Author: main-admin

ಮಲ್ಪೆ: ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದ ಪ್ರಕರಣದ ಆರೋಪಿ ಪ್ರವೀಣ್‌ ಚೌಗಲೆ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ 21 ಮಂದಿಗೆ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ. ಆರೋಪಿಯನ್ನು ಪತ್ತೆ ಹಚ್ಚಿದ ಅನಂತರ ಪೊಲೀಸರು ನ. 16ರಂದು ಆರೋಪಿಯನ್ನು ಸಂತ್ರಸ್ತರ ಮನೆಗೆ ಕರೆ ತಂದಿದ್ದರು. ಅ ವೇಳೆ ಮನೆ ಸಮೀಪದಲ್ಲಿ ಜಮಾಯಿಸಿದ ಸ್ಥಳೀಯರು ಆಕ್ರೋಶಿತಗೊಂಡು ಆರೋಪಿ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದರು. ಈ ವೇಳೆ ಪರಿಸರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದರೂ, ಉದ್ರಿಕ್ತ ಗುಂಪನ್ನು ಚದುರಿಸಲು ಲಾಠಿ ಚಾರ್ಚ್‌ ಮಾಡಬೇಕಾಗಿ ಬಂದಿತ್ತು. ಪೊಲೀಸರು ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಪೊಲೀಸ್‌ ಕಸ್ಟಡಿಯಲ್ಲಿದ್ದಾಗಲೇ ಆರೋಪಿ ಮೇಲೆ ಹಲ್ಲೆಗೆ ಯತ್ನಿಸಿದವರಿಗೆ ನೋಟಿಸ್‌ ಜಾರಿ ಮಾಡಲಾಗಿದೆ. ಈಗಾಗಲೇ ಮೂವರನ್ನು ವಿಚಾರಣೆ ಮಾಡಲಾಗಿದೆ. ಇನ್ನುಳಿದವರನ್ನೂ ಠಾಣೆಗೆ ಕರೆದು ವಿಚಾರಿಸಲಾಗುವುದು ಎಂದು ಮಲ್ಪೆ ಠಾಣಾಧಿಕಾರಿ ತಿಳಿಸಿದ್ದಾರೆ. ಆರೋಪಿಯನ್ನು ಸಂತ್ರಸ್ತರ ನಿವಾಸಕ್ಕೆ ಕರೆ ತಂದಾಗ “ಸ್ಥಳೀಯರು ಆತನ ಕೊಲೆ ಮಾಡುವ ಸುವರ್ಣ ಅವಕಾಶವನ್ನು ಕಳೆದುಕೊಂಡಿದ್ದಾರೆ’ ಎಂದು…

Read More

ಬೆಂಗಳೂರು: ಕರ್ನಾಟಕ ರಾಜಭವನಕ್ಕೆ ಬಾಂಬ್‌ ಬೆದರಿಕೆ ಬಂದಿದೆ ಎನ್ನಲಾಗಿದೆ. ನಿನ್ನೆ ರಾತ್ರಿ ಸರಿ ಸುಮಾರು 11:40 ಸುಮಾರಿಗೆ ರಾಜಭವನಕ್ಕೆ ಕರೆ ಬಂದಿದೆ ಎನ್ನಲಾಗಿದೆ. ಎನ್ನಲಾಗಿದೆ. ಕೂಡಲೇ ರಾಜಭವನ ಸಿಬ್ಬಂದಿ ವಿಧಾನಸೌಧ ಪೊಲೀಸ್‌ ಠಾಣಾ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಹಾಗೂ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯದಳ ಪರಿಶೀಲನೆ ನಡೆಸಿದೆ. ಎಲ್ಲಾ ಕಡೆ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಇದೊಂದು ಹುಸಿ ಬಾಂಬ್‌ ಕರೆ ಅಂತ ತಿಳಿದು ಬಂದಿದೆ. ಇನ್ನೂ ಉಪ್ಪಾರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಕರೆ ಬಂದಿದೆ ಎನ್ನಲಾಗಿದ್ದು, ಘಟನೆ ಸಂಬಂಧ ಕರೆ ಮಾಡಿದವರ ಸಂಖ್ಯೆಯನ್ನು ಪರಿಶೀಲನೆ ನಡೆಸಿ, ಕೂಡಲೇ ಆ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಘಟನೆ ಸಂಬಂಧ ಬಂಧಿತ ವ್ಯಕ್ತಿಯಿಂದ ಮಾಹಿತಿಯನ್ನು ಪಡೆದುಕೊಳ್ಳಲಾಗಿದೆ ಅಂತ ತಿಳಿದು ಬಂದಿದೆ. ಈ ನಡುವೆ ಕರೆ ಮಾಡಿದ ವ್ಯಕ್ತಿ ಮಾನಸಿಕ ಅಸ್ವಸ್ಥನಂತೆ ವರ್ತನೆ ಮಾಡುತ್ತಿದ್ದಾನೆ ಎನ್ನಲಾಗಿದೆ. ಇನ್ನೂ ಕಳೆದ ವಾರ ರಾಜಧಾನಿ ಬೆಂಗಳೂರಿನ 15 ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದ್ದನ್ನು ಸ್ಮರಿಸಬಹುದಾಗಿದೆ.

Read More

ಮಂಗಳೂರು: ನರ್ಸಿಂಗ್ ವಿದ್ಯಾರ್ಥಿಯೊರ್ವ ಬೆಡ್‌ ಶೀಟ್ ಬಳಸಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 8 ರಂದು ನಗರದ ಖಾಸಗಿ ಕಾಲೇಜೊಂದರ ಹಾಸ್ಟೆಲ್ ನಲ್ಲಿ ನಡೆದಿದೆ. ಕೇರಳದ ಅಲೆಪಿ ನಿವಾಸಿ ಸಚಿನ್ ಸಾಜು (19 ) ಆತ್ಮಹತ್ಯೆಗೆ ಶರಣಾದ ನರ್ಸಿಂಗ್ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.ಮೃತ ವಿದ್ಯಾರ್ಥಿ ನ. 30ರಂದು ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ನರ್ಸಿಂಗ್ ಕೋರ್ಸ್ ಗೆ ಪ್ರವೇಶಾತಿಯನ್ನು ಪಡೆದಿದ್ದರು. ಕೆಲವು ದಿನಗಳಿಂದ ಆರೋಗ್ಯ ಸಮಸ್ಯೆ ಮತ್ತು ಖಿನ್ನತೆಯಿಂದ ಬಳಲುತ್ತಿದ್ದು, ತರಗತಿಗಳಿಗೆ ಹಾಜರಾಗದೇ ಹಾಸ್ಟೆಲ್ ನಲ್ಲಿ ಇರುತ್ತಿದ್ದರೆನ್ನಲಾಗಿದೆ.ಡಿ. 8 ರಂದು ತನ್ನ ಕೋಣೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉಡುಪಿ: ನವಜೋಡಿಗಳ ಕೋಳಿ ಪೈಟ್ ಕೂಡ ನಡೆದಿದ್ದು, ಇದೀಗ ವಿಡಿಯೋ ವೈರಲ್ ಆಗಿದೆ. ವಧು ವರರ ಪ್ರಿ ವೆಡ್ಡಿಂಗ್- ಪೋಸ್ಟ್ ವೆಡ್ಡಿಂಗ್ ನ ಡಿಫರೆಂಟ್ ಕಾನ್ಸೆಪ್ಟ್ ಗಳು ಆಗಾಗ ಸುದ್ದಿಯಾಗುತ್ತಿರುತ್ತದೆ. ಉಡುಪಿ ಜಿಲ್ಲೆ ಬ್ರಹ್ಮಾವರದಲ್ಲಿ ನಡೆದ ಮಿಥುನ್ ಮತ್ತು ಪೂಜಾ ಮದುವೆ ಸಮಾರಂಭದಲ್ಲಿ ಡಿಫರೆಂಟ್ ಕಾನ್ಸೆಪ್ಟ್ ಗಳನ್ನು ಗೆಳೆಯರು ಅರೇಂಜ್ ಮಾಡಿದ್ದರು.ವರ ಮತ್ತು ವಧು ಜೆಸಿಬಿ ಯಲ್ಲಿ ಮದುವೆ ಹಾಲ್ ಗೆ ಬಂದು ಗಮನ ಸೆಳೆದರು. ಜೆಸಿಬಿಯನ್ನು ಹೂವಿನಿಂದ ಸಿಂಗಾರ ಮಾಡಿ, ಸ್ಪೆಷಲ್ ಸೋಫಾವನ್ನು ಮುಂಭಾಗಕ್ಕೆ ಜೊಡಿಸಿ ಅದರಲ್ಲಿ ವರವಧು ಕುಳಿತು ಮದುವೆ ಹಾಲ್ ಗೆ ಎಂಟ್ರಿ ಕೊಟ್ಟಿದ್ದಾರೆ. ಇಷ್ಟಕ್ಕೆ ಮುಗಿದಿಲ್ಲ, ಮದುವೆ ಮಂಟಪದಲ್ಲಿ ಮದುಮಗ ಮತ್ತು ಮದುಮಗಳಿದ ಕೋಳಿ ಅಂಕದ ಪ್ರಾತ್ಯಕ್ಷಿಕೆ ನಡೆದಿದೆ. ಮಿಥುನ್ ಮತ್ತು ಪೂಜಾ ಅಂಕದ ಕೋಳಿಗಳನ್ನು ಫೈಟ್ ಮಾಡಿಸಿದ್ದಾರೆ. ಈ ವೀಡಿಯೋ ಸೋಶಿಯಲ್ ಮೀಡಿಯಾ ದಲ್ಲಿ ಓಡಾಡುತ್ತಿದೆ.

Read More

ಪುತ್ತೂರು: ಇಲ್ಲಿನ ಆಸ್ಪತ್ರೆಯೊಂದರಲ್ಲಿ ಹಾಕಲಾಗಿದ್ದ ಸೂಚನಾ ಫಲಕವೊಂದು ವಿವಾದಕ್ಕೀಡಾಗಿದೆ. ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಹಾಕಲಾಗಿದ್ದ ಸೂಚನಾ ಫಲಕವೊಂದರಲ್ಲಿ ‘ಬುರ್ಖಾ ತೆಗೆದು ಒಳಗೆ ಬನ್ನಿʼ ಎಂದು ಬರೆಯಲಾಗಿದೆ. ಈ ಮೂಲಕ ಚಿಕಿತ್ಸೆಯಲ್ಲೂ ಧರ್ಮ ಎಳೆದು ತರಲಾಗಿದೆ ಎಂದು ಜಾಲಾತಾಣದಲ್ಲಿ ಚರ್ಚೆ ಶುರುವಾಗಿದೆ. ಕಳೆದ ಒಂದು ವರ್ಷಗಳ ಹಿಂದೆಯೇ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ರೋಗಿಗಳ ಇಸಿಜಿ ತೆಗೆಯುವ ರೂಮ್ ಬಾಗಿಲಿನಲ್ಲಿ ಹಾಕಲಾಗಿದೆ. ಈ ಸೂಚನಾ ಫಲಕ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಎರಡು ದಿನಗಳ ಹಿಂದು ಹರಿದುಬಿಡಲಾಗಿತ್ತು. ಪುತ್ತೂರು ಶಾಸಕರು ಇರುವ ವಾಟ್ಸ್ ಅಪ್ ಗ್ರೂಪ್ ನಲ್ಲೂ ಈ ಪೋಸ್ಟ್ ಕಾಣಿಸಿಕೊಂಡಿದೆ. ಇನ್ನು ಪೋಸ್ಟ್ ವೈರಲ್ ಆಗುತ್ತಿದ್ದಂತೆ ಫಲಕ ತೆಗೆಯುವಂತೆ ಆಸ್ಪತ್ರೆಗೆ ಸಿಬ್ಬಂದಿಗಳ ಮೇಲೆ ಒತ್ತಡ ಹೆಚ್ಚಿದೆ. ಒತ್ತಡ ಹಿನ್ನಲೆಯಲ್ಲಿ ಆಸ್ಪತ್ರೆ ಸಿಬ್ಬಂದಿ ಸೂಚನಾ ಫಲಕ ತೆರವುಗೊಳಿಸಿದ್ದಾರೆ. ಇತ್ತ ಬುರ್ಖಾ ತೆಗೆಯದೆ ಇಸಿಜಿ ಮಾಡೋದು ಹೇಗೆಂದು ಆಸ್ಪತ್ರೆ ವೈದ್ಯರು ಮತ್ತು ನರ್ಸ್ ಗಳು ಗೊಂದಲದಲ್ಲಿದ್ದಾರೆ. ಇನ್ನು ಈ ಕುರಿತಾಗಿ ಪುತ್ತೂರು ನಗರ ಯೂತ್…

Read More

ಉಡುಪಿ :ಪಿಕಪ್‌ ಬೈಕ್ ಸವಾರನಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ರಸ್ತೆ ಪಕ್ಕದ ಹಾಲಿನ ಬೂತ್ ನ ಕ್ರೇಟ್ ಗಳಿಗೆ ಢಿಕ್ಕಿಯಾದ ಘಟನೆ ಉಡುಪಿಯ ಕಡಿಯಾಳಿಯಲ್ಲಿ ನಡೆದಿದೆ. ಇಂದು ಮುಂಜಾನೆ 4.15 ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಮಿಲ್ಕ್ ಬೂತ್ ಮತ್ತು ವಸ್ತುಗಳಿಗೆ ಅಪಾರ ಹಾನಿಯಾಗಿದೆ. ರಸ್ತೆಯಲ್ಲಿ ಹಾಲಿನ ಪ್ಯಾಕೇಟ್ ಹರಿದು ಹಾಲು ರಸ್ತೆಯ ತುಂಬೆಲ್ಲಾ ಚೆಲ್ಲಿದೆ. ಈ ದೃಶ್ಯ ಮಿಲ್ಕ್ ಬೂತ್ ಗೆ ಅಳವಡಿಸಲಾದ ಸಿಸಿಟಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ.

Read More

ಕೋಟ:  ಪೊಲೀಸ್ ಠಾಣಾ ಉಪನಿರೀಕ್ಷಕರೋರ್ವರನ್ನು ಲಂಚ ಪ್ರಕರಣ ಆರೋಪಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ| ಅರುಣ್‌ ಕುಮಾರ್‌ ಅಮಾನತುಗೊಳಿಸಿರುವುದಾಗಿ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಎಸ್‌.ಪಿ. ಡಾ| ಅರುಣ್‌ ಕುಮಾರ್‌ ಅವರು ಕೋಟ ಠಾಣೆ ಉಪನಿರೀಕ್ಷಕರಾಗಿದ್ದು, ಪ್ರಸ್ತುತ ಒಒಡಿ ಮೇಲೆ ಕಾರ್ಕಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಂಭುಲಿಂಗಯ್ಯ ಅವರನ್ನು ಅಮಾನತುಗೊಳಿಸಲಾಗಿದೆ.ಕಾಲೇಜೊಂದರ ಆಡಳಿತ ಮಂಡಳಿಯ ಗಲಾಟೆಗೆ ಸಂಬಂಧಿಸಿದಂತೆ ದೂರು ದಾರರಿಂದ ಲಂಚ ಪಡೆದಿರುವುದಾಗಿ ಸಾಮಾಜಿಕ ಕಾರ್ಯಕರ್ತರೋರ್ವರು ವೀಡಿಯೋ ಮೂಲಕ ದೂರಿದ್ದರು.ಬಳಿಕ ಈ ಬಗ್ಗೆ ತನಿಖೆಯನ್ನು ನಡೆಸಲಾಗಿದ್ದು, ಇದೀಗ ಅಮಾನತುಗೊಳಿಸಲಾಗಿದೆ ಎಂದರು.ಅಚ್ಲಾಡಿಯ ಖಾಸಗಿ ಕಾಲೇಜಿನಲ್ಲಿ ಆಡಳಿತ ಮಂಡಳಿಯೊಳಗೆ ಗಲಾಟೆಗೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಮಧು ಭಾಸ್ಕರ್‌ ಮತ್ತು ಮಹಿಮಾ ಮಧು ಭಾಸ್ಕರ್‌ ಎಂಬುವವರು ಪರಸ್ಪರ ದೂರು ದಾಖಲಿಸಿಕೊಂಡಿದ್ದರು.ಘಟನೆಯ ಕುರಿತಂತೆ ಮಧು ಭಾಸ್ಕರ್‌ ವಿರುದ್ಧ ದೂರು ದಾಖಲಿಸುವಂತೆ ಹಾಗೂ ಮಹಿಮಾ ವಿರುದ್ಧದ ದೂರಿಗೆ ಬಿ.ರಿಪೋರ್ಟ್‌ ನೀಡುವಂತೆ ಆಗ ಕೋಟ ಠಾಣಾ ಉಪನಿರೀಕ್ಷಕರಾಗಿದ್ದ ಶಂಭು ಲಿಂಗಯ್ಯ ಅವರು ಲಂಚವನ್ನು ತೆಗೆದುಕೊಂಡಿದ್ದರು.ಜೊತೆಗೆ ಅವರ ಹತ್ತಿರದ ಸಂಬಂಧಿಕರೊಬ್ಬರ ಖಾತೆಗೆ…

Read More

ಮಂಗಳೂರು: : ಕುಡಿತದ ಅಮಲಿನಲ್ಲಿ ಇಬ್ಬರು ಕಾರ್ಮಿಕರ ನಡುವೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ತಣ್ಣೀರು ಬಾವಿ ಟ್ರೀ ಪಾರ್ಕ್ ಬಳಿ ರವಿವಾರ ಬೆಳಗ್ಗೆ ನಡೆದಿದೆ. ಕೊಲೆಯಾದವರನ್ನು ಕೇರಳದ ಕೊಲ್ಲಂ ನಿವಾಸಿ ಬಿನು( 41) ಎಂದು ಗುರುತಿಸಲಾಗಿದ್ದು, ಆರೋಪಿ ಕೇರಳದ ಕಣ್ಣೂರು ಜಿಲ್ಲೆಯ ತಳಿಪ್ಪರಂಬ್ ನಿವಾಸಿ ಜಾನ್ಸನ್ ಯಾನೆ ಬಿನೋಯ್ (52) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೃತ ಬಿನು ಮತ್ತು ಜಾನ್ಸನ್ ಯಾನೆ ಬಿನೋಯ್ ತಣ್ಣೀರುಬಾವಿಯ ಟ್ರೀ ಪಾರ್ಕ್ ಬಳಿಯ ದೋಣಿ ನಿರ್ಮಾಣ ಸಂಸ್ಥೆಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಇಬ್ಬರು ಅದೇ ಪರಿಸರದಲ್ಲಿ ಬೇರೆ ಬೇರೆ ವಸತಿಯಲ್ಲಿ ವಾಸವಾಗಿದ್ದರು. ಯಾವುದೋ ವೈಯಕ್ತಿಕ ವಿಚಾರವಾಗಿ ಇಬ್ಬರ ನಡುವೆ ಶನಿವಾರ ರಾತ್ರಿ ಜಗಳವಾಗಿತ್ತು. ಇದೇ ದ್ವೇಷದಿಂದ ಮದ್ಯ ಸೇವಿಸಿ ಬಂದಿದ್ದ ಜಾನ್ಸನ್ ಯಾನೆ ಬಿನೋಯ್ ಬಿನುಗೆ ಚೂರಿ ಇರಿದು ಕೊಲೆ ಗೈದಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕೊಲೆ ಆರೋಪಿ ಪರಾರಿಯಾಗಿದ್ದು, ಘಟನಾ ಸ್ಥಳಕ್ಕೆ ಪಣಂಬೂರು ಪೊಲೀಸರು ಭೇಟಿ ನೀಡಿ…

Read More

ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಾಲಯದ ಯಕ್ಷಗಾನ ಮೇಳಗಳಿಗೆ ಕೊರೊನಾಕ್ಕಿಂತ ಮೊದಲು ಇದ್ದ ರೀತಿಯಲ್ಲೇ ಪ್ರದರ್ಶನ ನಡೆಸಲು ಕರ್ನಾಟಕ ಹೈಕೋರ್ಟ್‌ ಅನುಮತಿ ನೀಡಿದೆ. ಯಕ್ಷಗಾನ ಪ್ರದರ್ಶನಕ್ಕೆ ಶಬ್ದ ಮಿತಿಯನ್ನು ಹೇರಿ ರಾತ್ರಿ 12.30ರ ವರೆಗೆ ಮಾತ್ರ ಯಕ್ಷಗಾನ ನಡೆಸಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಧಿಕಾರಿ ಆದೇಶಿಸಿದ್ದು, ಈ ಆದೇಶವನ್ನು ಶ್ರೀ ಕ್ಷೇತ್ರ ಕಟೀಲಿನ ಭಕ್ತರೊಬ್ಬರು ಹೈಕೋರ್ಟ್‌ ನಲ್ಲಿ ಪ್ರಶ್ನಿಸಿದ್ದರು. ಯಕ್ಷಗಾನ ಪ್ರದರ್ಶನ ಬೆಳಗ್ಗಿನ ವರೆಗೆ ನಡೆಯಬೇಕೇ ಹೊರತು ರಾತ್ರಿ 12.30ರ ಒಳಗೆ ಕೊನೆಗೊಳಿಸುವುದು ಅಸಾಧ್ಯವೆಂದು ಅರ್ಜಿದಾರರ ಪರ ವಕೀಲರು ಹೈಕೋರ್ಟ್‌ ಗೆ ಮನದಟ್ಟು ಮಾಡಿದ್ದರು. ಅದರಂತೆ ಕೋರ್ಟ್‌ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದೆ.

Read More

ಬಂಟ್ವಾಳ: ಇಲ್ಲಿನ ಕಡೇಶ್ವಾಲ್ಯದ ಅಮೈ ಎಂಬಲ್ಲಿ ಎಂ.ಆ‌ರ್.ಪಿ.ಎಲ್ ಸಂಸ್ಥೆಯಿಂದ ಡಾಂಬರ್ ತುಂಬಿದಿಕೊಂಡು ಬಂದಿದ್ದ ಟ್ಯಾಂಕರ್‌ಗಳಿಂದ ಅಕ್ರಮವಾಗಿ ಬೇರೆ ಟ್ಯಾಂಕರ್‌ಗಳಿಗೆ ಡಾಂಬರ್ ವರ್ಗಾಯಿಸುತ್ತಿದ್ದಾಗಲೇ ಪೊಲೀಸರು ದಾಳಿ ನಡೆಸಿ 10 ಮಂದಿಯನ್ನು ಬಂಧಿಸಿದ್ದಾರೆ. ವಿಜಯ ಕುಮಾರ್ ಶೆಟ್ಟಿ, ಸುಧಾಕರ ಶೆಟ್ಟಿ, ಮಹಮ್ಮದ್ ಇಮ್ರಾನ್, ಅಶ್ರಫ್ ಎಂ., ವೀರೇಂದ್ರ ಎಸ್.ಆ‌ರ್., ಮಾದಸ್ವಾಮಿ, ಪ್ರಭಾಕರನ್, ನವೀನ್ ಕುಮಾ‌ರ್, ಮಹಮ್ಮದ್ ನಿಸಾರ್, ಮಹಮ್ಮದ್ ಸಿಹಾಬುದ್ದೀನ್ ಬಂಧಿತ ಆರೋಪಿಗಳು. ಸೆನ್ ಹಾಗೂ ಅಪರಾಧ ಠಾಣೆಯ ಪೊಲೀಸ್ ಉಪನಿರೀಕ್ಷಕ ಮಂಜುನಾಥ್ ಟಿ ಮತ್ತು ಸಿಬ್ಬಂದಿ ಈ ದಾಳಿ ನಡೆಸಿ ಸ್ಥಳದಲ್ಲಿದ್ದವರನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸಿದಾಗ ಉಡುಪಿ ಮೂಲದ ವಿಜಯಕುಮಾರ್ ಶೆಟ್ಟಿ ಈ ಅಕ್ರಮ ಜಾಲದ ರೂವಾರಿ ಎನ್ನುವುದು ತಿಳಿದುಬಂದಿದೆ. ಆತನ ಸೂಚನೆಯಂತೆ, ಬಂಟ್ವಾಳ ಕಡೇಶ್ವಾಲ್ಯ ಗ್ರಾಮದ ಸುಧಾಕರ ಶೆಟ್ಟಿ ಎಂಬಾತನೊಂದಿಗೆ ಸೇರಿ ಈ ಕೃತ್ಯವನ್ನು ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಟ್ಯಾಂಕರ್ ನಿಂದ ಡಾಂಬರ್ ಅನ್ನು ಕಳುವುಗೈಯುತ್ತಿದ್ದಾಗಲೇ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಸ್ಥಳದಲ್ಲಿದ್ದ ಹತ್ತು ಮಂದಿಯನ್ನು…

Read More