Author: main-admin

ಪುತ್ತೂರು: ಅಡಿಕೆ ಕೊಯ್ಯುವ ವೇಳೆ ಮರದಿಂದ ಬಿದ್ದು ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಇಲ್ಲಿನ ಬೆಟ್ಟಂಪಾಡಿಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ನಿಡ್ನಳ್ಳಿ ಗ್ರಾಮದ ತಂಬುತ್ತಡ್ಕ ನಿವಾಸಿ ಸಯ್ಯದ್ (45) ಎಂದು ಗುರುತಿಸಲಾಗಿದೆ. ಬೆಟ್ಟಂಪಾಡಿ ಸಮೀಪದ ಕೃಷಿಕರೋರ್ವರ ಮನೆಗೆ ಸಯ್ಯದ್ ಅಡಿಕೆ ಕೊಯ್ಯಲು ತೆರಳಿದ್ದರು. ಈ ವೇಳೆ ಅಡಿಕೆ ಕೊಯ್ಯುವಾಗ ಕಾಲು ಜಾರಿ ಮರದಿಂದ ಕೆಳಗೆ ಬಿದ್ದ ಇವರನ್ನು, ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ದು ಬಳಿಕ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಲ್ಲಿ ತಲುಪುವ ವೇಳೆ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

Read More

ಶಿರಸಿ: ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟು, ಇನ್ನೋರ್ವ ತೀವ್ರ ಗಾಯಗೊಂಡ ಘಟನೆತಾಲೂಕಿನ ಬಂಡಲ್ ಸಮೀಪದ ಪೆಟ್ರೋಲ್ ಬಂಕ್ ಎದುರು ನಡೆದಿದೆ. ಮೃತಪಟ್ಟವರು ತಮಿಳುನಾಡು ಮೂಲದವರು ಎನ್ನಲಾಗಿದ್ದು, ಬಸ್ ಹುಬ್ಬಳ್ಳಿಯಿಂದ ಭಟ್ಕಳಕ್ಕೆ ಚಲಿಸುತ್ತಿತ್ತು. ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಕೂಡ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಹೆಚಚಿನ ಮಾಹಿತಿ ಲಭಿಸಬೇಕಿದೆ.

Read More

ಸುರತ್ಕಲ್: ನಾಪತ್ತೆಯಾಗಿದ್ದ ಭಿನ್ನಕೋಮಿನ ಜೋಡಿ ವಿವಾಹವಾಗಿದ್ದಾರೆ ಎನ್ನುವ ಪೋಟೋ ವೈರಲ್ ಆಗಿದ್ದು ಇದರ ನಿಖರತೆ ಇನ್ನಷ್ಟೇ ತಿಳಿದುಬರಬೇಕಿದೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ 7ನೇ ಬ್ಲಾಕ್ ಕಾಟಿಪಳ್ಳದ ಯುವಕ ಪ್ರಶಾಂತ್ ಭಂಡಾರಿ (31) ಹಾಗೂ 3ನೇ ಬ್ಲಾಕ್ ಆಶ್ರಯ ಕಾಲೋನಿ ನಿವಾಸಿ ಆಯೇಷಾ (19) ಡಿ.1 ರಂದು ನಾಪತ್ತೆಯಾಗಿದ್ದರು. ಇವರಿಬ್ಬರು ವಿವಾಹವಾಗಿದ್ದಾರೆ ಎನ್ನುವ ಪೋಟೋವನ್ನು ಅವರ ಮಿತ್ರರು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ. ಅಯೇಷಾ ತನ್ನ ಹೆಸರನ್ನು ಅಕ್ಷತಾ ಎಂದು ಬದಲಿಸಿಕೊಂಡಿದ್ದಾರೆ. ನಾಪತ್ತೆಯಾದ ದಿನ ಆಯೇಷಾ ತಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಯುವತಿ ಕುಟೂಂಬ ಮೂಲತಃ ಕಾರವಾರದ ಮುಂಡಗೋಡದವರಾಗಿದ್ದು, ಈಕೆಯ ತಂದೆ ಸ್ಥಳೀಯದವರಾಗಿದ್ದು , ಈಕೆಯ ತಂದೆ ಸ್ಥಳೀಯವಾಗಿ ಉದ್ಯೋಗದಲ್ಲಿದ್ದಾರೆ. ಅವರ ಪತ್ತೆಗೆ ಪೊಲೀಸರು ಕಾರ್ಯೋನ್ಮುಖರಾಗಿದ್ದಾರೆ.

Read More

ಬಂಟ್ವಾಳ: ಪ್ರಕರಣವೊಂದರ ಮಾತುಕತೆಯ ಬಗ್ಗೆ ತಕರಾರು ಎತ್ತಿ ವ್ಯಕ್ತಿಯೊಬ್ಬರಿಗೆ ಹಾಗೂ ಆತನ ಸ್ನೇಹಿತನಿಗೆ ತಂಡವೊಂದು ಪಂಚ್ ಹಾಗೂ ಕಬ್ಬಿಣದ ರಾಡಿನಿಂದ ಹಲ್ಲೆ ನಡೆಸಿದ ಪ್ರಕರಣ ಕಾವಳಮುಡೂರು ಗ್ರಾಮದ ಕಾವಳಕಟ್ಟೆ ಬಸ್ ನಿಲ್ದಾಣದ ಬಳಿ ನಡೆದಿದೆ. ಕಾವಳಪಡೂರು ನಿವಾಸಿ ಮಹಮ್ಮದ್ ಶಮೀಮ್ (30) ಅವರು ಗುರುವಾರ ಬೆಳಿಗ್ಗೆ ತನ್ನ ನೆರೆಕರೆಯವರಾದ ಮಹಮ್ಮದ್ ಜುಬೈರ್, ಮಹಮ್ಮದ್ ಹನೀಫ್, ಮಹಮ್ಮದ್ ಫಯಾಜ್, ಮಹಮ್ಮದ್ ಶರೀಫ್ ಎಂಬವರೊಂದಿಗೆ ಕಾವಳಮುಡೂರು ಗ್ರಾಮದ ಕಾವಳಕಟ್ಟೆ ಬಸ್ ನಿಲ್ದಾಣದ ಬಳಿಯಿದ್ದಾಗ, ಆರೋಪಿಗಳಾದ ಪರಿಚಯಸ್ಥ ಮಹಮ್ಮದ್ ಫಜೀಮ್, ಮಹಮ್ಮದ್ ಇಮ್ರಾನ್, ಇರ್ಪಾನ್ ಬೊಂಬಿಕ್ಕು, ಹಂಝ ಆಲಂಗಾಲು, ರಹೀಂ ಧೂಮಳಿಕೆ ಅವರುಗಳು ಅಲ್ಲಿಗೆ ಬಂದು, ಶಮೀಮ್ ಅವರನ್ನು ಅಂಗಡಿಯಿಂದ ಹೊರಗೆ ಕರೆದು, ಹಿಂದಿನ ದಿನ ತರಕಾರಿ ಹನೀಫ್ ಎಂಬವರಿಗೆ ಸಂಬಂಧಿಸಿ ನಡೆದಿದ್ದ ಮಾತುಕತೆಯ ಬಗ್ಗೆ ತಕರಾರು ತೆಗೆದು, ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಹಾಕಿರುವುದಲ್ಲದೆ, ಆರೋಪಿಗಳ ಪೈಕಿ ಮಹಮ್ಮದ್ ಫಜೀಮ್ ಮತ್ತು ಇರ್ಪಾನ್ ಬೊಂಬಿಕ್ಕು ಮತ್ತು ಮಹಮ್ಮದ್ ಇಮ್ರಾನ್ ಅವರು ತಾವುಗಳು ತಂದಿದ್ದ…

Read More

ಉತ್ತರಪ್ರದೇಶ: ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ತಾಯಿ ತನ್ನನ್ನು ನಿಂದಿಸಿದಳು ಎಂದು ಮನನೊಂದು ಚಲಿಸುವ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉತ್ತರಪ್ರದೇಶದ ಮಥುರಾದಲ್ಲಿ ವರದಿಯಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಆತ್ಯಹತ್ಯೆಗೆ ಶರಣಾದ 13 ವರ್ಷ ವಯಸ್ಸಿನ ಬಾಲಕಿಯನ್ನು ಖುಷಿ ಶರ್ಮಾ ಎಂದು ಗುರುತಿಸಲಾಗಿದ್ದು, ಆಕೆಗೆ ಶಾಲೆಗೆ ಹೋಗಲು ಇಷ್ಟವಿರಲಿಲ್ಲ. ಇದರಿಂದ ಕುಪಿತಗೊಂಡ ಆಕೆಯ ತಾಯಿ ಮಗಳು ಶಾಲೆಗೆ ಹೋಗುವಂತೆ ಒತ್ತಾಯಿಸಿ, ಗದರಿಸಿದ್ದಾರೆ. ತದನಂತರ ಕಪಾಳಮೋಕ್ಷ ಕೂಡ ಮಾಡಿದ್ದಾರೆ. ಇದರಿಂದ ತೀವ್ರ ಮನನೊಂದ ಶರ್ಮಾ ಅವರ ಪುತ್ರಿ ಖುಷಿ, ಶಾಲೆಗೆ ಹೋಗುವ ಬದಲು ಅಲ್ವಾರ್-ಮಥುರಾ ರೈಲ್ವೇ ಟ್ರ್ಯಾಕ್ ಬಳಿ ಹೋಗಿ ರೈಲಿನ ಮುಂದೆ ಜಿಗಿದಿದ್ದಾಳೆ. ಘಟನೆಯನ್ನು ಕಂಡ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಆಕೆಯ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಖುಷಿ ತನ್ನ ತಾಯಿ ಬೈದು, ಗದರಿದ್ದಕ್ಕೆ ಮನನೊಂದು ಆತ್ಯಹತ್ಯೆ ಮಾಡಿಕೊಂಡಿದ್ದಾಳೆ ಎಂದು ನಂಬಲಾಗಿದೆ.

Read More

ದೇಶಾದ್ಯಂತ ಹೃದಯಾಘಾತ ಪ್ರಕರಣ ಹೆಚ್ಚುತ್ತಿದ್ದು, ಇದೀಗ ವೈದ್ಯೆಯೊಬ್ಬರು ಚಿಕಿತ್ಸೆ ನೀಡುತ್ತಿರುವ ವೇಳೆಯೇ ಹೃದಯದ ನೋವಿನಿಂದ ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಈ ದುರಂತ ಘಟನೆ ನಡೆದಿದೆ. ಮೃತರನ್ನು ಡಾ. ಶಶಿಕಲಾ ಎಂದು ಗುರುತಿಸಲಾಗಿದೆ.ಉಡುಪಿ ಅಜ್ಜರಕಾಡಿನಲ್ಲಿರುವ ಜಿಲ್ಲಾ ಆಸ್ಪತ್ರೆಯಲ್ಲಿ ಮೆಡಿಸಿನ್ ವಿಭಾಗದ ವೈದ್ಯರಾಗಿರುವ ಡಾ. ಶಶಿಕಲಾ ಅವರು ರೋಗಿಗೆ ಚಿಕಿತ್ಸೆ ನೀಡುವಾಗಲೇ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದು ಪ್ರಾಣ ಬಿಟ್ಟಿದ್ದಾರೆ. ಅವರಿಗೆ 60 ವರ್ಷ ಆಗಿತ್ತು. ಶಶಿಕಲಾ ಅವರು 2022ರ ಫೆಬ್ರವರಿಯಲ್ಲಿ ವಯೋ ನಿವೃತ್ತಿ ಹೊಂದಿದ್ದರು. ಆದರೆ, ವೈದ್ಯರಿಲ್ಲದ ಹಿನ್ನೆಲೆಯಲ್ಲಿ ಅವರನ್ನು ಹೊರಗುತ್ತಿಗೆಯಲ್ಲಿ ಮುಂದುವರಿಸಲಾಗಿತ್ತು. ಅವರು ಹೊರರೋಗಿಗಳ ವಿಭಾಗದಲ್ಲಿ ಪ್ರಮುಖವಾಗಿ ರೋಗಿಗಳನ್ನು ನೋಡುತ್ತಿದ್ದರು. ಗುರುವಾರ ಅವರು ಜಿಲ್ಲಾಸ್ಪತ್ರೆಯ ಹೊರ ರೋಗಿ ವಿಭಾಗದಲ್ಲಿ ಸೇವೆ ನೀಡುತ್ತಿದ್ದ ವೇಳೆ ಒಮ್ಮೆಗೇ ಕುಸಿದು ಬಿದ್ದರು. ರೋಗಿಗೆ ಚಿಕಿತ್ಸೆ ನೀಡುತ್ತಿರುವ ಸಂದರ್ಭದಲ್ಲೇ ಕುಸಿದು ಬಿದ್ದಿದ್ದ ಶಶಿಕಲಾ ಅವರನ್ನು ಕೂಡಲೇ ಜಿಲ್ಲಾಸ್ಪತ್ರೆ ಸಿಬ್ಬಂದಿಗಳು ತುರ್ತು ಚಿಕಿತ್ಸಾ ವಿಭಾಗಕ್ಕೆ ಕರೆದೊಯ್ದು ಚಿಕಿತ್ಸೆ ನೀಡಿದರು. ಆದರೆ, ಶಶಿಕಲಾ ಅವರು ಯಾವುದೇ ಚಿಕಿತ್ಸೆಗೆ ಸ್ಪಂದಿಸದೆ…

Read More

ಮುಲ್ಕಿ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಹೆದ್ದಾರಿಯ ಡಿವೈಡರ್ ಮೇಲೆ ಹತ್ತಿ ಪಾದಚಾರಿ ಮಾರ್ಗದ ಪಕ್ಕದಲ್ಲಿನ ವಾಹನಗಳಿಗೆ ಡಿಕ್ಕಿಯಾಗಿದೆ. ಪರಿಣಾಮ ಸಂಚಾರ ಪೊಲೀಸ್ ಸಿಬ್ಬಂದಿ ಸೇರಿ ಮೂವರು ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಜಂಕ್ಷನ್ ಬಳಿ ಈ ಘಟನೆ ನಡೆದಿದೆ. ಲಾರಿ ಚಾಲಕನ ನಿರ್ಲಕ್ಷ್ಯವೇ ಅವಘಡಕ್ಕೆ ಕಾರಣ ಎನ್ನಲಾಗಿದೆ. ಅಪಘಾತದಿಂದ ಸ್ಕೂಟರ್ ಸವಾರ ಉತ್ತರ ಕರ್ನಾಟಕ ಮೂಲದ ಬಪ್ಪನಾಡು ಬಳಿ ರೆಸಿಡೆನ್ಸಿಯೊಂದರ ವಾಚ್ ಮ್ಯಾನ್ ಸಂಗಪ್ಪ(57) ಗಂಭೀರ ಗಾಯಗೊಂಡು ಮುಕ್ಕ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಳಿದಂತೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಗೀತಾ (42), ಆಟೋ ಚಾಲಕ ಧರ್ಮೇಂದ್ರ (35) ಗಾಯಗೊಂಡು ಮುಲ್ಕಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಅತಿ ವೇಗದಿಂದ ಬರುತ್ತಿದ್ದ ಲಾರಿ ಮುಲ್ಕಿ ಜಂಕ್ಷನ್ ತಲುಪುತ್ತಿದ್ದಂತೆ ಹೆದ್ದಾರಿ ಅಪಘಾತ ತಡೆಗೆ ಇರಿಸಿದ್ದ ಬ್ಯಾರಿ ಕೇಡ್‌ಗಳನ್ನು ತಪ್ಪಿಸಲು ಯತ್ನಿಸಿ, ಲಾರಿ ಚಾಲಕನ ನಿಯಂತ್ರಣ ತಪ್ಪಿ ಸೀದಾ ಎಡಬದಿಯ ಡಿವೈಡರ್ ಮೇಲೇರಿದೆ.…

Read More

ಬೆಂಗಳೂರು : ಕಾಂತಾರ ಸಿನೆಮಾದ ಹಾಡುಗಳಿಗೆ ದೈವದ ಅವಹೇಳನ ಮಾಡುವ ರೀತಿಯಲ್ಲಿ ರೀಲ್ಸ್ ಅಥವಾ ಕಾರ್ಯಕ್ರಮಗಳಲ್ಲಿ ಬಳಕೆ ಮಾಡುವುದರ ವಿರುದ್ದ ಕಾಂತಾರ ನಟ ರಿಷಬ್ ಶೆಟ್ಟಿ ಅಸಮಧಾನ ವ್ಯಕ್ತಪಡಿಸಿದ್ದು. ಈ ರೀತಿ ಮಾಡುವುದರಿಂದ ಮನಸ್ಸಿಗೆ ತುಂಬಾ ನೋವಾಗಿದೆ ಎಂದಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ದೈವಾರಧನೆ ಬಗ್ಗೆ ಕಾಂತಾರ ಮೊದಲ ಸಿನೆಮಾ ಅಲ್ಲ , ತುಳು ಮತ್ತು ಕನ್ನಡದಲ್ಲೂ ಸಿನೆಮಾಗಳು ಬಂದಿವೆ. ಚೋಮನದುಡಿಯಲ್ಲೂ ದೈವದ ಬಗ್ಗೆ ಹೇಳಿದ್ದಾರೆ. ಆದರೆ ಕಾಂತಾರ ಸಿನೆಮಾ ಮಾಡಿದ ರೀತಿ ಜನರಿಗೆ ತಲುಪಿದೆ. ನಮ್ಮ ಉದ್ದೇಶ ಇದ್ದಿದ್ದು, ದೈವದ ಆರಾಧನೆ ಬಗ್ಗೆ ಅದರ ಶಕ್ತಿ ಬಗ್ಗೆ ತಿಳಿಸುವುದು ಮಾತ್ರ ಆಗಿತ್ತು ಎಂದರು. ಕಾಂತಾರದ ಗೆಲುವು ಎಷ್ಟು ಖುಷಿ ಕೊಡ್ತೋ, ಅಷ್ಟೇ ದುಃಖವೂ ಕೊಟ್ಟಿದೆ ಎಂದು ನಟ, ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ದಾರೆ. ರಿಷಬ್​ ಶೆಟ್ಟಿ ನಂದಿ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಅತ್ಯುತ್ತಮ ನಟ, ನಿರ್ದೇಶಕ ಪ್ರಶಸ್ತಿ ಪಡೆದಿದ್ದಾರೆ. ಈ ಸಮಾರಂಭದಲ್ಲಿ ಮಾತನಾಡಿದ ಅವರು, ದೈವರಾಧನೆ ಕುರಿತು ಸಾಕಷ್ಟು ತುಳು, ಕನ್ನಡ…

Read More

ಮಂಗಳೂರು : ಪೆಯಿಂಟ್ ಮಾಡುತ್ತಿದ್ದಾಗ ಏಣಿಗೆ ವಿದ್ಯುತ್ ಪ್ರವಹಿಸಿ ಕಾರ್ಮಿಕ ಮೃತಪಟ್ಟ ಘಟನೆ ಅಳಪೆ ಗ್ರಾಮದ ಶಿಲ್ಪ ಪಡ್ಡುವಿನಲ್ಲಿ ಸಂಭವಿಸಿದೆ. ವಳಚ್ಚಿಲ್ ಪದವು ನಿವಾಸಿ ಜೈನುದ್ದೀನ್ ಅಬ್ದುಲ್ ರೆಹಮಾನ್ (43) ಮೃತಪಟ್ಟ ದುರ್ದೈವಿ. ಜೈನುದ್ದೀನ್ ಅಬ್ದುಲ್ ರೆಹಮಾನ್ ಅವರು ಹೆನ್ರಿ ಡಿಸೋಜಾ ಎಂಬವರ ಮನೆಯಲ್ಲಿ ಪೆಯಿಂಟಿಂಗ್ ಕೆಲಸ ಮಾಡುತ್ತಿದ್ದರು. ಅವರು ಮೇಲ್ಛಾವಣಿಗೆ ಕಬ್ಬಿಣದ ಏಣಿ ಮೇಲೆ ನಿಂತು ಪೆಯಿಂಟಿಂಗ್ ಮಾಡುತ್ತಿದ್ದಾಗ ಪಕ್ಕದಲ್ಲಿದ್ದ ಹೈಟೆನ್ಷನ್ ತಂತಿ ತಾಗಿದೆ. ಈ ವೇಳೆ ವಿದ್ಯುತ್ ಪ್ರವಹಿಸಿ ಅವರು ಮೇಲಿನಿಂದ ಕೆಳಗೆ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರೊಂದಿಗೆ ಕೆಲಸ ಮಾಡುತ್ತಿದ್ದವರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ರೆಹಮಾನ್ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬಂಟ್ವಾಳ: ಮನೆಯಂಗಳಕ್ಕೆ ಪ್ರವೇಶಿಸಿದ ನಾಲೈದು ಮಂದಿಯ ಗುಂಪು ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ ಘಟನೆ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಬಿ ಮೂಡ ಗ್ರಾಮದ ಗಾಂದೋಡಿ ಎಂಬಲ್ಲಿ ಬುಧವಾರ ಮುಂಜಾನೆ ನಡೆದಿದೆ. ಸುಮ್ಮಿ ಯಾನೆ ಸುಮಿತ್ ಆಳ್ವ ಮತ್ತು ಸಹಚರರು ಸೇರಿ ಕೃತ್ಯ ಎಸಗಿದ್ದಾರೆ. ಈ ಬಗ್ಗೆ ಮಂಗಳೂರು ತಾಲೂಕು ಬಳ್ಳಾಲಭಾಗ್ ಶಿರ್ವ ವಿಸ್ತಾ ಅಪಾರ್ಟ್ ಮೆಂಟ್ ನಿವಾಸಿ ಎಂ ಚಂದ್ರ ಶೆಟ್ಟಿ ಅವರು ಬಂಟ್ವಾಳ ನಗರ ಪೊಲೀಸರಿಗೆ ದೂರು ನೀಡಿದ್ದು, ತನ್ನ ಹೆಂಡತಿಗೆ ಸಂಬಂದಿಸಿದ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಗಾಂದೋಡಿ ಎಂಬಲ್ಲಿರುವ ಮನೆಗೆ ಬುಧವಾರ ಬೆಳಗಿನ ಜಾವ ಸುಮಾರು 2 ಗಂಟೆಗೆ ಬಿ ಮೂಡ ನಿವಾಸಿ, ಆರೋಪಿ ಸುಮಿತ್ ಆಳ್ವ (45) ಎಂಬಾತ ತನ್ನ 4 ಮಂದಿ ಸಹಚರರ ಜೊತೆ ಸೇರಿ ಮಹೇಂದ್ರ ಎಕ್ಸ್ ಯು ವಿ 500 ವಾಹನದಲ್ಲಿ ಬಂದು, ಮನೆಯ ಎದುರುಗಡೆ ಅಳವಡಿಸಿದ ಕಬ್ಬಿಣ ಗೇಟ್ ಮುರಿದು ಮನೆಯಂಗಳಕ್ಕೆ ಬಂದು ಮನೆಯ ಮುಂಭಾಗಕ್ಕೆ ಪೆಟ್ರೋಲ್…

Read More