Author: main-admin

ಪುತ್ತೂರು: ಲಿವರ್‌ ವೈಫಲ್ಯದಿಂದ ಬಳಲುತ್ತಿದ್ದ ಅಕ್ಕನಿಗೆ ಸ್ವಂತ ತಂಗಿಯೇ ಲಿವರ್‌ ದಾನ ಮಾಡಿದರೂ ಅಕ್ಕನ ಪ್ರಾಣ ಉಳಿಸಿಕೊಳ್ಳಲು ಸಾಧ್ಯವಾಗದ ಘಟನೆಯೊಂದು ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ನೆಹರೂ ನಗರದ ದಿ| ಆನಂದ ನಾಯ್ಕ ಅವರ ಪುತ್ರಿ ಐಶ್ವರ್ಯ(29) ಜ.24 ರಂದು ಲಿವರ್‌ ವೈಫಲ್ಯದಿಂದ ಮೃತಪಟ್ಟಿದ್ದಾರೆ. ಐಶ್ವರ್ಯ ಅವರಿಗೆ ಜಾಂಡೀಸ್‌ ಜ್ವರ ಬಾಧಿಸಿದ್ದು, ಮೊದಲು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಪರೀಕ್ಷೆ ನಡೆಸಿದ ವೈದ್ಯರು ಅವರ ಲಿವರ್‌ ಹಾನಿಯಾಗಿದ್ದು, ಲಿವರ್‌ ಟ್ರಾನ್ಸ್‌ಪ್ಲಾಂಟ್‌ ಮಾಡಬೇಕೆಂದು ತಿಳಿಸಿದ್ದರು. ಐಶ್ವರ್ಯ ಅವರ ತಾಯಿ ಮೊದಲು ಮಗಳಿಗಾಗಿ ಲಿವರ್‌ ದಾನ ಮಾಡಲು ಮುಂದಾಗಿದ್ದರು. ಆದರೆ ಅಕ್ಕನ ಮೇಲೆ ಅಪಾರ ಪ್ರೀತಿ, ಅಕ್ಕರೆ ಹೊಂದಿದ್ದ ಬ್ಯಾಂಕ್‌ ಉದ್ಯೋಗಿಯಾಗಿರುವ ಅನುಷಾ ತಾನೇ ಲಿವರ್‌ ದಾನ ಮಾಡಲು ಮುಂದಾಗಿದ್ದರು. ಅಲ್ಲದೆ ಚಿಕಿತ್ಸೆಯ ಮುಂದುವರಿದ ಭಾಗವಾಗಿ ಐಶ್ವರ್ಯ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಕ್ಕನಿಗೋಸ್ಕರ ಅನುಷಾ ಕೂಡ ಅದೇ ಆಸ್ಪತ್ರೆಯಲ್ಲಿ ಲಿವರ್‌ ದಾನ ಮಾಡಿದ್ದರೂ ವಿಧಿಯಾಟ ಬೇರೆಯದೇ ಆಗಿತ್ತು. ಐಶ್ವರ್ಯ ಚಿಕಿತ್ಸೆ ಪಡೆಯುತ್ತಿದ್ದ…

Read More

ಪುತ್ತೂರು: ಟೆಂಪೋ ಚಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕುರಿಂಜ ಪೊನ್ನಲಡ್ಕ ಎಂಬಲ್ಲಿ ಗುರುವಾರ ನಡೆದಿದೆ. ಮೃತ ಚಾಲಕನನ್ನು ಯಾದವ ಯಾನೆ ರವೀಂದ್ರ (45) ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮಿನಿ ಟೆಂಪೋ ಚಾಲಕರಾಗಿದ್ದ ಅವರು ಮನೆಯಿಂದ ಸ್ವಲ್ಪ ದೂರದಲ್ಲಿ ತನ್ನ ಟೆಂಪೋ ನಿಲ್ಲಿಸಿ ಪಕ್ಕದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Read More

ನವದೆಹಲಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಮರಳಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಕೇಂದ್ರ ಸಚಿವರಾದ ರಾಜೀವ್ ಚಂದ್ರಶೇಖರ್, ಭೂಪೇಂದ್ರ ಯಾದವ್ ಸಮಕ್ಷಮದಲ್ಲಿ ಮರಳಿ ಮಾತೃ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇತ್ತ ಕಾಂಗ್ರೆಸ್‌ಗೆ ಕೈ ಕೊಡುವುದಿಲ್ಲ ಎಂದು ಪ್ರಮಾಣ ಮಾಡಿ ಕಾಂಗ್ರೆಸ್‌ ಸೇರಿದ ಇದೇ ಶೆಟ್ಟರ್ ಇ ಮೇಲ್‌ ಮೂಲಕ ಕಾಂಗ್ರೆಸ್‌ MLC ಸ್ಥಾನಕ್ಕೆ ರಾಜೀನಾಮೆ ಕೊಟ್ಟು ‘ಕೈ’ ತೊರೆದಿದ್ದಾರೆ. ಇನ್ನು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿರುವ ಜಗದೀಶ್ ಶೆಟ್ಟರ್ ಅವರು ಎಂಎಲ್‌ಸಿ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ದೆಹಲಿಯಿಂದಲೇ ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿಗೆ ಕರೆ ಮಾಡಿರುವ ಶೆಟ್ಟರ್ ಅವರು ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮಾಹಿತಿ ನೀಡಿದ್ದಾರೆ. ಇ-ಮೇಲ್ ಮೂಲಕ ಬೇಡ ನೇರವಾಗಿ ಬಂದು ರಾಜೀನಾಮೆ ನೀಡುವಂತೆ ಸಭಾಪತಿ ಬಸವರಾಜ ಹೊರಟ್ಟಿ ಅವರು ಸೂಚಿಸಿದ್ದಾರೆ. ದೆಹಲಿಯಿಂದ ಖುದ್ದಾಗಿ ಬಂದು ಶೆಟ್ಟರ್ ಅವರು ಎಂಎಲ್‌ಸಿ…

Read More

ರಸ್ತೆ ಬದಿಯೇ ಕಾರಿನಲ್ಲಿ ಯುವಕ ಯುವತಿ ಸರಸ ಸಲ್ಲಾಪ ನಡೆಸುತ್ತಿದಾಗ ಈ ವೇಳೆ ಪ್ರಶ್ನೆ ಮಾಡಿದ ಪೊಲೀಸ್ ಅಧಿಕಾರಿ ಮೇಲೆ ಕಾರುಹರಿಸಲು ಯತ್ನಿಸಿ ಹಿಟ್ ಹ್ಯಾಂಡ್ ರನ್ ಮಾಡಿ ಜೋಡಿಗಳು ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಾಡಹಗಲೇ ಸಾರ್ವಜನಿಕ ರಸ್ತೆಯ ಬದಿ ಕಾರಿನೊಳಗೆ ಬೆತ್ತಲಾಗಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ಯುವಕ- ಯುವತಿಗೆ ಬುದ್ದಿ ಹೇಳಲು ಮುಂದಾದ ಪೊಲೀಸ್ ಅಧಿಕಾರಿ ಮೇಲೆಯೇ ಕಾರು ಹತ್ತಿಸಲು ಯತ್ನಿಸಿರುವ ಘಟನೆ ಜ್ಞಾನ ಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜ.20ರಂದು ಮಧ್ಯಾಹ್ನ 3.30ರ ಸುಮಾರಿಗೆ ಉಪಕಾರ ಲೇಔಟ್‌ನ ಮೂರನೇ ಮುಖ್ಯ ರಸ್ತೆಯ 3ನೇ ಅಡ್ಡರಸ್ತೆಯ ಊರ್ವ ರೆಸಿಡೆನ್ಸಿ ಬಳಿ ಈ ಘಟನೆ ನಡೆದಿದೆ. ಘಟನೆಯಲ್ಲಿ ನಗರ ಸಶಸ್ತ್ರ ಮೀಸಲು ಪಡೆ ಪಶ್ಚಿಮ ವಿಭಾಗದ ರಿಸರ್ವ್ ಸಬ್ ಇನ್‌ಸ್ಪೆಕ್ಟರ್ ಕೆ.ಮಹೇಶ್ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಇವರು ನೀಡಿದ ದೂರಿನ ಮೇರೆಗೆ ಅಪರಿಚಿತ ಜೋಡಿಯ ವಿರುದ್ದ ಕೊಲೆಗೆ ಯತ್ನ ಪ್ರಕರಣ ದಾಖಲಿಸಿ…

Read More

ಮುಂಬೈ: ಮಹಾರಾಷ್ಟ್ರದ ಮುಂಬೈ ನಗರದಲ್ಲಿ ಬಾಂದ್ರಾ ಕ್ರೈಮ್ ಬ್ರಾಂಚ್ ತಂಡದ ಪೊಲೀಸ್ ಅಧಿಕಾರಿ ದಯಾ ನಾಯಕ್ ಮತ್ತು ಅವರ ತಂಡ ಕುಖ್ಯಾತ ಭೂಗತ ಪಾತಕಿ ದಾವೂದ್ ನ ಸಹಚರನನ್ನು ಪಿಸ್ತೂಲ್ ಸಹಿತ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿ ದಾವೂದ್ ಸಹಚರ ಸಚಿನ್ ಗಜಾನನ ಶೇಟೆ ಎಂದು ಗುರುತಿಸಲಾಗಿದೆ. ಆತನ ಬಳಿ ಇದ್ದ ಪಿಸ್ತೂಲ್ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ಕ್ರೈಮ್ ಬಾಂಚ್ ಪೊಲೀಸ್ ಅಧಿಕಾರಿ ದಯಾ ನಾಯಕ್ ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ವಿವರ: ದಾವೂದ್ ಗ್ಯಾಂಗ್‌ನ ಓರ್ವ ಸದಸ್ಯ, ಬೇಕಾಗಿದ್ದ ಮತ್ತು ಪೆರೋಲ್‌ನಿಂದ ಹೊರಗುಳಿದಿದ್ದ ವ್ಯಕ್ತಿಯನ್ನು ಅಕ್ರಮ ಶಸ್ತ್ರಾಸ್ತ್ರಗಳೊಂದಿಗೆ ಬಂಧಿಸಲಾಯಿತು. ಘಟಕ 9. ಇಂದು, ಓಶಿವಾರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಂಕಿತ ವ್ಯಕ್ತಿಯೊಬ್ಬ ಅಕ್ರಮ ಶಸ್ತ್ರಾಸ್ತ್ರಗಳೊಂದಿಗೆ ಬರುತ್ತಿರುವ ಬಗ್ಗೆ 9 ನೇ ಘಟಕಕ್ಕೆ ವಿಶ್ವಾಸಾರ್ಹ ಮಾಹಿತಿ ಸಿಕ್ಕಿತ್ತು. ಅದರಂತೆ, ಆಲ್ಫಾ ಕಿಡ್ಸ್ ಸೆಂಟರ್ ಬಸ್ ನಿಲ್ದಾಣ, ಓಶಿವಾರ ಹಿಂಬದಿ ರಸ್ತೆ, ಓಶಿವಾರಾ, ಅಂಧೇರಿ ಪಶ್ಚಿಮ, ಮುಂಬೈ ಬಳಿ ಯಶಸ್ವಿ ಬಲೆ…

Read More

ಉಡುಪಿ: ಆ್ಯಪ್ ಒಂದರಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಲಾಭಾಂಶ ಪಡೆಯುವ ಬಗ್ಗೆ ಟೆಲಿಗ್ರಾಮ್ ಆ್ಯಪ್ ಮೂಲಕ ಬಂದಿದ್ದ ಸಂದೇಶವನ್ನು ನಂಬಿದ ವ್ಯಕ್ತಿಯೊಬ್ಬರು 43.43 ಲಕ್ಷ ರೂ. ಕಳೆದುಕೊಂಡಿದ್ದು ಈ ಬಗ್ಗೆ ದೂರು ದಾಖಲಾಗಿದೆ. ಪರ್ಕಳದ ಯತಿರಾಜ್ ವಂಚನೆಗೊಳಗಾದವರು. ಹೆಚ್ಚಿನ ಲಾಭಾಂಶ ಪಡೆಯಬಹುದೆಂದು ಆಮಿಷ ಒಡ್ಡಿದ ಆರೋಪಿಗಳು ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸುವಂತೆ ತಿಳಿಸಿದರು. ಅದರಂತೆ ಹಂತಹಂತವಾಗಿ ಒಟ್ಟು 43.43 ಲಕ್ಷ ರೂ. ಹಣ ಪಾವತಿಸಿದ್ದಾರೆ. ಹೂಡಿಕೆ ಮಾಡಿದ ಹಣ ಸಹಿತ ಲಾಭಾಂಶವನ್ನೂ ನೀಡದೆ ವಂಚನೆ ಮಾಡಲಾಗಿದೆ ಎಂದು ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

Read More

545 ಪೊಲೀಸ್ ಸಬ್ ಇನ್ಸ್ ಸ್ಪೆಕ್ಟರ್ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮದ ನಂತ್ರ, ಪರೀಕ್ಷೆ ರದ್ದುಗೊಂಡಿತ್ತು. ಈ ಹುದ್ದೆಗಳಿಗೆ ಮರು ಪರೀಕ್ಷೆಯನ್ನು ನಡೆಸಲಾಗಿತ್ತು, ಸುಸೂತ್ರವಾಗಿ ನಡೆದಿದೆ. ಈ ಬೆನ್ನಲ್ಲೇ ಪಿಎಸ್‌ಐ ಆಗ್ಬೇಕು ಅನ್ನೋರಿಗೆ ಗುಡ್ ನ್ಯೂಸ್ ಎನ್ನುವಂತೆ ಸದ್ಯದಲ್ಲೇ 403, ಆ ನಂತ್ರ 600 ಪಿಎಸ್‌ಐ ನೇಮಕಾತಿಗೆ ಅಧಿಸೂಚನೆ ಹೊರ ಬೀಳಲಿದೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡಂತ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು, ಪಿಎಸ್‌ಐ ಪರೀಕ್ಷೆ ಬಹಳ ಸುಗಮವಾಗಿ ಆಗಿದೆ. ಯಾವುದೇ ಘಟನೆ ನಡೆದಿಲ್ಲ. ಅಂತಹ ಯಾವುದೇ ಪ್ರಯತ್ನವೂ ನಡೆದಿಲ್ಲ. ಸುಮಾರು 54 ಸಾವಿರ ಮಂದಿ ಅಭ್ಯರ್ಥಿಗಳು ಪರೀಕ್ಷೆ ಬರೆಯಬೇಕಿತ್ತು. ಅದರಲ್ಲಿ ಕೆಲವರು ಗೈರಾಗಿದ್ದಾರೆ ಎಂದರು. ಈ 545 ಪಿಎಸ್‌ಐ ನೇಮಕಾತಿ ಬಳಿಕ 400 ಪಿಎಸ್‌ಐ ಹುದ್ದೆಗಳನ್ನು ಕೆಇಎ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಇದಕ್ಕಾಗಿ ಕೆಇಎ ನಿರ್ದೇಶಕಿ ರಮ್ಯಾ ಅವರನ್ನು ಸುಸೂತ್ರವಾಗಿ ನಡೆಸುವಂತೆ ಮನವಿ ಮಾಡುತ್ತೇನೆ. ಇದಾದ ಬಳಿಕ ಇನ್ನೂ 660 ಪಿಎಸ್‌ಐ ನೇಮಕಾತಿ ಪರೀಕ್ಷೆಗಾಗಿ ಆರ್ಥಿಕ ಇಲಾಖೆಯಿಂದ ಅನುಮತಿ…

Read More

:ಉಪ್ಪಿನಂಗಡಿ : ಬಜತ್ತೂರು ಗ್ರಾಮದ ಪೊರೋಳಿ ಎಂಬಲ್ಲಿ ಕೆರೆಗೆ ಬಿದ್ದು ಆರು ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ದಿವಂಗತ ನಾರಾಯಣ ಗೌಡ ಎಂಬವರ ಮಗನಾಗಿರುವ ರಕ್ಷಿತ್ ಉಪ್ಪಿನಂಗಡಿಯ ಖಾಸಗಿ ಶಾಲಾ 1 ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಆದಿತ್ಯವಾರದಂದು ತಾಯಿಯೊಂದಿಗೆ ತೋಟಕ್ಕೆ ಹುಲ್ಲು ತೆಗೆಯಲೆಂದು ಹೋದಾತ ತೋಟದಲ್ಲಿನ ಸ್ಪಿಂಕ್ಲರ್ ನೀರಿನಲ್ಲಿ ಸ್ನಾನ ಮಾಡುವ ಆಸೆ ವ್ಯಕ್ತಪಡಿಸಿದ್ದ ಎನ್ನಲಾಗಿದೆ. ಇದಕ್ಕೆ ನಿರಾಕರಣೆ ತೋರಿದ್ದ ತಾಯಿ ಆತನನ್ನು ಮನೆಗೆ ಕರೆದುಕೊಂಡು ಬಂದು ತಿಂಡಿ ನೀಡಿದ್ದರು. ತಿಂಡಿ ತಿನ್ನುತ್ತಲೇ ಈಗ ಬರುತ್ತೇನೆಂದು ತನ್ನ ಚಿಕ್ಕಮ್ಮನ ಬಳಿ ಹೇಳಿ ಹೋದ ಬಾಲಕ ಬಳಿಕ ನಾಪತ್ತೆಯಾಗಿದ್ದ. ಹುಡುಕಾಟ ನಡೆಸಿದಾಗ ಅವರ ತೋಟದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದ. ಬಾಲಕನ ತಂದೆ ಮೂರು ವರ್ಷದ ಹಿಂದೆ ಅಪಘಾತದಲ್ಲಿ ನಿಧನರಾಗಿದ್ದು, ಆ ಬಳಿಕ ಕೌಟುಂಬಿಕ ವೈಮನಸ್ಸು ಮೂಡಿ ಮಗುವಿನ ಸಾವಿನಲ್ಲಿ ಸಂಶಯ ವ್ಯಕ್ತವಾದ ಕಾರಣ ಶವದ ಮರಣೋತ್ತರ ಪರೀಕ್ಷೆಯನ್ನು ಮಂಗಳೂರಿನ ಕೆ.ಎಸ್. ಹೆಗ್ಡೆ ಮೆಡಿಕಲ್ ಕಾಲೇಜಿನಲ್ಲಿ ನಡೆಸಲಾಗಿ ತನಿಖೆ ನಡೆಸಲಾಗುತ್ತಿದೆ. ಉಪ್ಪಿನಂಗಡಿ ಪೊಲೀಸ್…

Read More

“ಯಕ್ಷರಂಗದ ರಾಜ” ಎಂದೇ ಖ್ಯಾತರಾದ, ಹೆಸರಾಂತ ಯಕ್ಷಗಾನ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟಿ(82) ಅವರು ಮಂಗಳವಾರ ರಾತ್ರಿ ನಿಧನರಾಗಿದ್ದಾರೆ. ತೆಂಕುತಿಟ್ಟಿನ ಯಕ್ಷರಂಗದಲ್ಲಿ ತನ್ನದೇ ಛಾಪನ್ನು ನಿರ್ಮಿಸಿದ ಕನ್ನಡ -ತುಳು ಭಾಷೆಯ ಪ್ರಸಂಗಗಳಲ್ಲಿ ಏಕಪ್ರಕಾರ ಮಿಂಚಿದ ಪೆರುವಾಯಿ ನಾರಾಯಣ ಶೆಟ್ಟರು, ಕಂಚಿನ ಧ್ವನಿ, ಶ್ರುತಿಬದ್ಧ ಮಾತು ಹಾಗೂ ಅರ್ಥಪೂರ್ಣ ಸಂಭಾಷಣೆಗೆ ಹೆಸರಾಗಿದ್ದರು. ಬಂಟ್ವಾಳ ತಾಲೂಕು ಪೆರುವಾಯಿ ಇವರ ಹುಟ್ಟೂರು. ಮದನಪ್ಪ ಶೆಟ್ಟಿ ಮತ್ತು ಅಬ್ಬಕ್ಕ ದಂಪತಿಗಳ ಸುಪುತ್ರರಾಗಿದ್ದ ಇವರು, 12ನೇ ವಯಸ್ಸಿನಲ್ಲೇ ಯಕ್ಷಗಾನದಲ್ಲಿ ತೊಡಗಿಸಿಕೊಂಡಿದ್ದರು. ಮಡಾವು, ಧರ್ಮಸ್ಥಳ, ಕರ್ನಾಟಕ, ಪೊಳಲಿ ರಾಜರಾಜೇಶ್ವರಿ ಮೇಳ, ಕದ್ರಿ, ಕುಂಬಳೆ, ಕುಂಟಾರು, ಕಟೀಲು ಹೀಗೆ ವಿವಿಧ ಯಕ್ಷಗಾನ ಮಂಡಳಿಗಳಲ್ಲಿ ತಿರುಗಾಟ ಮಾಡಿದ ಪೆರುವಾಯಿ ನಾರಾಯಣ ಶೆಟ್ಟಿ ಅವರದು ಬಹುದೊಡ್ಡ ಸಾಧನೆ. ಅವರು ಸುಮಾರು 52 ವರ್ಷ ಗಳ ಕಾಲ ನಿರಂತರ ತಿರುಗಾಟ ನಡೆಸಿದ್ದರು. ಬಳಿಕ ಅನಾರೋಗ್ಯದಿಂದಾಗಿ ಯಕ್ಷರಂಗದಿಂದ ನಿವೃತ್ತಪಡೆದಿದ್ದರು. ಕಟೀಲುಮೇಳದ ಕಲಾವಿದರಾಗಿದ್ದ ಅವರು ನಿರ್ವಹಿಸುತ್ತಿದ್ದಾಗ ರಕ್ತಬೀಜ, ಹಿರಣ್ಯಕಷ್ಯಪು, ಕಂಸ, ಸುಂದರರಾವಣ, ಋತುಪರ್ಣ, ಹನೂಮಂತ, ಜಾಬಾಲಿ, ಅರುಣಾಸುರ, ಹಿರಣ್ಯಾಕ್ಷ, ಶಿಶುಪಾಲ…

Read More

ಮಂಗಳೂರು: ಯುವಕನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನ ಕರಂಗಲ್ಪಾಡಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ಕರಂಗಲ್ಪಾಡಿ ನಿವಾಸಿ, ಸಿಎ ವ್ಯಾಸಂಗ ಮಾಡುತ್ತಿದ್ದ ಕಾರ್ಲ್ ಲಾರೆನ್ಸ್ ಅರಾನ್ (23) ಎಂದು ಗುರುತಿಸಲಾಗಿದೆ. ಸಿಎ ಮಾಡುವುದರೊಂದಿಗೆ ಲಾರನ್ನ ಅರಾನ್ ತನ್ನ ತಂದೆಯೊಂದಿಗೆ ಸೇರಿಕೊಂಡು ಮ್ಯೂಚುವಲ್ ಫಂಡ್ ಸೇರಿದಂತೆ ಷೇರು ಮಾರ್ಕೆಟ್ ಬಿಸಿನೆಸ್ ನಲ್ಲಿ ತೊಡಗಿಸಿಕೊಂಡಿದ್ದರು ಎಂದು ತಿಳಿದು ಬಂದಿದೆ. ಷೇರ್ ಮಾರ್ಕೆಟ್ ರಜೆ ಇದ್ದುದರಿಂದ ಕಾರ್ಲ್ ಲಾರೆನ್ಸ್ ಅರಾನ್ ಮನೆಯಲ್ಲೇ ಉಳಿದಿದ್ದರು. ಮಧ್ಯಾಹ್ನ ಊಟದ ಬಳಿಕ ಕೊಠಡಿ ಸೇರಿದ್ದ ಅವರು ಸಂಜೆ 4 ಗಂಟೆಯ ಬಳಿಕ ಅವರನ್ನು ಕರೆದರೂ ಅವರು ಸ್ಪಂದಿಸಿರಲಿಲ್ಲ. ಫೋನ್ ಮಾಡಿದರೆ ಸ್ವಿಚ್ ಆಫ್ ಆಗಿತ್ತು. ರಾತ್ರಿ 7 ಗಂಟೆಯಾದರೂ ಕೊಠಡಿಯಿಂದ ಹೊರ ಬಂದಿರದ ಹಿನ್ನೆಲೆಯಲ್ಲಿ ಮನೆಯವರು ಕದ್ರಿ ಪೊಲೀಸರಿಗೆ ಮಾಹಿತಿ ನೀಡಿದ್ದರು ಎಂದು ತಿಳಿದು ಬಂದಿದೆ.ಬಳಿಕ ಪೊಲೀಸರು ಆಗಮಿಸಿ ರಾತ್ರಿ ಬಾಗಿಲು ಒಡೆದು ನೋಡಿದಾಗ, ಲಾರೆನ್ಸ್ ಬೆಟ್ ಶೀಟನ್ನೇ ಕಿಟಕಿಗೆ ಕಟ್ಟಿ ಕತ್ತಿಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು.…

Read More