Author: main-admin

ವಿಟ್ಲ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆ ಮರ ಮುರಿದು ಬಿದ್ದು ಮಹಿಳೆಯೋರ್ವರು ಸಾವನ್ನಪ್ಪಿದ ಘಟನೆ ಸಾಲೆತ್ತೂರಿನಲ್ಲಿ ನಡೆದಿದೆ. ಮೃತ ದುರ್ದೈವಿ ಗುಲಾಬಿ(48) ಎಂದು ಗುರುತಿಸಲಾಗಿದೆ. ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆ ಮರವೊಂದು ಆಕಸ್ಮಿಕವಾಗಿ ಮುರಿದು ಬಿದ್ದು ತಲೆಗೆ ತೀವ್ರ ಪೆಟ್ಟಾಗಿದ್ದು ಈ ಹಿನ್ನಲೆ ಕೂಡಲೇ ಮಹಿಳೆಯನ್ನು ವಿಟ್ಲ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Read More

ಮಂಗಳೂರು: ಮಹಾನಗರಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ, ಬೆಂದೂರ್‌ವೆಲ್, ಪಣಂಬೂರು 1,000 ಎಂ.ಎಂ. ವ್ಯಾಸದ ಮುಖ್ಯ ಕೊಳವೆಯನ್ನು ನಾಗೂರಿ ಮಾರುಕಟ್ಟೆ ಬಳಿ ಬಲಪಡಿಸುವ ಕಾಮಗಾರಿ ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ ಡಿ.6 ರಿಂದ 8 ರವರೆಗೆ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ತುಂಬೆ ರಾಮಲ್ ಕಟ್ಟೆ ಬಳಿ ಕೆಯುಐಡಿಎಫ್‌ಸಿ ವತಿಯಿಂದ ಬಲ್ಕ್ ಫೋ ಮೀಟರ್ ಅಳವಡಿಕೆ ಕಾಮಗಾರಿ ಹಾಗೂ ಮನಪಾ ವತಿಯಿಂದ 900 ಎಂ.ಎಂ ವ್ಯಾಸದ ಕೊಳವೆಯನ್ನು ಕೆ ಐಒಸಿಎಲ್ ಎದುರುಗಡೆ ಬದಲಾಯಿಸುವ ಕಾಮಗಾರಿ ಡಿ.6ರಿಂದ ಆರಂಭವಾಗಲಿದೆ. ಡಿ.6ರಂದು ಬೆಳಗ್ಗೆ 6ರಿಂದ ಡಿ.8ರ ಬೆಳಗ್ಗೆ 6ವರೆಗಿನ ಅವಧಿಯಲ್ಲಿ ಬೆಂದೂ‌ರ್ ವೆಲ್ ಲೋ ಲೇವೆಲ್ ಪ್ರದೇಶಗಳಾದ ಪಿ.ವಿ.ಎಸ್, ಲೇಡಿಹಿಲ್, ಬಂದರ್‌ ಹಾಗೂ ಮೇರಿಹಿಲ್, ಪಚ್ಚನಾಡಿ, ಅಶೋಕನಗರ, ದೇರೆಬೈಲ್, ಕೊಡಿಯಾಲಬೈಲ್, ಕದ್ರಿ, ನಾಗೂರಿ, ಸುರತ್ಕಲ್, ಕಾಟಿಪಳ್ಳ, ಕೂಳೂರು, ಜಲ್ಲಿಗುಡ್ಡೆ, ಕೋಡಿಕಲ್ ಭಾಗಶಃ ಕಾನ, ಬಾಳ, ಕುಳಾಯಿ, ಮುಕ್ತ, ಪಣಂಬೂರು ಇತ್ಯಾದಿ ಪ್ರದೇಶಗಳಿಗೆ ಸಂಪೂರ್ಣವಾಗಿ ನೀರು ನಿಲುಗಡೆಗೊಳಿಸಲಾಗುವುದರಿಂದ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಹಾನಗರ ಪಾಲಿಕೆ ಪ್ರಕಟನೆ…

Read More

ಮಂಗಳೂರು: ಟೆಲಿಗ್ರಾಂ ಆ್ಯಪ್ ಮೂಲಕ ಪಾರ್ಟ್ ಟೈಂ ಜಾಬ್ ಎಂದು ರೇಟಿಂಗ್ ನೀಡುವ ಟಾಸ್ಕ್ ಕೊಟ್ಟು 27.56 ಲ.ರೂ. ವಂಚಿಸಿರುವ ಘಟನೆ ನಡೆದಿದೆ. ದೂರುದಾರರಿಗೆ ಜೂ. 19ರಂದು ಟೆಲಿಗ್ರಾಂ ಆ್ಯಪ್‌ನಲ್ಲಿ ಹೊಟೇಲ್ ಮತ್ತು ಹೋಂ ಸ್ಟೇಗಳಿಗೆ ರೇಟಿಂಗ್ ನೀಡುವ ಟಾಸ್ಕ್ ಪೂರ್ಣಗೊಳಿಸುವ ಪಾರ್ಟ್ ಟೈಂ ಜಾಬ್ ಮಾಡಿ ಹಣ ಗಳಿಸಬಹುದು ಎಂದು ಅಪರಿಚಿತ ವ್ಯಕ್ತಿಯಿಂದ ಮೆಸೇಜ್ ಬಂದಿತ್ತು. ಅದನ್ನು ನಂಬಿದ ದೂರುದಾರರು Aditi MMT guru ಎಂಬ ಗ್ರೂಪ್‌ನಲ್ಲಿ 30 ಟಾಸ್ಕ್ ಪೂರ್ಣಗೊಳಿಸಿದ್ದರು. ಅವರಿಗೆ ಅಪರಿಚಿತ ವ್ಯಕ್ತಿ 900 ರೂ.ಗಳನ್ನು ಲಾಭಾಂಶವೆಂದು ನೀಡಿದ್ದು, ಅದೇ ದಿನ ಮತ್ತೆ 11,000 ರೂ. ಹೂಡಿಕೆ ಮಾಡಿಸಿ, ಒಮ್ಮೆ 20,000 ರೂ. ಹಾಗೂ ಇನ್ನೊಮ್ಮೆ 70,000 ರೂ. ಗಳನ್ನು ಲಾಂಭಾಂಶವೆಂದು ನೀಡಿದ್ದ ಇದೇ ರೀತಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭಾಂಶ ನೀಡುವುದಾಗಿ ನಂಬಿಸಿ ಜೂ.19ರಿಂದ ಆ. 26ರವರೆಗೆ ಹಂತಹಂತವಾಗಿ ಒಟ್ಟು 27,56,129 ರೂ.ಗಳನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಿಕೊಂಡು ಅನಂತರ ಯಾವುದೇ ಲಾಭಾಂಶ ನೀಡದೆ…

Read More

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಪಾಲಮ ಹೆಹರು ತಾಲೂಕಿನ ಚಿನ್ನಪಳ್ಳಿ ಪೆದ್ದ ಗ್ರಾಮದ ನಿವಾಸಿ ಬಿ. ಮೌಲಾ ಎಂದು ಗುರುತಿಸಲಾಗಿದೆ. ಕಳೆದ 6 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಿ. ಮೌಲಾ ಉಳ್ಳಾಲ ತಾಲೂಕಿನ ದೇರಳಕಟ್ಟೆಯ ಕುತ್ತಾರು ಎಂಬಲ್ಲಿ ಇದ್ದಾನೆ ಎಂಬುದಾಗಿ ಲಭಿಸಿದ ಖಚಿತ ಮಾಹಿತಿ ಮೇರೆಗೆ ಪೊಲೀಸರು ಅಲ್ಲಿಗೆ ತೆರಳಿ ಆತನನ್ನು ಬಂಧಿಸಿದರು. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿ, ನ್ಯಾಯಾಲಯವು ಆರೋಪಿಗೆ ದಂಡ ವಿಧಿಸಿ ಪ್ರಕರಣವನ್ನು ಮುಕ್ತಾಯಗೊಳಿಸಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯ ಹೆಡ್‌ ಕಾನ್‌ ಸ್ಟೆಬಲ್‌ ಗಣೇಶ್ ಪ್ರಸಾದ್ ಮತ್ತು ಕಾನ್‌ ಸ್ಟೆಬಲ್‌ ವಿಜಯ ಕುಮಾರ ಅವರು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Read More

ಮಂಗಳೂರು : ಕೇಂದ್ರ ತನಿಖಾ ದಳ (CBI) ಮಂಗಳವಾರ ಪಶ್ಚಿಮ ಬಂಗಾಳ ಮತ್ತು ಕರ್ನಾಟಕ ಸೇರಿದಂತೆ ಸುಮಾರು 13 ಸ್ಥಳಗಳಲ್ಲಿ ಶೋಧ ನಡೆಸಿದ್ದು, ಆರೋಪಿಗಳು ಮತ್ತು ಖಾಸಗಿ ವ್ಯಕ್ತಿಗಳು ಮತ್ತು ಬ್ಯಾಂಕ್ ಅಧಿಕಾರಿಗಳು ಸೇರಿದಂತೆ ಇತರರ ಆವರಣದಲ್ಲಿ ಶೋಧ ನಡೆಸಿದೆ. ಕೋಲ್ಕತ್ತಾ ಮತ್ತು ಮಂಗಳೂರಿನಲ್ಲಿ ಶೋಧ ನಡೆಸಲಾಯಿತು. ಶೋಧದ ಸಮಯದಲ್ಲಿ, ಮೊಬೈಲ್ ಫೋನ್ಗಳು, ಲ್ಯಾಪ್ಟಾಪ್ಗಳು, ಕಂಪ್ಯೂಟರ್ ವ್ಯವಸ್ಥೆಗಳು, ಇಮೇಲ್ ಆರ್ಕೈವ್ಗಳು ಮತ್ತು ಡೆಬಿಟ್ / ಕ್ರೆಡಿಟ್ ಕಾರ್ಡ್ಗಳು ಸೇರಿದಂತೆ ಎಲೆಕ್ಟ್ರಾನಿಕ್ ಪುರಾವೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಸುಮಾರು 820 ಕೋಟಿ ರೂ.ಗಳ ಅನುಮಾನಾಸ್ಪದ ತಕ್ಷಣದ ಪಾವತಿ ಸೇವೆ (ಐಎಂಪಿಎಸ್) ವಹಿವಾಟಿನ ಆರೋಪದ ಮೇಲೆ ಯುಕೋ ಬ್ಯಾಂಕ್ನಲ್ಲಿ ಕೆಲಸ ಮಾಡುವ ಇಬ್ಬರು ಸಹಾಯಕ ಎಂಜಿನಿಯರ್ಗಳು ಮತ್ತು ಇತರ ಅಪರಿಚಿತ ವ್ಯಕ್ತಿಗಳ ವಿರುದ್ಧ ಯುಕೋ ಬ್ಯಾಂಕ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ನವೆಂಬರ್ 10, 2023 ಮತ್ತು ನವೆಂಬರ್ 13, 2023 ರ ನಡುವೆ, ಏಳು ಖಾಸಗಿ ಬ್ಯಾಂಕುಗಳಲ್ಲಿ 14,000 ಖಾತೆದಾರರಿಂದ ಹುಟ್ಟಿಕೊಂಡ ಐಎಂಪಿಎಸ್ ಆಂತರಿಕ…

Read More

ಬಂಟ್ವಾಳ: ಸಾಲದ ಬಾಧೆಯಿಂದ ಬಳಲುತ್ತಿದ್ದ ಹೋಟೆಲ್ ‌ಕಾರ್ಮಿಕನೋರ್ವ ಚೀಟಿ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಬಡ್ಡಕಟ್ಟೆ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಸೋಮನಾಥ ನಿವಾಸಿ ಶೇಖರ ದೇವಾಡಿಗ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.‌ಬಂಟ್ವಾಳ ಬಡ್ಡಕಟ್ಟೆ ಎಂಬಲ್ಲಿರುವ ಹೋಟೆಲ್ ಒಂದರಲ್ಲಿ ಕಳೆದ ಐದು ತಿಂಗಳಿನಿಂದ ಅಡುಗೆ ಕೆಲಸ ಮಾಡಿಕೊಂಡಿದ್ದ ಈತ ವಾರಕ್ಕೊಮ್ಮೆ ‌ಊರಿಗೆ ಹೋಗಿ ಬರುತ್ತಿದ್ದ.ಡಿ.4 ರಂದು ಸೋಮವಾರ ರಾತ್ರಿ ಕೆಲಸ ಮುಗಿಸಿ , ಬಳಿಕ ಹೋಟೆಲ್ ನ ಮಾಲೀಕರ ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದರು.ಮುಂಜಾನೆ ಬೇಗ ಎದ್ದು ಹೋಟೆಲ್ ನ ಅಡುಗೆ ಕೆಲಸಕ್ಕೆ ಬರುತ್ತಿದ್ದ. ಇಂದು ಬೆಳಿಗ್ಗೆ ಕೆಲಸಕ್ಕೆ ಬಾರದ ಹಿನ್ನೆಲೆಯಲ್ಲಿ ಹೋಟೆಲ್ ಮಾಲೀಕ ಕಾರ್ಮಿಕನಿಗೆ ಪೋನ್ ಮಾಡಿದಾಗ ಆತ ರಿಸೀವ್ ಮಾಡಲಿಲ್ಲ. ಸಂಶಯಗೊಂಡ ಹೋಟೆಲ್ ಮಾಲೀಕ ವಿಶ್ರಾಂತಿ ಕೊಠಡಿ ಗೆ ತೆರಳಿದಾಗ ಮಲಗಿರುವುದು ಕಂಡು ಎಬ್ಬಿಸಿದರು. ಆದರೆ ಆತ ಮಲಗಿರುವ ಪಕ್ಕ ವಿಷದ ಬಾಟಲಿ ಮತ್ತು…

Read More

ಉಳ್ಳಾಲ: ಪೆರ್ಮನ್ನೂರು ಗ್ರಾಮದ ಸಂತೋಷನಗರ ಸಾರ್ವಜನಿಕ ರಸ್ತೆಯಲ್ಲಿ ನಿಷೇಧಿತ ಮಾದಕ ವಸ್ತುವಾದ ಮೆತಫಿಟಮೈನ್ ಮತ್ತು ಎಲ್‌ಎಸ್‌ಡಿ ಸ್ಟ್ಯಾಂಪ್‌ ಡ್ರಗ್ಸ್‌ ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ತಾಲೂಕು ಪೆರ್ಮನ್ನೂರು ಗ್ರಾಮದ ಸಂತೋಷನಗರ ಸಾರ್ವಜನಿಕ ರಸ್ತೆ ಬದಿಯಲ್ಲಿ ಕೆಎ-19-ಎಂಎಂ-7082 ನೇ ಬಿಳಿ ಬಣ್ಣದ ಸ್ವಿಪ್ಟ್ ಕಾರಿನಲ್ಲಿ ಆರೋಪಿಗಳಾದ ಶಿಶಿರ್ ದೇವಾಡಿಗ ಮತ್ತು ಶುಶಾನ್.ಎಲ್. ರವರು ನಿಷೇದಿತ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿರುವುದನ್ನು ಪತ್ತೆ ಮಾಡಿದ ಪೋಲಿಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಂದ ವಶದಿಂದ 132 ಗ್ರಾಂ ತೂಕದ ಮೆಥಾಂಫೆಟಮೈನ್ (Methamphetamine) ಮತ್ತು 250 LSD ಸ್ಟ್ಯಾಂಪ್‍ ಹಾಗು ನಗದು ಹಣ ರೂ.3,70,050/- ಹಾಗೂ ಸ್ವಿಪ್ಟ್ ಕಾರು ಹೀಗೇ ಒಟ್ಟು ರೂ.14,01,050-00 ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ದಾಳಿಯಲ್ಲಿ ಶ್ರೀಮತಿ ಧನ್ಯ.ಎನ್.ನಾಯಕ ಸಹಾಯಕ ಪೊಲೀಸ್ ಆಯುಕ್ತರು, ಮಂಗಳೂರು ದಕ್ಷಿಣ ಉಪವಿಭಾಗರವರ ನೇತೃತ್ವದಲ್ಲಿ Anti-Drug Team ಪಿಎಸ್‍ಐ ಪುನಿತ್‍ ಗಾಂವ್‍ಕರ್, ಉಳ್ಳಾಲ ಠಾಣಾ ಪಿಎಸ್‍ಐ, ಸಂತೋಷಕುಮಾರ್.ಡಿ. ಹಾಗೂ ಸಿಬ್ಬಂದಿಗಳಾದ ಸಾಜು ನಾಯರ್, ಮಹೇಶ್‍, ಶಿವಕುಮಾರ್,…

Read More

ಬೆಳ್ತಂಗಡಿ: ಮನೆ ಬಳಿ ಕಟ್ಟಿ ಹಾಕಿದ ಎರಡು ಕರುಗಳನ್ನು ಚಿರತೆ ದಾಳಿ ನಡೆಸಿ ಕೊಂದು ಹಾಕಿದ ಘಟನೆ ಬೆಳ್ತಂಗಡಿಯ ಮುಂಡೂರು ಬಳಿ ಭಾನುವಾರ ರಾತ್ರಿ ನಡೆದಿದೆ. ಇಲ್ಲಿನ ಮುಂಡೂರು ಗ್ರಾಮದ ಕೇರಿಯಾರ್ ಎಂಬಲ್ಲಿ ಈ ಘಟನೆ ಸಂಭವಿಸಿದ್ದು, ಗುರುವಪ್ಪ ಸಾಲ್ಯಾನ್ ಅವರಿಗೆ ಸೇರಿದ ಕರುಗಳನ್ನು ಚಿರತೆ ಕೊಂದು ತಿಂದಿದೆ. ಮನೆ ಬಳಿಕ ಕಟ್ಟಿ ಹಾಕಿದ್ದ ಕರಿಗಳ ಮೇಲೆ ಭಾನುವಾರ ರಾತ್ರಿ ದಾಳಿ ಮಾಡಿದ ಚಿರತೆ ತೋಟಕ್ಕೆ ಎಳೆದೊಯ್ದು ತಿಂದು ಹಾಕಿದೆ. ಕಳೆದ ಒಂದೂವರೆ ತಿಂಗಳ ಹಿಂದೆಯಷ್ಟೇ ಈ ಭಾಗದಲ್ಲಿ ರಾತ್ರಿ ಬಂದ ಚಿರತೆ ಕರುವೊಂದರ ಮೇಲೆ ದಾಳಿ ನಡೆಸಿ ತಿಂದು ಹಾಕಿತ್ತು. ಇದರ ಬಗ್ಗೆಯೂ ಅರಣ್ಯ ಇಲಾಖೆಗೆ ದೂರು ನೀಡಲಾಗಿತ್ತು. ಸದ್ಯ ಈ ಭಾಗದಲ್ಲಿ ಮತ್ತೆ ಚಿರತೆ ಸಂಚಾರ ಕಂಡು ಬಂದಿದ್ದು, ಈ ಸಂಬಂಧ ಇಲಾಖಾಧಿಕಾರಿಗಳು, ಜನಪ್ರತಿನಿಧಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ರಕ್ಷಣೆ ಒದಗಿಸುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ.

Read More

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ವೇಳೆ ಬೈಂದೂರಿನ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ನೀಡುವುದಾಗಿ ಹೇಳಿ 5 ಕೋಟಿಗೂ ಅಧಿಕ ಹಣ ವಂಚನೆ ಮಾಡಿದ ಪ್ರಕರಣದಲ್ಲಿ ಜೈಲಿನಲ್ಲಿರುವ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರಳಿಗೆ ಜಾಮೀನು ದೊರಕಿದೆ. ಟಿಕೆಟ್ ನೀಡುವುದಾಗಿ ವಂಚಿಸಿದ್ದಾರೆ ಎಂದು ಉದ್ಯಮಿ ಗೋವಿಂದಬಾಬು ಪೂಜಾರಿ ಸೆಪ್ಟೆಂಬರ್ 8ರಂದು ಬಂಡೇಪಾಳ್ಯ ಠಾಣೆಯಲ್ಲಿ ಚೈತ್ರಾ ಮತ್ತು ಇತರೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು. ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಆಗಿತ್ತು. ಬಳಿಕ ಕ್ಷೀಪ್ರ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು, ಚೈತ್ರಾ, ಗಗನ್ ಕಡೂರು, ಹೊಸಪೇಟೆಯ ಸ್ವಾಮೀಜಿ ಹಾಲಶ್ರೀ ಸ್ವಾಮೀಜಿ, ಚನ್ನನಾಯ್ಕ, ಧನರಾಜ್, ಶ್ರೀಕಾಂತ್, ಪ್ರಜ್ವಲ್ ಸೇರಿ 9 ಮಂದಿಯನ್ನು ಬಂಧಿಸಲಾಗಿತ್ತು. ಜೈಲು ಸೇರಿದ ಎರಡೂವರೆ ತಿಂಗಳ ಬಳಿಕ ಚೈತ್ರಾ ಕುಂದಾಪುರ ಹಾಗೂ ಆಕೆಯ ಸಹಚರ ಶ್ರೀಕಾಂತ್ ಅವರಿಗೆ ಜಾಮೀನು ಸಿಕ್ಕಿದೆ. ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಂಚನೆ‌ ಮಾಡಿದ ಪ್ರಕರಣದ ಆರೋಪಿಗಳಾದ ಚೈತ್ರಾ, ಶ್ರೀಕಾಂತ್ ಅವರಿಗೆ ಜಾಮೀನು ಮಂಜೂರು ಮಾಡುವಂತೆ ಬೆಂಗಳೂರಿನ 3ನೇ…

Read More

ನವದೆಹಲಿ: 1985 ರಲ್ಲಿ ಏರ್ ಇಂಡಿಯಾ ಜೆಟ್ ಕನಿಷ್ಕಾ ಮೇಲೆ ಬಾಂಬ್ ದಾಳಿ ನಡೆಸಿದ ಆರೋಪಿ ಖಲಿಸ್ತಾನ್ ಪರ ಭಯೋತ್ಪಾದಕ ಲಖ್ಬೀರ್ ಸಿಂಗ್ ರೋಡ್ ಡಿಸೆಂಬರ್ 1 ರಂದು ಹೃದಯಾಘಾತದಿಂದ ಪಾಕಿಸ್ತಾನದಲ್ಲಿ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಲಖ್ಖೀರ್‌ ಸಿಂಗ್‌ ರೋಡ್‌ ಸಾವಿನ ಕುರಿತು ಸಹೋದರ ಮತ್ತು ಮಾಜಿ ಅಕಾಲ್ ತಖ್ತ್ ಜತೇದಾರ್ ಜಸ್ಬೀರ್ ಸಿಂಗ್ ರೋಡ್ ದೃಢಪಡಿಸಿದ್ದಾರೆ. ಜರ್ನೈಲ್ ಸಿಂಗ್ ಭಿಂದ್ರನ್ ವಾಲೆ ಅವರ ಸೋದರಳಿಯ ಖಲಿಸ್ತಾನಿ ಭಯೋತ್ಪಾದಕ ಲಖ್ಬೀರ್ ಸಿಂಗ್ ರೋಡ್ ಡಿಸೆಂಬರ್ 2 ರಂದು ಪಾಕಿಸ್ತಾನದಲ್ಲಿ ಸಾವನ್ನಪ್ಪಿದ್ದಾನೆ. ಸಿಖ್ ಸಂಪ್ರದಾಯಗಳು ಮತ್ತು ಸಂಪ್ರದಾಯಗಳನ್ನು ಅನುಸರಿಸಿ ರೋಡ್ ಅವರ ಅಂತಿಮ ವಿಧಿಗಳನ್ನು ಪಾಕಿಸ್ತಾನದಲ್ಲಿ ರಹಸ್ಯವಾಗಿ ನಡೆಸಲಾಯಿತು ಎಂದು ಮೂಲಗಳು ತಿಳಿಸಿವೆ. ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಆದೇಶದ ಮೇರೆಗೆ ಲಖ್ಬೀರ್ ಸಿಂಗ್ ರೋಡ್ ಪಂಜಾಬ್ನಲ್ಲಿ ಭಾರತದ ವಿರುದ್ಧ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾನೆ ಎಂದು ಪಾಕಿಸ್ತಾನದ ರಹಸ್ಯ ಸಂಸ್ಥೆ ಐಎಸ್‌ಐನ ಸಂಕೇತಗಳು ತಿಳಿಸಿವೆ

Read More