ಉಡುಪಿ: ಮೀನು ಕದ್ದ ಮಹಿಳೆಯ ಮೇಲೆ ಹಲ್ಲೆ ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ. ಈ ದಿನ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿದ ಸಂಬಂಧ ಇಬ್ಬರಾದ ಲೀಲಾ ಮತ್ತು ಪಾರ್ವತಿ ಎಂಬುವರನ್ನು ಬಂಧಿಸಿದ್ದಾರೆ. ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ. ಈ ಪ್ರಕರಣದಲ್ಲಿ ಒಂದು ಮಹಿಳೆ ಮೇಲೆ ನಡೆದಿರುವ ಅಮಾನುಷ ಕೃತ್ಯವನ್ನು ರಾಜ್ಯ ಮಹಿಳಾ ಆಯೋಗವು ತೀವ್ರವಾಗಿ ಖಂಡಿಸಿರುತ್ತದೆ. ಸದರಿ ಪ್ರಕರಣಕ್ಕೆ ಕಾರಣಕರ್ತರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಕೈಗೊಂಡ ಕ್ರಮದ ಸಮಗ್ರ ವರದಿಯನ್ನು ಅತೀ ಶೀಘ್ರದಲ್ಲಿ ಆಯೋಗಕ್ಕೆ ಸಲ್ಲಿಸುವಂತೆ ತಿಳಿಸಿರುತ್ತಾರೆ ಮಲ್ಪೆ ಹಲ್ಲೆ ಪ್ರಕರಣದ ಕುರಿತು ಸರಿಯಾಗಿ ಮಾಹಿತಿ ಸಂಗ್ರಹಿಸದ ಕಾರಣ ಮಲ್ಪೆ ಪೊಲೀಸ್ ಠಾಣೆಯ ಬೀಟ್ ಕಾನ್ಸ್ಟೆಬಲ್ಗಳನ್ನು ಅಮಾನತುಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ. ಪೊಲೀಸರು ಮಹಿಳೆಯ ಮೇಲೆ ಹಲ್ಲೆ ಪ್ರಕರಣವನ್ನು ಗಂಭೀರವಾಗಿ ತನಿಖೆ ನಡೆಸುತ್ತಿದ್ದಾರೆ.
Author: main-admin
ಬೆಂಗಳೂರು : ಇಂದು ವಿಧಾನಸಭೆಯಲ್ಲಿ ಹನಿ ಟ್ರ್ಯಾಪ್ ಕುರಿತು ಗಂಭೀರವಾದ ಚರ್ಚೆ ನಡೆಯಿತು.ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರ ಮೇಲೆ ಹನಿಟ್ರ್ಯಾಪ್ ಮಾಡಲಾಗಿದೆ ಎಂದು ಹೇಳಿಕೆ ನೀಡಿದರು.ಬಳಿಕ ಕೆ ಎನ್ ರಾಜಣ್ಣ ಅವರು ಉತ್ತರಿಸಿ, ಯತ್ನಾಳ್ ಅವರಿಗೆ ಕ್ಲಾರಿಫಿಕೇಶನ್ ಕೊಡಲು ಬಯಸುತ್ತೇನೆ ಎಂದು ಈ ಕುರಿತು ಗೃಹ ಸಚಿವರಿಗೆ ದೂರು ನೀಡುತ್ತೇನೆ ಎಂದು ತಿಳಿಸಿದರು. ಬಳಿಕ ಗೃಹ ಸಚಿವರು ಸಚಿವ ಕೆ ಎನ್ ರಾಜಣ್ಣ ದೂರು ನೀಡಿದರೆ ಉನ್ನತಮಟ್ಟದ ತನಿಖೆಗೆ ಆದೇಶಿಸುತ್ತೇನೆ ಎಂದು ಪರಮೇಶ್ವರ್ ತಿಳಿಸಿದರು. ವಿಧಾನಸಭೆಯಲ್ಲಿ ಚರ್ಚೆಯ ಸಂದರ್ಭದಲ್ಲಿ ಸಚಿವ ಕೆ ಎನ್ ರಾಜಣ್ಣ ದೂರು ಕೊಡಲಿ ಉನ್ನತಮಟ್ಟದ ತನಿಖೆ ಮಾಡುತ್ತೇವೆ. ಒಬ್ಬರಿಗಾಯಿತು ಇಬ್ಬರಿಗೆ ಆಯ್ತು ಅನ್ನೋದಕ್ಕಿಂತ ಹೆಚ್ಚಾಗಿ ಇದಕ್ಕೆ ಒಂದು ಫುಲ್ ಸ್ಟಾಪ್ ಹಾಕಬೇಕಾಗಿದೆ. ಕರ್ನಾಟಕ ವಿಧಾನ ಮಂಡಲ ಏನಿದೆ ಇಡಿ ದೇಶದಲ್ಲಿ ಬಹಳ ಗೌರವ ಸಂಪಾದನೆ ಮಾಡಿದೆ. ಈ ಸದನದ ಸದಸ್ಯರು ನಮ್ಮ ತಂದೆಯವರು.ಅವರು ಕೂಡ…
ಕಾಸರಗೋಡು: ಮನೆಯೊಂದಕ್ಕೆ ಬೆಂಕಿ ತಗುಲಿ ಅಪಾರ ಹಾನಿಯುಂಟಾದ ಘಟನೆ ಚೆಂಗಳದಲ್ಲಿ ನಡೆದಿದೆ. ಚೆಂಗಳದ ಶಾಫಿ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದ್ದು, ಶಾರ್ಟ್ ಸರ್ಕ್ಯೂಟ್ ಘಟನೆಗೆ ಕಾರಣ ಎನ್ನಲಾಗಿದೆ. ಅಡುಗೆ ಕೋಣೆ ಸಂಪೂರ್ಣ ಅಗ್ನಿಗಾಹುತಿಯಾಗಿದ್ದು, ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಕೂಡಲೇ ಕಾಸರಗೋಡಿನಿಂದ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಕದ್ದಳೆಂದು ಮಹಿಳೆಗೆ ಥಳಿಸಿದ ಘಟನೆ ನಡೆದಿದ್ದು, ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. ಮೀನುಗಾರಿಕೆಗೆ ತೆರಳಿದ ಬೋಟಿನಿಂದ ಬಂದರಿನಲ್ಲಿ ಮೀನು ಖಾಲಿ ಮಾಡುತ್ತಿದ್ದ ವೇಳೆ ಮಹಿಳೆ ದುಬಾರಿ ಸಿಗಡಿ ಮೀನನ್ನು ಕದ್ದಿದ್ದಾಳೆ. ಮೀನು ಕದ್ದಿದ್ದನ್ನು ವಿಚಾರಣೆ ಮಾಡಿದಾಗ ಆಕೆ ಒಪ್ಪಿಕೊಂಡಿಲ್ಲ. ಸ್ಥಳದಲ್ಲಿದ್ದ ಮರಕ್ಕೆ ಕಟ್ಟಿ ಹಾಕಿ ಬೋಟಿಗೆ ಸಂಬಂಧಪಟ್ಟವರು ಥಳಿಸಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಗೆ ಮಹಿಳೆಯನ್ನು ಕರೆತಂದು ವಿಚಾರಣೆ ನಡೆಸಲಾಗಿದೆ. ಈ ಸಂದರ್ಭದಲ್ಲಿ ಮಹಿಳೆ ತಾನು ಕದ್ದಿರುವುದಾಗಿ ಒಪ್ಪಿಕೊಂಡು, ದಂಡ ಕಟ್ಟಿದ್ದಾಳೆ. ಬೋಟ್ನ ಮಾಲೀಕರು ಮತ್ತು ಮಹಿಳೆಗೆ ಸಂಬಂಧಪಟ್ಟವರು ಕುಳಿತು ರಾಜಿ ಪಂಚಾಯಿತಿ ನಡೆಸಿ ವಾಪಸ್ಸಾಗಿದ್ದಾರೆ. ಘಟನೆಗೆ ಸಿಎಂ ಸಿದ್ದರಾಮಯ್ಯ ಖಂಡನೆ ವ್ಯಕ್ತಪಡಿಸಿದ್ದಾರೆ. ಎಕ್ಸ್ನಲ್ಲಿ ಪೋಸ್ಟ್ ಹಾಕಿರುವ ಸಿಎಂ, ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ತಳಿಸಿದ ವೀಡಿಯೋ ಕಂಡು ದಿಗ್ಭ್ರಮೆಯಾಯಿತು. ಕಾರಣವೇನೇ ಇರಲಿ ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ…
ಕಾರ್ಕಳ: ಕಾರ್ಕಳ ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು 34 ವರ್ಷ ಬಳಿಕ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ತೆಂಕ ಎಡಪದವಿನ ಲಿಯೋ ರೋಚ್ (64) ಎಂದು ಗುರುತಿಸಲಾಗಿದೆ. ಈತನ ವಿರುದ್ಧ 2004ರಲ್ಲಿ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 34 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು ಈತನ ಮೇಲೆ ನ್ಯಾಯಾಲಯವು LPC ವಾರೆಂಟು ಹೊರಡಿಸಿತ್ತು. ಎ.ಎಸ್.ಪಿ ಕಾರ್ಕಳ ಹರ್ಷ ಪ್ರಿಯವಂದಾ ರವರ ಮಾರ್ಗದರ್ಶನದಲ್ಲಿ, ವೃತ್ತ ನಿರೀಕ್ಷಕ ಮಂಜಪ್ಪ ಡಿ ಹಾಗೂ ಕಾರ್ಕಳ ನಗರ ಠಾಣಾ ಪಿಎಸ್ಐಗಳಾದ ಸಂದೀಪ್ ಕುಮಾರ್ ಶೆಟ್ಟಿ ಹಾಗು ಶಿವಕುಮಾರ್ ಎಸ್.ಆರ್ ರವರ ಸೂಚನೆಯಂತೆ ಕಾರ್ಕಳ ನಗರ ಠಾಣೆಯ ಹೆಚ್.ಸಿ ರಮೇಶ್ ಹೆಚ್. ಹಾಗೂ ಪಿಸಿ ದರ್ಶನ್ ಅವರು ವಾರೆಂಟ್ ಅಸಾಮಿ ತೆಂಕ ಎಡಪದವಿನ ಲಿಯೋ ರೋಚ್ (64). ನನ್ನು ಮಾರ್ಚ್ 19 ರಂದು ಇವರು ವಾರೆಂಟ್ ಅಸಾಮಿಯನ್ನು ಮಂಗಳೂರಿನ ಪಜೀರ್ನಲ್ಲಿ ಬಂಧಿಸಿದ್ದಾರೆ.…
ಕುಂದಾಪುರ: ಯಕ್ಷಗಾನದ ವೇಷದ ವಿಚಾರದಲ್ಲಿ ಕಿರಿಯ ಕಲಾವಿದನಿಗೆ ಕಲಾವಿದ ಹಲ್ಲೆ ನಡೆಸಿದ ಘಟನೆ ಮಾ. 18ರಂದು ಮಂಗಳವಾರ ರಾತ್ರಿ ಬೈಂದೂರು ತಾಲೂಕಿನ ಎಳ್ಳೂರಿನಲ್ಲಿ ಸಂಭವಿಸಿದೆ. ಮಾರಣಕಟ್ಟೆ ಯಕ್ಷಗಾನ ಮೇಳದ ಬಿ ತಂಡದಿಂದ ಮಾ. 18 ರಂದು ಬೈಂದೂರು ತಾಲೂಕಿನ ಎಳ್ಳೂರಿನಲ್ಲಿ “ಮಾರಣಕಟ್ಟೆ ಕ್ಷೇತ್ರ ಮಹಾತ್ಮೆ” ಯಕ್ಷಗಾನ ನಡೆದಿತ್ತು. ಈ ವೇಳೆ ನಂದಿ ವೇಷ ಮಾಡುವ ವಿಚಾರದಲ್ಲಿ ಕಲಾವಿದ ಸ್ತ್ರೀ ವೇಷದಾರಿ ಪ್ರದೀಪ್ ನಾರ್ಕಳಿ ಮತ್ತು ಕಲಾವಿದ ಪ್ರದೀಪ್ ನಾಯ್ಕ್ ನಡುವೆ ಮಾತಿಗೆ ಮಾತು ಬೆಳೆದು ಜಗಳ ಆಗಿತ್ತು. ಇದೇ ಕಾರಣಕ್ಕೆ ಬೆಳಗಿನ ಜಾವಾ ಆಟ ಮುಗಿದ ಮೇಲೆ ಕಲಾವಿದ ಪ್ರದೀಪ್ ನಾಯ್ಕ್ ಮನೆಗೆ ಹೋಗುವ ಸಂದರ್ಭದಲ್ಲಿ ರಾತ್ರಿ ನಡೆದ ವಿಚಾರವನ್ನು ತಗಾದೆ ತೆಗೆದು ಮೇಳೆದ ಚೌಕಿಯಲ್ಲಿ ಪ್ರದೀಪ್ ನಾರ್ಕಳಿ ಪ್ರದೀಪ್ ನಾಯ್ಕ್ ಗೆ ಕೈ ಯಿಂದ ಹಲ್ಲೆ ಮಾಡಿರುತ್ತಾರೆ. ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು ಹಲ್ಲೆ ನಡೆಸಿದ ಹಿರಿಯ ಕಲಾವಿದನ ಮೇಲೆ ತೀವ್ರ ಆಕ್ರೋಶ…
ಉಡುಪಿ: ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿರುವ ಘಟನೆ ಮಲ್ಪೆ ಬಂದರಿನಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಮೂರು ದಿನಗಳ ಹಿಂದೆ ನಡೆದಿದೆ ಎನ್ನಲಾದ ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದ್ದು, ಹಲ್ಲೆ ನಡೆಸಿದವರ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮಹಿಳೆ ಒಂದು ಬುಟ್ಟಿ ಮೀನು ಕದ್ದಿರುವುದಾಗಿ ಆರೋಪಿಸಲಾಗಿದೆ. ಬಳಿಕ ಆಕೆಯನ್ನು ಹಿಡಿದು ಮಹಿಳೆಯೊಬ್ಬರು ಕಪಾಳಕ್ಕೆ ಹೊಡೆಯುವ ದೃಶ್ಯಗಳು ವಿಡಿಯೋದಲ್ಲಿ ಕಂಡು ಬಂದಿವೆ. ಬಳಿಕ ಆಕೆಯನ್ನು ಮರಕ್ಕೆ ಕಟ್ಟಿ ಹಾಕಿ ವ್ಯಕ್ತಿಯೊಬ್ಬ ಅವಾಚ್ಯ ಶಬ್ದಗಳಿಂದ ಬೈದು ಕಪಾಳಕ್ಕೆ ಎರಡು ಬಾರಿ ಹಲ್ಲೆ ನಡೆಸಿರುವುದಾಗಿ ವಿಡಿಯೋದಲ್ಲಿದೆ. ಇದೀಗ ಈ ವಿಡಿಯೋ ವೈರಲ್ ಆಗಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಮಲ್ಪೆ ಪೊಲೀಸರು ತನಿಖೆ ನಡೆಸುತಿದ್ದಾರೆ. ಅಲ್ಲದೆ ಈ ಕುರಿತು ಪ್ರಕರಣ ದಾಖಲಿಸಿಕೊಳ್ಳುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಟ್ಲ: ಡ್ರೆಸ್ ಶಾಪ್ ನಲ್ಲಿ ಒಂಟಿ ಮಹಿಳೆ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಅಂಗಡಿಯೊಳಗೆ ಅಕ್ರಮವಾಗಿ ಪ್ರವೇಶ ಮಾಡಿದ ನವೀನ್ ಕುಂಪಲ ಮತ್ತು ಇತರ ಮೂರು ಮಂದಿಯ ತಂಡ, ಆಕೆಯನ್ನು ಬೆದರಿಸಿ ಅಂಗಡಿಯಲ್ಲಿದ್ದ ಬಟ್ಟೆ ಮತ್ತು ಇತರ ವಸ್ತುಗಳನ್ನು ದೋಚಿ ಪರಾರಿಯಾದ ಘಟನೆ ವಿಟ್ಲ ಶಾಲಾ ರಸ್ತೆ ಬಳಿ ನಡೆದಿದೆ. ಮಾರ್ಚ್ 18 ರಂದು ಮಧ್ಯಾಹ್ನ ವೇಳೆ ಘಟನೆ ನಡೆದಿದೆ. ಏಕಾಏಕಿ ಅಂಗಡಿಗೆ ಅಕ್ರಮ ಪ್ರವೇಶಿಸಿದ ನಾಲ್ಕು ಮಂದಿಯ ತಂಡ, ಅಂಗಡಿಯಲ್ಲಿದ್ದ ವಸ್ತುಗಳನ್ನು ಹಾಗೂ ಬಟ್ಟೆಯನ್ನು ತಮ್ಮ ಬ್ಯಾಗಿನೊಳಗೆ ತುಂಬಿಸಿ ಕೊಂಡೊಯ್ಯಲು ಪ್ರಯತ್ನಿಸುತ್ತಿದ್ದಾಗ ಮಹಿಳಾ ಸಿಬ್ಬಂದಿಯು ಯಾಕೆ ಬಟ್ಟೆಗಳನ್ನು ತುಂಬಿಸುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಆರೋಪಿಗಳು “ನಿನಗೆ ಎಷ್ಟು ಕೆಲಸವಿದೆಯೋ ಅಷ್ಟೇ ಮಾಡು, ನಮ್ಮ ಸುದ್ದಿಗೆ ಬಂದ್ರೆ ಜಾಗ್ರತೆ” ಎಂದು ಬೆದರಿಸಿ ಬಲಾತ್ಕಾರದಿಂದ ಬಟ್ಟೆ ಮತ್ತು ವಸ್ತುಗಳನ್ನು ಕೊಂಡೊಯ್ದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ ಎಂದು ತಿಳಿದು ಬಂದಿದೆ.
ಬೆಂಗಳೂರು : ಮುಖ್ಯಮಂತ್ರಿ ಪದಕ ಪ್ರಧಾನ ಸಮಾರಂಬದಲ್ಲಿ ಪಾಲ್ಗೊಳ್ಳುವ ಕುರಿತು ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ಸುತ್ತೋಲೆಯಲ್ಲಿ 2022, 2023 ಮತ್ತು 2024ನೇ ಸಾಲಿನ ಮುಖ್ಯಮಂತ್ರಿ ಪದಕ ವಿಜೇತರು ದಿನಾಂಕ: 02.04.2025ರಂದು ನಡೆಸುವ ಪೊಲೀಸ್ ಪ್ಲಾಗ್ ದಿನ Police Flag Day ದಿನದಂದು ಬಾಗವಹಿಸುವ ಸಂಬಂಧ 3ನೇ ಪಡೆ ಕಮಾಂಡೆಂಟ್, ಕೆ.ಎಸ್.ಆರ್.ಪಿ ಕವಾಯಿತ್ ಮೈದಾನ, ಬೆಂಗಳುರು ರವರ ಮುಂದೆ ದಿನಾಂಕ:27.03.2025ರಂದು ಮದ್ಯಾಹ್ನ 03 ಗಂಟೆಗೆ ವರದಿ ಮಾಡಿಕೊಂಡು ದಿನಾಂಕ: 28.03.2025 ರಿಂದ 31.03.2025ರವರೆಗೆ ಪೂರ್ವಾಬ್ಯಾಸ ಕೈಗೊಳ್ಳಲು ಈ ಮೂಲಕ ಸೂಚಿಸಲಾಗಿದೆ. ಇದರೊಂದಿಗೆ 2022 & 2023 ನೇ ಸಾಲಿನ ಮಾನ್ಯ ಮುಖ್ಯಮಂತ್ರಿ ಪದಕ ನಿಜೇತರ ಪಟ್ಟಿಗಳನ್ನು ಲಗತ್ತಿಸಿದೆ ಅಂತೆಯೇ 2024ನೇ ಸಾಲಿನ ಮುಖ್ಯಮಂತ್ರಿ ಪದಕ ವಿಜೇತರ ಮಾಹಿತಿಯನ್ನು ಕಳುಹಿಸಲಾಗುವುದು.
ಉಡುಪಿ: ಇಸ್ಪೀಟು ಜುಗಾರಿ ಅಂದರ್-ಬಾಹರ್ ಆಡುತ್ತಿದ್ದ ವೇಳೆ ಪೊಲೀಸ್ ದಾಳಿ ನಡೆಸಿ ಏಳು ಮಂದಿಯನ್ನು ವಶಕ್ಕೆ ಪಡೆದ ಘಟನೆ ಬೀಡನಗುಡ್ಡೆ ಮಹಾತ್ಮಗಾಂಧಿ ಬಯಲು ರಂಗ ಮಂದಿರದ ಬಳಿ ನಡೆದಿದೆ. ಬಂಧಿತರನ್ನು ನಾಗರಾಜ್, ಯಮುನಪ್ಪ, ಮಂಜುನಾಥ, ಅಮಿನ್ ಸಾಬ್, ಸಿದ್ದಪ್ಪ, ಗುರು, ಪರಶುರಾಮ ಎಂದು ಗುರುತಿಸಲಾಗಿದೆ. ಬೀಡನಗುಡ್ಡೆ ಮಹಾತ್ಮಗಾಂಧಿ ಬಯಲು ರಂಗ ಮಂದಿರದ ಬಳಿ ಮಾ.16ರಂದು ಇಸ್ಪೀಟು ಜುಗಾರಿ ಅಂದರ್-ಬಾಹರ್ ಆಡುತ್ತಿದ್ದ ಏಳು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು 32,800ರೂ. ನಗದು ಸ್ವಾಧೀನ ಪಡಿಸಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.