Author: main-admin

ಮಂಗಳೂರು: ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳಿಗೆ ಮಂಗಳೂರು 6ನೇ ಜೆಎಂಎಫ್ ಸಿ ನ್ಯಾಯಾಲಯ ಶಿಕ್ಷೆ ವಿಧಿಸಿ ಶನಿವಾರ ತೀರ್ಪು ನೀಡಿದೆ. ನ್ಯಾಯಾಧೀಶರಾದ ಪೂಜಾಶ್ರೀ ಅವರು ಆರೋಪಿಗಳಾದ ಬೊಕ್ಕಪಟ್ಟದ ಮೋನಿಕ್ ಮತ್ತು ಕೋಡಿಕಲ್‌ನ ಅಖಲ್‌ಗೆ ಒಂದು ತಿಂಗಳ ಜೈಲು ಶಿಕ್ಷೆ ಮತ್ತು 1000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಪಬ್ಲಿಕ್ ಪ್ರಾಸಿಕ್ಯೂಟರ್ ಜನಾರ್ದನ್ ವಾದ ಮಂಡಿಸಿದರು. ಏಪ್ರಿಲ್ 17, 2021 ರಂದು, ಸುಲ್ತಾನ್ ಬತ್ತೇರಿಯಲ್ಲಿ ಆರೋಪಿಗಳು ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಕೆಲವು ಮಾಹಿತಿ ಪಡೆದ ಎಸ್ಸೆ ಹಾರೂನ್ ಅಕ್ತರ್ ದಾಳಿ ನಡೆಸಿ 500 ಗ್ರಾಂ ಗಾಂಜಾವನ್ನು ಪತ್ತೆ ಮಾಡಿದ್ದರು. ಅವರು ಈ ಬಗ್ಗೆ ತನಿಖೆ ನಡೆಸಿ ನಂತರ ಎಸ್‌ಟಿ ಶೋಭಾ ಅವರು ತನಿಖೆಯನ್ನು ಪೂರ್ಣಗೊಳಿಸಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ನೀಡಿದ್ದರು

Read More

ಕೊಣಾಜೆ : ಮಂಗಳೂರು ವಿಶ್ವವಿದ್ಯಾನಿಲಯದ ಪ್ರಭಾರ ಕುಲಪತಿಯಾಗಿರುವ ಪ್ರೊ.ಜಯರಾಜ್ ಅಮೀನ್ ಅವರ ಛಾಯಾಚಿತ್ರವನ್ನು ಬಳಸಿಕೊಂಡು ನಂಬರಿಂದ ವಾಟ್ಸಪ್ ಖಾತೆಯನ್ನು ಸೃಷ್ಟಿ ಮಾಡಿ ಹಲವು ಸಂದೇಶಗಳು ಪ್ರಾಧ್ಯಾಪಕರಿಗೆ ಹಾಗೂ ಇತರರಿಗೆ ರವಾನೆಯಾಗಿದ್ದು, ಈ ಕುರಿತು ಕುಲಪತಿಯವರು ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಿದ್ದಾರೆ. ಶನಿವಾರ ಮಧ್ಯಾಹ್ನದಿಂದ ಇಂತಹ ಸಂದೇಶಗಳು ಈ ನಕಲಿ ಖಾತೆಯಿಂದ ರವಾನೆಯಾಗಿದ್ದು, ಈ ಬಗ್ಗೆ ಹಲವು ಪ್ರಾಧ್ಯಾಪಕರು ಕುಲಪತಿಯವರ ಗಮನಕ್ಕೆ ತಂದಿದ್ದರು. ಕೂಡಲೇ ಆರೋಪಿಗಳನ್ನು ಪತ್ತೆ ಹಚ್ಚಿ ಕಾನೂನುಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದಾರೆ.

Read More

ಉಡುಪಿ: ನಗರದ ಬನ್ನಂಜೆಯಲ್ಲಿರುವ ಜಯಲಕ್ಷ್ಮೀ ಸಿಲ್ಕ್‌ನಲ್ಲಿ ಇಂದು ಮಧ್ಯಾಹ್ನ‌ ಪಿಸ್ತೂಲ್ ನಿಂದ ಮಿಸ್‌ ಫೈರಿಂಗ್‌ ಆದ ಪರಿಣಾಮ ಸಿಬ್ಬಂದಿಯೋರ್ವರು ಗಾಯಗೊಂಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ ‌ ಮಳಿಗೆಯಲ್ಲಿ ಯಾರೋ ಬಿಟ್ಟು ಹೋಗಿದ್ದ ಪಿಸ್ತೂಲ್ ಪತ್ತೆಯಾಗಿತ್ತು ಎನ್ನಲಾಗಿದೆ.ಆ ಪಿಸ್ತೂಲ್ ಎತ್ತಿಕೊಂಡ ಸಿಬ್ಬಂದಿ ಆಪರೇಟ್‌ ಮಾಡಿ ಪರೀಕ್ಷಿಸಲು ಮುಂದಾಗಿದ್ದಾರೆ. ಈ ವೇಳೆ ಅಲ್ಲೇ ಇದ್ದ ಇನ್ನೋರ್ವ ಸಿಬ್ಬಂದಿಗೆ ಅದರ ಗುಂಡು ತಗುಲಿದೆ‌ ಅವರನ್ನು ಕೂಡಲೇ ಉಡುಪಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಯಲಾಗಿದೆ. ಈ ಘಟನಾ ಸ್ಥಳಕ್ಕೆ ಉಡುಪಿ ನಗರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಪಿಸ್ತೂಲ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಅಲ್ಲಿದ್ದ ಪಿಸ್ತೂಲ್ ಯಾರದ್ದು..? ಅಲ್ಲಿ ಹೇಗೆ ಬಂತು ?.ಆ ಬಟ್ಟೆ ಮಳಿಗೆಯಲ್ಲಿ ತಂದಿಟ್ಟಿದ್ದು ಯಾರು..? ಎಂದು ಪೊಲೀಸ್ ತನಿಖೆಯಲ್ಲಿ ತಿಳಿದು ಬರಬೇಕಿದೆ. ಉಡುಪಿ ನಗರ ಪೊಲೀಸರು ಈ ಪ್ರಕರಣವನ್ನು ತನಿಖೆ ನಡೆಸುತ್ತಿದ್ದಾರೆ.

Read More

ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಚಾಲಕ ಮೃತಪಟ್ಟಿದ್ದಾನೆ. ಕಂಬದಕೋಣೆ ಸಮೀಪ ರಾ.ಹೆದ್ದಾರಿ 66ರಲ್ಲಿ ಈ ದುರ್ಘಟನೆ ಸಂಭವಿಸಿದೆ. ಪರಿಣಾಮ ಕಾರೊಂದು ಡಿವೈಡರ್ ಏರಿ ಬಳಿಕ ವಿದ್ಯುತ್ ಕಂಬಕ್ಕೆ ಬಡಿದ ಪರಿಣಾಮ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಗಾಯಗೊಂಡ ಚಾಲಕ ಆಸ್ಪತ್ರೆಯಲ್ಲಿ ಅಸುನೀಗಿದ್ದಾನೆ. ಕಂಬದಕೋಣೆ ಜಂಕ್ಷನ್ ಸಮೀಪ ಶನಿವಾರ ಬೆಳಗಿನ ಜಾವ ಈ ಘಟನೆ ಸಂಭವಿಸಿದೆ.ಕಾರು ಕಾರವಾರದಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ನಿದ್ರೆಯ ಮಂಪರು ಅಪಘಾತಕ್ಕೆ ಕಾರಣ ಎಂದು ಶಂಕಿಸಲಾಗಿದೆ. ಸ್ಥಳೀಯರ ಸಹಾಯದಿಂದ ಕಾರಿನೊಳಕ್ಕೆ ಸಿಲುಕಿದ ವ್ಯಕ್ತಿಯನ್ನು ಹೊರ ತೆಗೆದು ಬೈಂದೂರು ತಾಲೂಕು ಆಸ್ಪತ್ರೆಗೆ ದಾಖಲಿಸಿದರು.ಹೆಚ್ಚಿನ ಚಿಕಿತ್ಸೆಗೆ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಪರೀಕ್ಷೀಸಿದ ವೈದ್ಯರು ಮ್ರತಪಟ್ಟಿರುವುದಾಗಿ ತಿಳಿಸಿದ್ದಾರೆ. ಮೃತ ಕಾರು ಚಾಲಕನನ್ನು ಪ್ರದ್ಯೋತ್ ಎಂದು ಗುರುತ್ತಿಸಲಾಗಿದೆ. ಸ್ಥಳಕ್ಕೆ ಬೈಂದೂರು ಪಿ.ಎಸ್.ಐ ತಿಮ್ಮೇಶ್ ಬಿ.ಎನ್.ಮತ್ತು ಸಿಬ್ಬಂದಿ ವರ್ಗದವರು ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲಿಸಿ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿದರು.

Read More

ಉಪ್ಪಿನಂಗಡಿ: ಇಲ್ಲಿನ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಲಾರಿ ನಿಲ್ಲಿಸಿ ಮಲಗಿದ್ದ ಲಾರಿ ಚಾಲಕ ಹೃದಯಾಘಾತದಿಂದ ಲಾರಿಯಲ್ಲೇ ಮೃತಪಟ್ಟಿದ್ದು, ಎರಡು ದಿನಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಚನ್ನಪಟ್ಟಣದ ಖಲೀಲ್‌ ಖಾನ್‌ (58) ಮೃತ ವ್ಯಕ್ತಿ. ಮೈಸೂರಿನಿಂದ ಬಿ.ಸಿ. ರೋಡಿಗೆ ಹಾಸಿಗೆಯ ಲೋಡನ್ನು ಲಾರಿಯಲ್ಲಿ ತಂದಿದ್ದ ಅವರು ಅದನ್ನು ಖಾಲಿ ಮಾಡಿ ಎರಡು ದಿನಗಳ ಹಿಂದೆ ರಾತ್ರಿ ಉಪ್ಪಿನಂಗಡಿಯ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಲಾರಿ ನಿಲ್ಲಿಸಿ ಮಲಗಿದ್ದ ಸ್ಥಿತಿಯಲ್ಲಿಯೇ ಮೃತಪಟ್ಟಿರುವುದು ಕಂಡು ಬಂದಿದೆ. ಮೃತ ಖಲೀಲ್‌ ಖಾನ್‌ ಬುಧವಾರ ರಾತ್ರಿ ತನ್ನ ಮನೆಗೆ ಪೋನಾಯಿಸಿ ತನಗೆ ಎದೆ ನೋವು ಕಾಣಿಸಿರುವುದರಿಂದ ಉಪ್ಪಿನಂಗಡಿಯಲ್ಲಿ ವಿಶ್ರಾಂತಿ ಪಡೆದು ನಾಳೆ ಬರುವೆನೆಂದು ತಿಳಿಸಿದ್ದು, ಗುರುವಾರ ಅವರು ಮನೆಗೆ ಹಿಂತಿರುಗದೇ ಇದ್ದ ಕಾರಣ ಅವರ ಪತ್ತೆಗಾಗಿ ಸಾಮಾಜಿಕ ಜಾಲತಾಣದ ಮೊರೆ ಹೋಗಲಾಯಿತು. ಈ ವೇಳೆ ಉಪ್ಪಿನಂಗಡಿಯ ರಾ.ಹೆ. 75ರಲ್ಲಿನ ಲೋಬೊ ಕಾಂಪ್ಲೆಕ್ಸ್‌ ಮುಂಭಾಗದಲ್ಲಿ ನಿಲ್ಲಿಸಲಾದ ಲಾರಿಯನ್ನು ಪರಿಶೀಲಿಸಿದಾಗ ಅದರಲ್ಲಿ ವ್ಯಕ್ತಿಯೋರ್ವರು ಮಲಗಿದ್ದ ಸ್ಥಿತಿಯಲ್ಲಿಯೇ ಮೃತಪಟ್ಟಿರುವುದು ಕಂಡುಬಂತು.…

Read More

ಕಾಸರಗೋಡು: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬದಿಯಡ್ಕ ದಲ್ಲಿ ನಡೆದಿದೆ. ಬದಿಯಡ್ಕ ಶಾಸ್ತ್ರಿ ಕೌಂಪೌಂಡ್’ನ ದಿನೇಶ್ ಆಚಾರ್ಯ (35) ಮೃತ ಪಟ್ಟವರು. ಇಂದು ಬೆಳಿಗ್ಗೆ ಮನೆ ಸಮೀಪದ ಖಾಸಗಿ ವ್ಯಕ್ತಿಯೋರ್ವರ ಹಿತ್ತಿಲಿನಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಗುರುವಾರ ರಾತ್ರಿ ಊಟ ಮಾಡಿ ಮಲಗಿದ್ದ ಗಣೇಶ್ ಬೆಳಿಗ್ಗೆ ಮನೆಯವರು ಎದ್ದಾಗ ನಾಪತ್ತೆಯಾಗಿದ್ದರು. ಶೋಧ ನಡೆಸಿದಾಗ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಶವಾಗಾರದಲ್ಲಿ ಇರಿಸಲಾಗಿದೆ. ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಬೆಂಗಳೂರು : ಕಾಯಂ ನಿರೀಕ್ಷೆಯಲ್ಲಿದ್ದ 12,000 ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರವು ಬಿಗ್‌ ಶಾಕ್‌ ನೀಡಿದ್ದು, ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸೇವೆ ಕಾಯಂ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ರಾಜ್ಯ ಸರ್ಕಾರವು ಅತಿಥಿ ಉಪನ್ಯಾಸಕರ ಪರವಾಗಿ ನಾಲ್ಕು ಪ್ರಮುಖ ನಿರ್ಧಾರಗಳನ್ನು ಕೈಗೊಂಡಿದ್ದು, ಮುಷ್ಕರ ಕೈಬಿಟ್ಟು ತಕ್ಷಣ ಕರ್ತವ್ಯಕ್ಕೆ ಹಾಜರಾಗದಿದ್ದರೆ ತಮ್ಮ ಸ್ಥಾನಗಳಿಗೆ ಹೊಸಬರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ಖಡಕ್‌ ಎಚ್ಚರಿಕೆ ನೀಡಿದೆ. ಸೇವೆ ಕಾಯಂ ಸೇರಿದಂತೆ ವಿವಿಧ ಬೇಡಿಕೆಗಳ ಒತ್ತಾಯಿಸಿ ಅತಿಥಿ ಉಪನ್ಯಾಸಕರ ಮುಷ್ಕರ ಕೈಗೊಂಡಿದೆ. ಆದರೆ ಸರ್ಕಾರವು ಅತಿಥಿ ಉಪನ್ಯಾಸಕರ ಸೇವೆ ಕಾಯಂ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದು, ಇದರ ಬದಲಿಗೆ ಜನವರಿಯಿಂದ 5 ಸಾವಿರ ರೂ. ವೇತನ ಹೆಚ್ಚಳ, ವಾರ್ಷಿಕ 5 ಲಕ್ಷ ರೂ. ಆರೋಗ್ಯ ವಿಮೆ ಸೌಲಭ್ಯ, ಕನಿಷ್ಟ 10ವರ್ಷ ಸೇವೆ ಮಾಡಿರುವವರಿಗೆ 50 ಸಾವಿರ ರೂ.ನಂತೆ 5 ಲಕ್ಷ ರೂ. ನಿಧಿ, ನಿತ್ಯ 15 ಗಂಟೆ ಕಾರ್ಯಭಾರ ಇರುವವರಿಗೆ ಮಾಸಿಕ ಒಂದು ರಜೆ ನೀಡುವ…

Read More

ಉಳ್ಳಾಲ : ಸಮುದ್ರದಲ್ಲಿ ನೀರಾಟಕ್ಕಿಳಿದ ಮೂವರು ಯುವಕರನ್ನ ರಕ್ಕಸ ಅಲೆಗಳು ಕೊಚ್ಚಿಕೊಂಡು ಹೋದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ನಡೆದಿದ್ದು,ಓರ್ವ ಯುವಕ ಮೃತ ಪಟ್ಟರೆ,ಮತ್ತೋರ್ವ ಸಮುದ್ರ ಪಾಲಾಗಿದ್ದು ಇನ್ನೋರ್ವನನ್ನ ಸ್ಥಳೀಯ ಈಜುಗಾರರು ರಕ್ಷಿಸಿದ್ದಾರೆ. ಚಿಕ್ಕ ಮಂಗಳೂರು ನಿವಾಸಿ ಸಲ್ಮಾನ್(19) ಮೃತ ಪಟ್ಟ ಯುವಕನಾಗಿದ್ದು ,ಆತನ ಸಂಬಂಧಿ ಬಶೀರ್(23)ನೀರು ಪಾಲಾಗಿದ್ದು ಮತ್ತೋರ್ವ ಯುವಕ ಸೈಫ್ ಆಲಿ(27) ಆಸ್ಪತ್ರೆಯಲ್ಲಿ ಚೇತರಿಸಿದ್ದಾನೆ. ಚಿಕ್ಕ ಮಂಗಳೂರು ಮೂಲದ ಬಶೀರ್,ಸಲ್ಮಾನ್ ಮತ್ತು ಸೈಫ್ ಅಲಿ ಎಂಬವರು ಕುಟುಂಬಸ್ಥರೊಂದಿಗೆ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಿ ಇಂದು ಮಧ್ಯಾಹ್ನದ ವೇಳೆ ಉಳ್ಳಾಲ ಕಡಲ ಕಿನಾರೆಗೆ ವಿಹಾರಕ್ಕೆ ತೆರಳಿದ್ದರು. ಈ ವೇಳೆ ಬಶೀರ್, ಸಲ್ಮಾನ್,ಸೈಫ್ ಅಲಿ ನೀರಾಟಕ್ಕಿಳಿದಿದ್ದು ರಕ್ಕಸ ಅಲೆಗಳು ಮೂವರನ್ನ ಎಳೆದೊಯ್ದಿದೆ.ತಕ್ಷಣ ಸ್ಥಳೀಯ ಈಜುಗಾರರು ಸಲ್ಮಾನ್ ಮತ್ತು ಸೈಫ್ ಅಲಿಯನ್ನ ಎಳೆದು ದಡಕ್ಕೆ ಹಾಕಿದ್ದಾರೆ. ಸಲ್ಮಾನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು,ಸೈಫ್ ಅಲಿ ಪ್ರಾಣಾಪಾಯದಿಂದ ಪಾರಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಶೀರ್ ನೀರು ಪಾಲಾಗಿದ್ದು ಉಳ್ಳಾಲ ಪೊಲೀಸರು,ಅಗ್ನಿ ಶಾಮಕ ದಳದವರು ಆತನಿಗಾಗಿ ಶೋಧ ಕಾರ್ಯ…

Read More

ವಿಟ್ಲ : ಗುಡ್ಡ ಜರಿದು ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿದ ಘಟನೆ ಬಂಟ್ವಾಳ ತಾಲೂಕಿನ ಸೂರಿಕುಮೇರು ಸಮೀಪದ ಕಾಯರಡ್ಕ ಎಂಬಲ್ಲಿ ನಡೆದಿದೆ. ಜೆಸಿಂತಾ ಮಾರ್ಟಿಸ್ ಎಂಬವರ ಮನೆಯ ಕಾಂಪೌಂಡ್ ನ ಕಾಮಗಾರಿ ನಡೆಸುತ್ತಿದ್ದ ಸಂದರ್ಭದಲ್ಲಿ ಮೇಲಿನ‌ ಗುಡ್ಡ ಜರಿದು ಬಿದ್ದಿದೆ. ಈ ವೇಳೆ ಇಬ್ಬರು ಕಾರ್ಮಿಕರು ಮಣ್ಣಿನೊಳಗೆ ಸಿಲುಕಿಕೊಂಡಿದ್ದರು. ಮಣ್ಣಿನಡಿ ಸಿಲುಕಿದ ಕಾರ್ಮಿಕರನ್ನು ರಾಜೇಶ್ ನಾಯ್ಕ್ ಬಾಯಿಲ, ಉಮೇಶ್ ನಾಯ್ಕ್ ನೆಲ್ಲಿ ಎಂದು ಗುರುತಿಸಲಾಗಿದೆ. ಕೂಡಲೇ ಸ್ಥಳೀಯರು ರಕ್ಷಣೆ ಮಾಡಿ ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸ್ ಇನ್ಸ್ ಪೆಕ್ಟರ್ ನಾಗರಾಜ್ ಹೆಚ್, ಕಂದಾಯ ಅಧಿಕಾರಿ ವಿಜಯ್ ಭೇಟಿ ನೀಡಿದ್ದಾರೆ.

Read More

ಬಂಟ್ವಾಳ: ಪಾದಚಾರಿ ಯುವತಿಯೋರ್ವಳಿಗೆ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದವಳು ಮಧ್ಯರಾತ್ರಿ ವೇಳೆ ಮೃತಪಟ್ಟ ಘಟನೆ ನಡೆದಿದೆ. ಬಿಸಿರೋಡಿನ ಕೈಕಂಬ ‌ಸಮೀಪದ ಪಚ್ಚಿನಡ್ಕ ಎಂಬಲ್ಲಿ ರಾತ್ರಿ 8 ಗಂಟೆ ವೇಳೆ ಅಪಘಾತ ನಡೆದಿತ್ತು.ಇಲ್ಲಿನ ಸ್ಥಳೀಯ ‌ನಿವಾಸಿ ಚೈತ್ರ (22 ) ಮೃತಪಟ್ಟ ಯುವತಿ.ಮಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿರುವ ಚೈತ್ರ ಅವರು ಸಂಜೆ ಕೆಲಸ ಬಿಟ್ಟು ಬಸ್ ನಿಂದ ಇಳಿದು ತಾಯಿ ಜೊತೆಗೆ ಮನೆಯ ಕಡೆಯ ತೆರಳುತ್ತಿದ್ದ ವೇಳೆ ಅಪಘಾತ ನಡೆದಿದೆ ಎಂದು ಆರಂಭದಲ್ಲಿ ಹೇಳಲಾಗಿತ್ತು. ಸ್ನೇಹಿತೆಯೋರ್ವಳ ಮದುವೆಯ ರೋಸ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಹಿನ್ನಲೆಯಲ್ಲಿಈಕೆ ಕೆಲಸಕ್ಕೆ ರಜೆ ಪಡೆದುಕೊಂಡು ಸಂಜೆ ವೇಳೆ ಮನೆಯಿಂದ ತಾಯಿ ಜೊತೆ ನಡೆದುಕೊಂಡು ಹೋಗುತ್ತಿದ್ದಳು ಎಂದು ಸಂಬಂಧಿಕರು ತಿಳಿಸಿದ್ದಾರೆ.ತಾಯಿ ಜೊತೆ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದ ಸ್ವಿಪ್ಟ್ ಕಾರು ಇವಳಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಯುವತಿ ಗಂಭೀರವಾಗಿ…

Read More