Author: main-admin

ಅಡುಗೆ ಅನಿಲ ಸಂಪರ್ಕ ಹೊಂದಿರುವ ಗ್ರಾಹಕರು ದಿನಾಂಕ 31-12-2023ರ ಒಳಗೆ ತಮ್ಮ ಅಡುಗೆ ಅನಿಲ ಗ್ರಾಹಕರ ಸಂಖ್ಯೆಗೆ ಇ-ಕೆವೈಸಿಯನ್ನು ಮತ್ತು ಬ್ಯಾಂಕ್ ಖಾತೆ ಮಾಹಿತಿಯನ್ನು ಗ್ಯಾಸ್ ಏಜೆನ್ಸಿಯಲ್ಲಿ ಸಲ್ಲಿಸಬೇಕು. ತಪ್ಪಿದ್ದಲ್ಲಿ ಅಂತಹ ಗ್ರಾಹಕರಿಗೆ ಸಹಾಯಧನ ನಿಲ್ಲಿಸಲಾಗುತ್ತದೆ. ಗೃಹ ಬಳಕೆ ಅಡುಗೆ ಅನಿಲ ವಾಣಿಜ್ಯ ಬಳಕೆಯಾಗಿ ಪರಿವರ್ತನೆಯಾಗುತ್ತದೆ ಮತ್ತು ಅನಿಲ ಸಂಪರ್ಕ ಕಡಿತವಾಗುತ್ತದೆ ಹಾಗೂ ಇ-ಕೆವೈಸಿ ಕಾರ್ಯಕ್ಕೆ ಹಣ ನೀಡಬೇಕೆಂಬ ವದಂತಿ ಸಾರ್ವಜನಿಕರ ವಲಯದಲ್ಲಿ ಗೊಂದಲ ಸೃಷ್ಟಿಗೆ ಕಾರಣವಾಗಿರುತ್ತದೆ. ಅಡುಗೆ ಅನಿಲ ಗ್ರಾಹಕರಿಗೆ ತಿಳಿಯಪಡಿಸುವುದೇನೆಂದರೆ ಈ ವಿಷಯಗಳು ಕೇವಲ ವದಂತಿಯಾಗಿದ್ದು, ಗ್ರಾಹಕರು ಇ-ಕೆವೈಸಿ ಮಾಡಿಸಲು ಕೇಂದ್ರ ಸರ್ಕಾರವು/ ಅನಿಲ ಕಂಪನಿಗಳು ಯಾವುದೇ ಕೊನೆಯ ದಿನಾಂಕವನ್ನು ನಿಗಧಿಪಡಿಸಿರುವುದಿಲ್ಲ ಹಾಗೂ ಇ-ಕೆವೈಸಿ ಮಾಡಿಸುವುದಕ್ಕೆ ಯಾವುದೇ ಶುಲ್ಕ ನಿಗಧಿಯಾಗಿರುವುದಿಲ್ಲ. ಇಕೆವೈಸಿ ಪ್ರಕ್ರಿಯೆ ಸಂಪೂರ್ಣ ಉಚಿತವಾಗಿರುತ್ತದೆ. ಇ-ಕೆವೈಸಿ ಮಾಡಿಸುವುದು ನಿರಂತರ ಪ್ರಕ್ರಿಯೆಯಾಗಿದ್ದು, ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಅಡುಗೆ ಅನಿಲ ಸಂಪರ್ಕ ಪಡೆದಿರುವವರು ಮತ್ತು ಸಹಾಯಧನ ಪಡೆಯುವ ಗ್ರಾಹಕರು ಮಾತ್ರ ಇ-ಕೆವೈಸಿಯನ್ನು ಆದ್ಯತೆ ಮೇಲೆ ನೀಡುವಂತೆ ಆಹಾರ, ನಾಗರಿಕ…

Read More

ಕೌಟುಂಬಿಕ ಕಲಹಕ್ಕೆ ಬೇಸತ್ತು ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿ ಹಾಗೂ ಮಗು ಇಬ್ಬರನ್ನು ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ನಾಗೊಂಡನಹಳ್ಳಿಯಲ್ಲಿ ನಡೆದಿದೆ. ಪತಿ ಕೆಲಸಕ್ಕೆ ಹೋಗಿದ್ದ ವೇಳೆ ಮಹಿಳೆ ಗ್ಯಾಸ್ ಲೀಕ್ ಮಾಡಿ ತನ್ನ ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಕುಟುಂಬದವರು ಎಷ್ಟೇ ಬಾಗಿಲು ಬಡಿದರೂ ಮನೆ ಬಾಗಿಲು ತೆಗೆದಿಲ್ಲ. ಈ ವೇಳೆ ಗಾಬರಿಯಾದ ಕುಟುಂಬದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿಯೊಂದಿಗೆ ಧಾವಿಸಿದ ಪೊಲೀಸರು ಮನೆ ಬಾಗಿಲು ಒಡೆದು ಮಹಿಳೆ ಹಾಗೂ ಮಗುವನ್ನು ರಕ್ಷಿಸಿದ್ದಾರೆ. ಈ ವೇಳೆ ಗ್ಯಾಸ್ ಲೀಕ್ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದು ಬಯಲಾಗಿದೆ.

Read More

ಮಲ್ಪೆ: ಮಲ್ಪೆ ಅಯ್ಯಪ್ಪ ಮಂದಿರದ ವಾರ್ಷಿಕೋತ್ಸವ ವೇಳೆ ಅವಘಡ ಸಂಭವಿಸಿದ್ದು, ಕೆಂಡ ಸೇವೆ ವೇಳೆ ಬೆಂಕಿಗೆ ಬಿದ್ದು ಅಯಪ್ಪ ಮಾಲಾಧಾರಿಯೊಬ್ಬರು ತೀವ್ರ ಗಾಯಗೊಂಡಿದ್ದಾರೆ. ಗಾಯಾಳು ಮಾಲಾಧಾರಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕರಾವಳಿಯಲ್ಲಿ ಸಾಂಪ್ರದಾಯಿಕವಾಗಿ ಅಯ್ಯಪ್ಪ ಮಾಲಾಧಾರಿಗಳ ಕೆಂಡ ಸೇವೆ ನಡೆಯುತ್ತಿರುತ್ತದೆ. ಅದರಂತೆ ಕೆಂಡ ಹಾಯುವ ವೇಳೆ ಅಯ್ಯಪ್ಪ ಮಾಲಾಧಾರಿ ಆಯತಪ್ಪಿ ಬೆಂಕಿಗೆ ಬಿದ್ದಿದ್ದಾರೆ. ಕೂಡಲೇ ಇತರೆ ಮಾಲಾಧಾರಿಗಳು ಇವರ ಸಹಾಯಕ್ಕೆ ಬಂದಿದ್ದಾರೆ. ಈ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಮಾಲಾಧಾರಿ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

Read More

ಪುತ್ತೂರು: ಕರ್ನಾಟಕ ರಾಜ್ಯಾದ್ಯಂತ ಮನೆಮಾತಾಗಿರುವ ಅತೀ ದೊಡ್ಡ ಉಳಿತಾಯದೊಂದಿಗೆ ಅದೃಷ್ಟ ಪರೀಕ್ಷೆಯ ಯೋಜನೆಯನ್ನು ಆಶೀರ್ವಾದ ಎಂಟರ್ಪ್ರೈಸಸ್ ನಿಮಗೆ ಪರಿಚಯಿಸುತ್ತಿದೆ. ಮಾಸಿಕ ರೂ.1000/- ದಂತೆ ಇಪ್ಪತ್ತು ತಿಂಗಳು ಉಳಿತಾಯ ಮಾಡಿ ಪ್ರತೀ ತಿಂಗಳು ನಡೆಯಲಿದೆ ಲಕ್ಕಿ ಡ್ರಾ ದಲ್ಲಿ ಅದೃಷ್ಟಶಾಲಿಗಳಿಗೆ ಸಿಗಲಿದೆ ಸ್ಕೂಟರ್, ಬೈಕ್, ಚಿನ್ನ, ನಗದು ಬಹುಮಾನ , ಗೃಹ ಉಪಯೋಗಿ ವಸ್ತುಗಳು, ಕಾರುಗಳು ಹಾಗೂ ಕೊನೆಯ ಮೂರು ಡ್ರಾ ಗಳಲ್ಲಿ ಮೂರು ವೈಯುಕ್ತಿಕ ಎರಡು ಬೆಡ್ ರೂಮ್ ನ ಮನೆಗಳು. ಅದಲ್ಲದೇ ಪ್ರತೀ ತಿಂಗಳು ಐವತ್ತು ಅದೃಷ್ಟಶಾಲಿಗಳಿಗೆ ಸರ್ಪ್ರೈಸ್ ಗಿಫ್ಟ್ ಗಳು ಹಾಗೂ ಯಾವುದೇ ಬಹುಮಾನ ಸಿಗದ ಸದಸ್ಯರಿಗೆ ಕೊನೆಗೆ ಸಿಗಲಿದೆ ಆಯ್ಕೆಯ ಪ್ರೋತ್ಸಾಹಕ ಬಹುಮಾನ. ಆಶೀರ್ವಾದ ಎಂಟರ್ಪ್ರೈಸಸ್ ನ ಈ ಉಳಿತಾಯ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಗಳಿಗಾಗಿ ಈ ಕೆಳಗಿನ ನಂಬರ್ ಗಳಿಗೆ ನೇರವಾಗಿ ಕರೆ ಅಥವಾ ವಾಟ್ಸಾಪ್ ಮೂಲಕ ಮೆಸೇಜ್ ಮಾಡಿ ಸಂಪರ್ಕಿಸಿ.+917022646143+917022645143

Read More

ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಅನಧಿಕೃತ ಮರಳು ಸಾಗಾಣಿಕೆ ನಿಯಂತ್ರಿಸಲು ಮತ್ತು ಸಾರ್ವಜನಿಕರ ಮರಳಿನ ಬೇಡಿಕೆಗಳನ್ನು ಪೂರೈಸುವ ಸಲುವಾಗಿ ಈ ಹಿಂದೆ ಜಾರಿಯಲ್ಲಿದ್ದ https://dksandbazar.comತಂತ್ರಾಂಶವನ್ನು ಮರುಸ್ಥಾಪಿಸಲಾಗಿದೆ. ಸಾರ್ವಜನಿಕರು ಈ ಆ್ಯಪ್ ಮೂಲಕ ಸಾಮಾನ್ಯ ಮರಳನ್ನು ನೇರವಾಗಿ ಖರೀದಿಸಬಹುದು ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಸದ್ಯಕ್ಕೆ ಮರಳಿನ ಕೊರತೆ ಎದುರಾಗಿದ್ದು, ಇ-ಸ್ಯಾಂಡ್ ನಲ್ಲಿ ಮರಳು ಲಭ್ಯವಾಗುತ್ತಿಲ್ಲ. ಕೆಲದಿನಗಳ ಹಿಂದೆ ಕುಂದಾಪುರ ಭಾಗದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಲಭ್ಯವಿದ್ದ ಮರಳು ಬೇಡಿಕೆ ಹೆಚ್ಚಿದಂತೆ ಕಾದಿರಿಸಿದವರಿಗೆ ಮರಳು ಪೂರೈಕೆಯಾಗುತ್ತಿದ್ದು, ಇ-ಸ್ಯಾಂಡ್ ವೆಬ್‌ಸೈಟ್‌ನಲ್ಲಿ ಸದ್ಯಕ್ಕೆ ಆನೈನ್ ಬುಕ್ಕಿಂಗ್‌ಗೆ ತೆರೆದುಕೊಳ್ಳುತ್ತಿಲ್ಲ. ಮತ್ತೆ ಮರಳು ಲಭ್ಯವಾದಲ್ಲಿ ಬುಕ್ಕಿಂಗ್ ಆಪ್ಸನ್ ತೆರೆದುಕೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಅನಧಿಕೃತ ಮರಳು ಗಾರಿಕೆಗೆ ಕಡಿವಾಣಕ್ಕೆ ಕಠಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅನಧಿಕೃತ ಮರಳುಗಾರಿಕೆ ಕಂಡುಬಂದಲ್ಲಿ ಸಾರ್ವಜನಿಕರು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ದೂರವಾಣಿ ಸಂಖ್ಯೆ: 8762339932ಗೆ ತಿಳಿಸುವಂತೆ ಎಂದು ಗಣಿ ಮತ್ತು…

Read More

ಮಂಗಳೂರು: ಸ್ಕೂಟರ್ ನಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಬಂಧಿಸಿದ ಘಟನೆ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಡೀಲ್ ಬಳಿ ಜನವರಿ 1 ರಂದು ನಡೆದಿದೆ.ಬಜಾಲ್ನ ಅಶ್ಪಾಕ್ ಯಾನೆ ಜುಟ್ಟು ಅಶ್ಪಾಕ್ (27) ಮತ್ತು ಕಾಟಿಪಳ್ಳದ ಉಮರ್ ಫಾರೂಕ್ ಇರ್ಫಾನ್ (26) ಬಂಧಿತ ಆರೋಪಿಗಳು.ಆರೋಪಿಗಳಿಂದ ಮಾದಕವಸ್ತು ಎಂಡಿಎಂಎ ಹಾಗೂ ಕೃತ್ಯಕ್ಕೆ ಬಳಸಿದ ಸ್ಕೂಟರ್ ಮತ್ತು ಮೊಬೈಲ್ ಫೋನ್ ಸೇರಿ ಒಟ್ಟು 1,92,800 ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಪಡೀಲ್ ಬಳಿ ಸ್ಕೂಟರ್ ನಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.ಇನ್ನು ಆರೋಪಿ ಅಶ್ಫಾಕ್ ಮೇಲೆ ಮಂಗಳೂರು ನಗರದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ, ಕಂಕನಾಡಿ ನಗರ ಪೊಲೀಸ್ ಠಾಣೆ, ಉಳ್ಳಾಲ ಪೊಲೀಸ್ ಠಾಣೆ, ಸುರತ್ಕಲ್ ಪೊಲೀಸ್, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಗಳಲ್ಲಿ ಕೊಲೆ ಯತ್ನ ,ದರೋಡೆ ಸುಲಿಗೆ ದೋಂಬಿಯಂತಹ ಒಟ್ಟು 12…

Read More

ಪುಂಜಾಲಕಟ್ಟೆ: ಮಡಂತ್ಯಾರು ನಾವುಂಡ ರಸ್ತೆ ಬದಿಯಿರುವ ಅಡಿಕೆ ವ್ಯಾಪಾರಿಯೋರ್ವರ ಅಂಗಡಿಯಿಂದ ಕೆಲಸಗಾರನ ಗಮನ ಬೇರೆಡೆ ಸೆಳೆದು ಪೆಟ್ಟಿಗೆಯಲ್ಲಿದ್ದ 2.31 ಲಕ್ಷ ರೂ. ನಗದು ಕಳವು ಮಾಡಿದ ಘಟನೆ ನಡೆದಿದೆ. ಜ. 1ರಂದು ಬೆಳಗ್ಗೆ ಅಂಗಡಿಯಲ್ಲಿ ಕೆಲಸ ಮಾಡುವ ಇಸ್ಮಾಯಿಲ್‌ ಅವರಲ್ಲಿ ಕ್ಯಾಶ್‌ ಡ್ರಾವರ್‌ನ ಕೀ ನೀಡಿ ಮಾಲಕರು ಅನ್ಯ ಕೆಲಸದ ನಿಮಿತ್ತ ತೆರಳಿದ್ದರು. ಮಧ್ಯಾಹ್ನ ಅಂಗಡಿ ಮಾಲಕ ಪುಷ್ಪರಾಜ್‌ ಅವರಿಗೆ ಕೆಲಸಗಾರ ಇಸ್ಮಾಯಿಲ್‌ ಕರೆ ಮಾಡಿ, ಅಂಗಡಿಗೆ ಮಧ್ಯಾಹ್ನ ಅಪರಿಚಿತರಿಬ್ಬರು ಸ್ಕೂಟರಿನಲ್ಲಿ ಬಂದಿದ್ದು, ಅಂಗಡಿಯಲ್ಲಿದ್ದವರ ಗಮನ ಬೇರೆಡೆಗೆ ಸೆಳೆದು ಪೆಟ್ಟಿಗೆಯಲ್ಲಿÉದ್ದ ಹಣವನ್ನು ಕಳ್ಳತನ ಮಾಡಿರುವುದಾಗಿ ತಿಳಿಸಿದ್ದಾರೆ. ತತ್‌ಕ್ಷಣ ಪುಷ್ಪರಾಜ್‌ ಅಂಗಡಿಗೆ ಬಂದು ಪರಿಶೀಲಿಸಿ ಒಟ್ಟು 2,31,000 ರೂ. ಹಣ ಕಳವಾಗಿರುವ ಕುರಿತು ಪುಂಜಾಲಕಟ್ಟೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Read More

ರಾಮಜನ್ಮಭೂಮಿ ಹೋರಾಟಗಾರ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಲಾಗಿದೆ. ಈ ಬಳಿಕ ಅವರ ವಿರುದ್ಧ ಹುಬ್ಬಳ್ಳಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಬರೋಬ್ಬರಿ 15 ಪ್ರಕರಣಗಳನ್ನು ದಾಖಲಿಸಿರೋದಾಗಿ ತಿಳಇದು ಬಂದಿದೆ. ರಾಮಜನ್ಮಭೂಮಿ ಹೋರಾಟಗಾರ ಶ್ರೀಕಾಂತ್ ಪೂಜಾರಿ ಬಂಧನ ಪ್ರಕರಣವನ್ನು ಬಿಜೆಪಿಯ ವಿವಿಧ ನಾಯಕರು ಖಂಡಿಸಿದ್ದಾರೆ. ಇದೊಂದು ರಾಜಕೀಯ ಪ್ರೇರಿತ ನಡೆಯೆಂಬುದಾಗಿ ಕಿಡಿಕಾರಿದ್ದಾರೆ. ಈ ಬೆನ್ನಲ್ಲೇ ಶ್ರೀಕಾಂತ್ ಪೂಜಾರಿ ವಿರುದ್ಧ ಹುಬ್ಬಳ್ಳಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ 15 ಕೇಸ್ ಗಳನ್ನು ದಾಖಲಿಸಲಾಗಿದೆ. ಹಳೇ ಹುಬ್ಬಳ್ಳಿ ಮತ್ತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ 11 ಕೇಸ್ ದಾಖಲಾಗಿದ್ದಾವೆ. ಇನ್ನೂ ಕಸಬಾ ಪೊಲೀಸ್ ಠಾಣೆಯಲ್ಲಿ ಶ್ರೀಕಾಂತ್ ಪೂಜಾರಿ ವಿರುದ್ಧ 3 ಕೇಸ್ ದಾಖಲಾಗಿದ್ರೇ, ಶಹರ ಪೊಲೀಸ್ ಠಾಣೆಯಲ್ಲಿ 1 ಕೇಸ್ ದಾಖಲಾಗಿದೆ. ಶ್ರೀಕಾಂತ್ ಪೂಜಾರಿ ವಿರುದ್ಧ ಹುಬ್ಬಳ್ಳಿಯ ವಿವಿಧ ಠಾಣೆಯಲ್ಲಿ ದಾಖಲಾಗಿರುವಂತ 15 ಕೇಸ್ ಗಳಲ್ಲಿ 11 ಪ್ರಕರಣಗಳು ಅಕ್ರಮ ಸಾರಾಯಿ ಮಾರಾಟ ಕುರಿತು ದಾಖಲಾಗಿರುವಂತ ಪ್ರಕರಣಗಳಾಗಿದ್ದಾವೆ.

Read More

ಉಡುಪಿ: ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಆಕಸ್ಮಿಕವಾಗಿ ವ್ಯಕ್ತಿ ಓರ್ವ ಸ್ಕೂಟರ್ ಸಮೇತನಾಗಿ ದಕ್ಕೆ ಬಳಿಯ ನೀರಿಗೆ ಬಿದ್ದು ಮುಳುಗಡೆಗೊಂಡು ಕಣ್ಮರೆಯಾಗಿದ್ದಾರೆ. ನೀರಿಗೆ ಬಿದ್ದ ವ್ಯಕ್ತಿ ತಮಿಳುನಾಡು ಮೂಲದ ಮೀನುಗಾರನಾಗಿದ್ದು ಮಲ್ಪೆಯ ಬೋಟು ಒಂದರಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದ ಎನ್ನಲಾಗಿದೆ. ಇನ್ನು ನೀರಿಗೆ ಬಿದ್ದ ಮಾಹಿತಿ ತಿಳಿದು ತಕ್ಷಣ ಈಶ್ವರ್‌ ಮಲ್ಪೆ ಅವರು ಧಾವಿಸಿ ಬಂದು ನೀರಿಗೆ ಧುಮುಕಿ ಎಲ್ಲ ಕಡೆ ಜಾಲಾಡಿದರೂ ಆತನ ದೇಹ ಸಿಗಲಿಲ್ಲ. ಆದರೆ ಸ್ಕೂಟರ್‌ ಮಾತ್ರ ಪತ್ತೆಯಾಗಿದ್ದು ಹಗ್ಗದ ಸಹಾಯದಿಂದ ಮೇಲಕ್ಕೆ ತರಲಾಗಿದೆ.

Read More

ಪಾಣಾಜೆ ಗ್ರಾಮದ ಆರ್ಲಪದವು ನಿವಾಸಿ, ಮೇಸ್ತ್ರಿ ಕಂ ಗುತ್ತಿಗೆದಾರ ವಿಜಯ್ ಕುಮಾರ್ (38) ಸೋಮವಾರ ಸಂಜೆ ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯ್ ಕುಮಾರ್ ಅವರಿಗೆ ವಿವಾಹ ನಡೆಸಲು ಮನೆಯವರು ಸಿದ್ಧತೆ ನಡೆಸಿಕೊಂಡಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.ಮೃತರು ತಂದೆ ಶಿವಪ್ಪ ನಾಯ್ಕ, ತಾಯಿ ಲಲಿತಾ, ಅಣ್ಣ, ಅಕ್ಕಾ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.

Read More