Author: main-admin

ಮಂಗಳೂರು: 17 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮತ್ತು ಸುಮಾರು 4 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮೂಡಬಿದ್ರೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆ. ಅಬ್ದುಲ್ ಬಶೀರ್ @ ಅರ್ಗ ಬಶೀರ್(50) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಮಂಗಳೂರು ನಗರ, ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸುಮಾರು 17 ಪ್ರಕರಣಗಳು ದಾಖಲಾಗಿದ್ದು, ನ್ಯಾಯಾಲಯವು ಈತನ ವಿರುದ್ಧ ದಸ್ತಗಿರಿ ಮತ್ತು ಉದ್ಗೋಷಣ ವಾರಂಟ್ ಹೊರಡಿಸಿದ್ದರೂ, ಆತನು ತನ್ನ ಮೂಲ ನಿವಾಸ ತೊರೆದು ಬಂಟ್ವಾಳ ತಾಲೂಕಿನ ಬಿ.ಸಿ ರೋಡ್‌ನ ಪರ್ಲಿಯಾ ಎಂಬಲ್ಲಿ ಬಾಡಿಗೆ ಮನೆಯಲ್ಲಿ ತಲೆಮರೆಸಿಕೊಂಡಿದ್ದನು. ಮಾಹಿತಿದಾರರ ಖಚಿತ ಮಾಹಿತಿಯ ಆಧಾರದಲ್ಲಿ, ದಿನಾಂಕ ‌ಎಪ್ರಿಲ್ 18 ರಂದು ಸಂಜೆ 7:30ರ ಸುಮಾರಿಗೆ ಪೊಲೀಸರು ದಾಳಿ ನಡೆಸಿ ಬಂಟ್ವಾಳ ತಾಲೂಕಿನ ಬಿ.ಸಿ ರೋಡ್, ಪರ್ಲಿಯ ಎಂಬಲ್ಲಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯ ವಿರುದ್ಧ ಕಳ್ಳತನ, ದರೋಡೆ, ಹಲ್ಲೆ ಸೇರಿದಂತೆ ವಿವಿಧ ಪ್ರಕರಣಗಳು ದಾಖಲಾಗಿದೆ. ಈ ಕಾರ್ಯಾಚರಣೆಯನ್ನು ಮೇಲಾಧಿಕಾರಿಗಳ…

Read More

ಮೈಸೂರು : ನಿನ್ನೆ ಮೈಸೂರಲ್ಲಿ ವ್ಯಕ್ತಿಯ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇದೀಗ ಈ ಒಂದು ಪ್ರಕರಣಕ್ಕೆ ಬಿಗ್ ಟ್ರಸ್ಟ ಸಿಕ್ಕಿದ್ದು, ಮೃತ ಜವರಪ್ಪನನ್ನು ಹಾಕೆ ಪತ್ನಿಯೇ ಪ್ರಿಯಕರಣ ಜೊತೆಗೆ ಸೇರಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಿ ಎಂದು ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಪತ್ನಿ ಕೊಲೆ ಮಾಡಿಸಿದ್ದಾಳೆ. ಹೌದು ಸರಗೂರು ತಾಲೂಕಿನ ಕುರ್ಣೇಗಾಲ ಗ್ರಾಮದಲ್ಲಿ ವ್ಯಕ್ತಿ ಅನುಮಾನಾಸ್ಪಾದ ಸಾವು ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್​​ ಸಿಕ್ಕಿದೆ. ಜವರಪ್ಪ ಕೊಲೆಯಾದ ದುರ್ದೈವಿಯಾಗಿದ್ದು, ಪ್ರಕರಣ ಸಂಬಂಧ ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ ಸಿದ್ದೇಶ್ (32) ಮತ್ತು ಕುರ್ಣೆಗಾಲ ಗ್ರಾಮದ ಅಮೃತಾ(26)ಳನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮ ಸಂಬಂಧ ಅಡ್ಡಿಯಾಗುತ್ತಿದ್ದಾನೆ ಎಂಬ ಕಾರಣಕ್ಕೆ ಕೊಲೆ ನಡೆದಿದೆ ಎನ್ನಲಾಗ್ತಿದೆ. ಕುರ್ಣೇಗಾಲ ಗ್ರಾಮದ ಜವರಪ್ಪ ನಂಜನಗೂಡು ತಾಲೂಕಿನ ಹಾಡ್ಯ ಗ್ರಾಮದ ಅಮೃತಾಳನ್ನ ವಿವಾಹವಾಗಿದ್ದು, ದಂಪತಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ. ಸಣ್ಣಪುಟ್ಟ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದ್ದು, 12 ದಿನಗಳ ಹಿಂದೆ…

Read More

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಯುವಕರು ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಇಬ್ಬರು ಯುವಕರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ 15 ವರ್ಷದ ಬಾಲಕಿಯನ್ನು ಇಬ್ಬರು ಯುವಕರು ಪುಸಲಾಯಿಸಿ ಎರ್ಮಾಯಿ ಫಾಲ್ಸ್ ಬಳಿಯ ಕಾಡಿಗೆ ಏ. 16 ರಂದು ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿರುವ ಬಗ್ಗೆ ಮನೆಯವರಿಗೆ ಬಾಲಕಿ ತಿಳಿಸಿದ್ದು ಅದರಂತೆ ಪೋಷಕರು ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಏ.17 ರಂದು ದೂರು ನೀಡಿದ್ದು ಅದರಂತೆ ಪೊಲೀಸರು ಪೋಕೋ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ. ಬಿ.ಎಸ್ ನೇತೃತ್ವದ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸಮರ್ಥ ಆರ್ ಗಾಣಿಗೇರ ತಂಡ ಪ್ರಕರಣದಲ್ಲಿ ಭಾಗಿಯಾದ ಬೆಳ್ತಂಗಡಿ ತಾಲೂಕಿನ ಕಡುರುದ್ಯಾವರ ಗ್ರಾಮದ ಸುಮಂತ್ (28) ಮತ್ತು ಬೆಳ್ತಂಗಡಿ ತಾಲೂಕಿ ಗರ್ಡಾಡಿ ಗ್ರಾಮದ ನವನೀತ್ (26) ನನ್ನು ಏ.18 ರಂದು ಸಂಜೆ ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ನವ…

Read More

ಹೊಸದಿಲ್ಲಿ/ಹೈದರಾಬಾದ್‌: ಹಿರಿಯ ನಾಗರಿಕರೊಬ್ಬರನ್ನು ಡಿಜಿಟಲ್ ಬಂಧನದಲ್ಲಿರಿಸಿ 1.6 ಕೋಟಿ ರೂ. ಸುಲಿಗೆ ಮಾಡಿದ, ಸೈಬರ್ ವಂಚನೆಯ ಹಗರಣವನ್ನು ಸಿಬಿಐ ಭೇದಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ಶನಿವಾರ ತೆಲಂಗಾಣ ಹಾಗೂ ಆಂಧ್ರಪ್ರದೇಶದ ಐದು ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದು, ಮಾಜಿ ಸಹಾಯಕ ಬ್ಯಾಂಕ್ ಮ್ಯಾನೇಜ‌ರ್ ಸಹಿತ ಮೂವರನ್ನು ಬಂಧಿಸಿದೆ.ಸುಪ್ರೀಂಕೋರ್ಟ್ ಆದೇಶದ ಮೇರೆಗೆ ಸಿಬಿಐ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿತ್ತು. ಬಂಧಿತ ಆರೋಪಿಗಳನ್ನು ಇಂಡಸ್ಟ್ರಾಂಡ್ ಬ್ಯಾಂಕ್‌ ಮಾಜಿ ಸಹಾಯಕ ಮ್ಯಾನೇಜ‌ರ್ ಡುಬ್ಬಕ್ಕ ಮಹೇಶ್ ಹಾಗೂ ರಾಜೇಶ್ ಕನ್ನಾ ಹಾಗೂ ವಾಯಲ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಕಾಲ್ಪನಿಕ ‘ಡಿಜಿಟಲ್ ಬಂಧನದ ‘ ಮೂಲಕ ಹಿರಿಯ ನಾಗರಿಕನನ್ನು ಬೆದರಿಸಿ, ಸುಲಿಗೆ ಮಾಡಿದ ಹಣವನ್ನು ನಕಲಿ ಕಂಪೆನಿಯೊಂದರ ಹೆಸರಿನಲ್ಲಿ ತೆರೆಯಲಾದ ಬ್ಯಾಂಕ್‌ ಖಾತೆಗೆ ವರ್ಗಾಯಿಸಲಾಗಿತ್ತು. ಹಣದ ಮೂಲವನ್ನು ಬಚ್ಚಿಡಲು ವಿವಿಧ ವಾಹಿನಿಗಳ ಮೂಲಕ ಈ ಹಣವು ಖಾತೆಗೆ ಹೋಗುವಂತೆ ಮಾಡಲಾಗಿತ್ತು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.ಅಕ್ರಮವಾಗಿ ಬ್ಯಾಂಕ್ ಖಾತೆಯನ್ನು ತೆರೆಯವುದಕ್ಕೆ ಮಹೇಶ್ ನೆರವಾಗಿದ್ದರೆ, ಇನ್ನಿಬ್ಬರು ಅಕ್ರಮ ಹಣದ ವರ್ಗಾವಣೆಯನ್ನು ವ್ಯವಸ್ಥೆಗೊಳಿಸಿದ್ದರೆಂದು ಸಿಬಿಐ ಆಪಾದಿಸಿದೆ.…

Read More

ಪುತ್ತೂರು: ಬೈಕೊಂದು ಡಿವೈಡರ್ ಹಾಗೂ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಶನಿವಾರ ಮಧ್ಯಾಹ್ನ ಪುತ್ತೂರಿನ ಪಡೀಲ್ ನಲ್ಲಿ ನಡೆದಿದೆ. ಮೃತ ಯುವಕನನ್ನು ಬೆಳ್ಳಿಪ್ಪಾಡಿ ನಿವಾಸಿ ಧನರಾಜ್(21) ಎಂದು ಗುರುತಿಸಲಾಗಿದೆ. ಧನರಾಜ್ ಅವರು ಸ್ನೇಹಿತರ ಜೊತೆ ಸೇರಿ ಪುತ್ತೂರು ಜಾತ್ರೆಯ ಗದ್ದೆಯಲ್ಲಿ ಆಹಾರ ಸ್ಟಾಲ್ ಹಾಕಿದ್ದರು. ನಿನ್ನೆ ಮುರ ಬಳಿಯ ಸ್ನೇಹಿತನ ಮನೆಯಲ್ಲೇ ತಂಗಿದ್ದ ‌ಇವರು ಇಂದು ಬಟ್ಟೆ ಬದಲಾಯಿಸಿ ಸ್ಟಾಲ್ ಗೆ ತೆರಳಲು ಮನೆಗೆ ಕಡೆಗೆ ಬೈಕ್ ನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರ ನಿಯಂತ್ರಣ ತಪ್ಪಿ ಬೈಕ್ ಡಿವೈಡರ್ ಹಾಗೂ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದು ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಇನ್ನೊಂದು ಬೈಕ್ ಗೂ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ತಲೆಯ ಭಾಗಕ್ಕೆ ಗಂಭೀರ ಗಾಯವಾದ ಕಾರಣ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ತಂದೆ, ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ. ಸದ್ಯ ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದ್ದು ಸ್ಥಳಕ್ಕೆ…

Read More

ಉಡುಪಿ :ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬಿಹಾರ ಮೂಲದ ಮನೋಜ್ ಕುಮಾರ್‌ (41)ನನ್ನು ಕಾಪು ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ-ಉಡುಪಿ ಉಪವಿಭಾಗದ ಪೊಲೀಸ್‌ ಉಪಾಧೀಕ್ಷಕರು ಹಾಗೂ ಕಾಪು ವೃತ್ತದ ಪೊಲೀಸ್ ನಿರೀಕ್ಷಕರ ಮಾರ್ಗದರ್ಶನದಲ್ಲಿ ಕಾಪು ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ತೇಜಸ್ವಿ ಟಿ.ಐ. ಮತ್ತು ಶುಭಕರ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ಕಾರ್ಯಾಚರಣೆ ನಡೆಸಲಾಗಿತ್ತು. ಎಚ್‌.ಸಿ. ಮೊಹಮ್ಮದ್ ರಫೀಕ್ ಹಾಗೂ ಪಿಸಿಗಳಾದ ಗಣೇಶ್ ಮತ್ತು ಗಂಗಾಧರ್ ಅವರು ಬೆಂಗಳೂರಿನ ಯಲಹಂಕದಲ್ಲಿ ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದುಕೊಂಡರು. ಮಾರ್ಗದರ್ಶನದಲ್ಲಿ ಕಾಪು ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ತೇಜಸ್ವಿ ಟಿ.ಐ. ಮತ್ತು ಶುಭಕರ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ಕಾರ್ಯಾಚರಣೆ ನಡೆಸಲಾಗಿತ್ತು. ಎಚ್‌.ಸಿ. ಮೊಹಮ್ಮದ್ ರಫೀಕ್ ಹಾಗೂ ಪಿಸಿಗಳಾದ ಗಣೇಶ್ ಮತ್ತು ಗಂಗಾಧರ್ ಅವರು ಬೆಂಗಳೂರಿನ ಯಲಹಂಕದಲ್ಲಿ ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದುಕೊಂಡರು. ಬಂಧಿತನನ್ನು ಏಪ್ರಿಲ್ 16ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 6 ತಿಂಗಳ ಶಿಕ್ಷೆ ವಿಧಿಸಿದೆ. ನಂತರ ಆರೋಪಿಯನ್ನು ನ್ಯಾಯಾಂಗ ಬಂಧನದೊಂದಿಗೆ ಉಡುಪಿ ಜಿಲ್ಲಾ…

Read More

ವಿಟ್ಲ : ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಂಟ್ವಾಳ ತಾಲೂಕಿನ ಪೆರುವಾಯಿ ನಿವಾಸಿ ಅಬ್ಬಾಸ್ ಜಿ ಎಂಬಾತನು ವಿಟ್ಲ ಪೊಲೀಸ್ ಠಾಣೆಯ ಅ.ಕ್ರ. ನಂ: 42/2015ರಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿಯಾಗಿದ್ದು, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದನು. ಈತನ ವಿರುದ್ಧ ಹಲವು ಬಾರಿ ವಾರಂಟ್ ಜಾರಿಯಾಗಿತ್ತು.ಆರೋಪಿ ದಿನಾಂಕ ಏಪ್ರಿಲ್ 16ರಂದು ವಿದೇಶದಿಂದ ಮರಳಿದ ವೇಳೆ, ಇಮಿಗ್ರೇಶನ್ ವಿಭಾಗದ ಸಹಕಾರದೊಂದಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಲಾಯಿತು. ಬಂಧನ ಕಾರ್ಯಾಚರಣೆಯಲ್ಲಿ ವಿಟ್ಲ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಮೋಹನ (HC 2264), ಪೊಲೀಸ್ ಕಾನ್ಸ್ಟೇಬಲ್ ವೆಂಕಪ್ಪ (PC 2355) ಹಾಗೂ ಇನ್ನಿತರ ಸಿಬ್ಬಂದಿ ಪಾಲ್ಗೊಂಡಿದ್ದರು.ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Read More

ಬಂಟ್ವಾಳ: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸುಮಾರು 18 ಗ್ರಾಮ್ ತೂಕದ ಚಿನ್ನದ ಸರ ಕಳವಾಗಿದೆ ಎಂದು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಮಹಿಳೆಯೊಬ್ಬರು ದೂರು ನೀಡಿದಂತೆ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಸರಸ್ವತಿ ಎಂಬವರು ತನ್ನ ಮಗಳೊಂದಿಗೆ ಮಡಂತ್ಯಾರಿನಿಂದ ಪೊಳಲಿಗೆ ಹೋಗಲು ಧರ್ಮಸ್ಥಳ ದಿಂದ ಸ್ಟೇಟ್ ಬ್ಯಾಂಕಿಗೆ ಹೋಗುವ ಬಸ್ಸಿನಲ್ಲಿ ಏ.15ರಂದು ಬೆಳಗ್ಗೆ ಸುಮಾರು 8.20ಕ್ಕೆ ಹತ್ತಿದ್ದರು. ಬಸ್ ನಲ್ಲಿ ಜನಸಂದಣಿ ಇದ್ದು, ಮಗಳು ಕುಳಿತಿದ್ದರೆ, ಮಹಿಳೆ ನಿಂತು ಪ್ರಯಾಣಿಸಿದ್ದರು.ಮಗಳೊಂದಿಗೆ ಬಿ.ಸಿ.ರೋಡಿನಲ್ಲಿ ಇಳಿಯುವ ವೇಳೆ ಸುಮಾರು 9 ಗಂಟೆಗೆ ಕುತ್ತಿಗೆ ನೋಡಿದ್ದು, ಈ ವೇಳೆ ಚಿನ್ನದ ಸರ ಇರಲಿಲ್ಲ. ಬಸ್ಸಿನಲ್ಲಿ ಹುಡುಕಾಡಿದರೂ ಸಿಗಲಿಲ್ಲ. ಯಾರೋ ಕಳ್ಳರು ಕುತ್ತಿಗೆಯಲ್ಲಿದ್ದ 18 ಗ್ರಾಂ ತೂಕದ ಚಿನ್ನದ ಸರವನ್ನು ಮಡಂತ್ಯಾರುನಿಂದ ಬಿ.ಸಿ ರೋಡ್ ಗೆ ಬರುವ ಸಮಯ ಬಸ್ಸಿನಲ್ಲಿ ಕಳ್ಳತನ ಮಾಡಿದ್ದಾಗಿ ಅವರು ದೂರಿನಲ್ಲಿ ತಿಳಿಸಿದ್ದಾರೆ. ಕಳ್ಳತನವಾದ ಚಿನ್ನದ ಅಂದಾಜು ಮೌಲ್ಯ ಸುಮಾರು 2,50,000 ಆಗಬಹುದು ಎಂದು ಹೇಳಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read More

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಕ್ಕಿ ಜ್ವರದ (Bird Flu) ಭೀತಿ ಎದುರಾಗಿದ್ದು, ನಗರದ ಹೊರವಲಯದ ಹೆಸರಘಟ್ಟದಲ್ಲಿರುವ ಸರ್ಕಾರಿ ಪೌಲ್ಟ್ರಿ ಫಾರಂನಲ್ಲಿ ಎಚ್5ಎನ್1 (H5N1) ವೈರಸ್ ದೃಢಪಟ್ಟಿದೆ. ಕೇಂದ್ರ ಸರ್ಕಾರದ ಅನುಮತಿಯ ಮೇರೆಗೆ ನಡೆಸಲಾದ ಮೊದಲ ಹಂತದ ತಪಾಸಣೆಯಲ್ಲೇ ಈ ಮಾರಕ ವೈರಸ್ ಪತ್ತೆಯಾಗಿರುವುದು ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಹೆಸರಘಟ್ಟದ ಪಶುಸಂಗೋಪನಾ ಇಲಾಖೆಯ ಅಧೀನದಲ್ಲಿರುವ ಪೌಲ್ಟ್ರಿ ಫಾರಂನಲ್ಲಿ ಕಳೆದ ಕೆಲವು ದಿನಗಳಿಂದ ಕೋಳಿಗಳು ಅಸಹಜವಾಗಿ ಮೃತಪಡುತ್ತಿದ್ದವು. ಈ ಹಿನ್ನೆಲೆಯಲ್ಲಿ ನಡೆಸಲಾದ ಪ್ರಯೋಗಾಲಯ ಪರೀಕ್ಷೆಯ ವರದಿಯು ಹಕ್ಕಿ ಜ್ವರವನ್ನು ಖಚಿತಪಡಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಸೋಂಕಿತ ಫಾರಂನಲ್ಲಿದ್ದ ಸಾವಿರಾರು ಕೋಳಿಗಳನ್ನು ಅಧಿಕಾರಿಗಳ ಸಮ್ಮುಖದಲ್ಲಿ ಗುಂಡಿ ತೆಗೆದು ವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗಿದ್ದು, ಇಡೀ ಪ್ರದೇಶವನ್ನು ಸ್ಯಾನಿಟೈಸ್ ಮಾಡಲಾಗಿದೆ. ಹೆಸರಘಟ್ಟದ ಈ ಪ್ರಮುಖ ಫಾರಂನಿಂದ ರಾಜ್ಯದ ವಿವಿಧ ಭಾಗಗಳಿಗೆ ಕೋಳಿಗಳನ್ನು ಸರಬರಾಜು ಮಾಡಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಪಶು ವೈದ್ಯಾಧಿಕಾರಿಗಳು, ಸುತ್ತಮುತ್ತಲಿನ ಗ್ರಾಮ ಪಂಚಾಯಿತಿಗಳಿಗೆ ತುರ್ತು ನೋಟಿಸ್ ಜಾರಿ ಮಾಡಿದ್ದಾರೆ. ಸೋಂಕು ಪತ್ತೆಯಾದ ಸ್ಥಳದಿಂದ ಒಂದು ಕಿಲೋಮೀಟರ್…

Read More

ಮಂಗಳೂರು: ನಗರದ ಬಿಜೈ ಬಳಿಯ ಖಾಸಗಿ ಲಾಡ್ಜ್‌ವೊಂದರಲ್ಲಿ ಇರಿಸಿದ್ದ ಬ್ಯಾಗ್‌ನಿಂದ ಚಿನ್ನಾಭರಣ ಕಳವಾದ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಬಿಜೈ ಬಳಿಯ ಖಾಸಗಿ ಲಾಡ್ಜ್‌ನಲ್ಲಿ ತಾನು ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಎ.13ರಂದು ಬೆಳಗ್ಗೆ 6:30ರಿಂದ ವಾಸ್ತವ್ಯ ಹೊಂದಿದ್ದು, ಎ.15ರಂದು ಬೆಳಗ್ಗೆ 8:30ಕ್ಕೆ ತಣ್ಣೀರುಬಾವಿ ಬೀಚ್‌ಗೆ ಹೋಗುವ ವೇಳೆ ಬ್ಯಾಗ್‌ ನಲ್ಲಿ ಲ್ಯಾಪ್‌ಟಾಪ್, ಮಕ್ಕಳ ಎರಡು ಉಂಗುರ, ಪತ್ನಿಯ ಒಂದು ಉಂಗುರ ಮತ್ತು ತನಗೆ ಸೇರಿದ ಬ್ರಾಸ್‌ಲೆಟ್‌ ಗಳನ್ನಿಟ್ಟು ರೂಮ್‌ಗೆ ಲಾಕ್ ಮಾಡಿ ಕೀಯನ್ನು ಕೊಂಡು ಹೋಗಿದ್ದೆ. ಅಂದು ಪೂ.11:30 ವಾಪಸ್ ರೂಮ್‌ಗೆ ಬಂದು ಬ್ಯಾಗ್‌ಗಳನ್ನು ಪರಿಶೀಲಿಸಿದಾಗ ಒಡವೆಗಳನ್ನು ಇರಿಸಿದ್ದ ಪ್ಲಾಸ್ಟಿಕ್ ಬಾಕ್ಸ್‌ನಿಂದ ಸುಮಾರು 10 ಗ್ರಾಂ ತೂಕದ ತನ್ನ 1.40 ಲಕ್ಷ ರೂ. ಮೌಲ್ಯದ ಬ್ರಾಸ್‌ಲೆಟ್ ಇರಲಿಲ್ಲ. ಉಳಿದ ವಸ್ತುಗಳು ಯಥಾ ಸ್ಥಿತಿಯಲ್ಲಿತ್ತು. ಸದ್ರಿ ಸೊತ್ತನ್ನು ನಕಲಿ ಕೀ ಬಳಸಿ ಬಾಗಿಲು ತೆರೆದು ಕಳವು ಮಾಡಿರುವ ಸಾಧ್ಯತೆ ಇದೆ ಎಂದು ಎ.ಎನ್. ಶಿವ ಎಂಬವರು ನೀಡಿದ ದೂರಿನಲ್ಲಿ…

Read More