ತಾಯಿಯ ಎದೆ ಹಾಲು ಗಂಟಲಲ್ಲಿ ಸಿಲುಕಿ ಮೂರು ತಿಂಗಳು ಪ್ರಾಯದ ಮಗು ಮೃತಪಟ್ಟ ಘಟನೆ ಮಂಗಳವಾರ ಬಂಬ್ರಾಣದಲ್ಲಿ ನಡೆದಿದೆ. ಮೂಲತಃ ಈಶ್ವರ ಮಂಗಲ ನಿವಾಸಿ , ಪ್ರಸ್ತುತ ಬಂಬ್ರಾಣದಲ್ಲಿ ನೆಲೆಸಿದ್ದ ಅಬ್ದುಲ್ ಅಝೀಝ್-ಖದೀಜಾ ದಂಪತಿ ಪುತ್ರಿ , ಮೂರು ತಿಂಗಳ ಹಸುಳೆ ಅಯಿಶಾ ಮೆಹ್ರಾ ಮೃತಪಟ್ಟಿದೆ. ಮಲಗಿಕೊಂಡು ಎದೆಹಾಲು ಕುಡಿಯುತ್ತಿದ್ದ ಮಗು ರಾತ್ರಿ ಎಷ್ಟು ಹೊತ್ತಾದರೂ ಎಚ್ಚರಗೊಳ್ಳದೆ ಇದ್ದಾ ಗ ಕುಂಬಳೆಯ ಖಾಸಗಿ ಆಸ್ಪ ತ್ರೆ ಗೆ ಕರೆದುಕೊಂಡುಹೋಗಿದ್ದು , ಅದಾಗಲೇ ಮಗು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದರು. ಕುಂಬಳೆ ಪೊಲೀಸರು ಮಹಜರು ನಡೆಸಿದರು.
Author: main-admin
ಉಪ್ಪಿನಂಗಡಿ: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಈಚರ್ ಲಾರಿಯೊಂದು ಇಳಿಜಾರು ಪ್ರದೇಶದಲ್ಲಿ ತನ್ನಷ್ಟಕ್ಕೆ ಹಿಮ್ಮುಖವಾಗಿ ಚಲಿಸಿ ಬಂದು ಗ್ಯಾರೇಜ್ ವೊಂದಕ್ಕೆ ನುಗ್ಗಿದ್ದ ಘಟನೆ ಉಪ್ಪಿನಂಗಡಿ ಪೆರ್ನೆ ಜಂಕ್ಷನ್ ಬಳಿ ಜ 8 ರಂದು ನಡೆದಿದೆ. ಚಂದ್ರಶೇಖರ್ ಎಂಬುವವರಿಗೆ ಈ ಗ್ಯಾರೆಜ್ ಸೇರಿದ್ದು, ಘಟನೆ ನಡೆದ ಸಂದರ್ಭ ಗ್ಯಾರೇಜ್ನಲ್ಲಿ ಯಾರೂ ಇಲ್ಲದ್ದರಿಂದ ಅಪಾಯವೇನೂ ಸಂಭವಿಸಿಲ್ಲ. ಆದರೆ ಗ್ಯಾರೇಜ್ ಮುಂದೆ ನಿಲ್ಲಿಸಿದ್ದ ಎರಡು ಬೈಕ್ಗಳಿಗೆ ಹಾಗೂ ಗ್ಯಾರೇಜ್ಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಇನ್ನು ಗ್ಯಾರೇಜ್ಗೆ ಲಾರಿ ನುಗ್ಗಿದ್ದರಿಂದ ಅಲ್ಲಿ ಜನಸಂದಣಿ ಸೇರಿತ್ತು. ಇದೇ ಸಂದರ್ಭ ಉಪ್ಪಿನಂಗಡಿಯಿಂದ ಮಾಣಿ ಕಡೆ ತೆರಳುತ್ತಿದ್ದ ಮಿನಿ ಟೆಂಪೋವೊಂದರ ಬ್ರೇಕ್ ಫೇಲ್ ಆಗಿ ಗ್ಯಾರೇಜ್ ಕಡೆ ಸಾಗಿ ಬರುತ್ತಿತ್ತು. ಆದರೆ ಸಮಯ ಪ್ರಜ್ಞೆ ಮೆರೆದ ಮಿನಿ ಟೆಂಪೋ ಚಾಲಕ ಮಿನಿ ಟೆಂಪೋವನ್ನು ಇನ್ನೊಂದು ಬದಿಗೆ ತಿರುಗಿಸಿದ್ದಾರೆ. ಇನ್ನು ಟೆಂಪೋ ತಿರುಗಿಸಿದ ಪರಿಣಾಮ ಪಕ್ಕದ ಗದ್ದೆಗೆ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಈ ಸಂದರ್ಭ ಟೆಂಪೋ ಚಾಲಕ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.
ಮಂಗಳೂರು: ನಗರದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಸಾಗಾಟದ 98 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಸೀಝ್ ಮಾಡಿದ್ದಾರೆ. ಜ.8ರಂದು ಏರ್ ಇಂಡಿಯಾ ಎಕ್ಸ್ಪ್ರೆಸ್ ಫ್ಲೈಟ್ IX 816 ನಲ್ಲಿ ಅಬುಧಾಬಿಯಿಂದ ಮಂಗಳೂರಿಗೆ ಬಂದಿಳಿದಿದ್ದಾನೆ. ಈತನ ಅನುಮಾನಾಸ್ಪದ ಚಲನವಲನವನ್ನು ನೋಡಿ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಆತನನ್ನು ಪರಿಶೀಲನೆ ಮಾಡಿದ್ದಾರೆ. ಆತನ ದೇಹವನ್ನು ಪರೀಕ್ಷಿಸಿದ ವೇಳೆ, ಆತನ ಸೊಂಟದ ಪ್ರದೇಶದಲ್ಲಿ ಬೀಪ್ ಸದ್ದು ಹೊರಹೊಮ್ಮಿದೆ. ಕೂಲಂಕಷವಾಗಿ ಪರಿಶೀಲನೆ ನಡೆಸಿದಾಗ ಪೇಸ್ಟ್ ರೂಪದಲ್ಲಿ ಚಿನ್ನವನ್ನು ಹೊಂದಿರುವ 5 ಅಂಡಾಕಾರದ ಆಕಾರದ ವಸ್ತುಗಳು ಆತನ ಗುದನಾಳದಲ್ಲಿ ಪತ್ತೆಯಾಗಿದೆ. ಇದರಲ್ಲಿ 24 ಕ್ಯಾರೆಟ್ ಶುದ್ಧತೆಯ 1579 ಗ್ರಾಂ ಚಿನ್ನ ಪತ್ತೆಯಾಗಿದೆ. ಇದರ ಮೌಲ್ಯ 98,68,750 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಆರೋಪಿಯನ್ನು ಬಂಧಿಸಿದ ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ಮುಂದುವರಿಸಿದ್ದಾರೆ.
ಹೋಟೆಲ್ ನಲ್ಲಿ ತನ್ನ ಸ್ವಂತ ಮಗುವನ್ನೇ ಕೊಂದು ಸೂಟ್ ಕೇಸ್ ನಲ್ಲಿ ಶವ ತುಂಬಿ ರವನಿಸುತ್ತಿದ್ದ ಸ್ಟಾರ್ಟ್ ಅಪ್ ಫೌಂಡರ್ ಹಾಗೂ ಸಿಇಓ ಓರ್ವರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸ್ಟಾರ್ಟ್ ಅಪ್ ಫೌಂಡರ್ ಹಾಗೂ ಸಿಇಓ ಸುಚನಾ ಸೇಠ್ ಬಂಧಿತ ಆರೋಪಿ. ಸುಚನಾ ಸೇಠ್ ತನ್ನ ಪುಟ್ಟ ಮಗನೊಂದಿಗೆ ಗೋವಾದ ಹೋಟೆಲ್ ಗೆ ಬಂದಿದ್ದರು. ಈ ವೇಳೆ ಹೋಟೆಲ್ ರೂಮ್ ನಲ್ಲಿ ಮಗನ ಹತ್ಯೆ ಮಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೋಟೆಲ್ ರೂಂ ಖಾಲಿ ಮಾಡಿ ಬೆಂಗಳೂರಿಗೆ ಹೊರಡಲು ಸಿದ್ಧರಾಗಿದ್ದ ಸುಚನಾ ಟ್ಯಾಕ್ಸಿಯತ್ತ ಸೂಟ್ ಕೇಸ್ ಹಿಡಿದು ಸಾಗುತ್ತಿದ್ದಾಗ ಅನುಮಾನಗೊಂಡ ಹೋಟೆಲ್ ಸಿಬ್ಬಂದಿ, ನಿಮ್ಮ ಜೊತೆ ಬಂದಿದ್ದ ಮಗು ಎಲ್ಲಿ ಎಂದು ವಿಚಾರಿಸಿದ್ದಾರೆ. ಆಗ ಸುಚನಾ ಮಗುವನ್ನು ಸಂಬಂಧಿಕರ ಮನೆಗೆ ಕಳುಹಿಸಿದ್ದೇನೆ ಎಂದು ಹೇಳಿ ಟ್ಯಾಕ್ಸಿ ಹತ್ತಿ ಬೆಂಗಳೂರಿಗೆ ಹೊರಟಿದ್ದಾರೆ. ಸಿಬ್ಬಂದಿಗಳಿಗೆ ಅನುಮಾನ ಹೆಚ್ಚಾಗಿದೆ. ತಕ್ಷಣ ಅವರು ತಂಗಿದ್ದ ಹೋಟೆಲ್ ರೂಮ್ ಗೆ ಸ್ವಚ್ಛತೆಗೆ…
ಮಂಗಳೂರು: “ಜನವರಿ 11ರಂದು ಸಂಜೆ 5 ಗಂಟೆಗೆ ಅಡ್ಯಾರ್ ಗಾರ್ಡನ್ ನಲ್ಲಿ ಜನಮೆಚ್ಚುಗೆ ಪಡೆದಿರುವ “ಶಿವದೂತೆ ಗುಳಿಗೆ” ನಾಟಕದ 555ನೇ ಪ್ರದರ್ಶನದ ಸಂಭ್ರಮ ಕಾರ್ಯಕ್ರಮ ಏರ್ಪಡಿಸಲಾಗಿದ್ದು ಕೊಪ್ಪ ಗೌರಿಗದ್ದೆಯ ಅವಧೂತ ವಿನಯ್ ಗುರೂಜಿ ಅವರು ದೀಪ ಪ್ರಜ್ವಲನೆಗೈಯಲಿದ್ದಾರೆ” ಎಂದು ಹಿರಿಯ ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. “ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಪರಮಾನಂದ ಸಾಲಿಯಾನ್ ಅವರಿಗೆ ದಿ. ವನಿತಾ ಆನಂದ ಶೆಟ್ಟಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಹಿರಿಯ ಚಲನಚಿತ್ರ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ಖ್ಯಾತ ನಟ ರಕ್ಷಿತ್ ಶೆಟ್ಟಿ, ಸಂಗೀತ ನಿರ್ದೇಶಕ ಗುರುಕಿರಣ್, ನಿರೂಪಕಿ ಅನುಶ್ರೀ ಉಪಸ್ಥಿತರಿರಲಿದ್ದಾರೆ. ಅಧ್ಯಕ್ಷತೆಯನ್ನು ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ವಹಿಸಲಿದ್ದು, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿ, ಶಶಿಧರ್ ಶೆಟ್ಟಿ ಬರೋಡ, ಆರ್.ಕೆ. ನಾಯರ್, ಪದ್ಮರಾಜ್ ಆರ್., ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್, ಬಿ. ನಾಗರಾಜ್…
ಮಂಗಳೂರು: ನಗರದ ಬೈಕಂಪಾಡಿ ಬಳಿಯ ಪ್ರೈಮಸಿ ಇಂಡಸ್ಟ್ರೀಸ್ ಲಿಮಿಟೆಡ್ ನ ಪರ್ಮ್ಯೂಮ್ ಫ್ಯಾಕ್ಟರಿಯಲ್ಲಿ ನಿನ್ನೆ ತಡರಾತ್ರಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ನಡೆದಿದೆ. ನಿನ್ನೆ ತಡರಾತ್ರಿ ಸುಮರು 1 ಘಂಟೆ ಸುಮಾರಿಗೆ ಪ್ರೈಮಸಿ ಇಂಡಸ್ಟ್ರೀಸ್ ಲಿಮಿಟೆಡ್ ನ ಪರ್ಮ್ಯೂಮ್ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿದ್ದು ಇದನ್ನು ಗಮನಿಸಿದ ಸಾರ್ವನಿಕರು ಹಾಗು ಸಂಸ್ಥೆಯ ಸೆಕ್ಯೂರಿಟಿ ಅಗ್ನಿಶಾಮಕ ದಳ ಕರೆ ಮಾಡಿದ್ದಾರೆ. ಸ್ಥಳಕ್ಕೆ ಪಾಂಡೇಶ್ವರ, ಕದ್ರಿ, ಎಮ್ ಆರ್ ಪಿ ಎಲ್ ನ ಅಗ್ನಿಶಾಮಕ ಸಿಬ್ಬಂದಿಗಳು ಬರಬೇಕಾಯಿತು. ಬಾರಿ ದೊಡ್ಡ ಪ್ರಮಾಣದಲ್ಲಿ ಬೆಂಕಿ ಆವರಿಸಿದ್ದರಿಂದ ಸುಮಾರು ಎರಡು ಮೂರು ಘಂಟೆ ಬೆಂಕಿ ನಂದಿಸುವಲ್ಲಿ ಹರಸಾಹಸ ಪಡಬೇಕಾಯಿತು, ಇವರುಗಳ ಜೊತೆ ಸಾರ್ವಜನಿಕರು ಸಹಕರಿಸಿದ್ದಾರೆ.
ಪುತ್ತೂರು: ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿಯಾಗಿದ್ದ ಪ್ರೊಫೆಸರ್ ಎ.ಎಸ್. ರಾಮಕೃಷ್ಣರವರ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ನಿಂದ ಶಿಕ್ಷೆಗೊಳಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನಿರ್ದೇಶಕ ಡಾ. ರೇಣುಕಾಪ್ರಸಾದ್ ಕೆ.ವಿ.ಯವರಿಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ. ನ್ಯಾಯಾಲಯಕ್ಕೆ ಶ್ಯೂರಿಟಿ ಕೊಟ್ಟ ಬಳಿಕ ಅವರು ಬಿಡುಗಡೆಯಾಗಲಿದ್ದು, ನಾಳೆ ಅದು ನಡೆಯುವ ಸಾಧ್ಯತೆ ಇದೆ. ಕಳೆದ ಅಕ್ಟೋಬರ್ 5ರಂದು ಆಕಾಶಭವನ ಶರಣ್ ಹೊರತುಪಡಿಸಿ ಡಾ. ರೇಣುಕಾಪ್ರಸಾದ್ ಮತ್ತು ಇತರ ಆರೋಪಿಗಳ ಬಂಧನವಾಗಿತ್ತು. ಮೂರು ತಿಂಗಳು ಕಳೆದ ಹಿನ್ನಲೆಯಲ್ಲಿ ಎಲ್ಲಾ ಬಂಧಿತರಿಗೂ ಜಾಮೀನು ದೊರೆತಿರುವುದಾಗಿ ತಿಳಿದು ಬಂದಿದೆ.
ಮಂಗಳೂರು: “ಜನವರಿ 10ರಂದು ನಗರದ ಪುರಭವನದಲ್ಲಿ ಶ್ರೀ ಲಲಿತೆ ಕಲಾವಿದರು ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ತ್ರಿರಂಗ ಸಂಗಮ ಮುಂಬೈ ಸಂಚಾಲಕತ್ವದಲ್ಲಿ ಗರುಡ ಪಂಚಮಿ 50ರ ಪ್ರದರ್ಶನದ ಸಂಭ್ರಮ ಹಾಗೂ ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳರಿಗೆ ರಂಗ ಕಲಾಬಂಧು ಬಿರುದು ಪ್ರದಾನ ನಡೆಯಲಿದೆ” ಎಂದು ತಂಡದ ಸಂಚಾಲಕ ಲಯನ್ ಡಿ. ಕಿಶೋರ್ ಶೆಟ್ಟಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.ಕಾರ್ಯಕ್ರಮದ ಉದ್ಘಾಟನೆಯನ್ನು ಕಟೀಲು ಕ್ಷೇತ್ರದ ಅನುವಂಶಿಕ ಅರ್ಚಕ ಅನಂತ ಪದ್ಮನಾಭ ಅಸಣ್ಣ ವಹಿಸಲಿದ್ದು, ಮೇಯರ್ ಸುಧೀರ್ ಶೆಟ್ಟ ಕಣ್ಣೂರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ತುಳು ಚಲನಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಕಾರ್ಯದರ್ಶಿ ಪುರುಷೋತ್ತಮ್ ಭಂಡಾರಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಕೋಶಾಧಿಕಾರಿ ಸಿಎ ಸುದೇಶ್ ರೈ, ಜನನಿ ಕನ್ ಸ್ಟ್ರಕ್ಷನ್ ಮಾಲಕ ಸುಧಾಕರ್ ಪೂಂಜ, ಹೋಟೆಲ್ ಉದ್ಯಮಿ ಶಶಿಕಾಂತ ಶೇಖ, ಲ. ಚಂದ್ರಹಾಸ್ ಶೆಟ್ಟಿ, ಲೀಲಾಕ್ಷ…
ರಾಕಿಂಗ್ ಸ್ಟಾರ್ ಯಶ್ ಜನ್ಮದಿನದ ಅಂಗವಾಗಿ ಕಟೌಟ್ ನಿಲ್ಲಿಸುವ ವೇಳೆ ವಿದ್ಯುತ್ ತಂತಿ ತಗುಲಿ ಮೂವರ ಸಾವಿಗೀಡಾಗಿ, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ರವಿವಾರ ಮಧ್ಯರಾತ್ರಿ ನಡೆದಿದೆ. ಸೂರಣಗಿ ಗ್ರಾಮದ ಹನುಮಂತ ಮಜ್ಜುರಪ್ಪ ಹರಿಜನ(21), ಮುರಳಿ ನೀಲಪ್ಪ ನಡವಿನಮನಿ(20), ನವೀನ ನೀಲಪ್ಪ ಗಾಜಿ(19) ಮೃತಪಟ್ಟಿದ್ದಾರೆ. ಗಾಯಗೊಂಡ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಲಕ್ಷ್ಮೇಶ್ವರ ಪಟ್ಟಣದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ರಾಕಿಂಗ್ ಸ್ಟಾರ್ ಜನ್ಮದಿನವನ್ನು ಆಚರಿಸಲು ಪ್ಲಾನ್ ಮಾಡಿಕೊಂಡಿದ್ದ ಸೂರಣಗಿ ಗ್ರಾಮದ 10ಕ್ಕೂ ಯುವಕರು 25 ಅಡಿ ಎತ್ತರದ ಬೃಹತ್ ಕಟೌಟ್ ನಿಲ್ಲಿಸುವ ವೇಳೆ ಕಟೌಟ್ ವಿದ್ಯುತ್ ತಂತಿ ತಾಗಿದ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ. ಮೃತ ಯುವಕರ ಮನೆಯಲ್ಲಿ ಶೋಕ ಮಡುಗಟ್ಟಿದೆ.
ಬೆಂಗಳೂರಿನ ಓಲ್ಡ್ ಮದ್ರಾಸ್ ರಸ್ತೆಯ ನಿರ್ವಾಣ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂದೇ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ವರದಿ ನೀಡುವಂತೆ ಮಾರತಹಳ್ಳಿ ಎಸ್ಪಿ ಪ್ರಿಯದರ್ಶಿನಿ ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬೀ ದಯಾನಂದ್ ಸೂಚನೆ ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಈ ಬಗ್ಗೆ ವರದಿ ನೀಡುವಂತೆ ಮಾರತಹಳ್ಳಿ ಎಸ್ಪಿಗೆ ಪ್ರಿಯದರ್ಶಿನಿಗೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ ದಯಾನಂದ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಸ್ಪಾ ಬಗ್ಗೆ ಸಂಪೂರ್ಣ ಮಾಹಿತಿ ಒಳಗೊಂಡ ವರದಿ ನೀಡುವಂತೆ ಸೂಚಿಸಿದ್ದಾರೆ. ಇತ್ತೀಚಿಗೆ ಬೆಂಗಳೂರಿನ ಓಲ್ಡ್ ಮದ್ರಾಸ್ ರಸ್ತೆಯಲ್ಲಿರುವ ನಿರ್ವಾಣ ಸ್ಪಾ ಎಂಬ ಹೆಸರಿನಲ್ಲಿ ವೇಶ್ಯಾವಾಟಿಕೆ ದಂದೆ ನಡೆಯುತ್ತಿರುವ ಮಾಹಿತಿಯನ್ನು ಆಧರಿಸಿ ಸಿಸಿಬಿ ಮಹಿಳಾ ಸಂರಕ್ಷಣಾ ಅಧಿಕಾರಿಗಳು ದಾಳಿ ನಡೆಸಿದರು. ದಾಳಿಯ ವೇಳೆ ಸುಮಾರು 40ಕ್ಕೂ ಹೆಚ್ಚು ಮಹಿಳೆಯರನ್ನು ರಕ್ಷಣೆ ಮಾಡಲಾಗಿದ್ದು 36 ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬೇರೆ ರಾಜ ಹಾಗೂ ವಿದೇಶದಿಂದ ಮಹಿಳೆಯರನ್ನು ಕರೆತಂದು ವೇಶ್ಯಾವಾಟಿಕೆ ದಂದೆಡೆಸುತ್ತಿದ್ದ ಸ್ಪಾ ಮಾಲೀಕ ಅನಿಲ್ ಎನ್ನುವವರನ್ನು ಅಧಿಕಾರಿಗಳು ವಶಕ್ಕೆ…










