ಮಂಗಳೂರು: ಬಜಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಡಿ. 26ರಂದು ಬಾಂಬ್ ಬೆದರಿಕೆಯ ಈ ಮೇಲ್ ಬಂದಿರುವುದು ತಡವಾಗಿ ಬೆಳಕಿಗೆ ಬಂದಿದ್ದು, ಬಜಪೆ ಪೊಲೀಸ್ ಠಾಣೆ ಯಲ್ಲಿ ದೂರು ದಾಖಲಾಗಿದೆ. ನಿಲ್ದಾಣದ ಸುತ್ತ ಭದ್ರತೆ ಬಿಗುಗೊಳಿಸಲಾಗಿದೆ. ಮಂಗಳೂರು ಸಹಿತ ದೇಶದ ಹಲವು ವಿಮಾನ ನಿಲ್ದಾಣಗಳಿಗೆ ಈ ರೀತಿಯ ಈ ಮೇಲ್ ಸಂದೇಶ ರವಾನೆಯಾಗಿದೆ. xonocikonoci10@beeble.com ಹೆಸರಿನ ಈ ಮೇಲ್ ನಿಂದ ಡಿ. 26ರ ರಾತ್ರಿ 11.59ಕ್ಕೆ ಮೇಲ್ ಬಂದಿದೆ. ಸಂದೇಶದಲ್ಲಿ ಒಂದು ವಿಮಾನದಲ್ಲಿ ಸ್ಫೋಟಕಗಳಿವೆ. ಮಾತ್ರವಲ್ಲದೆ ನಿಲ್ದಾಣದ ಒಳಗೂ ಗುಪ್ತ ಸ್ಥಳದಲ್ಲಿ ಸ್ಫೋಟಕ ಇರಿಸ ಲಾಗಿದೆ. ಕೆಲವೇ ಗಂಟೆಗಳಲ್ಲಿ ಅದು ಸ್ಫೋಟಿಸಲಿದೆ. ನಾನು ನಿಮ್ಮೆಲ್ಲರನ್ನೂ ಕೊಲ್ಲುತ್ತೇನೆ. ನಾವು ‘ಫ್ಯೂನಿಂಗ್’ ಹೆಸರಿನ ಉಗ್ರಗಾಮಿ ತಂಡದವರು ಎಂದು ಮೇಲ್ ತಿಳಿಸಲಾಗಿದೆ. ಈ ಸಂದೇಶವನ್ನು ಡಿ. 27ರ ಮಧ್ಯಾಹ್ನ 11.20ರ ವೇಳೆಗೆ ವಿಮಾನ ನಿಲ್ದಾಣ ಪ್ರಾಧಿಕಾರದವರು ಗಮನಿಸಿದ್ದಾರೆ. ಮೇಲ್ ಗಮನಿಸುತ್ತಿದ್ದಂತೆ ನಿಲ್ದಾಣದ ಭದ್ರತೆಯನ್ನು ಬಲಪಡಿಸಲಾಗಿದೆ. ಜತೆಗೆ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದಿಂದ ತಪಾಸಣೆಯನ್ನೂ ನಡೆಸಲಾಗಿದೆ. ಆದರೆ…
Author: main-admin
ಹನಿ ಟ್ರ್ಯಾಪ್ ನಡೆಸಿ ಕೇರಳ ಉದ್ಯಮಿ ಬ್ಲಾಕ್ ಮೇಲ್ ಮಾಡಿ 5 ಲಕ್ಷ ರೂ. ದೋಚಿದ್ದ ಯುವತಿ ಸೇರಿ ಮೂವರನ್ನು ಮೈಸೂರು ಗ್ರಾಮಾಂತರ ಠಾಣೆ ಪೋಲೀಸರು ಬಂಧಿಸಿದ್ದಾರೆ. ಮಡಿಕೇರಿ ಮೂಲದ ಯುವತಿ, ಜಲುಲ್ಲಾ ರೆಹಮಾನ್ ಮತ್ತು ರಿಜ್ವಾನ್ ಬಂಧಿತ ಆರೋಪಿಗಳು ಬಂಧಿತರಿಂದ 50,000 ರೂ. ನಗದು, ಕಾರ್ ವಶಕ್ಕೆ ಪಡೆದಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕೇರಳದ ತಿರುನೆಲ್ಲಿಯ ಉದ್ಯಮಿ ಸುನ್ನಿ ಹನಿಟ್ರ್ಯಾಪ್ ಗೆ ಒಳಗಾದವರು. 9 ತಿಂಗಳ ಹಿಂದೆ ಕಳೆದ ಮಾರ್ಚ್ ನಲ್ಲಿ ಪ್ರಕರಣ ನಡೆದಿತ್ತು. ಕೇರಳಕ್ಕೆ ತೆರಳುತ್ತಿದ್ದ ಉದ್ಯಮಿಯನ್ನು ಮಾನಂದವಾಡಿ ರಸ್ತೆಯಲ್ಲಿ ತಡೆದ ಇಬ್ಬರು ಅಪಹರಿಸಿ ಮನೆಯೊಂದಕ್ಕೆ ಕರೆದೊಯ್ದಿದ್ದಾರೆ. ಯುವತಿಯೊಂದಿಗೆ ಅರೆ ನಗ್ನ ಫೋಟೋ, ವಿಡಿಯೋ ತೆಗೆದು 10 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಇಲ್ಲದಿದ್ದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಾಕುವುದಾಗಿ ಬೆದರಿಸಿದ್ದಾರೆ. ಬೆದರಿದ ಉದ್ಯಮಿ ಸುನ್ನಿ 5 ಲಕ್ಷ ರೂಪಾಯಿ ನೀಡಿದ್ದಾರೆ. ನಂತರ ಅವರ ಬಳಿ ಇದ್ದ ಉಂಗುರ ಕಸಿದುಕೊಂಡು ಖದೀಮರು ಪರಾರಿಯಾಗಿದ್ದು, ತಿರುನೆಲ್ಲಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ…
ನಗರದ ಬಂಗ್ರಕೂಳೂರಿನಲ್ಲಿರುವ ಗೋಲ್ಡ್ ಫಿಂಚ್ ಸಿಟಿಯಲ್ಲಿ ಡಿಸೆಂಬರ್ 30ರಂದು ಮಂಗಳೂರು ಕಂಬಳ ಅದ್ಧೂರಿಯಾಗಿ ನಡೆಯಲಿದ್ದು ಇದರ ಅಂಗವಾಗಿ ಛಾಯಾಚಿತ್ರ ಸ್ಪರ್ಧೆ, ಕಲರ್ ಕೂಟ ಮತ್ತು ರೀಲ್ ಕಂಟೆಸ್ಟ್ ಆಯೋಜಿಸಲಾಗಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಕ್ಯಾ. ಬೃಜೇಶ್ ಚೌಟ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಡಿ.30ರಂದು ಬೆಳಗ್ಗೆ 8:30ಕ್ಕೆ ದಿ. ರತ್ನ ಮಾಧವ ಶೆಟ್ಟಿ ವೇದಿಕೆಯಲ್ಲಿ ಕಂಬಳ ಉದ್ಘಾಟನೆಗೊಳ್ಳಲಿದೆ. ಚಿತ್ರದುರ್ಗ ಮಾದಾರ ಚೆನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಅವರು ಉದ್ಘಾಟನೆ ನೆರವೇರಿಸಲಿದ್ದು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಬಂಟ್ವಾಳ ಇದರ ಅಧ್ಯಕ್ಷ ಡಾ. ತುಕಾರಾಮ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದು ಕಂಕನಾಡಿ ಬ್ರಹ್ಮ ಬೈದರ್ಕಳ ಗರಡಿ ಅಧ್ಯಕ್ಷ ಕೆ. ಚಿತ್ತರಂಜನ್ ದೀಪ ಪ್ರಜ್ವಲನೆ ಮಾಡಲಿದ್ದಾರೆ. ರಾಮಕೃಷ್ಣ ಮಠದ ಸ್ವಾಮಿ ಜಿತಕಾಮಾನಂದ ಜೀ, ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಉಪಸ್ಥಿತರಿರಲಿದ್ದಾರೆ. ಎಂ.ಆರ್.ಜಿ. ಗ್ರೂಪ್ ಚೇರ್ ಮೆನ್ ಕೆ.ಪ್ರಕಾಶ್ ಶೆಟ್ಟಿ, ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಸಂಸದ ತೇಜಸ್ವಿ ಸೂರ್ಯ, ಸಂಸದ…
ನವದೆಹಲಿ: ಕತಾರ್ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ 8 ಮಾಜಿ ಭಾರತೀಯ ನೌಕಾಪಡೆಗಳಿಗೆ ಗುರುವಾರ (ಡಿಸೆಂಬರ್ 28) ಹೆಚ್ಚಿನ ಪರಿಹಾರ ಸಿಕ್ಕಿದೆ. ಎಲ್ಲಾ ಎಂಟು ಜನರ ಶಿಕ್ಷೆಯನ್ನು ಕಡಿಮೆ ಮಾಡಲಾಗಿದೆ. ಕತಾರ್ ನಲ್ಲಿರುವ ನ್ಯಾಯಾಲಯವು ಪ್ರಕರಣದ ಬಾಗಿಲು ತಟ್ಟಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ವಿಚಾರಣೆಯ ಸಮಯದಲ್ಲಿ, ನ್ಯಾಯಾಲಯವು ಶಿಕ್ಷೆಯನ್ನು ಕಡಿಮೆ ಮಾಡಿದೆ ಬೇಹುಗಾರಿಕೆ ಆರೋಪದ ಮೇಲೆ ಕತಾರ್ ನ್ಯಾಯಾಲಯವು ಅಕ್ಟೋಬರ್ನಲ್ಲಿ ಮರಣದಂಡನೆ ವಿಧಿಸಿದ ಎಂಟು ಮಾಜಿ ನೌಕಾಪಡೆಯ ಸಿಬ್ಬಂದಿಗೆ ಕಡಿಮೆ ಶಿಕ್ಷೆಯನ್ನ ಎದುರಿಸಬೇಕಾಗುತ್ತದೆ ಎಂದು ಸರ್ಕಾರ ಇಂದು ಮಧ್ಯಾಹ್ನ ತಿಳಿಸಿದೆ. ಕಡಿಮೆ ಮಾಡಿದ ಶಿಕ್ಷೆಯ ನಿಯಮಗಳು ಇನ್ನೂ ಸ್ಪಷ್ಟವಾಗಿಲ್ಲ ಎಂದು ಸರ್ಕಾರ ಹೇಳಿದೆ. “ವಿವರವಾದ ತೀರ್ಪಿಗಾಗಿ ಕಾಯಲಾಗುತ್ತಿದೆ. ಮುಂದಿನ ಕ್ರಮಗಳ ಬಗ್ಗೆ ನಿರ್ಧರಿಸಲು ನಾವು ಕಾನೂನು ತಂಡ ಮತ್ತು ಕುಟುಂಬ ಸದಸ್ಯರೊಂದಿಗೆ ನಿಕಟ ಸಂಪರ್ಕದಲ್ಲಿದ್ದೇವೆ” ಎಂದು ಅವರು ಹೇಳಿದರು.
ಬೆಂಗಳೂರು: ನಿಗದಿತ ಕಿಲೋ ಮೀಟರ್ ಗಳಷ್ಟು ಓಡಾಟ ನಡೆಸಿ ಸಂಚಾರ ಸಾಮರ್ಥ್ಯ ಕಳೆದುಕೊಂಡಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(KSRTC)ಯ ಬಸ್ ಗಳನ್ನು ಗುಜರಿಗೆ ಹಾಕಬೇಕು. ಅಂತಹ ಬಸ್ ಗಳನ್ನು ಯಾವುದೇ ಕಾರಣಕ್ಕೂ ಪುನಃ ನಗರ, ಹಳ್ಳಿಗಳ ಮಾರ್ಗ ಅಥವಾ ಮತ್ತಾವುದೇ ಮಾರ್ಗಗಳಲ್ಲಿನ ಸಂಚಾರಕ್ಕೆ ಬಳಸಲು ಅನುಮತಿ ನೀಡಬಾರದು ಎಂದು ರಾಜ್ಯ ಹೈಕೋರ್ಟ್ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಗುಜರಿಗೆ ಸೇರಬೇಕಿದ್ದ ಕೆಎಸ್ಸಾರ್ಟಿಸಿ ಬಸ್ಸನ್ನು ರಸ್ತೆಗಿಳಿಸಿದ್ದರಿಂದ 2006ರ ನವೆಂಬರ್ ನಲ್ಲಿ ಅಂಕೋಲಾದಲ್ಲಿ ಅಪಘಾತ ಸಂಭವಿಸಿ ಇಬ್ಬರು ವಿದ್ಯಾರ್ಥಿಗಳ ಸಾವಿಗೆ ಕಾರಣವಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಮೂರ್ತಿ ರಾಮಚಂದ್ರ ಡಿ.ಹುದ್ದಾರ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಮಹತ್ವದ ತೀರ್ಪು ಪ್ರಕಟಿಸಿದೆ. ಬಸ್ ಗಳು ಸಂಚಾರಕ್ಕೆ ಅರ್ಹವಾಗಿರುವ ಬಗ್ಗೆ ಪ್ರತೀ ವರ್ಷವೂ ಸಂಬಂಧಿಸಿದ ಪ್ರಾದೇಶಿಕ ಸಾರಿಗೆ ಅಧಿಕಾರಿಯಿಂದ (RTO) ಸುಸ್ಥಿತಿ ದೃಢೀಕರಣ ಪತ್ರ (FC) ಪಡೆಯಬೇಕು. RTO ವತಿಯಿಂದ ದೃಢೀಕರಣ ಪತ್ರ ಪಡೆದ ಬಸ್ಗಳಿಗೆ ಮಾತ್ರವೇ ರಸ್ತೆಯಲ್ಲಿ ಸಂಚರಿಸಲು ಅನುಮತಿ ನೀಡಬೇಕು. ಕಾಲಕಾಲಕ್ಕೆ ಬಸ್ ಗಳನ್ನು ಪರಿಶೀಲಿಸಿ…
ವಿಟ್ಲ: ತಾಯಿಯೊಬ್ಬಳು ತನ್ನ ವಿಕಲಚೇತನ ಮಗುವಿನ ಗಂಟಳಿಗೆ ಕೋಲು ಹಾಕಿ ಕುತ್ತಿಗೆ ಹಿಡಿದುಕೊಲೆ ಮಾಡಲು ಯತ್ನಿಸಿದ ಘಟನೆ ಅನಂತಾಡಿ ಗ್ರಾಮದ ಕರಿಂಕ ಎಂಬಲ್ಲಿ ನಡೆದಿದೆ. ಬೆಳಿಯಪ್ಪಗೌಡ ಕುಸುಮ ದಂಪತಿಯ ಏಕೈಕ ಪುತ್ರ ದರ್ಶಿತ್(9)ಎಂಬಾತನೇ ತನ್ನ ಜನ್ಮದಾತೆಯ ರಾಕ್ಷಸೀಕೃತ್ಯಕ್ಕೆ ಒಳಗಾಗಿ ಸಾವು-ಬದುಕಿನ ನಡುವೆ ಹೋರಾಡುತ್ತಿರುವ ನತದೃಷ್ಟ ಬಾಲಕ. ಹುಟ್ಟಿನಿಂದಲೇ ವಿಕಲಚೇತನನಾಗಿದ್ದ ದರ್ಶಿತ್ ತನ್ನ ಪೋಷಕರಿಗೆ ಏಕೈಕ ಕರುಳಕುಡಿಯಾಗಿದ್ದಾನೆ. ಅನಂತಾಡಿ ಶಾಲೆಯಲ್ಲಿ ನಾಲ್ಕನೇ ತರಗತಿಯಲ್ಲಿರುವ ದರ್ಶಿತ್ ಪಾಲಿಗೆ ಇಂದು ಕರಾಳ ರಾತ್ರಿಯಾಗಿದೆ. ಹೆತ್ತು, ಹೊತ್ತು ಸಾಕಿ ಸಲಹಬೇಕಾಗಿದ್ದ ತಾಯಿ ಕುಸುಮ ಯಮರಾಜನ ರೂಪದಲ್ಲಿ ಬದಲಾಗಿದ್ದಾಳೆ. ತನ್ನ ಪುತ್ರನ ಕತ್ತು ಹಿಸುಕಿದ ತಾಯಿ ಕುಸುಮಾ ಅಷ್ಟಕ್ಕೂ ತೃಪ್ತಳಾಗದೇ ಆತನ ಬಾಯಿಗೆ ದೊಣ್ಣೆ ತುರುಕಿ ಕೊಲೆಗೆ ಯತ್ನಿಸಿದ್ದಾಳೆ.ಮನೆಯೊಳಗೆ ವಿಕಲಚೇತನ ಪುತ್ರನ ಕಿರುಚಾಟ ಕೇಳಿಸಿಕೊಂಡ ತಂದೆ ಬೆಳ್ಳಿಯಪ್ಪ ಗೌಡರು ಅಂಗಳದಿಂದ ಓಡಿ ಮನೆಯೊಳಗೆ ಬರುತ್ತಿದ್ದಂತೆ ಆಘಾತ ಕಾದಿತ್ತು. ಪುತ್ರನ ಮೇಲೆ ಪತ್ನಿ ನಡೆಸುತ್ತಿದ್ದ ಕೌರ್ಯ ಕಣ್ಣಾರೆ ನೋಡುತ್ತಿದ್ದಂತೆ ತಡೆಯಲು ಮುಂದಾಗಿದ್ದಾರೆ. ಅಷ್ಟರಲ್ಲಿ ರಾಕ್ಷಸೀ ರೂಪ ತಾಳಿದ್ದ ಪತ್ನಿ ಕುಸುಮಾ…
ಮಣಿಪಾಲ: ದಲಿತ ಮಹಿಳೆಯೋರ್ವರು ಪರಿಶಿಷ್ಟ ಜಾತಿ /ಪಂಗಡ ನಿಗಮದಿಂದ ಸಾಲ ಪಡೆದು ತನಗೆ ನೀಡಲಿಲ್ಲ ಎಂಬ ದ್ವೇಷದಿಂದ ಜಿಲ್ಲಾ ಕರವೇ ಸದಸ್ಯನೋರ್ವ ಮಹಿಳೆಯ ಬಗ್ಗೆ ಸುಳ್ಳು ಮೆಸೇಜ್ ಹರಿಯಬಿಟ್ಟು ಮಾನ ಹಾನಿ ಮಾಡಿದ್ದಾನೆ ಎಂದು ನೊಂದ ಮಹಿಳೆ ಮಣಿಪಾಲ ಪೊಲೀಸರಿಗೆ ದೂರು ನೀಡಿದ್ದಾರೆ. ನೊಂದ ಮಹಿಳೆಯು ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯೆಯಾಗಿದ್ದು, ಆರೋಪಿ ಪ್ರಭಾಕರ ಕೂಡ ಇದರ ಸದಸ್ಯನಾಗಿದ್ದಾನೆ. ಮಹಿಳೆಗೆ ಪರಿಶಿಷ್ಟ ಜಾತಿ ನಿಗಮದಿಂದ ಸಾಲ ಪಡೆದು ನೀಡುವಂತೆ ಒತ್ತಾಯಿಸುತ್ತಿದ್ದನು ಎನ್ನಲಾಗಿದೆ. ಮಹಿಳೆಯೂ ಸಾಲ ನೀಡಲು ನಿರಾಕರಿಸಿದ್ದು, ಈ ದ್ವೇಷದಿಂದ ಆರೋಪಿ ಮಹಿಳೆಯ ನಡತೆಯ ಬಗ್ಗೆ ತಪ್ಪು ಅಭಿಪ್ರಾಯ ಬರುವಂತೆ ಪ್ರಚಾರ ಮಾಡಿ ಮತ್ತೋರ್ವ ಕರವೇ ಸದಸ್ಯೆಯ ಮೊಬೈಲ್ಗೆ ದಲಿತ ಮಹಿಳೆಯ ಕುರಿತು ಅವಹೇಳನಕಾರಿ ವಾಯ್ಸ ಮೆಸೇಜ್ ಕಳುಹಿಸಿದ್ದಾನೆ. ಆ ಮೆಸೇಜ್ನಲ್ಲಿ ನೊಂದ ಮಹಿಳೆಯ ಮಾನಕ್ಕೆ ಕುಂದು ಬರುವಂತಹ ಅವಾಚ್ಯ ಮಾತುಗಳಿದ್ದು, ಆಕೆಯ ಮನೆಗೆ ಬೆಂಕಿ ಹಾಕುವುದಾಗಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ನೊಂದ ಮಹಿಳೆ ಮಣಿಪಾಲ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಮೂಡುಬಿದಿರೆ: ಕಾರುಗಳಲ್ಲಿ ಹೋಗಿ ವಿವಿಧ ಕಡೆಗಳಿಂದ ದನಗಳನ್ನು ಕದಿಯುತ್ತಿದ್ದ ಇಬ್ಬರು ಆರೋಪಿಗಳನ್ನು ಬಜ್ಪೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಮಂಗಳೂರು ತಾಲೂಕು ಬಡಗ ಎಡಪದವು ಗ್ರಾಮದ ಕಿನ್ನಿಮಜಲು ನಿವಾಸಿ ಚಂದನ್ ಉಪಾಧ್ಯಾಯ ಎಂಬವರು ಡಿ. 14 ರಂದು ಬೆಳಿಗ್ಗೆ ಮೇಯಲು ಬಿಟ್ಟ ದನಗಳ ಪೈಕಿ 2 ಹಸುಗಳು ಮತ್ತು 1 ಕರುವನ್ನು ಯಾರೋ ಕಳ್ಳರು ಕಳವು ಮಾಡಿರುವ ಬಗ್ಗೆ ನೀಡಿರುವ ದೂರಿನ ಆಧಾರದಲ್ಲಿ ಬಜಪೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಬಜಪೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಸಂದೀಪ್ ಅವರ ಆದೇಶದಂತೆ ಬುಧವಾರ ಬೆಳಗ್ಗಿನ ಜಾವ ಸುಮಾರು 03-30 ಗಂಟೆಗೆ PSI ಕುಮಾರೇಶನ್ ಅವರು ಸಿಬ್ಬಂದಿಗಳ ಜೊತೆ ಮಂಗಳೂರು ತಾಲೂಕು ತೆಂಕ ಎಡಪದವು ಗ್ರಾಮದ ದಡ್ಡಿ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭ ಮೂಡುಬಿದಿರೆಯ ಗಂಟಲಾಕಟ್ಟೆಯ ನಿವಾಸಿ ನಾಸೀರ್ ಯಾನೆ ನಾಚಿ ಮತ್ತು ಪಡುಕೊಣಾಜೆ ಗ್ರಾಮ ನೀರಲ್ಕೆ ನಿವಾಸಿ ಇಮ್ರಾನ್ ಇಬ್ರಾಹಿಂ ಎಂಬವರಿಂದ ದನ ಕಳವು ಮಾಡಲು…
ಕಡಬ: ಒಕ್ಕಲಿಗ ಸಮಾಜದ ಕಾರ್ಯಕ್ರಮವೊಂದರಲ್ಲಿ ನಾನು ಹೇಳಿದ್ದ ಒಂದು ಮಾತಿನಿಂದ ನನ್ನ ಸಿಎಂ ಸ್ಥಾನಕ್ಕೆ ಕುತ್ತು ಬಂತು ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ಹೇಳಿದ್ದಾರೆ. ಮಂಗಳವಾರ ಕಡಬದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾನು ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನ ಒಕ್ಕಲಿಗ ಮುಖಂಡರು ಸೇರಿ ಭೈರವೈಕ್ಯ ಆದಿಚುಂಚನಗಿರಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರಿಗಾಗಿ ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೆವು. “ನಾನು ಒಕ್ಕಲಿಗ ಸಮುದಾಯದಲ್ಲಿ ಹುಟ್ಟಿ ಆದಿಚುಂಚನಗಿರಿ ಸ್ವಾಮೀಜಿಯವರ ಆಶೀರ್ವಾದ ಪಡೆದು ರಾಜ್ಯದ ಮುಖ್ಯಮಂತ್ರಿಯಾಗಿದ್ದೇನೆ” ಎಂದು ಹೇಳಿದ್ದೇ ನನ್ನ ಸ್ಥಾನಕ್ಕೆ ಮುಳುವಾಯಿತು ಎಂದು ಬೇಸರ ವ್ಯಕ್ತಪಡಿಸಿದರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವಂತೆ ಮಾಡಿದ ಅಂದಿನ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಸದಾನಂದ ಗೌಡ ಅವರು ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ನಾನು ಚುನಾವಣೆಗೆ ಸ್ಪರ್ಧಿಸುವುದರಿಂದ ನಿವೃತ್ತನಾಗುತ್ತಿದ್ದೇನೆ, ನನಗೆ ಇನ್ನು ಯಾವ ಚುನಾವಣೆಗಳಲ್ಲಿ ಸ್ಪರ್ಧಿಸುವ ಇಚ್ಛೆ ಇಲ್ಲ. ಆದರೂ ಪಕ್ಷದ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದೇನೆ. ಆದರೆ ಈಗಿನ ರಾಜಕೀಯ ವ್ಯವಸ್ಥೆಯನ್ನು ಸಹಿಸಲಾಗದಿದ್ದರೂ ಪಕ್ಷವೇ ನನ್ನ ಸರ್ವಸ್ವ ಎಂದು ಹೇಳುತ್ತೇನೆ ಎಂದರು.…
ಮಂಗಳೂರು : ದ.ಕ.ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮತ್ತೋರ್ವರು ಬಲಿಯಾಗಿದ್ದಾರೆ. ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದ 51 ವರ್ಷದ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾರೆ. ಮಂಗಳೂರು ನಿವಾಸಿಯಾಗಿದ್ದ ಇವರು ಡಿ.22ರಂದು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಇವರಿಗೆ ಕೊರೊನಾ ಸೋಂಕು ದೃಢಗೊಂಡಿತ್ತು. ಜ್ವರ, ಕಫ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಹಿಂದೆ ಪಾರ್ಶ್ವವಾಯು ಪೀಡಿತರಾಗಿದ್ದ ಇವರಿಗೆ ಬಿ.ಪಿ, ಅಸ್ತಮಾ ಸಮಸ್ಯೆಯೂ ಇತ್ತು. ಹೀಗೆ ಅನೇಕ ಕಾಯಿಲೆಯಿಂದ ಬಳಲುತ್ತಿದ್ದ ಇವರು ಕೊರೊನಾ ಸೋಂಕು ಉಲ್ಬಣಗೊಂಡು ಮೃತಪಟ್ಟಿದ್ದಾರೆ. ಸದ್ಯ ಮೃತರ ಮನೆಯಲ್ಲಿರುವ ಮೂವರು ಕುಟುಂಬ ಸದಸ್ಯರ ಮೇಲೆ ಆರೋಗ್ಯ ಇಲಾಖೆ ನಿಗಾ ಇರಿಸಿದೆ. ಸೋಂಕಿನ ಲಕ್ಷಣ ಕಂಡು ಬಂದಲ್ಲಿ ತಪಾಸಣೆ ಮಾಡಬೇಕೆಂದು ಸೂಚಿಸಲಾಗಿದೆ. ಅಲ್ಲದೆ, ಕೊರೊನಾ ಸೋಂಕು ದೃಢಗೊಂಡಲ್ಲಿ ಹೋಮ್ ಕ್ವಾರಂಟೈನ್ ಆಗಬೇಕೆಂದು ಸೂಚಿಸಲಾಗಿದೆ. ಸದ್ಯ ದ.ಕ.ಜಿಲ್ಲೆಯಲ್ಲಿ ಎಂಟು ಮಂದಿ ಕೊರೊನಾ ಸೋಂಕಿತರಿದ್ದಾರೆ.










