಹಗಲೇ ಕಾಲೇಜಿನಲ್ಲಿ ಈ ಒಂದು ಭೀಕರ ಹತ್ಯೆ ನಡೆದಿದೆ. ಚಾಕುವಿನಿಂದ ಇರಿದು ನೇಹಾ ಹಿರೇಮಠ ಎನ್ನುವ ಯುವತಿಯನ್ನು ಕೊಲೆ ಮಾಡಲಾಗಿದೆ.ಪಾಲಿಕೆಯ ಸದಸ್ಯರಾಗಿರುವ ನಿರಂಜನ ಹಿರೇಮಠ ಪುತ್ರಿ ನೇಹಾ ಎಂದು ಹೇಳಲಾಗುತ್ತಿದ್ದು ಹಾಡು ಹಗಲೇ ಕಾಲೇಜಿನಲ್ಲಿ ಘೋರ ದುರಂತ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಶಾಸಕ ಪ್ರಸಾದ್ ಅಬ್ಬಯ್ಯ ಹೇಳಿಕೆಯ ನೀಡಿದರು.

Read More

ಕಾರ್ಕಳ: ಕ್ರೆಡಿಟ್ ಕಾರ್ಡ್ ಅಕ್ಟಿವ್ ಮಾಡುವ ಹೆಸರಿನಲ್ಲಿ ಲಕ್ಷಾಂತರ ರೂ. ಹಣ ವರ್ಗಾವಣೆ ಮಾಡಿ ವಂಚಿಸಿರುವ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಕಳದ ಮೂರ್ತಿ ಕೆ.ಆರ್ (34) ಎಂಬವರಿಗೆ ಕ್ರೆಡಿಟ್ ಕಾರ್ಡ್ ಅಕ್ಟಿವ್ ಮಾಡುವ ಬಗ್ಗೆ ಲಿಂಕ್ ಬಂದಿದ್ದು, ಅದನ್ನು ನಂಬಿದ ಮೂರ್ತಿ, ಲಿಂಕ್ ಒತ್ತಿದ್ದರು. ಅಗ ಒಟಿಪಿ ಬಂದಿದ್ದು ಕ್ರೆಡಿಟ್ ಕಾರ್ಡ್‌ನಿಂದ 1,67,657ರೂ ಹಣ ಕಡಿತವಾಯಿತು. ಈ ಮೂಲಕ ಮೂರ್ತಿ ಅವರಿಗೆ ವಂಚನೆ ಎಸಗಿರುವ ಬಗ್ಗೆ ದೂರಲಾಗಿದೆ.

Read More

ಬೆಳ್ತಂಗಡಿ: ಸಮೀಪದ ಶಿಬಾಜೆ ಗ್ರಾಮದ ತಂಬ್ಲಾಜೆಯಲ್ಲಿ ಪಿಕಪ್‌ ವಾಹನವೊಂದು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ರುಕ್ಮ ಮುಗೇರ ಹಾಗೂ ನಾಗೇಶ್‌ ಅವರು ಪಿಕಪ್‌ ವಾಹನದಲ್ಲಿ ಗೊಬ್ಬರ ಲೋಡ್‌ ಮಾಡಿಕೊಂಡು ಬರಲು ತೆರಳಿದ್ದರು. ಈ ವೇಳೆ ಶಿಬಾಜೆ ಬಳಿ ನಿಲ್ಲಿಸಿದಾಗ ರುಕ್ಮ ಮುಗೇರ ರಸ್ತೆಯ ಬದಿಯಲ್ಲಿ ನಿಂತುಕೊಂಡಿದ್ದರು. ಅದರ ಚಾಲಕ ಜಯೇಶ್‌ ಅವರು ದುಡುಕುತನದಿಂದ ಹಿಮ್ಮುಖವಾಗಿ ಚಲಾಯಿಸಿ, ರಸ್ತೆಯ ಬದಿಯಲ್ಲಿ ನಿಂತುಕೊಂಡಿದ್ದ ರುಕ್ಮ ಮುಗೇರ ಅವರಿಗೆ ಢಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ, ರುಕ್ಮ ಮುಗೇರ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡರು ತತ್‌ಕ್ಷಣ ಅವರಿಗೆ ಉಜಿರೆಯ ಎಸ್‌ಡಿಎಂ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಈ ವಿಚಾರವಾಗಿ ಉಪೇಂದ್ರ ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read More

ಪುತ್ತೂರು: ಜೀಪೊಂದು ಬೈಕ್ ಗೆ ಢಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟು ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಬಡಕ್ಕೋಡಿ ಕಡ್ಯ ನಿವಾಸಿ ಲೋಕೇಶ್(48) ಮೃತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದಿಬಂದಿದೆ. ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್ ಅವರು ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆ ಅವರು ಚಲಾಯಿಸುತ್ತಿದ್ದ ಬೈಕ್ ಗೆ ಜೀಪು ಢಿಕ್ಕಿ ಹೊಡೆದು, ಢಿಕ್ಕಿಯ ರಭಸಕ್ಕೆ ಬೈಕ್‌ ಎರಡು ತುಂಡಾಗಿದೆ. ಸುಮಾರು 50 ಮೀಟರ್ ದೂರದ ತನಕ ಬೈಕನ್ನು ಜೀಪ್ ಎಳೆದುಕೊಂಡು ಹೋಗಿದ್ದು,ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.ಪುತ್ತೂರು ಸಂಚಾರಿ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ತನಿಖೆ…

Read More

ಬಂಟ್ವಾಳ: ಬಡ್ಡಕಟ್ಟೆಯಲ್ಲಿ ವ್ಯಕ್ತಿಯೋರ್ವರಿಗೆ ಚೂರಿ ಇರಿದು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬಂಟ್ವಾಳ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿ ರವಿ ನಾವೂರು ಎಂದು ಗುರುತಿಸಲಾಗಿದೆ. ಆತ ಎ. 14ರ ರಾತ್ರಿ ಜಕ್ರಿಬೆಟ್ಟು ನಿವಾಸಿ ಪುಷ್ಪರಾಜ್‌ ಅವರ ಕುತ್ತಿಗೆಯ ಭಾಗಕ್ಕೆ ಚೂರಿಯಿಂದ ಇರಿದು ಪರಾರಿಯಾಗಿದ್ದ. ಗಂಭೀರ ಗಾಯಗೊಂಡಿದ್ದ ಪುಷ್ಪರಾಜ್‌ ಅವರು ಪ್ರಸ್ತುತ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿಯು ಕೃತ್ಯ ನಡೆಸಿದ ಬಳಿಕ ಮೊಬೈಲ್‌ ಸ್ವಿಚ್ ಆಫ್‌ ಮಾಡಿ ಪರಾರಿಯಾಗಿದ್ದ. ಇವರಿಬ್ಬರ ಮಧ್ಯೆ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ಗಲಭೆ ನಡೆದಿತ್ತು ಎಂದು ಗುರುರಾಜ್‌ ಅವರು ಪೊಲೀಸರಿಗೆ ನೀಡಿದ್ದ ದೂರಿನಲ್ಲಿ ಆರೋಪಿಸಿದ್ದರು. ಬಂಟ್ವಾಳ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

Read More

ಮಣಿಪಾಲ :  ಹಣ ದ್ವಿಗುಣ ಗೊಳಿಸುವ ಆಸೆಗೆ ಬಿದ್ದು ವ್ಯಕ್ತಿಯೊಬ್ಬರು 1.65 ಲಕ್ಷ ರೂ. ಕಳೆದುಕೊಂಡಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಶಿವಳ್ಳಿ ಗ್ರಾಮದ ನರಸಿಂಹ ಅವರು ಟೆಲಿಗ್ರಾಂ ನಲ್ಲಿದ್ದ OPTIONTIPS ಎಂಬ ಶೇರು ಮಾರುಕಟ್ಟೆ ಬಗ್ಗೆ ಸಲಹೆ ನೀಡುವಂತಹ ಗ್ರೂಪ್‍ನ್ನು ಸುಮಾರು 15 ದಿನದಿಂದ ಉಪಯೋಗಿಸುತ್ತಿದ್ದರು, ಎ.1 ರಂದು ಟೆಲಿಗ್ರಾಂ ಹುಡುಕುತ್ತಿದ್ದಾಗ ಮೊದಲು ಉಪಯೋಗಿಸುತ್ತಿದ್ದ ಟೆಲಿಗ್ರಾಂ ನಂತೆಯೇ ಹೋಲುವ ಇನ್ನೊಂದು OPTIONTIPS ಟೆಲಿಗ್ರಾಂ ಇದ್ದು ಅದನ್ನು ಮೊದಲು ಉಪಯೋಗಿಸಿದ ಟೆಲಿಗ್ರಾಂ ಎಂದು ತಿಳಿದು ಉಪಯೋಗಿಸಿದಾಗ ಅದರಲ್ಲಿ ಹಣ ದ್ವಿಗುಣಗೊಳಿಲಾಗುತ್ತದೆ ಎಂಬ ಮಾಹಿತಿ ನೀಡಲಾಗಿತ್ತು. ಇದನ್ನು ನಂಬಿದ ನರಸಿಂಹ ಅವರು ಆ್ಯಪ್‍ನಲ್ಲಿ ಅಪರಿಚಿತ ವ್ಯಕ್ತಿ ಸೂಚಿಸಿದಂತೆ ಹಂತ ಹಂತವಾಗಿ ಒಟ್ಟು ರೂ 1,65,584/- ಹಣ ವರ್ಗಾವಣೆ ಮಾಡಿರುತ್ತಾರೆ. ಆದರೆ ಅಪರಿಚಿತ ವ್ಯಕ್ತಿಯು ಹಣ ದ್ವಿಗುಣಗೊಳಿಸಲಾಗುತ್ತದೆ ಎಂದು ನಂಬಿಸಿ ಹಣ ಪಡೆದು ವಾಪಾಸು ನೀಡದೇ ಮೋಸ ಮಾಡಿರುವುದಾಗಿ ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಕಳೆದ ಒಂದು ವರ್ಷದಿಂದ ರಾಜ್ಯ ಬರದಿಂದ ಕಂಗೆಟ್ಟಿದ್ದು ರೈತರು ಸೇರಿದಂತೆ ಇಡೀ ರಾಜ್ಯದ ಜನತೆ ಹಲವು ಸಂಕಷ್ಟಗಳನ್ನು ಎದುರಿಸಿದ್ದಾರೆ.ಹೀಗಾಗಿ ರಾಜ್ಯದ ಎಲ್ಲಾ ಕೋರ್ಟ್​​ಗಳಲ್ಲಿ ಕಾರ್ಯನಿರ್ವಹಿಸುವ ವಕೀಲರಿಗೆ ಕರ್ನಾಟಕ ಹೈಕೋರ್ಟ್ ತುಸು ನಿರಾಳವಾಗುವಂತಹ ಸುದ್ದಿ ನೀಡಿದೆ. ಕಪ್ಪು ಕೋಟ್ ಧರಿಸುವುದರಿಂದ ತಾತ್ಕಾಲಿಕ ವಿನಾಯಿತಿ ನೀಡಿದೆ. ಹೌದು ಕೋರ್ಟ್ನಲ್ಲಿ ವಾದ ಮಂಡಿಸುವ ವಕೀಲರಿಗೆ ಇದೀಗ ತಾತ್ಕಾಲಿಕವಾಗಿ ಮುಕ್ತಿ ಸಿಕ್ಕಿದ್ದು, ಬೇಸಿಗೆಯ ದಿನಗಳಲ್ಲಿ ವಕೀಲರು ಕೋರ್ಟ್ ಧರಿಸದಿದ್ದರೂ ಕೂಡ ನಡೆಯುತ್ತದೆ. ಆದರೆ ಕಪ್ಪು ಕೋರ್ಟ್ ಹೊರದಾಗಿ ಯಾವ ಜರಿಸನ್ನು ಧರಿಸಬೇಕು ಎಂಬುದರ ಕುರಿತು ಇದೀಗ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ವಕೀಲರು ಕಪ್ಪು ಕೋಟಿನ ಬದಲಿಗೆ ಸಾದಾ ಬಿಳಿ ಶರ್ಟ್ ಸಲ್ವಾರ್-ಕಮೀಜ್ ಅಥವಾ ಯಾವುದೇ ಶಾಂತ ಬಣ್ಣದ ದಿರಿಸುಗಳನ್ನು ಧರಿಸಬಹುದು ಎಂದು ನ್ಯಾಯಾಲಯದ ರಿಜಿಸ್ಟ್ರಾರ್ ಕೆಎಸ್ ಭರತ್ ಕುಮಾರ್ ಮಂಗಳವಾರ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.ಏಪ್ರಿಲ್ 5 ರಂದು ಬೆಂಗಳೂರಿನ ವಕೀಲರ ಸಂಘದ ಅಧ್ಯಕ್ಷರಿಂದ ಪಡೆದ ಮನವಿಯನ್ನು ಆಧರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

Read More

ಬಂಟ್ವಾಳ : ಕಾರು ಡಿಕ್ಕಿಯಾದ ವಿಚಾರಕ್ಕೆ ದಂಪತಿಗೆ ನಾಲ್ವರ ತಂಡವೊಂದು ಹಲ್ಲೆ ನಡೆಸಿರುವ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ನಡೆದಿದೆ. ಈ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ ಹಲ್ಲೆಗೊಳಗಾದವರು. ಮಂಜುನಾಥ್ ಮಂಗಳೂರಿನಿಂದ ಪುತ್ತೂರು ಕಡೆಗೆ ಕಾರಿನಲ್ಲಿ ಪತ್ನಿಯೊಂದಿಗೆ ತೆರಳುತ್ತಿದ್ದರು.‌ ಈ ವೇಳೆ ಕಲ್ಲಡ್ಕ ಸಮೀಪದ ನರಹರಿ ಎಂಬಲ್ಲಿ ಇವರ ಕಾರಿಗೆ ಹರಿಯಾಣ ಮೂಲದ ಕಾರೊಂದು ಓವರ್ ಟೇಕ್ ಮಾಡುವ ಭರದಲ್ಲಿ ಡಿಕ್ಕಿಯಾಗಿದೆ. ಈ ಸಂದರ್ಭ ಇವರು ಕೈ ಸನ್ನೆಯಲ್ಲಿ ಪ್ರಶ್ನಿಸಿದ್ದಾರೆ. ಅಪಘಾತ ಎಸಗಿದ ಕಾರು ಮುಂದೆ ಹೋಗಿ ಕಲ್ಲಡ್ಕ ಸಮೀಪದ ಕರಿಂಗಾಣ ಕ್ರಾಸ್ ಬಳಿ ಕಾರನ್ನು ಅಡ್ಡವಾಗಿ ಇರಿಸಿ ಮಂಜುನಾಥ್ ಹಾಗೂ ಅವರ ಪತ್ನಿ ಪೂರ್ಣಿಮಾ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ಮಂಜುನಾಥ್ ಅವರ ಕಣ್ಣಿನ ಮೇಲೆ ಪೆಟ್ಟು ಬಿದ್ದಿದ್ದು, ಇದೇ ಸಂದರ್ಭ ಪೂರ್ಣಿಮಾ ಅವರ ಕುತ್ತಿಗೆಯಲ್ಲಿದ್ದ ಬಂಗಾರದ ಚೈನ್ ನಾಪತ್ತೆಯಾಗಿದೆ ಎಂದು…

Read More