Author: main-admin

ಮಂಗಳೂರು: ದ.ಕ ಜಿಲ್ಲೆಯಲ್ಲಿ ಅಕ್ರಮ ಇತ್ತೀಚೆಗೆ ನಿರಂತರವಾಗಿ ಅಕ್ರಮ ಗೋಸಾಗಾಟ ನಡೆಯುತ್ತಲೇ ಇದೆ. ಇದೀಗ ಮತ್ತೊಂದು ಪ್ರಕರಣ ಬಯಲಾಗಿದೆ. ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಘಟನೆ ಇಂದು ಮುಂಜಾನೆ ಮಂಗಳೂರಿನ ಕುಲಶೇಖರ ಕೈಕಂಬ ಬಳಿ ನಡೆದಿದೆ. ಭಜರಂಗದಳ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ಸ್ಕೂಟರ್ ನಲ್ಲಿದ್ದ ನೂರು ಕೆಜಿಗೂ ಅಧಿಕ ಗೋಮಾಂಸ ಸಾಗಾಟ ಮಾಡುತ್ತಿದ್ದಾಗ ಪತ್ತೆ ಹಚ್ಚಿದ್ದಾರೆ. ಹಿಂದೂ ಕಾರ್ಯಕರ್ತರು ಈ ಅಕ್ರಮವನ್ನು ಪತ್ತೆ ಹಚ್ಚಿದಾಗ ಸ್ಕೂಟರ್ ಸವಾರ ಗಾಡಿ ಬಿಟ್ಟು ಎಸ್ಕೇಪ್ ಆಗಿದ್ದಾನೆ. ನಂತರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

Read More

ಮಂಗಳೂರು: ಚಿಕ್ಕಮಗಳೂರಿನ ತೇಗೂರು ಗ್ರಾಮದ ಡಾ. ಅಬ್ದುಲ್​ ಕಲಾಂ ವಸತಿ ಶಾಲೆಯಿಂದ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಶುಕ್ರವಾರ ರಾತ್ರಿ ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ವಸತಿ ಶಾಲೆಯ 9ನೇ ತರಗತಿಯ ಬಾಳೆಹೊನ್ನೂರು ಮೂಲದ ಯಶ್ವಿತ್ ಸಾಲಿಯಾನ್​​​ ಮತ್ತು ಬೆಂಗಳೂರು ಮೂಲದ ತರುಣ್‌ ಮಾರ್ಚ್​ 3ರಂದು ನಾಪತ್ತೆಯಾಗಿದ್ದರು. ಮಂಗಳೂರಿನ ಹೋಟೆಲ್​ವೊಂದರಲ್ಲಿ ಕೆಲಸಕ್ಕೆ ಸೇರಲು ಯತ್ನಿಸಿ ಸಿಕ್ಕಿಬಿದ್ದಿದ್ದಾರೆ.ಯಶ್ವಿತ್ ಮತ್ತು ತರುಣ್ ಉತ್ತಮ ಸ್ನೇಹಿತರಾಗಿದ್ದು, ಓದಿನಲ್ಲಿ ಆಸಕ್ತಿ ಇಲ್ಲದಿದ್ದರೂ ವಸತಿ ಶಾಲೆಯಲ್ಲಿ ಒಳ್ಳೆಯ ಹೆಸರು ಪಡೆದಿದ್ದರು.‌ 9ನೇ ತರಗತಿ ಪರೀಕ್ಷೆ ಮುಗಿಸಿದ ಬಳಿಕ 10ನೇ ತರಗತಿಯ ಸಿದ್ದತೆಗಾಗಿ ವಿಶೇಷ ತರಗತಿಗಳು ನಡೆಯುತ್ತಿದ್ದು, ಇದರಿಂದ ಪರೀಕ್ಷೆ ಮುಗಿದರೂ ರಜೆ ಸಿಕ್ಕಿರಲಿಲ್ಲ. ವಿಶೇಷ ತರಗತಿ ಮುಗಿಸಿ ರೂಮ್ ಸೇರಿದ ಇಬ್ಬರು ಮೊದಲೇ ಮಾಡಿದ ಪ್ಲಾನ್​ನಂತೆ ವಸತಿ ಶಾಲೆಯ ಕಾಂಪೌಂಡ್ ಹಾರಿ 5 ಕಿಮೀ ನಡೆದು ಚಿಕ್ಕಮಗಳೂರು ಬಸ್ ನಿಲ್ದಾಣಕ್ಕೆ ತೆರಳಿ ಅಲ್ಲಿಂದ ಬಸ್​ ಹತ್ತಿ ಮಂಗಳೂರಿಗೆ ಬಂದಿದ್ದರು. ಮಕ್ಕಳು ನಾಪತ್ತೆಯಾಗುತ್ತಿದ್ದಂತೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು, ವಿದ್ಯಾರ್ಥಿಗಳ…

Read More

ಮಂಗಳೂರು: ನಗರದ ಸಮೀಪ ಹಳೆಯ ದ್ವೇಷಕ್ಕೆ ಸಂಬಂಧಿಸಿ ಬಿಜೈ ಕಾಪಿಕಾಡ್ 6ನೇ ಕ್ರಾಸ್‌ನಲ್ಲಿ ಬೈಕಿಗೆ ಕಾರು ಢಿಕ್ಕಿ ಹೊಡೆಸಿ ಬೈಕ್ ಸವಾರನನ್ನು ಕೊಲೆ ಮಾಡಲು ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಬಂಧಿತ ಆರೋಪಿ ಸತೀಶ್ ಕುಮಾರ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಪಾದಚಾರಿ ಮಹಿಳೆ ಯಲ್ಲವ್ವ ಉಪ್ನಾಳ ಮತ್ತು ಬೈಕ್ ಸವಾರ ಮುರಳಿ ಪ್ರಸಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಹಿಳೆಯು ಗುರುವಾರ ಬೆಳಗ್ಗೆ ಕೆಲಸಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿತ್ತು ಎಂದು ತಿಳಿದು ಬಂದಿದೆ. ಪೊಲೀಸರು ಈ ಪ್ರಕರಣವನ್ನು ತನಿಖೆ ನಡೆಸಿದ್ದಾರೆ.

Read More

ಮಂಗಳೂರು: ಪಣಂಬೂರು ಕೋಸ್ಟ್ ಗಾರ್ಡ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಜೀವನ್ ಕುಮಾರ್ ಎಂಬವರ ಪುತ್ರ ಹಿತೇನ್ ಬದ್ರ (17) ಎಂಬವರು ಮಾ. 12ರಂದು ಕುಂಜತ್ತಬೈಲಿನಲ್ಲಿರುವ ಮನೆಯಿಂದ ಹೋದವರು ವಾಪಸ್ ಬಾರದೆ ನಾಪತ್ತೆಯಾಗಿದ್ದಾರೆ. ಬೆಳಗ್ಗೆ 10ಕ್ಕೆ ಮನೆಯಿಂದ ಹೋಗಿದ್ದು, ತನ್ನ ಮೊಬೈಲ್ ಫೋನ್ ಮತ್ತು ಪರ್ಸ್ ಅನ್ನು ಮನೆಯಲ್ಲೇ ಬಿಟ್ಟು ಹೋಗಿದ್ದಾರೆ. ಆತನನ್ನು ಯಾರಾದರೂ ಪುಸಲಾಯಿಸಿ ಅಪಹರಿಸಿಕೊಂಡು ಹೋಗಿರುವ ಸಾಧ್ಯತೆಯಿದೆ ಎಂದು ತಂದೆ ಕಾವೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೂಲತಃ ಪಶ್ಚಿಮ ಬಂಗಾಲ ಜಿಲ್ಲೆಯ ಜಡಾಗ್ರಾಮ್ ಜಿಲ್ಲೆಯ ಗೋಪಿಬಲ್ಲವ್ ಪುರ ನಿವಾಸಿಗಳಾಗಿದ್ದು, ಪ್ರಸ್ತುತ ಚಹರೆ: 172 ಸೆಂ.ಮೀ. ಎತ್ತರ, ಕಾಣೆಯಾದ ದಿನ ಬಿಳಿ ಬಣ್ಣದ ಚಪ್ಪಲಿ, ತಿಳಿ ಹಸುರು ಬಣ್ಣದ ರೌಂಡ್ ಟಿ ಶರ್ಟ್, ನೀಲಿಬಣ್ಣದ ಟ್ರ್ಯಾಕ್ ಸೂಟ್ ಧರಿಸಿದ್ದರು. ಬಿಳಿ ಬಣ್ಣದ ಕನ್ನಡಕ ಧರಿಸಿರುತ್ತಾರೆ. ಇಂಗ್ಲಿಷ್, ಹಿಂದಿ, ಓಡಿಯಾ ಭಾಷೆ ಮಾತನಾಡುತ್ತಾರೆ. ಹಣೆಯ ಮೇಲೆ ಮಧ್ಯದಲ್ಲಿ ಕಪ್ಪು ಮಚ್ಚೆ ಇದೆ. ಕುಂಜತ್ತಬೈಲಿನ ಕೋಸ್ಟ್ ಗಾರ್ಡ್ ವಸತಿಗೃಹದಲ್ಲಿ ವಾಸವಾಗಿದ್ದಾರೆ. ಈ ಚಹರೆಯ ಯುವಕನ…

Read More

ದಾವಣಗೆರೆ : ಕೊಂಡಜ್ಜಿಯಲ್ಲಿರುವ ಪೊಲೀಸ್ ಪಬ್ಲಿಕ್ ಶಾಲೆಗೆ ನುರಿತ ಸ್ನಾತಕೋತ್ತರ ಹಾಗೂ ಸ್ನಾತಕ ಶಿಕ್ಷಕರನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ತಿಳಿಸಿದ್ದಾರೆ. ಈ ಶಾಲೆಯನ್ನು ಕರ್ನಾಟಕ ರಾಜ್ಯ ಪೊಲೀಸ್ ಕಲ್ಯಾಣ, ಶಿಕ್ಷಣ ಟ್ರಸ್ಟ್, ಪೂರ್ವ ವಲಯ ದಾವಣಗೆರೆ ಇವರಿಂದ ಪೊಲೀಸ್ ಪಬ್ಲಿಕ್ ಸ್ಕೂಲ್ ಸಿಬಿಎಸ್‍ಇ ಪಠ್ಯಕ್ರಮದ ಶಾಲೆ ನಡೆಸಲಾಗುತ್ತಿದೆ. ಇಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ಮಕ್ಕಳು ಹಾಗೂ ಇತರೆ ಸಾರ್ವಜನಿಕ ಮಕ್ಕಳಿಗೆ ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತದೆ. ಈ ಶಾಲೆಗೆ ಅಗತ್ಯವಿರುವ ಪಿಜಿಟಿ ಇಂಗ್ಲೀಷ್ ಶಿಕ್ಷಕರ 1 ಹುದ್ದೆಗೆ ಎಂಎ.ಬಿ.ಇಡಿ, ಪಿಜಿಟಿ ಗಣಿತ ಶಿಕ್ಷಕರ 1 ಹುದ್ದೆಗೆ ಎಂ.ಎಸ್ಸಿ, ಬಿ.ಇಡಿ, ಪಿಜಿಟಿ ವಿಜ್ಞಾನ ಶಿಕ್ಷಕರ 2 ಹುದ್ದೆಗಳಿಗೆ ಎಂಎಸ್ಸಿ, ಬಿಇಡಿ ಸಿಬಿಝಡ್, ಟಿಜಿಟಿ ಸಮಾಜ ವಿಜ್ಞಾನ 1 ಹುದ್ದೆಗೆ ಎಂ.ಎ. ಬಿ.ಇಡಿ, ಕನ್ನಡ ಪಿಜಿಟಿ 1 ಹುದ್ದೆಗೆ ಎಂಎ, ಬಿ.ಇಡಿ, ಹಿಂದಿ 2 ಹುದ್ದೆ ಬಿ.ಎ, ಎಂ.ಎ ಬಿ.ಇಡಿ, ದೈಹಿಕ ಶಿಕ್ಷಕ…

Read More

 ಬಂಟ್ವಾಳ: ಕಾರೊಂದು ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಪಲ್ಟಿಯಾಗಿ ಆಟೋ ಚಾಲಕ ಗಂಭೀರ ಗಾಯಗೊಂಡ ಘಟನೆ ಸೂರಿಕುಮೇರು ಜಂಕ್ಷನ್‍ ಬಳಿ ನಡೆದಿದೆ. ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿದ್ದು ಕೂಡಲೇ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಪರಿಣಾಮ ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿಯಬೇಕಿದೆ.

Read More

ಪುತ್ತೂರು: ಬೈಕ್ ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಸಂಟ್ಯಾರ್ ನಲ್ಲಿ ನಡೆದಿದೆ. ಡಿಕ್ಕಿಯ ರಭಸಕ್ಕೆ ವಾಹನಗಳು ನುಜ್ಜು ಗುಜ್ಜಾಗಿದ್ದು ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Read More

ಮಂಗಳೂರು: ಮ್ಯಾನೇಜರ್‌ ತಾನು ಕಾರ್ಯನಿರ್ವಹಿಸುತ್ತಿದ್ದ ಬ್ಯಾಂಕ್‌ಗೆ ವಂಚಿಸಿದ ಬಗ್ಗೆ ಸೆನ್‌ ಠಾಣೆಯಲ್ಲಿ ನಿನ್ನೆ ಪ್ರಕರಣ ದಾಖಲಾಗಿದೆ. ಬ್ಯಾಂಕ್‌ ಆಫ್‌ ಬರೋಡಾದ ಕೊಣಾಜೆ ಬ್ರಾಂಚ್‌ನಲ್ಲಿ ಆರೋಪಿ ಡೆರಿಕ್‌ ಅಜಿತ್‌ ಡಿಸೋಜ ಎಂಬಾತ 2022ರ ಸೆಪ್ಟಂಬರ್‌ 22ರಿಂದ 2024ರ ಫೆಬ್ರವರಿ 7ರವರೆಗೆ ಮ್ಯಾನೇಜರ್‌ ಆಗಿದ್ದು, ಈ ಸಂದರ್ಭ ಬ್ಯಾಂಕಿನ ಹಿರಿಯ ನಾಗರಿಕರು ಠೇವಣಿಯಲ್ಲಿರಿಸಿದ್ದ ಹಣವನ್ನು ಖಾತೆದಾರರಿಗೆ ತಿಳಿಯದಂತೆ 1, 44, 71, 000 ರೂ. ವನ್ನು ಸಾಲ ರೂಪದಲ್ಲಿ ಇತರ ಆರೋಪಿತರ ಖಾತೆಗೆ ವರ್ಗಾಯಿಸಿದ್ದಾನೆ ಎನ್ನಲಾಗಿದೆ.

Read More

ಉಡುಪಿ:ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡೆ ಅಂಗಡಿ ಬಳಿ ಮಾ.12ರಂದು ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಗುಂಡೇಟಿಗೆ ಒಳಗಾಗಿದ್ದ ಗರುಡ ಗ್ಯಾಂಗಿನ ಸದಸ್ಯ ನಾವುಂದ ಮೂಲದ ಇಸಾಕ್(27)ನನ್ನು ಶುಕ್ರವಾರ ಮಣಿಪಾಲ ಆಸ್ಪತ್ರೆಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ವರ್ಗಾಯಿಸಲಾಗಿದೆ. ಬೆಂಗಳೂರಿನ ನೆಲಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮಣಿಪಾಲ ದಲ್ಲಿ ಮಾ.4ರಂದು ನಡೆದ ಪೊಲೀಸ್ ಕಾರ್ಯಾಚರಣೆಯಲ್ಲಿ ಇಸಾಕ್ ತನ್ನ ಕಾರಿನಲ್ಲಿ ಇತರ ವಾಹನ ಗಳಿಗೆ ಢಿಕ್ಕಿ ಹೊಡೆದು ತಪ್ಪಿಸಿಕೊಂಡಿದ್ದನು. ತನಿಖೆ ನಡೆಸಿದ ಮಣಿಪಾಲ ಪೊಲೀಸ್ ನಿರೀಕ್ಷಕ ದೇವರಾಜ್ ನೇತೃತ್ವದ ತಂಡ ಇಸಾಕ್ ಹಾಗೂ ಆತನಿಗೆ ಸಹಕಾರ ನೀಡಿದ ಆರೋಪದಲ್ಲಿ ಮೂವರು ಆರೋಪಿಗಳನ್ನು ಮಾ.12ರಂದು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬಂಧಿಸಿತ್ತು.ಇವರನ್ನು ಖಾಸಗಿ ವಾಹನದಲ್ಲಿ ಮಣಿಪಾಲಕ್ಕೆ ಕರೆತರುವಾಗ ದಾರಿ ಮಧ್ಯೆ ಹಿರಿಯಡ್ಕ ಸಮೀಪ ಇಸಾಕ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದನು.ಈ ವೇಳೆ ಪೊಲೀಸ್ ನಿರೀಕ್ಷಕ ದೇವರಾಜ್ ಇಲಾಖಾ ಪಿಸ್ತೂಲಿನಿಂದ ಮೊದಲು ಮೂರು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿದರು. ಬಳಿಕ ಇಸಾಕ್ ಪೊಲೀಸ್…

Read More

ಮಂಗಳೂರು: ನಗರದ ಬಿಜೈ ಕಾಪಿಕಾಡಿನಲ್ಲಿ ನಿವೃತ್ತ ಬಿ.ಎಸ್.ಎನ್.ಎಲ್ ಉದ್ಯೋಗಿಯೊಬ್ಬರು ಹಳೆ ದ್ವೇಷದಲ್ಲಿ ನೆರೆಮನೆಯಾತನನ್ನು ಕೊಲ್ಲುವ ಉದ್ದೇಶದಿಂದ ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಬಂದು ಬೈಕಿಗೆ ಡಿಕ್ಕಿ ಹೊಡೆದು ಮುಂದಕ್ಕೆ ಚಲಿಸಿ ನಡೆದುಕೊಂಡು ಹೋಗುತ್ತಿದ್ದ ಹೆಂಗಸಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಬಿ.ಎಸ್.ಎನ್.ಎಲ್ ಉದ್ಯೋಗಿ ಸತೀಶ್ ಕುಮಾರ್ ಮತ್ತು ಮುರಳಿ ಪ್ರಸಾದ ಅವರು ಅಕ್ಕಪಕ್ಕದ ನಿವಾಸಿಯಾಗಿರುತ್ತಾರೆ. ಸತೀಶ್ ಕುಮಾರ್.ಕೆ.ಎಂ ರವರಿಗೆ ಮುರಳಿ ಪ್ರಸಾದ್ ಹಾಗೂ ಅವರ ಮನೆಯವರೊಂದಿಗೆ ಮೊದಲಿನಿಂದಲು ಸದಾಕಾಲ ತಂಟೆತಕರಾರು ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದು, ಈ ಹಿಂದೆ ಮುರಳಿ ಪ್ರಸಾದ ತಂದೆಯವರು ನಡೆದುಕೊಂಡು ಹೋಗುತ್ತಿರುವಾಗ ಆರೋಪಿತ ಸತೀಶ್ ಕುಮಾರ್.ಕೆ.ಎಂ ಎಂಬಾತನು ಕಾರಣ ವಿಲ್ಲದೆ ಬೈಕ್ನಲ್ಲಿ ಬಂದು ತಾಗಿಸಿಕೊಂಡು ಹೋಗಿ ಅವಾಚ್ಯ ಶಬ್ದದಿಂದ ನಿಂದಿಸಿದ್ದು, ಈ ಬಗ್ಗೆ ಉರ್ವಾ ಠಾಣೆಯಲ್ಲಿ 2023 ರಲ್ಲಿ ದೂರು ದಾಖಲಾಗಿರುತ್ತದೆ. ಆದರೆ ಇದೀಗ ಇಂದು ಬೆಳಗ್ಗೆ 8.15 ರ ಸುಮಾರಿಗೆ ಬಿಜೈ ಕಾಪಿಕಾಡ್ನ 6 ನೇ ಮುಖ್ಯ ರಸ್ತೆಯಲ್ಲಿ ಮುರಳಿ ಪ್ರಸಾದ ರವರು ತನ್ನ ಬೈಕ್ ನಲ್ಲಿ ಮನೆಯಿಂದ…

Read More