ಮಂಗಳೂರು: ಮೊಬೈಲ್ ಕಳವುಗೈದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪ್ರಿನ್ಸಿಪಲ್ ಸಿವಿಲ್ ಜಡ್ಜ್ ಮತ್ತು ಸಿಜಿಎಂ ಕೋರ್ಟ್ ಮೂರು ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಐದು ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. 2023ರ ಜೂನ್ 18ರಂದು ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ದೇವರಾಜು ಅರಸು ಮೆಟ್ರಿಕ್ ಬಳಿಕದ ಬಾಲಕಿಯರ ವಸತಿ ನಿಲಯದ ಒಳಗೆ ಮಹೇಶ್ ಪೈ ಎಂಬಾತ ಪ್ರವೇಶಿಸಿ ವಿದ್ಯಾರ್ಥಿನಿಯರ 3 ಮೊಬೈಲ್ ಫೋನ್ಗಳನ್ನು ಕಳವು ಮಾಡಿದ್ದ. ಈತನನ್ನು ದಸ್ತಗಿರಿ ಮಾಡಿದ ಪೊಲೀಸರು ನ್ಯಾಯಾಲಯಕ್ಕೆ ಹಾಜಪಡಿಸಿ, ದೋಷರೋಪಣಾ ಪಟ್ಟಿ ಸಲ್ಲಿಸಿತ್ತು. ವಾದ ವಿವಾದವನ್ನು ಆಲಿಸಿದ ಪ್ರಿನ್ಸಿಪಲ್ ಸಿವಿಲ್ ಜಡ್ಜ್ ಮತ್ತು ಸಿಜಿಎಂ ಕೋರ್ಟ್ ಮಂಗಳೂರು ನ್ಯಾಯಾಲಯ ಆರೋಪಿಗೆ ಮೂರು ವರ್ಷ ಶಿಕ್ಷೆ ಮತ್ತು 5000 ರೂ. ದಂಡ ವಿಧಿಸಿ ಆದೇಶಿಸಿದೆ.
Author: main-admin
ಕಡಬ: ಬಸ್ಸಿನಿಂದ ಇಳಿಯುತ್ತಿದ್ದ ವೇಳೆ ಚಾಲಕ ಬಸ್ಸು ಚಲಾಯಿಸಿದ ಪರಿಣಾಮ ಮಹಿಳೆಯೋರ್ವರು ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಸುಬ್ರಹ್ಮಣ್ಯ ಗ್ರಾಮದ ಬಿಲದ್ವಾರದಲ್ಲಿ ನಡೆದಿದೆ. ಕಡಬ ತಾಲೂಕು ಬಿಳಿನೆಲೆ ಗ್ರಾಮದ ಹೂವಪ್ಪ ಗೌಡರವರ ಪತ್ನಿ ವಸಂತಿ ಎಂ.(42ವ.)ಗಾಯಗೊಂಡವರು. ಇವರು ತನ್ನ ಮಗಳೊಂದಿಗೆ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದವರು, ಸುಬ್ರಹ್ಮಣ್ಯ ಬಿಲದ್ವಾರದ ಬಳಿ ಅವರು ಇಳಿಯುತ್ತಿದ್ದಾಗ ನಿರ್ವಾಹಕ ಗಮನಿಸದೇ ಬಸ್ ಚಲಾಯಿಸಲು ಸೂಚನೆ ನೀಡಿದ್ದಾರೆ. ಈ ವೇಳೆ ಬಸ್ ಚಾಲಕ ಮಂಜುನಾಥರವರು ಬಸ್ ಚಲಾಯಿಸಿದ ಪರಿಣಾಮ ವಸಂತಿರವರು ಬಸ್ನಿಂದ ಕೆಳಗೆ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಗಾಯಾಳು ವಸಂತಿ ಅವರನ್ನು ಚಿಕಿತ್ಸೆಗಾಗಿ ದೇರಳ ಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತು ಹೂವಪ್ಪ ಅವರು ನೀಡಿದ ದೂರಿನ ಮೇರೆಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ 12/2024 ಕಲಂ: 279, 338 ಐಪಿಸಿಯಂತೆ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಅಕ್ರಮ ಆಸ್ತಿ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಇರುವ ಜನರು ಈ ರೀತಿಯ ಆಸ್ತಿ ಖರೀದಿ ಮಾಡುತ್ತಿರುವ ಕಾರಣ ಪೊಲೀಸ್ ಇಲಾಖೆ ಕೆಲವು ನಿಯಮಗಳನ್ನು ಜಾರಿ ಮಾಡಿದೆ. ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ನೌಕರರು ಮತ್ತು ಸಿಬ್ಬಂದಿಗಳು ಸ್ಥಿರ ಅಥವಾ ಚರಾಸ್ತಿಯನ್ನು ಖರೀದಿ ಇಲ್ಲವೇ ಮಾರಾಟ ಮಾಡಲು ಅನುಮತಿ ಕೋರಿ ಸಲ್ಲಿಕೆ ಮಾಡಬೇಕಿರುವ ಡಾಕ್ಯುಮೆಂಟ್ಸ್ ಕುರಿತು, ಪೊಲೀಸ್ ಇಲಾಖೆ ಮಹತ್ವದ ಆದೇಶವನ್ನು ಹೊರ ಹಾಕಿದೆ. ಆದೇಶದಲ್ಲಿ ಹೇಳಿರುವಂತೆ ಮಾಡಬೇಕು ಎಂದು ಪೊಲೀಸ್ ಪ್ರಧಾನ ಕಛೇರಿಯ ಸುತ್ತೋಲೆ ಪ್ರತಿಯನ್ನು ಇದರ ಜೊತೆಗೆ ಲಗತ್ತಿಸಿ ಕಳುಹಿಸಿ ಕೊಡಲಾಗಿದೆ. ಸದರಿ ಸುತ್ತೋಲೆಯಲ್ಲಿ ಇಲಾಖೆಯ ನೌಕರರು ಮತ್ತು ಸಿಬ್ಬಂದಿಗಳು ಸ್ಥಿರ ಅಥವಾ ಚರಾಸ್ತಿಯನ್ನು ಖರೀದಿಸಲು ಇಲ್ಲವೇ ಮಾರಾಟ ಮಾಡಲು ಅನುಮತಿ ಕೋರಿ ಸಲ್ಲಿಸಬೇಕಾದ ಡಾಕ್ಯುಮೆಂಟ್ಸ್ ಕುರಿತು ವಿವರವಾಗಿ ಹೇಳಲಾಗಿದೆ. ಸದರಿ ಸುತ್ತೋಲೆಯ ಪ್ರತಿಯನ್ನು ಠಾಣೆಯ ಅಥವಾ ಕಛೇರಿಯ ನಾಮಫಲಕದಲ್ಲಿ ಆಳವಡಿಸಿ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳ ಗಮನಕ್ಕೆ ತರುವಂತೆ ಸೂಚನೆ ನೀಡಲಾಗಿದೆ. ಪೊಲೀಸ್…
ಮಂಗಳೂರು: ನಗರದ ವಕೀಲ ಕೆಎಸ್ಎನ್ ರಾಜೇಶ್ ವಿರುದ್ಧ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಮಂಗಳೂರಿನ 3ನೇ ಜೆಎಂಎಫ್ಸಿ ನ್ಯಾಯಾಲಯವು ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾವಣೆಗೊಳಿಸಿ ಆದೇಶಿಸಿದೆ. ಕೆಎಸ್ಎನ್ ರಾಜೇಶ್ ತನ್ನ ಕಚೇರಿಯಲ್ಲಿದ್ದ ಕಾನೂನು ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಬಗ್ಗೆ ಮಂಗಳೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ್ದ ಎಸಿಪಿಯಾಗಿದ್ದ ರಂಜಿತ್ ಕುಮಾರ್ ಭಂಡಾರು ಅವರು ಕೆಎಸ್ಎನ್ ರಾಜೇಶ್, ಆತ ತಲೆಮರೆಸಿಕೊಳ್ಳಲು ಸಹಾಯ ಮಾಡಿದ್ದ ಬೋಂದೆಲ್ ನಿವಾಸಿ ಅನಂತ್ ಭಟ್, ಬೆಂಗಳೂರು ನಿವಾಸಿ ಆದಿತ್ಯ ಕೆ.ಬಿ. ಮತ್ತು ರಾಜೇಶ್ ಪತ್ನಿ ಶಶಿಕಲಾ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಪ್ರಕರಣದಲ್ಲಿ ಒಟ್ಟು 110 ಸಾಕ್ಷಿಗಳನ್ನು ವಿಚಾರಿಸಿ ಸಾಕ್ಷ್ಯಾಧಾರಗಳೊಂದಿಗೆ ದೋಷಾರೋಪಣ ಪಟ್ಟಿಯನ್ನು ಎಸಿಪಿ ದಿನಕರ್ ಶೆಟ್ಟಿ ಅವರು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಕೆಎಸ್ಎನ್ ರಾಜೇಶ್ ತಮ್ಮ ವಿರುದ್ಧ ದಾಖಲಾದ ಪ್ರಕರಣವನ್ನು ರದ್ದು ಗೊಳಿಸುವಂತೆ ಉಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಪ್ರಕರಣವನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ನಾಗಪ್ರಸನ್ನ ಅವರು ರಿಟ್ ಅರ್ಜಿಯನ್ನು…
ಮಂಗಳೂರು: ಕರ್ನಾಟಕ ಜಾನಪದ ಪರಿಷತ್, ದ.ಕ. ಜಿಲ್ಲಾ ಘಟಕ ಹಾಗೂ ಕದಳಿ ಬೀಚ್ ಟೂರಿಸಂ ಇವರ ಸಹಯೋಗದೊಂದಿಗೆ ಜಾನಪದ ಕಡಲೋತ್ಸವ ಕಾರ್ಯಕ್ರಮ ಪಣಂಬೂರು ಬೀಚ್ನಲ್ಲಿ ಮಾರ್ಚ್ 1 ರಿಂದ 3ರ ವರೆಗೆ ನಡೆಯಲಿದೆ. ಮಾರ್ಚ್ 1 ರಂದು ಸಂಜೆ 6.30ಕ್ಕೆ ರಾಜ್ಯಪಾಲರಾದ ಥಾವರ್ಚಂದ್ ಗೆಹ್ಹೋಟ್ ಕಾರ್ಯಕ್ರಮ ಉದ್ಘಾಟಿಸುವರು. ವಿಧಾನ ಸಭೆಯ ಸ್ಪೀಕರ್ ಯು. ಟಿ. ಖಾದರ್ ಪ್ರದರ್ಶನಗಳನ್ನು ಉದ್ಘಾಟಿಸುವರು. ಶಾಸಕ ಡಾ. ಭರತ್ ಶೆಟ್ಟಿ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಮಂಗಳೂರು: 2017ರಿಂದ ನೋಂದಣಿಯಾಗಿರುವ ಎಲ್ಲಾ ಸಾರ್ವಜನಿಕ ಬಸ್ಗಳು ಮುಂದಿನ ಒಂದು ತಿಂಗಳೊಳಗೆ ಬಾಗಿಲನ್ನು ಅಳವಡಿಸಿ ಅಫಿಧಾವಿತ್ ಸಲ್ಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 2017ರಿಂದ ನೋಂದಣಿಯಾಗುವ ಎಲ್ಲಾ ಬಸ್ಸುಗಳು ಕಡ್ಡಾಯವಾಗಿ ಬಾಗಿಲನ್ನು ಹೊಂದಿರಬೇಕು ಎಂದು ಕಾನೂನಿನಲ್ಲಿಯೇ ಇದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಬಸ್ಸುಗಳು ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮುಂದಿನ ಒಂದು ತಿಂಗಳೊಳಗೆ ಇದನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದು ಬಸ್ಸು ಮಾಲೀಕರು ಅಫಿಧಾವಿತ್ ಸಲ್ಲಿಸಬೇಕು ಎಂದು ಅವರು ಆರ್ಟಿಓಗೆ ನಿರ್ದೇಶಿಸಿದರು. ಸಾರ್ವಜನಿಕರ ಜೀವರಕ್ಷಣೆಯ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲಾಗದು. ಇದರಲ್ಲಿ ನಿರ್ಲಕ್ಷ್ಯ ಸಹಿಸುವ ಪ್ರಶ್ನೆಯೇ ಇಲ್ಲ. ಬಸ್ಗಳಲ್ಲಿ ಬಾಗಿಲನ್ನು ಅಳವಡಿಸಬೇಕೆಂದು ಸಾರ್ವಜನಿಕರಿಂದಲೂ ತೀವ್ರ ಒತ್ತಡ ಬರುತ್ತಿವೆೆ. ಜನಸಂಪರ್ಕ ಸಭೆಗಳಲ್ಲಿಯೂ ಮನವಿಗಳು ಬಂದಿವೆ. ಕೇರಳ, ತಮಿಳುನಾಡು, ಆಂಧ್ರ ಪ್ರದೇಶ ಮತ್ತಿತರ ರಾಜ್ಯಗಳಲ್ಲೂ ಬಸ್ಗಳಲ್ಲಿ ಬಾಗಿಲು ಅಳವಡಿಸಿ ಸಂಚರಿಸುತ್ತಿವೆ. ಬೆಂಗಳೂರಿನಲ್ಲಿಯೂ…
ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ವಾರಂಟ್ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ತೋಕೂರು ಗ್ರಾಮದ ಜೋಕಟ್ಟೆಯ ಸರಕಾರಿ ಶಾಲೆಯ ಬಳಿಯ ನಿವಾಸಿ, ಇಮ್ರಾನ್ (31) ಹಾಗೂ ಉತ್ತರ ಪ್ರದೇಶ ರಾಜ್ಯದ ಗೋರಕಪುರ ಜಿಲ್ಲೆಯ ಹಮತಿ ತಾಲೂಕಿನ ದೋಬಾಲಿ ಹೌಸ್ನ ಧರ್ಮವೀರ (30) ಎಂದು ಗುರುತಿಸಲಾಗಿದೆ. ಬಜಪೆ ಪೊಲೀಸ್ ಠಾಣೆಯಲ್ಲಿ 2020ರಲ್ಲಿ ದಾಖಲಾಗಿದ್ದ ದರೋಡೆ ಮಾಡಲು ಸಂಚು ರೂಪಿಸಿದ ಕೇಸಿನಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದು ವಿಚಾರಣೆಯ ಸಮಯ ಘನ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ 62 ನೇ ತೋಕೂರು ಗ್ರಾಮದ ಜೋಕಟ್ಟೆಯ ಸರಕಾರಿ ಶಾಲೆಯ ಬಳಿಯ ನಿವಾಸಿ, ಇಮ್ರಾನ್ ಮತ್ತು 2021ರಲ್ಲಿ ರಸ್ತೆ ಅಪಘಾತದಲ್ಲಿ ಓರ್ವ ಮೃತರಾಗಿದ್ದು, ಅಪರಾಧಿಕ ಮಾನವ ಹತ್ಯೆ ಪ್ರಕರಣದಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದು ವಿಚಾರಣೆಯ ವೇಳೆ ನ್ಯಾಯಾಲಯಕ್ಕೆ ಹಾಜರಾಗದೆ ವಾಸ ಸ್ಥಳವನ್ನು ಬದಲಿಸಿ ಸುಮಾರು 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಉತ್ತರ ಪ್ರದೇಶ ರಾಜ್ಯದ ಗೋರಕಪುರ ಜಿಲ್ಲೆಯ ಹಮತಿ ತಾಲೂಕಿನ ದೋಬಾಲಿ ಹೌಸ್ನ ಧರ್ಮವೀರ (30) ಬಂಧಿತರು. ಬಜಪೆ ಪೊಲೀಸ್ ಠಾಣೆಯ…
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣ ಮತ್ತೆ ಹೆಚ್ಚುತ್ತಿದ್ದು, ಮತ್ತೋರ್ವ ಮಹಿಳೆ ಬಲಿಯಾಗಿದ್ದಾರೆ. 43 ವರ್ಷದ ಕೊಟ್ರಮ್ಮ ಮಂಗನ ಕಾಯಿಲೆಗೆ ಬಲಿಯಾದ ಕೂಲಿ ಕಾರ್ಮಿಕ ಮಹಿಳೆ. ಕೊಪ್ಪ ತಾಲೂಕಿನ ನುಗ್ಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ದೇವಗನ್ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಜ್ವರ, ಸುಸ್ತು, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ಈ ವೇಳೆ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಸೌದೆ ತರಲು ಹೋದಾಗ ಸೋಂಕು ತಗುಲಿರುವ ಸಾಧ್ಯತೆ ಇದೆ. ಕಳೆದ ವಾರ ಮಹಿಳೆಯ ರಕ್ತದ ಮಾದರಿಯನ್ನು ವೈದ್ಯರು ಸಂಗ್ರಹಿಸಿದ್ದರು. ಇನ್ನು ಕೊಪ್ಪ ತಾಲೂಕಿನಲ್ಲಿ ಒಂದೇ ದಿನದಲ್ಲಿ 6 ಜನರಲ್ಲಿ ಮಂಗನ ಕಾಯಿಲೆ ಸೋಂಕು ದೃಢಪಟ್ಟಿದೆ.
ಮಂಗಳೂರು: ನಾಸೀರ್ ಹುಸೇನ್ ಬೆಂಬಲಿಗನಿಂದ ಪಾಕ್ ಪರ ಘೋಷಣೆ ಹಿನ್ನಲೆ ಮಂಗಳೂರಿನಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರಿಂದ ಆಕ್ರೋಶವ್ಯಕ್ತಪಡಿಸಿದ್ದು, ಮಲ್ಲಿಕಟ್ಟೆ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲಿದ್ದಾರೆ. ಈ ಹಿನ್ನಲೆ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಭಿಗಿ ಪೊಲೀಸ್ ಭದ್ರತೆ ಅಳವಡಿಸಲಾಗಿದೆ. ಬೆಳಗ್ಗೆ ಹತ್ತು ಗಂಟೆಗೆ ಮುತ್ತಿಗೆ ಸಾಧ್ಯತೆ ಇದ್ದು ಮುನ್ನಚ್ಚರಿಕೆ ಸಲುವಾಗಿ ಕಾಂಗ್ರೆಸ್ ಕಚೇರಿ ಸುತ್ತಲೂ ಖಾಕಿ ಸರ್ಪಗಾವಲು ಹಾಕಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಹೈ ಅಲರ್ಟ್ ಆಗಿದ್ದಾರೆ. ಪಾಕ್ ಪರ ಘೋಷಣೆ ಖಂಡಿಸಿ ಮಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಕಾಂಗ್ರೆಸ್ ಕಚೇರಿಗೆ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ 50ರಷ್ಟು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕಚೇರಿ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಮಂಗಳೂರು: ನಗರದಲ್ಲಿ ಖಾಸಗಿ ಬಸ್ ವ್ಯವಹಾರ ನೋಡಿಕೊಳ್ಳುತ್ತಿದ್ದ ಉದ್ಯಮಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದವರು ನಗರದ ಬಜಾಲ್ ನಿವಾಸಿ ಪ್ರಜ್ವಲ್ ಡಿ. (35) ಎಂದು ತಿಳಿದು ಬಂದಿದೆ. ಇವರು ಭವಾನಿ ಬಸ್ನ ಮಾಲಕರಾಗಿದ್ದ ದಿ| ದೇವೇಂದ್ರ ಅವರ ಎರಡನೇ ಪುತ್ರ. ಮಂಗಳವಾರ ಬೆಳಗ್ಗೆ ಜೆ.ಎಂ. ರೋಡ್ನಲ್ಲಿರುವ ಸ್ವಗೃಹದಲ್ಲಿ ಫ್ಯಾನ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಸಹೋದರ ಬಸ್ನ ಮಾಲಕ ರಾಗಿದ್ದರು. ಪ್ರಜ್ವಲ್ ಅದೇ ವ್ಯವಹಾರ ನೋಡಿಕೊಳ್ಳುತ್ತಿದ್ದರು. ಸಾಲ ಹೊಂದಿದ್ದ ಅವರಿಗೆ ಬ್ಯಾಂಕ್ನವರು ಕಿರು ಕುಳ ನೀಡುತ್ತಿದ್ದರೆಂಬ ಮಾಹಿತಿ ಇದೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಸಂಶಯಾಸ್ಪದ ಸಾವು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರು ಪತ್ನಿ ಮತ್ತು ನಾಲ್ಕು ವರ್ಷದ ಮಗುವನ್ನು ಅಗಲಿದ್ದಾರೆ.










