ಹೊಸ ಮನೆಯ ಮೇಲ್ಛಾವಣಿ ಕಾಮಗಾರಿ ವೇಳೆ ಆಯತಪ್ಪಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಆಲಂಕಾರು ಗ್ರಾಮದ ಬಾರ್ಕುಲಿ ನಿವಾಸಿ ಉದಯ ಕುಮಾರ್ (27) ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಆಲಂಕಾರು ಗ್ರಾಮದ ಬಾರ್ಕುಲಿ ನಿವಾಸಿ ಉದಯ ಕುಮಾರ್ (27) ಮೃತ ಯುವಕ. ಮಂಗಳವಾರ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ನ. 12ರಂದು ಕಾಮಗಾರಿ ನಡೆಯುತ್ತಿದ್ದ ಅವರ ನೂತನ ಮನೆಯ ಮೇಲ್ಛಾವಣಿಗೆ ತೆರಳಿ ಕೆಳಗಿಳಿಯುತ್ತಿದ್ದಾಗ ಆಯ ತಪ್ಪಿ ಕೆಳಗೆ ಬಿದ್ದು ಕುತ್ತಿಗೆಯ ಭಾಗದಲ್ಲಿ ಗಂಭೀರ ಗಾಯವಾಗಿದ್ದು.ತತ್ಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿತ್ತು. ಬಳಿಕ ಮಂಗಳೂರು ವೆನ್ಲಾಕ್ ಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ ಮಂಗಳವಾರ ಸಂಜೆ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದರು. ಅವರು ವಿವಿಧ ಸಂಘಟನೆಗಳಲ್ಲಿ ಸಕ್ರಿಯ ಸದಸ್ಯರಾಗಿದ್ದುಕೊಂಡು ಸಮಾಜಸೇವಕರಾಗಿದ್ದರು. ಓರ್ವ ಸಹೋದರ, ಸಹೋದರಿಯನ್ನು ಅಗಲಿದ್ದಾರೆ.
Author: main-admin
ಬಂಟ್ವಾಳ: ರಸ್ತೆ ದಾಟುತ್ತಿದ್ದಾಗ KSRTC ಬಸ್ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಮಿತ್ತ ಬೈಲು ಎಂಬಲ್ಲಿ ನಡೆದಿದೆ. ಡಿಸೆಂಬರ್ 25 ರಂದು ರಾತ್ರಿ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಮಿತ್ತ ಬೈಲು ಎಂಬಲ್ಲಿ ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಬಂದ KA-21-F-0218 ನೇ KSRTC ಬಸ್ಸನ್ನು ಅದರ ಚಾಲಕ ರಾಮಕೃಷ್ಣ ಎಂಬವರು ದುಡುಕುತನ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದು ಮಂಗಳೂರು-ಬೆಂಗಳೂರು ರಾಷ್ಟೀಯ ಹೆದ್ದಾರಿಯನ್ನು ದಾಟುತ್ತಿದ್ದ ಅಪರಿಚಿತ ಪಾದಚಾರಿಯೊಬ್ಬರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಪಾದಚಾರಿಯು ಡಾಮಾರು ರಸ್ತೆಗೆ ಎಸೆಯಲ್ಪಟ್ಟು ಬಿದ್ದು ಆತನ ತಲೆಗೆ ರಕ್ತಗಾಯ, ಕೈ ಕಾಲುಗಳಿಗೆ ತರಚಿದ ಗಾಯಗೊಂಡಿರುತ್ತಾರೆ. ಸದ್ರಿ ಅಪರಿಚಿತ ಗಾಯಾಳುವನ್ನು ಚಿಕಿತ್ಸೆ ಬಗ್ಗೆ ಬಂಟ್ವಾಳ ನಿವಾಸಿ ಅಬ್ದುಲ್ ಸಮದ್ ಎಂಬವರು ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿಯ ವೈದ್ಯರು ಪರೀಕ್ಷಿಸಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆ ಬಗ್ಗೆ ವೈದ್ಯರ ಸಲಹೆಯಂತೆ ಮಂಗಳೂರು ಜಿಲ್ಲಾ…
ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದ ಇಬ್ಬರು ಮಕ್ಕಳ ಶವಗಳನ್ನು ಪೋಷಕರು ಉಪ್ಪಿನ ಗುಡ್ಡೆಯಲ್ಲಿ ಹೂತಿಟ್ಟು ಬದುಕಿಸಲು ಯತ್ನಿಸಿದ ವಿಚಿತ್ರ ಘಟನೆ ತಾಲೂಕಿನ ಘಾಳಪುಜಿ ಗ್ರಾಮದಲ್ಲಿ ನಡೆದಿದ್ದು, ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಯ್ಯನಕೆರೆಯಲ್ಲಿ ಭಾನುವಾರ ಈಜಲು ಹೋಗಿದ್ದನಾಗರಾಜ ಲಂಕೇರ(11) ಮತ್ತು ಹೇಮಂತ ಹರಿಜನ(12) ಎಂಬ ಇಬ್ಬರು ಬಾಲಕರು ಮುಳುಗಿ ಮೃತಪಟ್ಟಿದ್ದರು. ಕೆಲ ದಿನಗಳಿಂದ ನೀರಲ್ಲಿ ಮುಳುಗಿಸತ್ತವರನ್ನು ಉಪ್ಪಿನಲ್ಲಿ ಮುಚ್ಚಿಟ್ಟರೆ ಬದುಕುತ್ತಾರೆ ಎಂಬ ವಿಡಿಯೊ ಹಿಂದೆ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು ಇದನ್ನೇ ನಂಬಿಕೊಂಡು ಹಲವು ದಿನಗಳಿಂದ ಕೂಡ, ಇದೇ ರೀತಿಯ ಘಟನೆ ನಡೆಯುತ್ತಿದ್ದಾವೆ. ಈ ನಡುವೆ ಭಾನುವಾರ ಕೂಡ ನೀರಿಗೆ ಬಿದ್ದು ಸಾವನ್ನಪ್ಪಿದ್ದ ಮಕ್ಕಳು ಕೂಡ ಸಾವನ್ನಪ್ಪಿದ್ದವರು. ಈ ನಡುವೆ ವೈರಲ್ ಸುಳ್ಳು ಮಾಹಿತಿಯನ್ನು ನಂಬಿದ ಪೋಷಕರು ಮಕ್ಕಳ ಮೃತದೇಹಗಳನ್ನು ಕೆರೆಯಿಂದ ಹೊರ ತೆಗೆದು ಕ್ವಿಂಟಾಲ್ಗಟ್ಟಲೇ ಉಪ್ಪಿನ ರಾಶಿಯಲ್ಲಿ ಸತತ 6 ತಾಸು ಇಟ್ಟು ಬದುಕಿಸಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ. ಭಾನುವಾರ ರಾತ್ರಿ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡ ಪೋಲಿಸ್ ಸಿಬ್ಬಂದಿ ಮೃತ ಬಾಲಕರ…
ಮುಂಬೈನ ಆರ್ಬಿಐ ಕಚೇರಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಎಚ್ಡಿಎಫ್ಸಿ ಬ್ಯಾಂಕ್ ಮತ್ತು ಐಸಿಐಸಿಐ ಬ್ಯಾಂಕ್ ಅನ್ನು ಗುರಿಯಾಗಿಸಿಕೊಂಡು ಬೆದರಿಕೆ ಹಾಕಲಾಗಿದ್ದು, ಸಂಭಾವ್ಯ ಬಾಂಬ್ ದಾಳಿಯನ್ನು ಸೂಚಿಸುತ್ತದೆ. ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಜೀನಾಮೆ ನೀಡಬೇಕು ಎಂದು ಇಮೇಲ್ನಲ್ಲಿ ಒತ್ತಾಯಿಸಲಾಗಿದೆ. ಮುಂಬೈನ 11 ಸ್ಥಳಗಳಲ್ಲಿ ಬಾಂಬ್ ಬೆದರಿಕೆ ಬಂದಿದ್ದು, ಮಧ್ಯಾಹ್ನ 1:30 ಕ್ಕೆ ಬಾಂಬ್ ಸ್ಫೋಟಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಮುಂಬೈನ ಇತರ ಎರಡು ಬ್ಯಾಂಕುಗಳಿಗೆ ಮಂಗಳವಾರ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ಬೆದರಿಕೆ ಇಮೇಲ್ ಸ್ವೀಕರಿಸಿದ ಇತರ ಎರಡು ಬ್ಯಾಂಕುಗಳು – ಎಚ್ಡಿಎಫ್ಸಿ ಮತ್ತು ಐಸಿಐಸಿಐ ಬ್ಯಾಂಕುಗಳು. ಬೆದರಿಕೆ ಇಮೇಲ್ ಕಳುಹಿಸಿದ ಐಡಿ – khilafat.india@gmail.com ಆಗಿದೆ. “ನಾವು ಮುಂಬೈನ ವಿವಿಧ ಸ್ಥಳಗಳಲ್ಲಿ “11” ಬಾಂಬ್ ಗಳನ್ನು ಇರಿಸಿದ್ದೇವೆ ಮತ್ತು ಖಾಸಗಿ ವಲಯದ ಬ್ಯಾಂಕುಗಳು ಭಾರತದ ಇತಿಹಾಸದಲ್ಲಿ ಅತಿದೊಡ್ಡ ಹಗರಣವನ್ನು ಕಾರ್ಯಗತಗೊಳಿಸಿವೆ” ಎಂದು ಇಮೇಲ್ನಲ್ಲಿ…
ರಾಜ್ಯದಲ್ಲಿ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧ, ಪ್ರತ್ಯೇಕ ಮಾರ್ಗಸೂಚಿ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದರು. ಇಂದು ವಿಧಾನಸೌಧದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದ ಅವರು ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧ, ಪ್ರತ್ಯೇಕ ಮಾರ್ಗಸೂಚಿ ಇಲ್ಲ. ಹಾಗಂತ ಎಚ್ಚರ ವಹಿಸದೇ ಇರಬೇಡಿ. ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ ಮಾಡಿಲ್ಲ, ಜನರು ಸ್ವಯಂ ಪ್ರೇರಿತವಾಗಿ ಮಾಸ್ಕ್ ಧರಿಸಬೇಕು. ಇದುವರೆಗೆ ಕೊರೊನಾ ಸೋಂಕಿಗೆ 7 ಮಂದಿ ಮೃತಪಟ್ಟಿದ್ದಾರೆ, 36 ಜನರಿಗೆ ಜೆಎನ್ 1 ಸೋಂಕು ತಗುಲಿರುವುದು ಧೃಡವಾಗಿದೆ. ಮಕ್ಕಳಿಗೆ ಶೀತ, ಜ್ವರ ಬಂದರೆ ಶಾಲೆಗಳಿಗೆ ಕಳುಹಿಸಬೇಡಿ. ನ್ಯೂ ಇಯರ್ ಗೆ ಯಾವುದೇ ಗೈಡ್ ಲೈನ್ಸ್ ಇರುವುದಿಲ್ಲ. ಕೋವಿಡ್ ಸೋಂಕಿತರು 1 ವಾರ ಮನೆಯಲ್ಲಿರಬೇಕು. ಕೊರೊನಾ ಸೋಂಕು ತಗುಲಿದರೆ ಉದ್ಯೋಗಿಗಳಿಗೆ ಕಡ್ಡಾಯವಾಗಿ ರಜೆ ಕೊಡಬೇಕು ಎಂಬ ಆದೇಶವನ್ನು ಶೀಘ್ರವೇ ಹೊರಡಿಸಲಾಗುತ್ತದೆ. ಕೊರೊನಾ ಸೋಂಕಿತರ ಮೇಲೆ ಆರೋಗ್ಯ ಇಲಾಖೆ ಅಧಿಕಾರಗಳು ತೀವ್ರ ನಿಗಾ ವಹಿಸಿದ್ದಾರೆ. ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಐಸಿಯು, ಬೆಡ್…
ಉಪ್ಪಿನಂಗಡಿ : ಕಾರುಗಳ ನಡುವೆ ಸರಣಿ ಅಪಘಾತವಾದ ಘಟನೆ ಉಪ್ಪಿನಂಗಡಿ ಬಳಿಯ ನೇತ್ರಾವತಿ ಸೇತುವೆಯಲ್ಲಿ ನಡೆದಿದ್ದು ಉಪ್ಪಿನಂಗಡಿಯಲ್ಲಿ ತೀವ್ರ ಟ್ರಾಫಿಕ್ ಜಾಮ್ ಉಂಟಾಗಿತ್ತು. ಗುರುವಾಯನಕೆರೆ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರೊಂದು ಹಠಾತ್ ಬ್ರೇಕ್ ಹಾಕಿದ್ದು, ಈ ವೇಳೆ ಒಂದರ ಹಿಂದೆ ಒಂದರಂತೆ ಒಟ್ಟು ನಾಲ್ಕು ಕಾರುಗಳು ಡಿಕ್ಕಿ ಹೊಡೆದಿವೆ. ಅಪಘಾತದಿಂದ ಕಾರುಗಳಿಗೆ ಹಾನಿಯಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಸಕಾಲದಲ್ಲಿ ಆಗಮಿಸಿದ ಉಪ್ಪಿನಂಗಡಿ ಪೊಲೀಸರು ಟ್ರಾಫಿಕ್ ನಿಯಂತ್ರಿಸಿ, ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.
ನವದೆಹಲಿ: ಸಿಮ್ ಕಾರ್ಡ್ಗಳ ಖರೀದಿ ಮತ್ತು ಮಾರಾಟದ ನಿಯಮಗಳನ್ನು ಬದಲಾಯಿಸಲು ಭಾರತ ಸರ್ಕಾರ ಸಜ್ಜಾಗಿದೆ ಎಂದು ವರದಿಯಾಗಿದೆ. ಈ ವರ್ಷ 2023 ರಲ್ಲಿ ಸ್ಪ್ಯಾಮ್, ವಂಚನೆಗಳು ಮತ್ತು ಆನ್ಲೈನ್ ವಂಚನೆಗಳ ಹೆಚ್ಚುತ್ತಿರುವ ಪ್ರಕರಣಗಳಿಗೆ ಸಾಕ್ಷಿಯಾದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. SIM ಕಾರ್ಡ್ ಸ್ವಾಧೀನ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ತರುವ ಮೂಲಕ ಹೊಸ ನಿಯಂತ್ರಣವನ್ನು ಜನವರಿ 1, 2024 ರಿಂದ ಜಾರಿಗೆ ತರಲಾಗುತ್ತದೆ. ಆನ್ಲೈನ್ ವಂಚನೆಯಿಂದ ಬಳಕೆದಾರರನ್ನು ರಕ್ಷಿಸಲು ಹೊಸ ನಿಯಮ ಭಾರತದಲ್ಲಿ ಸ್ಮಾರ್ಟ್ಫೋನ್ ಬಳಕೆ ಹೆಚ್ಚಾದಂತೆ, ಆನ್ಲೈನ್ ವಂಚನೆ ಮತ್ತು ವಂಚನೆಗಳು ಹೆಚ್ಚಿವೆ ಮತ್ತು ಸಮಾನಾಂತರ ಹೆಚ್ಚಳವನ್ನು ಕಂಡಿವೆ. ಈ ಸಮಸ್ಯೆಗಳಿಗೆ ಕಡಿವಾಣ ಹಾಕಲು ಸರ್ಕಾರ ನಿರ್ಣಾಯಕ ನಿಲುವು ತಳೆಯುತ್ತಿದೆ. ನಕಲಿ ಸಿಮ್ಗಳಿಗೆ ಕಾನೂನು ಪರಿಣಾಮಗಳು ಹೊಸ ದೂರಸಂಪರ್ಕ ಮಸೂದೆಯ ಪ್ರಕಾರ, ನಕಲಿ ಸಿಮ್ ಕಾರ್ಡ್ಗಳನ್ನು ಖರೀದಿಸುವ ವ್ಯಕ್ತಿಗಳು ತೀವ್ರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಮತ್ತು ಅಪರಾಧಿಗಳಿಗೆ 3 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 50 ಲಕ್ಷ ರೂಪಾಯಿ ಮೌಲ್ಯದ ದಂಡವನ್ನು…
ಮಂಗಳೂರು: ಕೋಣೆಯೊಳಗೆ ಬಾಕಿಯಾದ ಮಗುವನ್ನು ಪಾಂಡೇಶ್ವರ ಅಗ್ನಿಶಾಮಕ ಠಾಣೆಯವರು ರಕ್ಷಣೆ ಮಾಡಿದ ಘಟನೆ ಮಂಗಳೂರಿನ ಕೊಡಿಯಾಲ್ ಗುತ್ತಿನ ಫ್ಲ್ಯಾಟ್ ವೊಂದರಲ್ಲಿ ಸೋಮವಾರ ನಡೆದಿದೆ. ಸುಮಾರು 3 ವರ್ಷದ ಮಗು ಆಟವಾಡುತ್ತಾ ನಾಲ್ಕನೇ ಮಹಡಿಯ ಫ್ಲ್ಯಾಟ್ ನ ಕೋಣೆಯ ಬಾಗಿಲಿನ ಚಿಲಕವನ್ನು ಹಾಕಿಕೊಂಡಿದೆ. ಗಾಬರಿಗೊಂಡ ಪೋಷಕರು ಎಷ್ಟೇ ಪ್ರಯತ್ನಿಸಿದರು ಬಾಗಿಲು ತೆಗೆಯಲು ಸಾಧ್ಯವಾಗಿರಲಿಲ್ಲ. ಬಳಿಕ ಪಾಂಡೇಶ್ವರ ಠಾಣೆಯ ಅಗ್ನಿಶಾಮಕ ಅಧಿಕಾರಿ ರಾಜಾ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಅವರು ಹಗ್ಗದ ಮೂಲಕ 4ನೇ ಮಹಡಿಯ ಮೇಲಿನಿಂದ ಮಗುವಿದ್ದ ಕೋಣೆಯ ಒಳಗೆ ತೆರಳಿ ಮಗುವನ್ನು ರಕ್ಷಣೆ ಮಾಡಿದ್ದಾರೆ.
ಮಂಗಳೂರಿನ ಸೋಮೇಶ್ವರ ದೇವಸ್ಥಾನ ಬಳಿ ನಿಂತಿದ್ದ ಕೇರಳ ಮೂಲದ ಅನ್ಯಕೋಮಿನ ವಿದ್ಯಾರ್ಥಿಗಳ ತಡೆದು ಸ್ಥಳೀಯ ಯುವಕರು ವಿಚಾರಣೆ ನಡೆಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಉಳ್ಳಾಲ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದ ನಾಲ್ವರು ರಜೆ ಹಿನ್ನಲೆ ಉಳ್ಳಾಲ ಸೋಮೇಶ್ವರ ದೇವಸ್ಥಾನಕ್ಕೆ ತೆರಳಿ ಸುತ್ತಮುತ್ತ ಓಡಾಡುತ್ತಿದ್ದರು. ಈ ತಂಡದಲ್ಲಿ ಇಬ್ಬರು ಹಿಂದೂ ಯುವತಿಯರು, ಓರ್ವ ಹಿಂದೂ ಯುವಕ ಮತ್ತು ಓರ್ವ ಮುಸ್ಲಿಂ ಯುವಕ ಇದ್ದಿದ್ದು, ದೇವಸ್ಥಾನಕ್ಕೆ ಆಗಮಿಸಿ ಸ್ಥಳೀಯವಾಗಿ ಸುತ್ತಾಡುತ್ತಿದ್ದ ಅವರನ್ನು ಸ್ಥಳೀಯರು ತಡೆದು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಮುಸ್ಲಿಂ ಯುವಕನ ಜೊತೆ ಇದ್ದ ಹಿಂದೂ ಯುವತಿಯ ತಡೆದು ಪ್ರಶ್ನೆ ಮಾಡಿದ ವೇಳೆ ಮುಸ್ಲಿಂ ಯುವಕ ದೇವಸ್ಥಾನಕ್ಕೆ ತೆರಳಿ ಹಣೆಗೆ ಗಂಧ ಹಚ್ಚಿಕೊಂಡು ಬಂದಿರುವುದು ತಿಳಿದು ಬಂದಿದೆ. ಈ ವೇಳೆ ಅನ್ಯಕೋಮಿನ ಜೋಡಿ ಎಂದು ಗೊತ್ತಾದ ಹಿನ್ನೆಲೆ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿ ಪೊಲೀಸರು ಯುವಕ-ಯುವತಿಯನ್ನ ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ವಿಚಾರಣೆ ನಡೆಸಿ…
ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವಂತ ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ಪ್ರತಿ ತಿಂಗಳು 3000 ಧನಸಹಾಯ ನೀಡಲಾಗುತ್ತಿದೆ. ಆದ್ರೇ ಅನೇಕ ಮಹಿಳೆಯರಿಗೆ ತಾಂತ್ರಿಕ ಸಮಸ್ಯೆಯಿಂದಾಗಿ ಈ ಹಣ ತಲುಪಿಲ್ಲ. ಹೀಗಾಗಿ ಡಿ.27ರ ನಾಳೆಯಿಂದ ಮೂರು ದಿನಗಳ ಕಾಲ ರಾಜ್ಯದ ಎಲ್ಲಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಸಮಸ್ಯೆ ನಿವಾರಣೆಗೆ ವಿಶೇಷ ಶಿಬಿರವನ್ನು ಆಯೋಜಿಸಲಾಗಿದೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ಹಂಚಿಕೊಂಡಿದ್ದು, ರಾಜ್ಯದ ಅನೇಕ ಮಹಿಳೆಯರು ಗೃಹ ಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಕೆಲವರಿಗೆ ಯೋಜನೆಯಡಿ ಸಹಾಯಧನ ಸೌಲಭ್ಯ ದೊರೆತಿದ್ದರೇ, ಮತ್ತೆ ಕೆಲವರಿಗೆ ಸಿಕ್ಕಿಲ್ಲ. ಹೀಗಾಗಿ ತಾಂತ್ರಿಕ ಸಮಸ್ಯೆ ನಿವಾರಿಸಲು ಡಿಸೆಂಬರ್.27ರಿಂದ 29ರವರೆಗೆ ಮೂರು ದಿನಗಳ ಕಾಲ ಎಲ್ಲಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ವಿಶೇಷ ಶಿಬಿರವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ್ದಂತ ಮಹಿಳೆಯರು ಹೊಸ ಬ್ಯಾಂಕ್ ಖಾತೆ ಆರಂಭ, ಆಧಾರ್ ಜೋಡಣೆ, ಬ್ಯಾಂಕಿಗೆ ಸಂಬಂಧಿಸಿದಂತ ಸಮಸ್ಯೆ ಸೇರಿದಂತೆ ವಿವಿಧ…










