ನವದೆಹಲಿ. ಭಾರತೀಯ ಎಲೆಕ್ಟ್ರಿಕ್ ಮಾರುಕಟ್ಟೆಯು ಚೀನಾದ ಉತ್ಪನ್ನಗಳಿಂದ ತುಂಬಿದೆ. ಎಲ್ಲಾ ನಿರ್ಬಂಧಗಳು ಮತ್ತು ಅಭಿಯಾನಗಳ ಹೊರತಾಗಿಯೂ, ಮಾರುಕಟ್ಟೆಯಲ್ಲಿ ಕಳಪೆ ಎಲೆಕ್ಟ್ರಿಕ್ ಉತ್ಪನ್ನಗಳ ಮಾರಾಟ ನಿಲ್ಲುತ್ತಿಲ್ಲ. ಕಳಪೆ ಗುಣಮಟ್ಟದ ಸರಕುಗಳಿಂದಾಗಿ, ಮನೆಗಳಲ್ಲಿ ವಿದ್ಯುತ್ ಗೆ ಸಂಬಂಧಿಸಿದ ಅಪಘಾತಗಳು ಆಗಾಗ್ಗೆ ಸಂಭವಿಸುತ್ತವೆ. ಇದನ್ನು ತಡೆಯಲು ಸರ್ಕಾರ ಕಠಿಣ ನಿಯಮಗಳನ್ನು ಮಾಡಿದೆ. ಈಗ ಅಂಗಡಿಯವರು ಕಳಪೆ ಗುಣಮಟ್ಟದ ಸರಕುಗಳನ್ನು ಮಾರಾಟ ಮಾಡುವುದು ಕಂಡುಬಂದರೆ, ಅಥವಾ ಕಂಪನಿಯು ಉತ್ಪಾದನೆಯನ್ನು ಮಾಡಿದರೆ, ಅವರನ್ನು ದಂಡದೊಂದಿಗೆ ಜೈಲಿಗೆ ಕಳುಹಿಸಲು ಸಹ ಕ್ರಮ ಕೈಗೊಳ್ಳಲಾಗುವುದು. ಕಳಪೆ ಗುಣಮಟ್ಟದ ವಸ್ತುಗಳ ಆಮದನ್ನು ತಡೆಯಲು ಮತ್ತು ಈ ವಸ್ತುಗಳ ದೇಶೀಯ ಉತ್ಪಾದನೆಯನ್ನು ಉತ್ತೇಜಿಸಲು ಸರ್ಕಾರವು ಸ್ವಿಚ್-ಸಾಕೆಟ್-ಔಟ್ಲೆಟ್ಗಳು ಮತ್ತು ಕೇಬಲ್ ಟ್ರಂಕಿಂಗ್ನಂತಹ ವಿದ್ಯುತ್ ಸರಕುಗಳಿಗೆ ಕಡ್ಡಾಯ ಗುಣಮಟ್ಟದ ಮಾನದಂಡಗಳನ್ನು ಹೊರಡಿಸಿದೆ. ಈ ನಿಟ್ಟಿನಲ್ಲಿ, ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆ (ಡಿಪಿಐಐಟಿ) ಎಲೆಕ್ಟ್ರಿಕಲ್ ಬಿಡಿಭಾಗಗಳ (ಗುಣಮಟ್ಟ ನಿಯಂತ್ರಣ) ಆದೇಶ 2023 ಅನ್ನು ಹೊರಡಿಸಿದೆ. ಡಿಪಿಐಐಟಿ ಪ್ರಕಾರ, ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (ಬಿಐಎಸ್) ಗುರುತು…
Author: main-admin
ಮಂಗಳೂರು : ಮದುವೆಯ ವೇಳೆ ಮದುಮಗನ ಮಾಜಿ ಪ್ರೇಯಸಿ ಪೊಲೀಸರೊಂದಿಗೆ ಎಂಟ್ರಿ ಕೊಟ್ಟು ಹೈಡ್ರಾಮಾ ಕ್ರಿಯೆಟ್ ಮಾಡಿದ ಘಟನೆ ಉಳ್ಳಾಲ ತಾಲೂಕಿನ ಬೀರಿ ಬಳಿ ನಡೆದಿದೆ. ಆರೋಪಿ ಕೇರಳ ಮೂಲದ ಅಕ್ಷಯ್ ಎಂದು ಗುರುತಿಸಲಾಗಿದೆ. ಕೇರಳ ಮೂಲದ ಅಕ್ಷಯ್ ಎಂಬಾತನ ಮದುವೆ ಮಂಗಳೂರು ಮೂಲದ ಯುವತಿ ಜೊತೆ ನಡೆಯುತ್ತಿದ್ದಾಗ ಮೈಸೂರು ಮೂಲದ ಮಾಜಿ ಪ್ರೇಯಸಿ ಕಲ್ಯಾಣ ಮಂಟಪಕ್ಕೆ ಎಂಟ್ರಿಕೊಟ್ಟು ಹೈಡ್ರಾಮ ನಡೆಸಿದ್ದಾಳೆ. ಇತ ಒಂದೂವರೆ ವರ್ಷದ ಹಿಂದೆ ಮೈಸೂರಿನ ಯುವತಿಯನ್ನು ಶಾದಿ ಡಾಟ್ ಕಾಮ್ ಮೂಲಕ ಪರಿಚಯ ಮಾಡಿಕೊಂಡಿದ್ದನು. ನಂತರ ವಿವಾಹವಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದಾನೆ. ನಂತರ ವರಸೆ ಬದಲಾಯಿಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ. ಈ ನಡುವೆ ಯುವತಿ ಡಿಸೆಂಬರ್ 26 ರಂದು ಅಕ್ಷಯ್ ವಿರುದ್ಧ ಕೇರಳದ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರದ ದೂರು ದಾಖಲಿಸಿದ್ದಾಳೆ. ಇನ್ನು ಪ್ರಕರಣ ಸಂಬಂಧ ಅರೋಪಿ ಅಕ್ಷಯ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯವು ವಜಾಗೊಳಿಸಿತ್ತು. ಈ ನಡುವೆ ಮಂಗಳೂರಿನ ಯುವತಿ ಜೊತೆ ಅಕ್ಷಯ್ಗೆ ವಿವಾಹ…
ಸುಳ್ಯ: ಅಡಿಕೆಯ ಹಳದಿ ರೋಗಕ್ಕೆ ಔಷಧ ಸಿಂಪಡಿಸಿದರೂ ಕಡಿಮೆಯಾಗದ ಕಾರಣ ಮನನೊಂದು ಕೃಷಿಕರೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯ ಆಲೆಟ್ಟಿ ಗ್ರಾಮದ ಗೂಡಿಂಜದ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಕೃಷಿಕರನ್ನು ಆಲೆಟ್ಟಿ ಗ್ರಾಮದ ಬಡ್ಡಡ್ಕ ಚಳ್ಳಂಗಾರ್ ರಾಮಣ್ಣ ಅವರ ಪುತ್ರ ಜಗದೀಶ್ (56) ಎಂದು ಗುರುತಿಸಲಾಗಿದೆ. ಜಗದೀಶ್ ಜ.3 ರಂದು ಮನೆಯಿಂದ ಸುಳ್ಯಕ್ಕೆಂದು ಹೋದವರು ಮನೆಗೆ ಮರಳಿ ಬರದ ಹಿನ್ನಲೆಯಲ್ಲಿ ಮನೆಯವರು ಜ.4ರಂದು ರಂದು ಆಲೆಟ್ಟಿ ಗ್ರಾಮದ ಗೂಡಿಂಜದ ಅರಣ್ಯ ಪ್ರದೇಶದಲ್ಲಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಅವರು ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಇನ್ನು ಆತ್ಮಹತ್ಯೆ ಮಾಡಿಕೊಂಡ ಜಗದೀಶ್ ಹೊಟ್ಟೆನೋವಿನಿಂದಲೂ ಬಳಲುತ್ತಿದ್ದರು. ಒಂದು ವರ್ಷದಿಂದ ತೋಟಕ್ಕೆ ಹಳದಿರೋಗ ಬಂದಿದ್ದು, ಎಷ್ಟೇ ಔಷಧ ಸಿಂಪಡಿಸಿದರೂ ನಿಯಂತ್ರಣಕ್ಕೆ ಬಂದಿರಲಿಲ್ಲ. ಇದರಿಂದಾಗಿ ಭವಿಷ್ಯದ ಬಗ್ಗೆ ಚಿಂತೆಗೀಡಾಗಿ ಈ ಕೃತ್ಯ ಎಸಗಿದ್ದಾರೆ ಎಂದು ಶಂಕಿಸಲಾಗಿದೆ. ಇನ್ನು ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಕಲೇಶಪುರದ ಬೈಕರವಳ್ಳಿ ಗ್ರಾಮದಲ್ಲಿ ನವಜಾತ ಶಿಶುವನ್ನು ಅಕ್ರಮವಾಗಿ ಮಾರಾಟ ಮಾಡಲಾಗಿದೆ ಎಂಬ ದೂರಿನ ಮೇರೆಗೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರಲ್ಲಿ ಮಗುವಿನ ತಾಯಿ ಮತ್ತು ಆಶಾ ಕಾರ್ಯಕರ್ತೆ ಸೇರಿದ್ದಾರೆ. ಆರೋಪಿಗಳನ್ನು ಹರಗವಳ್ಳಿಯ ಮಗುವಿನ ತಾಯಿ ಗಿರಿಜಾ, ಹಿರಿಯೂರು ಕೂಡಿಗೆಯ ಸುಮಿತ್ರಾ, ಹೊಸಳ್ಳಿಯ ಸುಬ್ರಮಣಿ, ಅವರ ಮಗ ಶ್ರೀಕಾಂತ್ ಮತ್ತು ಚಿಕ್ಕಮಗಳೂರಿನ ಉಷಾ ಎಂದು ಗುರುತಿಸಲಾಗಿದೆ. ಒಂದು ದಿನದ ಹಸುಳೆಯನ್ನು ಮಾರಾಟ ಮಾಡಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಏತನ್ಮಧ್ಯೆ, ಉದ್ದೇಶದ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಪೋಷಕರಿಗೆ ಮಗುವನ್ನು ನೋಡಿಕೊಳ್ಳಲು ಸಾಧ್ಯವಾಗದೆ ಮಗುವನ್ನು ಮಾರಾಟ ಮಾಡಲಾಗಿದೆಯೇ ಅಥವಾ ಇನ್ನಾವುದೇ ಕಾರಣಕ್ಕಾಗಿ ಮಗುವನ್ನು ಮಾರಾಟ ಮಾಡಲಾಗಿದೆಯೇ ಎಂಬ ಬಗ್ಗೆ ತನಿಖೆ ಕೇಂದ್ರೀಕರಿಸಿದೆ ಎಂದು ಅವರು ಹೇಳಿದರು. ಪೊಲೀಸರ ಪ್ರಕಾರ, ಗಿರಿಜಾ ಮತ್ತು ಆಕೆಯ ಪತಿ ಸೋಮಶೇಖರ್, ಸುಬ್ರಮಣಿ ಕಾಫಿ ಎಸ್ಟೇಟ್ನಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ದಂಪತಿಗೆ ಈಗಾಗಲೇ ಇಬ್ಬರು ಮಕ್ಕಳಿದ್ದು, ನ.13ರಂದು…
ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಇವರ ವತಿಯಿಂದ ಪ್ರಭಾವತಿ ಹಾಗೂ ಉಡುಪಿ ವಿಶ್ವನಾಥ್ ಶೆಣೈ ಪ್ರಾಯೋಜಿತ ‘ವಿಶ್ವಪ್ರಭಾ ಪುರಸ್ಕಾರ – 2024 ‘ನ್ನು ಕನ್ನಡದ ಪ್ರಸಿದ್ಧ ಸಾಹಿತಿ ಜಯಂತ್ ಕಾಯ್ಕಿಣಿ ಅವರಿಗೆ ನೀಡಿ ಪುರಸ್ಕರಿಸಲಾಗುವುದು. ಈ ಪುರಸ್ಕಾರವು ಪ್ರಶಸ್ತಿ ಪತ್ರ , ಫಲಕ ಹಾಗೂ ಒಂದು ಲಕ್ಷ ರೂಪಾಯಿ ನಗದು ಒಳಗೊಂಡಿರುತ್ತದೆ.ಜನವರಿ ತಿಂಗಳ 24 ರಂದು ಉಡುಪಿಯ ಎಂಜಿಎಂ ಕಾಲೇಜಿನ ಮುದ್ದಣ್ಣ ಮಂಟಪದಲ್ಲಿ ನಡೆಯುವ ಸಂಸ್ಕೃತಿ ಉತ್ಸವದಲ್ಲಿ ಪುರಸ್ಕಾರ ಪ್ರದಾನ ಮಾಡಲಾಗುವುದು.
ಉಡುಪಿ: ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ವೇಳೆ ರಿಕ್ಷಾ ಚಾಲಕನಿಗೆ ಹೃದಯಾಘಾತವಾಗಿದ್ದು, ನಿಯಂತ್ರಣ ತಪ್ಪಿದ ರಿಕ್ಷಾ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಘಟನೆ ಜನವರಿ 4ರಂದು ಅಜ್ಜರಕಾಡು ಸಮೀಪ ನಡೆದಿದೆ. ಹೃದಯಾಘಾತಕ್ಕೀಡಾದ ರಿಕ್ಷಾ ಚಾಲಕ ಕಾಡಬೆಟ್ಟು ನಿವಾಸಿ ಸುರೇಶ್ ಅಜ್ಜರಕಾಡು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಜ್ಜರಕಾಡು ಕಡೆಯಿಂದ ನಗರದ ಬಸ್ ನಿಲ್ದಾಣಕ್ಕೆ ರಿಕ್ಷಾದಲ್ಲಿ ಪ್ರಯಾಣಿಕರನ್ನು ಕರೆದು ಕೊಂಡು ಹೋಗುತ್ತಿದ್ದಾಗ ಚಾಲಕ ಹಠಾತ್ ಕುಸಿದು ಬಿದ್ದರೆನ್ನಲಾಗಿದೆ. ಇದರಿಂದ ನಿಯಂತ್ರಣ ತಪ್ಪಿದ ರಿಕ್ಷಾ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಇದರಿಂದ ಇಬ್ಬರು ಮಹಿಳಾ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ದೆಹಲಿಯಲ್ಲಿ ಪೊಲೀಸರು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಓರ್ವ ಉಗ್ರನನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ . ದೆಹಲಿಯಲ್ಲಿ ಕಾರ್ಯಾಚರಣೆ ನಡೆಸಿದ ದೆಹಲಿ ವಿಶೇಷ ಪೊಲೀಸ್ ಪಡೆ ಮೋಸ್ಟ್ ವಾಂಟೆಡ್ ಉಗ್ರ ಜಾವೇದ್ ಅಹ್ಮದ್ ಮಟ್ಟೂನನ್ನು ಬಂಧಿಸಿದೆ. ಈ ಸುದ್ದಿ ಈಗಷ್ಟೇ ಬ್ರೇಕ್ ಆಗಿದ್ದು, ಹೆಚ್ಚಿನ ಮಾಹಿತಿ ಅಪ್ ಡೇಟ್ ಆಗಲಿದೆ.
ಉಳ್ಳಾಲ: ಮನೆಯೊಂದಕ್ಕೆ ಸಿಡಿಲು ಬಡಿದು ವಿದ್ಯುತ್ ಸಲಕರಣೆಗಳು ಸುಟ್ಟುಹೋಗಿ ಅಪಾರ ನಷ್ಟ ಉಂಟಾದ ಘಟನೆ ಉಳ್ಳಾಲ ಬಂಡಿಕೊಟ್ಯದ ನೇಲ್ಯ ಇಲ್ ಎಂಬಲ್ಲಿ ಸಂಭವಿಸಿದೆ. ಉಳ್ಳಾಲ ಬಂಡಿಕೊಟ್ಯದ ಪ್ರವೀಣ್ ಗುರಿಕಾರ ಎಂಬವರ ಮನೆಗೆ ಸಿಡಿಲು ಬಡಿದು ವಿದ್ಯುತ್ ಸಲಕರಣೆಗಳಿಗೆ ಹಾನಿಯಾಗಿ ಅಪಾರ ನಷ್ಟ ಉಂಟಾಗಿದೆ. ವಿದ್ಯುತ್ ವೈರ್, ಸೇರಿದಂತೆ ಹಲವು ಸಲಕರಣೆಗಳು ಸಂಪೂರ್ಣ ಸುಟ್ಟು ನಷ್ಟ ಸಂಭವಿಸಿದೆ. ಬೆಳಗ್ಗೆ ಮನೆಮಂದಿ ಮನೆಯಲ್ಲಿದ್ದ ಸಂದರ್ಭ ಘಟನೆ ನಡೆದಿದೆ. ಕಂದಾಯ ಇಲಾಖೆಗೆ ಈ ಕುರಿತು ದೂರು ನೀಡಲಾಗಿದೆ.
ಎದೆಗೆ ಗುಂಡು ಹೊಡೆದುಕೊಂಡು ವಿದ್ಯಾರ್ಥೀಯೊಬ್ಬ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಾವನ್ನಪ್ಪಿರುವ ವಿದ್ಯಾರ್ಥಿಯನ್ನು ವಿಷು ಉತ್ತಪ್ಪ (19) ಎಂದು ಗುರುತಿಸಲಾಗಿದೆ. ಕೊಡಗು ಮೂಲದ ಮೃತ ವಿಷು ಉತ್ತಪ್ಪ (19) ನ ತಂದೆ ತಮ್ಮಯ್ಯ ರೇಷನ್ ತರಲು ಹೋದಾಗ ಪುತ್ರ ವಿಷು ಉತ್ತಪ್ಪ ಮನೆಯಲ್ಲಿದ್ದ ಗನ್ ತೆಗೆದುಕೊಂಡು ಎದೆಗೆ ಶೂಟ್ ಮಾಡಿಕೊಂಡು ತಂದೆಗೆ ಕರೆ ಮಾಡಿ ಇನ್ಮುಂದೆ ತಪ್ಪು ಮಾಡುವುದಿಲ್ಲ ಅಂತ ಹೇಳಿದ್ದಾನೆ ಎನ್ನಲಾಗಿದೆ. ಈ ನಡುವೆ ಕೂಡಲೇ ಮನೆಗೆ ಬಂದ ತಮ್ಮಯ್ಯ ಮಗನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಮಾರ್ಗಮಧ್ಯವೇ ವಿಷು ಉತ್ತಪ್ಪ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಈ ನಡುವೆ ಘಟನೆ ಸಂಬಂಧ ಮಾಧನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಇನ್ನೂ ಘಟನೆಗೆ ಕಾರಣ ವಿಷು ಉತ್ತಪ್ಪ ಸರಿಯಾಗಿ ಓದುತಿಲ್ಲ ಎನ್ನಲಾಗಿದ್ದು, ಇದಕ್ಕೆ ಸಂಬಂಧಪಟ್ಟಂತೆ ವಿಷು ಉತ್ತಪ್ಪ ಮತ್ತು ಆತನ ತಂದೆ ತಮ್ಮಯ್ಯ ನಡುವೆ ಆಗ್ಗಾಗ್ಗೆ ಗಲಾಟೆ ನಡೆಯುತಿತ್ತು ಎನ್ನಲಾಗಿದೆ. ಆದರೆ ಎಲ್ಲವೂ ತನಿಖೆ ಬಳಿಕವೇ ಎಲ್ಲವೂ ಹೊರ…
ಕಾಸರಗೋಡು : ಉಸಿರಾಟ ಮತ್ತು ತೀವ್ರ ಹೊಟ್ಟೆ ನೋವಿನಿಂದ ಎರಡು ತಿಂಗಳ ಗರ್ಭಿಣಿ ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕಳಚನದುಕ್ಕಂ ಮೂಲದ ಸಿದ್ದಿಕ್ ಎಂಬವರ ಪತ್ನಿ ಫೌಜಿಯಾ (35) ಮೃತ ದುರ್ದೈವಿ. ಎರಡು ತಿಂಗಳ ಗರ್ಭಿಣಿಯಾಗಿರುವ ಫೌಜಿಯಾ ಕಾಞಂಗಾಟ್ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ರಾತ್ರಿ ತೀವ್ರ ಹೊಟ್ಟೆನೋವು ಮತ್ತು ಉಸಿರಾಟದ ತೊಂದರೆಯಿಂದ ಮಂಗಳೂರಿಗೆ ಕರೆದೊಯ್ಯಲಾಯಿತು. ಉಪ್ಪಳ ತಲುಪಿದಾಗ ಪರಿಸ್ಥಿತಿ ಬಿಗಡಾಯಿಸಿತು. ನಂತರ ಮಂಗಲ್ಪಾಡಿ ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಯಿತಾದ್ರೂ ಆಗಲೇ ಸಾವು ಸಂಭವಿಸಿತ್ತು. ಫೌಜಿಯಾ ಹಮೀದ್ ಮತ್ತು ಖದೀಜಾ ದಂಪತಿಯ ಪುತ್ರಿ. ಓರ್ವ ಮಗ ಮತ್ತು ಪತಿಯನ್ನು ಅಗಲಿದ್ದಾರೆ.










