Author: main-admin

ಕಾಪು: ಉಡುಪಿ ಜಿಲ್ಲೆಯ ಕಾಪು ಪೇಟೆ ನ್ಯಾಯಬೆಲೆ ಅಂಗಡಿ ಸಮೀಪ ಮಾ.14 ರಂದು ಪಡಿತರದಾರರಿಗೆ ವಿತರಿಸುವ ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ಇಟ್ಟುಕೊಂಡಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ಹೆಜಮಾಡಿಯ ಕಲಂದರ್ ಶಾಫಿ(43) ಹಾಗೂ ಬಂಟ್ವಾಳ ತಾಲೂಕಿನ ಸಜಿಪ ಗ್ರಾಮದ ಉಬೈದುಲ್ಲ(31) ಎಂದು ಗುರುತಿಸಲಾಗಿದೆ. ಕಾಪು ಆಹಾರ ನಿರೀಕ್ಷಕ ಎಂ.ಟಿ.ಲೀಲಾನಂದ ನೇತೃತ್ವದಲ್ಲಿ ದಾಳಿ ನಡೆಸಿದಾಗ ಇವರು ಪಡಿತರ ದಾರರಿಗೆ ವಿತರಿಸುತ್ತಿರುವ ಸುಮಾರು 8,500ರೂ. ಮೌಲ್ಯದ 250 ಕೆ.ಜಿ. ಅಕ್ಕಿಯನ್ನು 6 ಚೀಲಗಳಲ್ಲಿ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿರುವುದು ಕಂಡು ಬಂದಿತ್ತು. ಇವರು ಅಕ್ಕಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಪಡಿತರದಾರರಿಂದ ಕೆ.ಜಿ ಅಕ್ಕಿಗೆ 20ರೂ.ನಂತೆ ಖರೀದಿಸಿದ್ದು, ಅದನ್ನು ಮುದರಂಗಡಿ ಪ್ರತಾಪ್ ಎಂಬವರಿಗೆ ಮಾರಾಟ ಮಾಡಲು ತೆಗೆದು ಕೊಂಡು ಹೋಗುತ್ತಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಹೆಬ್ರಿ,: ಹೆಬ್ರಿ ತಾಲೂಕಿನ ಬೆಳಂಜೆ ಗ್ರಾಮದ ಈಶ್ವರನಗರದಲ್ಲಿ ನಡೆದ ಅನಧಿಕೃತ ಸಂಗೀತ ಕಾರ್ಯಕ್ರಮದ ಕುರಿತು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಘಟನೆ 15 ಮಾರ್ಚ್ 2025 ರಂದು ರಾತ್ರಿ ಸುಮಾರು 11.45 ಗಂಟೆಗೆ ನಡೆದಿದ್ದು, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಘಟನೆಯ ಸಂಕ್ಷಿಪ್ತ ವಿವರ:ಹೆಬ್ರಿ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷಕರಾದ ಶೈಲೇಶ ಕುಮಾರ್ ಅವರು ಠಾಣಾ ವ್ಯಾಪ್ತಿಯಲ್ಲಿ ರೌಂಡ್ಸ್ ಕರ್ತವ್ಯ ನಿರ್ವಹಿಸುತ್ತಿದ್ದ ಸಮಯದಲ್ಲಿ, ಬೆಳಂಜೆ ಗ್ರಾಮದ ಈಶ್ವರನಗರದಲ್ಲಿ ಜೋರಾದ ಸಂಗೀತ ಶಬ್ದ ಕೇಳಿಸಿಕೊಂಡಿದ್ದರು. ಘಟನಾಸ್ಥಳಕ್ಕೆ ತೆರಳಿದ ಪೊಲೀಸರು, ಅದು ಬೆಳಂಜೆ ಗ್ರಾಮದ ನಿವಾಸಿ ಎಂ. ಕೃಷ್ಣ ಮೂರ್ತಿ ಅವರ ಮನೆಯಲ್ಲಿ ನಡೆಯುತ್ತಿದ್ದ ಮಗಳ ಮೆಹಂದಿ ಕಾರ್ಯಕ್ರಮ ಎಂದು ತಿಳಿದುಕೊಂಡರು. ಈ ಕಾರ್ಯಕ್ರಮದಲ್ಲಿ ಸ್ಥಳೀಯ ಸಂಗೀತ ಸಂಸ್ಥೆಯಾದ ಸಾಯಿ ಸೌಂಡ್ಸ್ನ ಈಶ್ವರ ಪೂಜಾರಿ ಅವರು ಡಿಜೆ ಸಂಗೀತವನ್ನು ನಿರ್ವಹಿಸುತ್ತಿದ್ದರು. ಪೊಲೀಸರ ಪ್ರಕಾರ, ಈ ಕಾರ್ಯಕ್ರಮಕ್ಕೆ ಯಾವುದೇ ಅಧಿಕೃತ ಪರವಾನಗಿ ಪಡೆದಿರಲಿಲ್ಲ. ಇದರಿಂದಾಗಿ, ರಾತ್ರಿ ತಡವಾಗಿ ಕರ್ಕಶವಾದ ಸಂಗೀತ ಶಬ್ದದಿಂದ ಸಾರ್ವಜನಿಕರ ನೆಮ್ಮದಿಗೆ…

Read More

ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಅಂತರರಾಜ್ಯ ಅಪರಾಧಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಕೇರಳದ ಮಂಜೇಶ್ವರ ನಿವಾಸಿ ಅಬ್ದುಲ್ ಫೈಸಲ್ (26) ಎಮದು ಗುರುತಿಸಲಾಗಿದೆ. ಅಬ್ದುಲ್ ಫೈಸಲ್ ಇತ್ತೀಚಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದನು. ಪೊಲೀಸರು ಆರೋಪಿಯಿಂದ ಒಂದು ಪಿಸ್ತೂಲ್, ಒಂದು ಜೀವಂತ ಗುಂಡು ಮತ್ತು ಒಂದು ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಒಟ್ಟು ಸೊತ್ತುಗಳ ಮೌಲ್ಯ 2.10 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಅಬ್ದುಲ್ ಫೈಸಲ್ ವಿರುದ್ಧ ಒಟ್ಟು ಎರಡು ಪ್ರಕರಣಗಳು ದಾಖಲಾಗಿವೆ.

Read More

ಮಂಗಳೂರು: ಪೋಕ್ಸೊ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಆರೋಪಿ ಮಂಗಳೂರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಆರೋಪಿಯನ್ನು ಪ್ರಕಾಶ ಗೋಪಾಲ್ ಮೂಲ್ಯ (43) ಎಂದು ಗುರುತಿಸಲಾಗಿದೆ. ಈತ ಪೋಕ್ಸೊ ಪ್ರಕರಣದಲ್ಲಿ ಬಂಧಿತನಾಗಿದ್ದ. ಇಂದು ಜೈಲಿನ ಶೌಚಾಲಯದ ಕಿಟಕಿ ಗ್ರಿಲ್‌ಗೆ ಟವಲ್ ಬಳಸಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಾ.11 ರಂದು ಪ್ರಕಾಶ್ ಗೋಪಾಲ್ ಮೂಲ್ಯನನ್ನು ಮೂಡಬಿದ್ರೆಯಲ್ಲಿ ಪೊಲೀಸರು ಬಂಧಿಸಿದ್ದರು. ನೆರೆ ಮನೆಯ 13 ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಲ್ಲಿ ಬಂಧನವಾಗಿದ್ದ. ಜೈಲಿಗೆ ಬರ್ಕೆ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು: ಕರ್ನಾಟಕ ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಪ್ರಮಾಣದ ಮಾದಕ ವಸ್ತುಗಳನ್ನು (ಡ್ರಗ್ಸ್) ಸೀಜ್ ಮಾಡಿದ್ದಾರೆ ಮಂಗಳೂರು ಪೊಲೀಸರು. ಸುಮಾರು 75 ಕೋಟಿ ರೂಪಾಯಿಗಳ ಮೌಲ್ಯದ 37.87 ಕಿಲೋಗ್ರಾಂ ಎಂಡಿಎಂಎ (MDMA) ಮಾದಕ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಮಾದಕ ವಸ್ತುಗಳನ್ನು ರಾಜ್ಯದ ವಿವಿಧ ಭಾಗಗಳು ಮತ್ತು ಇತರ ರಾಜ್ಯಗಳಿಗೆ ಪೂರೈಕೆ ಮಾಡುತ್ತಿದ್ದ ದಕ್ಷಿಣ ಆಫ್ರಿಕಾದ ಇಬ್ಬರು ನಾಗರಿಕರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಬಂಧಿತರಾಗಿರುವವರು ದಕ್ಷಿಣ ಆಫ್ರಿಕಾದ ನಾಗರಿಕರಾದ ಬಂಬಾ ಫಂಟಾ (31) ಮತ್ತು ಅಬಿಗೈಲ್ ಅಡೊನಿಸ್ (30) ಎಂಬ ಇಬ್ಬರು. ಇವರು ದೇಶದ ವಿವಿಧ ಭಾಗಗಳಿಗೆ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸಿಸಿಬಿ ಪೊಲೀಸರ ದೀರ್ಘ ತನಿಖೆ:ಈ ಘಟನೆಗೆ ಮುಂಚೆ, 2024ರಲ್ಲಿ ಪಂಪ್ ವೆಲ್ ಬಳಿಯ ಲಾಡ್ಜ್ ಒಂದರಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಹೈದರ್ ಆಲಿ ಎಂಬಾತನನ್ನು ಬಂಧಿಸಲಾಗಿತ್ತು. ಅವನಿಗೆ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ನೈಜೀರಿಯಾದ ನಾಗರಿಕ ಪೀಟರ್ ಇಕೆಡಿ ಬೆಲೊನ್ವೊ ಎಂಬಾತನನ್ನು ಬೆಂಗಳೂರಿನಲ್ಲಿ…

Read More

ಬೆಂಗಳೂರು : ರಾಜ್ಯದ ಪ್ರತಿಯೊಬ್ಬ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸೈಬರ್ ಅಪರಾಧಗಳ ಕುರಿತು ಹೆಚ್ಚಿನ ಅರಿವು ಮತ್ತು ತರಬೇತಿ ನೀಡಲಾಗುವುದು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್‌ ಅವರು ತಿಳಿಸಿದ್ದಾರೆ. ಸಿಐಡಿ ಹಾಗೂ ಸೈಬರ್ ಕ್ರೈಂ ತನಿಖಾ ತರಬೇತಿ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ನಗರದ ಖಾಸಗಿ ಹೋಟೆಲ್‌ನಲ್ಲಿ ಶನಿವಾರ CIDECODE, ‘ ಅಪರಾಧ ಶೃಂಗಸಭೆ-2025’ ಅನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸೈಬರ್ ಅಪರಾಧ ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿವೆ. ಜಗತ್ತಿನಲ್ಲಿ ನಡೆಯುತ್ತಿರುವ ಸೈಬರ್ ಅಪರಾಧಗಳ ಕುರಿತು ಪೊಲೀಸರಿಗೂ ಅರಿವು ಇರಬೇಕು ಹಾಗೂ ಪ್ರಕರಣಗಳ ಪರಿ ಣಾಮಕಾರಿ ತನಿಖೆಗೆ ಸಜ್ಜುಗೊಳಿಸಬೇಕೆಂಬ ಉದ್ದೇಶದಿಂದ ಸಿಸಿಐಟಿಆರ್ ಸ್ಥಾಪಿಸಲಾಗಿದೆ. ಇದುವರೆಗೂ 46 ಸಾವಿರಕ್ಕೂ ಹೆಚ್ಚು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ತರಬೇತಿ ನೀಡಲಾಗಿದೆ ಎಂದರು. ಒಟಿಪಿ ಪಡೆದು ಬ್ಯಾಂಕ್ ಖಾತೆಗಳಿಂದ ಹಣ ದೋಚುವುದು, ಡೇಟಾ ಹ್ಯಾಕ್, ಸರಕಾರದ ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡುವುದು ಸೇರಿದಂತೆ ನಾನಾ ಬಗೆಯ ಸೈಬರ್ ಅಪರಾಧಗಳು ನಡೆಯು ತ್ತಿವೆ. ಬೆಂಗಳೂರು…

Read More

ನ.28 ರಂದು ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾಮದ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಉಪ್ಪಿನಂಗಡಿ ಪೋಲಿಸ್ ಸಿಬ್ಬಂದಿಗಳು ತಪಾಸಣೆಗೆ ನಡೆಸಲಾದ ಕಾರ್ ನಲ್ಲಿ ನಿಷೇಧಿತ ಮಾದಕ ದ್ರವ್ಯವಾದ MDMA ಯನ್ನು ಜಪ್ತಿ ಮಾಡಿರುತ್ತಾರೆ.ಅಲ್ಲದೇ ಸುಮಾರ 22.5 ಗ್ರಾಂ ನಷ್ಟು ಮಾದಕ ದ್ರವ್ಯವಾದ MDMA ಯನ್ನು ಜಪ್ತಿ ಮಾಡಿರುತ್ತಾರೆ. MDMA ಡ್ರಗ್ಸ್ ನ್ನು ಪೂರೈಕೆ ಮಾಡಿದ ಆರೋಪದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗೆ ಮಾನ್ಯ 5 ನೇ ಹೆಚ್ಚುವರಿ ಜಿಲ್ಲಾ ಮತ್ತು ನ್ಯಾಯಾಧೀಶರು ಆರೋಪಿಗೆ ಶರತ್ತು ಬದ್ಧ ಜಾಮೀನು ಮಂಜೂರು ಮಾಡಿರುತ್ತಾರೆ.ಸದರಿ ಆರೋಪಿ ಪರವಾಗಿ ವಿಟ್ಲ ಪ್ರಮಾ ಆಸೋಸಿಯೇಟ್ ನ ವಕೀಲರಾದ ಮನೋಜ್ ಕುಮಾರ್ ಯು ಮತ್ತು ವಿಮಲೇಶ್ ಕೆ ಎಸ್ ವಾದಿಸಿದ್ದರು

Read More

ಮಂಗಳೂರು: ದ.ಕ ಜಿಲ್ಲೆಯಲ್ಲಿ ಅಕ್ರಮ ಇತ್ತೀಚೆಗೆ ನಿರಂತರವಾಗಿ ಅಕ್ರಮ ಗೋಸಾಗಾಟ ನಡೆಯುತ್ತಲೇ ಇದೆ. ಇದೀಗ ಮತ್ತೊಂದು ಪ್ರಕರಣ ಬಯಲಾಗಿದೆ. ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಘಟನೆ ಇಂದು ಮುಂಜಾನೆ ಮಂಗಳೂರಿನ ಕುಲಶೇಖರ ಕೈಕಂಬ ಬಳಿ ನಡೆದಿದೆ. ಭಜರಂಗದಳ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ಸ್ಕೂಟರ್ ನಲ್ಲಿದ್ದ ನೂರು ಕೆಜಿಗೂ ಅಧಿಕ ಗೋಮಾಂಸ ಸಾಗಾಟ ಮಾಡುತ್ತಿದ್ದಾಗ ಪತ್ತೆ ಹಚ್ಚಿದ್ದಾರೆ. ಹಿಂದೂ ಕಾರ್ಯಕರ್ತರು ಈ ಅಕ್ರಮವನ್ನು ಪತ್ತೆ ಹಚ್ಚಿದಾಗ ಸ್ಕೂಟರ್ ಸವಾರ ಗಾಡಿ ಬಿಟ್ಟು ಎಸ್ಕೇಪ್ ಆಗಿದ್ದಾನೆ. ನಂತರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

Read More

ಮಂಗಳೂರು: ಚಿಕ್ಕಮಗಳೂರಿನ ತೇಗೂರು ಗ್ರಾಮದ ಡಾ. ಅಬ್ದುಲ್​ ಕಲಾಂ ವಸತಿ ಶಾಲೆಯಿಂದ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಶುಕ್ರವಾರ ರಾತ್ರಿ ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ವಸತಿ ಶಾಲೆಯ 9ನೇ ತರಗತಿಯ ಬಾಳೆಹೊನ್ನೂರು ಮೂಲದ ಯಶ್ವಿತ್ ಸಾಲಿಯಾನ್​​​ ಮತ್ತು ಬೆಂಗಳೂರು ಮೂಲದ ತರುಣ್‌ ಮಾರ್ಚ್​ 3ರಂದು ನಾಪತ್ತೆಯಾಗಿದ್ದರು. ಮಂಗಳೂರಿನ ಹೋಟೆಲ್​ವೊಂದರಲ್ಲಿ ಕೆಲಸಕ್ಕೆ ಸೇರಲು ಯತ್ನಿಸಿ ಸಿಕ್ಕಿಬಿದ್ದಿದ್ದಾರೆ.ಯಶ್ವಿತ್ ಮತ್ತು ತರುಣ್ ಉತ್ತಮ ಸ್ನೇಹಿತರಾಗಿದ್ದು, ಓದಿನಲ್ಲಿ ಆಸಕ್ತಿ ಇಲ್ಲದಿದ್ದರೂ ವಸತಿ ಶಾಲೆಯಲ್ಲಿ ಒಳ್ಳೆಯ ಹೆಸರು ಪಡೆದಿದ್ದರು.‌ 9ನೇ ತರಗತಿ ಪರೀಕ್ಷೆ ಮುಗಿಸಿದ ಬಳಿಕ 10ನೇ ತರಗತಿಯ ಸಿದ್ದತೆಗಾಗಿ ವಿಶೇಷ ತರಗತಿಗಳು ನಡೆಯುತ್ತಿದ್ದು, ಇದರಿಂದ ಪರೀಕ್ಷೆ ಮುಗಿದರೂ ರಜೆ ಸಿಕ್ಕಿರಲಿಲ್ಲ. ವಿಶೇಷ ತರಗತಿ ಮುಗಿಸಿ ರೂಮ್ ಸೇರಿದ ಇಬ್ಬರು ಮೊದಲೇ ಮಾಡಿದ ಪ್ಲಾನ್​ನಂತೆ ವಸತಿ ಶಾಲೆಯ ಕಾಂಪೌಂಡ್ ಹಾರಿ 5 ಕಿಮೀ ನಡೆದು ಚಿಕ್ಕಮಗಳೂರು ಬಸ್ ನಿಲ್ದಾಣಕ್ಕೆ ತೆರಳಿ ಅಲ್ಲಿಂದ ಬಸ್​ ಹತ್ತಿ ಮಂಗಳೂರಿಗೆ ಬಂದಿದ್ದರು. ಮಕ್ಕಳು ನಾಪತ್ತೆಯಾಗುತ್ತಿದ್ದಂತೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು, ವಿದ್ಯಾರ್ಥಿಗಳ…

Read More

ಮಂಗಳೂರು: ನಗರದ ಸಮೀಪ ಹಳೆಯ ದ್ವೇಷಕ್ಕೆ ಸಂಬಂಧಿಸಿ ಬಿಜೈ ಕಾಪಿಕಾಡ್ 6ನೇ ಕ್ರಾಸ್‌ನಲ್ಲಿ ಬೈಕಿಗೆ ಕಾರು ಢಿಕ್ಕಿ ಹೊಡೆಸಿ ಬೈಕ್ ಸವಾರನನ್ನು ಕೊಲೆ ಮಾಡಲು ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಬಂಧಿತ ಆರೋಪಿ ಸತೀಶ್ ಕುಮಾರ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಪಾದಚಾರಿ ಮಹಿಳೆ ಯಲ್ಲವ್ವ ಉಪ್ನಾಳ ಮತ್ತು ಬೈಕ್ ಸವಾರ ಮುರಳಿ ಪ್ರಸಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಹಿಳೆಯು ಗುರುವಾರ ಬೆಳಗ್ಗೆ ಕೆಲಸಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿತ್ತು ಎಂದು ತಿಳಿದು ಬಂದಿದೆ. ಪೊಲೀಸರು ಈ ಪ್ರಕರಣವನ್ನು ತನಿಖೆ ನಡೆಸಿದ್ದಾರೆ.

Read More