ಉಡುಪಿ: ಉಡುಪಿ ಸಮೀಪದ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಸಲ್ಲಿಸಿರುವ ಪರೋಲ್ ಅರ್ಜಿಯನ್ನು ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯ ತಿರಸ್ಕರಿಸಿ ಆದೇಶ ನೀಡಿದೆ. ಫೆಬ್ರವರಿ 1ರಂದು ನಿಧನರಾದ ತನ್ನ ಸಹೋದರ ನಿತಿನ್ ಅವರ ಧಾರ್ಮಿಕ ವಿಧಿ ವಿಧಾನ ಕಾರ್ಯಕ್ರಮದಲ್ಲಿ ಮೂರು ತಾಸು ಭಾಗವಹಿಸಲು ತನ್ನ ಊರಾದ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿಗೆ ತೆರಳಲು ಪರೋಲ್ ಮಂಜೂರು ಮಾಡುವಂತೆ ನ್ಯಾಯಾಲಯಕ್ಕೆ ಆರೋಪಿ ಫೆಬ್ರವರಿ 8ರಂದು ಅರ್ಜಿ ಸಲ್ಲಿಸಿದ್ದನು. ಆದರೆ ಇದಕ್ಕೆ ಹಿರಿಯ ಸಹಾಯಕ ಸರಕಾರಿ ಅಭಿಯೋಜಕ ಎಚ್.ಎಂ. ನದಾಫ್ ಆಕ್ಷೇಪಣೆ ಸಲ್ಲಿಸಿದ್ದು, ಆರೋಪಿಗೆ ಪರೋಲ್ ನೀಡಿದರೆ ಕಾನೂನು ಸುವ್ಯವಸ್ಥೆಗೆ ಸಮಸ್ಯೆಯಾಗುತ್ತದೆ. ಅಲ್ಲದೆ ಆರೋಪಿಯ ಮೇಲೆ ದಾಳಿಯಾಗುವ ಸಾಧ್ಯತೆ ಇರುತ್ತದೆ. ಅದೇ ರೀತಿ ಆರೋಪಿ ತನ್ನ ಸಹೋದರ ಮೃತಪಟ್ಟ ಬಗ್ಗೆ ಯಾವುದೇ ಮರಣ ಪ್ರಮಾಣಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸದೆ ಇರುವುದರಿಂದ ಆತನಿಗೆ ಪರೋಲ್ ನೀಡಬಾರದು ಎಂದು ವಾದ ಮಂಡಿಸಿದ್ದರು. ಕೋರ್ಟ್ ಈ ವಾದವನ್ನು ಪುರಸ್ಕರಿಸಿತ್ತು.
Author: main-admin
ಕಾರ್ಕಳ: ಕೋಟೆಶ್ವರ- ಹಾಲಾಡಿ ನಡುವೆ ಹಾದು ಹೋಗಿರು ರೈಲು ಹಳಿಯ ಮದ್ಯವಯಸ್ಕರೊಬ್ಬರು ತೀವ್ರ ತರದಲ್ಲಿ ಗಾಯಗೊಂಡು ಬಿದ್ದಿದ್ದು ಗಂಗೊಳ್ಳಿಯ 108 ಅಂಬುಲೆನ್ಸ್ ನ ಸಿಬ್ಬಂದಿಗಳು ಗಾಯಾಳುವನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಜ್ಜಿ ಪ್ರಳಯ (53) ಘಟನೆಯಲ್ಲಿ ಗಾಯಗೊಂಡವರು. ಬೆಳಿಗ್ಗೆ 6.50 ರ ವೇಳೆಗೆ ಇದೇ ಹಳಿಯಲ್ಲಿ ಸಂಚರಿಸಿದ ನೇತ್ರಾವತಿ ಎಕ್ಸ್ ಪ್ರೆಸ್ ರೈಲಿನಿಂದ ಜಾರಿ ಹೊರ ಬಿದ್ದಿದ್ದಾರೆ. ರೈಲ್ವೆ ಟ್ರ್ಯಾಕ್ ಸಿಬ್ಬಂದಿಗಳು 108 ಅಂಬುಲೆನ್ಸ್ ಗೆ ಕರೆ ಮಾಡಿದ್ದು, ಅದರನ್ವಯ ಇ ಎಂ ಟಿ ಆದ ನವೀನ್ ಕುಮಾರ್ ಹಾಗೂ ಪೈಲಟ್ ಚಂದ್ರಕಾಂತ್ ಇವರು ಘಟನೆ ಸ್ಥಳಕ್ಕೆ ತೆರಳಿ ಹಳಿಯಲ್ಲಿ ಬಿದ್ದಿದ್ದ ರೋಗಿಗೆ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಕುಂದಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದು ಅಲ್ಲಿಂದ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವರ್ಗಾವಣೆ ಮಾಡಿರುತ್ತಾರೆ.ರೋಗಿಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳಿಂದ ತಿಳಿದುಬಂದಿದೆ.
ಪುತ್ತೂರು: ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ವಂಚನೆ ಮಾಡಿದ ಪ್ರಕರಣವನ್ನು ಭೇಧಿಸಿರುವ ಪುತ್ತೂರು ಗ್ರಾಮಾಂತರ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ತುಮಕೂರಿನ ಚಿಕ್ಕನಾಯಕನಹಳ್ಳಿಯ ಸುಮಿತ್ರ ಬಾಯಿ ಸಿ.ಆರ್.(23), ಹಾಸನದ ಹಳಸಿನಹಳ್ಳಿಯ ಸೌಂದರ್ಯ ಎಂ.ಎಸ್.(21), ತುಮಕೂರಿನ ಚಿಕ್ಕನಾಯಕನಹಳ್ಳಿಯ ರಾಹುಲ್ ಕುಮಾರ್ ನಾಯ್ಕ(19) ಎಂದು ಗುರುತಿಸಲಾಗಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ವಿವಿಧ ಪತ್ರಿಕೆಗಳಲ್ಲಿ ಕರಾವಳಿ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕಚೇರಿ ಕೆಲಸ ಖಾಲಿ ಇದೆ. ನಿರುದ್ಯೋಗಿಗಳಿಗೆ ಬಂದ ದಿನವೇ ಕೆಲಸ ಸಿಗುತ್ತದೆ ಎಂಬುದಾಗಿ ಬಂದ ಜಾಹೀರಾತು ನೋಡಿದ ಕೆಲವರು ಜಾಹೀರಾತಿನಲ್ಲಿ ನಮೂದಿಸಿದ ಫೋನ್ ನಂಬರ್ ಗೆ ಕರೆ ಮಾಡಿ ವಿಚಾರಿಸಿದರು. ಅವರು ಕರೆಯನ್ನು ಸ್ವೀಕರಿಸಿ ನೀವು ಕೆಲಸಕ್ಕೆ ಸೇರ ಬಯಸಿದರೆ ಫೀಸ್ ಕೊಡ್ಬೇಕು ಎಂಬುದಾಗಿ ತಿಳಿಸಿದ್ದರು. ಅಂತೆಯೇ, ಕಳೆದ ಸುಮಾರು 7 ತಿಂಗಳಿನಿಂದ ಪದೇ ಪದೇ ಆನ್ ಲೈನ್ ಮುಖಾಂತರ ಹಣವನ್ನು ಪಾವತಿ ಮಾಡುವಂತೆ ತಿಳಿಸಿದ್ದರು. ಅದರಂತೆ ಗೂಗಲ್ ಪೇ ಮುಖಾಂತರ ಇದುವರೆಗೆ ಸುಮಾರು…
ಮಂಗಳೂರು : ದೂರು ನೀಡಲು ಬಂದಿರುವ ಮಹಿಳೆಯ ಮೊಬೈಲ್ ಗೆ ಅಸಭ್ಯ ಸಂದೇಶ ಕಳುಹಿಸಿ ಕಿರುಕುಳ ನೀಡಿರುವ ಆರೋಪದಲ್ಲಿ ಕಾವೂರು ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಸಂತೋಷ್ ಸಿ.ಜೆ. ಎಂಬಾತನನ್ನು ಮಂಗಳೂರು ಪೊಲೀಸ್ ಕಮಿಷನರ್ ಅಮಾನತುಗೊಳಿಸಿದ್ದಾರೆ. ಮಹಿಳೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಕಾವೂರು ಠಾಣೆಗೆ ಬಂದಿದ್ದ ವೇಳೆ ಹೆಡ್ ಕಾನ್ಸ್ಟೇಬಲ್ ಸಂತೋಷ್ ಆಕೆಯ ಮೊಬೈಲ್ ನಂಬರ್ ಪಡೆದಿದ್ದ. ಆ ಬಳಿಕದಿಂದ ಆಕೆಗೆ ಅಸಭ್ಯವಾದ ಸಂದೇಶ ಕಳುಹಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಯಾರಲ್ಲಾದರೂ ಹೇಳಿದರೆ ಜೀವನ ಪರ್ಯಂತ ಕೊರಗುವಂತೆ ಮಾಡುತ್ತೇನೆ. ನಿನ್ನ ಇಡಿ ಕುಟುಂಬವನ್ನು ಮುಗಿಸುತ್ತೇನೆ ಎಂದು ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಸಂತೋಷ್ ಬೆದರಿಕೆ, ಕಿರುಕುಳದಿಂದ ಬೇಸತ್ತ ಮಹಿಳೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರನ್ನು ಭೇಟಿಯಾಗಿ ದೂರು ನೀಡಿದ್ದರು. ಆತ ಬೆದರಿಕೆ ಒಡ್ಡಿರುವ ಆಡಿಯೋ ಸಂದೇಶವನ್ನು ಕಮಿಷನರ್ ಅವರಿಗೆ ನೀಡಿದ್ದಾರೆಂದು ತಿಳಿದು ಬಂದಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಕಮಿಷನರ್, ಹೆಡ್ ಕಾನ್ಸ್ಟೇಬಲ್…
ಉಡುಪಿ: ಮಣಿಪಾಲ ನಗರ ಪ್ರದೇಶ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಕಾರ್ಯಾಚರಿಸುತ್ತಿದ್ದ (What U Want, S.G. Riders, R.N.R. Rental Bike, City Rental Bike)ಬಾಡಿಗೆಗೆ ನೀಡುತ್ತಿದ್ದ ಬೈಕ್/ಕಾರ್ ಶೋ ರೂಮ್ ವಿರುದ್ಧ ಶಿವಮೊಗ್ಗ ಜಂಟಿ ಸಾರಿಗೆ ಆಯುಕ್ತರಾದ ಕೆ.ಟಿ.ಹಾಲಸ್ವಾಮಿ ನೇತ್ರತ್ವದಲ್ಲಿ ಆರ್ಟಿಓ ಮತ್ತು ಮೋಟಾರು ವಾಹನ ನಿರೀಕ್ಷಕರೊಂದಿಗೆ ದಾಳಿ ನಡೆಸಿದ್ದಾರೆ. ನಗರದಲ್ಲಿ ಅನಧಿಕೃತವಾಗಿ ತೆರೆದಿರುವ City Rental Bike & R.N.R. Brothers ರೆಂಟಲ್ ಮಳಿಗೆಗಳನ್ನು ಮುಚ್ಚಿ, ಅನಧಿಕೃತವಾಗಿ ಕಾರ್ಯಾಚರಣೆ ಮಾಡುತ್ತಿದ್ದ ಸುಮಾರು 10ರಿಂದ 15 ರೆಂಟ್ ಕಾರ್ಗಳನ್ನು ತಪಾಸಣೆ ಮಾಡಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ.
ಮಂಗಳೂರು: ಪ್ರಕರಣವೊಂದರ ದೂರು ನೀಡಲು ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಗೆ ಬೆದರಿಕೆ ಹಾಗೂ ಅವಾಚ್ಯ ಸಂದೇಶದ ಕಳುಹಿಸಿ ಮಾನಸಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಾವೂರು ಠಾಣೆಯ ಹೆಡ್ ಕಾನ್ಸ್ಟೇಬಲ್ ಸಂತೋಷ್ ಎಂಬಾತನನ್ನು ಅಮಾನತುಗೊಳಿಸಿ ಪೊಲೀಸ್ ಕಮಿಷನರ್ ಆದೇಶಿಸಿದ್ದಾರೆ. ಮಹಿಳೆಯು ಪ್ರಕರಣವೊಂದಕ್ಕೆ ಸಂಬಂಧಿಸಿ ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದರು. ಈ ವೇಳೆ ಆ ಮಹಿಳೆಯ ಮೊಬೈಲ್ ನಂಬರ್ ಪಡೆದಿದ್ದ ಹೆಡ್ ಕಾನ್ಸ್ಟೇಬಲ್ ಸಂತೋಷ್ ಆಕೆಗೆ ಅಸಭ್ಯ ರೀತಿಯಲ್ಲಿ ಸಂದೇಶ ಕಳುಹಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಯಾರಲ್ಲಾದರೂ ದೂರು ನೀಡಿದರೆ ಜೀವನ ಪರ್ಯಂತ ಕೊರಗುವಂತೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿದೆ. ಇದರಿಂದ ಆಘಾತಗೊಂಡ ಮಹಿಳೆ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರಿಗೆ ದೂರು ನೀಡಿದ್ದರು. ದೂರನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಕಮಿಷನರ್ ಹೆಡ್ ಕಾನ್ಸ್ಟೇಬಲ್ ಸಂತೋಷ್ನನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಅಲ್ಲದೆ ತನಿಖೆ ನಡೆಸಿ ವರದಿ ನೀಡುವಂತೆ ಮಂಗಳೂರು ಉತ್ತರ ವಿಭಾಗದ ಎಸಿಪಿಗೆ ಸೂಚಿಸಿದ್ದಾರೆ.
ಕಾಸರಗೋಡು: ಎರಡು ವರ್ಷಗಳ ಹಿಂದೆ ಪೈವಳಿಕೆಯಲ್ಲಿ ಗಲ್ಫ್ ಉದ್ಯೋಗಿಯಾದ ಸೀತಾಂಗೋಳಿಯ ಅಬೂಬಕ್ಕರ್ ಸಿದ್ದೀಕ್ ನನ್ನು ಥಳಿಸಿ ಕೊಲೆಗೈದ ಪ್ರಕರಣದ ಪ್ರಮುಖ ಆರೋಪಿಯನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಪೈವಳಿಕೆಯ ನೂರ್ ಷಾ (39) ಬಂಧಿತ ಆರೋಪಿ. ಪೊಲೀಸ್ ಠಾಣೆ ಗೆ ಶರಣಾದ ಈತನನ್ನು ಬಂಧಿಸಲಾಗಿದೆ. ಈತ ಸೀತಾಂಗೋಳಿ ಮುಗು ವಿನ ಸಿದ್ದೀಕ್ ನನ್ನು ಮರಕ್ಕೆ ಹಾಕಿ ಥಳಿಸಿ ಕೊಲೆಗೈದ ಆರೋಪಿಯಾಗಿದ್ದಾನೆ. ಚಿನ್ನಾಭರಣ ಸಾಗಾಟ ವ್ಯವಹಾರವೇ ಕೃತ್ಯಕ್ಕೆ ಕಾರಣ ಎನ್ನಲಾಗಿದೆ. ಸಿದ್ದೀಕ್ ನನ್ನು ಕೊಲೆಗೈದು ಮೃತದೇಹವನ್ನು ಬಂದ್ಯೋಡಿನ ಖಾಸಗಿ ಆಸ್ಪತ್ರೆಯಲ್ಲಿ ತೊರೆದು ಆರೋಪಿಗಳು ಪರಾರಿಯಾಗಿದ್ದರು.ನೂರ್ ಷಾ ನೇತೃತ್ವದ11 ಮಂದಿಯ ತಂಡವು ಈ ಕೃತ್ಯ ನಡೆಸಿತ್ತು. ಕಾರಿನಲ್ಲಿ ಅಪಹರಿಸಿದ್ದ ತಂಡ ಪೈವಳಿಕೆ ಯ ನಿರ್ಜನ ಸ್ಥಳಕ್ಕೆ ಕೊಂಡೊಯ್ದು ಕೃತ್ಯ ನಡೆಸಿತ್ತು. ಕೃತ್ಯದ ಬಳಿಕ ಬಹುತೇಕ ಆರೋಪಿಗಳು ವಿದೇಶಕ್ಕೆ ಪರಾರಿಯಾಗಿದ್ದರು. ನಾಲ್ವರು ಆರೋಪಿಗಳು ಇನ್ನೂ ತಲೆ ಮರೆಸಿಕೊಂಡಿದ್ದಾರೆ
ವಿಟ್ಲ ಸಮೀಪದ ಅಡ್ಯನಡ್ಕ ಎಂಬಲ್ಲಿನ ಕರ್ನಾಟಕ ಬ್ಯಾಂಕ್ಗೆ ನಿನ್ನೆ ರಾತ್ರಿ ದರೋಡೆಕೋರರು ಒಳನುಗ್ಗಿದ್ದು, ಇಂದು ಮುಂಜಾನೆ ಎಂದಿನಂತೆ ಬ್ಯಾಂಕ್ ಸಿಬ್ಬಂದಿ ಬ್ಯಾಂಕ್ ತೆರೆದು ಓಳಗೆ ಹೋದಾಗ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ವಿಟ್ಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ತನಿಖೆ ನಡೆಸಿದ್ದಾರೆ. ಹೆಚ್ಚಿನ ಪರಿಶೀಲನೆಗಾಗಿ ಸ್ಥಳಕ್ಕೆ ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಭೇಟಿ ನೀಡಿದ್ದು ತನಿಖೆ ಮುಂದುವರಿದಿದೆ. ಘಟನಾ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ರಿಷ್ಯಂತ್ ಭೇಟಿ ನೀಡಿದ್ದು, ತನಿಖೆ ಚುರುಕುಗೊಂಡಿದೆ. ಘಟನೆ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ರಿಷ್ಯಂತ್ ಮಾತನಾಡಿ ’ನಿನ್ನೆ ದಿನ ರಾತ್ರಿ ವಿಟ್ಲ ಸಮೀಪದ ಅಡ್ಯನಡ್ಕ ಎಂಬಲ್ಲಿ ಕರ್ನಾಟಕ ಬ್ಯಾಂಕ್ನಲ್ಲಿ ಲಾಕರ್ ಮುರಿದು ಕಳ್ಳತನವಾಗಿದೆ. ಇದೀಗ ವಿಧಿವಿಧಾನ ತಜ್ಞರು ತನಿಖೆ ಮುಂದುವರೆಸಿದ್ದಾರೆ. ಬ್ಯಾಂಕಿನ ಭದ್ರತಾ ಸಿಸ್ಟಮ್ ತುಂಬಾ ದುರ್ಬಲವಾಗಿದೆ. ಲಾಕರ್ ಫೆಸಿಲಿಟಿಗಳೆಲ್ಲವೂ ತುಂಬಾ ಭದ್ರವಾಗಿರಬೇಕು. ಇದಕ್ಕೆ ಬೇಕಾದಂತಹ ಎಲ್ಲಾ ವ್ಯವಸ್ಥೆಗಳನ್ನು ಎಲ್ಲಾ ಬ್ಯಾಂಕ್ಗಳು ಮಾಡಬೇಕು.…
ಕಾರ್ಕಳ: ಕಾರ್ಕಳದ ಬೈಲೂರಿನಲ್ಲಿ ನಿರ್ಮಿಸಿದ್ದ ಪರಶುರಾಮ ಥೀಮ್ ಪಾರ್ಕ್ ಹಗರಣದ ಬಗ್ಗೆ ಸಿಐಡಿ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಈ ಬಗ್ಗೆ ಫೆ.06ರ ಮಂಗಳವಾರ ಮುಖ್ಯಮಂತ್ರಿಗಳು ಆದೇಶ ಹೊರಡಿಸಿದ್ದಾರೆ. ಪರಶುರಾಮ ಥೀಮ್ ಪಾರ್ಕ್ ಮೋಸದ ವಿಚಾರವಾಗಿ ಅನೇಕ ಹೋರಾಟಗಳು ಪ್ರತಿಭಟನೆಗಳು ನಡೆದಿದ್ದವು. ಇತ್ತೀಚೆಗೆ ಈ ವಿಚಾರವನ್ನು ಕಾರ್ಕಳ ಕಾಂಗ್ರೆಸ್ ನ ಕಾರ್ಯಕರ್ತರು ಹಾಗೂ ಇತರ ಹಲವು ಸಾಮಾಜಿಕ ಕಾರ್ಯಕರ್ತರು ಮತ್ತೆ ಈ ಹಗರಣದ ಬಗ್ಗೆ ದ್ವನಿ ಎತ್ತಿದ್ದರು. ಇದರ ಬೆನ್ನಲ್ಲೇ ಸಿಎಂ ಸಿಐಡಿ ತನಿಖೆಗೆ ಆದೇಶ ನೀಡಿದ್ದಾರೆಪರಶುರಾಮ ಥೀಮ್ ಪಾರ್ಕ್ ಒಟ್ಟಾರೆ 11.54 ಕೋಟಿ ರೂಗಳ ಯೋಜನೆಯಾಗಿದ್ದು ಅದರಲ್ಲಿ 5 ಕೋಟಿ ರೂ ವೆಚ್ಚದಲ್ಲಿ ಪರಶುರಾಮ ನ ಕಂಚಿನ ಮೂರ್ತಿ ಪ್ರತಿಷ್ಠಾಪನೆ ಮಾಡುವುದೆಂದು ನಿರ್ಧಾರ ಆಗಿತ್ತು. ಕಂಗೇರಿಯ ಪ್ರತಿಮೆ ತಯಾರಿ ಸಂಸ್ಥೆಯೊಂದಕ್ಕೆ ಇದರ ಕಾಂಟ್ರಾಕ್ಟ್ ನೀಡಲಾಗಿತ್ತು. ರಾಜ್ಯ ಚುನಾವಣೆ ಹೊಸ್ತಿಲಲ್ಲಿ ಅಂದಿನ ಬಿಜೆಪಿ ಸರ್ಕಾರ ಜನವರಿ 27ರಂದು ಥೀಮ್ ಪಾರ್ಕ್ ಉದ್ಘಾಟಿಸಿತ್ತು. ಅಲ್ಲಿ ನಿರ್ಮಿಸಲಾಗಿರುವ ಪರಶುರಾಮನ ಕಂಚಿನ ಪ್ರತಿಮೆಯ ಉದ್ದ 33 ಅಡಿ,…
ಉಡುಪಿ : ಮಂಗಳೂರಿನ ಲೋಕಾಯುಕ್ತ ಪೋಲಿಸ್ ವರಿಷ್ಠಾಧಿಕಾರಿ ನೇತೃತ್ವದ ತಂಡ ಸರ್ಚ್ ವಾರೆಂಟ್ ಆದೇಶದಂತೆ ಉಡುಪಿ ನೋಂದಣಿ ಕಚೇರಿಗೆ ಭೇಟಿ ನೀಡಿ ತನಿಖೆ ಕೈಗೊಂಡು ಪರಿಶೀಲನೆ ನಡೆಸಿದ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಉಡುಪಿ ಉಪನೋಂದಾವಣೆ ಕಚೇರಿ, ನಗರಾಭಿವೃದ್ಧಿ ಪ್ರಾಧಿಕಾರ, ತಾಲೂಕು ಕಚೇರಿಗಳಲ್ಲಿ ಭ್ರಷ್ಟಾ ಚಾರ ತಾಂಡವಾಡುತ್ತಿದೆ ಎಂದು ಇತ್ತೀಚೆಗೆ ವಕೀಲರೋಬ್ಬರು ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತರ ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ಅವರಿಗೆ ದೂರು ನೀಡಿದ್ದರು. ಈ ಹಿನ್ನಲೆ ಲೋಕಾಯುಕ್ತ ತಂಡ ಉಡುಪಿ ನೋಂದಣಿ ಕಚೇರಿಗೆ ಭೇಟಿ ನೀಡಿ ತನಿಖೆ ಕೈಗೊಂಡು ಪರಿಶೀಲನೆ ನಡೆಸಿದ್ದಾರೆ. ಇತ್ತೀಚೆಗೆ ಉಡುಪಿ ಜಿಲ್ಲೆಗೆ ಭೇಟಿ ನೀಡಿದ್ದ ಉಪ ಲೋಕಾಯುಕ್ತರ ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ಅವರಿಗೆ ವಕೀಲರೊಬ್ಬರು ಉಡುಪಿ ನೋಂದಾಣಿ ಕಛೇರಿಯಲ್ಲಿ ಭ್ರಷ್ಟಚಾರ ನಡೆಯುತ್ತಿದೆ ಎಂದು ಮೌಖಿಕವಾಗಿ ದೂರು ನೀಡಿದ್ದರು. ಈ ಹಿನ್ನಲೆ ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ರವರು ಉಡುಪಿ ನೋಂದಾಣಿ ಕಛೇರಿಯ ತನಿಖೆಗೆ ಸರ್ಚ್ ವಾರೆಂಟ್ ಅನ್ನು ಹೊರಡಿಸಿ ತನಿಖೆಗೆ ಮಂಗಳೂರು ವಿಭಾಗ ಲೋಕಾಯುಕ್ತ ಎಸ್.ಪಿ ಗೆ ಆದೇಶಿಸಿದ್ದರು…










