Author: main-admin

ಮಂಗಳೂರು: ಪ್ರಧಾನಿ ನರೇಂದ್ರ ಮೋದಿರವರು ಏಪ್ರೀಲ್ 14‌ ರಂದು ಮಂಗಳೂರಿನ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತದಿಂದ ನವಭಾರತ ಸರ್ಕಲ್‌ವರೆಗೆ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಇತರೆ ಜಿಲ್ಲೆಗಳಿಂದ ಸಾರ್ವಜನಿಕರು ಆಗಮಿಸಲಿದ್ದು, ಗೌರವಾನ್ವಿತ ಪ್ರಧಾನಮಂತ್ರಿಗಳ ಭದ್ರತೆಯ ದೃಷ್ಟಿಯಿಂದ ಹಾಗೂ ಸಂಚಾರ ಸುವ್ಯವಸ್ಥೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಹಿತದೃಷ್ಟಿಯಿಂದ ಏಪ್ರೀಲ್ 14‌ ರಂದು ಮಧ್ಯಾಹ್ನ 02-00 ಗಂಟೆಯಿಂದ ಪ್ರಧಾನ ಮಂತ್ರಿಗಳ ಕಾರ್ಯಕ್ರಮ ಮುಗಿಯುವವರೆಗೆ ಮಂಗಳೂರು ನಗರದಲ್ಲಿ ವಾಹನಗಳ ಸಂಚಾರಕ್ಕಾಗಿ ಪರ್ಯಾಣಯ ವ್ಯವಸ್ಥೆಯನ್ನು ಮಾಡಲಾಗಿದ್ದು, ವಾಹನಗಳ ಸಂಚಾರದ/ನಿಲುಗಡೆಯ ನಿಷೇಧಿತ ಸ್ಥಳ ಹಾಗೂ ವಾಹನಗಳ ಪಾರ್ಕಿಂಗ್ ಸ್ಥಳಗಳ ವಿವರಗಳು ಈ ಕೆಳಗಿನಂತಿದೆ. ವಾಹನ ಸಂಚಾರ ನಿಷೇಧಿತ ಮಾರ್ಗಗಳು 1. ಗೌರವಾನ್ವಿತ ಭಾರತದ ಪ್ರಧಾನಮಂತ್ರಿಗಳ ರೋಡ್ ಶೋ ನಡೆಯುವ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತ – ಲಾಲ್‌ಬಾಗ್ – ಬಲ್ಲಾಳ್‌ಬಾಗ್ – ಕೊಡಿಯಾಲ್ ಗುತ್ತು – ಬಿ.ಜಿ ಸ್ಕೂಲ್ ಜಂಕ್ಷನ್ – ಪಿ.ವಿ.ಎಸ್ – ನವಭಾರತ ವೃತ್ತ –…

Read More

ಮಂಗಳೂರು : ಬೆಂಗಳೂರು-ಮಂಗಳೂರು ಮಧ್ಯೆ ಸಂಚರಿಸುವ ರೈಲಿನ ಎಸಿ ಕೋಚ್ ನಲ್ಲಿ 3.91 ಲಕ್ಷ ರೂ. ಮೌಲ್ಯದ 59.885 ಗ್ರಾಂ ಚಿನ್ನಾಭರಣ ಕಳವಾಗಿರುವ ಬಗ್ಗೆ ರೈಲ್ವೆ ಠಾಣೆಯಲ್ಲಿ ದೂರು ದಾಖಲಾಗಿದೆ. ಮಂಗಳೂರು ನಗರದ ಜಪ್ಪು ನಿವಾಸಿ 74ರ ಹರೆಯದ ವೃದ್ಧೆ, ಆಕೆಯ ಮಗಳು ಹಾಗೂ ಮೊಮ್ಮಕ್ಕಳು ಏಪ್ರಿಲ್ 7ರಂದು ಬೆಂಗಳೂರಿನಿಂದ ಮಂಗಳೂರಿಗೆ ರೈಲಿನಲ್ಲಿ ಬರುತ್ತಿದ್ದರು. ಬಳಿಕ ಏಪ್ರಿಲ್ 8 ರಂದು ಬೆಳಗ್ಗೆ ಮನೆಗೆ ತಲುಪಿದಾಗ ವ್ಯಾನಿಟಿ ಬ್ಯಾಗ್‌ನಲ್ಲಿಟ್ಟಿದ್ದ ಎರಡು ಬಳೆಗಳು, ಸರ ಸೇರಿ ಸುಮಾರು 59.885 ಗ್ರಾಂ ಚಿನ್ನಾಭರಣ ಕಳವಾಗಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ರೈಲ್ವೆ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ವರದಿಯಾಗಿದೆ.

Read More

ಹಾಸನದಲ್ಲಿ ಆರ್‌ಎಸ್‌ಎಸ್‌ ಮುಖಂಡ ವಿಜಯ್‌ಕುಮಾರ್ ಮತ್ತು ಸ್ನೇಹಿತರ ಮೇಲೆ ದುಷ್ಕರ್ಮಿಗಳ ಗುಂಪೊಂದು ಶುಕ್ರವಾರ ದಾಳಿ ನಡೆಸಿದೆ ವಿಜಯ್‌ಕುಮಾರ್ ಎಂದಿನಂತೆ ತನ್ನ ಕಚೇರಿಯಲ್ಲಿದ್ದಾಗ  ಏಕಾಏಕಿ ಅಂಗಡಿಗೆ ನುಗ್ಗಿರುವ 50ಕ್ಕೂ ಹೆಚ್ಚು ಜನರಿದ್ದ ದುಷ್ಕರ್ಮಿಗಳ ಗುಂಪು ಗಲಾಟೆ ಮಾಡಿ ಕಚೇರಿಯ ಗಾಜು ಮತ್ತು ಕೆಲವು ಕಂಪ್ಯೂಟರ್ ಉಪಕರಣಗಳನ್ನು ಪುಡಿ ಪುಡಿ ಮಾಡಿದೆ. ಇದೇ ಸಂದರ್ಭ ಕಚೇರಿಯ ಒಳಗೆ ಕುಳಿತಿದ್ದ ವಿಜಯ್ ಕುಮಾರ್ ಮೇಲೂ ಹಲ್ಲೆ ಮಾಡಿದೆ. ಪ್ರೀತಂಗೌಡನ ಬಗ್ಗೆ ಮಾತನಾಡುತ್ತೀಯಾ? ಎಷ್ಟೋ ಧೈರ್ಯ ನಿನಗೆ ಎಂದು ಗಂಭೀರವಾಗಿ ಹಲ್ಲೆ ಮಾಡಿದ್ದಾರೆ. ತಕ್ಷಣ ವಿಜಯ್ ಕುಮಾರ್ ಸ್ನೇಹಿತರು ಆಗಮಿಸಿ ಹಲ್ಲೆ ಬಿಡಿಸಲು ಮುಂದಾದಾಗ ಅವರುಗಳ ಮೇಲೆಯೂ ಹಲ್ಲೆ ಮಾಡಿ ಗಾಯಗೊಳಿಸಿದ್ದಾರೆ. ನಂತರ ಸ್ಥಳೀಯರು ಆಗಮಿಸಿ ದುಷ್ಕರ್ಮಿಗಳನ್ನು ಹಿಡಿಯಲು ಮುಂದಾದಾಗ ಅಲ್ಲಿಂದ ಎಲ್ಲರೂ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಘಟನೆಗೆ ಮೂಲ ಕಾರಣ ಏನು?ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಾದ ಮೇಲೆ ಇತ್ತಿಚೆಗೆ ಸಂಸದರಾದ ಪ್ರಜ್ವಲ್ ರೇವಣ್ಣ ಅವರು ಐನೆಟ್ ವಿಜಯಕುಮಾರ್ ಮನೆಗೆ ಹೋಗಿ ಚರ್ಚೆ ಮಾಡಿದ್ದರು. ಇತ್ತ ಮಾಜಿ ಶಾಸಕರು…

Read More

ಮಂಗಳೂರು: ಬಾವಿಯಿಂದ ನೀರು ಸೇದುವ ವೇಳೆ ಆಯ ತಪ್ಪಿದ ಮಹಿಳೆಯೊಬ್ಬರು ಬಾವಿಗೆ ಬಿದ್ದಿದ್ದು, ಕದ್ರಿ ಅಗ್ನಿಶಾಮಕ ದಳದ ಸಿಬ್ಬಂದಿ ಗುರುವಾರ ರಕ್ಷಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ರಕ್ಷಿಸಲ್ಪಟ್ಟ ಮಹಿಳೆ ಬಿಕ್ಕರ್ನಕಟ್ಟೆ ಸಮೀಪದ ನಿವಾಸಿ ಟ್ರೆಸ್ಸಿ ಡಿಸೋಜಾ (58) ಎಂದು ಗುರುತಿಸಲಾಗಿದೆ. ಸಂಜೆ 5 ಗಂಟೆ ಸುಮಾರಿಗೆ ಟ್ರೆಸ್ಸಿ ಬಾವಿಯಿಂದ ನೀರು ಸೇದುತ್ತಿದ್ದಾಗ ತಲೆ ಸುತ್ತಿ ಬಾವಿಗೆ ಬಿದ್ದಿದ್ದಾರೆ. ಕೂಡಲೇ ಆಕೆಯ ಕುಟುಂಬಸ್ಥರು ಅಗ್ನಿಶಾಮಕ ದಳದ ಸಿಬ್ಬಂದಿಗೆ ವಿಷಯ ತಿಳಿಸಿದ್ದು, ಅವರು ಸ್ಥಳಕ್ಕೆ ಧಾವಿಸಿ ಬಾವಿಯಿಂದ ಮೇಲಕ್ಕೆ ಎತ್ತಿದ್ದಾರೆ. ಬಾವಿಯಲ್ಲಿ ಎಂಟು ಅಡಿಗೂ ಹೆಚ್ಚು ನೀರು ಇತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ನೀಡಿದ ಮಾಹಿತಿಯಂತೆ ಬಾವಿಯಲ್ಲಿದ್ದ ಪಂಪ್‌ಗೆ ಅಳವಡಿಸಿದ್ದ ಹಗ್ಗವನ್ನು ಮಹಿಳೆ ಹಿಡಿದಿದ್ದಾರೆ. ಕಾರ್ಯಾಚರಣೆಯಲ್ಲಿ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ರಾಜೀವ, ಮುಖ್ಯ ಅಗ್ನಿಶಾಮಕ ದಳದ ಅಧಿಕಾರಿ ಚಂದ್ರಹಾಸ ಸಾಲಿಯಾನ್, ಸಿಬ್ಬಂದಿಗಳಾದ ದಯಾಕರ, ಪುನೀತ್, ಶಿವರಾಜ್, ಪವನ್ ಕುಮಾರ್ ಭಾಗವಹಿಸಿದ್ದರು.

Read More

ಮಂಗಳೂರು: ದಮ್ಮಾಮ್ ನಿಂದ ಆಗಮಿಸಿದ ಪ್ರಯಾಣಿಕರಿಂದ 58,78,880 ರೂ ಮೌಲ್ಯದ 812 ಗ್ರಾಂ ಚಿನ್ನವನ್ನು ಗುರುವಾರ, ಏಪ್ರಿಲ್ 11 ರಂದು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಮಂಗಳೂರು ನಗರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ವಾಡಿಕೆಯ ಮೆಟಲ್ ಡಿಟೆಕ್ಟರ್ ಪರೀಕ್ಷೆಯ ಸಮಯದಲ್ಲಿ, ಪ್ರಯಾಣಿಕರ ಸೊಂಟದಿಂದ ಬೀಪ್ ಹೊರಹೊಮ್ಮಿತು. ಹೆಚ್ಚಿನ ತಪಾಸಣೆಯ ನಂತರ, ಅಧಿಕಾರಿಗಳು ಪ್ರಯಾಣಿಕರ ಗುದನಾಳದಲ್ಲಿ ಮೂರು ಸುತ್ತಿನ ಆಕಾರದ ವಸ್ತುಗಳೊಳಗೆ ಪೇಸ್ಟ್ ರೂಪದಲ್ಲಿ ಚಿನ್ನವನ್ನು ಬಚ್ಚಿಟ್ಟಿಕೊಂಡಿದ್ದರು. ತಪಾಸಣೆ ವೇಳೆ 812 ಗ್ರಾಂ 24-ಕ್ಯಾರೆಟ್ ಚಿನ್ನಪತ್ತೆಯಾಗಿದೆ. ಮುಂದಿನ ವಿಚಾರಣೆಗಾಗಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Read More

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಶಂಕಿತ ಆರೋಪಿಗನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಇಬ್ಬರು ಶಂಕಿತ ಆರೋಪಿಗನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಪ್ರಕರಣ ಸಂಬಂಧ ಹಲವರನ್ನು ವಶಕ್ಕೆ ಪಡೆದ ಎನ್‌ಐಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ಮಾಜ್ ಮುನೀರ್ ಕೃತ್ಯ ಧೃಡವಾಗಿದ್ದು, ಈತನೇ ಪ್ರಕರಣದ ಎ 1 ಆರೋಪಿಯಾಗಿದ್ದಾನೆ. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಮಾರ್ಚ್ 1 ರಂದು ಬೆಂಗಳೂರಿನ ವೈಟ್ ಫೀಲ್ಡ್ ಪ್ರದೇಶದಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟದಲ್ಲಿ ಒಂಬತ್ತು ಜನರು ಗಾಯಗೊಂಡಿದ್ದು, ಒಂದು ವಾರದ ನಂತರ ಮಾರ್ಚ್ 9 ರ ಶನಿವಾರ ಬೆಳಗ್ಗೆ 6 ಗಂಟೆಯಿಂದ ಬೆಂಗಳೂರಿನ ಕೆಫೆ ಆರಂಭವಾಗಿತ್ತು.

Read More

ಮಂಗಳೂರು: ನಗರದ ಅಡ್ಯಾರ್ ನಲ್ಲಿರುವ ಬೊಂಡ ಫ್ಯಾಕ್ಟರಿಯ ಎಳನೀರು ಸೇವಿಸಿ ಇದುವರೆಗೆ 137 ಮಂದಿ ಎಳನೀರು ಕುಡಿದಿರುವುದರಿಂದ ಅಸ್ವಸ್ಥರಾಗಿರುವ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಎಳನೀರು ಮತ್ತು ಇತರ ಆಹಾರೋತ್ಪಗಳನ್ನು ಮಾರಾಟ ಮಾಡದಂತೆ ನೋಟೀಸ್ ಜಾರಿಗೊಳಿಸಲಾಗಿದೆ. ಇತ್ತೀಚೆಗೆ ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಸೇವಿಸಿ 137 ಮಂದಿ ಅಸ್ವಸ್ಥರಾಗಿದ್ದಾರೆ. ಹೊರರೋಗಿಗಳಾಗಿ 84 ಮಂದಿ ಒಳರೋಗಿಗಳಾಗಿ 53 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 23 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆಯಲ್ಲಿರುವ ಎಲ್ಲರ ಆರೋಗ್ಯವು ಸ್ಥಿರವಾಗಿದೆ ಎಂದು ತಿಳಿದು ಬಂದಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಗುರುವಾರ ಆಹಾರ ಸುರಕ್ಷತೆಯ ಜಿಲ್ಲಾ ಅಂಕಿತ ಅಧಿಕಾರಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ, ತಾಲ್ಲೂಕು ಆರೋಗ್ಯಾಧಿಕಾರಿ ಹಾಗೂ ತಂಡ ಮತ್ತೆ ಬೊಂಡ ಫ್ಯಾಕ್ಟರಿಗೆ ತೆರಳಿ ಸ್ಥಳ ಪರಿಶೀಲನೆ ನಡೆಸಿದೆ‌. ಸಂಸ್ಥೆಯ ಮುಖ್ಯಸ್ಥರೊಂದಿಗೆ ಚರ್ಚಿಸಿ ತಾತ್ಕಾಲಿಕವಾಗಿ ಹಾಗೂ ಮುಂದಿನ ಆದೇಶದವರೆಗೆ ಎಳನೀರು ಮತ್ತು ಇತರೆ ಆಹಾರೋತ್ಪಗಳನ್ನು ಮಾರಾಟ ಮಾಡದಂತೆ ನೋಟೀಸ್ ಜಾರಿಗೊಳಿಸಿದೆ. ಅಲ್ಲದೆ ಸದ್ಯ ಫ್ಯಾಕ್ಟರಿಯನ್ನು ಬಂದ್ ಮಾಡಿಸಿದೆ.

Read More

ಉಡುಪಿ : ಬಸ್ ಟೈಮಿಂಗ್ ವಿಚಾರವಾಗಿ ಎರಡು ಬಸ್‌ ನಿರ್ವಾಹಕರ ನಡುವೆ ಹೊಡೆದಾಟ ನಡೆದ ಘಟನೆ ಕುಂದಾಪುರ – ಮಂಗಳೂರು ನಡುವೆ ಸಂಚರಿಸುವ ಎರಡು ಬಸ್ ಗಳ ನಿರ್ವಾಹಕರ ನಡುವೆ ನಡೆದಿದೆ. ಚಪ್ಪಲಿ ಎತ್ತಿ ಲೇಡಿ ಕಂಡಕ್ಟರ್‌ ಮತ್ತೋರ್ವ ಬಸ್‌ ನಿರ್ವಾಹಕ ನೊಂದಿಗೆ ಜಗಳವಾಡಿದ್ದಾರೆ. ಭಾರತಿ ಬಸ್ ನ ಲೇಡಿ ಕಂಡಕ್ಟರ್ ರೇಖಾ, ದುರ್ಗಾಪ್ರಸಾದ್ ಬಸ್ಸಿನ ಕಂಡಕ್ಟರ್ ರಾಘವೇಂದ್ರ ಸಂತೆಕಟ್ಟೆಯಲ್ಲಿ ಬಸ್ ನಿಲ್ಲಿಸಿದ್ದಾಗ ದುರ್ಗಾಪ್ರಸಾದ್ ಬಸ್ ನೊಳಗೆ ಬಂದು ಜಗಳವಾಡಿದ ರೇಖಾ ಪರಸ್ಪರ ಇಬ್ಬರು ಅವ್ಯಾಚ್ಯ ಶಬ್ದಗಳ ಬಳಸಿ ಪ್ರಯಾಣೀಕರ ಎದುರೇ ಕೈ ಕೈ ಮಿಲಾಯಿಸಿದ್ದಾರೆ. ಸದ್ಯ ಕಂಡಕ್ಟರ್ ಗಳು ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಉಡುಪಿಯ ಪ್ರಥಮ ಮಹಿಳಾ ಬಸ್ ಕಂಡಕ್ಟರ್ ಆಗಿ ಹೆಸರು ಮಾಡಿದ್ದ ರೇಖಾ ಕಳೆದ ಹಲವು ವರ್ಷಗಳಿಂದ ಉಡುಪಿ- ಕುಂದಾಪುರ ನಡುವೆ ಸಂಚರಿಸುವ ಭಾರತಿ ಮೋಟಾರ್ಸ್ ಬಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Read More

ಪುಣೆ: ಮಂಗಳಮುಖಿಯರು ಅಥವಾ ತೃತೀಯ ಲಿಂಗಿಯರು ಟ್ರಾಫಿಕ್​, ಬಸ್​ ಹಾಗೂ ರೈಲಿನಲ್ಲಿ ಬಂದು ಪ್ರಯಾಣಿಕರಿಂದ ಹಣ ಕೇಳುವುದು ಸಾಮಾನ್ಯವಾಗಿದೆ. ಯಾರೂ ಕೆಲಸ ಕೊಡುವುದಿಲ್ಲ ಅಂತಾ ಬದುಕಲು ಬೇರೆ ದಾರಿ ಇಲ್ಲದೆ ಹಣ ಕೇಳುತ್ತಾರೆ. ಕೆಲವೊಮ್ಮೆ ಹಣ ಕೊಡದಿದ್ದರೆ ಅಸಭ್ಯವಾಗಿಯೂ ವರ್ತಿಸುವ ಮೂಲಕ ಟೀಕೆಗು ಗುರಿಯಾಗುತ್ತಾರೆ. ಟ್ರಾಫಿಕ್​ಗಳಲ್ಲಂತೂ ಹಣಕ್ಕೆ ಬೇಡಿಕೆ ಇಡುವ ಇವರು, ಹಣ ಕೊಡದಿದ್ದಾಗ ಕೆಟ್ಟ ಪದಗಳಿಂದ ನಿಂದಿಸುತ್ತಾರೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಮಹಾರಾಷ್ಟ್ರದ ಪುಣೆ ಪೊಲೀಸರು ತೃತೀಯ ಲಿಂಗಿಗಳು ಭಿಕ್ಷೆ ಬೇಡುವುದನ್ನು ಬ್ಯಾನ್​ ಮಾಡಿದ್ದಾರೆ. ಪುಣೆ ಪೊಲೀಸ್ ಕಮಿಷನರ್ ಅಮಿತೇಶ್ ಕುಮಾರ್​ ಅವರು ಟ್ರಾಫಿಕ್ ಜಂಕ್ಷನ್‌ಗಳಲ್ಲಿ ತೃತೀಯಲಿಂಗಿಗಳು ಜಮಾಯಿಸಿ, ಪ್ರಯಾಣಿಕರಿಂದ ಬಲವಂತವಾಗಿ ಹಣಕ್ಕಾಗಿ ಒತ್ತಾಯಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಸಿಆರ್‌ಪಿಸಿಯ ಸೆಕ್ಷನ್ 144 ರ ಅಡಿಯಲ್ಲಿ ಪೊಲೀಸರು ಸ್ವೀಕರಿಸಿದ ಹಲವಾರು ದೂರುಗಳಿಗೆ ಪ್ರತಿಕ್ರಿಯೆಯಾಗಿ ಈ ಆದೇಶವನ್ನು ಹೊರಡಿಸಲಾಗಿದೆ ಎಂದು ಅಮಿತೇಶ್ ಕುಮಾರ್ ಹೇಳಿದ್ದಾರೆ. ನಾವು ಸಿಆರ್​ಪಿಸಿ ಸೆಕ್ಷನ್ 144ರ ಅಡಿಯಲ್ಲಿ ತೃತೀಯಲಿಂಗಿ ವ್ಯಕ್ತಿಗಳು ಟ್ರಾಫಿಕ್ ಜಂಕ್ಷನ್‌ಗಳಲ್ಲಿ ಜಮಾಯಿಸುವುದನ್ನು ಮತ್ತು ವಾಹನ…

Read More

ಉಡುಪಿ: ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಆರೋಪಿ ಪ್ರವೀಣ್ ಚೌಗುಲೆಯನ್ನು ವೀಡಿಯೋ ಕಾನ್ಸರೆನ್ಸ್ ಮೂಲಕ ನ್ಯಾಯಾಧೀಶರ ಎದುರು ಹಾಜರುಪಡಿಸಲಾಯಿತು. ಈ ಪ್ರಕರಣವನ್ನು ಉಡುಪಿ ಸೆಷನ್ಸ್ ಕೋರ್ಟ್ ನಿಂದ ಬೆಂಗಳೂರಿನ ಸೆಷನ್ಸ್ ಕೋರ್ಟ್‌ಗೆ ವರ್ಗಾಯಿಸುವಂತೆ ಕೋರಿ ಆರೋಪಿ ಪರ ವಕೀಲರು ಮೆಮೋ ಸಲ್ಲಿಕೆ ಮಾಡಿದ್ದರೂ ನ್ಯಾಯಪೀಠ ಅಂಗೀಕರಿಸಿಲ್ಲ. ಸಾಕ್ಷಿಗಳಿಗೆ ಸಮನ್ಸ್ ನೀಡಿ, ಮುಂದಿನ ವಿಚಾರಣೆಯು ಜೂನ್ 13ರಿಂದ 15ರ ಅವಧಿಯಲ್ಲಿ ನಡೆಯಲಿದೆ. ಮೊದಲನೇ ದಿನ ಒಬ್ಬರು ಹಾಗೂ ಉಳಿದ ದಿನಗಳಲ್ಲಿ ತಲಾ ಇಬ್ಬರಂತೆ ಮೂರು ದಿನಗಳ ಕಾಲ 5 ಮಂದಿ ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಲಾಗುವುದು.

Read More