ಸುಳ್ಯ: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರ್ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗೆ ಎರಡು ದಿನಗಳ ಜಾಮೀನು ದೊರೆತಿರುವ ಬಗ್ಗೆ ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮೂಲದ ಇಬ್ರಾಹಿಂ ಶಾ ನಾವೂರು ನನ್ನು 15ನೇ ಆರೋಪಿಯಾಗಿ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದರು. ಸುಳ್ಯದಲ್ಲಿ ಈತನ ತಂಗಿಯ ಮದುವೆ ಇರುವ ಹಿನ್ನೆಲೆಯಲ್ಲಿ ಎರಡು ದಿನಗಳ ಜಾಮೀನು ದೊರೆತಿದೆ ಎಂದು ತಿಳಿದು ಬಂದಿದೆ. ಪ್ರಸ್ತುತ ಈತ ಮೈಸೂರಿನ ಜೈಲಿನಲ್ಲಿದ್ದು ಜಾಮೀನು ಅವಧಿ ಮುಗಿದ ಬಳಿಕ ಮತ್ತೆ ಜೈಲು ಸೇರಬೇಕಿದೆ. 2022 ಜುಲೈ 26ರಂದು ಬೆಳ್ಳಾರೆಯಲ್ಲಿ ತನ್ನ ಚಿಕನ್ ಶಾಪ್ ಎದುರೇ ದುಷ್ಕರ್ಮಿಗಳು ಪ್ರವೀಣ್ ನೆಟ್ಟಾರ್ ಮೇಲೆ ಎರಗಿದ್ದರು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಎನ್ ಐಎ (ರಾಷ್ಟ್ರೀಯ ತನಿಖಾ ದಳ) ಹಲವರನ್ನು ಬಂಧಿಸಿತ್ತು. ಈಗಲೂ ಕೆಲವು ಆರೋಪಿಗಳಿಗಾಗಿ ಎನ್ ಐಎ ಶೋಧ ನಡೆಸುತ್ತಿದೆ.
Author: main-admin
ಬೆಳ್ತಂಗಡಿ: ಎಸ್ಡಿಎಂಸಿ ಅಧ್ಯಕ್ಷರಿಂದ ಶಾಲಾ ವಿದ್ಯಾರ್ಥಿಯ ಮೇಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿದ ಘಟನೆ ಬಳ್ಳಮಂಜ ಮಚ್ಚಿನ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿ ಎಸ್ಡಿಎಂಸಿ ಅಧ್ಯಕ್ಷ ಹಾಗೂ ಇಬ್ಬರು ಶಿಕ್ಷಕರ ವಿರುದ್ಧ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹಲ್ಲೆಗೊಳಗಾದ ವಿದ್ಯಾರ್ಥಿಯನ್ನು ಶಾಲೆಯ ಎಂಟನೇ ತರಗತಿಯ ಮುಹಮ್ಮದ್ ತಫ್ಸಿರ್ ಎಂದು ಗುರುತಿಸಲಾಗಿದೆ. ಎಸ್ ಡಿಎಂಸಿ ಅಧ್ಯಕ್ಷ ಪರಮೇಶ್ ಹಲ್ಲೆ ನಡೆಸಿದ ಆರೋಪಿಯಾಗಿದ್ದು ವಿದ್ಯಾರ್ಥಿ ಮುಹಮ್ಮದ್ ತಫ್ಸಿರ್ ತನ್ನ ಸೈಕಲ್ ಅನ್ನು ಇನ್ನೊಬ್ಬ ವಿದ್ಯಾರ್ಥಿಗೆ ಮಾರಾಟ ಮಾಡಿದ್ದನು. ಇದೇ ವಿಚಾರವಾಗಿ ನ.28ರಂದು ಬಾಲಕನ ತಾಯಿಯನ್ನು ಶಾಲೆಗೆ ಕರೆಸಿದ ಆರೋಪಿ ಪರಮೇಶ್, ತಾಯಿಯ ಎದುರಲ್ಲಿಯೇ ಬಾಲಕನಿಗೆ ಕೋಲಿನಿಂದ ಹಾಗೂ ಕೈಯಿಂದ ಹಲ್ಲೆ ನಡೆಸಿದ್ದಾನೆ. ಬಾಲಕನ ಎದೆಗೂ ಗುದ್ದಿದ್ದಾನೆ ಎಂದು ಆರೋಪಿಸಲಾಗಿದೆ. ಕೋಲಿನಿಂದ ನಡೆಸಿದ ಹಲ್ಲೆಯಿಂದ ಬಾಲಕನ ಕಾಲಿನಲ್ಲಿ ಗಾಯಗಳಾಗಿದೆ. ಹಲ್ಲೆ ನಡೆಸಿದ ಬಳಿಕ ಇದನ್ನು ಯಾರಿಗೂ ಹೇಳುವುದು ಬೇಡ ಹೇಳಿದರೆ ಸೈಕಲ್ ಕಳವುಗೈದಿರುವುದಾಗಿ ಕೇಸ್ ಮಾಡಿಸುತ್ತೇನೆ ಎಂದು ಬೆದರಿಕೆಯೊಡ್ಡಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ.…
ಬೆಂಗಳೂರು : ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಬಂಧಿತರ ಸಂಖ್ಯೆ 10 ಕ್ಕೆ ಏರಿಕೆಯಾಗಿದೆ. ಚಂದನ್ ಬಲ್ಲಾಳ್ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ ಮಂಜುಳಾ ಎಂಬಾಕೆಯನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಭ್ರೂಣ ಹತ್ಯೆ ಪ್ರಕರಣ ಬಯಲಾಗುತ್ತಿದ್ದಂತೆ ಈಕೆ ಕೆಲಸ ಬಿಟ್ಟಿದ್ದಳು, ತನಿಖೆ ನಡೆಸಿದ ಪೊಲೀಸರು ಮಂಜುಳಾರನ್ನು ಲಾಕ್ ಮಾಡಿದ್ದಾರೆ. ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ಸರ್ಕಾರ ವಹಿಸಿದೆ. ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆ ಪೋಲೀಸರು ಭ್ರೂಣ ಹತ್ಯೆ ಪ್ರಕರಣವನ್ನು ಪತ್ತೆ ಮಾಡಿದ್ದು, ಇಬ್ಬರು ವೈದ್ಯರು ಸೇರಿ 9 ಮಂದಿಯನ್ನು ಬಂಧಿಸಿದ್ದರು. ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಪ್ರಕರಣದಲ್ಲಿ ಇಲಾಖಾ ತನಿಖೆಯನ್ನು ಬಾಕಿ ಇರಿಸಿ ಇಬ್ಬರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿತ್ತು. 900 ಹೆಣ್ಣುಭ್ರೂಣ ಹತ್ಯೆ ಮಾಡಿದ್ದ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಇದಲ್ಲದೇ ಬೆಂಗಳೂರಿನಲ್ಲಿ ಹಸುಗೂಸುಗಳನ್ನು ಮಾರಾಟ ಮಾಡುತ್ತಿದ್ದ ಗ್ಯಾಂಗ್ ಪತ್ತೆಯಾಗಿದ್ದು, ತಮಿಳುನಾಡು ಮೂಲದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲ: ಉಳ್ಳಾಲ ನಗರಸಭೆ ಕಸ ಸಂಗ್ರಹ ವಾಹನವೊಂದರ ಬಾಗಿಲು ತೆರೆಯಲು ಸಾಧ್ಯವಿಲ್ಲದ ಸ್ಥಿತಿ ತಲುಪಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಸ ಸಂಗ್ರಹ ವಾಹನದ ಬಾಗಿಲು ತೆರೆಯಾಲಾಗದ ಪರಿಸ್ಥಿತಿ ತಲುಪಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಚಾಲಕ ಅತ್ಯಂತ ಸಾಹಸ ಪಟ್ಟು ವಾಹನದೊಳಗೆ ಹೊಗುವ ದೃಶ್ಯ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇನ್ನು ಅಪಾಯಕಾರಿ ಸ್ಥಿತಿಯಲ್ಲಿ ವಾಹನವಿದ್ದು ಅದೇ ವಾಹನದಲ್ಲಿ ಕಸ ಸಂಗ್ರಹಕ್ಕೆ ಕಾರ್ಮಿಕರು ತೆರಳುತ್ತಾರೆ. ಈ ರೀತಿಯ ಅಪಾಯಕಾರಿ ವಾಹನಕ್ಕೆ ಅಫಘಾತವಾದರೆ ಯಾರು ಹೊಣೆ, ಕಾರ್ಮಿಕರ ಪ್ರಾಣಕ್ಕೆ ಬೆಲೆ ಇಲ್ಲವೇ..? ಅಧಿಕಾರಿಗಳು, ಶಾಸಕ ಯು.ಟಿ ಖಾದರ್ ಕೂಡಲೇ ಎಚ್ಚೆತ್ತುಕೊಳ್ಳಬೇಕು ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಬಗ್ಗೆ ಉಳ್ಳಾಲ ನಗರಸಭೆಯ ಪ್ರಭಾರ ಪೌರಾಯುಕ್ತೆ ವಾಣಿ ವಿ ಆಳ್ವ ಪ್ರತಿಕ್ರಿಯೆ ನೀಡಿದ್ದು, ಈ ವಾಹನ ಏಳು ವರ್ಷ ಹಳೆಯದ್ದಾಗಿದ್ದು, ದುರಸ್ಥಿ ಮಾಡಲು ಅಸಾಧ್ಯವಾಗಿದೆ. ಹೊಸ ಆಟೋ ಟಿಪ್ಪರ್ ವಾಹನ ಖರೀದಿಗೆ ಟೆಂಡರ್ ಪ್ರಕ್ರಿಯೆ ಆರಂಭಿಸಲಾಗಿದೆ. ಈ ಬಗ್ಗೆ ಶಾಸಕ ಖಾದರ್ ಗಮನಕ್ಕೂ ತರಲಾಗಿದೆ…
ಸುಳ್ಯ : ಮದ್ಯಪಾನ ಮಾಡಿ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಸರಕಾರಿ ವಾಹನ ಚಲಾಯಿಸಿದ ಪ್ರಕರಣದ ಆರೋಪಿ ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್ನನ್ನು ಅಮಾನತುಗೊಳಿಸಿ ಇಲಾಖೆ ಆದೇಶ ಹೊರಡಿಸಿದೆ. ನವೀನ್ ಕುಮಾರ್ ಇತ್ತೀಚೆಗೆ ರಾತ್ರಿ ಅರಂಬೂರು ಬಳಿ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಸರಕಾರಿ ಇಲಾಖೆಯ ನಾಮಫಲಕವಿರುವ ವಾಹನವನ್ನು ಅಪಾಯಕಾರಿಯಾಗಿ ಚಲಾಯಿಸಿದ್ದನೆಂದು ಆರೋಪಿಸಲಾಗಿದೆ. ಅಡ್ಡಾದಿಡ್ಡಿಯಾಗಿ ವಾಹನ ಚಲಾಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಾಹನವನ್ನು ಬೆನ್ನಟ್ಟಿ ಅಡ್ಡಗಟ್ಟಿ ವಿಚಾರಿಸಿದ್ದರು. ಈ ಸಂದರ್ಭ ತಾನು ಸುಳ್ಯ ಎಪಿಎಂಸಿ ಕಾರ್ಯದರ್ಶಿ, ನನ್ನದು ತಪ್ಪಾಯಿತು ಎಂದು ಕ್ಷಮೆ ಯಾಚಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಎಪಿಎಂಸಿ ಕಾರ್ಯದರ್ಶಿಯವರನ್ನು ಅಮಾನತುಗೊಳಿಸಿ ಆದೇಶ ಮಾಡಲಾಗಿದೆ. ಬೆಳ್ತಂಗಡಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಅವರಿಗೆ ಸುಳ್ಯ ಎಪಿಎಂಸಿ ಪ್ರಭಾರ ವಹಿಸಲಾಗಿದೆ.
ಮಂಗಳೂರು: ಜಗತ್ತಿನ ಒಳಿತು ಬಯಸುವ ದೇಶ ಭಾರತ. ತಿಳಿವಳಿಕೆ, ಶಕ್ತಿ, ಸಾಮರ್ಥ್ಯ, ವಿಜ್ಞಾನ ಸಹಿತ ಎಲ್ಲ ಕ್ಷೇತ್ರಗಳಲ್ಲಿ ಉಳಿದ ಎಲ್ಲ ದೇಶಗಳಿಗಿಂತ ಭಾರತ ಮುಂದಿದೆ. ಜಗತ್ತು ಇಂದು ಭಾರತವನ್ನು ನಾಯಕ ಎಂದು ಒಪ್ಪಿಕೊಳ್ಳುತ್ತಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು. ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆ ವತಿಯಿಂದ ಶಕ್ತಿ ಕಾಲೇಜಿನ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಗುರುವಾರ ‘ಶಕ್ತಿ- ಸನಾತನ ಸಂಪದ’ ಉಪನ್ಯಾಸ ಸರಣಿ ಕಾರ್ಯಕ್ರಮ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಜಗತ್ತಿಗೆ ಮಾರ್ಗದರ್ಶನ ನೀಡಿದ ದೇಶ ಭಾರತ. ನಮ್ಮ ಸನಾತನ ಪರಂಪರೆಯ ಆದರ್ಶ ಚಿಂತನೆಗಳನ್ನು ಭಾರತ ಎಲ್ಲರಿಗೂ ತಿಳಿಹೇಳಿದೆ. ಜಗತ್ತಿನ ಯಾವುದೇ ದೇಶಕ್ಕೆ ತೆರಳಿದರೂ ಅಲ್ಲಿ ಭಾರತೀಯತೆಯ, ಹಿಂದುತ್ವದ ಕುರುಹು ಇದೆ. ತಾಯಂದಿರು ದೇಶಕ್ಕಾಗಿ ಹೋರಾಟ ಮಾಡಿದ ದೇಶ ಇದ್ದರೆ ಅದು ಭಾರತ ಮಾತ್ರ. ವಿಜ್ಞಾನ, ಖಗೋಳ ಜ್ಞಾನ, ಜ್ಯೋತಿಷ್ಯದಲ್ಲಿ ಭಾರತ ಪ್ರಾಚೀನ ಕಾಲದಲ್ಲೇ ಪರಿಣಿತಿ ಹೊಂದಿತ್ತು. ಮೆಕಾಲೆ ಶಿಕ್ಷಣ ಭಾರತೀಯರನ್ನು…
ಬೆಂಗಳೂರು : ಇಂದು ಬೆಳ್ಳಂಬೆಳಿಗ್ಗೆ ಸಿಲಿಕಾನ್ ಸಿಟಿಯಲ್ಲಿ 15 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆಯ ಇ-ಮೇಲ್ ವೊಂದು ಬಂದಿದೆ. ಇದರಿಂದ ಶಾಲಾ ಆಡಳಿತ ಮಂಡಳಿ,ಮಕ್ಕಳು ಪೋಷಕರು ಆತಂಕಗೊಂಡ ಘಟನೆಯೂ ನಡೆದಿದೆ. ಈ ವಿಷಯ ಕಾಡ್ಗಿಚ್ಚಿನಂತೆ ಹರಡುತ್ತಿದ್ದಂತೆ ಎಲ್ಲಿಂದ ಮೇಲ್ ಬಂದಿದೆ ಎಂದು ಪರಿಶೀಲಿಸಿದಾಗ ನಿಜಕ್ಕೂ ಶಾಕ್ ಆಗಿದೆ. ಹೌದು ಬಾಂಬ್ ಬೆದರಿಕೆ ಬರುತ್ತಿದ್ದಂತೆ ಮಕ್ಕಳನ್ನು ಮನೆಗೆ ಕಳುಹಿಸಿ ಶಾಲೆ ರಜೆ ಘೋಷಣೆ ಮಾಡಿ ಪೊಲೀಸರು ಶಾಲೆಗಳಿಗೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಇ-ಮೇಲ್ ಬೆದರಿಕೆ ಮುಜಾಹಿದ್ದಿನ್ ಹೆಸರಲ್ಲಿ ಬಂದಿದೆ. ‘ಎಲ್ಲರೂ ಇಸ್ಲಾಂಗೆ ಮತಾಂತರಗೊಳ್ಳಲು ತಯಾರಿಗಿರಿ. ಇಲ್ಲ ಎಲ್ಲರೂ ಸಾಯಲು ಸಿದ್ಧರಾಗಿರಿ. ನಿಮ್ಮನ್ನು ಹಾಗೂ ನಿಮ್ಮ ಮಕ್ಕಳನ್ನು ಸಾಯಿಸುತ್ತೇವೆ. ನೀವೆಲ್ಲರೂ ಕೂಡ ಅಲ್ಲಾಹುವಿನ ವಿರೋಧಿಗಳು. ನೀವೆಲ್ಲರೂ ಸಾಯಲು ಸಿದ್ಧರಾಗಿರಿ ‘ಎಂದು ಇಮೇಲ್ನಲ್ಲಿ ಬರೆಯಲಾಗಿದೆ. ಆದ್ರೆ, ಮುಜಾಹಿದ್ದಿನ್ ಯಾರು? ಎಲ್ಲಿಂದ ಈ ಇ-ಮೇಲ್ ಬಂದಿದೆ ಎನ್ನುವ ಬಗ್ಗೆ ಮಾಹಿತಿ ಸಿಕ್ಕಿಲ್ಲ, ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಹಿಂದೂ-ಮುಸ್ಲಿಂ ಗಲಾಟೆಗಳ ಮಧ್ಯೆ ಈ ರೀತಿ…
ಹಾಸನ: ಹಾಸನದ ಬಿಟ್ಟಗೌಡನಹಳ್ಳಿ ಬಳಿ ನಡೆದಿದ್ದ ಶಾಲಾ ಶಿಕ್ಷಕಿ ಕಿಡ್ನಾಪ್ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಅಪಹರಣಕಾರರನ್ನು ಬಂಧಿಸಿದ್ದಾರೆ. ದಕ್ಷಿಣ ಕನ್ನಡದ ನೆಲ್ಯಾಡಿ ಬಳಿ ಅಪಹರಣಕಾರರನ್ನು ಪತ್ತೆ ಹಚ್ಚಿದ ಹಾಸನ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು, ಕಿಡ್ನಾಪ್ ಗೊಳಗಾದ ಶಾಲಾ ಶಿಕ್ಷಕಿಯನ್ನು ಹಾಸನಕ್ಕೆ ಕರೆದೊಯ್ದಿದ್ದಾರೆ. ಪ್ರಕರಣದ ಹಿನ್ನಲೆ: ನ.30 ರಂದು ಬೆಳಿಗ್ಗೆ ಶಾಲೆಗೆ ತೆರಳುತ್ತಿದ್ದ ಶಿಕ್ಷಕಿಯನ್ನು ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ ಸಿನಿಮೀಯ ರೀತಿಯಲ್ಲಿ ತಂಡವೊಂದು ಇನ್ನೋವಾ ಕಾರಿನಲಿ ಅಪಹರಿಸಿತ್ತು. ಆದರೆ ಇದಕ್ಕೂ ಮುಂಚೆ ಅಂದರೆ 15 ದಿನಗಳ ಹಿಂದೆ ಶಿಕ್ಷಕಿಯನ್ನು ಮದುವೆ ಮಾಡಿಕೊಳ್ಳುವ ಪ್ರಸ್ತಾಪದೊಂದಿಗೆ ಮನೆಗೆ, ಅವರ ಸಂಬಂಧಿ ರಾಮು ಮತ್ತು ಪೋಷಕರು ಬಂದಿದ್ದರು. ಆದರೆ, ಈ ಮದುವೆ ಪ್ರಸ್ತಾಪಕ್ಕೆ ಶಿಕ್ಷಕಿ ಅರ್ಪಿತಾ ಹಾಗೂ ಪೋಷಕರು ಒಪ್ಪಿರಲಿಲ್ಲ.ಮದುವೆ ಒಪ್ಪದ ಹಿನ್ನೆಲೆಯಲ್ಲಿ ಶಿಕ್ಷಕಿಯನ್ನು ಸಂಬಂಧಿ ರಾಮು ಎಂಬಾತ ಅಪಹರಿಸಿರುವ ಆರೋಪ ಕೇಳಿಬಂದಿತ್ತು. ಶಿಕ್ಷಕಿತಾಯಿಯೂ ಈ ಬಗ್ಗೆ ಆರೋಪ ಮಾಡಿದ್ದರು. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಹಾಸನ ಎಸ್ಪಿ ಮೊಹಮ್ಮದ್ ಸುಜೀತಾ ಭೇಟಿ ನೀಡಿ…
ಸುರತ್ಕಲ್: ಸುರತ್ಕಲ್ ಟೋಲ್ ಗೇಟ್ ನಲ್ಲಿ ಟೋಲ್ ಸಂಗ್ರಹ ಸ್ಥಗಿತಗೊಂಡು ಒಂದು ವರ್ಷವಾಗಿದ್ದು, ಇದೀಗ ಟೋಲ್ ಗೇಟ್ ನಲ್ಲಿದ್ದ ಹಳೆಯ ಬೂತ್ ಗಳನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿ ಇಂದು ತೆರವುಗೊಳಿಸಿದೆ. ಸುರತ್ಕಲ್ ಟೋಲ್ ಗೇಟ್ ಸ್ಥಗಿತಗೊಂಡು ಒಂದು ವರ್ಷ ಪೂರ್ಣಗೊಂಡಿದ್ದು, ಈ ನಡುವೆ ಹಳೆ ಟೋಲ್ ಗೇಟ್ ನ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿ ಕಾಂಕ್ರೀಟಿಕರಣಗೊಂಡಿಸಿತ್ತು, ಇದು ಮತ್ತೆ ಟೋಲ್ ಸಂಗ್ರಹ ಪ್ರಾರಂಭವಾಗುವ ಸಾಧ್ಯತೆ ಇತ್ತು ಎಂಬ ವದಂತಿ ಸಾರ್ವಜನಿಕರಲ್ಲಿ ಇತ್ತು, ಆದರೆ ಇದೀಗ ಆತಂಕಕ್ಕೆ ಕಾರಣವಾಗಿದ್ದ ಸುರತ್ಕಲ್ ನಿರುಪಯುಕ್ತ ಟೋಲ್ ಗೇಟ್ ನ ಕೆಲವು ಟೋಲ್ ಸಂಗ್ರಹ ಬೂತ್ ಗಳನ್ನು ಹೆದ್ದಾರಿ ಪ್ರಾಧಿಕಾರ ಇಂದು ತೆರವುಗೊಳಿಸಿದೆ. ನಾಳೆ ಡಿಸೆಂಬರ್ 1 ರಂದು ಸುರತ್ಕಲ್ ಟೋಲ್ ಸಂಗ್ರಹ ರದ್ದು ಗೊಂಡು ಹೋರಾಟ ಗೆಲುವು ಸಾಧಿಸಿದ ದಿನವಾಗಿದ್ದು, ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಗೆಲುವಿನ ಸಂಭ್ರಮಾಚರಣೆ ಹಾಗೂ ಅದೇ ಸಂದರ್ಭ ನಿರುಪಯುಕ್ತ ಟೋಲ್ ಗೇಟ್ ರಚನೆ ತೆರವುಗೊಳಿಸಲಾಗುತ್ತಿದೆ. ಸಂಭ್ರಮಾಚರಣೆಯ ಮುನ್ನಾ ದಿನ…
ವಿವಾಹಿತ ಮಹಿಳೆಯೊಬ್ಬರು ದಿಢೀರ್ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಚಿಬಿದ್ರೆ ಎಂಬಲ್ಲಿ ನಡೆದಿದೆ. ಚಿಬಿದ್ರೆ ಗ್ರಾಮದ ಅನ್ನಾರು ನಿವಾಸಿ ಚಂದ್ರಕಲಾ (31) ಹೃದಯಾಘಾತದಿಂದ ನಿಧನರಾದರು. ಮೃತರು ಗಂಡ, ಅತ್ತೆ, ತಂದೆ, ತಾಯಿ, ಅಕ್ಕ ಮತ್ತು ಇಬ್ಬರು ಸಹೋದರನ್ನು ಅಗಲಿದ್ದಾರೆ. ಚಂದ್ರಕಲಾರವರು ಹಲವು ವರ್ಷಗಳಿಂದ ಹೃದಯಕ್ಕೆ ಸಂಬಂಧ ಪಟ್ಟ ಅನಾರೋಗ್ಯದಿಂದ ಬಳಲುತ್ತಿದ್ದರು. ಅನಾರೋಗ್ಯದ ಹಿನ್ನೆಲೆ ಆಕೆ ನೆರಿಯ ಗ್ರಾಮದ ಬಾಂದಡ್ಕದಲ್ಲಿ ತಾಯಿ ಮನೆಯಲ್ಲಿ ವಾಸವಾಗಿದ್ದರು. ನ.29ರಂದು ಸಂಜೆ ಸುಮಾರು 7 ಗಂಟೆಗೆ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಆಸ್ಫತ್ರೆಗೆ ಸಾಗಿಸಲಾಯಿತು. ಆಸ್ಪತ್ರೆ ತಲುಪುವಷ್ಟರಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ










