ಮಂಗಳೂರಿನ ಬಿಕರ್ನಕಟ್ಟೆಯ ಕಾರ್ಮೆಲ್ ಹಿಲ್ನಲ್ಲಿರುವ ಬಾಲ ಯೇಸುವಿನ ಪುಣ್ಯಕ್ಷೇತ್ರವು, ಕ್ರಿಸ್ಮಸ್ ಹಬ್ಬದ ಮೂರನೇ ದಿನದಂದು ಆಚರಿಸಲಾಗುವ ‘ಹೋಲಿ ಇನ್ನೋಸೆಂಟ್ಸ್’ (ಪವಿತ್ರ ಮುಗ್ಧರ ಹಬ್ಬ) ದಿನದಂದು ಮಕ್ಕಳ ಮೇಲೆ, ವಿಶೇಷವಾಗಿ ಶಿಶುಗಳ ಮೇಲೆ ದೇವರ ಆಶೀರ್ವಾದವನ್ನು ಕೋರುವ ತನ್ನ ಸುದೀರ್ಘ ಸಂಪ್ರದಾಯವನ್ನು ಆಚರಿಸಿತು. ಯಹೂದಿಗಳ ರಾಜನಾಗಿ ಜನಿಸಿದ ಯೇಸುವಿನ ಬಗ್ಗೆ ಭಯಗೊಂಡ ರಾಜ ಹೆರೋದನಿಂದ ಹತ್ಯೆಗೀಡಾದ ಮುಗ್ಧ ಶಿಶು ಹುತಾತ್ಮರ ಸ್ಮರಣಾರ್ಥವಾಗಿ ಈ ಹಬ್ಬವನ್ನು ಆಚರಿಸಲಾಗುತ್ತದೆ. ಮಕ್ಕಳಂಬ ಉಡುಗೊರೆಗಾಗಿ ಸಲ್ಲಿಸಲಾದ ವಿಶೇಷ ಪ್ರಾರ್ಥನೆಗಳಲ್ಲಿ ಪಾಲ್ಗೊಳ್ಳಲು ಪೋಷಕರು ತಮ್ಮ ಪುಟ್ಟ ಮಕ್ಕಳೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪುಣ್ಯಕ್ಷೇತ್ರಕ್ಕೆ ಆಗಮಿಸಿದ್ದರು. ಈ ವರ್ಷ ಬೆಳಿಗ್ಗೆ 10:00 ಗಂಟೆಗೆ ನಡೆದ ಭಕ್ತಿಪೂರ್ವಕ ಆರಾಧನಾ ವಿಧಿಯನ್ನು ಮಡಂತ್ಯಾರಿನ ಆಶಾ ದೀಪ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಅಶ್ವತ್ ಡಿಸೋಜಾ ಅವರು ನಡೆಸಿಕೊಟ್ಟರು. ನಂತರ ಅವರು ಪವಿತ್ರ ಬಲಿಪೂಜೆಯನ್ನು ನೆರವೇರಿಸಿ ಅರ್ಥಪೂರ್ಣ ಪ್ರವಚನ ನೀಡಿದರು. ತಮ್ಮ ಪ್ರವಚನದಲ್ಲಿ ವಂದನೀಯ ಅಶ್ವತ್ ಅವರು, ಯೇಸು ಮಗುವಾಗಿ ಈ ಜಗತ್ತನ್ನು ಪ್ರವೇಶಿಸಿ, “ಜ್ಞಾನದಲ್ಲಿ ಮತ್ತು ಎತ್ತರದಲ್ಲಿ…
Author: main-admin
ಮಂಗಳೂರು: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮಳಲಿ ನಾರ್ಲಪದವು ರಸ್ತೆಯಲ್ಲಿ ಶನಿವಾರ ಬೆಳಿಗ್ಗೆ ಬೀಫ್ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ತಡೆದು ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಘಟನೆಯಲ್ಲಿ 11 ವರ್ಷದ ಬಾಲಕಿಯೊಬ್ಬಳು ಗಾಯಗೊಂಡಿದ್ದಾಳೆ. ಶನಿವಾರ ಬೆಳಿಗ್ಗೆ ಸುಮಾರು 10 ಗಂಟೆಯ ವೇಳೆಗೆ ಅಬ್ದುಲ್ ಸತ್ತಾರ್ ಮುಲ್ಲರ್ ಪಟ್ನ ಎಂಬುವವರು ತಮ್ಮ 11 ವರ್ಷದ ಮಗಳೊಂದಿಗೆ ಬೈಕ್ನಲ್ಲಿ ಸುಮಾರು 19 ಕೆಜಿ ದನದ ಮಾಂಸವನ್ನು ಯಾವುದೇ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದರು. ಮಳಲಿ ನಾರ್ಲಪದವು ರಸ್ತೆಯಲ್ಲಿ ಹೋಗುತ್ತಿದ್ದಾಗ, ಟಾಟಾ ಸುಮೋ ವಾಹನದಲ್ಲಿ ಬಂದ ಎಡಪದವು ನಿವಾಸಿಗಳಾದ ಸುಮಿತ್ ಭಂಡಾರಿ (21) ಮತ್ತು ರಜತ್ ನಾಯ್ಕ್ (30) ಎಂಬುವವರು ಬೈಕನ್ನು ಅಡ್ಡಗಟ್ಟಿದ್ದಾರೆ.ಈ ವೇಳೆ ಬೈಕ್ ನಿಯಂತ್ರಣ ತಪ್ಪಿ ಬಿದ್ದಿದ್ದು, ಸೈಲೆನ್ಸರ್ ತಗುಲಿ ಬಾಲಕಿಯ ಕಾಲಿಗೆ ಸುಟ್ಟ ಗಾಯಗಳಾಗಿವೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಸತ್ತಾರ್ ಅವರು ಬೈಕ್ ಬಿಟ್ಟು ಸ್ಥಳದಿಂದ ಓಡಿಹೋಗಿದ್ದಾರೆ. ತಕ್ಷಣ ಸ್ಥಳೀಯರು ಧಾವಿಸಿ ಗಾಯಗೊಂಡ ಬಾಲಕಿಯನ್ನು ಆಸ್ಪತ್ರೆಗೆ…
ಮಂಗಳೂರು: ಕರಾವಳಿಯ ಸಂಸ್ಕೃತಿ, ಪರಂಪರೆ ಹಾಗೂ ಜಾನಪದ ಕ್ರೀಡಾ ವೈಭವಕ್ಕೆ ಪ್ರತೀಕವಾದ, ಕಂಬಳ ಸಮಿತಿ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಅವರ ನೇತೃತ್ವದಲ್ಲಿ 9ನೇ ವರ್ಷದ ಮಂಗಳೂರು ಕಂಬಳ ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ–ಲಕ್ಷ್ಮಣ ಜೋಡುಕರೆಯಲ್ಲಿ ಭಾರೀ ಜನಸಾಗರದ ನಡುವೆ ಅದ್ಧೂರಿಯಾಗಿ ಆರಂಭಗೊಂಡಿತು. ಬೆಳಿಗ್ಗೆ 8.30ಕ್ಕೆ ಕಂಕನಾಡಿ ಶ್ರೀಬ್ರಹ್ಮಬೈದರ್ಕಳ ಗರಡಿಯ ಅಧ್ಯಕ್ಷ ಕೆ. ಚಿತ್ತರಂಜನ್ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಕಂಬಳಕ್ಕೆ ಅಧಿಕೃತ ಚಾಲನೆ ನೀಡಿದರು. ಕಟೀಲು ಕ್ಷೇತ್ರದ ಅರ್ಚಕ ಅನಂತಪದ್ಮನಾಭ ಅಸ್ರಣ್ಣರು ತೆಂಗಿನ ಕೊಂಬು ಅರಳಿಸುವ ಮೂಲಕ ಜೋಡುಕರೆಯಲ್ಲಿ ಕಂಬಳ ಕೋಣಗಳ ಓಟಕ್ಕೆ ಅಧಿಕೃತ ಮುದ್ರೆ ಒತ್ತಿದರು. ಕಂಬಳ ಕಣದಲ್ಲಿ ಕೋಣಗಳ ಓಟದೊಂದಿಗೆ ಪ್ರೇಕ್ಷಕರ ಸಂಭ್ರಮ, ಜೈಕಾರಗಳ ಘೋಷ ಹಾಗೂ ಸಂಸ್ಕೃತಿಯ ಛಾಪು ಮೇಳೈಸಿ ಕಂಬಳ ಮೈದಾನವೇ ಹಬ್ಬದ ವಾತಾವರಣಕ್ಕೆ ಸಾಕ್ಷಿಯಾಯಿತು. ಪರಿಸರ ಸ್ನೇಹಿ ಪರಿಕಲ್ಪನೆಯಡಿ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಿ, ‘ಕ್ಲೀನ್ ಅಂಡ್ ಸೇಫ್ ಸಿಟಿ’ ಶಿಸ್ತನ್ನು ಕಂಬಳ…
ಧರ್ಮಸ್ಥಳದಲ್ಲಿ ತಲೆಬುರುಡೆ ಪ್ರಕರಣಕ್ಕೆ ಸಂಬOಧಿಸಿ ಮುಂದಿನ ಕ್ರಮಕ್ಕಾಗಿ ಎಸ್ಐಟಿಯು ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿರುವ ವರದಿ ಮೇಲಿನ ವಿಚಾರಣೆ ಪೂರ್ಣಗೊಂಡಿದ್ದು, ಡಿ. 26ಕ್ಕೆ ಕಾಯ್ದಿರಿಸಿದ್ದ ಆದೇಶದ ದಿನವನ್ನು ಡಿ. 29ಕ್ಕೆ ನ್ಯಾಯಾಲಯ ಮುಂದೂಡಿದೆ. ಬೆಳ್ತಂಗಡಿ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯಕ್ಕೆನ.20ರಂದು ‘ಸುಳ್ಳು ಸಾಕ್ಷಿ’ ವರದಿಯನ್ನು ಚಿನ್ನಯ್ಯ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್.ಟಿ, ವಿಠಲ್ ಗೌಡ, ಸುಜಾತಾ ಭಟ್ ವಿರುದ್ಧ ವರದಿ ಸಲ್ಲಿಸಿದ್ದರು. ಇನ್ನು, ಬುರುಡೆ ಷಡ್ಯಂತ್ರ ಪ್ರಕರಣದ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಶುಕ್ರವಾರ ಹಾಜರಾಗಿದ್ದಾನೆ. ಚಿನ್ನಯ್ಯ ಜೈಲಿನಿಂದ ಬಿಡುಗಡೆಯಾದ ಬಳಿಕ ಮೊದಲ ಬಾರಿಗೆ ಡಿ.26 ರಂದು 12 ಗಂಟೆಗೆ ನ್ಯಾಯಾಲಯಕ್ಕೆ ಹಾಜರಾಗಿ ಎಸ್ಐಟಿ ಕಚೇರಿಗೆ ಸಹಿ ಹಾಕಿ ತೆರಳಿದ್ದಾನೆ. ಪ್ರಕರಣಕ್ಕೆ ಸಂಬOಧಿಸಿ ಎಸ್ಐಟಿ ವಶಪಡಿಸಿಕೊಂಡಿರುವ ತಮ್ಮ ಮೊಬೈಲ್ ಫೋನ್ಗಳನ್ನು ಬಿಟ್ಟುಕೊಡಲು ಸೂಚಿಸಬೇಕು ಎಂದು ಉಜಿರೆಯ ಗಣೇಶ್ ಶೆಟ್ಟಿ ಮತ್ತು ಸೌಜನ್ಯಾ ಪರ ಹೋರಾಟಗಾರ ಗಿರೀಶ್ ಮಟ್ಟೆಣ್ಣನವರ ಬೆಳ್ತಂಗಡಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು ಈ ಕುರಿತ ವಿಚಾರಣೆಯನ್ನು ಡಿ.29ಕ್ಕೆ…
ಉಡುಪಿ ಜಿಲ್ಲೆಯ ಪಡುಬಿದ್ರಿ ಹೆಜಮಾಡಿಯ ಶ್ರೀ ಬ್ರಹ್ಮ ಬೈದರ್ಕಳ ಗರಡಿ ನಡೆಯುತ್ತಿದ್ದ ನೇಮೋತ್ಸವದ ವೇಳೆ ವೃದ್ಧೆಯ ಕತ್ತಿನಿಂದ ಚಿನ್ನದ ಸರವನ್ನು ಎಗರಿಸಿದ ಪರಾರಿಯಾಗಿದ್ದ ಮೂವರು ಮಹಿಳೆಯರನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ನಿವಾಸಿಗಳಾದ ಕಾಳಿಯಮ್ಮ, ಶೀಥಲ್ ಹಾಗೂ ಮಾರಿ ಬಂಧಿತ ಆರೋಪಿಗಳು. ಹೆಜಮಾಡಿಯ ಗರಡಿಯಲ್ಲಿ ನಡೆಯುತ್ತಿದ್ದ ನೇಮೋತ್ಸವದ ವೇಳೆ ಕಮಲ ಎಂಬವರ ಕತ್ತಿನಿಂದ ಸರ ಎಗರಿಸುವ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆ ಮಹಿಳೆಯರನ್ನು ಪುತ್ತೂರಿನಲ್ಲಿ ಗುರುತಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅದರಂತೆ ಪಡುಬಿದ್ರೆ ಪೊಲೀಸರು ಮಹಿಳೆಯರನ್ನು ಬಂಧಿಸಿದ್ದಾರೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಮಂಗಳೂರು: ಕೆಲಸ ಮುಗಿಸಿ ಮನೆಗೆ ವಾಪಸ್ ಹೋಗುತ್ತಿದ್ದ ಮಹಿಳೆಯ ಕತ್ತಿನಲ್ಲಿದ್ದ ಮೂರುವರೆ ಪವನ್ ತೂಕದ ಚಿನ್ನದ ಸರ ಕಸಿದು ಕಳ್ಳನೊಬ್ಬ ಪರಾರಿಯಾದ ಘಟನೆ ಮಂಗಳೂರಿನ ಕೊಂಚಾಡಿ ಕೊಪ್ಪಲಕಾಡಿನಲ್ಲಿ ಗುರುವಾರ ಸಂಜೆ ನಡೆದಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ. ಸರ ಎಗರಿಸಿದ ವ್ಯಕ್ತಿ ಸ್ವಲ್ಪ ದೂರ ಹೋದ ಬಳಿಕ ತನ್ನ ಬಟ್ಟೆ ಬದಲಾವಣೆ ಮಾಡಿ, ಕಣ್ಮರೆಯಾಗಿದ್ದಾನೆ. ಇನ್ನು ಘಟನಾ ಸ್ಥಳಕ್ಕೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸರಗಳ್ಳನ ಚಲನ ವಲನದ ದೃಶ್ಯಾವಳಿಗಳು ಮನೆಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಕಡಬ: ಬಾರ್ವೊಂದರಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯೊರ್ವ 6,57,104 ಮೌಲ್ಯದ ಮಧ್ಯ ಮಾರಾಟ ಮಾಡಿ ವ್ಯಾಪಾರದ ನಗದನ್ನು ಕಳವು ಮಾಡಿ ಪರಾರಿಯಾದ ಘಟನೆ ಕಡಬ ಬಿಳಿನೆಲೆ ಗ್ರಾಮದ ನೆಟ್ಟಣ ಎಂಬಲ್ಲಿ ನಡೆದಿದೆ. ವಿಶಾಲ್ ಸ್ಟೀಫನ್(25) ಬಿಳಿನೆಲೆ ಗ್ರಾಮ ಕಡಬ ಎಂಬವರ ದೂರಿನಂತೆ ಅವರ ತಾಯಿ ಕಡಬ ಬಿಳಿನೆಲೆ ಗ್ರಾಮದ ನೆಟ್ಟಣ ಎಂಬಲ್ಲಿ ಬಾರ್ ಹೊಂದಿದ್ದು, ಬಾರ್ನಲ್ಲಿ ಕಡಬ ಹುಂಚಪ್ಪಡಿ ನಿವಾಸಿ ಹರ್ಷಿತ್ ಬಿ ಕೆ ಎಂಬಾತನು ಸುಮಾರು 7 ವರ್ಷಗಳಿಂದ ಕೆಲಸ ಮಾಡುತ್ತಿದ್ದು, ಆತನೇ ದಿನನಿತ್ಯದ ಹಣಕಾಸಿನ ವ್ಯವಹಾರ, ಸ್ಟಾಕ್ ನಿರ್ವಹಣೆ ಹಾಗೂ ಮೇಲ್ವಿಚಾರಣೆಯನ್ನು ನಿರ್ವಹಿಸುತ್ತಿದ್ದ. ಡಿ.21ರಂದು ರಾತ್ರಿ ವಿಶಾಲ್ ಸ್ಟೀಫನ್ರವರು ಬಾರಿನ ವಹಿವಾಟು ಬಗ್ಗೆ ಪರಿಶೀಲನೆ ನಡೆಸಿದಾಗ ವಹಿವಾಟಿನಲ್ಲಿ ವ್ಯತ್ಯಯ ಕಂಡುಬಂದಿರುತ್ತದೆ. ಈ ಬಗ್ಗೆ ಹರ್ಷಿತ್ ಬಳಿ ವಿಚಾರಿಸಿದಾಗ ಮರುದಿನ ಡಿ.22ರಂದು ಸರಿಯಾಗಲಿದೆ ಹಾಗೂ ವ್ಯಾಪಾರದ ನಗದನ್ನು ಮರುದಿನವೇ ಬ್ಯಾಂಕಿನಲ್ಲಿ ಜಮೆ ಮಾಡುವುದಾಗಿ ತಿಳಿಸಿರುತ್ತಾನೆ. ಆದರೆ ಮರುದಿನ ಹಣ ಜಮೆಯಾಗದಿರುವುದರಿಂದ ಆತನ ಬಳಿ ವಿಚಾರಿಸಲು ಆತ ವಾಸ್ತವ್ಯವಿದ್ದ ಕೊಠಡಿಗೆ ಹೋದಾಗ ಆತನು…
ಮೈಸೂರು : ದೆಹಲಿಯಲ್ಲಿ ಕಾರು ಬಾಂಬ್ ಸ್ಪೋಟ ಬೆನ್ನಲ್ಲೇ ರಾಜ್ಯದಲ್ಲಿ ಕೂಡ ಹೈ ಅಲರ್ಟ್ ಘೋಷಿಸಲಾಗಿದ್ದು, ಇನ್ನು ನಿನ್ನೆ ಮೈಸೂರು ಅರಮನೆ ಆವರಣದಲ್ಲಿ ಹೀಲಿಯಂ ಸಿಲಿಂಡರ್ ಸ್ಫೋಟಕ್ಕೆ ಕಾರಣ ಏನೆಂಬುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಘಟನೆ ಸಂಬಂಧ ಇದೀಗ ಮೈಸೂರು ಪೊಲೀಸರು ಎಫ್ಐಆರ್ ದಾಖಲಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಇದೀಗ ಈ ಒಂದು ಸ್ಫೋಟಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಇಂದು ಮೈಸೂರಿಗೆ ಎನ್ಐಎ ತಂಡ ಆಗಮಿಸಲಿದೆ. ಮೈಸೂರು ಅರಮನೆಯ ಬಳಿಯ ಘಟನೆಗೆ ಸಂಬಂಧಿಸಿದಂತೆ ಪರಿಶೀಲನೆ ಮಾಡಲಿದೆ. ಸ್ಪೋಟದ ಸಂಪೂರ್ಣ ಮಾಹಿತಿಯನ್ನು ಅಧಿಕಾರಿಗಳು ಕಲೆ ಹಾಕಲಿದ್ದಾರೆ ಸದ್ಯ ಪೊಲೀಸರು ಎಲ್ಲಾ ಆಯಾಮಗಳಿಂದ ತನಿಖೆ ನಡೆಸುತ್ತಿದ್ದಾರೆ.ಇನ್ನು ಹೀಲಿಯಂ ಸಿಲಿಂಡರ್ ಸ್ಫೋಟಕ್ಕೆ ಹೀಲಿಯಂ ಗ್ಯಾಸ್ ತುಂಬುವ ವೇಳೆ ಒತ್ತಡ ಹೆಚ್ಚಾಗಿ ಸ್ಫೋಟಗೊಂಡಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಹೌದು ಮೈಸೂರು ಅರಮನೆ ಮುಂಭಾಗದಲ್ಲಿ ಹೀಲಿಯಂ ಗ್ಯಾಸ್ ತುಂಬಿದ್ದ ಸಿಲಿಂಡರ್ ಸ್ಪೋಟಗೊಂಡು ಬಲೂನ್ ವ್ಯಾಪಾರಿ ಸಲೀಂ ಮೃತಪಟ್ಟ ಘಟನೆಯ ಅಸಲಿ ಕಾರಣ ಈಗ ಬಹಿರಂಗವಾಗಿದೆ. ಸಲೀಂ…
ಸರ್ಕಾರಿ ಕಾರಿಗೆ ಇಲಾಖೆಯ ಹೆಸರು ಹಾಕಿಕೊಳ್ಳುವುದು ಮಾಮೂಲಿ. ಪೊಲೀಸ್ ಆದರೇ ಪೊಲೀಸ್, ಕಂದಾಯ ಇಲಾಖೆ ಆದರೇ ಕಂದಾಯ, ಅಬಕಾರಿ ಇಲಾಖೆ ಆದರೇ ಅಬಕಾರಿ ಅಂತ ಹೀಗೆ. ಆದರೇ ಇಲ್ಲೊಬ್ಬ ಪೊಲೀಸ್ ಅಧಿಕಾರಿ ತನ್ನ ಸ್ವಂತ ಕಾರಿಗೆ ಪೊಲೀಸ್ ಅಂತ ನಾಮಫಲಕ ಹಾಕಿಕೊಂಡು ಫ್ಯಾಮಿಲಿ ಸಹಿತ ಟ್ರಿಪ್ ಗೆ ತೆರಳಿದ್ದಾಗ ಪೊಲೀಸರಿಗೆ ಸಿಕ್ಕಿ ಬಿದ್ದಿರುವಂತ ಘಟನೆ ಚಿಕ್ಕಮಗಳೂರಲ್ಲಿ ನಡೆದಿದೆ. ಇಂತಹ ಅಧಿಕಾರಿಗೆ ಕಾನೂನು ಬಿಸಿ ಮುಟ್ಟಿಸಿದಂತ ಪಿಎಸ್ಐ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದಲ್ಲಿ ಹೊಸ ವರ್ಷದ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರ ವಾಹನಗಳನ್ನು ಬಣಕಲ್ ಠಾಣೆಯ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ರೇಣುಕಾ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಖಾಸಗಿ ವಾಹನವಾಗಿದ್ದರೂ ಪೊಲೀಸ್ ಎನ್ನುವಂತ ನಾಮಫಲಕವೊಂದನ್ನು ಹಾಕಿದ್ದು ಕಂಡು ಬಂದಿದೆ. ಸ್ವಂತ ವಾಹನಕ್ಕೆ ಪೊಲೀಸ್ ಎಂಬುದಾಗಿ ನಾಮಫಲಕ ಹೊಂದಿದ್ದನ್ನು ಪರಿಶೀಲಿಸಿದಾಗ, ಅವರು ಧಾರವಾಡದಿಂದ ಧರ್ಮಸ್ಥಳಕ್ಕೆ ಕುಟುಂಬ ಸಮೇತ ಫ್ಯಾಮಿಲಿ ಟ್ರಿಪ್ ಬಂದಿರೋದು ತಿಳಿದು ಬಂದಿದೆ. ಕರ್ತವ್ಯದಲ್ಲಿ ಇಲ್ಲದೇ…
ಸುರತ್ಕಲ್: ಮನೆಯಲ್ಲಿ ಜಗಳವಾಡಿ ಮನೆಬಿಟ್ಟು ಹೋದ ಯುವಕನೋರ್ವ ಬಳಿಕ ನಾಪತ್ತೆಯಾಗಿರುವ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧನರಾಜ್ (25) ನಾಪತ್ತೆಯಾಗಿದ್ದ ಯುವಕ. ಈತ ಹೋಮ್ ನರ್ಸ್ ಕೆಲಸ ಮಾಡಿಕೊಂಡಿದ್ದು, ತಿಂಗಳಿಗೊಮ್ಮೆ ಮನೆಗೆ ಬರುತ್ತಿದ್ದರು. ಡಿಸೆಂಬರ್ 19 ರಂದು ಮನೆಯಲ್ಲಿ ಜಗಳ ಮಾಡಿಕೊಂಡು ಮನೆ ಬಿಟ್ಟು ಹೋದವರು ಡಿಸೆಂಬರ್ 21 ರಂದು ನಾನು ಇನ್ನು ಮನೆಗೆ ಬರುವುದಿಲ್ಲ ಎಂದು ವಾಟ್ಸಾಪ್ ಮೆಸೇಜ್ ಮಾಡಿ ನಂತರ ಮೊಬೈಲ್ ಸ್ವಿಚ್ ಆಪ್ ಮಾಡಿದ್ದಾರೆ. ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದವರ ಚಹರೆ :ಎತ್ತರ: 5.0 ಅಡಿ, ಎಣ್ಣೆ ಕಪ್ಪು ಮೈಬಣ್ಣ, ಸಪೂರ ಶರೀರ, ಕೋಲು ಮುಖ ಹೊಂದಿರುತ್ತಾರೆ. ಮನೆಯಿಂದ ಹೋಗುವಾಗ ಕಪ್ಪು ಅರ್ಧ ತೋಳಿನ ಶರ್ಟ್, ಕಪ್ಪು ಬಣ್ಣದ ಟ್ರ್ಯಾಕ್ ಪ್ಯಾಂಟ್ ಧರಿಸಿದ್ದು ಕನ್ನಡ, ತುಳು, ಹಿಂದಿ ಭಾಷೆ ಮಾತನಾಡುತ್ತಾರೆ. ಕಾಣೆಯಾದವರ ಬಗ್ಗೆ ಮಾಹಿತಿ ತಿಳಿದು ಬಂದಲ್ಲಿ ಸುರತ್ಕಲ್ ಪೊಲೀಸ್ ಠಾಣೆಯನ್ನು ಸಂಪರ್ಕಿಸುವ0ತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










