ಮಂಗಳೂರು: ಕೇರಳದಲ್ಲಿ ಕೋವಿಡ್ ರೂಪಾಂತರಿ ಜೆಎನ್.1 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ ಇರಿಸಲಾಗಿದೆ. ಮುಂಜಾಗ್ರತೆ ಉದ್ದೇಶದಿಂದ ಕೋವಿಡ್ ದೃಢಪಟ್ಟ ರೋಗಿಗಳಿಗೆ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಪ್ರತ್ಯೇಕ ಹಾಸಿಗೆ ಮೀಸಲಿಡಲಾಗಿದೆ. ವೆನ್ಲಾಕ್ ನ ಒಂದು ವಾರ್ಡ್ನಲ್ಲಿ 19 ಬೆಡ್ಗಳನ್ನು ಮತ್ತು ಐಸಿಯುವಿನ ಒಂದು ಭಾಗದಲ್ಲಿ 7 ಹಾಸಿಗೆಗಳನ್ನು ಮೀಸಲಿರಿಸಲಾಗಿದೆ. ಆರ್ಟಿಪಿಸಿಆರ್ ಪ್ರಯೋಗಾಲಯದ ಮೈಕ್ರೋಬಯಾಲೊಜಿಸ್ಟ್ ಅವರನ್ನು ಮತ್ತೆ ಮಂಗಳೂರಿಗೆ ನಿಯೋಜನೆ ಮಾಡಲಾಗಿದೆ. ತಾಲೂಕು ಆಸ್ಪತ್ರೆಗಳಿಗೂ ಪರೀಕ್ಷಾ ಕಿಟ್ ವಿತರಿಸಲಾಗಿದ್ದು, ಕೋವಿಡ್ ಲಕ್ಷಣವಿದ್ದವರನ್ನು ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಲಾಗಿದೆ. ಈಗಾಗಲೇ ತಾಲೂಕು ವೈದ್ಯಾಧಿಕಾರಿಗಳ ಸಭೆ ನಡೆಸಿ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ. ವಿಮಾನ ನಿಲ್ದಾಣಕ್ಕೆ ಆಗಮಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೂ ನಿಗಾ ಇರಿಸಲು ನಿರ್ಧರಿಸಲಾಗಿದ್ದು, ಅವರಲ್ಲಿ ಕೋವಿಡ್ ಲಕ್ಷಣ ಕಂಡುಬಂದರೆ ತಪಾಸಣೆ ನಡೆಸಿ, ಮಾದರಿಯನ್ನು ಜೆನೋಮಿಕ್ ಸೀಕ್ವೆನ್ಸಿಂಗ್ಗೆ ಕಳುಹಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Author: main-admin
ಬೆಳ್ತಂಗಡಿ: ಮದ್ಯದ ಮತ್ತಿನಲ್ಲಿ ಕಟುಕ ಪತಿಯೋರ್ವನು ಪತ್ನಿಯ ಕಣ್ಣು ಕೆನ್ನೆಗೆ ಕಚ್ಚಿ ಮಾಂಸವನ್ನೇ ಕಿತ್ತು ಹಾಕಿರುವ ರಾಕ್ಷಿಸೀ ಕೃತ್ಯವೊಂದು ದ.ಕ.ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಆರೋಪಿ ಪುತ್ರಿಯ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಶಿಶಿಲ ಬಳಿಯ ಕೋಟೆಬಾಗಿಲು ನಿವಾಸಿ ಸುರೇಶ್ ಗೌಡ ಎಂಬಾತನೇ ಈ ರಾಕ್ಷಸಿಕೃತ್ಯ ಎಸಗಿರುವಾತ. ಪತಿ ಸುರೇಶ್ ಗೌಡ ಮಾಡಿರುವ ಈ ರಾಕ್ಷಸಿಕೃತ್ಯದಿಂದ ಪತ್ನಿಯ ಎಡ ಕಣ್ಣಿಗೆ ಸಂಪೂರ್ಣ ಹಾನಿಯಾಗಿದೆ. ಆಕೆಯ ಕಣ್ಣು ಹಾಗೂ ಕೆನ್ನೆಯ ಭಾಗಕ್ಕೆ ಕಚ್ಚಿ ಮಾಂಸವನ್ನೇ ಹೊರಗೆಡವಿದ್ದಾನೆ ಆರೋಪಿ. ಆ ಬಳಿಕ ದೊಣ್ಣೆಯಿಂದ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ತಂದೆಯ ದಾಳಿಯಿಂದ ತಾಯಿಯನ್ನು ಬಿಡಿಸಲು ಬಂದ ಪುತ್ರಿಯ ತಲೆ ಹಾಗೂ ಕಣ್ಣಿಗೂ ಆರೋಪಿ ಹೊಡೆದಿದ್ದಾನೆ. ಆಗ ಆಕೆ ಪ್ರಾಣ ಉಳಿಸಿಕೊಳ್ಳಲು ತಂದೆಯಿಂದ ತಪ್ಪಿಸಿ ನೆರೆಹೊರೆಯವರಿಗೆ ವಿಚಾರ ತಿಳಿಸಿದ್ದಾಳೆ. ನೆರೆಹೊರೆಯವರು ಧಾವಿಸುತ್ತಿದ್ದಂತೆ ಆರೋಪಿ ತೋಟದೊಳಗೆ ಓಡಿ ತಪ್ಪಿಸಿಕೊಂಡಿದ್ದಾನೆ. ಪತಿಯಿಂದ ಜೀವ ಉಳಿಸಿಕೊಳ್ಳಲು ಓಡಿ ಹೋಗಿರುವ ಪತ್ನಿ ಇಂದು ಬೆಳಗ್ಗೆ ಪ್ರಜ್ಞಾಹೀನ…
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಮೂರು ಕಂತುಗಳು ಮನೆಯ ಯಜಮಾನಿ ಖಾತೆಗೆ ಜಮಾ ಆಗಿದ್ದು, ಇದೀಗ 4ನೇ ಕಂತಿನ ಹಣ ಈ ದಿನದೊಳಗೆ ಜಮಾ ಆಗುವ ಸಾಧ್ಯತೆ ಇದೆ. ಈಗಾಗಲೇ ಮೂರನೇ ಕಂತು ಪಡೆದಿರುವ ಯಜಮಾನಿಯರ ಖಾತೆಗೆ ಇದೀಗ ನಾಲ್ಕನೇ ಕಂತಿನ ಹಣ ಜಮೆ ಮಾಡಲು ಸರ್ಕಾರ ಸಿದ್ಧತೆ ನಡೆಸಿದ್ದು, ಮೂಲಗಳ ಪ್ರಕಾರ ಈ ವಾರದಲ್ಲೇ ಎಲ್ಲ ಯಜಮಾನಿಯರ ಖಾತೆಗೆ ಹಣ ಜಮಾ ಮಾಡುವ ಸಾಧ್ಯತೆ ಇದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಈ ಹಿಂದೆ ಹೇಳಿದಂತೆ ಪ್ರತಿ ತಿಂಗಳು 20 ರಿಂದ 30ನೇ ತಾರೀಖಿನೊಳಗೆ ಹಣ ಜಮೆಯಾಗಲಿದೆ. ಹೀಗಾಗಿ ಮುಂದಿನ ವಾರದಿಂದ ಈ ಪ್ರಕ್ರಿಯೆ ಆರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ. ಗೃಹಲಕ್ಷ್ಮಿ ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದ್ದು, ಯಾರ ಖಾತೆಗೆ ಹಣ ಬಂದಿಲ್ಲ ಅವರು ತಕ್ಷಣ ಗ್ರಾಮ ಪಂಚಾಯತ್ ಅಧಿಕಾರಿಗಳು, ಅಂಗನವಾಡಿ ಶಿಕ್ಷಕಿಯರನ್ನು ಸಂಪರ್ಕಿಸಬಹುದಾಗಿದೆ. ಇದುವರೆಗೆ ಯಾರಿಗೆ ಹಣ ಬಂದಿಲ್ಲ, ಅಂತಹವರಿಗೆ ಡಿಸೆಂಬರ್ ತಿಂಗಳೊಳಗೆ ಹಣ…
ಮಂಗಳೂರು: ಸೈನಿಕನೆಂದು ನಂಬಿಸಿ ಹಿರಿಯ ನಾಗರಿಕರೊಬ್ಬರಿಗೆ 2.41 ಲಕ್ಷ ರೂ. ವಂಚಿಸಿರುವ ಆರೋಪದಲ್ಲಿ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಿರಿಯ ನಾಗರಿಕರು ತಮ್ಮ ಅಪಾರ್ಟ್ ಮೆಂಟ್ ನಲ್ಲಿ ಫ್ಲ್ಯಾಟ್ ಬಾಡಿಗೆ ಕೊಡುವ ವಿಚಾರದಲ್ಲಿ ಒಂದ MAGIC BRICKನಲ್ಲಿ ಜಾಹೀರಾತು ನೀಡಿದ್ದರು. ಡಿಸೆಂಬರ್ 8ರಂದು ಅಪರಿಚಿತನೊಬ್ಬ ಇವರ ಮೊಬೈಲ್ ಫೋನ್ಗೆ ಕರೆ ಮಾಡಿ ತನ್ನ ಹೆಸರು ಆಶೀಶ್ ಕುಮಾರ್. ತಾನು ಭಾರತೀಯ ಸೇನೆಯಲ್ಲಿ ನೌಕರ ಎಂದು ಪರಿಚಯಿಸಿದ್ದಾನೆ. ಅಪಾರ್ಟ್ ಮೆಂಟ್ ಖಾಲಿ ಇರುವ ಬಗ್ಗೆ ಮಾತನಾಡಿದ್ದಾನೆ. ಬಳಿಕ ಬಾಡಿಗೆ ವಿಚಾರವಾಗಿ ವಿಚಾರಿಸಿ ಮುಂಗಡ ಹಣ ಪಾವತಿಸುವುದಾಗಿಯೂ ಹಾಗೂ ಆರ್ಮಿ ಇಲಾಖೆಯಿಂದ ಕಮಾಂಡಿಂಗ್ ಪೇಮೆಂಟ್ ನಿಂದ ಹಣ ಸಂದಾಯವಾಗುವುದಾಗಿ ತಿಳಿಸಿದ್ದಾನೆ. ಮೊದಲಿಗೆ 1/-ರೂ,5/-ರೂ ,49,999/-ರೂ ಮತ್ತು 49994/-ರೂಗಳ UPI CODE ಗಳನ್ನು ಅವರಿಗೆ ವಾಟ್ಸ್ಆ್ಯಪ್ ನಲ್ಲಿ ಕಳುಹಿಸಿದ್ದಾನೆ. ಇದನ್ನು ಸತ್ಯವೆಂದು ಭಾವಿಸಿ ಹಿರಿಯ ನಾಗರಿಕರು ತಮ್ಮ ಹೆಚ್ ಡಿ ಎಫ್ ಸಿ ಖಾತೆಯಿಂದ ಗೂಗಲ್ ಪೇ ಮುಖಾಂತರ ಡಿಸೆಂಬರ್ 8 ರಂದು 1,41,999…
ಉಳ್ಳಾಲ: ಸಿಟಿ ಬಸ್ ಚಾಲಕ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ. ಕೊಂಡಾಣ ಬೆಳರಿಂಗೆ ನಿವಾಸಿ ವೆಂಕಪ್ಪ ಶೆಟ್ಟಿ ಎಂಬವರ ಪುತ್ರ ಜಗದೀಶ್ (39) ಮೃತರು.ಸ್ಟೇಟ್ ಬ್ಯಾಂಕ್ ಕಿನ್ಯಾ ನಡುವೆ ಚಲಿಸುವ ಸಿಟಿ ಬಸ್ ನಲ್ಲಿ ಚಾಲಕರಾಗಿದ್ದ ಇವರು, ಇಂದು ನಸುಕಿನ ಜಾವ ಸೋಮೇಶ್ವರ ರುದ್ರಪಾದೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕೃತ್ಯ ಎಸಗುವ ಮುನ್ನ ಸಮುದ್ರ ತೀರದಲ್ಲಿ ಬೈಕನ್ನು ಇಟ್ಟು ಟವಲೊಂದರಲ್ಲಿ ಬೈಕ್ ಕೀ, ಪರ್ಸ್ ಚಪ್ಪಲಿಗಳನ್ನು ಇಟ್ಟು ಸಮುದ್ರಕ್ಕೆ ಹಾರಿದ್ದಾರೆ. ಅವಿವಾಹಿತರಾಗಿರುವ ಜಗದೀಶ್ ಅವರ ಪಸ್೯ನಲ್ಲಿ ಚಿನ್ನ ಅಡವಿಟ್ಟ ಚೀಟಿ, ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಿದ ಚೀಟಿಗಳು ಪತ್ತೆಯಾಗಿವೆ.ಅವಿವಾಹಿತರಾಗಿರುವ ಜಗದೀಶ್ ತಂದೆ ತಾಯಿ ಹಾಗೂ ಇಬ್ಬರು ಸಹೋದರರನ್ನು ಅಗಲಿದ್ದಾರೆ.
ಮಂಗಳೂರು: ದ್ವಿಚಕ್ರ ವಾಹನ ಮತ್ತು ಅಂಗಡಿ ಮುಂಗಟ್ಟುಗಳಲ್ಲಿ ಸರಣಿ ಕಳ್ಳತನ ಮಾಡಿದ ಪ್ರಕರಣದ ಇಬ್ಬರು ಆರೋಪಿಗಳನ್ನು ಮಂಗಳೂರಿನ ಬಂದರು ಠಾಣೆಯ ಪೊಲೀಸರು ಬಂಧಿಸಿ ಎರಡು ದ್ವಿಚಕ್ರ ವಾಹನ ಮತ್ತು ಎರಡು ಲ್ಯಾಪ್ಟಾಪ್ ಸೇರಿದಂತೆ ಒಟ್ಟು ಸುಮಾರು 1 ಲಕ್ಷದ 20 ಸಾವಿರ ರೂ. ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ. ಮಂಗಳೂರಿನ ಕಸ್ಬಾ ಬೆಂಗ್ರೆಯ ನಿವಾಸಿಗಳಾದ ಮೊಹಮ್ಮದ್ ಆಸಿಫ್ ಯಾನೆ ಆಸಿಫ್ ಯಾನೆ ಆಚಿ (32) ಮತ್ತು ಮಹಮ್ಮದ್ ಸಫ್ವಾನ್ (21) ಬಂಧಿತರು. ಮಹಮ್ಮದ್ ಸಿನಾನ್ ಎಂಬವರು ಡಿ.1 ರಂದು ಮಂಗಳೂರು ಉತ್ತರ ದಕ್ಕೆಯ ಬಳಿ ಪಾರ್ಕಿಂಗ್ ಮಾಡಿದ್ದ ಆಕ್ಟಿವಾ ಸ್ಕೂಟರ್ ಕಳವಾದ ಬಗ್ಗೆ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿದ್ದಾಗ ಈ ಇಬ್ಬರು ಆರೋಪಿಗಳು ಪತ್ತೆಯಾಗಿದ್ದಾರೆ. ಆರೋಪಿಗಳಿಂದ ಪಡುಬಿದ್ರೆ ನಗರ ಗ್ರಾಮ ಸೇವಾ ಕೇಂದ್ರದಿಂದ ಕಳವು ಮಾಡಿದ 2 ಲ್ಯಾಪ್ ಟಾಪ್ ಹಾಗೂ ಮಂಗಳೂರು ಉತ್ತರ ದಕ್ಕೆಯ ಪಾರ್ಕಿಂಗ್ ಸ್ಥಳದಿಂದ ಕಳವು ಮಾಡಿದ ಆಕ್ಟಿವಾ ಸ್ಕೂಟರ್…
ಮಂಗಳೂರು: ನಗರದ ಕಣ್ಣೂರು, ಬಜಾಲ್ ಹಾಗೂ ಬಡ್ಡ ಗ್ರಾಮದ ಸಿ.ಆರ್.ಝಡ್ ವಲಯದಲ್ಲಿ ಹರಿಯುವ ನೇತ್ರಾವತಿ ನದಿ ಪಾತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿ ಗಣಿ ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಐದು ದೋಣಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಗಣಿ ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿವಕೆ ಎಂ ನಾಗಭೂಷಣ್ ಮತ್ತು ಭೂವಿಜ್ಞಾನಿಗಳಾದ ಗಿರೀಶ್ ಮೋಹನ್ ಎಸ್ ಎನ್, ಡಾ॥ ಮಹದೇಶ್ವರ ಹೆಚ್.ಎಸ್ ಕಾರ್ಯಾಚರಣೆ ನಡೆಸಿದ್ದಾರೆ. ಇವರು ಕಣ್ಣೂರು ಗ್ರಾಮದ ಮಸೀದಿಯ ಬಳಿ ಹೋಗಿ ಅಲ್ಲಿಂದ ಮೋಟಾರು ಚಾಲಿತ ದೋಣಿಯಲ್ಲಿ ನೇತ್ರಾವತಿ ನದಿಯಲ್ಲಿ ಬಡ್ಲ ಬಜಾಲ್ ಎಂಬ ಪ್ರದೇಶಕ್ಕೆ ತೆರಳಿ ಅಕ್ರಮ ಸಾಮಾನ್ಯ ಮರಳು ಗಣಿಗಾರಿಕೆಯಲ್ಲಿ ತೊಡಗಿದ್ದ ಐದು ದೋಣಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೊಹಮ್ಮದ್ ತೋಹಿಬ್ ಅಲಿಯಾಸ್ ಅಬ್ದುಲ್ ಹಮೀದ್, ಅಝರ್ ಬಜಾಲ್, ಹಸನಬ್ಬ, ಅಬ್ದುಲ್ ರೆಹಮಾನ್ ದೋಣಿಗಳ ಮಾಲಕರಾಗಿದ್ದಾರೆ. ಆರೋಪಿಗಳು ತಾವಾಗಿಯೇ ವಶಕ್ಕೆ ತೆಗೆದುಕೊಂಡಿರುವ ದೋಣಿಗಳು ತಮ್ಮದೆಂದು ಒಪ್ಪಿಕೊಂಡಿದ್ದಾರೆ. ಅಲ್ಲದೆ ಸ್ಥಳೀಯರೂ ಈ ದೋಣಿಗಳು ಅವರದ್ದೇ ಎಂದು…
ಬೆಂಗಳೂರು : 2019ರ ಏಪ್ರಿಲ್ 1ಕ್ಕಿಂತ ಮೊದಲು ನೊಂದಾಯಿಸಲಾದ ಎಲ್ಲಾ ವಾಹನಗಳು 2024 ಫೆಬ್ರವರಿ 17ರ ಒಳಗಾಗಿ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್ಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಲು ಸರ್ಕಾರ ಸೂಚನೆ ನೀಡಿದ್ದು, ಫೆಬ್ರವರಿ 17 ಕೊನೆಯ ದಿನಾಂಕವಾಗಿದೆ. 2019ರ ಏಪ್ರಿಲ್ ಕ್ಕಿಂತ ಮೊದಲು ನೋಂದಣಿ ಮಾಡಿಸಿಕೊಂಡ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಲಘು ಮೋಟಾರು ವಾಹನ, ಮಧ್ಯಮ ಮತ್ತು ಬಾರಿ ವಾಣಿಜ್ಯ ವಾಹನಗಳು, ಟ್ರ್ಯಾಕ್ಟರ್, ಪ್ರಯಾಣಿಕರ ಕಾರು ಸೇರಿ ಎಲ್ಲ ಹಳೆಯ ವಾಹನಗಳಿಗೆ ಈ ನಿಯಮ ಅನ್ವಯವಾಗಲಿದೆ. ವಾಹನ ಮಾಲಿಕರು ಆನ್ಲೈನ್ ವೆಬ್ಸೈಟ್ ಗೆ ಭೇಟಿ ನೀಡಿ ನೊಂದಾಯಿಸಿ ಆನ್ ಲೈನ್ ಮೂಲಕವೇ ಹೆಚ್.ಎಸ್.ಆರ್.ಪಿ ಶುಲ್ಕವನ್ನು ಪಾವತಿಸಿ ನಂತರ ವಾಹನ ಡೀಲರ್ ಬಳಿ ನಂಬರ್ ಪ್ಲೇಟ್ಗಳನ್ನು ಅಳವಡಿಸಿಕೊಳ್ಳಬೇಕು. ಹೆಚ್.ಎಸ್.ಆರ್.ಪಿ ಎಂಬುದು ವಾಹನಗಳ ನೋಂದಣಿ ನಂಬರ್ ಪ್ಲೇಟ್ ಆಗಿದ್ದು, ಅಲ್ಯೂಮಿನಿಯಂ ಲೋಹದಲ್ಲಿ ತಯಾರಿಸಲಾಗಿದ್ದು, ಇದರಲ್ಲಿ ಲೇಸóರ್ ಕೋಡ್ ಇದ್ದು ಸ್ಕ್ಯಾನ್ ಮಾಡಿದಾಗ ವಾಹನದ ಸಂಪೂರ್ಣ ಮಾಹಿತಿ ಹಾಗೂ ಅಶೋಕಚಕ್ರದ ಚಿತ್ರವನ್ನು ಒಳಗೊಂಡಿದೆ. ನಕಲಿ ನಂಬರ್ ಪ್ಲೇಟ್…
ರಾಜ್ಯದಲ್ಲಿ ಕೊರೊನಾ ರೂಪಾಂತರಿ ತಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ 60 ವರ್ಷದ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕುಶಾಲ್ ನಗರದಲ್ಲಿ ಇಂದು ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಕೋವಿಡ್ ವಿಚಾರವಾಗಿ ಇಲಾಖೆಯಿಂದ ಇಂದು ಮಾರ್ಗಸೂಚಿ ಹೊರಡಿಸಲಾಗುವುದು ಎಂದು ತಿಳಿಸಿದರು. ಕೊರೋನಾ ರೂಪಾಂತರಿ ಬಗ್ಗೆ ಯಾರೂ ಕೂಡ ಆತಂಕಪಡಬೇಕಿಲ್ಲ. ಮುನ್ನೆಚ್ಚರಿಕೆ ಕ್ರಮಗಳನ್ನ ತೆಗೆದುಕೊಳ್ಳುವ ನಿಟ್ಟಿನಲ್ಲಿ ಈಗಾಗಲೇ ನಾನು ಒಂದು ಸುತ್ತಿನ ಸಭೆಯನ್ನ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ನಡೆಸಿದ್ದೇನೆ. ಅಲ್ಲದೇ ಡಾ. ರವಿ ಅವರ ನೇತೃತ್ವದ ತಾಂತ್ರಿಕ ಸಲಹಾ ಸಮಿತಿ ಕೂಡಾ ನಿನ್ನಯೇ ಸಭೆ ನಡೆಸಿ ಕೆಲವು ಸಲಹೆಗಳನ್ನ ನೀಡಿದ್ದಾರೆ. 60 ವರ್ಷ ಮೇಲ್ಪಟ್ಟವರು ಹಾಗೂ ಹೃದಯ ಸಂಬಂಧಿ ಕಾಯಿಲೆ ಹೊಂದಿದವರು, ಉಸಿರಾಟದ ಸಮಸ್ಯೆ ಇರುವವರಿಗೆ ಮಾಸ್ಕ್ ಕಡ್ಡಾಯಗೊಳಿಸುವಂತೆ ಸಮಿತಿಯವರು ಸಲಹೆ ನೀಡಿದ್ದಾರೆ. ಸಮಿತಿಯ ಸಲಹೆಗಳನ್ನ ಆಧರಿಸಿ ಆರೋಗ್ಯ ಇಲಾಖೆಯಿಂದ ಇಂದು ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಹೆಚ್ಚು ಟೆಸ್ಟಿಂಗ್ ಮಾಡುವಂತೆ ಆರೋಗ್ಯ…
ಬೆಂಗಳೂರು : ವಾಹನ ಸವಾರರು ಟ್ರಾಫಿಕ್ ನಿಯಮ ಉಲ್ಲಂಘಿಸಿದರೆ ಸಂಚಾರಿ ಪೊಲೀಸರು ಯಾವುದೇ ಸಂದರ್ಭದಲ್ಲಿ ವಾಹನ ಸವಾರರಿಂದ ದಂಡದ ಮೊತ್ತ ಸಂಗ್ರಹಿಸುವ ಅವಕಾಶವಿಲ್ಲ ಎಂದು ಹೈಕೋರ್ಟ್ ತಿಳಿಸಿದೆ. ಹೆಲ್ಲೆಟ್ ಧರಿಸದೇ ಇರುವುದಕ್ಕೆ ದಂಡಪಾವತಿಸಲು ನಿರಾಕರಿಸಿದ ಮತ್ತು ಬಲಪ್ರಯೋಗ ನಡೆಸಿ ಸರ್ಕಾರಿ ಅಧಿಕಾರಿಯ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ್ದ ಆರೋಪಸಂಬಂಧ ತಮ್ಮ ವಿರುದ್ಧದ ದೋಷಾರೋಪ ಪಟ್ಟಿ ರದ್ದು ಮಾಡುವಂತೆ ಕೋರಿ ಕೆ.ಆರ್.ಪೇಟೆ ಪಟ್ಟಣದ ಸುಭಾಷ್ ನಗರದ ನಿವಾಸಿ ಕೆ.ಟಿ.ನಟರಾಜು ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಹೇಮಂತ್ ಚೆಂದನ್ ಗೌಡರ್ ಅವರ ಪೀಠ ಈ ಆದೇಶ ಮಾಡಿದೆ. ಸಂಚಾರ ನಿಯಮ ಉಲ್ಲಂಘಿಸುವ ಪ್ರಕರಣಗಳಲ್ಲಿ ಪೊಲೀಸರು ತಪಾಸಣೆ ಮಾಡುವುದನ್ನು ವಿಡಿಯೋ ಚಿತ್ರೀಕರಣ ಮಾಡಬೇಕಾಗುತ್ತದೆ ಹಾಗೂ ಸಂಚಾರ ಪೊಲೀಸರು ಯಾವುದೇ ಸಂದರ್ಭದಲ್ಲಿ ಆರೋಪಿಯಿಂದ ದಂಡದ ಮೊತ್ತ ಸಂಗ್ರಹಿಸಲು ಅವಕಾಶವಿಲ್ಲ ಎಂದು ಹೈಕೋರ್ಟ್ ಪುನರುಚ್ಚರಿಸಿದೆ. ಹೈಕೋರ್ಟ್ ನೀಡಿದ್ದ ತೀರ್ಪು ಉಲ್ಲೇಖಿಸಿದ ನ್ಯಾಯಪೀಠ, ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರ ಕಚೇರಿ ಹೊರಡಿಸಿರುವ ಸುತ್ತೋಲೆ ಪ್ರಕಾರ, ದಂಡದ ಮೊತ್ತವನ್ನು ನಿರ್ಧರಿಸಲು ನ್ಯಾಯಾಲಯಕ್ಕೆ…










