ತಿರುವನಂತಪುರಂ:ಆಟವಾಡುತ್ತಿದ್ದಾಗ ಪಾತ್ರೆಯೊಳಗೆ ಸಿಲುಕಿಕೊಂಡಿದ್ದ ಪುಟ್ಟ ಮಗುವೊಂದನ್ನು ಕೇರಳದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಇವರ ಈ ಸಮಯೋಚಿತ ಕಾರ್ಯಕ್ಕೆ ಈಗ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಮನೆಯಲ್ಲಿ ಆಟವಾಡುತ್ತಿದ್ದ ಎರಡು ವರ್ಷದ ಮಗು ಅಡುಗೆ ಮನೆಯಲ್ಲಿದ್ದ ದೊಡ್ಡದಾದ ಅಲ್ಯೂಮಿನಿಯಂ ಪಾತ್ರೆಯೊಳಗೆ ಇಳಿದಿದೆ. ಆದರೆ, ಹೊರಬರಲು ಪ್ರಯತ್ನಿಸಿದಾಗ ಮಗುವಿನ ಸೊಂಟದ ಭಾಗ ಪಾತ್ರೆಯಲ್ಲಿ ಸಿಲುಕಿಕೊಂಡಿದೆ. ಮಗುವಿನ ಅಳು ಕೇಳಿ ಓಡಿ ಬಂದ ಪೋಷಕರು ಎಷ್ಟೇ ಪ್ರಯತ್ನಿಸಿದರೂ ಮಗುವನ್ನು ಹೊರತೆಗೆಯಲು ಸಾಧ್ಯವಾಗಲಿಲ್ಲ. ಪೋಷಕರು ಕೂಡಲೇ ಪೊಲೀಸರು ಮತ್ತು ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ವಿಷಯವನ್ನು ತಿಳಿಸಿದ್ದಾರೆ.ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಮಗುವಿಗೆ ಯಾವುದೇ ನೋವಾಗದಂತೆ ಅತ್ಯಂತ ಎಚ್ಚರಿಕೆ ವಹಿಸಿ, ಹೈಡ್ರಾಲಿಕ್ ಕಟ್ಟರ್ಗಳನ್ನು ಬಳಸಿ ಅಲ್ಯೂಮಿನಿಯಂ ಪಾತ್ರೆಯನ್ನು ನಿಧಾನವಾಗಿ ಕತ್ತರಿಸುವ ಮೂಲಕ ಮಗುವನ್ನು ಸುರಕ್ಷಿತವಾಗಿ ಹೊರತೆಗೆದರು. ಮಗು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದು, ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ. ಕಷ್ಟದ ಸಮಯದಲ್ಲಿ ದೇವರಂತೆ ಬಂದು ನೆರವಾದ ಪೊಲೀಸರ ಈ ಕಾರ್ಯ ‘ಮಾನವೀಯತೆಯ ಸುಂದರ ನೋಟ’ ಎಂದು…
Author: main-admin
ಮೈಸೂರು: ಜಿಲ್ಲೆಯ ಕೆ.ಆರ್. ನಗರ ತಾಲೂಕಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ವಿದ್ಯುತ್ ಅವಘಡಗಳಲ್ಲಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಜಮೀನಿನಲ್ಲಿದ್ದ ವಿದ್ಯುತ್ ತಂತಿ ತಗುಲಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದರೆ, ಇನ್ನೊಂದು ಪ್ರಕರಣದಲ್ಲಿ 22 ವರ್ಷದ ಯುವಕ ಪಂಪ್ಸೆಟ್ ಸರಿ ಮಾಡುತ್ತಿದ್ದ ವೇಳೆ ವಿದ್ಯುತ್ ತಗುಲಿ ಮೃತಪಟ್ಟಿದ್ದಾನೆ. ಎರದೂ ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಪಕ್ಕದ ಜಮೀನಿನಿಂದ ಬಂದಿದ್ದ ವಿದ್ಯುತ್ ತಂತಿ ಮೊದಲ ಘಟನೆಯಲ್ಲಿ, ಅಡಗೂರು ಮಾರಗೌಡನಹಳ್ಳಿ ಗ್ರಾಮದ ನಿವಾಸಿ ಮಹದೇವ್ (58) ಜಮೀನಿಗೆ ನೀರು ಹಾಯಿಸಲು ತೆರಳಿದ್ದಾಗ ದುರ್ಘಟನೆ ಸಂಭವಿಸಿದೆ. ಪಕ್ಕದ ಜಮೀನಿನಿಂದ ಬಂದಿದ್ದ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು, ಅದನ್ನು ಅರಿಯದೆ ತುಳಿದ ಪರಿಣಾಮ ಅವರಿಗೆ ತೀವ್ರ ವಿದ್ಯುತ್ ಶಾಕ್ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇತ್ತೀಚೆಗಷ್ಟೇ ಮದುವೆಯಾಗಿದ್ದವ ಸಾವು ಮತ್ತೊಂದು ಘಟನೆಯಲ್ಲಿ, ಕೆಸ್ತೂರು ಕೊಪ್ಪಲು ಗ್ರಾಮದಲ್ಲಿ 22 ವರ್ಷದ ಯುವಕ ಪುನೀತ್ ವಿದ್ಯುತ್ ಶಾಕ್ಗೆ ಬಲಿಯಾಗಿದ್ದಾನೆ. ಪಕ್ಕದ ಜಮೀನಿನ ಪಂಪ್ಸೆಟ್ ಮೋಟಾರ್ ದುರಸ್ತಿ ಮಾಡಲು ಹೋಗಿದ್ದ ವೇಳೆ ವಿದ್ಯುತ್ ಪ್ರವಹಿಸಿ ಈ ಅವಘಡ…
ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಯುವಕರ ಗುಂಪಿನ ನಡುವೆ ನಡೆದ ಜಗಳವೊಂದು ಭೀಕರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಿನ ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಾರಿವಾಳ ಕಳ್ಳತನದ ವಿಚಾರವಾಗಿ ಉಂಟಾದ ಕಿರಿಕ್ನಲ್ಲಿ ಆಟೋ ಚಾಲಕ ಮಲ್ಲಿಕಾರ್ಜುನ್ (24) ಎಂಬಾತ ಕೊಲೆಯಾಗಿದ್ದಾರೆ. ಪಾರಿವಾಳ ಕಳ್ಳತನ, ಜಗಳ ಘಟನೆಯ ವಿವರ ಲಗ್ಗೆರೆಯ ನಿವಾಸಿಗಳಾದ ಶಂಕರ್ ರಾವ್ ಮತ್ತು ಅನ್ನಪೂರ್ಣ ದಂಪತಿಯ ಪುತ್ರ ಮಲ್ಲಿಕಾರ್ಜುನ್ ಕಳೆದ ಸೋಮವಾರ ರಾತ್ರಿ ಕೊಲೆಯಾದ ದುರ್ದೈವಿ. ಸೋಮವಾರ ಸಂಜೆ ಮಲ್ಲಿಕಾರ್ಜುನ್ ಸ್ನೇಹಿತ ಪ್ರಶಾಂತ್ ಎಂಬಾತ ಸಾಕಿದ್ದ ಪಾರಿವಾಳವನ್ನು ಅದೇ ಏರಿಯಾದ ಸುರೇಂದ್ರ, ದರ್ಶನ್ ಹಾಗೂ ಮಹೇಂದ್ರ ಎಂಬುವವರ ಗುಂಪು ಕಳ್ಳತನ ಮಾಡಿತ್ತು ಎನ್ನಲಾಗಿದೆ. ಈ ವಿಚಾರವಾಗಿ ಎರಡೂ ಗುಂಪುಗಳ ನಡುವೆ ಜಗಳ ಆರಂಭವಾಗಿತ್ತು. ಈ ವೇಳೆ ಸ್ನೇಹಿತ ಪ್ರಶಾಂತ್ ಕರೆ ಮಾಡಿದ್ದಾನೆಂದು ಗಲಾಟೆ ನಡೆಯುತ್ತಿದ್ದ ಸ್ಥಳಕ್ಕೆ ಮಲ್ಲಿಕಾರ್ಜುನ್ ಧಾವಿಸಿದ್ದರು. ಈ ಸಂದರ್ಭದಲ್ಲಿ ಮಾತಿಗೆ ಮಾತು ಬೆಳೆದು ಆಕ್ರೋಶಗೊಂಡ ಆರೋಪಿಗಳ ಗುಂಪು ಮಲ್ಲಿಕಾರ್ಜುನ್ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ. ಬೆನ್ನು ಮತ್ತು ದೇಹದ…
ಬೆಳ್ತಂಗಡಿ: ಬಳಂಜ ಗ್ರಾಮದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಬುಧವಾರ ರಾತ್ರಿ ನುಗ್ಗಿದ ಅಜಯ್ ಎಂಬಾತ ದೇವರ ವಿಗ್ರಹವನ್ನು ಭಗ್ನಗೊಳಿಸಿರುವ ಘಟನೆ ವರದಿಯಾಗಿದೆ. ಬುಧವಾರ ರಾತ್ರಿ ಥಾರ್ ವಾಹನದಲ್ಲಿ ಬಂದ ಅಜಯ್, ದೇವಸ್ಥಾನದ ಪಕ್ಕದಲ್ಲಿರುವ ಸುಬ್ರಹ್ಮಣ್ಯ ಭಟ್ ಎಂಬುವವರ ಮನೆಗೆ ತೆರಳಿ ‘ಎನ್ನನ್ ಬಚಾವ್ ಮಲ್ಪಿ’ (ನನ್ನನ್ನು ಉಳಿಸಿ) ಎಂದು ಜೋರಾಗಿ ಕೂಗುತ್ತಾ ಮನೆ ಪ್ರವೇಶಿಸಲು ಯತ್ನಿಸಿದ್ದಾನೆ. ಮನೆಯವರು ಆತನನ್ನು ಗದರಿಸಿ ಅಲ್ಲಿಂದ ಕಳುಹಿಸಿದ್ದಾರೆ.ನಂತರ, ಆತ ಬಳಂಜ ದೇವಸ್ಥಾನದ ಪವಿತ್ರ ಜಳಕದ ಕೆರೆಗೆ ಹಾರಿ ಅಲ್ಲಿಂದ ನೇರವಾಗಿ ದೇವಸ್ಥಾನಕ್ಕೆ ಬಂದಿದ್ದಾನೆ. ಪಿಲ್ಲರ್ ಸಹಾಯದಿಂದ ದೇವಸ್ಥಾನದ ಮೇಲ್ಛಾವಣಿ ಏರಿ, ಹಂಚುಗಳನ್ನು ತೆಗೆದು ಒಳಪ್ರವೇಶಿಸಿದ್ದಾನೆ. ಬಳಿಕ ಕೊಡಮಣಿತ್ತಾಯ ದೈವದ ಸನ್ನಿಧಿಗೆ ಇಳಿದು, ಪೀಠದ ಮೇಲಿದ್ದ ಗಂಟೆಯನ್ನು ತೆಗೆದು ಹಂಚಿನ ಬಳಿ ಇಟ್ಟು ಅಪವಿತ್ರಗೊಳಿಸಿದ್ದಾನೆ.ಅಷ್ಟೇ ಅಲ್ಲದೆ, ತೀರ್ಥ ಮಂಟಪದ ಬಳಿ ಇದ್ದ ದೊಡ್ಡ ಗಂಟೆಯನ್ನು ಬಾರಿಸಿ, ಶ್ರೀ ಗೋಪಾಲಕೃಷ್ಣ ದೇವರ ಗರ್ಭಗುಡಿಯನ್ನು ಪ್ರವೇಶಿಸಿದ್ದಾನೆ. ಅಲ್ಲಿ ಪೂಜಿಸಲ್ಪಡುತ್ತಿದ್ದ ವಿಗ್ರಹವನ್ನು ಹೊರತೆಗೆದು ನೆಲಕ್ಕೆ ಎಸೆದು ಭಿನ್ನಗೊಳಿಸಿದ್ದಾನೆ. ಅಲ್ಲದೆ ಗರ್ಭಗುಡಿಯಲ್ಲಿದ್ದ ಪೂಜಾ ಪರಿಕರಗಳನ್ನು…
ಕರ್ನಾಟಕದ DrDevansAcademy.org ಸಂಸ್ಥೆಯು ವೈದ್ಯಕೀಯ ಶಿಕ್ಷಣದ ಕಲಿಕಾ ವಿಧಾನವನ್ನು ಸಂಪೂರ್ಣವಾಗಿ ಮರು ವ್ಯಾಖ್ಯಾನಿಸಲು ವಿನ್ಯಾಸಗೊಳಿಸಲಾದ ಅತ್ಯಾಧುನಿಕ ಸ್ವಯಂಚಾಲಿತ ಮತ್ತು ಸಂವಾದಾತ್ಮಕ ಕಲಿಕಾ ವೇದಿಕೆಯನ್ನು 2026ರ ಏಪ್ರಿಲ್ನಲ್ಲಿ ಹೆಮ್ಮೆಯಿಂದ ಬಿಡುಗಡೆ ಮಾಡಿದೆ. ದೃಢವಾದ ಕ್ಲೌಡ್-ಆಧಾರಿತ ತಂತ್ರಜ್ಞಾನದ ಮೇಲೆ ನಿರ್ಮಿಸಲಾದ ಈ ವೇದಿಕೆಯು ವಿದ್ಯಾರ್ಥಿಗಳ ಮೊಬೈಲ್ ಸಾಧನಗಳೊಂದಿಗೆ ಸುಗಮವಾಗಿ ಸಂಯೋಜನೆಗೊಳ್ಳುವ ಮೂಲಕ, ಯಾವುದೇ ಸಮಯದಲ್ಲಿ ಮತ್ತು ಎಲ್ಲಿಯಾದರೂ ವೈಯಕ್ತಿಕಗೊಳಿಸಿದ ಕಲಿಕೆಯ ಅನುಭವವನ್ನು ನೈಜ ಸಮಯದಲ್ಲಿ ನೀಡುತ್ತದೆ. ಸಾಂಪ್ರದಾಯಿಕ ಬೋಧನಾ ಮಾದರಿಗಳಿಗಿಂತ ಭಿನ್ನವಾಗಿರುವ ಈ ವ್ಯವಸ್ಥೆಯು ಕ್ರಿಯಾತ್ಮಕ ಸಂವಹನದ ಮೂಲಕ ವಿದ್ಯಾರ್ಥಿಗಳನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವುದಲ್ಲದೆ, ವೈದ್ಯಕೀಯ ಜ್ಞಾನವು ಮನಸ್ಸಿನಲ್ಲಿ ದೀರ್ಘಕಾಲ ಅಚ್ಚೊತ್ತುವಂತೆ (Eidetic Retention) ಮಾಡುತ್ತದೆ. ಈ ಅದ್ಭುತ ನಾವೀನ್ಯತೆಯ ರೂವಾರಿ ತಲೆ ಮತ್ತು ಕುತ್ತಿಗೆ ಶಸ್ತ್ರಚಿಕಿತ್ಸೆಯ ಹೆಸರಾಂತ ಪ್ರಾಧ್ಯಾಪಕರಾದ ಡಾ. ದೇವನ್ ಅವರು. ವೈದ್ಯಕೀಯ ಮತ್ತು ಶೈಕ್ಷಣಿಕ ಪರಿಣತಿಯ ಜೊತೆಗೆ ಕಂಪ್ಯೂಟರ್ ಅಪ್ಲಿಕೇಶನ್, ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಶನ್ನಲ್ಲಿ ಅವರು ಹೊಂದಿರುವ ತಾಂತ್ರಿಕ ಜ್ಞಾನವು ಕ್ಲಿನಿಕಲ್ ಆಳವನ್ನು ತಾಂತ್ರಿಕ ಅತ್ಯಾಧುನಿಕತೆಯೊಂದಿಗೆ ಬೆಸೆಯುವ ವ್ಯವಸ್ಥೆಯನ್ನು ರೂಪಿಸಲು ನೆರವಾಗಿದೆ.…
ಬೆಂಗಳೂರು: ಖಾಸಗಿ ವಿಡಿಯೋ ಮತ್ತು ಫೋಟೋಗಳನ್ನು ವೈರಲ್ ಮಾಡುವುದಾಗಿ ಬೆದರಿಸಿ ಉದ್ಯಮಿಯೊಬ್ಬರಿಂದ 1.5 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟ ಆರೋಪದ ಮೇಲೆ ಇನ್ಸ್ಟಾಗ್ರಾಮ್ ಇನ್ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆಲೆಬ್ರಿಟಿ ಮೇಕಪ್ ಕ್ಲಿನಿಕ್ ಮತ್ತು ಆಸ್ಪತ್ರೆಗಳ ಮಾಲೀಕ ಕಾರ್ತಿಕ್ ಪುತಾ (32) ಎಂಬುವವರು ಈ ದೂರು ನೀಡಿದ್ದಾರೆ. ಬೆಂಗಳೂರು ಮತ್ತು ಹೈದರಾಬಾದ್ನಲ್ಲಿ ವ್ಯವಹಾರ ಹೊಂದಿರುವ ಕಾರ್ತಿಕ್ ಅವರಿಗೆ ತಮ್ಮ ಕ್ಲಿನಿಕ್ ಪ್ರಮೋಷನ್ ಸಲುವಾಗಿ 2024ರಲ್ಲಿ ಸಾಧನಾ ಶೆಟ್ಟಿ ಪರಿಚಯವಾಗಿದ್ದರು. ಈ ಪರಿಚಯ ಆತ್ಮೀಯತೆಗೆ ತಿರುಗಿ ಹಲವು ಬಾರಿ ಭೇಟಿಯಾಗಿದ್ದರು. ದೂರಿನ ಪ್ರಕಾರ, ಜೊತೆಗಿದ್ದ ಸಮಯದ ಖಾಸಗಿ ಫೋಟೋಗಳು, ವಿಡಿಯೋಗಳು ಮತ್ತು ಸಂಭಾಷಣೆಯನ್ನು ರೆಕಾರ್ಡ್ ಮಾಡಿಕೊಂಡಿದ್ದ ಸಾಧನಾ ಶೆಟ್ಟಿ, ಅವುಗಳನ್ನು ಕಾರ್ತಿಕ್ ಅವರ ಪತ್ನಿ ಮತ್ತು ಕುಟುಂಬಸ್ಥರಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಲಾರಂಭಿಸಿದ್ದರು. ಅಲ್ಲದೆ, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಮಾಡಬಾರದೆಂದರೆ 1.5 ಕೋಟಿ ರೂ. ನೀಡಬೇಕೆಂದು ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.ಮರ್ಯಾದೆಗೆ ಹೆದರಿದ ಕಾರ್ತಿಕ್ ಅವರು ಹಂತ ಹಂತವಾಗಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ಇಂದು ಮತದಾನ ನಡೆಯುತ್ತಿದೆ. ಮತದಾನದ ಹೊತ್ತಲ್ಲೇ ಕೆಲ ಅಪರಿಚಿತ ವ್ಯಕ್ತಿಗಳು ಕಚ್ಚಾ ಬಾಂಬ್ ದಾಳಿ ನಡೆಸಿರುವ ಘಟನೆ ವರದಿಯಾಗಿದೆ. ಮತದಾನ ನಡೆಯುತ್ತಿದ್ದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಕೆಲವು ಅಪರಿಚಿತ ವ್ಯಕ್ತಿಗಳು ಕಚ್ಚಾ ಬಾಂಬ್ ದಾಳಿ ನಡೆಸಿದ್ದಾರೆ. ಜಿಲ್ಲೆಯ ನೌಡಾದಲ್ಲಿ ಘಟನೆ ನಡೆದಿದೆ. ದಾಳಿಯಲ್ಲಿ ಹಲವರು ಗಾಯಗೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇನ್ನು ಕಚ್ಚಾ ಬಾಂಬ್ ದಾಳಿಯ ಬಳಿಕ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ.ಉತ್ತರ ಬಂಗಾಳದ ಮುರ್ಶಿದಾಬಾದ್, ಜರ್ಗಾಮ್, ಮೇದಿನಿಪುರೆ, ಬಂಕುರಾ, ಪುರುಲಿಯಾ, ಪಶ್ಚಿಮ ಬರ್ಧಮಾನ್ ಮತ್ತು ಬಿರ್ಬುಮ್ ಸೇರಿದಂತೆ 16 ಜಿಲ್ಲೆಗಳ 152 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಈ 152 ಕ್ಷೇತ್ರಗಳಲ್ಲಿ 1,478 ಅಭ್ಯರ್ಥಿಗಳು ಕಣದಲ್ಲಿದ್ದಾರೆ.ಚುನಾವಣೆಗೆ ಹೆಚ್ಚುವರಿ 4,660 ಸಹಾಯಕ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಒಟ್ಟು ಮತಗಟ್ಟೆಗಳ ಪೈಕಿ 8,000ಕ್ಕೂ ಹೆಚ್ಚು ಮತಗಟ್ಟೆಗಳನ್ನು ಅತಿಸೂಕ್ಷ್ಮ ಮತಗಟ್ಟೆಗಳು ಎಂದು ಗುರುತಿಸಲಾಗಿದೆ.
ನವದೆಹಲಿ: ಪಂಜಾಬ್ ರಾಜ್ಯದ ‘ಡಿಯರ್ ಬೈಸಾಖಿ ಬಂಪರ್’ ಲಾಟರಿಯಲ್ಲಿ ಬರೋಬ್ಬರಿ 6 ಕೋಟಿ ರೂಪಾಯಿಗಳ ಪ್ರಥಮ ಬಹುಮಾನ ದೆಹಲಿಯ 80 ವರ್ಷದ ನಿವೃತ್ತ ಪೋಸ್ಟ್ ಮಾಸ್ಟರ್ ಓಂ ಪ್ರಕಾಶ್ ಗೆದ್ದಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ದೆಹಲಿಯ ಪಶ್ಚಿಮ ವಿಹಾರ್ ನಿವಾಸಿಯಾದ ಓಂ ಪ್ರಕಾಶ್ ಅವರು ಇತ್ತೀಚೆಗೆ ಪಂಜಾಬ್ನ ಲುಧಿಯಾನದಲ್ಲಿರುವ ತಮ್ಮ ಅತ್ತಿಗೆಯ ಮನೆಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಏಪ್ರಿಲ್ 1ರಂದು ಲುಧಿಯಾನದ ಘಂಟಾ ಘರ್ ಬಳಿಯಿರುವ ಪ್ರಸಿದ್ಧ ‘ಗಾಂಧಿ ಬ್ರದರ್ಸ್ ಲಾಟರಿ ಏಜೆನ್ಸಿ’ಯಿಂದ 500 ರೂಪಾಯಿ ನೀಡಿ ಲಾಟರಿ ಟಿಕೆಟ್ ಖರೀದಿಸಿದ್ದರು. ಏಪ್ರಿಲ್ 19ರಂದು ಪಂಜಾಬ್ ರಾಜ್ಯ ಲಾಟರಿ ನಿರ್ದೇಶನಾಲಯವು ನಡೆಸಿದ ಅಧಿಕೃತ ಲಕ್ಕಿ ಡ್ರಾದಲ್ಲಿ ಅವರು ಹೊಂದಿದ್ದ ಬಿ 520729 (B 520729) ಸಂಖ್ಯೆಯ ಟಿಕೆಟ್ಗೆ ಬಂಪರ್ ಬಹುಮಾನ ಲಭಿಸಿರುವುದು ಅಧಿಕೃತವಾಗಿ ದೃಢಪಟ್ಟಿದೆ. ಓಂ ಪ್ರಕಾಶ್ ಅವರು ಕಳೆದ 30 ವರ್ಷಗಳಿಂದ ನಿರಂತರವಾಗಿ ಲಾಟರಿ ಟಿಕೆಟ್ಗಳನ್ನು ಖರೀದಿಸುತ್ತಾ ಬಂದಿದ್ದರು. ಲುಧಿಯಾನಕ್ಕೆ ಹೋದಾಗಲೆಲ್ಲಾ ತಪ್ಪದೇ ಅದೃಷ್ಟ ಪರೀಕ್ಷೆ ನಡೆಸುತ್ತಿದ್ದ ಅವರು,…
ಬೆಳ್ತಂಗಡಿ: ಎರಡು ದಿನಗಳ ಹಿಂದೆ ತಾಲೂಕಿನ ಮಡಂತ್ಯಾರು ಸಮೀಪದ ಪಾರೆಂಕಿ ಎಂಬಲ್ಲಿ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಪಾರೆಂಕಿ ನಿವಾಸಿ ಕೃಷ್ಣ ( 55) ಮೃತ ವ್ಯಕ್ತಿ. ಎ.20 ರಂದು ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಮಾರಿಗುಡಿ ರಾಮನಗರ ಕ್ರಾಸ್ ಬಳಿಯಲ್ಲಿ ಸೈಪುದ್ದೀನ್ ಎಂಬಾತ ಮಡಂತ್ಯಾರುವಿನಿಂದ ಬಳ್ಳಮಂಜ ಕಡೆಗೆ ಬೈಕ್ ನ್ನು ಚಲಾಯಿಸಿಕೊಂಡು ಬಂದು ಬಳ್ಳಮಂಜ ಕಡೆಯಿಂದ ಮಡಂತ್ಯಾರು ಕಡೆಗೆ ಹೋಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ.ಈ ಸಂದರ್ಭದಲ್ಲಿ ಇಬ್ಬರಿಗೂ ಗಾಯಗಳಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಕೃಷ್ಣ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತಾದರೂ , ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಾಗಲಕೋಟೆ: ಬಾದಾಮಿ ತಾಲೂಕಿನ ಕೆರೂರಿನಲ್ಲಿ ಲಂಚ ಸ್ವೀಕರಿಸುತ್ತಿದ್ದ ಪಿಎಸ್ಐ ಹಾಗೂ ಪೇದೆ ರೆಡ್ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬಂಧಿತರನ್ನು ಕೆರೂರು ಠಾಣೆಯ ಪಿಎಸ್ಐ ಭೀಮಪ್ಪ ರಬಕವಿ ಮತ್ತು ಪೇದೆ ಸಂತೋಷ್ ಬಿರಾದರ್ ಎಂದು ಗುರುತಿಸಲಾಗಿದೆ. ಇಸ್ಪೀಟ್ ಆಡುವಾಗ ಸಿಕ್ಕಿಬಿದ್ದಿದ್ದ ಆರೋಪಿಯನ್ನು ಪ್ರಕರಣದಿಂದ ಕೈಬಿಡಲು ಹಾಗೂ ಆತನ ಬೈಕ್ ಬಿಡಲು 2 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ 1.70 ಲಕ್ಷ ರೂ. ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲಂಚದ ಬೇಡಿಕೆ ಬಗ್ಗೆ ಮುತ್ತಪ್ಪ ನಾಯ್ಕರ್ ಎಂಬವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಫೋನ್ ಕರೆ ರೆಕಾರ್ಡಿಂಗ್ ಆಧಾರದ ಮೇಲೆ ದಾಳಿ ಮಾಡಿ ಇಬ್ಬರನ್ನು ಲೋಕಾಯುಕ್ತ ಬಂಧಿಸಿದ್ದು, ಈ ಬಗ್ಗೆ ಹೆಚ್ಚಿನ ವಿಚಾರಣೆ ನಡೆಯುತ್ತಿದೆ. ಲೋಕಾಯುಕ್ತ ಎಸ್.ಪಿ ಮಹಾಲಿಂಗ್ ನಂದಗಾಂವಿ ಮಾರ್ಗದರ್ಶನದಲ್ಲಿ, ಲೋಕಾ ಡಿವೈಎಎಸ್ಪಿ ಸುರೇಶ್ ರೆಡ್ಡಿ ನೇತೃತ್ವದಲ್ಲಿ ಈ ದಾಳಿ ನಡೆದಿದೆ ಎಂದು ವರದಿ ಮೂಲಕ ತಿಳಿದುಬಂದಿದೆ.










