ಸುರತ್ಕಲ್: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಬೈಕಂಪಾಡಿಯ ಎಪಿಎಂಸಿಯಲ್ಲಿ ಹಲವು ವರ್ಷಗಳಿಂದ ಕೂಲಿ ಕೆಲಸ ಮಾಡಿಕೊಂಡಿದ್ದ ಕಾರ್ಮಿಕನ ಮೃತದೇಹ ಎಪಿಎಂಸಿ ಬಳಿ ಅನುಮಾನಸ್ಪಾದವಾಗಿ ಪತ್ತೆಯಾಗಿದೆ.ಮೃತ ವ್ಯಕ್ತಿಯನ್ನು ಓಡಿಸಾ ರಾಜ್ಯದ ಜಾವಪುರ್ ಜಿಲ್ಲೆಯ ರಶ್ಮಿ ರಂಜನ್ (44) ಎಂದು ಗುರುತಿಸಲಾಗಿದೆ. ಮೃತದೇಹದ ಬಲಕಾಲಿನ ಮಂಡಿಯ ಕೆಳಭಾಗದಲ್ಲಿ ಲಘುವಾಹನ ಗುದ್ದಿದ ಗುರುತುಗಳಿದ್ದು, ಹಿಟ್ ಅಂಡ್ ರನ್ ಕೇಸ್ ಇದಾಗಿರುವ ಸಾಧ್ಯತೆಗಳಿದ್ದು ಯಾವುದೋ ಅಪರಿಚಿತ ವಾಹನ ಡಿಕ್ಕಿಯಾಗಿ ಪರಾರಿಯಾಗಿರುವ ಸಾಧ್ಯತೆಗಳಿವೆ ಎನ್ನಲಾಗಿದೆ. ತೀವ್ರ ಗಾಯಗೊಂಡ ರಂಜನ್ ಅಪಘಾತಕ್ಕೀಡಾಗಿ ಮೃತ ಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಸದ್ಯ ಸ್ಥಳಕ್ಕೆ ಪಣಂಬೂರು ಮತ್ತು ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.
Author: main-admin
ಉಡುಪಿ: ಬ್ರಹ್ಮಗಿರಿ ಜಂಕ್ಷನ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಎಸ್. ಗೌತಮ್ ( 24), ಕುಕ್ಕಿಕಟ್ಟೆ ಮೀನು ಮಾರುಕಟ್ಟೆಯ ಬಳಿ ಗೌರವ ಜೆ. (26), ಶಾಂತಿನಗರದ ಬಳಿ ಜಗದೀಶ್ (31)ನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಫಾರೆನ್ಸಿಕ್ ವರದಿಯಲ್ಲಿ ಗಾಂಜಾ ಸೇವನೆ ದೃಢಪಟ್ಟಿದೆ. ಉಡುಪಿ ಸೆನ್ ಹಾಗೂ ಮಣಿಪಾಲ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ದೂರು ನೀಡಲು ಬಂದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ಸಂಕೇಶ್ವರ ಠಾಣೆಯ ಪಿಎಸ್ ಐ ಓರ್ವರನ್ನು ಅಮಾನತುಮಾಡಲಾಗಿದೆ. ಸಂಕೇಶ್ವರ ಪೊಲೀಸ್ ಠಾಣೆಯ ಪಿಎಸ್ ಐ ನರಸಿಂಹರಾಜು ಜೆ.ಡಿ ಅಮಾನತುಗೊಂಡವರು. ಕರ್ತವ್ಯ ಲೋಪ, ಅಶಿಸ್ತು, ದುರ್ನಡತೆ ಹಿನ್ನೆಲೆಯಲ್ಲಿ ಬೆಳಗಾವಿ ಎಸ್ ಪಿ, ನರಸಿಂಹರಾಜು ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಕೆಲ ದಿನಗಳ ಹಿಂದೆ ಮಹಿಳೆಯೊಬ್ಬರು ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪತಿ ವಿರುದ್ಧ ದೂರು ನೀಡಲು ಬಂದಿದ್ದರು. ಈ ವೇಳೆ ಈ ವೇಳೆ ಪಿಎಸ್ ಐ ನರಸಿಂಹರಾಜು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಲ್ಲದೇ, ಆಕೆಯ ಮೊಬೈಲ್ ನಂಬರ್ ಪಡೆದು ಕಿರುಕುಳ ನೀಡುತ್ತಿದ್ದ. ಇದರಿಂದ ನೊಂದ ಮಹಿಳೆ ಎಸ್ ಪಿ ಅವರಿಗೆ ದೂರು ನೀಡಿದ್ದರು. ಇದೀಗ ಪಿಎಸ್ ಐ ನರಸಿಂಹ ರಾಜು ಅವರನ್ನು ಸಸ್ಪೆಂಡ್ ಮಾಡಲಾಗಿದೆ.
ಮಂಗಳೂರಿನ ಪ್ರಮುಖ ರಸ್ತೆಯಾದ ಕೆಎಸ್ ರಾವ್ ರಸ್ತೆಯ ಸಿಟಿ ಸೆಂಟರ್ ಸಮೀಪ ಭೂಗತ ಕೆಬಲ್ ಆಳಡಿಸಲು ತೋಡಿದ್ದ ಗುಂಡಿಗೆ ಬೈಕ್ ಸವಾರನೊಬ್ಬ ಬೈಕ್ ಸಮೇತ ಬಿದ್ದು ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ ನಡೆದಿದೆ. ಸ್ಮಾರ್ಟ್ ಸಿಟಿಯಾದ ಮಂಗಳೂರಿನಲ್ಲಿ ರೋಡ್ ಗಳು ಸ್ಮಾರ್ಟ್ ಆದರೂ ಇನ್ನೂ ಕಾಂಕ್ರಿಟ್ ರಸ್ತೆ ಅಗೆದು ಕೇಬಲ್ ಆಳವಡಿಸುವ ಕಾರ್ಯ ನಡೆಯುತ್ತಿದೆ. ಮೆಸ್ಕಾಂ ಅವರ ಭೂಗತ ಕೇಬಲ್ ಆಳವಡಿಸುವ ಕಾರ್ಯ ನಗರಾದ್ಯಂತ ನಡೆಯುತ್ತಿದ್ದು, ಕೆಲವು ಕಡೆಗಳಲ್ಲಿ ರಸ್ತೆಗಳನ್ನು ಅಗೆದು ಯಾವುದೇ ಸುರಕ್ಷತೆ ಇಲ್ಲದೆ ಹಾಗೆ ಬಿಟ್ಟಿದ್ದಾರೆ. ಅಂತಹುದೇ ಒಂದು ಗುಂಡಿ ಮಂಗಳೂರಿನ ಸಿಟಿ ಸೆಂಟರ್ ಬಳಿ ಇದ್ದು, ಈ ಗುಂಡಿಗೆ ಬೈಕ್ ಸವಾರನೊಬ್ಬ ಬೈಕ್ ಸಮೇತ ಬಿದ್ದಿದ್ದಾನೆ. ಅದೃಷ್ಠವಶಾತ್ ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ಪಡೆದಿದ್ದಾರೆ. ನಗರದ ಜನನಿಬಿಡ ರಸ್ತೆಯಲ್ಲೇ ಈ ರೀತಿ ಅವೈಜ್ಞಾನಿಕವಾಗಿ ಗುಂಡಿ ತೋಡಿದ್ದು, ರಾತ್ರಿ ಸರಿಯಾಗಿ ಕಾಣೆದೆ ವಾಹನ ಸವಾರರು ಹೊಂಡಕ್ಕೆ ಬೀಳುವ ಸಾಧ್ಯತೆ ಇದೆ. ಸಂಬಂಧಪಟ್ಟವರು ಅದರ ಕಡೆ ಗಮನಹರಿಸಬೇಕೆಂದು ಸ್ಥಳೀಯರು…
ಮೂಡಬಿದ್ರಿಯಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಹಾಸ್ಟೆಲ್ ನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋದಾಗಿ ತಿಳಿದು ಬಂದಿದೆ. ಮೂಡಬಿದ್ರಿಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಹಾಸ್ಟೆಲ್ ನಲ್ಲಿ ಇಂದು ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಮನೋಜ್(18) ಎಂಬ ವಿದ್ಯಾರ್ಥಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ನಡೆದಿದೆ. ಮೃತ ಮನೋಜ್ ಗದಗ ಜಿಲ್ಲೆಯ ಮುಂಡರಗಿ ತಾಲೂಕಿ ತರ್ಚಿಹಾಳ ಗ್ರಾಮದ ಮಲ್ಲಪ್ಪ ಎಂಬುವರ ಪುತ್ರ ಎಂಬುದಾಗಿ ತಿಳಿದು ಬಂದಿದೆ. ಈ ವಿಷಯ ತಿಳಿದು ಪೋಷಕರು ನಾವು ಸ್ಥಳಕ್ಕೆ ಆಗಮಿಸೋವರೆಗೆ ಪುತ್ರನ ಶವವನ್ನು ಇಳಿಸದಂತೆ ಆಗ್ರಹಿಸಿದ್ದಾರೆ. ಈ ವಿಷಯ ತಿಳಿದು ಮೂಡಬಿದ್ರಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ದೂರು ದಾಖಲಿಸಿಕೊಂಡಿದ್ದಾರೆ. ಮನೋಜ್ ಸಾವಿನ ಬಗ್ಗೆ ಪೋಷಕರು ಅನುಮಾನವನ್ನು ವ್ಯಕ್ತಪಡಿಸಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದ್ದು, ಯಾರ ಖಾತೆಗೆ ಹಣ ಬಂದಿಲ್ಲ ಅವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗೃಹಲಕ್ಷ್ಮಿ ಯೋಜನೆಗಳ ಸಮಸ್ಯೆ ನಿವಾರಿಸಲು ಸರ್ಕಾರ ಬಿಗ್ ಪ್ಲ್ಯಾನ್ ಮಾಡಿದ್ದು, ಡಿ.27 ರಿಂದ ಡಿ.29 ರವರೆಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ಯಾಂಪ್ ನಡೆಸಲು ಸುತ್ತೋಲೆ ಹೊರಡಿಸಲಾಗಿದೆ. ಪಿಡಿಒಗಳ ನೇತೃತ್ವದಲ್ಲಿ ಕ್ಯಾಂಪ್ ಆಯೋಜನೆಯಾಗಲಿದ್ದು, ಈ ಕ್ಯಾಂಪ್ ನಲ್ಲಿ ಫಲಾನುಭವಿಗಳ ಸಮಸ್ಯೆ ಸರಿಪಡಿಸಲಾಗುತ್ತದೆ.ಪ್ರತಿ ಗ್ರಾಮ ಪಂಚಾಯತ್ ನಲ್ಲಿ ಕ್ಯಾಂಪ್ ನಡೆಯಲಿದ್ದು, ಸ್ಥಳೀಯ ಬಾಪೂಜಿ ಸೇವಾ ಕೇಂದ್ರದ ಕಂಪ್ಯೂಟರ್ ಆಪರೇಟರ್ ಗಳು, ಅಂಗನವಾಡಿ ಕಾರ್ಯಕರ್ತರು ಭಾಗಿಯಾಗುವಂತೆ ಸೂಚಿಸಲಾಗಿದೆ. ಪ್ರತಿ ಗ್ರಾಮ ಪಂಚಾಯತ್ ನಲ್ಲಿ ಡಿ.27 ರಿಂದ ಡಿ. 29 ರವರೆಗೆ ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ಕ್ಯಾಂಪ್ ಆಯೋಜಿಸುವಂತೆ ಸೂಚನೆ ನೀಡಲಾಗಿದೆ.
ಮಂಗಳೂರು :ಬೈಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಘಟನೆಯಲ್ಲಿ ಓರ್ವ ಮಹಿಳೆ ಮತ್ತು ಮಗು ಅಪಾಯದಿಂದ ಪಾರಾಗಿದ್ದು, ಫರಂಗೀಪೇಟೆ ಸಮೀಪದ ಅರ್ಕುಳ ದ್ವಾರದ ಬಳಿ ಇಂದು ನಡೆದಿದೆ. ಕುಕ್ಕಾಜೆ ನಿವಾಸಿ ಹಂಝ ಯಾನೆ ರಮ್ಲಾನ್ ಎಂಬವರು ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಇವರು ಮಂಗಳೂರು ಕಡೆಯಿಂದ ಬರುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಬಸ್ ಡಿಕ್ಕಿ ಹೊಡೆದಿದೆ. ಈ ವೇಳೆ ಹಂಝ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಇನ್ನು ಇದೇ ಬೈಕ್ ನಲ್ಲಿ ರಮ್ಲಾನ್ ಅವರ ಪತ್ನಿ ರೈಹಾನ ಮತ್ತು ಅವರ ಮಗು ಇದ್ದು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳೀಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಬಗ್ಗೆ ಪ್ರಕರಣ ದಾಖಲಾಗಿದೆ.
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಬಿ.ಸಿ.ರೋಡ್ ನ ಅಜ್ಜಿಬೆಟ್ಟು ಶಾಲಾ ಮೈದಾನದ ಬಳಿಯ ಅಂಗಡಿಯೊಂದರಲ್ಲಿದ್ದ ಮಹಿಳೆಯೋರ್ವರ ಕುತ್ತಿಗೆಯಿಂದ ಚಿನ್ನದ ಸರ ಕಸಿದ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಬೈಕಂಪಾಡಿಯ ಅಶೋಕ, ಮಂಗಳೂರು ದಂಬೇಲ್ ನಿವಾಸಿ ಸಚಿನ್ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಒಂದೂವರೆ ಪವನಿನ ಚಿನ್ನದ ಸರ ಮತ್ತು ಬೈಕನ್ನು ವಶಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಡಿ.14 ರಂದು ಬಿ.ಸಿ.ರೋಡಿನ ಅಜ್ಜಿಬೆಟ್ಟು ಶಾಲಾ ಮೈದಾನದ ಬಳಿರುವ ಅಂಗಡಿಯೊಂದಕ್ಕೆ ಬಂದ ಆರೋಪಿಗಳು ಅಂಗಡಿ ಮಾಲಕಿ ಸರೋಜಿನಿ ಅವರ ಕುತ್ತಿಗೆಯಿಂದ ಚೈನ್ ಎಗರಿಸಿ ಪರಾರಿಯಾಗಿದ್ದರು. ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಬಂಟ್ವಾಳ ಉಪ ವಿಭಾಗದ ಡಿವೈಎಸ್ಪಿ ವಿಜಯ ಪ್ರಸಾದ್ ಅವರ ನಿರ್ದೇಶನದಂತೆ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ ಅವರ ಮಾರ್ಗದರ್ಶನದಲ್ಲಿ ಪಿ.ಎಸ್.ಐ ಗಳಾದ ರಾಮಕೃಷ್ಣ, ಕಲೈಮಾರ್ ಮತ್ತವರ ಸಿಬ್ಬಂದಿ ಇರ್ಷಾದ್, ರಾಜೇಶ್, ಗಣೇಶ್, ಮೋಹನ, ವಿವೇಕ್ ಅವರು ಬೆಂಜನಪದವಿನ ಕರಾವಳಿ ಸೈಟ್ ಬಳಿ ನಡೆಸಿದ ಕಾರ್ಯಾಚರಣೆಯಲ್ಲಿ…
ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ನಿರುದ್ಯೋಗಿ ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡುವ ‘ಯುವನಿಧಿ’ ಯೋಜನೆಯನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ನಿರ್ದೇಶನ ನೀಡಿದರು. ಯುವನಿಧಿ ಅನುಷ್ಠಾನ ಹಿನ್ನೆಲೆಯಲ್ಲಿ ಕೌಶಲ್ಯಾಭಿವೃದ್ದಿ, ಜೀವನೋಪಾಯ ಹಾಗೂ ಉದ್ಯಮಶೀಲತೆ ಇಲಾಖೆಯ ಸಚಿವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಜರುಗಿದ ವಿಡಿಯೋ ಕಾನ್ಫರೆನ್ಸ್ ಸಭೆಯ ಬಳಿಕ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಈ ವಿಷಯ ತಿಳಿಸಿದರು. ಬೆಳಗಾವಿ ಜಿಲ್ಲೆಯಲ್ಲಿ 2023 ರ ವರ್ಷದಲ್ಲಿ ತೇರ್ಗಡೆಯಾದ ದಿನಾಂಕದಿಂದ 180 ದಿನಗಳು ಕಳೆದರೂ ಉದ್ಯೋಗ ಲಭಿಸದ ಪದವೀಧರರು ಮತ್ತು ಡಿಪ್ಲೋಮಾ ಪಡೆದ ನಿರುದ್ಯೋಗಿ ವಿದ್ಯಾವಂತರಿಗೆ ಕರ್ನಾಟಕ ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆಯನ್ನು ಪಾವತಿಸಲಾಗುವುದು ಎಂದು ತಿಳಿಸಿದರು. ಡಿಸೆಂಬರ್ 26 ರಿಂದ ಸೇವಾಸಿಂಧು ಪೋರ್ಟಲ್ ಮೂಲಕ ಈ ಯೋಜನೆಗೆ ಅರ್ಜಿಗಳನ್ನು ಸಲ್ಲಿಸಬಹುದು. ಜನವರಿ 2024 ರಿಂದ ಯೋಜನೆ ಜಾರಿಗೊಳ್ಳಲಿದ್ದು, ಅರ್ಹ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ನಿರುದ್ಯೋಗ ಭತ್ಯೆ ದೊರೆಯಲಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ…
ಮಂಗಳೂರಿಗೆ ಸೌದಿ ಅರೆಬಿಯಾದಿಂದ ಕಚ್ಚಾ ತೈಲ ಹೊತ್ತು ಬರುತ್ತಿದ್ದ MV Chem Pluto ಹಡಗಿನ ಮೇಲೆ ಶನಿವಾರ ದ್ರೋನ್ ದಾಳಿ ನಡೆದಿದ್ದು ಅದರಲ್ಲಿದ್ದ 20 ಮಂದಿ ಅಪಾಯದಿಂದ ಪಾರಾಗಿರುವುದಾಗಿ ವರದಿಯಾಗಿದೆ. ಪೂರ್ಬಂದರ್ ಕರಾವಳಿಯಿಂದ 217ನಾಟಿಕಲಗ್ ಮೈಲ್ ದೂರದಲ್ಲಿ ದಾಳಿ ನಡೆದಿದ್ದು ಆ ವೇಳೆ ದೊಡ್ಡ ಸ್ಫೋಟದ ಶಬ್ದ ಕೇಳಿಸಿದೆ. ಕೂಡಲೇ ಗಸ್ತು ತಿರುಗುತ್ತಿದ್ದ ಕರಾವಳಿ ಕಾವಲು ಪಡೆ ನೌಕೆ ನೆರವಿಗೆ ಧಾವಿಸಿದೆ. ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಅದನ್ನು ನಂದಿಸಲಾಗಿದೆ. ಆದರೆ ಹಡಗಿನ ಕಾರ್ಯನಿರ್ವಹಣೆಗೆ ಅಡ್ಡಿಯಾಗಿರುವುದಾಗಿ ವರದಿಯಾಗಿದೆ.










