Author: main-admin

ಬೊಳ್ಳಿ ಮೂವೀಸ್ ಹಾಗೂ ಅವಿಕಾ ಪ್ರೊಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ,ಸಂಭಾಷಣೆ, ಸಾಹಿತ್ಯ ಬರೆದು, ಅರ್ಜುನ್ ಕಾಪಿಕಾಡ್ ನಿರ್ದೇಶನದ ಚೊಚ್ಚಲ ಸಿನಿಮಾ ರಾಪಟ ಡಿ.1 ರಂದು ಅದ್ದೂರಿಯಾಗಿಕರಾಳಿಯಾದ್ಯಂತ ತೆರೆಕಾಣಲಿದೆ. ತುಳುನಾಡಿನ ಹಾಸ್ಯ ದಿಗ್ಗಜರು ಚಿತ್ರದಲ್ಲಿ ನಟಿಸಿದ್ದು, ತಾಂತ್ರಿಕ ವಿಭಾಗದಲ್ಲೂ ಅನುಭವಿ ತಂಡ ಕೆಲಸ ಮಾಡಿದೆ. ಸಂಪೂರ್ಣಹಾಸ್ಯ ಮನರಂಜನೆಯ ರಾಪಟ ಸಿನಿಮಾದಲ್ಲಿ ಉತ್ತಮ ಕತೆ ಇದೆ. ಅರ್ಜುನ್ ಕಾಪಿಕಾಡ್ ನಿರ್ದೇಶನದ ಸಿನಿಮಾದಲ್ಲಿ ಖ್ಯಾತಕಲಾವಿದರು ಅಭಿನಯಿಸಿದ್ದಾರೆ. ಅನೂಪ್‌ ಸಾಗರ್‌ ನಾಯಕ ನಟನಾಗಿ ಹಾಗೂ ನಿರೀಕ್ಷೆ ಶೆಟ್ಟಿ ನಾಯಕಿಯ ಪಾತ್ರದಲ್ಲಿಕಾಣಿಸಿಕೊಂಡಿದ್ದಾರೆ. ತುಳು ಚಿತ್ರ ರಂಗದ ದಿಗ್ಗಜರಾದ ದೇವದಾಸ್ ಕಾಪಿಕಾಡ್, ಅರವಿಂದ ಬೋಳಾರ್‌, ಭೋಜರಾಜ್ವಾಮಂಜೂರು, ಸಾಯಿ ಕೃಷ್ಣ ಕುಡ್ಲ, ದೀಪಕ್ ರೈ ಪಾಣಾಜೆ, ರೂಪ ವರ್ಕಾಡಿ ಪ್ರಕಾಶ್ ತೂಮಿನಾಡು, ವಿಶಾರವಿರಾಮ ಕುಂಜ ಮುಂತಾದವರು ನಟಿಸಿದ್ದು, ಸಹ ನಿರ್ದೇಶಕರಾಗಿ ಶನಿಲ್ ಗುರು, ಸಿನಿಮಾಟೋಗ್ರಾಫರ್ ರಾಗಿಸಚಿನ್’ ಎಸ್.ಶೆಟ್ಟಿ, ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಸಂದೀಪ್ ಶೆಟ್ಟಿ, ಎಡಿಟರ್‌ ಯಶ್ವಿನ್.ಕೆ. ಶೆಟ್ಟಿಗಾರ್,ಸಂಗೀತ ಪ್ರಸಾದ್‌.ಕೆ. ಶೆಟ್ಟಿ,ನಿರ್ಮಾಪಕರಾಗಿ ಸಂತೋಷ್ ಸುವರ್ಣ, ಸೂರ್ಯಕಾಂತ್…

Read More

ಮಂಗಳೂರು: ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ಬೆಂಗಳೂರು-ಮಂಗಳೂರು ನಡುವೆ ನ. 30ರಿಂದ ಡಿ. 8ರ ವರೆಗೆ ವಿಮಾನ ಹಾರಾಟದ ಸಮಯವನ್ನು ಬದಲಾಯಿಸಿದೆ. ಐಎಕ್ಸ್ 782 ವಿಮಾನವು ಬೆಂಗಳೂರಿನಿಂದ ಬೆಳಗ್ಗೆ 9.40ಕ್ಕೆ ಆಗಮಿಸಲಿದ್ದು, ಬೆಳಗ್ಗೆ 10.10ಕ್ಕೆ ವಿಮಾನ 678 ಆಗಿ ಬೆಂಗಳೂರಿಗೆ ಹೊರಡಲಿದೆ. ಕಣ್ಣೂರು-ಬೆಂಗಳೂರು-ಮಂಗಳೂರು- ಬೆಂಗಳೂರು- ತಿರುವನಂತಪುರ ವಲಯದಲ್ಲಿ ಕಾರ್ಯನಿರ್ವಹಿಸುವ ವಿಮಾನ ಐಎಕ್ಸ್ 1795 ಬೆಂಗಳೂರಿನಿಂದ ರಾತ್ರಿ 7.20ಕ್ಕೆ ಬಂದು 7.50ಕ್ಕೆ ವಿಮಾನ ಐಎಕ್ಸ್ 792 ಆಗಿ ಬೆಂಗಳೂರಿಗೆ ಹೊರಡ ಲಿದೆ (ಪ್ರಸ್ತುತ ಸಂಜೆ 7.35 ಮತ್ತು ರಾತ್ರಿ 8.15ಕ್ಕೆ ನಿರ್ಗಮನ). ಬೆಂಗಳೂರಿನಿಂದ ವಾರಾಣಸಿಗೆ ಹೊರಟು ಮಂಗಳೂರಿಗೆ ತೆರಳುವ ಮಾರ್ಗದಲ್ಲಿ ವಿಳಂಬವಾದ ಕಾರಣ ವಿಮಾನ ಯಾನ ಸಂಸ್ಥೆ ಸಮಯವನ್ನು (ಐಎಕ್ಸ್782 ಮತ್ತು ಐಎಕ್ಸ್ 678) ಬದಲಾಯಿಸಿದೆ.

Read More

ಮದುವೆ ಆಗೋದಕ್ಕೆ ಒಪ್ಪದಂತ ಶಾಲಾ ಶಿಕ್ಷಕಿಯನ್ನು ತನ್ನ ಸಂಬಂಧಿಯೇ ಸಿನಿಮೀಯ ರೀತಿಯಲ್ಲಿ ಅಪಹರಿಸಿರುವಂತ ಘಟನೆ ಹಾಸನ ನಗರದ ಹೊರ ವಲಯದಲ್ಲಿ ನಡೆದಿದೆ. ಹಾಸನ ನಗರದ ಹೊರವಲಯದ ಬಿಟ್ಟಗೌಡನಹಳ್ಳಿಯಲ್ಲಿ ಶಾಲಾ ಶಿಕ್ಷಕಿಯಾಗಿ ಅರ್ಪಿತಾ ಎಂಬುವರು ಕಾರ್ಯ ನಿರ್ವಹಿಸುತ್ತಿದ್ದರು. ಇಂತಹ ಅವರನ್ನು ಮದುವೆ ಆಗುವಂತೆ ಅವರ ಸಂಬಂಧಿ ರಾಮು ಒತ್ತಾಯಿಸುತ್ತಿದ್ದರು ಎನ್ನಲಾಗಿದೆ. ಅರ್ಪಿತಾ ಮಾತ್ರ ತನ್ನ ಸಂಬಂಧಿ ರಾಮುವನ್ನು ಮದುವೆಯಾಗೋದಕ್ಕೆ ಒಪ್ಪಿರಲಿಲ್ಲ. ಇದೇ ಕಾರಣಕ್ಕೆ ಇಂದು ಸಿನಿಮಾ ಸ್ಟೈಲಲ್ಲಿ ಶಾಲಾ ಶಿಕ್ಷಕಿ ಅರ್ಪಿತಾಳನ್ನು ಅಪಹರಿಸಿಕೊಂಡು ಹೋಗಲಾಗಿದೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಪೊಲೀಸರಿಗೂ ಅರ್ಪಿತಾ ಸಂಬಂಧಿಕರು ದೂರು ನೀಡಿದ್ದಾರೆ. ಅರ್ಪಿತಾಳನ್ನು ಸಂಬಂಧಿ ರಾಮು ಅಪಹರಿಸಿರೋದಾಗಿ ಶಂಕೆ ವ್ಯಕ್ತ ಪಡಿಸಿಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

Read More

ಮಂಗಳೂರು: ವರ್ಷದ ಹಿಂದೆ ಮಂಗಳೂರಿನ ಕಂಕನಾಡಿಯ ನಾಗುರಿಯಲ್ಲಿ ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ವಿಶೇಷ ಕೋರ್ಟ್ ಗೆ ಆರೋಪ ಪಟ್ಟಿಯನ್ನು ಸಲ್ಲಿಸಿದೆ. ಅದರಲ್ಲಿ ಇದೊಂದು ಐಸಿಸ್ ಪ್ರೇರಿತ ದಾಳಿ ಎಂಬುದಾಗಿ ಹೇಳಲಾಗಿದೆ. ಮಂಗಳೂರಿನ ಕದ್ರಿ ದೇವಸ್ಥಾನವೇ ಆರೋಪಿಗಳ ಟಾರ್ಗೆಟ್ ಆಗಿತ್ತು. ಷರಿಯತ್ ಕಾನೂನಿಗೆ ಪ್ರಚಾರ ನೀಡುವ ಉದ್ದೇಶ ಆರೋಪಿಗಳಿಗೆ ಇತ್ತು. ದಾಳಿ ಬಳಿಕ ಐಸಿಸ್ ಸೇರುವ ಉದ್ದೇಶ ಬಂಧಿತರಿಗಿತ್ತು ಎಂದು ತನಿಖಾಧಿಕಾರಿಗಳು ಹೇಳಿಕೊಂಡಿದ್ದಾರೆ. ನ.19, 2022ರಂದು ನಗರದಲ್ಲಿ ಕುಕ್ಕರ್ ಬಾಂಬ್ ಸ್ಪೋಟಗೊಂಡು ಇಡೀ ರಾಜ್ಯವನ್ನೇ ಬೆಚ್ಚಿ ಬೀಳುವಂತೆ ಮಾಡಿತ್ತು. ಮಂಗಳೂರಿನಲ್ಲಿ 2020ರಲ್ಲಿ ಕಂಡು ಬಂದ ಉಗ್ರ ಗೋಡೆ ಬರಹ ಪ್ರಕರಣದ ಹಾಗೂ ಶಿವಮೊಗ್ಗ ಟ್ರಯಲ್ ಬಾಂಬ್ ಪ್ರಕರಣದಲ್ಲಿ ಆರೋಪಿಯಾಗಿದ್ದ ಮಹಮ್ಮದ್ ಶಾರೀಕ್ ತಂದ ಕುಕ್ಕರ್ ಬಾಂಬ್ ಆಟೋರಿಕ್ಷಾದಲ್ಲಿ ಸ್ಪೋಟಗೊಂಡು ಆಸ್ಪತ್ರೆಗೆ ದಾಖಲಾಗಿದ್ದ. ಕರ್ನಾಟಕದಲ್ಲಿ ಐಸಿಸ್ ಮಾದರಿ ಕೃತ್ಯಕ್ಕೆ ಸಂಚು ರೂಪಗೊಂಡಿದ್ದು, ಈ ಸ್ಪೋಟದಿಂದ ಬಯಲಾಗಿತ್ತು. ಈ ಘಟನೆಯಲ್ಲಿ ಆಟೋ ಚಾಲಕ ಪುರುಷೋತ್ತಮ ಕೂಡ ಗಾಯಗೊಂಡಿದ್ದರು. ಈ ತನಿಖೆ…

Read More

ಪುತ್ತೂರು : ಪುತ್ತೂರಿನ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿದ್ದ ಮಹಿಳೆಯೊಬ್ಬರಿಗೆ ಮದ್ಯ ಕುಡಿಸಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ ಆರೋಪದ ಮೇಲೆ ಓರ್ವನನ್ನು ಪುತ್ತೂರು ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೂಲತಃ ಪುತ್ತೂರು ತಾಲ್ಲೂಕಿನ ಆರ್ಯಾಪು ನಿವಾಸಿಯಾಗಿದ್ದು,ಪ್ರಸ್ತುತ ನಗರದ ಹೊರವಲಯದ ಬನ್ನೂರು ಗ್ರಾಮದಲ್ಲಿ ವಾಸ್ತವ್ಯವಿರುವ ಸಂಶುದ್ದೀನ್ ಆಸ್ಗರ್ ಆಲಿ(23) ಎಂದು ಗುರುತಿಸಲಾಗಿದೆ. ಆರೋಪಿ ಆರ್ಯಾಪು ಗ್ರಾಮದ ಸಂಪ್ಯ ವ್ಯಾಪ್ತಿಯಲ್ಲಿ ಕೂಲಿ ಕಾರ್ಮಿಕೆಯಾಗಿ ದುಡಿಯುತ್ತಿದ್ದ ಚೆನ್ನರಾಯಪಟ್ಟಣದ ಸಂತ್ರಸ್ತೆ ಮಹಿಳೆ ಕಳೆದ ನವೆಂಬರ್ 24ರಂದು ರಾತ್ರಿ ಪುತ್ತೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿದ್ದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಆಕೆಗೆ ಸೇವಿಸಲು ಮದ್ಯ ನೀಡಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದ ಎಂಬ ಆರೋಪಿಸಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪುತ್ತೂರು ನಗರ ಪೊಲೀಸರು ಆರೋಪಿ ಸಂಶುದ್ದೀನ್ ಆಸ್ಗರ್ ಆಲಿಯನ್ನು ಮಂಗಳವಾರ ಸಂಜೆ ಪುತ್ತೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ಪತ್ತೆ ಮಾಡಿ ಬಂಧಿಸಿದ್ದಾರೆ. ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Read More

ಸುಳ್ಯ : ಸರ್ಕಾರಿ ಅಧಿಕಾರಿಯೊಬ್ಬರು ಮದ್ಯದ ನಶೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಸಾರ್ವಜನಿಕರಿಂದ ಬೈಗುಳತಿಂದ ಘಟನೆ ಸುಳ್ಯದ ಅರಂಬೂರು ರಾಷ್ಟ್ರೀಯ ಹೆದ್ದಾರಿಯಲ್ಲಿನಡೆದಿದೆ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಕಂಠಪೂರ್ತಿ ಕುಡಿದ ಮದ್ಯದ ಮತ್ತಿನಲ್ಲಿ ಸುಳ್ಯ ಅರಂಬೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ , ರಸ್ತೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಹಲವಾರು ವಾಹನಗಳಿಗೆ ಢಿಕ್ಕಿ ಆಗುವಂತಹ ಸಂಭಾವ್ಯ ದುರಂತವೊಂದು ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ತಪ್ಪಿದೆ . ರಸ್ತೆಯುದ್ದಕ್ಕೂ ವಿರುದ್ಧ ದಿಕ್ಕಿನಲ್ಲಿ , ಅಡ್ಡಾದಿಡ್ಡಿ ವಾಹನ ಚಲಾಯಿಸಿ ಅಪಘಾತ ಸಂಭವಿಸುವ ಸಾಧ್ಯತೆಯನ್ನು ಮನಗಂಡ ಕೆಲವು ವಾಹನ ಸವಾರರು ಸಾರ್ವಜನಿಕರ ಸಹಕಾರದಿಂದ ಅಡ್ಡಗಟ್ಟಿದ್ದಾರೆ . ಸರ್ಕಾರಿ ಅಧಿಕಾರಿಯ ಈ ವರ್ತನೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ .

Read More

ಬೆಂಗಳೂರು: ಹೊಸ ರೇಷನ್ ಕಾರ್ಡ್ ಗೆ ( Ration Card ) ಅರ್ಜಿ ಸಲ್ಲಿಸೋ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ಎನ್ನುವಂತೆ ಡಿ.3ರಂದು ಅರ್ಜಿ ಸಲ್ಲಿಕೆಗೆ ಆಹಾರ ಇಲಾಖೆ ಅವಕಾಶ ನೀಡಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಆಹಾರ ಇಲಾಖೆಯು, ಹೊಸ ರೇಷನ್ ಕಾರ್ಡ್ ಗೆ ಡಿಸೆಂಬರ್.3ರಂದು ರಾಜ್ಯಾಧ್ಯಂತ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ ಅಂತ ಹೇಳಿದೆ. ರೇಷನ್ ಕಾರ್ಡ್ ತಿದ್ದುಪಡಿಗಾಗಿ ನ.29ರ ಇಂದು ಹಾಗೂ ನವೆಂಬರ್.30ರ ನಾಳೆ ಎರಡು ದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಎರಡು ಗಂಟೆಗಳ ಕಾಲ ಅವಕಾಶ ನೀಡಲಾಗಿದೆ ಎಂದು ತಿಳಿಸಿದೆ. ಇನ್ನೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸೋದಕ್ಕೆ ಆಧಾರ್ ಕಾರ್ಡ್ ಗೆ ಮೊಬೈಲ್ ಸಂಖ್ಯೆ ಲಿಂಕ್ ಆಗಿರಬೇಕು. 6 ವರ್ಷದ ಒಳಗಿನ ಮಕ್ಕಳಿದ್ದರೇ ಜನನ ಪ್ರಮಾಣಪತ್ರವನ್ನು ಹೆಸರು ಸೇರ್ಪಡೆಗೆ ಬೇಕು. 6 ವರ್ಷ ಮೇಲ್ಪಟ್ಟವರಿಗೆ ಪ್ರಸಕ್ತ ಸಾಲಿನ ಜಾತಿ…

Read More

ಬಂಟ್ವಾಳ : ಒಂದೇ ದಿನ ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯಲ್ಲಿದ್ದ ಯುವಕ ಹಾಗೂ ಯುವತಿ ಕೇರಳದಲ್ಲಿ ಪತ್ತೆಯಾಗಿದ್ದು ಅವರನ್ನು ಹುಡುಕಿದ ಪೊಲೀಸರು ವಿಚಾರಣೆ ನಡೆಸಿ ಮನೆಗೆ ಕಳುಹಿಸಿದ್ದಾರೆ. ನವೆಂಬರ್ 24 ರಂದು ಶುಕ್ರವಾರ ಮುಂಜಾನೆ ಮನೆಯವರಿಗೆ ಗೊತ್ತಿಲ್ಲದಂತೆ ಪರಾರಿಯಾಗಿದ್ದ ನವಜೋಡಿಗಳು ಕೇರಳ ರಾಜ್ಯದ ಕಾಂಞಗಾಡ್ ಎಂಬಲ್ಲಿ ಪೋಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಸಜೀಪ ಮುನ್ನೂರು ಗ್ರಾಮದ ಉದ್ದೋಟ್ಟು ನಿವಾಸಿ ಅಬ್ದುಲ್ ಹಮೀದ್ ಅವರ ಮಗಳು ಆಯಿಸತ್ ರಸ್ಮಾ (18) ಹಾಗೂ ಹೈದರ್ ಎಂಬವರ ಮಗ ಮಹಮ್ಮದ್ ಸಿನಾನ್ ( 23) ಕಾಣೆಯಾಗಿರುವ ಜೋಡಿಯಾಗಿದ್ದರು. ಆಸ್ಮಾ ಅವರು ದೇರಳಕಟ್ಟೆ ನಡುಪದವು ಪಿ.ಎ.ಕಾಲೇಜಿನಲ್ಲಿ ಫಾರ್ಮಸಿ ವಿಭಾಗದ ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿದ್ದಳು. ಸಿನಾನ್ ಕೆಲ ವರ್ಷಗಳಿಂದ ಕತಾರ್ ವಿದೇಶದಲ್ಲಿ ಉದ್ಯೋಗ ಮಾಡಿಕೊಂಡಿದ್ದ .ಆದರೆ ಇತ್ತೀಚಿಗೆ ಊರಿಗೆ ಮರಳಿದ್ದು ಕೂಲಿ ಕೆಲಸ ಮಾಡಿಕೊಂಡಿದ್ದ ಎಂದು ಅವರು ದೂರಿನಲ್ಲಿ ತಿಳಿಸಿದ್ದರು. ಜೊತೆಗೆ ಇವರು ಇಬ್ಬರು ಒಂದೇ ದಿನ ಕಾಣೆಯಾಗಿರುವ ಬಗ್ಗೆ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು,ಹುಡುಕಿಕೊಡುವಂತೆ ದೂರಿನಲ್ಲಿ ತಿಳಿಸಲಾಗಿತ್ತು. ಆದರೆ ಎರಡು ಮನೆಯವರಿಗೆ…

Read More

ಡಿಜಿಟಲ್‌ ವಂಚನೆ ತಡೆಗೆ ಕೇಂದ್ರ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಡಿಜಿಟಲ್ ವಂಚನೆಯನ್ನು ತಡೆಗಟ್ಟುವ ಸಲುವಾಗಿ ಸೈಬರ್ ಅಪರಾಧ ಅಥವಾ ಆರ್ಥಿಕ ವಂಚನೆಯಲ್ಲಿ ಭಾಗಿಯಾಗಿರುವ 70 ಲಕ್ಷ ಮೊಬೈಲ್ ಸಂಖ್ಯೆಗಳನ್ನು ಸರ್ಕಾರ ಅಮಾನತುಗೊಳಿಸಿದೆ. ಕೇಂದ್ರ ಸರ್ಕಾರವು ದೇಶಾದ್ಯಂತ 70 ಲಕ್ಷ ಮೊಬೈಲ್ ಸಂಖ್ಯೆಗಳನ್ನು ಅಮಾನತುಗೊಳಿಸಿದ್ದು, ಈ ಮೂಲಕ ಸುಮಾರು 900 ಕೋಟಿ ರೂ.ಗಳ ವಂಚನೆಯನ್ನು ತಡೆಯಲಾಗಿದೆ. ಹೆಚ್ಚುತ್ತಿರುವ ಸೈಬರ್ ವಂಚನೆಯನ್ನು ಗಮನದಲ್ಲಿಟ್ಟುಕೊಂಡು, ಕಣ್ಗಾವಲು ಹೆಚ್ಚಿಸುವುದು ಸೇರಿದಂತೆ ಮುಂಬರುವ ಸಮಯದಲ್ಲಿ ಇತರ ಅನೇಕ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ಸರ್ಕಾರ ಸಿದ್ಧತೆ ನಡೆಸುತ್ತಿದೆ. ಇದಕ್ಕಾಗಿ, ಸೈಬರ್ ವಂಚನೆಗಳನ್ನು ತಡೆಗಟ್ಟಲು ವಿವಿಧ ಏಜೆನ್ಸಿಗಳ ನಡುವೆ ಉತ್ತಮ ಸಮನ್ವಯಕ್ಕೆ ವಿಶೇಷ ಒತ್ತು ನೀಡಲಾಗುವುದು. ಈ ನಿಟ್ಟಿನಲ್ಲಿ ವ್ಯವಸ್ಥೆಗಳು ಮತ್ತು ಕಾರ್ಯವಿಧಾನಗಳನ್ನು ಬಲಪಡಿಸಲು ಬ್ಯಾಂಕುಗಳನ್ನು ಕೇಳಲಾಗಿದೆ ಎಂದು ಹಣಕಾಸು ಸೇವೆಗಳ ಕಾರ್ಯದರ್ಶಿ ವಿವೇಕ್ ಜೋಶಿ ಮಂಗಳವಾರ ಹಣಕಾಸು ಸೈಬರ್ ಭದ್ರತೆ ಮತ್ತು ಹೆಚ್ಚುತ್ತಿರುವ ಡಿಜಿಟಲ್ ಪಾವತಿ ವಂಚನೆಗಳಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆಯ ನಂತರ ಹೇಳಿದರು. ಡಿಜಿಟಲ್ ಗುಪ್ತಚರ…

Read More

ಬೆಂಗಳೂರು: ರಾಜ್ಯದಲ್ಲಿ ಇನ್ನು ಮುಂದೆ ಜಿಲ್ಲೆಗೆ ಒಬ್ಬರು ಪೊಲೀಸ್ ಅಧೀಕ್ಷಕರು, ಇಬ್ಬರು ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಕಾರ್ಯನಿರ್ವಹಿಸಲಿದ್ದಾರೆ. 21 ಜಿಲ್ಲಾ ಘಟಕಗಳಿಗೆ ಎರಡು ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಹುದ್ದೆಗಳನ್ನು ಸೃಜಿಸಿ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲಾ ಪೊಲೀಸ್ ಅಧೀಕ್ಷಕರ ನಿರ್ದೇಶನದ ಅನ್ವಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಕಾರ್ಯನಿರ್ವಹಿಸಲಿದ್ದಾರೆ. ಅವರಿಗೆ ಕಾನೂನು ಸುವ್ಯವಸ್ಥೆ ಮತ್ತು ಅಪರಾಧ ವಿಭಾಗದ ಕರ್ತವ್ಯಗಳನ್ನು ಹಂಚಿಕೆ ಮಾಡಲಾಗಿದೆ. 21 ಜಿಲ್ಲಾ ಪೊಲೀಸ್ ಘಟಕಗಳಲ್ಲಿ ತಲಾ ಎರಡು ಎಎಸ್ಪಿ ಹುದ್ದೆಗಳನ್ನು ಸೃಜಿಸಲಾಗಿದೆ. ಹೆಚ್ಚುವರಿ ಪೊಲೀಸ್ ಅಧೀಕ್ಷಕರು 1 ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರು 2 ಎಂದು ಹುದ್ದೆಗಳನ್ನು ವಿಂಗಡಿಸಲಾಗಿದ್ದು, ಅವರಿಗೆ ಕರ್ತವ್ಯ ಹಂಚಿಕೆ ಮಾಡಲಾಗಿದೆ. ಎಎಸ್ಪಿ 1 ಜಿಲ್ಲೆಯಲ್ಲಿ ಕಾನೂನು ವ್ಯವಸ್ಥೆ, ಬಂದೋಬಸ್ತ್, ಸಂಚಾರಕ್ಕೆ ಸಂಬಂಧಿಸಿದ ಎಲ್ಲಾ ಕರ್ತವ್ಯ ಸೇರಿ ಎಸ್.ಪಿ. ನಿರ್ದೇಶನದಂತೆ ಕಾರ್ಯನಿರ್ವಹಿಸುವುದು. ಎಎಸ್ಪಿ 2 ಜಿಲ್ಲೆಯಲ್ಲಿ ಅಪರಾಧ, ನ್ಯಾಯಾಲಯಗಳ ವಿಚಾರಣೆ ನಿರ್ವಹಣೆ, ಡಿಎಆರ್ ಕೇಂದ್ರ ಕಚೇರಿ, ಜಿಲ್ಲಾ ಪೊಲೀಸ್ ಕಚೇರಿಗೆ ಸಂಬಂಧಿಸಿದ ವಿವಿಧ ಕರ್ತವ್ಯ ನಿರ್ವಹಣೆ ಸೇರಿ ಎಸ್.ಪಿ.…

Read More