ಪುತ್ತೂರು: ಮಾರುತಿ ಓಮ್ನಿ ಮತ್ತು ಆಲ್ಟೋ ಕಾರು ನಡುವೆ ಬುಧವಾರ ತಡ ರಾತ್ರಿ ಅಪಘಾತ ಸಂಭವಿಸಿ ಯಕ್ಷಗಾನ ಕಲಾವಿದರು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನೆಹರುನಗರದ ಕಲ್ಲೇಗದಲ್ಲಿ ನಡೆದಿದೆ. ಯಕ್ಷಗಾನ ಕಾರ್ಯಕ್ರಮ ಮುಗಿಸಿ ಪುತ್ತೂರಿಗೆ ಬರುತ್ತಿದ್ದ ಕಲಾವಿದರು ಇದ್ದ ಮಾರುತಿ ಓಮ್ನಿ ಮತ್ತು ವಿರುದ್ಧ ಧಿಕ್ಕಿನಿಂದ ಮಂಗಳೂರು ತೆರಳುತ್ತಿದ್ದ ಆಲ್ಟೋ ಕಾರು ನಡುವೆ ನೆಹರುನಗರ ಕಲ್ಲೇಗ ಸಮೀಪ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಆಲ್ಟೋ ಕಾರು ನಿಯಂತ್ರಣ ತಪ್ಪಿ ಪಕ್ಕದಲ್ಲಿ ಪಾರ್ಕ್ ಮಾಡಿದ್ದ ಖಾಸಗಿ ಬಸ್ಗೂ ಡಿಕ್ಕಿಯಾಗಿದೆ ಎನ್ನಲಾಗಿದೆ. ಮಾರುತಿ ಓಮ್ನಿಯಲ್ಲಿದ್ದ ಮೂವರು ಯಕ್ಷಗಾನ ಕಲಾವಿದರು ಮತ್ತು ಆಲ್ಟೋದಲ್ಲಿದ್ದ ಪ್ರಯಾಣಿಕರೊಬ್ಬರಿಗೆ ಗಾಯವಾಗಿದೆ. ತೀವ್ರ ಗಾಯಗೊಂಡ ಆಲ್ಟೋದಲ್ಲಿ ಪ್ರಯಾಣಿಕರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
Author: main-admin
ಉಡುಪಿ: “ಆಧಾರ್ ಲಿಂಕ್ ಮಾಡಿಸಿ, ಇ-ಕೆವೈಸಿ ಮಾಡದೇ ಇದ್ದರೆ ಸಬ್ಸಿಡಿ ಬರುವುದಿಲ್ಲ, ಗೃಹ ಬಳಕೆಯ ಸಂಪರ್ಕ ವಾಣಿಜ್ಯ ಬಳಕೆಯ ಗ್ಯಾಸ್ ಸಂಪರ್ಕವಾಗಿ ಬದಲಾಗಲಿದೆ, ಗ್ಯಾಸ್ ಸಂಪರ್ಕ ರದ್ದಾಗಲಿದೆ ಎಂಬ ಇತ್ಯಾದಿ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಹಿನ್ನೆಲೆಯಲ್ಲಿ ಗೃಹಬಳಕೆಯ ಗ್ಯಾಸ್ ಸಂಪರ್ಕ ಪಡೆದವರು ಇ-ಕೆವೈಸಿ ಮಾಡಿಸಿಕೊಳ್ಳಲು ಜನರು ಗ್ಯಾಸ್ ಏಜೆನ್ಸಿಗಳ ಕಚೇರಿಗಳನ್ನು ಮುತ್ತಿಗೆ ಹಾಕಿರುವ ದೃಶ್ಯ ಕರಾವಳಿಯ ಜಿಲ್ಲೆಯಲ್ಲಿ ಕಂಡುಬರುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸಂದೇಶಗಳ ಹಿನ್ನೆಲೆ ಜನರು ಗೊಂದಲಕ್ಕೀಡಾಗಿದ್ದು, ಕಳೆದೊಂದು ವಾರದಿಂದ ಗ್ಯಾಸ್ ಏಜೆನ್ಸಿಗಳ ಕಚೇರಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಜಿಲ್ಲೆಯ ಪ್ರಮುಖ ಗ್ಯಾಸ್ ಏಜೆಂಟ್ ಒಬ್ಬರು, ಗ್ರಾಹರೆಲ್ಲರಿಗೂ ಇ-ಕೆವೈಸಿ ಮಾಡಲು ಸೂಚನೆ ಬಂದಿರುವುದರಿಂದ ಎಲ್ಲಾ ಗ್ಯಾಸ್ ಏಜೆನ್ಸಿಗಳಲ್ಲಿ ಗ್ರಾಹಕರ ಬೆರಳಚ್ಚು ಪಡೆದು ಆಧಾರ್ ಲಿಂಕ್ ಹಾಗೂ ಇ-ಕೆವೈಸಿ ಮಾಡಿಸಲಾಗುತ್ತಿದೆ. ಆದರೆ ಮತ್ತೆ ಸಬ್ಸಿಡಿ ಸಿಗಲಿದೆ, ಡಿ. 31ರೊಳಗೆ ಈ ಪ್ರಕ್ರಿಯೆ ಮುಗಿಸಬೇಕು ಎಂಬ ವಿಷಯಗಳಿಗೂ ಇ-ಕೆವೈಸಿಗೂ ಯಾವ ಸಂಬಂಧವಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ…
ಉಡುಪಿ: ಕೋಟೇಶ್ವರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿ.21ರಂದು ತಡರಾತ್ರಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಉದ್ಯಾವರದ ಐಸಿವೈಎಂ ಅಧ್ಯಕ್ಷ ಸ್ಥಳದಲ್ಲೇ ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಅಪಘಾತದಲ್ಲಿ ಮೃತರಾದವರನ್ನು ಉದ್ಯಾವರದ ಸಂಪಿಗೆ ನಗರದ ನಿವಾಸಿ ರಾಬರ್ಟ್ ಕ್ಯಾಸ್ತಲಿನೋ ಎಂಬವರ ಪುತ್ರ ಜೋಯಿಸ್ಟನ್ ಕ್ಯಾಸ್ಟಲಿನೋ (22) ಎಂದು ಗುರುತಿಸಲಾಗಿದೆ.ಉದ್ಯಾವರದ ಐಸಿವೈಎಂ ಘಟಕದ ಸದಸ್ಯರಿದ್ದ ಫಿಗೋ ಕಾರು ಕುಂದಾಪುರದಲ್ಲಿ ಕಾರ್ಯಕ್ರಮ ಮುಗಿಸಿ ಉಡುಪಿ ಕಡೆಗೆ ಬರುತ್ತಿದ್ದಾಗ ಕೋಟೇಶ್ವರ ಬಳಿ ಕೆಟ್ಟು ನಿಂತ ಲಾರಿಗೆ ಡಿಕ್ಕಿ ಹೊಡೆದಿದೆ.ಪರಿಣಾಮ ಲೆಸ್ಟನ್ ಪಿಂಟೊ (22), ಜಸ್ಟಿನ್ ಕಾರ್ಡೋಜಾ (22), ವಿಲ್ಸನ್ ಮಾರ್ಟಿಸ್ (23) ಮತ್ತು ಗ್ಲಾಡೆನ್ ಡಿಸಿಲ್ವಾ (23) ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಕಾರಿನಲ್ಲಿದ್ದವರು ಉದ್ಯಾವರದ ಐಸಿವೈಎಂ ಘಟಕದ ಸದಸ್ಯರು ಎಂದು ತಿಳಿದು ಬಂದಿದೆ.ಯುವ ನಾಯಕನ ಅಗಲಿಕೆಗೆ ಕ್ರೈಸ್ತ ಸಮುದಾಯ ಸಂತಾಪ ಸೂಚಿಸಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಟೆಸ್ಟಿಂಗ್ ಆರಂಭಿಸಿದ ಮೊದಲ ದಿನವೇ ಒಂದು ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.ಉಡುಪಿ ಮೂಲದ 82 ವರ್ಷದ ವೃದ್ಧರೋರ್ವರಲ್ಲಿ ಪಾಸಿಟಿವ್ ಪತ್ತೆಯಾಗಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಗೆ ನರ ಸಂಬಂಧಿ ಕಾಯಿಲೆಗೆ ಬಂದಿರುವ ಅವರನ್ನು ರಾಟ್ ಟೆಸ್ಟ್ ಮಾಡಿಸಿದಾಗ ಅದರಲ್ಲಿ ಪಾಸಿಟಿವ್ ಪತ್ತೆಯಾಗಿದೆ. ಪಾಸಿಟಿವ್ ಬಂದಿರೋ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಯ ಐಸೋಲೇಷನ್ ವಾರ್ಡ್ ಗೆ ಅವರನ್ನು ದಾಖಲಿಸಲಾಗಿದ್ದು ಅಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಆತಂಕ ಹೆಚ್ಚಗುತ್ತಿದೆ. ಇಂದು 22 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದ್ದು, ಓರ್ವ ವೃದ್ಧ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಪ್ರಸ್ತುತ ರಾಜ್ಯದಲ್ಲಿ 92 ಸಕ್ರಿಯ ಪ್ರಕರಣಗಳಿವೆ. 20 ಸೋಂಕಿತರು ಆಸ್ಪತ್ರೆಯಲ್ಲಿದ್ದು, ಈ ಪೈಕಿ 7 ಮಂದಿ ಐಸಿಯುನಲ್ಲಿದ್ದಾರೆ. ಉಳಿದ 72 ಮಂದಿ ಹೋಂ ಐಸೋಲೇಷನ್ ನಲ್ಲಿದ್ದಾರೆ. ಈಗಾಗಲೇ 5 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇನ್ನು ಕೊರೊನಾ ಪಾಸಿಟಿವಿಟಿ ದರವು ಶೇ. 2.47 ರಷ್ಟಿದೆ. ರಾಜ್ಯದಲ್ಲಿ 808 ಮಂದಿಗೆ ಕೋವಿಡ್ ಟೆಸ್ಟ್ ನಡೆಸಲಾಗಿದ್ದು, ಈ ಪೈಕಿ 22 ಮಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.
ಮಂಗಳೂರು ; ಭಾರತೀಯ ದಂಡ ಸಂಹಿತೆಯ ಕಲಂ 376 ( 2 ) ಬಾಲಕಿಯ ಅತ್ಯಾಚಾರ, ಕಲಂ 366 ಅಪಹರಣ , ಕಲಂ 363 ಅಪಹರಣಕ್ಕೆ ಶಿಕ್ಷೆ, ಕಲಂ 417 ಮೋಸ ಹಾಗೂ, ಕಲಂ 6 ಪೋಕ್ಸೋ ಕಾಯ್ದೆ 2012 ಅಡಿ ಲೈಂಗಿಕ ದೌರ್ಜನ್ಯ ಮತ್ತು ಕಲಂ 3 ( 2 ) ( V ), 3 ( 1 ) (ಡಬ್ಲ್ಯೂ) ( 1 ), ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) 1989 ಕಾಯ್ದೆ ಯಡಿ ದೌರ್ಜನ್ಯ ವನ್ನು ಎಸಗಿರುವ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದ ಆರೋಪಿಯನ್ನು ಪ್ರಕರಣದಿಂದ ಖುಲಾಸೆಗೊಳಿಸಲಾಗಿದೆ ಎಂದು ಮಂಗಳೂರಿನ ಮೊದಲನೇ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯತೀರ್ಪು ನೀಡಿದೆ. ಕೇಸಿನ ಸಾರಾಂಶ ವೇನೆಂದರೆ, ನೊಂದ ಬಾಲಕಿಯವರು, ಆರೋಪಿಯಾದ ಎಮ್. ಡಿ. ಇಬ್ರಾರ್ @ ಮುನ್ನ ಮೇಲೆ ಭಾರತೀಯ ದಂಡ ಸಂಹಿತೆಯ ಕಲಂ 376 ( 2 )…
ಬೆಂಗಳೂರು: ಕೋವಿಡ್ ಹಿನ್ನೆಲೆ ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ಬಸ್ಗಳಲ್ಲಿ ಕಡ್ಡಾಯ ಮಾಸ್ಕ್ ಧರಿಸಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇರಳದಲ್ಲಿ ಕೋವಿಡ್ ಆರ್ಭಟ ಹೆಚ್ಚಾದ ಹಿನ್ನಲೆ ಕೆಎಸ್ಆರ್ಟಿಸಿ ಮತ್ತೆ ಎಚ್ಚೆತ್ತುಕೊಂಡಿದ್ದು, ಕೇರಳದಿಂದ ಬರುವ ಹಾಗೂ ಹೋಗುವ ಬಸ್ಸುಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಸ್ಯಾನಿಟೈಸರ್ ಸಿಂಪಡಿಸಲು ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ.ಸರ್ಕಾರದ ಆದೇಶವನ್ನು ನಾವು ಕಟ್ಟನಿಟ್ಟಾಗಿ ಪಾಲನೆ ಮಾಡುತ್ತೇವೆ. ಇಂದು ಕೇಂದ್ರ ಆರೋಗ್ಯ ಸಚಿವರ ಜೊತೆ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆದಿದೆ.ಸಭೆಯಲ್ಲಿ ಸಲಹೆ ಪಡೆದುಕೊಂಡಿದ್ದಾರೆ. ಅದರಂತೆ ಮುಜರಾಯಿ ಇಲಾಖೆ ಹಾಗೂ ಸಾರಿಗೆ ನಿಗಮಗಳಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ. ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿಯಲ್ಲಿ ಪ್ರಯಾಣಿಸುವ ಪ್ರತಿಯೊಬ್ಬ ಪ್ರಯಾಣಿಕರೂಕಡ್ಡಾಯ ಮಾಸ್ಕ್ ಧರಿಸಿ ಪ್ರಯಾಣಿಸಿ ಎಂದು ಮನವಿ ಮಾಡಿದರು.
ರಾಜ್ಯದಲ್ಲಿ ಕೊರೊನಾ ವೈರಸ್ಗೆ ಮೊದಲ ಬಲಿಯಾಗಿದ್ದು,ಜನರು ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವುದುಉತ್ತಮ. ಬೆಂಗಳೂರಿನ ಚಾಮರಾಜಪೇಟೆಯ ಖಾಸಗಿ ಆಸ್ಪತ್ರೆಯಲ್ಲಿ 64 ವರ್ಷದ ವ್ಯಕ್ತಿ ಕೊರೊನಾ ವೈರಸ್ ಬಾಧಿಸಿಸಾವನ್ನಪ್ಪಿದ್ದಾರೆ. ಆದರೆ, ಅವರು ಜೆಎನ್-1 ಉಪತಳಿಯಸೋಂಕಿನಿಂದ ಬಲಿಯಾಗಿದ್ದಾರೆಯೇ ಎನ್ನುವುದು ಹೆಚ್ಚಿನ ಸ್ಯಾಂಪಲ್ ಪರೀಕ್ಷೆಯಿಂದ ಗೊತ್ತಾಗಬೇಕಿದೆ. ಆ ವ್ಯಕ್ತಿಗೆ ನ್ಯೂಮೋನಿಯಾ ಸೇರಿದಂತೆ ಹಲವು ಕಾಯಿಲೆ ಇತ್ತು. ಈ ಹಿನ್ನಲೆಯಲ್ಲಿ ಜನರು ಎಚ್ಚರಿಕೆ ವಹಿಸಬೇಕೆಂದು ಆರೋಗ್ಯಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಕಾಸರಗೋಡು : ಕಾರು ಮತ್ತು ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ಕಾಲೇಜ್ ವಿದ್ಯಾರ್ಥಿ ಮೃತಪಟ್ಟ ಘಟನೆ ಕಾಸರಗೋಡು ಸಮೀಪದ ಬೇಕಲ ಠಾಣಾ ವ್ಯಾಪ್ತಿಯ ಚೆಮ್ನಾಡ್ ಬಳಿ ನಡೆದಿದೆ. ಚೆಮ್ನಾಡ್ ಕೋಳಿಯಡ್ಕದ ಸಫ್ರಝುಲ್ ಅಮಾನ್ (20) ಮೃತಪಟ್ಟ ಯುವಕನಾಗಿದ್ದಾನೆ. ಗಂಭೀರವಾಗಿ ಗಾಯಗೊಂಡ ಅಮಾನ್ ನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಅಮಾನ್ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ . ಬೇಕಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪುತ್ತೂರು: ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಸಹಸಂಯೋಜಕ ದಿನೇಶ್ ಪಂಜಿಗ ಅವರ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 55ರಂತೆ ವಿಜಯಪುರ ಜಿಲ್ಲೆಯ ಸಿಂಧಗಿ ಪೊಲೀಸ್ ಠಾಣಾ ವ್ಯಾಪ್ತಿಗೆ ಯಾಕೆ ಗಡಿಪಾರು ಮಾಡಬಾರದು ಎಂದು ಕಾರಣ ಕೇಳುವ ಆದೇಶ ಮಾಡಿ ಉಪವಿಭಾಗೀಯ ದಂಡಾಧಿಕಾರಿ ನೊಟೀಸ್ ಜಾರಿ ಮಾಡಿದ್ದಾರೆ. ಪುತ್ತೂರು ತಾಲೂಕಿನ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿಗೋಡು ಗ್ರಾಮದ ಪಂಜಿಗ ಮನೆ ಎಂಬಲ್ಲಿನ ದಿನೇಶ್ (37.ವ)ರವರು ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿನಾಕಾರಣ ಕ್ಷುಲ್ಲಕ ವಿಚಾರಗಳಿಗೆ ತನ್ನ ಸಹಚರರೊಂದಿಗೆ ತಕರಾರು ನಡೆಸಿ ದೊಂಬಿ, ಹಲ್ಲೆ ನಡೆಸುತ್ತಾ ಜನರಿಗೆ ಬೆದರಿಕೆ ಹಾಕಿರುವ ಪ್ರಕರಣದ ಆರೋಪಿಯಾಗಿದ್ದಾರೆ. ಈತನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ರೌಡಿ ಹಾಳೆಯನ್ನು ಕೂಡ ತೆರೆಯಲಾಗಿದ್ದು ಇತರ ಆಪಾದನೆಗಳ ಪ್ರಕರಣಗಳಿಗೆ ಸಂಬಂಧಿಸಿ ಗಡಿಪಾರು ಮಾಡುವ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆ ಮತ್ತು ಪುತ್ತೂರು ಉಪಾಅಧೀಕ್ಷಕರು ನೀಡಿದ ವರದಿಯಂತೆ ಉಪವಿಭಾಗದ ದಂಡಾಧಿಕಾರಿಯ ಆಗಿರುವ ಸಹಾಯಕ ಆಯುಕ್ತರು,…










