Author: main-admin

ಉಳ್ಳಾಲ : ಸೋಮೇಶ್ವರದ ಅಲಿಮಕಲ್ಲು ಬಳಿ ಸಮುದ್ರಕ್ಕಿಳಿದ ನೀರು ಪಾಲಾದ ಇಬ್ಬರು ವಿಧ್ಯಾರ್ಥಿಗಳ ಮೃತದೇಹ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಮೃತರನ್ನು ಮಂಜೇಶ್ವರದ ಕುಂಜತ್ತೂರು ಅಡ್ಕ ನಿವಾಸಿ ಶೇಖರ ಎಂಬವರ ಪುತ್ರ ಯಶ್ವಿತ್ (18) ಮತ್ತು ಕುಂಜತ್ತೂರು ಮಜಲ್ ನಿವಾಸಿ ಜಯೇಂದ್ರ ಎಂಬವರ ಪುತ್ರ ಯುವರಾಜ್ (18) ಎಂದು ಗುರುತಿಸಲಾಗಿದೆ. ಸೋಮೇಶ್ವರ ಪರಿಜ್ಞಾನ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳಾದ ಯಶ್ವಿತ್, ಯುವರಾಜ ಸೇರಿದಂತೆ ಒಟ್ಟು ಆರು ಮಂದಿ ವಿದ್ಯಾರ್ಥಿಗಳು ಶನಿವಾರ ಸೋಮೇಶ್ವರ ಶ್ರೀ ಸೊಮನಾಥ ದೇವಸ್ಥಾನಕ್ಕೆ ತೆರಳಿದ್ದರು, ಬಳಿಕ ಅಲ್ಲಿಂದ ಅವರು ಸೋಮೇಶ್ವರ ಅಲಿಮಕಲ್ಲು ಬಳಿ ಸಮುದ್ರಕ್ಕೆ ಇಳಿದಿದ್ದರು. ಈ ಸಂದರ್ಭದಲ್ಲಿ ನಾಲ್ವರು ಸಮುದ್ರ ಬದಿಯಲ್ಲಿ ಕುಳಿತಿದ್ದರೆ, ಯುವರಾಜ್ ಮತ್ತು ಯಶ್ವಿತ್ ಸಮುದ್ರದ ನೀರಿಗಿಳಿದು, ಕಲ್ಲಿನ ಬಳಿ ತೆರಳಿದ್ದರು. ಈ ಸಂದರ್ಭದಲ್ಲಿ ಸಮುದ್ರದ ಅಲೆಯೊಂದಕ್ಕೆ ಯುವರಾಜ್ ಜಾರಿ ಬಿದ್ದು ಸಮುದ್ರ ಪಾಲಾದಾಗ ಯಶ್ವಿತ್ ಆತನನ್ನು ರಕ್ಷಿಸಲು ಹೋಗಿ ಸಮುದ್ರ ಪಾಲಾಗಿದ್ದಾರೆ. ಸಮುದ್ರ ಪಾಲಾದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಅದೇ ಪ್ರದೇಶದಲ್ಲಿ ಇಂದು ಬೆಳಿಗ್ಗೆ…

Read More

ಸುರತ್ಕಲ್: ಇಲ್ಲಿನ ಎನ್ ಐಟಿಕೆ ಟೋಲ್ ಗೇಟ್ ನ ಅವಶೇಷಗಳಿಗೆ ಲಾರಿಯೊಂದು ಢಿಕ್ಕಿ ಹೊಡೆದ ಘಟನೆ ಶನಿವಾರ ಮಧ್ಯರಾತ್ರಿ 2.30ರ ಸುಮಾರಿಗೆ ನಡೆದಿರುವ ಬಗ್ಗೆ ವರದಿಯಾಗಿದೆ. ಮಂಗಳೂರು ಕಡೆಯಿಂದ ಉಡುಪಿಯತ್ತ ಸಂಚರಿಸುತ್ತಿದ್ದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಟೋಲ್ ಗೇಟ್ ನ ಕಂಬವೊಂದು ಬುಡ ಸಮೇತ ಕಿತ್ತು ಬಂದಿದ್ದು, ಘಟನೆಯಿಂದ ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಘಟನೆ ಸಂಬಂಧಿಸಿ ಹೇಳಿಕೆ ನೀಡಿರುವ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ, ಸುರತ್ಕಲ್ ನಿರುಪಯುಕ್ತ ಟೋಲ್ ಗೇಟ್ ಕತ್ತಲಲ್ಲಿ ದಿಢೀರ್ ಎದುರಾಗುವ ಅಪಘಾತದ ಸ್ಪಾಟ್ ಆಗಿ ಬದಲಾಗಿದೆ. ಹೆದ್ದಾರಿ ನಡುವಿನ ಟೋಲ್ ಗೇಟ್ ಪಳೆಯುಳಿಕೆಯಿಂದಾಗಿ ಅಪಘಾತಗಳು ಸಂಭವಿಸುತ್ತಿದ್ದು, ಕಂಬಗಳು ಜಾರಿ ಕುಸಿಯುವ ಭೀತಿಯಲ್ಲಿದೆ. ಜನಪ್ರತಿನಿಧಿಗಳು, ಜಿಲ್ಲಾಡಳಿತದ ನಿರ್ಲಕ್ಷ್ಯ, ಕರ್ತವ್ಯಲೋಪದಿಂದ ವಾಹನ ಸವಾರರ ಪಾಲಿಗೆ ಈ ನಿರುಪಯುಕ್ತ ಟೋಲ್…

Read More

ಉತ್ತರ ಪ್ರದೇಶದ ಬರೇಲಿ-ನೈನಿತಾಲ್ ಹೆದ್ದಾರಿಯಲ್ಲಿ ಶನಿವಾರ ರಾತ್ರಿ ಡಂಪರ್ ಮತ್ತು ಕಾರ್ ನಡುವೆ ಭೀಕರ ಡಿಕ್ಕಿ ಸಂಭವಿಸಿ ಎಂಟು ಜನರು ಸಜೀವ ದಹನಗೊಂಡಿದ್ದಾರೆ. ಉತ್ತರಾಖಂಡದ ಕಿಚ್ಚಾದಿಂದ ಮರಳು ಮತ್ತು ಜಲ್ಲಿಕಲ್ಲು ಸಾಗಿಸುತ್ತಿದ್ದ ಡಂಪರ್‌ ಗೆ ಕಾರ್ ಡಿಕ್ಕಿಯಾಗಿ ಟೈರ್ ಒಡೆದ ಕಾರಣ ಅಪಘಾತ ಸಂಭವಿಸಿದೆ. ಘರ್ಷಣೆಯ ನಂತರ ಸ್ಫೋಟ ಡಿಕ್ಕಿಯ ನಂತರ ಭಾರಿ ಸ್ಫೋಟ ಸಂಭವಿಸಿದ್ದು, ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಅಷ್ಟರಲ್ಲಿ ಅಗ್ನಿಶಾಮಕ ದಳದವರು ಬೆಂಕಿಯನ್ನು ಹತೋಟಿಗೆ ತಂದರು. ಆದರೆ, ಕಾರ್ ಒಳಗಿನಿಂದ ಲಾಕ್ ಆಗಿದ್ದರಿಂದ ಕಾರ್ ನೊಳಗೆ ಸಿಲುಕಿದ್ದ ಎಲ್ಲ ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಅಪಘಾತದಲ್ಲಿ ಎಂಟು ಮಂದಿ ಸಾವು ಕಾರ್ ನಲ್ಲಿದ್ದ ಎಂಟು ಮಂದಿ ಬರೇಲಿಯಿಂದ ಬಹೇರಿಗೆ ಹಿಂತಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಕಾರ್ ನಲ್ಲಿದ್ದ ಎಲ್ಲರ ಸಾವನ್ನು ಎಸ್‌ಎಸ್‌ಪಿ ಖಚಿತಪಡಿಸಿದ್ದಾರೆ. ಪೊಲೀಸ್ ತಂಡವು ಎಲ್ಲಾ ದೇಹಗಳನ್ನು ವಶಪಡಿಸಿಕೊಂಡಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಿದೆ. ಅಪಘಾತದಲ್ಲಿ ಮಗುವೂ ಸಾವನ್ನಪ್ಪಿದೆ. ಭೋಜಿಪುರ…

Read More

ಮಂಗಳೂರಿನ ಸೋಮೇಶ್ವರದ ಸಮುದ್ರ ತೀರದಲ್ಲಿ ಆಟವಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಅಲೆಗಳ ರಭಸಕ್ಕೆ ಸಿಲುಕಿ ಕಡಲುಪಾಲಾಗಿದ್ದಾರೆ. ಮೃತ ಮಕ್ಕಳನ್ನು ಸೋಮೇಶ್ವರ ಪರಿಜ್ಞಾನ ದ್ವಿತೀಯ ಪಿಯು ಕಾಲೇಜಿನ ಯಶ್ವಿತ್(18) ಹಾಗೂ ಯುವರಾಜ್(18) ಎಂದು ಗುರುತಿಸಲಾಗಿದೆ. ಯೆಶ್ಚಿತ್, ಮಂಜೇಶ್ವರದ ಕುಂಜತ್ತೂರು ಅಡ್ಕ ನಿವಾಸಿ ಶೇಖರ ಎಂಬವರ ಪುತ್ರ ಹಾಗೂ ಯುವರಾಜ್, ಕುಂಜತ್ತೂರು ಮಜಲ್ ನಿವಾಸಿ ಜಯೇಂದ್ರ ಎಂಬವರ ಪುತ್ರ. ಸಮುದ್ರದಲ್ಲಿ ಕಾಣೆಯಾದ ಇವರಿಬ್ಬರಿಗಾಗಿ ಸ್ಥಳೀಯ ಮುಳುಗುತಜ್ಞರು ಇದೀಗ ಹುಡಕಾಟನಡೆಸುತ್ತಿದ್ದಾರೆ.

Read More

ಪುತ್ತೂರು: ಇಲ್ಲಿನ ಒಳಮೊಗ್ರು ಕುಂಬ್ರದಲ್ಲಿನ ಅರ್ತ್ ಮೂವರ್ ಸಂಸ್ಥೆಯೊಂದರಲ್ಲಿ ಟಿಪ್ಪರ್ ಚಾಲಕನಾಗಿ ದುಡಿಯುತ್ತಿದ್ದ, ಬಾಗಲಕೋಟೆಯ ಬಾದಾಮಿಯ ಯುವಕನೊಬ್ಬ ನಾಪತ್ತೆ ಪ್ರಕರಣ ಆತನ ಕೊಲೆಯಲ್ಲಿ ಅಂತ್ಯ ಕಂಡಿದ್ದು, ಘಟನೆಗೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ನಿವಾಸಿ ಹನುಮಂತಪ್ಪ (22) ಕೊಲೆಯಾದ ಯುವಕ. ಬಂಧಿತ ಆರೋಪಿಗಳು ಹನುಮಂತಪ್ಪನನ್ನು ದಾರಿ ಮಧ್ಯೆ ಕೊಲೆಗೈದು ಮೃತದೇಹವನ್ನು ಆಗುಂಬೆ ಘಾಟಿಯಲ್ಲಿ ಎಸೆದಿರುವ ಬಗ್ಗೆ ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ. ಆರೋಪಿಗಳಲ್ಲಿ ಒಬ್ಬನಾದ ಶಿವಪ್ಪ ಎಂಬಾತನ ಪತ್ನಿಯೊಂದಿಗೆ ಕೊಲೆಯಾದ ಹನುಮಂತಪ್ಪ ಅಕ್ರಮ ಸಂಬಂಧ ಹೊಂದಿದ್ದ ಎಂಬ ಆರೋಪ ಕೇಳಿಬಂದಿದ್ದು, ಇದೇ ಕಾರಣ ಹತ್ಯೆಯಾಗಿದೆ ಎಂದು ಹೇಳಲಾಗಿದೆ. ಒಳಮೊಗ್ರು ಗ್ರಾಮದ ಕುಂಬ್ರ ಎಂಬಲ್ಲಿ ತನ್ನ ಸ್ನೇಹಿತನ ರೂಮಿನಲ್ಲಿ ವಾಸ್ತವ್ಯವಿದ್ದ ಹನುಮಂತ ಅವರನ್ನು ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ನಿವಾಸಿಗಳಾದ ಶಿವಪ್ಪ ಹನುಮಪ್ಪ ಮಾದರ, ಮಂಜುನಾಥ ಹನುಮಪ್ಪ ಮಾದರ ಮತ್ತು ದುರ್ಗಪ್ಪ ಮಾದರ ಎಂಬವರು ಕಳೆದ ನ. 17ರಂದು ಸಂಜೆ ಮಹೇಂದ್ರ ಮ್ಯಾಕ್ಸಿಂ ವಾಹನವೊಂದರಲ್ಲಿ ಅಪರಿಸಿಕೊಂಡು ಹೋಗಿ…

Read More

ಬೆಳ್ತಂಗಡಿ: ಮೀನು ಹಿಡಿಯಲು ತೆರಳಿದ್ದ ವ್ಯಕ್ತಿಯೊಬ್ಬರು ನದಿಗೆ ಬಿದ್ದು ಮೃತಪಟ್ಟ ಘಟನೆ ಕಲ್ಮಂಜ ಗ್ರಾಮದ ನೇತ್ರಾವತಿ ನದಿಯ ನೇರೊಳ್ ಪಲ್ಕೆ ಎಂಬಲ್ಲಿ ನಡೆದಿದೆ. ಮೃತರನ್ನು ಧರ್ಮಸ್ಥಳ ಗ್ರಾಮದ ಮುಂಡ್ರುಪಾಡಿ ಕುಲೆಂಜಿಲೋಡಿಯ ಕೇಶವ ಗೌಡ(65)ಎಂದು ಗುರುತಿಸಲಾಗಿದೆ. ಕೇಶವ ಗೌಡ ಗುರುವಾರ ರಾತ್ರಿ ಮೀನು ಹಿಡಿಯಲು ಹೋಗಿದ್ದು, ಶುಕ್ರವಾರ ಬೆಳಗ್ಗೆ ಅವರ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಮಂಗಳೂರು: ಶಬರಿಮಲೆ ಅಯ್ಯಪ್ಪ ಸ್ವಾಮಿ ಮಾಲಾಧಾರಿಯ ವೇಷ ಹಾಕಿಕೊಂಡು ಮನೆ ಮನೆಗೆ ತೆರಳಿ ಹಣ ಸಂಗ್ರಹ ಮಾಡುತ್ತಿದ್ದ ಇಬ್ಬರು ಯುವಕರನ್ನು ಗ್ರಾಮಸ್ಥರು ಹಿಡಿದು ಪ್ರಶ್ನಿಸುತ್ತಿರುವ ವೀಡಿಯೋವೊಂದು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.ಈ ನಕಲಿ ಸ್ವಾಮಿಗಳ ಬಳಿ ಗುರುತು ಚೀಟಿ, ರಶೀದಿ ಪುಸ್ತಕ, ಫೋಟೊಗಳು, ಸರ್ಟಿಫಿಕೆಟ್‌ಗಳು. ಆಧಾರ್‌ ಕಾರ್ಡ್ ಪ್ರತಿಗಳು ಪತ್ತೆಯಾಗಿದ್ದು, ಅವೆಲ್ಲವೂ ನಕಲಿ ಎನ್ನಲಾಗಿದೆ. ಈ ಯುವಕರನ್ನು ಎಲ್ಲಿಂದ ಬಂದಿದ್ದೀರಿ ಎಂದು ಪ್ರಶ್ನಿಸಿದಾಗ ಮೂಡುಬಿದಿರೆ, ವಿಟ್ಲ, ಮಂಜೇಶ್ವರ, ಧರ್ಮಸ್ಥಳ ಮುಂತಾದ ಹೆಸರುಗಳನ್ನು ಅವರು ಹೇಳುತ್ತಾರೆ. ಸೇವಾಲಯ ಎಂಬ ಹೆಸರಿನ ಮೂಲಕ ಧನಸಹಾಯಕ್ಕೆ ಬರುವ ಈ ಸ್ವಾಮಿಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು, ಯಾರೂ ಮೋಸ ಹೋಗ ಬಾರದು ಎಂದು ಗ್ರಾಮಸ್ಥರು ಮನವಿ ಮಾಡುತ್ತಿರುವುದು ಈ ವೀಡಿಯೋದಲ್ಲಿದೆ.

Read More

ಪಾಸ್ ಪೋರ್ಟ್ ಪರಿಶೀಲನೆಗೆ ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಯೊಬ್ಬರ ತಲೆಗೆ ಪೊಲೀಸ್ ಅಧಿಕಾರಿಯೊಬ್ಬರು ಆಕಸ್ಮಿಕವಾಗಿ ಗುಂಡು ಹಾರಿಸಿದ ಘಟನೆ ನಡೆದಿದ್ದು, ಮಹಿಳೆ ಗಂಭೀರವಾಗಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ.ಮಹಿಳೆಯನ್ನು ಇಶ್ರತ್ ಎಂದು ಗುರುತಿಸಲಾಗಿದ್ದು, ಇವರು ತನ್ನ ಸಂಬಂಧಿಯೊಂದಿಗೆ ಪೊಲೀಸ್ ಠಾಣೆಗೆ ಪಾಸ್ ಪೋರ್ಟ್ ವೇರಿಫಿಕೇಶನ್ ಗೆ ಬಂದಿದ್ದಾರೆ. ಈ ವೇಳೆ ಒಬ್ಬ ಪೊಲೀಸ್ ಅಧಿಕಾರಿ ಬಂದು ಎಸ್‌ಐ ಮನೋಜ್ ಶರ್ಮಾಗೆ ಪಿಸ್ತೂಲ್ ನೀಡಿದರು. ಎಸ್‌ಐ ಪಿಸ್ತೂಲ್ ಕ್ಲೀನ್ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಗುಂಡು ಮಹಿಳೆಯ ಮೇಲೆ ತಗುಲಿ ಮಹಿಳೆ ನೆಲಕ್ಕೆ ಬಿದ್ದಿದ್ದಾಳೆ. ಗಾಯಗೊಂಡ ಮಹಿಳೆಯನ್ನು ತಕ್ಷಣವೇ ಜೆಎನ್ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಯಿತು, ಅಲ್ಲಿ ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. https://twitter.com/ShivAroor/status/1733112917426680100?ref_src=twsrc%5Etfw%7Ctwcamp%5Etweetembed%7Ctwterm%5E1733112917426680100%7Ctwgr%5E3b76ee413f2a5de882b04454148dd17f0b873632%7Ctwcon%5Es1_&ref_url=https%3A%2F%2Fthemangaloremirror.in%2Fcop-accidentally-shoots-woman-in-the-head-inside-police-station%2F ಗುಂಡು ಇಶ್ರತ್ ಅವರ ತಲೆಯ ಹಿಂಭಾಗಕ್ಕೆ ತಗುಲಿದ್ದು, ತಕ್ಷಣವೇ ಜಾರಿಗೆ ಬರುವಂತೆ ಎಸ್‌ಐ ಅನ್ನು ಅಮಾನತುಗೊಳಿಸಲಾಗಿದೆ ಎಂದು ಎಸ್ಪಿ ನೈಥಾನಿ ಹೇಳಿದರು. ಕರ್ತವ್ಯಲೋಪ ಎಸಗಿದ ಎಸ್‌ಐ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ.…

Read More

ಮಂಗಳೂರು: ನಗರದ ಕದ್ರಿ ಪಾರ್ಕ್ ಪರಿಸರದಲ್ಲಿ ಇಬ್ಬರು ವ್ಯಕ್ತಿಗಳು ಎಮ್ ಡಿಎಮ್ ಎ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ನಿಷೇದಿತ ಮಾದಕ ವಸ್ತು ಸಹಿತ ಆರೋಪಿಗಳಿಬ್ಬರನ್ನು ವಶಕ್ಕೆ ಪಡೆದಿದ್ದಾರೆ.   ಮಂಜೇಶ್ವರ ಪಾವೂರು ಗ್ರಾಮದ ಮಚ್ಚಂಪಾಡಿ ನಿವಾಸಿ ನವಾಜ್(40), ಬಂಟ್ವಾಳ ಫರಂಗಿಪೇಟೆಯ ಪುದು ಗ್ರಾಮದ ಜುಮಾದಿ ಗುಡ್ಡೆ ಮನೆ ನಿವಾಸಿ ಅಜರುದ್ದೀನ್ ಯಾನೆ ಅಜರ್(38) ಬಂಧಿತ ಆರೋಪಿಗಳಾಗಿದ್ದಾರೆ.ಬಂಧಿತರಿಂದ 120 ಗ್ರಾಂ ತೂಕದ 6,00,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮೊಬೈಲ್ ಫೋನ್ ಗಳು-3, ಡಿಜಿಟಲ್ ತೂಕ ಮಾಪನ, ಸುಝುಕಿ ಅಕ್ಸಿಸ್ ಸ್ಕೂಟರ್ ನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 6,83,120 ರೂ. ಎಂದು ಅಂದಾಜಿಸಲಾಗಿದೆ.ಆರೋಪಿಗಳ ವಿರುದ್ಧ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.ಆರೋಪಿಗಳ ಪೈಕಿ ನವಾಸ್ ಎಂಬಾತನ ವಿರುದ್ದ…

Read More

ಬೆಂಗಳೂರು: ಕೆಲ ದಿನಗಳಿಂದ ಅನಾರೋಗ್ಯ ಹಾಗೂ ತೀವ್ರ ಉಸಿರಾಟದ ತೊಂದರೆಯಿಂದಲುತ್ತಿದ್ದ ದಕ್ಷಿಣ ಭಾರತದ ಹಿರಿಯ ನಟಿ ಲೀಲಾವತಿ ವಿಧಿವಶವಾಗಿದ್ದಾರೆ. 50 ವರ್ಷಗಳ ಕಾಲ ಚಿತ್ರರಂಗಕ್ಕೆ ಲೀಲಾವತಿ ಸೇವೆ ಸಲ್ಲಿಸಿದ್ದ ಲೀಲಾವತಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ದಕ್ಷಿಣ ಭಾರತದ ಜನಪ್ರಿಯ ನಟಿಯಾಗಿದ್ದರು. ಕನ್ನಡದಲ್ಲಿ ಅಷ್ಟೇ ಅಲ್ಲ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆ ಸೇರಿದಂತೆ ಒಟ್ಟು 600 ಚಿತ್ರಗಳಲ್ಲಿ ನಟಿಸಿದ್ದರು.

Read More