ಬಂಟ್ವಾಳ: ಅಕ್ರಮ ಮರಳು ಸಾಗಾಟದ ಲಾರಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಗಸ್ತು ತಿರುಗುತ್ತಿದ್ದ ವೇಳೆ ವಶಕ್ಕೆ ಪಡೆದ ಘಟನೆ ಜ. 25ರಂದು ರಾ.ಹೆ.75ರ ತುಂಬೆಯಲ್ಲಿ ನಡೆದಿದೆ. ಲಾರಿ ಮಾಲಕ ಸಂತೋಷ್ ಕೋಟ್ಯಾನ್ ಹಾಗೂ ಚಾಲಕ ಪ್ರಕಾಶ್ ಆರೋಪಿಗಳೆಂದು ಗುರುತಿಸಲಾಗಿದೆ.ಬಂಟ್ವಾಳ ಗ್ರಾಮಾಂತರ ಪಿಎಸ್ಐ ಹರೀಶ್ ಎಂ.ಆರ್. ನೇತೃತ್ವದ ತಂಡ ಮುಂಜಾನೆ 5ರ ಸುಮಾರಿಗೆ ಗಸ್ತು ತಿರುಗುತ್ತಿದ್ದ ವೇಳೆ ಲಾರಿಯೊಂದನ್ನು ತಡೆದು ವಿಚಾರಿಸಿದಾಗ ಅಕ್ರಮ ಮರಳು ಸಾಗಾಟ ಬೆಳಕಿಗೆ ಬಂದಿದೆ. ಪೊಲೀಸರು ಸುಮಾರು 4 ಲಕ್ಷ ರೂ. ಮೌಲ್ಯದ ಲಾರಿ ಮತ್ತು 7 ಸಾವಿರ ರೂ. ಮೌಲ್ಯದ ಮರಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.
Author: main-admin
ಉಡುಪಿ: ಸುಲಭದಿ ಗಣ ಗಳಿಸಬಹುದು ಎಂಬ ವಂಚಕರ ಜಾಲಕ್ಕೆ ಜನರು ಸಿಕ್ಕಿ ಬೀಳುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಉಡುಪಿ ಜಿಲ್ಲೆಯಲ್ಲಿ ಜನವರಿಯಲ್ಲೇ ಇಂತಹ ಹಲವಾರು ಪ್ರಕರಣಗಳು ಬೆಳಕಿಗೆ ಬಂದಿವೆ. ಜ.1ರಂದು 2.50 ಲ.ರೂ., ಜ.2ರಂದು 3 ಲ.ರೂ., ಜ. 4ರಂದು 18 ಲ.ರೂ., ಜ. 12ರಂದು 62 ಲ.ರೂ., ಜ. 13ರಂದು 1.80 ಲ.ರೂ., ಜ.16ರಂದು 1.38 ಲ.ರೂ., ಜ.20ರಂದು 6.16 ಲ.ರೂ., ಜ.23ರಂದು 43 ಲ.ರೂ. ಸಹಿತ ಇನ್ನಿತರ ಹಲವು ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಪತ್ತೆಯಾಗಿದ್ದು, ಕೆಲವು ಮಾತ್ರ! ಮತ್ತೆ 4 ಪ್ರಕರಣ!ಮಣಿಪಾಲದ ಕಾಲೇಜೊಂದರ ಅಕನ್ಸಾ ಅವರನ್ನು ಜ.17 ರಂದು ಅಪರಿಚಿತ ವ್ಯಕ್ತಿಯೊಬ್ಬ ವ್ಯಾಟ್ಸಪ್ ಗ್ರೂಪ್ಗೆ ಸೇರಿಸಿ ಪಾರ್ಟ್ಟೈಮ್ ಜಾಬ್ ಬಗ್ಗೆ ಮಾಹಿತಿ ನೀಡಿ ಟೆಲಿಗ್ರಾಮ್ ಅಪ್ಲಿಕೇಶನ್ ಮೂಲಕ ಸುಲಭ ಟಾಸ್ಕ್ ಗಳಿಂದ ಹಣ ಗಳಿಸುವ ವಿಧಾನ ತಿಳಿಸಿದ್ದ. ಮೊದಲ ಟಾಸ್ಕ್ ನಲ್ಲಿ 3 ಪ್ರೊಡಕ್ಟ್ ಬಗ್ಗೆ ಹಂಚಿಕೊಂಡರೆ ಅಧಿಕ ಹಣ ಬರುವುದಾಗಿ ತಿಳಿಸಿದ್ದ ಇದರಂತೆ ಮುಂದುವರಿದಾಗ ಮೊದಲಿಗೆ 150…
ಮಂಗಳೂರು: ಕೊರಗಜ್ಜ ದೈವಾರಾಧಕರಾಗಿದ್ದ ಅಶೋಕ್ ಬಂಗೇರ ಅವರು ಹೃದಯಾಘಾತದಿಂದ ವಿಧಿವಶರಾದರು. ಹಲವು ವರ್ಷಗಳಿಂದ ಅವರು ತಮ್ಮನ್ನು ದೈವಾರಾಧನೆಯಲ್ಲಿ ತೊಡಗಿಸಿಕೊಂಡಿದ್ದ ಅಶೋಕ್ ಬಂಗೇರ ಅವರು ನಿನ್ನೆ ರಾತ್ರಿ ರಕ್ತೇಶ್ವರಿ ನೇಮ ಆದ ಬಳಿಕ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಮಂಗಳೂರಿನ ಪದವಿನಂಗಡಿ ಬಳಿ ಇರುವ ಕೊರಗಜ್ಜನ ಸಾನಿಧ್ಯದಲ್ಲಿ ಅವರು ಕೊರಗಜ್ಜನ ಸೇವೆ ಮಾಡಿಕೊಂಡು ಬರುತ್ತಿದ್ದರು. ಅವರು ದೈವಾರಾಧನೆಯಲ್ಲಿ ಅದ್ಭುತ ಸೇವೆಯನ್ನು ಮಾಡುತ್ತಾ, ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಇದ್ದು ಅನೇಕ ಯುವ ಸಮೂಹಕ್ಕೆ ಮಾದರಿಯಾಗಿದ್ದರು.
ಉಡುಪಿ: ನಗರದ ಮಲ್ಪೆ ರಸ್ತೆಯ ಪಂದುಬೆಟ್ಟು ಸಮೀಪ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ನಡೆದ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದಾನೆ, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ರಾತ್ರಿ ನಡೆದಿದೆ. ಆಕ್ಟೀವ ಹಾಗೂ ಬಸ್ ನಡುವೆ ನಡೆದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದಾನೆ. ಗಂಭೀರ ಗಾಯಗೊಂಡ ಮತ್ತೋರ್ವನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಘಟನೆ ಸ್ಥಳಕ್ಕೆ ಉಡುಪಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಪೊಲೀಸರು ಅಪಘಾತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಂಟ್ವಾಳ : ಕೌಟುಂಬಿಕ ಕಲಹದ ಹಿನ್ನಲೆ ಪತ್ನಿ ತನ್ನ ಗೆಳೆಯನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಲು ಕಾರು ಹತ್ತಿಸಿದ ಘಟನೆಯು ಬಂಟ್ವಾಳ ಪಾಣಿಮಂಗಳೂರಿನ ಮೆಲ್ಕಾರಿನಲ್ಲಿ ನಡೆದಿದ್ದು, ಇದೀಗ ಪತಿಯು ಎದೆನೋವಿ ನಿಂದಾಗಿ ಆಸ್ಪತ್ರೆ ಸೇರಿದ್ದಾರೆ. ಜನವರಿ 23ರಂದು ಈ ಘಟನೆ ನಡೆದಿದ್ದು ಪತ್ರಿಕೆಯೊಂದರಲ್ಲಿ ಛಾಯಾಗ್ರಾಹಕರಾಗಿರುವಂತಹ ಕಿಶೋರ್ ಕುಮಾರ್ ಬೋಳಾರ್ ಅವರು ನೀಡಿದ ದೂರಿನಂತೆ ಬಂಟ್ವಾಳ ನಗರ ಠಾಣೆಯಲ್ಲಿ ಕಿಶೋರ್ ಅವರ ಪತ್ನಿ ಶಿಕ್ಷಕಿ ಶುಭಾ ಮತ್ತು ಶಿಕ್ಷಕ ಶಿವಪ್ರಸಾದ್ ಶೆಟ್ಟಿ ಎಂಬವರ ಮೇಲೆ ದೂರು ದಾಖಲಾಗಿದೆ. ಕಿಶೋರ್ ಕುಮಾರ್ ಬೋಳಾರ್ ನೀಡಿರುವ ದೂರಿನ ಪ್ರಕಾರ ಶುಭಾ ರವರನ್ನು 2008 ರಲ್ಲಿ ಮದುವೆಯಾಗಿ 12 ವರ್ಷದ ಹೆಣ್ಣು ಮಗಳಿದ್ದು, ಪಿರ್ಯಾದಿದಾರರು ಪ್ರಜಾವಾಣಿ ಪತ್ರಿಕೆಯಲ್ಲಿ ಛಾಯಾ ಚಿತ್ರ ವರದಿಗಾರನಾಗಿಯೂ, ಅವರ ಪತ್ನಿ ಸರ್ಕಾರಿ ಶಾಲಾ ಅಧ್ಯಾಪಕಿಯಾಗಿ ಕೆಲಸ ಮಾಡಿಕೊಂಡಿದ್ದಾರೆ. ಪಾಣೆಮಂಗಳೂರು ಗ್ರಾಮದ ಮೆಲ್ಕಾರ್ ಎಂಬಲ್ಲಿ ಸಾರಾ ಆರ್ಕೆಡ್ ಎಂಬ ವಸತಿ ಗೃಹದಲ್ಲಿ ವಾಸವಾಗಿದ್ದರು. ಈ ನಡುವೆ ಕಿಶೋರ್ ಅವರ ಪತ್ನಿ ಶುಭಾ ರವರ…
ಉಡುಪಿ: ದ್ವಿಚಕ್ರ ವಾಹನವೊಂದು ವಿರುದ್ದ ದಿಕ್ಕಿನಲ್ಲಿ ಬರುತ್ತಿದ್ದ ಬಸ್ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಪರಿಣಾಮ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಜ. 26 ರಂದು ಶುಕ್ರವಾರ ತಡರಾತ್ರಿ ಕರಾವಳಿ-ಮಲ್ಪೆ ರಸ್ತೆಯ ಪಂಡುಬೆಟ್ಟು ಎಂಬಲ್ಲಿ ನಡೆದಿದೆ. ಮೂಲಗಳ ಪ್ರಕಾರ, ಮಣಿಪಾಲದ ರೆಸ್ಟೋರೆಂಟ್ ಒಂದರಲ್ಲಿ ಉದ್ಯೋಗಿಯಾಗಿರುವ ಇಬ್ಬರು ಯುವಕರು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಬಸ್ಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.ಘಟನೆಯಲ್ಲಿ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವನಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಐಸಿಸ್ ಜೊತೆ ಸಂಪರ್ಕ ಹೊಂದಿರುವ ಶಂಕಿತ ಉಗ್ರನ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಯುವತಿಯನ್ನು ರಾಷ್ಟ್ರೀಯ ತನಿಖಾ ದಳ (NIA) ತೀವ್ರ ವಿಚಾರಣೆ ನಡೆಸಿದೆ. ಕಳೆದ ಎರಡು ದಿನಗಳ ಹಿಂದೆ ಮಹರಾಷ್ಟ್ರದ ಎನ್ ಐಎ ಅಧಿಕಾರಿಗಳು ಭಟ್ಕಳದ ಆಜಾದ್ ನಗರಕ್ಕೆ ಆಗಮಿಸಿ, ಯುವತಿಯನ್ನು ತೀವ್ರ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಐಸಿಸ್ ಸಂಘಟನೆಗೆ ಹಣ ವರ್ಗಾವಣೆ ಮಾಡುತ್ತಿದ್ದ ಇಂಜಿನಿಯರ್ ಹುಸೇನ್ ಅಬ್ದುಲ್ ಅಜೀಜ್ ಶೇಖ್ (32) ಎಂಬಾತನನ್ನು ಮಹಾರಾಷ್ಟ್ರದ ನಾಸಿಕ್ ನ ಟಿಡ್ಕೆ ಕಾಲೋನಿಯಲ್ಲಿ ಎನ್ಐಎ ಅಧಿಕಾರಿಗಳು ಬಂಧಿಸಿದ್ದರು. ಹುಸೇನ್ ಅಬ್ದುಲ್ ಶೇಖ್ ಮನೆಯಲ್ಲಿ ಆತನಿಗೆ ಸಂಬಂಧಿಸಿದ ಸಿಮ್ ಕಾರ್ಡ್, ಮೊಬೈಲ್, ಪೆನ್ ಡ್ರೈವ್, ಲ್ಯಾಪ್ ಟಾಪ್ ಪತ್ತೆಯಾಗಿದ್ದು, ಪರಿಶೀಲನೆ ನಡೆಸಿದಾಗ ಆತನ ಜೊತೆ ಭಟ್ಕಳ ಮೂಲದ ಯುವತಿ ಸಂಪರ್ಕವಿರುವುದು ಬಹಿರಂಗವಾಗಿದೆ. ಅಲ್ಲದೇ ಹುಸೇನ್ ಅಬ್ದುಲ್ ಶೇಖ್ ನನ್ನು ಆಕೆ ಪ್ರೀತಿಸುತ್ತಿದ್ದಳು ಎಂಬ ವಿಚಾರ ಗೊತ್ತಾಗಿದೆ. ಯುವತಿ ಭಟ್ಕಳದಲ್ಲಿ ಆನ್ ಲೈನ್ ಅರೇಬಿಕ್ ಕ್ಲಾಸ್ ನಡೆಸುತ್ತಿದ್ದು,…
ಕಲಬುರಗಿಯಲ್ಲಿ ಅಮಾನವೀಯ ಘಟನೆ ನಡೆದಿದ್ದು, ಸಹಪಾಠಿಗಳು ಬಾಲಕನನ್ನು ಅರೆಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಕಲಬುರ್ಗಿಯ ಹಾಸ್ಟೆಲ್ ಒಂದರಲ್ಲಿ ಈ ಘಟನೆ ನಡೆದಿದ್ದು, ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಪೂಜೆಗೆ ಬರಲಿಲ್ಲವೆಂದು ವಿದ್ಯಾರ್ಥಿಯನ್ನು ಅರಬೆತ್ತಲೆ ಮಾಡಿ ಮೆರವಣಿಗೆ ಮಾಡಲಾಗಿದೆ. ವಿದ್ಯಾರ್ಥಿಯೊಬ್ಬ ಪೂಜೆಗೆ ಬರಲ್ಲ ಎಂದಿದ್ದಕ್ಕೆ ಸಹ ಪಾಠಿಗಳು ಆತನಿಗೆ ಥಳಿಸಿ ಅರೆಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ್ದಾರೆ. ವಿದ್ಯಾರ್ಥಿ ಅರೆಬೆತ್ತಲೆ ಮಾಡಿ ಅಂಬೇಡ್ಕರ್ ಫೋಟೋ ಕೊಟ್ಟು ಮೆರವಣಿಗೆ ಮಾಡಲಾಗಿದ್ದು, ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. .ಕಲಬುರಗಿ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,
ಉಡುಪಿ: ತಮ್ಮ ಮಗಳು ನಾಪತ್ತೆಯಾಗಿದ್ದಾಳೆ ಎಂದು ಸಾರ್ವಜನಿಕರಲ್ಲಿ ಗೋಗರೆಯುತ್ತಿದ್ದ ತಂದೆಯಿಂದ ಮಾಹಿತಿ ಪಡೆದ ಪತ್ರಕರ್ತರು ಬಾಲಕಿಯನ್ನು ಉಡುಪಿ ಪೊಲೀಸರ ಸಹಕಾರದೊಂದಿಗೆ ಗಂಟೆಯೊಳಗೆ ಪತ್ತೆಹಚ್ಚಿ ಹೆತ್ತವರ ವಶಕ್ಕೆ ಒಪ್ಪಿಸಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಘಟನೆಯ ವಿವರ:ಮೂಲ್ಕಿ ಬಸ್ ಸ್ಟ್ಯಾಂಡ್ ಸಮೀಪ ರಾತ್ರಿ 7:30ರ ಸುಮಾರಿಗೆ ಘಟನೆ ನಡೆದಿದೆ. ಜೋಯಿಡಾಕ್ಕೆ ಹೊರಟಿದ್ದ ಮಂಗಳೂರಿನ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಮೂಲ್ಕಿಯಲ್ಲಿ ಕಾರ್ ನಿಲ್ಲಿಸಿ ಸಮೀಪದ ಹೋಟೆಲ್ ಒಂದರಲ್ಲಿ ಚಹಾ ಕುಡಿದು ರಸ್ತೆ ಬದಿ ನಿಂತಿದ್ದರು.ಈ ವೇಳೆ ಅಳುತ್ತಾ ದಾರಿಯಲ್ಲಿ ಹೋಗಿಬರುತ್ತಿದ್ದವರಲ್ಲಿ ಗೋಗರೆಯುತ್ತಿದ್ದ ವ್ಯಕ್ತಿಯೋರ್ವರು ಪತ್ರಕರ್ತರ ಮುಂದೆ ಮಗಳು ನಾಪತ್ತೆಯಾದ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಬಿಜಾಪುರಕ್ಕೆ ಹೊರಟಿದ್ದ ಮಹಿಳೆ ಹುಡುಗಿಯೊಬ್ಬಳು ಬಾಗಲಕೋಟೆಗೆ ತೆರಳುವ ಕೆಎಸ್ ಆರ್ ಟಿಸಿ ಬಸ್ ಹತ್ತಿರುವ ಸುಳಿವು ನೀಡಿದ್ದರು. ಈ ಮಾಹಿತಿಯಾಧಾರಿಸಿ ಪತ್ರಕರ್ತರು ಕೂಡಲೇ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ಅವರಿಗೆ ವಿಡಿಯೋ, ಬಾಲಕಿಯ ಭಾವಚಿತ್ರ ಸಮೇತ ಮಾಹಿತಿ ನೀಡಿದ್ದಾರೆ. ಬಳಿಕ ಉಡುಪಿ ಕೆಎಸ್ ಆರ್ ಟಿಸಿ…
ಉಡುಪಿ: ವಿಡಿಯೋ ಚಿತ್ರೀಕರಣ ಮಾಡಿ ಬೆದರಿಸಿ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸೊ ವಿಶೇಷ ನ್ಯಾಯಾಲಯವು ಇಂದು ಆದೇಶ ನೀಡಿದೆ. ಕಾಪು ಮಜೂರು ನಿವಾಸಿ ಶಂಶುದ್ದೀನ್(24) ಶಿಕ್ಷೆಗೆ ಗುರಿಯಾಗಿರುವ ಆರೋಪಿ. ಆರೋಪಿ ಬಾಲಕಿಯನ್ನು ತನ್ನ ರಿಕ್ಷಾದಲ್ಲಿ ಶಾಲೆಗೆ ಬಿಡುತ್ತಿದ್ದು, ಆತ ತನ್ನ ಮೊಬೈಲ್ನಲ್ಲಿ ಒತ್ತಾಯ ಪೂರ್ವಕವಾಗಿ ಬಾಲಕಿಯ ಫೋಟೋ ತೆಗೆದಿದ್ದನು. ಬಳಿಕ ಈ ಫೋಟೋವನ್ನು ಬೇರೆಯವರಿಗೆ ಕಳುಹಿಸಿ ವೈರಲ್ ಮಾಡುವುದಾಗಿ ಹೆದರಿಸಿದ್ದು, ನನ್ನ ಜೊತೆ ಬಂದಲ್ಲಿ ಫೋಟೋ ಡಿಲೀಟ್ ಮಾಡುವುದಾಗಿ ನಂಬಿಸಿದ್ದನು. ಅದರಂತೆ ನೊಂದ ಬಾಲಕಿಯನ್ನು ಕಾಪುವಿನ ಲಾಡ್ಜ್ಗೆ ಕರೆದುಕೊಂಡು ಹೋಗಿ ತನ್ನ ಹೆಂಡತಿ ಎಂದು ಸುಳ್ಳು ಮಾಹಿತಿ ನೀಡಿ ರೂಮ್ ಪಡೆದು ಅತ್ಯಾಚಾರ ಎಸಗಿದ್ದನು. ಅದೇ ಸಮಯ ಆರೋಪಿ ನೊಂದ ಬಾಲಕಿಯ ಅರೆ ನಗ್ನ ಚಿತ್ರಗಳನ್ನು ತೆಗೆದು ವಿಡಿಯೋ ಮಾಡಿದ್ದನು. ನಂತರ ಡಿಲೀಟ್ ಮಾಡಬೇಕಾದರೆ ಹಣ ನೀಡಬೇಕೆಂದು ಬೆದರಿಕೆ ಹಾಕಿ ಆಕೆಯಿಂದ ಹಣ…










