Author: main-admin

ಮಂಗಳೂರು: ನಗರದಲ್ಲಿ ಕೇರಳದ ಜೋಡಿಗಳ ಮೇಲೆ ನೈತಿಕ ಪೊಲೀಸ್ ಗಿರಿ ನಡೆದಿರುವ ಪ್ರಕರಣದಲ್ಲಿ ಮೂವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ನಿವಾಸಿ ಸಂದೇಶ್ (28) ಪ್ರಶಾಂತ್ (31) ಮತ್ತು ರೋನಿತ್ (31) ಬಂಧಿತ ಆರೋಪಿಗಳು. ಡಿಸೆಂಬರ್ 21ರಂದು ಮಧ್ಯಾಹ್ನ 1ಗಂಟೆ ಸುಮಾರಿಗೆ ಈ ಘಟನೆ ನಡೆದಿತ್ತು. ಹಂಪನಕಟ್ಟೆಯ ಗುಡ್ ಟೈಮ್ ಶಾರ್ಟ್ ಈಟ್ಸ್ ಶಾಪ್ ಬಳಿ ಕೇರಳದ ಯುವಕ ಮತ್ತು ಯುವತಿಯನ್ನು ಸಂದೇಶ್ ಎಂಬಾತ ತಡೆದಿದ್ದಾನೆ. ಯುವಕ ಮುಸ್ಲಿಂ ಹಾಗೂ ಹಿಂದೂ ಯುವತಿ ಎಂದು ಪರಿಶೀಲಿಸುವ ನೆಪದಲ್ಲಿ ಅವರ ಮೇಲೆ ಕೂಗಾಡಿ ಐಡಿ ಕಾರ್ಡ್ ಕೇಳಿದ್ದಾನೆ. ಈ‌ ಸಂದರ್ಭ ಯುವಕ ಹಾಗೂ ಯುವತಿ ಆಟೋ ರಿಕ್ಷಾವನ್ನು ಹತ್ತಿ ಅಲ್ಲಿಂದ ತೆರಳಲು ಯತ್ನಿಸಿದ್ದಾರೆ. ಆಗ ಆಟೋ ನಿಲ್ಲಿಸಲು ಯತ್ನಿಸಿದ ಸಂದೇಶ್ ಆಟೋ ಚಾಲಕನಿಗೂ ಗದರಿಸಿದ್ದಾನೆ. ಅಷ್ಟರಲ್ಲಿ ಇನ್ನಿಬ್ಬರು ಮಧ್ಯ ಪ್ರವೇಶಿಸಿದ್ದಾರೆ. ತಮ್ಮನ್ನು ರೈಲ್ವೇ ನಿಲ್ದಾಣಕ್ಕೆ ಡ್ರಾಪ್ ಮಾಡುವಂತೆ ಹೇಳಿದಂತೆ ಆಟೋ ಚಾಲಕ ಅವರನ್ನು ಅಲ್ಲಿಗೆ ತಲುಪಿಸಿದ್ದಾರೆ. ಬಳಿಕ ಆಟೋ ಚಾಲಕನು ನೀಡಿದ ದೂರಿನನ್ವಯ…

Read More

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆಸಿದ್ದು, ಅನ್ಯಕೋಮಿನ ಜೋಡಿ ಮೇಲೆ ಹಲ್ಲೆಗೆ ಯತ್ನ ಮಾಡಿರುವ ಘಟನೆ ನಡೆದಿದ್ದು, ಘಟನೆ ಸಂಬಂಧ ಬಂದರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಹಿನ್ನಲೆ: ಅನ್ಯಕೋಮಿನ ಯುವಕನ ಜೊತೆ ಯುವತಿ ನಿಂತಿದ್ದನ್ನು ಅನ್ಯಕೋಮಿನ ಯುವಕನ ಜೊತೆ ಯುವತಿ ನಿಂತಿದ್ದನ್ನು ಪ್ರಶ್ನೆ ಮಾಡಿದ ಹಿಂದೂ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದಾರೆ ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ, ಈ ನಡುವೆ ಸ್ಥಳಕ್ಕೆ ಪೊಲೀಸರು ಬರುತ್ತಿದ್ದಂತೆ ಹಿಂದೂ ಕಾರ್ಯಕರ್ತರು ಪರಾರಿಯಾಗಿದ್ದಾರೆ ಎನ್ನಲಾಗಿದೆ.

Read More

ಶೀಘ್ರವೇ APL, BPL ಕಾರ್ಡ್ ವಿತರಣೆ ಮಾಡಲು ಆಹಾರ ಇಲಾಖೆ ಮುಂದಾಗಿದ್ದು, ಈ ನಿಟ್ಟಿನಲ್ಲಿ ಈಗಾಗಲೇ ಆಹಾರ ಮತ್ತು ನಾಗರೀಕರ ಪೂರೈಕೆ ಇಲಾಖೆಯವರು ಸೂಕ್ತ ಕ್ರಮಕ್ಕೆ ಮುಂದಾಗಿದ್ದಾರೆ. ಈ ನಡುವೆ ರಾಜ್ಯದಲ್ಲಿ2.95 ಅರ್ಜಿಗಳು ಬಾಕಿಯಿದ್ದು, ಶೀಘ್ರವೇ ಪರಿಶೀಲಿಸಿ ಕಾರ್ಡ್ ವಿತರಣೆ ಮಾಡುವಂತೆ ಸಚಿವ ಕೆ.ಹೆಚ್‌ ಮುನಿಯಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ನಡುವೆ ಒಂದು ವೇಳೆ ನೀವು ರೇಷನ್‌ ಕಾರ್ಡ್‌ ಗೆ ಅರ್ಜಿ ಸಲ್ಲಿಸಿದ್ದರೆ, ರೇಷನ್‌ ಕಾರ್ಡ್‌ ನಲ್ಲಿ ಹೆಸರು ಬಂದಿದೆಯಾ ಎನ್ನುವುದನ್ನು ಕಂಡುಕೊಳ್ಳಬಹುದಾಗಿದೆ.ಆಧಾರ್ ಅಧಿಕೃತ ವೆಬ್ಸೈಟ್ನಿಂದ ಕರ್ನಾಟಕ ಪಡಿತರ ಚೀಟಿ ಪಟ್ಟಿಯನ್ನು ಪರಿಶೀಲಿಸುವುದು ಹೇಗೆ? ಕರ್ನಾಟಕ ಪಡಿತರ ಚೀಟಿ ಪಟ್ಟಿಯನ್ನು ಪರಿಶೀಲಿಸಲು, ನೀವು ಈ ಕೆಳಗಿನ ಹಂತಗಳನ್ನು ಅನುಸರಿಸಬೇಕು: ಹಂತ 1 – ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ (ahara.kar.nic.in) ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ. ಹಂತ 2 – ‘ಇ-ಸೇವೆಗಳು’ ಟ್ಯಾಬ್ ಮೇಲೆ ಕ್ಲಿಕ್ ಮಾಡಿ. ಹಂತ 3 – ನಂತರ, ‘ಇ-ರೇಷನ್’ ಲಿಂಕ್…

Read More

ಹುಬ್ಬಳ್ಳಿ: ಎರಡು ವರ್ಷದ ಮಗುವೊಂದು ಅಂಗನವಾಡಿ ಸಿಬ್ಬಂದಿಗಳು ಕೊಟ್ಟ ಲಸಿಕೆ ಡೋಸ್ ಎಫೆಕ್ಟ್ ನಿಂದ ಮೃತಪಟ್ಟಿರುವ ಆರೋಪದ ಘಟನೆ ಹುಬ್ಬಳ್ಳಿಯ ಉಣಕಲ್ ಎಂಬಲ್ಲಿ ನಡೆದಿದೆ. ಹುಬ್ಬಳ್ಳಿಯ ಉಣಕಲ್ ನಿವಾಸಿ ಜಟ್ಟೆಪ್ಪ ಮತ್ತು ಮಲ್ಲಮ್ಮ ಎಂಬವರ ಎರಡು ವರ್ಷದ ಮೊಮ್ಮಗ ಧೃವ ಸಾವನ್ನಪ್ಪಿದ ಮಗು ಎಂದು ಗುರುತಿಸಲಾಗಿದೆ. ಧೃವ ಮಗು ತಾತ ಹಾಗೂ ಅಜ್ಜಿ ಮನೆಯಲ್ಲಿ ವಾಸವಿದ್ದರು. ಮಗುವಿಗೆ ಲಸಿಕೆ ಕೊಡಲು ಎಂದು ಅಜ್ಜಿ ಸಾಯಿನಗರದ ಅಂಗನವಾಡಿಗೆ ಮಗುವನ್ನು ಕರೆದುಕೊಂಡು ಹೋಗಿದ್ದರು. ಲಸಿಕೆ ಕೊಡಿಸಿದ ಬಳಿಕ ಮಗುವಿಗೆ ತೀವ್ರ ಜ್ವರ ಬಂದಿತ್ತು. ಮಗು ಹೊಟ್ಟೆನೋವಿನಿಂದ ಬಳಲುತ್ತಿದ್ದಂತೆ ಕೂಡಲೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಆದರೆ ಮಗು ಆಸ್ಪತ್ರೆಯಲ್ಲಿ ದಾಖಲಾಗುತ್ತಿದ್ದಂತೆಯೇ ಮೃತಪಟ್ಟಿದೆ. ಲಸಿಕೆ ಓವರ್ ಡೋಸ್ ನಿಂದಾಗಿ ಮಗು ಸಾವನ್ನಪ್ಪಿದ ಶಂಕೆ ವ್ಯಕ್ತವಾಗಿದೆ. ಅಂಗನವಾಡಿ ಕಾರ್ಯಕರ್ತೆಯರ ನಿರ್ಲಕ್ಷ್ಯವೇ ಮಗುವಿನ ಸಾವಿಗೆ ಕಾರಣ ಎಂದು ಮಗುವಿನ ಪೋಷಕರು ಆರೋಪ ಮಾಡಿದ್ದು, ಕಿಮ್ಸ್ ಆವರಣದಲ್ಲಿ ಮಗುವಿನ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Read More

ಹೊಸ ವರ್ಷದ ಮುನ್ನಾ ದಿನದ ಆಚರಣೆಗಳ ಬಗ್ಗೆ ಡಿಸೆಂಬರ್ 28 ರಂದು ಸಂಜೆ 5 ಗಂಟೆಯೊಳಗೆ ನಗರ ಪೊಲೀಸ್‌ ಆಯುಕ್ತರ ಕಚೇರಿಯಿಂದ ಅಗತ್ಯ ಅನುಮತಿಯನ್ನು ಪಡೆಯಬೇಕು ಎಂದು ಪೊಲೀಸ್‌ ಕಮೀಷನರ್‌ ಅಗರ್‌ವಾಲ್‌ ಹೇಳಿದ್ದಾರೆ. ಹಾಗೆಯೇ ಡಿಸೆಂಬರ್ 31 ರ ಮಧ್ಯರಾತ್ರಿಯೊಳಗೆ ಎಲ್ಲಾ ಕಾರ್ಯಕ್ರಮಗಳು ಮುಕ್ತಾಯ ಮಾಡಲು ಸೂಚಿಸಿದ್ದಾರೆ. ಹೋಟೆಲ್‌, ರೆಸ್ಟೋರೆಂಟ್‌, ಕ್ಲಬ್‌, ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕ ಹೊಸ ವರ್ಷಾಚರಣೆ ಮಾಡುವ ಸಂದರ್ಭ ಕೆಲವೊಂದು ನಿಯಮಗಳನ್ನು ಅನುಸರಿಸಬೇಕೆಂದು ಪೊಲೀಸ್‌ ಕಮೀಷನರ್‌ ಸೂಚನೆಗಳನ್ನು ಹೊರಡಿಸಿದ್ದಾರೆ. ಕಡಲತೀರದಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಆಚರಿಸುವವರಿಗೆ ಯೋಗ್ಯ ವಾತಾವರಣವನ್ನು ಕಾಪಾಡಿಕೊಳ್ಳುವುದು, ಅಶ್ಲೀಲ ನೃತ್ಯ ನಿಷೇಧ, ಯಾವುದೇ ಸಾರ್ವಜನಿಕರಿಗೆ ಅನಾನುಕೂಲತೆ ಉಂಟಾಗದಂತೆ ಖಾತ್ರಿ ಪಡಿಸುವ ಕುರಿತು ಪ್ರಾಮುಖ್ಯತೆಯನ್ನು ಹೇಳಿದ್ದಾರೆ. ಶಬ್ದಮಾಲಿನ್ಯ ನಿಯಮಾವಳಿಗಳನ್ನು ಸುಪ್ರೀಂ ಕೋರ್ಟ್‌ ಆದೇಶದ ಪ್ರಕಾರ ಎಲ್ಲರೂ ಪಾಲಿಸಬೇಕು, ಡಿಜೆ ಸಂಗೀತಕ್ಕೆ ಅನುಮತಿ ಇಲ್ಲ ಎಂದು ಹೇಳಿದ್ದಾರೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ಮೇಲೆ ನಿಗಾ ಇಡಲು ಟ್ರಾಫಿಕ್‌ ಪೊಲೀಸರು ಇರಲಿದ್ದಾರೆ. ವೀಲಿಂಗ್‌, ಡ್ರ್ಯಾಗ್‌ ರೇಸಿಂಗ್‌, ಕಿರುಚಾಟ ಅಥವಾ…

Read More

ಬೆಂಗಳೂರು : ಕ್ರಿಸ್ ಮಸ್, ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಕೋವಿಡ್ ಭೀತಿ ಹಿನ್ನೆಲೆ ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆಗೆ ತೆಗೆದುಕೊಳ್ಳಬಹುದಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚಿಸಲು ಪೊಲೀಸ್ ಅಧಿಕಾರಿಗಳ ಜೊತೆ ಗೃಹ ಸಚಿವ ಜಿ. ಪರಮೇಶ್ವರ್ ಸಭೆ ನಡೆಸಿದರು. ಸಭೆ ಬಳಿಕ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ್ ‘ಕ್ರಿಸ್ ಮಸ್, ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲ, ಆದರೆ ಇಂತಹ ಸಂದರ್ಭದಲ್ಲಿ ಜನರು ಎಚ್ಚರಿಕೆಯಿಂದ ಇರಬೇಕು. ಎಲ್ಲರೂ ಮುನ್ನೆಚ್ಚರಿಕೆ ವಹಿಸಬೇಕು. ಜನಸಂದಣಿ ಇರುವ ಪ್ರದೇಶಗಳಲ್ಲಿ ಮಾಸ್ಕ್ ಧರಿಸಬೇಕು ಎಂದರು. ಬೆಂಗಳೂರಿನ ಎಲ್ಲಾ ಕಡೆ ಭದ್ರತೆ ವಹಿಸುತ್ತೇವೆ. ಹೊಸ ವರ್ಷಾಚರಣೆ ಹಿನ್ನೆಲೆ ಬೆಂಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗುತ್ತದೆ’ ಎಂದರು.

Read More

ರಾಜ್ಯದ ಪದವೀಧರರು, ಡಿಪ್ಲೋಮಾದಾರರು ಎದುರು ನೋಡುತ್ತಿರುವಂತ ಯುವನಿಧಿ ಯೋಜನೆಗೆ ಡಿ.26ರಿಂದ ನೋಂದಣಿ ಆರಂಭಗೊಳ್ಳಲಿದೆ. ಅಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಐದನೇ ಗ್ಯಾರಂಟಿ ಯೋಜನೆಗೆ ಶಿವಮೊಗ್ಗದಲ್ಲಿ ಚಾಲನೆ ನೀಡಲಿದ್ದಾರೆ. ಯುವನಿಧಿ ಯೋಜನೆಯಡಿ ಡಿಪ್ಲೋಮಾ ಪದವೀಧರರಿಗೆ ಪ್ರತಿ ತಿಂಗಳು 1,500 ಹಾಗೂ ಪದವೀಧರರಿಗೆ 3000 ನಿರುದ್ಯೋಗ ಭತ್ಯೆಯನ್ನು ನೀಡಲಾಗುತ್ತದೆ. ಈ ಯುವನಿಧಿಗೆ ಸುಮಾರು 5 ಲಕ್ಷದ 30 ಸಾವಿರ ಫಲಾನುಭವಿಗಳು ಇರುವುದಾಗಿ ಅಂದಾಜಿಸಲಾಗಿದೆ. ಇವರಲ್ಲಿ 4 ಲಕ್ಷದ 81 ಸಾವಿರ ಪದವೀಧರರು ಹಾಗೂ 48,153 ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರುವ ಯುವಕರಿದ್ದಾರೆ. ಇವರಿಗೆ ನಿರುದ್ಯೋಗ ಭತ್ಯೆಯನ್ನು ನೀಡಲು 250 ಕೋಟಿ ಅನುದಾನವನ್ನು ಮೀಸಲಿಡಲಾಗಿದೆ. ಪದವಿ ಹಾಗೂ ಡಿಪ್ಲೋಮಾ ಮುಗಿಸಿದ ಆರು ತಿಂಗಳವರೆಗೆ ಯಾವುದೇ ಕೆಲಸ ಸಿಗದವರು ಈ ಯುವನಿಧಿ ಯೋಜನೆಯ ಲಾಭ ಪಡೆಯುವ ಫಲಾನುಭವಿಗಳಾಗಿದ್ದಾರೆ. ಎರಡು ವರ್ಷದೊಳಗೆ ಕೆಲಸ ಸಿಕ್ಕರೆ ಭತ್ಯೆ ಸ್ಥಗಿತಮಾಡಲಾಗುತ್ತದೆ. ಅಭ್ಯರ್ಥಿಗಳು 2022-23ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ, 2023ರಲ್ಲಿ ತೇರ್ಗಡೆ ಹೊಂದಿರಬೇಕು. ಕನಿಷ್ಠ 6 ವರ್ಷಗಳ ಕಾಲ ರಾಜ್ಯದಲ್ಲಿ ನೆಲೆಸಿ, ವ್ಯಾಸಂಗ…

Read More

ಉಪ್ಪಿನಂಗಡಿ: ಆಟೊ ರಿಕ್ಷಾ ಹಾಗೂ ಲಾರಿಯ ನಡುವೆ ಸಂಭವಿಸಿದ ಅಪಘಾತದಲ್ಲಿ ಆಟೊದಲ್ಲಿದ್ದ ಮೂವರು ಗಂಭೀರ ಗಾಯಗೊಂಡ ಘಟನೆ ಕುಮಾರಧಾರಾ ನದಿಯ ಸೇತುವೆಯಲ್ಲಿ ನಡೆದಿದೆ. ಗಾಯಗೊಂಡವರನ್ನು ಆಟೊ ಚಾಲಕ ಪ್ರಾಂಕ್ಲಿನ್ ಗ್ಲನ್ ಲೋಬೋ(23), ಪ್ರಯಾಣಿಕರಾದ ಉತ್ತರ ಭಾರತ ಮೂಲದ ಅಜಯ್‌ ಖಾರ್ವಾಲ್ (17), ಪೂರನ್ ಸಿಂಗ್ ಖಾರ್ವಾಲ್ (29) ಎಂದು ಗುರುತಿಸಲಾಗಿದೆ. ಪೆರ್ನೆಯ ಪ್ರಾಂಕ್ಲಿನ್ ಗ್ಲನ್ ಲೋಬೊ ಎಂಬವರು ಚಲಾಯಿಸಿಕೊಂಡು ಹೋಗುತ್ತಿದ್ದ ಅಟೋ ರಿಕ್ಷಾಕ್ಕೆ ಲಾರಿಯೊಂದು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಉಪ್ಪಿನಂ ಗಡಿಯ ಆ್ಯಂಬುಲೆನ್ಸ್ ಚಾಲಕ ಫಾರೂಕ್ ಜಿಂದಗಿ ಪುತ್ತೂರು ಆಸ್ಪತ್ರೆಗೆ ರವಾನಿಸುವಲ್ಲಿ ಸಹಕರಿಸಿದ್ದಾರೆ.

Read More

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಯೊಬ್ಬ ಬೀಡಿ ಸೇರಿದ್ದು, ಆರ್.ಐ.ಸಿ.ಯು.ನಲ್ಲಿ ಬೆಂಕಿ ಕಿಡಿ ಹೊತ್ತಿ ಹಾನಿಯಾಗಿದೆ. ಜಾಮ್ ನಗರದ ಸರ್ಕಾರಿ ಬಿಜಿ ಆಸ್ಪತ್ರೆಯ ಸಿಬ್ಬಂದಿ ಗುರುವಾರ ಬೆಳಗಿನ ಜಾವ ತಗುಲಿದ್ದ ಬೆಂಕಿ, ದಟ್ಟ ಹೊಗೆಯನ್ನು ಸಕಾಲದಲ್ಲಿ ನಂದಿಸುವ ಮೂಲಕ ಸಂಭವಿಸಬಹುದಾಗಿದ್ದ ದೊಡ್ಡ ದುರಂತವನ್ನು ತಪ್ಪಿಸಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಗೆ ಬೀಡಿ ಸೇದುವ ಚಟ ಬಂದಿದೆ. ಕೃತಕ ಉಸಿರಾಟದ ಆರೈಕೆ ಘಟಕದಲ್ಲಿ ಆಕ್ಸಿಜನ್ ಬೆಂಬಲದಲ್ಲಿದ್ದ ರೋಗಿ ಆಸ್ಪತ್ರೆ ಎನ್ನುವುದನ್ನು ಮರೆತು ಅಲ್ಲೇ ಬಿಡಿ ಸೇದಲು ಮುಂದಾಗಿದ್ದಾನೆ. ಬೀಡಿಗೆ ಬೆಂಕಿ ಹಚ್ಚುತ್ತಿದ್ದಂತೆ ಕಿಡಿ ಹೊತ್ತಿ ಹೊಗೆ ಆವರಿಸಿದೆ. ಕೂಡಲೇ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಬಿಜಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ದೀಪಕ್ ತಿವಾರಿ, ರೋಗಿಗೆ ಸಣ್ಣ ಗಾಯವಾಗಿದ್ದು, ಉಳಿದ ಎಲ್ಲಾ ರೋಗಿಗಳು ಸುರಕ್ಷಿತರಾಗಿದ್ದಾರೆ ಎಂದು ತಿಳಿಸಿದ್ದಾರೆ.

Read More

ಕುಂದಾಪುರ : 7ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಬಾವಿಗೆ ಬಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದ ಕೋಣಿ ಎಂಬಲ್ಲಿ ಡಿಸೆಂಬರ್ 20ರ ಬುಧವಾರ ಸಂಜೆ ನಡೆದಿದೆ. ಮೃತ ಬಾಲಕಿಯನ್ನು ಕೋಣಿ ನಿವಾಸಿ ರಾಜಶೇಖರ ಎಂಬವರ ಪುತ್ರಿ ರಿಷಿತಾ (13) ಎಂದು ಗುರುತಿಸಲಾಗಿದೆ. ರಿಷಿತಾ ನಿನ್ನೆ ಸಂಜೆ ಶಾಲೆ ಮುಗಿಸಿ ಬಂದು ಮನೆ ಬಳಿ ಇದ್ದ ಬೊಬ್ಬರ್ಯ ದೇವಸ್ಥಾನದ ಬಳಿ ತೆರಳಿದ್ದು, ಸ್ವಲ್ಪ ಹೊತ್ತಾದರು ವಾಪಾಸು ಬಾರದೇ ಇದ್ದಾಗ ತಾಯಿ ಹುಡುಕಾಡಿದಾಗ ಮನೆಯ ಬಾವಿ ಬಳಿ ಆಕೆಯ ಮೃತದೇಹ ಪತ್ತೆಯಾಗಿದೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ರಿಷಿತಾಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ

Read More