ಬಜ್ಪೆ: ಎಡಪದವು ಎಂಬಲ್ಲಿ ಅಖಿಲೇಶ್ ಎಂಬವರ ಮೇಲೆ ತಲವಾರು ದಾಳಿ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಮಂಗಳೂರು ಬಂದರ್ ನಿವಾಸಿ ಸಿನಾನ್, ವೇಣೂರು ನಿವಾಸಿ ಇರ್ಷಾದ್, ವಾಮಂಜೂರು ನಿವಾಸಿ ಸುಹೈಲ್ ಅಕ್ರಮ್ ಮತ್ತು ವಾಮಂಜೂರು ಪಿಲಿಕುಳ ನಿವಾಸಿ ನಿಸಾನ್ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಗಳ ಪೈಕಿ ಮಂಗಳೂರು ಬಂದರ್ ನಿವಾಸಿ ಸಿನಾನ್ ನನ್ನು ಸಾರ್ವಜನಿಕರು ಘಟನಾ ಸ್ಥಳದಲ್ಲೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಉಳಿದ ಮೂವರು ಆರೋಪಿಗಳಾದ ಇರ್ಷಾದ್ ನನ್ನು ಬಜ್ಪೆ ಪೊಲೀಸರು ಬಂಧಿಸಿದ್ದು, ವಾಮಂಜೂರು ನಿವಾಸಿ ಸುಹೈಲ್ ಅಕ್ರಮ್ ಮತ್ತು ವಾಮಂಜೂರು ಪಿಲಿಕುಳ ನಿವಾಸಿ ನಿಸಾನ್ ನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಎಡಪದವು ಪೂಪಾಡಿಕಲ್ಲು ನಿವಾಸಿ ಅಖಿಲೇಶ್ ಅವರು ಪೂಪಾಡಿ ಕಲ್ಲುವಿನಿಂದ ಮಂಗಳೂರು ಕಡೆ ತೆರಳುತ್ತಿದ್ದ ಸಂದರ್ಭ ಒಂದು ದ್ವಿಚಕ್ರ ವಾಹನದಲ್ಲಿ ನಾಲ್ವರು ತಲವಾರು ಹಿಡಿದು ಸಂಚರಿಸುತ್ತಿರುವುದನ್ನು ಗಮನಿಸಿ ಅದನ್ನು ತನ್ನ ಮೊಬೈಲ್ ನಲ್ಲಿ ವೀಡಿಯೊ ಚಿತ್ರೀಕರಿಸಲು ಮುಂದಾಗಿದ್ದರು.…
Author: main-admin
ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ವಿಜಯಪುರದಿಂದ ಕಲಬುರ್ಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ಬೈಪಾಸ್ ಬಳಿ ಇನ್ನೋವಾ ಕಾರು ಅಪಘಾತಕ್ಕೆ ಈಡಾಗಿದೆ. ತೀವ್ರ ಗಾಯಗೊಂಡಿದ್ದ ಮಹಾಂತೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮಹಾಂತೇಶ್ ಅವರು ದಾವಣಗೆರೆ ಜಿಲ್ಲಾಧಿಕಾರಿಯಾಗಿ ಈ ಹಿಂದೆ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಮಂಗಳೂರು: ಡಿಸೆಂಬರ್ 8ರಿಂದ 19ರವರೆಗೆ ಬೆಳಗಾವಿಯ ಸ್ವರ್ಣ ಸೌಧದಲ್ಲಿ ಅಧಿವೇಶನ ನಡೆಯಲಿದ್ದು, ಶಾಸಕರಿಗೆ, ಅಧಿಕಾರಿಗಳಿಗೆ, ಅಧಿವೇಶನ ವೀಕ್ಷಕರಿಗೆ ವ್ಯವಸ್ಥೆ ಮಾಡಲಾಗಿದೆ. ಪ್ರತಿಭಟನೆ ಪ್ರಜಾಪ್ರಭುತ್ವದ ಹಕ್ಕಾಗಿದ್ದು, ಅದಕ್ಕೂ ಸ್ಥಳ ನಿಗದಿ ಮಾಡಲಾಗಿದೆ. ಉತ್ತರ ಕರ್ನಾಟಕದ ಅಭಿವೃದ್ಧಿಯ ಬಗ್ಗೆ ಹೆಚ್ಚು ಒತ್ತು ನೀಡಲಾಗುವುದು ಎಂದರು. ಮಂಗಳೂರಿನ ಸರ್ಕ್ಯೂಟ್ಹೌಸ್ನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಸ್ವರ್ಣ ಸೌಧದ ಉದ್ಯಾನ ಉದ್ಘಾಟನೆ ನಡೆಯಲಿದ್ದು, ಬುಕ್ ಆಫ್ ವರ್ಲ್ಡ್ ರೆಕಾರ್ಡ್ನಲ್ಲಿ ಸ್ಥಾನ ಪಡೆದ ಕಲ್ಬುರ್ಗಿಯ ವಿನೋದ್ ಕುಮಾರ್ ತಯಾರಿಸಿದ 50×75 ಅಡಿ ಗಾತ್ರದ ಖಾದಿ ಧ್ವಜವನ್ನು ಪ್ರದರ್ಶಿಸಲಾಗುತ್ತದೆ. ಅಧಿವೇಶನದಲ್ಲಿ ಆರಕ್ಕೂ ಅಧಿಕ ಮಸೂದೆಗಳು ಮಂಡನೆಗೆ ಸಿದ್ಧವಾಗಿವೆ. ಕಳೆದ ಅಧಿವೇಶನದಲ್ಲಿ 39ರಲ್ಲಿ 37 ಮಸೂದೆಗಳು ಚರ್ಚೆಯ ಮೂಲಕ ಅಂಗೀಕಾರಗೊಂಡಿವೆ ಎಂದರು. ಶಾಸಕ ಭರತ್ ಶೆಟ್ಟಿ, ಸಭಾಪತಿ ಬಸವರಾಜ್ ಹೊರಟ್ಟಿ ಅವರ ಆರೋಪಕಕ್ಕೆ ಸಂಬಂಧಿಸಿ ಸತ್ಯ ಯಾವಾಗಲೂ ದಾಖಲೆಯಲ್ಲಿ ಇರುತ್ತದೆ. ಆರೋಪ ಮಾಡಿದವರು ಯಾವುದನ್ನೂ ಲಿಖಿತವಾಗಿ ಸ್ಪೀಕರ್ ಕಚೇರಿಗೆ ನೀಡಿಲ್ಲ. ಹಾಗಾಗಿ ಇದೆಲ್ಲಾ ಚರ್ಚೆಯಾಗುವ ವಿಷಯವೇ ಅಲ್ಲ ಎಂದರು. ಮಸಾಜ್ ಚೇರ್ ಬಗ್ಗೆ…
ಬೆಂಗಳೂರಲ್ಲಿ 7 ಕೋಟಿ 11 ಲಕ್ಷ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೂ 7.1 ಕೋಟಿ ರೂಪಾಯಿ ಹಣ ರಿಕವರಿ ಆಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ 9 ಆರೋಪಿಗಳನ್ನು ಅರೆಸ್ಟ್ ಮಾಡಿದ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಾಹಿತಿ ನೀಡಿದರು. ನಮ್ಮ ಪೊಲೀಸರು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಶೇಕಡ 98.6 ರಷ್ಟು ಹಣ ರಿಕವರಿ ಆಗಿದೆ ದರೋಡೆ ಪ್ರಕರಣದಲ್ಲಿ ಇದುವರೆಗೂ 9 ಆರೋಪಿಗಳ ಬಂಧನ ಆಗಿದೆ. ಚೆನ್ನೈ ಆಂಧ್ರ ಪೊಲೀಸರು ಸಹ ಸಾಕಷ್ಟು ಸಹಾಯ ಮಾಡಿದ್ದಾರೆ. ಈಗಾಗಲೇ ತಂಡಕ್ಕೆ 5 ಲಕ್ಷ ಬಹುಮಾನ ಘೋಷಿಸಲಾಗಿದೆ. ಹೆಚ್ಚುವರಿಯಾಗಿ 2 ಲಕ್ಷ ಬಹುಮಾನ ನೀಡುತ್ತಿದ್ದೇವೆ. ಸದ್ಯ 9 ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹೇಳಿಕೆ ನೀಡಿದರು.
ಪುತ್ತೂರು: ಜೀವನದಲ್ಲಿ ಜಿಗುಪ್ಸೆಗೊಂಡು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುತ್ತೂರು ಕೆಯ್ಯೂರು ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ನೀತಾ (22) ಎಂದು ಗುರುತಿಸಲಾಗಿದೆ. ಮೃತ ನೀತಾ ಮಂಗಳೂರಿನಲ್ಲಿ ಉದ್ಯೋಗದಲ್ಲಿದ್ದು, 2016ರ ನಂತರ ಆಕೆಗೆ ತಲೆನೋವು ಆರಂಭವಾಗಿ ಚಿಕಿತ್ಸೆ ಪಡೆಯುತ್ತಿದ್ದರು. 2020ರ ನಂತರ ಕುತ್ತಿಗೆ, ಬೆನ್ನುಹುರಿ ಮತ್ತು ತಲೆಯಲ್ಲಿ ನರ ದೋಷ ಉಂಟಾದ ಕಾರಣ ಮಂಗಳೂರಿನ ಖಾಸಾಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯ ತೊಂದರೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ದೂರು ದಾಖಲಾಗಿದೆ.
ಮಂಗಳೂರು: ಧರ್ಮಸ್ಥಳದಲ್ಲಿ ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಸಂಬಂಧ ಮಾಸ್ಕ್ಮ್ಯಾನ್ ಚಿನ್ನಯ್ಯನಿಗೆ ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. 1 ಲಕ್ಷದ ಬಾಂಡ್ ಒದಗಿಸುವುದು ಸೇರಿ 12 ಷರತ್ತುಗಳನ್ನ ನ್ಯಾಯಾಲಯ ವಿಧಿಸಿದೆ. ಪ್ರಕರಣ ಸಂಬಂಧ ಇತ್ತೀಚೆಗಷ್ಟೇ ಎಸ್ಐಟಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿತ್ತು ಎಂಬುದಿಲ್ಲಿ ಗಮನಾರ್ಹ. ಚಿನ್ನಯ್ಯನಿಗೆ ಕೋರ್ಟ್ ಹಾಕಿರುವ ಷರತ್ತುಗಳುಮುಂದೆ ಇದೇ ರೀತಿಯ ಅಪರಾಧಕ್ಕೆ ಕೈ ಹಾಕಬಾರದುವಿಚಾರಣೆಯಿಂದ ತಪ್ಪಿಸಿಕೊಳ್ಳಲು ಓಡಿಹೋಗುವುದು, ಸ್ಥಳ ಬಿಟ್ಟು ಮರೆಮಾಡಿಕೊಳ್ಳುವುದು ಬೇಡProsecution witnesses ಮೇಲೆ ಯಾವುದೇ ರೀತಿಯಲ್ಲಿ ಪ್ರಭಾವ ಬೀರುವ ಕೆಲಸ ಮಾಡಬಾರದುಕೇಸಿಗೆ ಸಂಬಂಧಿಸಿದ ದಾಖಲೆ ಅಥವಾ ಪುರಾವೆಗಳನ್ನು ಅಳಿಸುವುದು / ನಾಶಗೊಳಿಸುವುದು ಬೇಡIO (Investigating Officer) ಕರೆ ಮಾಡಿದಾಗ ಹಾಜರಾಗಬೇಕು, ತನಿಖೆಗೆ ತೊಂದರೆ ಕೊಡಬಾರದುಕೋರ್ಟ್ ದಿನಾಂಕಗಳಿಗೆ ತಪ್ಪದೇ ಹಾಜರಾಗಬೇಕು. ಕೋರ್ಟ್ ಮನ್ನಿಸಿದಾಗ ಮಾತ್ರ ಹಾಜರಾಗದೇ ಇರಬಹುದುಚಿನ್ನಯ್ಯ ಹಾಗೂ ಜಾಮೀನಾದರೂ ಕೂಡ ಆಧಾರ್, ಮತದಾರರ ಗುರುತಿನ ಚೀಟಿಯ ಪುರಾವೆ ಕೊಡಬೇಕುವಿಳಾಸದಲ್ಲಿ ಬದಲಾವಣೆ ಬಂದರೆ ಕೋರ್ಟ್ಗೆ ತಿಳಿಸಬೇಕುಮೊಬೈಲ್ ನಂಬರ್ / ವಾಟ್ಸ್ಯಾಪ್…
ಮಂಗಳೂರಿನ ಬಜ್ಪೆ ಎಡಪದವು ಎಂಬಲ್ಲಿ ಯುವಕನೋರ್ವನ ಮೇಲೆ ತಲವಾರ್ ದಾಳಿ ನಡೆಸಿದ ದುಷ್ಕರ್ಮಿಗಳ ಪೈಕಿ ಓರ್ವನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. ಎಡಪದವು ಪೂಪಾಡಿ ಕಲ್ಲು ನಿವಾಸಿ ಅಖಿಲೇಶ್ ಎಂಬವರ ಮೇಲೆ ನಾಲ್ಕು ಮಂದಿಯ ತಂಡ ತಲವಾರು ದಾಳಿ ನಡೆಸಿದೆ. ಹಲ್ಲೆಗೆ ಒಳಗಾದ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂದೇ ಬೈಕಿನಲ್ಲಿ ನಾಲ್ವರು ಕುಳಿತುಕೊಂಡು, ಕೈಯಲ್ಲಿ ತಲವಾರು ಹಿಡಿದುಕೊಂಡು ಸಾಗುತ್ತಿದ್ದುದ್ದನ್ನು ಅಖಿಲೇಶ್ ನೋಡಿದ್ದರು. ಈ ಕುರಿತು ವಿಡಿಯೊ ಚಿತ್ರೀಕರಿಸಲು ಅವರನ್ನು ಹಿಂಬಾಲಿಸಿದ್ದರು. ಬೈಕಿನಲ್ಲಿ ಸಾಗುತ್ತಿದ್ದ ಕಿಡಿಗೇಡಿಗಳು ಅಖಿಲೇಶ್ ಅವರತ್ತ ತಲವಾರು ಬೀಸಿದ್ದು ಕೈಗಳಿಗೆ ಗಾಯಗಳಾಗಿವೆ. ಆ ನಾಲ್ವರು ಆರೋಪಿಗಳಲ್ಲಿ ಒಬ್ಬನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇನ್ನುಳಿದ ಮೂವರು ಪರಾರಿಯಾಗಿದ್ದಾರೆ . ಘಟನಾ ಸ್ಥಳಕ್ಕೆ ಪೋಲಿಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ನಾಲ್ವರು ಆರೋಪಿಗಳ ಗುರುತು ಪತ್ತೆಯಾಗಿದ್ದು, ಆರೋಪಿಗಳು ಈ ಘಟನೆಗೂ ಮುನ್ನ ಬಾರ್ ಒಂದರಿಂದ ಹೊರಗೆ ಬರುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಹೀಗಾಗಿ ಆರೋಪಿಗಳೆಲ್ಲರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ನವದೆಹಲಿ: ಮೊಬೈಲ್ ಚಂದಾದಾರರ ಹೆಸರಿನಲ್ಲಿ ಪಡೆದ ಸಿಮ್ ಕಾರ್ಡ್ ನ್ನು ಸೈಬರ್ ವಂಚನೆ ಅಥವಾ ಇತರ ಕಾನೂನುಬಾಹಿರ ಚಟುವಟಿಕೆಗಳಿಗೆ ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಕಂಡುಬಂದರೆ, ಚಂದಾದಾರರನ್ನೇ ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಟೆಲಿಕಾಮ್ ಇಲಾಖೆ ಹೇಳಿದೆ. ಟೆಲಿಕಾಂ ಇಲಾಖೆ (DoT) ಹೇಳಿಕೆಯಲ್ಲಿ ನಾಗರಿಕರು ಜಾಗರೂಕರಾಗಿರುವುದಕ್ಕೆ ಮತ್ತು ವಿರೂಪಗೊಳಿಸಿದ IMEI ಸಂಖ್ಯೆಗಳನ್ನು ಹೊಂದಿರುವ ಮೊಬೈಲ್ ಸಾಧನಗಳನ್ನು ಬಳಸುವುದನ್ನು ತಪ್ಪಿಸುವಂತೆ ಸಲಹೆ ನೀಡಿದೆ. ಕಾನ್ಫಿಗರ್ ಮಾಡಬಹುದಾದ ಅಥವಾ ವಿರೂಪಗೊಳಿಸಿದ IMEI ಗಳನ್ನು ಹೊಂದಿರುವ ಮೋಡೆಮ್ಗಳು, ಮಾಡ್ಯೂಲ್ಗಳು, ಸಿಮ್ ಬಾಕ್ಸ್ಗಳಂತಹ ವಿರೂಪಗೊಳಿಸಿದ ಅಥವಾ ಜೋಡಿಸಲಾದ ಸಾಧನಗಳನ್ನು ಖರೀದಿಸುವುದು ಅಥವಾ ಬಳಸುವುದರ ವಿರುದ್ಧವೂ ಇಲಾಖೆ ಎಚ್ಚರಿಕೆ ನೀಡಿದೆ; ನಕಲಿ ದಾಖಲೆಗಳು, ವಂಚನೆ ಅಥವಾ ಅನುಕರಣೆಯ ಮೂಲಕ ಸಿಮ್ ಕಾರ್ಡ್ಗಳನ್ನು ಖರೀದಿಸುವುದು? ಮತ್ತು ಮತ್ತೊಬ್ಬರ ಹೆಸರಿನಲ್ಲಿ ವಿರೂಪಗೊಳಿಸಿದ ಸಿಮ್ ಕಾರ್ಡ್ಗಳನ್ನು ದುರುಪಯೋಗಪಡಿಸಿಕೊಳ್ಳುವ ಇತರರಿಗೆ ವರ್ಗಾಯಿಸುವುದು ಅಥವಾ ಹಸ್ತಾಂತರಿಸುವುದು. “ಮೋಸದ ವಿಧಾನಗಳ ಮೂಲಕ ಸಿಮ್ ಕಾರ್ಡ್ಗಳನ್ನು ಖರೀದಿಸುವುದು ಅಥವಾ ಸೈಬರ್ ವಂಚನೆಗಾಗಿ ತಮ್ಮ ಸಿಮ್ ಕಾರ್ಡ್ಗಳನ್ನು ದುರುಪಯೋಗಪಡಿಸಿಕೊಳ್ಳುವ ಇತರರಿಗೆ ವರ್ಗಾಯಿಸುವುದು ಅಥವಾ ನೀಡುವುದು…
ಮಂಗಳೂರಿನ ಎಂಸಿಸಿ ಬ್ಯಾಂಕಿನ ಬೆಳ್ತಂಗಡಿ ಶಾಖೆಯ ಪ್ರಥಮ ವಾರ್ಷಿಕೋತ್ಸವ ಮತ್ತು ರೂ.10 ಕೋಟಿ ವ್ಯವಹಾರ ವಹಿವಾಟಿನ ಸಾಧನೆ ಮತ್ತು ತನ್ನ 14ನೇ ಎಟಿಎಂ ಅನ್ನು ಬೆಳ್ತಂಗಡಿ ಶಾಖೆಯಲ್ಲಿ ನವೆಂಬರ್ 22, 2025ರ ಶನಿವಾರದಂದು ಬೆಳ್ತಂಗಡಿ ಹೆದ್ದಾರಿಯ ಚರ್ಚ್ ರಸ್ತೆಯ ಬಳಿಯ ವೈಭವ್ ಆರ್ಕೇಡ್ನಲ್ಲಿ ಉದ್ಘಾಟಿಸಲಾಯಿತು. ಈ ಎಟಿಎಂ ಅನ್ನು ಗುರುವಾಯೆನೆಕೆರೆಯ ಎಕ್ಸೆಲ್ ಪ್ರಿ-ಯೂನಿವರ್ಸಿಟಿ ಕಾಲೇಜಿನ ಅಧ್ಯಕ್ಷರಾದ ಶ್ರೀ ಸುಮಂತ್ ಕುಮಾರ್ ಜೈನ್ ಅವರು ಉದ್ಘಾಟಿಸಿದರು. ಎಟಿಎಂಅನ್ನು ಬದ್ಯಾರ್ನ ಫಾ| ಎಲ್.ಎಂ.ಪಿಂಟೊ ಹೆಲ್ತ್ ಸೆಂಟರ್ ಚಾರಿಟೇಬಲ್ ಟ್ರಸ್ಟಿನ ಆಡಳಿತಾಧಿಕಾರಿ ವಂದನೀಯ ಫಾ| ರೋಶನ್ ಕ್ರಾಸ್ತಾರವರು ಆಶೀರ್ವದಿಸಿದರು. ಹೊಸದಾಗಿ ಉದ್ಘಾಟನೆಗೊಂಡ ಎಟಿಎಂನಿಂದ ಮೊದಲ ನಗದು ಹಿಂಪಡೆಯುವಿಕೆಯನ್ನು ಉಜಿರೆಯ ಅನುಗ್ರಹ ಇಂಗ್ಲಿಷ್ ಮಾಧ್ಯಮ ಶಾಲೆಯ ಪ್ರಾಂಶುಪಾಲ ವಂದನೀಯ ಫಾ| ವಿಜಯ್ ಲೋಬೊ ಅವರು ನೆರವೇರಿಸಿದರು.ಸಮಾರಂಭದ ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ವಹಿಸಿದ್ದರು. ಹೋಲಿ ರೆಡಿಮರ್ ಅಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ವಂದನೀಯ ಫಾ| ಕ್ಲಿಫರ್ಡ್ ಪಿಂಟೊ ಅತಿಥಿಯಾಗಿದ್ದರು. ಅಧ್ಯಕ್ಷರಾದ…
ಮಂಗಳೂರಿನ ಕನರಾ ಎಂಜಿನಿಯರಿಂಗ್ ಕಾಲೇಜಿನಲ್ಲಿ ಟೆಕ್ನಿಕಲ್ ಆಕ್ಟಿವಿಟಿ ಸೆಲ್ ಹಾಗೂ CSE, ISE, AI & ML, ECE, CSD ಮತ್ತು CSBS ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ “ಇನ್ನೋವೇಷನ್ ಶೋಕೆಸ್: ಮೇಜರ್ ಪ್ರಾಜೆಕ್ಟ್ ಎಕ್ಸಿಬಿಷನ್–2025” ಮತ್ತು “ಸಿಥೇರಿಯನ್–2025: 24-ಗಂಟೆಗಳ ಹ್ಯಾಕಥಾನ್” ಕಾರ್ಯಕ್ರಮಗಳು ನವೆಂಬರ್ 22 ಮತ್ತು 23, 2025 ರಂದು ಭವ್ಯವಾಗಿ ಜರುಗಿದವು. ಉದ್ಘಾಟನಾ ಸಮಾರಂಭವು ಡಾ. ಪಿ. ದಯಾನಂದ ಪೈ – ಪಿ. ಸತೀಶ್ ಪೈ ಸಭಾಂಗಣದಲ್ಲಿ ನೆಡೆಯಿತು. ಮುಖ್ಯ ಅತಿಥಿ ಡಾ. ನಿರಂಜನ್ ಯು. ಸಿ., ಅಡ್ಜಂಕ್ಟ್ ಪ್ರೊಫೆಸರ್, MIT ಮಣಿಪಾಲ, ಅವರು ಶಿಕ್ಷಣದಲ್ಲಿನ 3Aಗಳ — Accessibility, Availability ಮತ್ತು Physical Proximity — ಅಗತ್ಯತೆಯನ್ನು ಹಿಗ್ಗಾಮುಗ್ಗವಾಗಿ ವಿವರಿಸಿದರು. ವಿದ್ಯಾರ್ಥಿಗಳು ತಂತ್ರಜ್ಞಾನ ಜ್ಞಾನದಲ್ಲಿ ಸದಾ ಮುನ್ನಡೆದು, ಉದ್ಯಮಶೀಲತೆ ಮತ್ತು ಶ್ರಮದ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು. ಪ್ರಾಚಾರ್ಯರು Dr. ನಾಗೇಶ್ ಹೆಚ್. ಆರ್., ಅಧ್ಯಕ್ಷೀಯ ಭಾಷಣದಲ್ಲಿ ವಿದ್ಯಾರ್ಥಿಗಳಿಗೆ ಹೊಸ ಆವಿಷ್ಕಾರಗಳನ್ನು ರೂಪಿಸಿ, ತಮ್ಮ ಯೋಜನೆಗಳನ್ನು…








