ಮಂಗಳೂರು: ಜಿಲ್ಲೆಯ ಕಡಬ ತಾಲೂಕು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಮಹೋತ್ಸವ ಇದೇ ಡಿಸೆಂಬರ್ 24ರ ವರೆಗೆ ನಡೆಯಲಿದೆ. ಡಿಸೆಂಬರ್ 16ರಿಂದ 19ರವರೆಗೆ ಮುಖ್ಯ ರಥೋತ್ಸವಗಳು ನಡೆಯಲಿದೆ. ಈ ಸಂದರ್ಭದಲ್ಲಿ ಅಪಾರ ಭಕ್ತದಿಗಳು ಸೇರುವುದರಿಂದ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತ ದೃಷ್ಟಿಯಿಂದ ಡಿಸೆಂಬರ್ 17ರಂದು ಬೆಳಿಗ್ಗೆ 6 ಗಂಟೆಯಿಂದ ಡಿಸೆಂಬರ್ 18ರ ಮಧ್ಯರಾತ್ರಿ 12 ಗಂಟೆಯವರೆಗೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಇಂಚಾಡಿ ಬಳಿ ಇರುವ ಪ್ರಶಾಂತ್ ಬಾರ್ ಆಂಡ್ ರೆಸ್ಟೋರೆಂಟ್ ಹಾಗೂ ಬೆಳ್ಳಿ ಬಾರ್ ಆಂಡ್ ರೆಸ್ಟೋರೆಂಟ್ ಗಳನ್ನು ಮತ್ತು ಎಲ್ಲಾ ವಿವಿಧ ಅಮಲು ಪದಾರ್ಥಗಳ ಮಾರಾಟವನ್ನು ನಿರ್ಬಂಧಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಆದೇಶಿಸಿದ್ದಾರೆ.
Author: main-admin
ಮಂಗಳೂರು : ಶಾಲೆಯ ಆವರಣದಲ್ಲಿ ಮದ್ಯಪಾನ ಮಾಡುತ್ತಿದ್ದವರು ಪ್ರಶ್ನಿಸಿದ್ದಕ್ಕೆ ಯುವಕನನ್ನು ಚೂರಿ ಇಂದ ಇರಿದು ಕೊಲೆ ಮಾಡಿದ ಘಟನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಸಾರಸ್ವತಕಾಲನಿ ಎಂಬಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ.ಕೊಲೆಯಾದವನನ್ನು ಸಾರಸ್ವತ ಕಾಲನಿ ನಿವಾಸಿ ವರುಣ್ (28) ಎಂದು ಗುರುತಿಸಲಾಗಿದ್ದು, ಸ್ಥಳೀಯ ಸೂರಜ್ ಎಂಬಾತ ಕೃತ್ಯ ಎಸಗಿರುವುದಾಗಿ ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ. ಕೊಲ್ಯ ಸಾರಸ್ವತ ಕಾಲನಿಯಲ್ಲಿರುವ ಜಾಯ್ಲಾಂಡ್ ಶಾಲೆ ಸಮೀಪ ತಡರಾತ್ರಿ ವೇಳೆ ಸೂರಜ್ ಹಾಗೂ ಇನ್ನಿಬ್ಬರು ಮದ್ಯಪಾನ ನಡೆಸುತ್ತಿರುವುದನ್ನು ವರುಣ್ ಪ್ರಶ್ನಿಸಿದ್ದರು. ಈ ವೇಳೆ ಐದು ಮಂದಿಯ ನಡುವೆ ವಾಗ್ವಾದ ನಡೆದು ಸೂರಜ್ , ವರುಣ್ ಹೃದಯಭಾಗಕ್ಕೆ ಚೂರಿಯಿಂದ ತಿವಿದು ಹತ್ಯೆ ನಡೆಸಿದ್ದಾನೆ
ಉಳ್ಳಾಲ : ಹರೇಕಳ ಪಾವೂರು ಬಳಿ ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಕುರಿತು ಖಚಿತ ಮಾಹಿತಿಯನ್ನು ಆಧರಿಸಿ, ಉಳ್ಳಾಲ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ಬಾಲಕೃಷ್ಣ ನೇತೃತ್ವದ ಪೊಲೀಸರ ತಂಡ, ಗಣಿ ಹಾಗೂ ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಜತೆಗೂಡಿ ಇಂದು ಬೆಳಗ್ಗೆ ದಾಳಿ ನಡೆಸಿ 4 ದೋಣಿಗಳನ್ನು ವಶ ಪಡಿಸಿಕೊಂಡಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ. ನೇತ್ರಾವತಿ ನದಿಯಿಂದ ನಾಡದೋಣಿಗಳ ಮೂಲಕ ಮರಳು ಸಂಗ್ರಹಿಸಿ ಮಾರಾಟ ಮಾಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿತ್ತು.
ಬಂಟ್ವಾಳ: ಪರವಾನಗಿ ಪಡೆಯದೆ ಅಕ್ರಮವಾಗಿ ನೇತ್ರಾವತಿ ನದಿಯಿಂದ ಮರಳು ತೆಗೆದು ಸಾಗಾಟ ಮಾಡುತ್ತಿದ್ದಾರೆ ಎಂದು ಆಕ್ರೋಶಿತಗೊಂಡ ಗ್ರಾಮಸ್ಥರು ಎರಡು ಮರಳು ತುಂಬಿದ ಲಾರಿಗಳನ್ನು ರಸ್ತೆಯಲ್ಲಿ ತಡೆದು ನಿಲ್ಲಿಸಿ ತರಾಟೆಗೆ ತಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬರಿಮಾರು ಎಂಬಲ್ಲಿ ನಡೆದಿದೆ. ಘಟನೆಯ ತಡವಾಗಿ ಬೆಳಕಿಗೆ ಬಂದಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ನೇತ್ರಾವತಿ ನದಿಯಿಂದ ಬರಿಮಾರು ಗ್ರಾಮದಲ್ಲಿ ಅಕ್ರಮವಾಗಿ ಮರಳು ತೆಗೆಯುತ್ತಿದ್ದಾರೆ ಎಂಬುದು ಗ್ರಾಮಸ್ಥರ ಆರೋಪವಾಗಿದೆ.ಮರಳುಗಾರಿಕೆಗೆ ಇಲಾಖೆ ಸಮ್ಮತಿ ನೀಡಿಲ್ಲವಾದರೂ, ಇಲ್ಲಿ ರಾಜರೋಷವಾಗಿ ಪರವಾನಗಿ ಪಡೆದು ಮರಳು ತೆಗೆಯುವುದಾಗಿ ಜನರನ್ನು ಮೋಸ ಮಾಡಿ ಮರಳುಗಾರಿಕೆ ನಡೆಯುತ್ತಿತ್ತು ಎಂದು ಗ್ರಾಮಸ್ಥರು ಆರೋಪ ಮಾಡಿದ್ದಾರೆ.ಈ ಹಿನ್ನೆಲೆಯಲ್ಲಿ ಮಂಗಳವಾರ ಮರಳು ತುಂಬಿಸಿಕೊಂಡು ಮಾರಾಟಕ್ಕೆ ತೆರಳುತ್ತಿದ್ದ ಎರಡು ಲಾರಿಗಳನ್ನು ರಸ್ತೆಯಲ್ಲಿ ನಿಲ್ಲಿಸಿ ಅಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಗ್ರಾಮಾಂತರ ಪೋಲೀಸರಿಗೆ ಮಾಹಿತಿ ನೀಡಿದರು ಸ್ಥಳಕ್ಕೆ ಭೇಟಿ ನೀಡಿಲ್ಲ ಎಂಬ ಆರೋಪ ಕೂಡ ಕೇಳಿ ಬಂದಿತ್ತು ಎನ್ನಲಾಗಿದೆ.ಪೋಲೀಸರು ಸ್ಥಳಕ್ಕೆ ಆಗಮಿಸಿದೆ…
ನವದೆಹಲಿ: ಅಧಿವೇಶನ ನಡೆಯುತ್ತಿರುವಾಗಲೇ ಸಂಸತ್ನಲ್ಲಿ ಭದ್ರತಾ ಲೋಪ ಕಂಡ ಬಂದಿದೆ. ಲೋಕಸಭಾ ವೀಕ್ಷಕರ ಗ್ಯಾಲರಿಯಿಂದ ಒಬ್ಬ ವ್ಯಕ್ತಿ ಮೇಲಿನಿಂದ ಜಿಗಿದಿದ್ದಾನೆ. ತಕ್ಷಣ ಭದ್ರತಾ ಸಿಬ್ಬಂದಿ ಆತನನ್ನು ಹಿಡಿದಿದ್ದಾರೆ. ಇಬ್ಬರು ಅಪರಿಚಿತರು ಸದನದ ಒಳಗೆ ಪ್ರವೇಶ ಮಾಡಿದ್ದಾರೆ.ಇದನ್ನು ಕಂಡ ಸದನದೊಳಗಿದ್ದ ಸಂಸದರು ಗಾಬರಿಯಿಂದ ಹೊರ ಓಡಿದ್ದಾರೆ. ಅಲ್ಲದೇ ಅಪರಿಚತರು ಕೈಯಲ್ಲಿ ಅಶ್ರುವಾಯು ಹಿಡಿದುಕೊಂಡು ಬಂದಿದ್ದು ವ್ಯಕ್ತಿಯನ್ನು ಹಿಡಿಯಲು ಯತ್ನಿಸಿದ ವೇಳೆ ಆತ ಸದನದ ಸುತ್ತಾ ಓಡಾಡಿ ಕೈಯಲ್ಲಿದ್ದ ಆಶ್ರುವಾಯು ಸಿಡಿಸಿ ಸದನದ ಒಳಗೆ ಫ್ಲೋರೋಸೆಂಟ್ ಬಣ್ಣದ ಅನಿಲವನ್ನು ಸಿಂಪಡಿಸಿದ್ದಾರೆ. ಸದ್ಯ ಕಲಾಪ ಮಧ್ಯಾಹ್ನಕ್ಕೆ ಮುಂದೂಡಲಾಗಿದೆ. ವಶಕ್ಕೆ ಪಡೆದವರಲ್ಲಿ ಓರ್ವ ಪುರುಷ ಹಾಗೂ ಓರ್ವ ಮಹಿಳೆ ಸೇರಿದ್ದಾರೆ ಎನ್ನಲಾಗಿದೆ. ಸಂಸತ್ ಮೇಲೆ ದಾಳಿ ನಡೆದು 22 ವರ್ಷವಾದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಹುತಾತ್ಮ ಭದ್ರತಾ ಸಿಬ್ಬಂದಿಗೆ ಗೌರವ ಸಲ್ಲಿಸಲಾಗಿತ್ತು.ಸಂಸತ್ ಒಳ ಪ್ರವೇಶಕ್ಕೆ ಪಾಸ್ ಇಲ್ಲದೇ ಯಾರನ್ನು ಬಿಡಲ್ಲ. ಹೀಗಿರುವಾಗ ಇಷ್ಟೊಂದು ದೊಡ್ಡ ಮಟ್ಟದ ಭದ್ರತಾ ಲೋಪ ನಡೆದಿದ್ದು ಹೇಗೆ ಎನ್ನುವುದೇ ಯಕ್ಷ ಪ್ರಶ್ನೆ.
ಉಡುಪಿ : ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಕ್ರಿಮಿನಲ್ ಪ್ರೊಸೀಜರ್ ಕೋಡ್, 1973 ಕಲಂ 133 ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಜಿಲ್ಲೆಯಲ್ಲಿ X ಮತ್ತು H ಔಷಧಿಗಳನ್ನು ಮಾರಾಟ ಮಾಡುವ ಎಲ್ಲಾ ವೈದ್ಯಕೀಯ ಹಾಗೂ ಫಾರ್ಮಸಿ ಅಂಗಡಿಗಳಲ್ಲಿ ಕಡ್ಡಾಯವಾಗಿ ಸಿ.ಸಿ ಟಿವಿ ಅಳವಡಿಸುವಂತೆ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಆದೇಶಿಸಿದ್ದಾರೆ. ಸಿ.ಸಿ.ಟಿವಿ ಕ್ಯಾಮೆರಾವನ್ನು ಅಳವಡಿಸಲು ಎಲ್ಲಾ ವೈದ್ಯಕೀಯ/ಫಾರ್ಮಸಿ ಅಂಗಡಿ ಮಾಲೀಕರಿಗೆ ಎರಡು ವಾರಗಳ ಕಾಲಾವಕಾಶ ನೀಡಲಾಗಿದ್ದು, ಜಿಲ್ಲಾ ಔಷಧ ನಿಯಂತ್ರಕರು ಸದ್ರಿ ಅಂಗಡಿಗಳಲ್ಲಿ ಸಿ.ಸಿ ಟಿವಿ ಅಳವಡಿಸಿರುವ ಕುರಿತು ತಪಾಸಣೆ ನಡೆಸಬೇಕು. ಈ ಆದೇಶವನ್ನು ಉಲ್ಲಂಘಿಸುವ ಮೆಡಿಕಲ್/ಫಾರ್ಮಸಿ ಅಂಗಡಿ ಮಾಲೀಕರ ವಿರುದ್ದ ನಿಯಮಾನುಸಾರ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಮಂಗಳೂರು: ಪುರಾತನ ದೇವಾಲಯಗಳಲ್ಲಿ ಒಂದಾಗಿರುವ ಕರಾವಳಿಯ ಪ್ರಸ್ಥಿದ್ದ ಬೋಳಾರದ ಮಹತೋಭಾರ ಶ್ರೀ ಮಂಗಳಾದೇವಿ ದೇವಾಲಯದ ಹೆಸರನ್ನು, ಗೂಗಲ್ ಮ್ಯಾಪ್ ನಲ್ಲಿ ಯಾರೋ ತಿರುಚಿರುವ ವಿಚಾರ ಬೆಳಕಿಗೆ ಬಂದಿದೆ. ಧಾರ್ಮಿಕ ದತ್ತಿ ಇಲಾಖೆಯ ಆಡಳಿತ ವ್ಯಾಪ್ತಿಗೆ ಒಳಪಟ್ಟಿರುವ ಮಂಗಳಾದೇವಿ ದೇವಸ್ಥಾನದ ಪ್ರಧಾನ ದೇವತೆಯಾದ “ಮಂಗಳಾಂಬೆ”ಯಿಂದಲೆ ಈ ಪ್ರದೇಶಕ್ಕೆ ಮಂಗಳೂರು ಎಂಬ ಹೆಸರು ಬಂದಿದೆ ಎಂಬ ಇತಿಹಾಸವಿದೆ. ಆದರೆ ದೇವಸ್ಥಾನದ ಹೆಸರನ್ನು “ಬೋಳಾರ್ ಶೇಕ್ ಉಮರ್ ಸಾಹೇಬ್ ಕಾಂಪೌಂಡು” ಎಂದು ತಿದ್ದಿರುವುದು ದೇವಾಲಯದ ಆಡಳಿತ ಮಂಡಳಿ ಯ ಗಮನಕ್ಕೆ ಬಂದಿದ್ದು ಈ ಕುರಿತು ಪೊಲೀಸ್ ಇಲಾಖೆಗೆ ದೂರು ನೀಡಲಾಗಿದೆ. ದೇವಾಲಯದ ಪವಿತ್ರತೆಗೆ ಧಕ್ಕೆ ತರುವ ಮತ್ತು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶದಿಂದ ದೇವಸ್ಥಾನದ ಹೆಸರು ತಿರುಚಲಾಗಿದ್ದು, ತಪ್ಪಿತಸ್ಥರನ್ನು ಗುರುತಿಸಿ ಸೂಕ್ತ ಕ್ರಮ ಜರುಗಿಸಬೇಕು. ಗೂಗಲ್ ನಕ್ಷೆಯಲ್ಲಿ “ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನ” ಎಂದು ಹೆಸರನ್ನು ಸರಿಪಡಿಸಬೇಕು ಎಂದು ದೇವಾಲಯದ ಆಡಳಿತ ಮಂಡಳಿ ಸೈಬರ್ ಕ್ರೈಮ್ ಪೊಲೀಸ್ ಠಾಣೆಗೆ ದೂರು ನೀಡಿದೆ.
ಕಾಪು: ರಂಗಕರ್ಮಿ, ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ (68) ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ (59) ಆತ್ಮಹತ್ಯೆ ಶರಣಾದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಸರಳ ಸಜ್ಜನ ವ್ಯಕ್ತಿತ್ವದ ಲೀಲಾಧರ ಶೆಟ್ಟಿ ಒಮ್ಮೆ ಕಾಪು ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದರು. ಅತ್ಯುತ್ತಮ ನಾಟಕ ತಂಡ ಹೊಂದಿದ್ದರು. ಬಂಟರ ಸಂಘದಲ್ಲೂ ಸಕ್ರಿಯರಾಗಿದ್ದರು. ಲೀಲಾಧರ ಶೆಟ್ಟಿಯವರು ಜಿಲ್ಲಾ ಕಬಡ್ಡಿ ಸಂಸ್ಥೆಯ ಉಪಾಧ್ಯಕ್ಷರು ಹಾಗೂ ಅತ್ಯಂತ ಸಮಾಜಮುಖಿ ಕಾರ್ಯ ನಿರ್ವಹಿಸಿದ ಸಮಾಜಸೇವಕರೂ ಆಗಿದ್ದರು. ವಿಶೇಷವಾಗಿ ರಂಗಕರ್ಮಿಯು ಆಗಿ ಕಳೆದ ಹಲವಾರು ವರ್ಷಗಳಿಂದ “ರಂಗಿತರಂಗ” ನಾಟಕ ತಂಡವನ್ನು ಮುನ್ನಡೆಸಿ ನಾಟಕ ನಿರ್ದೇಶನ, ನಟರಾಗಿ ಕೂಡಾ ಜನಾನುರಾಯಿಯಾಗಿದ್ದರು. ಮುಂದಿನ ವಾರ ನಡೆಯಬೇಕಾಗಿದ್ದ ಕಬ್ಬಡಿ ಪಂದ್ಯಾಟಕ್ಕೆ ಬೇಕಾದ ಊಟ ಉಪಹಾರ ಶಾಮಿಯಾನ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಲೀಲಾಧರ ಶೆಟ್ಟಿ ಅವರೇ ತಯಾರಿ ಮಾಡಿಟ್ಟಿದ್ದರು. ಇವರ ಅಂತಿಮ ದರ್ಶನ ಇಂದು ಸಂಜೆ ನಾಲ್ಕು ಗಂಟೆಗೆ ಕಾಪು ಮಜೂರು ಕರಂದಾಡಿ ಶಾಲೆಯಲ್ಲಿ ವ್ಯವಸ್ಥೆ ಮಾಡಲಾಗಿದೆ.
ಬಂಟ್ವಾಳ: ದನಗಳನ್ನು ಕದ್ದು ಕಾರಿನಲ್ಲಿ ಕೊಂಡೊಯ್ಯುವ ವೇಳೆ ಬಂಟ್ವಾಳ ನಗರ ಠಾಣಾ ಎಸ್.ಐ.ರಾಮಕೃಷ್ಣ ನೇತ್ರತ್ವದ ತಂಡ ದನಗಳನ್ನುರಕ್ಷಣೆ ಮಾಡಿದ್ದಾರೆ. ಪರಾರಿಯಾಗಲು ಯತ್ನಿಸಿದ್ದ ಇಬ್ಬರು ಆರೋಪಿಗಳಾದ ಜಾಬೀರ್ ಮತ್ತು ನಾಸೀರ್ ಎಂಬವವರನ್ನು ಪೋಲೀಸರು ಬಂಧಿಸಿದ್ದಾರೆ. ಲೊರೆಟ್ರೊಪದವು ಸಮೀಪದ ಟಿಪ್ಪು ನಗರ ಎಂಬಲ್ಲಿಂದ ಕಾರನ್ನು ಬೆನ್ನಟ್ಟಿದ ಪೋಲೀಸರು ದನಗಳ ಸಹಿತ ಆರೋಪಿಳನ್ನು ವಶಪಡಿಸಿಕೊಂಡಿದ್ದಾರೆ. Omni ಕಾರಿನಲ್ಲಿ ಐದು ದನಗಳನ್ನು ಕೈ ಕಾಲು ಕಟ್ಟಿ ತುಂಬಿಸಲಾಗಿತ್ತು. ಇಬ್ಬರು ಕೂಡ ಈ ಹಿಂದೆ ದನ ಕಳವು ಪ್ರಕರಣದ ಪ್ರಮುಖಆರೋಪಿಗಳೆಂದು ತಿಳಿದು ಬಂದಿದೆ.
ವಿಟ್ಲ: ಕಲ್ಲಿನ ಕೋರೆಯಲ್ಲಿ ಈಜಲು ಹೋಗಿ ಯುವಕನೋರ್ವ ಮೃತಪಟ್ಟ ಘಟನೆ ವಿಟ್ಲ ಸಮೀಪದ ಕುದ್ದುಪದವು ಎಂಬಲ್ಲಿ ನಡೆದಿದೆ. ಉಕ್ಕುಡ ದರ್ಬೆ ನಿವಾಸಿ ಕಾರ್ತಿಕ್(24) ಮೃತ ದುರ್ದೈವಿ. ಈತ ಕುದ್ದುಪದವು ಬಳಿ ಇರುವ ಕಲ್ಲಿನ ಕೋರೆಯಲ್ಲಿ ಈಜಲು ಹೋಗಿದ್ದು, ಈ ವೇಳೆ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭಿಸಿದೆ.










