ಉತ್ತರಾಖಂಡ್ : ಕಳೆದ 17 ದಿನಗಳಿಂದ ಚಾರ್ ಧಾಮ್ ಸರ್ವ ಋತು ಹೆದ್ದಾರಿಯಲ್ಲಿರುವ ಸಿಲ್ಕ್ಯಾರಾ ಸುರಂಗ ಕುಸಿತದಲ್ಲಿ ಸಿಲುಕಿದ್ದ 41 ಕಾರ್ಮಿಕರು ಇಂದು ಸುರಕ್ಷಿತವಾಗಿ ಹೊರ ಬಂದಿದ್ದಾರೆ.ಚಾರ್ಧಾಮ್ ಸರ್ವ ಋತು ಹೆದ್ದಾರಿಯಲ್ಲಿರುವ ಸಿಲ್ಕ್ಯಾರಾ ಸುರಂಗ ಕುಸಿತದಲ್ಲಿ ಸಿಲುಕಿದ್ದ 41 ಕಾರ್ಮಿಕರು 17 ದಿನಗಳ ನಂತರ ಸುರಕ್ಷಿತವಾಗಿ ಹೊರಬಂದಿದ್ದಾರೆ. ಆ ಮೂಲಕ ಇಡೀ ವಿಶ್ವದ ಗಮನ ಸೆಳೆದಿದ್ದ ದುರಂತವೊಂದು ಸುಖಾಂತ್ಯ ಕಂಡಿದೆ. ಸುರಂಗದಲ್ಲಿ ಸಿಲುಕಿದ್ದ ಕಾರ್ಮಿಕರನ್ನು ತೆಗೆಯಲು ಎಲ್ಲಾ ರೀತಿ ಅಂತರಾಷ್ಟ್ರೀಯ ಮಟ್ಟದ ಮೆಷಿನ್ ಗಳನ್ನು ಬಳಸಿದ್ದರು, ಕಾರ್ಮಿಕರನ್ನು ರಕ್ಷಣೆ ಮಾಡಲು ಸಾಧ್ಯವಾಗಿರಲ್ಲಿಲ್ಲ, ಕೊನೆಗೆ ಸುರಂಗಕ್ಕೆ ಅಳವಡಿಸಿದ ಕೊಳವೆ ಮೂಲಕ ಹೊರಕ್ಕೆ ಬರುತ್ತಿರುವ ಕಾರ್ಮಿಕ ನಿಷೇಧಿ ಇಲಿ ಬಿಲ ಮೈನಿಂಗ್ ತಂತ್ರಜ್ಞಾನ ಬಳಸಿ ಕೊರೆದ ರಂಧ್ರಕ್ಕೆ ಎರಡು ಅಡಿ ವ್ಯಾಸದ ಕೊಳವೆ ಅಳವಡಿಸಲಾಗಿದೆ. ಅದರೊಳಗೆ ಸ್ಟ್ರೆಚರ್ ಬಳಸಿ ಕಾರ್ಮಿಕರನ್ನು ಒಬ್ಬೊಬ್ಬರನ್ನಾಗಿ ಹೊರಕ್ಕೆ ಕರೆತರಲಾಯಿತು ಸುರಕ್ಷಿತವಾಗಿ ಹೊರ ಬಂದ ಕಾರ್ಮಿಕರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಲಾಯಿತು. ಅವರನ್ನು ಕರೆದೊಯ್ಯಲು ಆಂಬುಲೆನ್ಸ್ಗಳು ಕಾದು ನಿಂತಿದ್ದವು. ಸುರಂಗದೊಳಗೆ ಹೋದ…
Author: main-admin
ಮಂಗಳೂರು: ಪ್ಯಾನ್ ಇಂಡಿಯಾ ರಕ್ಷಣಾ ಮತ್ತು ಪುನರ್ವಸತಿ ಆಂದೋಲನದ ಅಂಗವಾಗಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿರ್ದೇಶನದಂತೆ, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಪಾಯಕಾರಿ ಮತ್ತು ಅಪಾಯಕಾರಿ ಅಲ್ಲದ ಉದ್ದಿಮೆಗಳಲ್ಲಿ ದುಡಿಯುತ್ತಿರುವ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರನ್ನು ಕೆಲಸದಿಂದ ಬಿಡುಗಡೆಗೊಳಿಸಿ ಪುನರ್ವಸತಿಗೊಳಿಸುವ ನಿಟ್ಟಿನಲ್ಲಿ ನವೆಂಬರ್ 20ರಿಂದ ಡಿಸೆಂಬರ್ 10ರವರೆಗೆ ಹೊಟೇಲ್, ಗ್ಯಾರೇಜ್, ಅಪಾರ್ಟ್ಮೆಂಟ್ಸ್, ಧಕ್ಕೆ ಪ್ರದೇಶಗಳು, ಕಟ್ಟಡ ನಿರ್ಮಾಣ ಸ್ಥಳಗಳು ಹಾಗೂ ಇನ್ನಿತರ ಸಂಸ್ಥೆಗಳಿಗೆ ಅನೀರಿಕ್ಷಿತ ದಾಳಿಯನ್ನು ಹಮ್ಮಿಕೊಳ್ಳಲಾಗಿದೆ. ಬಾಲಕಾರ್ಮಿಕ ಪದ್ಧತಿ ಒಂದು ಸಾಮಾಜಿಕ ಅನಿಷ್ಟ ಪಿಡುಗು ಆಗಿದ್ದು, ಬಾಲ್ಯಾವಸ್ಥೆ, ಕಿಶೋರಾವಸ್ಥೆ ಕಾರ್ಮಿಕ (ನಿಷೇಧ& ನಿಯಂತ್ರಣ) ಕಾಯ್ದೆ-1986ರನ್ವಯ 14ವರ್ಷದೊಳಗಿನ ಬಾಲ್ಯಾವಸ್ಥೆ ಕಾರ್ಮಿಕರನ್ನು ಯಾವುದೇ ಸಂಸ್ಥೆಯಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.15 ವರ್ಷದಿಂದ 18 ವರ್ಷದೊಳಗಿನ ಕಿಶೋರಾವಸ್ಥೆಯ ಕಾರ್ಮಿಕರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ದುಡಿಸಿಕೊಳ್ಳುವುದನ್ನು ನಿಷೇಧಿಸಲಾಗಿದೆ. ಅಲ್ಲದೇ 15 ವರ್ಷದಿಂದ 18ವರ್ಷದೊಳಗಿನ ಮಕ್ಕಳು ಅಪಾಯಕಾರಿ ಅಲ್ಲದ ಸಂಸ್ಥೆಯಲ್ಲಿ ದುಡಿಯುತ್ತಿರುವುದನ್ನು ನಿಯಂತ್ರಿಸಲಾಗಿರುತ್ತದೆ.ಕಾಯ್ದೆಯನ್ನು ಉಲ್ಲಂಘಿಸಿದ ಮಾಲೀಕರಿಗೆ ರೂ.50,000 ದವರೆಗೆ ದಂಡ ಹಾಗೂ 2 ವರ್ಷದವರೆಗೆ ಜೈಲು ಶಿಕ್ಷೆಯನ್ನು ವಿಧಿಸಲಾಗುವುದು.…
4ನೇ ತರಗತಿಯ ವಿದ್ಯಾರ್ಥಿಗೆ ಆತನ ಮೂವರು ಸಹಪಾಠಿಗಳೇ ಕೈವಾರದಿಂದ 108 ಬಾರಿ ಚುಚ್ಚಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಇಂದೋರ್ನ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ. ನವೆಂಬರ್ 24ರಂದು ಏರೋಡ್ರೋಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಖಾಸಗಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳ ನಡುವೆ ಜಗಳ ಏರ್ಪಟ್ಟಿತ್ತು. ಈ ವೇಳೆ ಒಬ್ಬ ವಿದ್ಯಾರ್ಥಿಯ ಮೇಲೆ ಇತರ ಮೂವರು ಸಹಪಾಠಿಗಳು ಕೈವಾರದಿಂದ 108 ಬಾರಿ ಹಲ್ಲೆ ನಡೆಸಿರುವುದಾಗಿ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಪಲ್ಲವಿ ಪೋರ್ವಾಲ್ ತಿಳಿಸಿದ್ದಾರೆ. ಈ ಪ್ರಕರಣ ಆಘಾತಕಾರಿಯಾಗಿದೆ. ಇಷ್ಟು ಚಿಕ್ಕ ವಯಸ್ಸಿನ ಮಕ್ಕಳು ಹಿಂಸಾತ್ಮಕ ವರ್ತನೆ ತೋರಿರುವುದರ ಹಿಂದಿನ ಕಾರಣವನ್ನು ಕಂಡುಹಿಡಿಯಲು ನಾವು ಪೊಲೀಸರಿಂದ ತನಿಖಾ ವರದಿಯನ್ನು ಕೇಳಿದ್ದೇವೆ ಎಂದು ಅವರು ಹೇಳಿದರು. ಘಟನೆಗೆ ಸಂಬಂಧಿಸಿದಂತೆ ಸಿಡಬ್ಲ್ಯುಸಿ ಮಕ್ಕಳು ಮತ್ತು ಅವರ ಕುಟುಂಬಗಳಿಗೆ ಸಲಹೆ ನೀಡಲಿದೆ. ಮಕ್ಕಳು ಹಿಂಸಾತ್ಮಕ ದೃಶ್ಯಗಳನ್ನು ಒಳಗೊಂಡಿರುವ ವೀಡಿಯೋ ಗೇಮ್ಗಳನ್ನು ಆಡುತ್ತಾರೆಯೇ ಎಂಬುದನ್ನು ಕಂಡುಹಿಡಿಯಲಾಗುತ್ತಿದೆ ಎಂದು ಪೋರ್ವಾಲ್ ಹೇಳಿದರುನಡೆದ ಘಟನೆ ಬಳಿಕ ನನ್ನ ಮಗನಿಗೆ ಭೀತಿ ಉಂಟಾಗಿದೆ. ನನ್ನ ಮಗ ಮನೆಗೆ…
ಮಂಗಳೂರು: ನಗರದ ಅತ್ತಾವರದ ಫ್ಲ್ಯಾಟ್ ಒಂದರಲ್ಲಿ ನಡೆದ ಆಕಸ್ಮಿಕ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಸಹೈನ್ ಮುಸಾಬ್ (57) ಮೃತಪಟ್ಟ ಮಹಿಳೆ.ಬೆಳ್ಳಂಬೆಳಗ್ಗೆ ಶಾರ್ಟ್ ಸರ್ಕ್ಯೂಟ್ನಿಂದ ಈ ಅವಘಡ ಸಂಭವಿಸಿದ್ದು, ಮನೆಯಲ್ಲಿದ್ದ ಇತರರು ಹೊರ ಬಂದಿದ್ದರು. ಆದರೆ ಮುಸಾಬ್ ಶೌಚಾಲಯದೊಳಗಿದ್ದ ಕಾರಣ ಹೊರಬರಲಾಗದೇ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಯಿತು. ಅದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ 7 ಡಿವೈಎಸ್ಪಿ ಹಾಗೂ 14 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಸಿಐಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಂತ ಡಿವೈಎಸ್ಪಿ ಗಿರೀಶ್ ಎಸ್ ಬಿ ಅವರನ್ನು ಸುಬ್ರಹ್ಮಣ್ಯಪುರ ಉಪ ವಿಭಾಗ, ಬೆಂಗಳೂರು ಇಲ್ಲಿಗೆ ವರ್ಗಾವಣೆ ಮಾಡಲಾಗಿದೆ. ಕರ್ನಾಟಕ ಲೋಕಾಯುಕ್ತ ಡಿವೈಎಸ್ಪಿಯಾಗಿದ್ದಂತ ಜೋಗಿನ ಗೋಪಾಲ ದೊಡ್ಡಕರಿಯಪ್ಪ ಅವರನ್ನು ಬೆಂಗಳೂರಿನ ಸಿಸಿಬಿಗೆ ವರ್ಗಾವಣೆ ಮಾಡಿ ಆದೇಶಿಸಿದೆ. ಸಿಟಿಎಸ್ಬಿಯಲ್ಲಿದ್ದಂತ ಧರ್ಮೇಂದ್ರ ಹೆಚ್ ಎನ್ ಅವರನ್ನು ಬೆಂಗಳೂರಿನ ಸಿಸಿಬಿಗೆ, ರಾಜ್ಯ ಗುಪ್ತವಾರ್ತೆಯ ಡಿವೈಎಸ್ಪಿ ಸತ್ಯನಾರಾಯಣ ಸಿಂಗ್ ಎಸ್ ಬಿ ಅವರನ್ನು ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ, ಸಣ್ಣ ತಮ್ಮಯ್ಯ ಅವರನ್ನು ಹುಬ್ಬಳ್ಳಿ-ಧಾರವಾಡ ನಗರ ಸಿಸಿಬಿ ಡಿವೈಎಸ್ವಿಯಾಗಿ ವರ್ಗಾವಣೆ ಮಾಡಲಾಗಿದೆ. ಬೆಂಗಳೂರಿನ ಸಿಸಿಬಿಯಲ್ಲಿದ್ದಂತ ಡಿವೈಎಸ್ಪಿ ಪುಟ್ಟಸ್ವಾಮಿಗೌಡ.ಟಿಆರ್ ಅವರನ್ನು ಆಂತರಿಕ ಭದ್ರತಾ ವಿಭಾಗ, ಸುಬ್ರಹ್ಮಣ್ಯಪುರ ಉಪ ವಿಭಾಗದ ಡಿವೈಎಸ್ಪಿ ಪವನ್ ಎನ್ ಅವರನ್ನು ಸಿಐಡಿಗೆ ವರ್ಗಾವಣೆ ಮಾಡಿ…
ಕಾರ್ಕಳ : ಬೈಕ್ ಮತ್ತು ಖಾಸಗಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳದ ಬೈಲೂರಿನಲ್ಲಿ ಸಂಭವಿಸಿದೆ. ಪಳ್ಳಿ ಕೋಕೈಕಲ್ಲು ನಿವಾಸಿ ನಾಗರಾಜ್ (20) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಯರ್ಲಪಾಡಿ – ಗೋವಿಂದೂರು ಕಡೆಯಿಂದ ಬರುತ್ತಿದ್ದ ಬಸ್ಗೆ ಬೈಲೂರು ಹೈಸ್ಕೂಲ್ ಸಾಗುವ ತಿರುವಿನಲ್ಲಿ ಕಾರ್ಕಳದೆಡೆಗೆ ಸಾಗುವ ಬೈಕ್ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಸವಾರ ಮೃತಪಟ್ಟಿದ್ದಾರೆ. ಸಹ ಸವಾರನ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯರು ಆ್ಯಂಬುಲೆನ್ಸ್ ಮೂಲಕ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಘಟನಾ ಸ್ಥಳಕ್ಕೆ ಕಾರ್ಕಳ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಣಿಪಾಲ: ಆಸ್ಪತ್ರೆ ಮುಂಬಾಗದಲ್ಲಿ ನಿಲ್ಲಿಸಿದ್ದ ಬೈಕ್ ನ್ನು ಹಾಡಹಗಲೇ ಕಳ್ಳತನ ಮಾಡಿ ಕಳ್ಳ ಪರಾರಿಯಾದ ಘಟನೆ ಮಣಿಪಾಲದ ಹೃದಯ ಭಾಗದಲ್ಲಿ ನಡೆದಿದೆ. ಮಣಿಪಾಲ ಆಸ್ಪತ್ರೆಯ ಮುಂಭಾಗದಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ನ್ನು ಕಳ್ಳ ಕದಿಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೊಬೈಲ್ ನಲ್ಲಿ ಮಾತನಾಡುವಂತೆ ನಟಿಸಿ ಬೈಕ್ ಮೇಲೆ ಕುಳಿತು ಅನಾಯಾಸವಾಗಿ ಹ್ಯಾಂಡ್ ಲಾಕ್ ಮುರಿದು ತನ್ನದೇ ಬೈಕ್ ಎಂಬಂತೆ ಚಲಾಯಿಸಿಕೊಂಡು ಕಳ್ಳ ಅಲ್ಲಿಂದ ಪರಾರಿಯಾಗಿದ್ದಾನೆ. KA20J2276 ನೇ ಹೀರೋ ಹೋಂಡಾ ಸ್ಪ್ಲೆಂಡರ್ ಬೈಕ್ ಕಳ್ಳ ಎಗರಿಸಿದ್ದು ,ಘಟನೆಯ ಸಂಪೂರ್ಣ ದೃಶ್ಯ ಮಾಲ್ನ ಸಿಸಿಟಿವಿಯಲ್ಲಿ ಸೆರೆಯಾಗಿದೆ.
‘ಕಾಂತಾರ 2’ ಸಿನಿಮಾ ಕನ್ನಡ ಮಾತ್ರವಲ್ಲದೆ, ಹಿಂದಿ, ತೆಲುಗು, ತಮಿಳು, ಮಲಯಾಳಂ, ಬೆಂಗಾಲಿ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ಮೂಡಿಬರುತ್ತಿದೆ. ಜನವರಿಯಲ್ಲಿ ಚಿತ್ರಕ್ಕೆ ಶೂಟಿಂಗ್ ಆರಂಭ ಆಗಲಿದೆ ಎನ್ನಲಾಗುತ್ತಿದೆ. ‘ಕಾಂತಾರ 2 ಚಿತ್ರ ಬರಲಿದೆ ಎಂದಾಗಿನಿಂದಲೂ ಅಭಿಮಾನಿಗಳ ವಲಯದಲ್ಲಿ ಒಂದು ಕುತೂಹಲ ಇತ್ತು. https://youtu.be/Frp0zC4643U ಈ ಕುತೂಹಲವನ್ನು ದ್ವಿಗುಣ ಮಾಡುವ ರೀತಿಯಲ್ಲಿ ಈ ಚಿತ್ರದ ಪೋಸ್ಟ್ ಮೂಡಿಬಂದಿದೆ. ಇಂದು (ನವೆಂಬರ್ 27) ಚಿತ್ರತಂಡ ಉಡುಪಿ ಜಿಲ್ಲೆಯ, ಕುಂದಾಪುರ ತಾಲೂಕಿನ ಆನೆಗುಡ್ಡೆ ದೇವಸ್ಥಾನದಲ್ಲಿ ‘ಕಾಂತಾರ ಚಾಪ್ಟರ್ 1’ (Kantara Chapter 1) ಚಿತ್ರದ ಮುಹೂರ್ತ ನೆರವೇರಿಸುವುದರ ಜೊತೆಗೆ ಮೊದಲ ಪೋಸ್ಟರ್ ಅನಾವರಣ ಮಾಡಿದೆ. ಇದನ್ನು ನೋಡಿ ಅಭಿಮಾನಿಗಳು ಸಖತ್ ಖುಷಿಪಟ್ಟಿದ್ದಾರೆ. ಜನವರಿಯಲ್ಲಿ ಚಿತ್ರಕ್ಕೆ ಶೂಟಿಂಗ್ ಆರಂಭ ಆಗಲಿದೆ ಎನ್ನಲಾಗುತ್ತಿದೆ. ‘ಕಾಂತಾರ’ ಚಿತ್ರ ಮೊದಲು ಕನ್ನಡದಲ್ಲಿ ರಿಲೀಸ್ ಆಯಿತು. ಆ ಬಳಿಕ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗೆ ಡಬ್ ಆಗಿ ಬಿಡುಗಡೆ ಕಂಡಿತು. ಈ ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗೆಲುವು ಕಂಡಿತು. ಈಗ ‘ಕಾಂತಾರ…
ಬೆಂಗಳೂರು: ಸುಳ್ಳು ಕೇಸ್ ದಾಖಲು, ಭ್ರಷ್ಟಾಚಾರ, ಸುಲಿಗೆ, ಅನುಚಿತ ವರ್ತನೆ ಸೇರಿ ಪೊಲೀಸರ ವಿರುದ್ಧ ಕೇಳಿ ಬರುತ್ತಿರೋ ಆರೋಪಗಳ ನಿಯಂತ್ರಣ ಹಾಗೂ ಕರ್ತವ್ಯದಲ್ಲಿ ಪಾರದರ್ಶಕತೆ ತರೋ ಉದ್ದೇಶದಿಂದ, ಬಾಡಿವೋರ್ನ್ ಕ್ಯಾಮರಾ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಇದಷ್ಟೇ ಅಲ್ಲದೇ ಯಾವುದೇ ಪ್ರಕರಣದಲ್ಲಿ ವ್ಯಕ್ತಿಯನ್ನು ಬಂಧಿಸಲು ಹೋಗುವ ಪೊಲೀಸರು ಇನ್ಮುಂದೆ ಬಾಡಿವೋರ್ನ್ ಕ್ಯಾಮೆರಾ ಧರಿಸಿರಬೇಕು. ಬಂಧನದ ಎಲ್ಲಾ ಪ್ರಕ್ರಿಯೆಯೂ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿರಬೇಕು ಎಂಬುದಾಗಿ ಡಿಜಿ-ಐಜಿ ಆದೇಶಿಸಿದ್ದಾರೆ. ಬೆಂಗಳೂರಿನಲ್ಲಿ ಸಂಚಾರ ಹಾಗೂ ಹೊಯ್ಸಳ ಪೊಲೀಸರಿಗಷ್ಟೇ ಸೀಮಿತವಾಗಿದ್ದ ಬಾಡಿವೋರ್ನ್ ಕ್ಯಾಮರಾ ಧರಿಸುವ ಯೋಜನೆಯನ್ನು ರಾಜ್ಯದ ಎಲ್ಲಾ ಪೊಲೀಸರಿಗೂ ವಿಸ್ತರಿಸಿ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಅಲೋಕ್ ಮೋಹನ್ ಆದೇಶ ಮಾಡಿದ್ದಾರೆ. ಬಂಧನದ ವೇಳೆ ಕ್ಯಾಮರಾಗಳನ್ನು ಧರಿಸುವ ವ್ಯವಸ್ಥೆ ಜಾರಿಗೊಳಿಸುವಂತೆ ಜೂನ್.10, 2022ರಂದು ನೀಡಿದ್ದ ಹೈಕೋರ್ಟ್ ಆದೇಶವನ್ನು ಪೊಲೀಸ್ ಇಲಾಖೆ ಈಗ ಅನುಷ್ಠಾನಕ್ಕೆ ತರುತ್ತಿದೆ. ಇದಕ್ಕಾಗಿ ಮಾರ್ಗಸೂಚಿಗಳನ್ನು ಕೂಡ ಹೊರಡಿಸಲಾಗಿದ್ದು, ವ್ಯಕ್ತಿಗಳ ಮುಖಗಳು ಹಾಗೂ ಸ್ಥಳದ ಘಟನಾವಳಿಗಳು ಸರಿಯಾಗಿ ಚಿತ್ರೀಕರಣವಾಗುವಂತೆ ಎಡಭುಜಕ್ಕೆ ಬಾಡಿವೋರ್ನ್ ಕ್ಯಾಮರಾ ಧರಿಸಿರಬೇಕು. ಯಾರ ಬಗ್ಗೆ ರೆಕಾರ್ಡ್…
ಬೆಳ್ತಂಗಡಿ : ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಡಿಸೆಂಬರ್ 8 ರಿಂದ 12 ರವರೆಗೆ ಕಾರ್ತಿಕಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನಡೆಯಲಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ. ಡಿಸೆಂಬರ್ 11ರಂದು ಸೋಮವಾರ ಸಂಜೆ 5 ಗಂಟೆಗೆ ಸರ್ವಧರ್ಮ ಸಮ್ಮೇಳನದ 91ನೇ ಅಧಿವೇಶನವನ್ನು ವಿದ್ವಾಂಸ ಗುರುರಾಜ ಕರಜಗಿ ಉದ್ಘಾಟಿಸುವರು. ತುಮಕೂರು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು. ಸುಪ್ರೀಂ ಕೋರ್ಟ್ ವಕೀಲ ಎಂ.ಆರ್.ವೆಂಕಟೇಶ್, ಬೆಂಗಳೂರಿನ ವಿಭು ಅಕಾಡೆಮಿ ಮುಖ್ಯಸ್ಥ ವಿಜಯಪುರದ ಮಹಮ್ಮದ್ ಗೌಸ್ ಹವಾಲ್ದಾರ ಧಾರ್ಮಿಕ ಉಪನ್ಯಾಸ ನೀಡುವರು. ರಾತ್ರಿ 8.30ರಿಂದ ಬೆಂಗಳೂರಿನ ಅನುರಾಧಾ ವಿಕ್ರಾಂತ್, ಬಳಗದವರಿಂದ ನೃತ್ಯ ಪ್ರದರ್ಶನವಿದೆ. ಡಿಸೆಂಬರ್ 12ರಂದು ಸಂಜೆ 5ಗಂಟೆಗೆ ಸಾಹಿತ್ಯ ಸಮ್ಮೇಳನದ 91ನೇ ಅಧಿವೇಶನವನ್ನು ಬೆಂಗಳೂರಿನ ಇಸ್ರೊದ ಅಧ್ಯಕ್ಷ ಎಸ್.ಸೋಮನಾಥ್ ಉದ್ಘಾಟಿಸುವರು. ಬೆಂಗಳೂರಿನ ಗಮಕಿ ಎ.ವಿ.ಪ್ರಸನ್ನ ಅಧ್ಯಕ್ಷತೆ ವಹಿಸುವರು. ಹೊನ್ನಾವರದ ನಿವೃತ್ತ ಉಪನ್ಯಾಸಕ ಶ್ರೀಪಾದ ಶೆಟ್ಟಿ, ಬೆಂಗಳೂರಿನ ರಂಗಕರ್ಮಿ ಪ್ರಕಾಶ್ ಬೆಳವಾಡಿ, ಬಂಟ್ವಾಳದ ಅಜಕ್ಕಳ ಗಿರೀಶ್ ಭಟ್ ಉಪನ್ಯಾಸ ನೀಡುವರು. ರಾತ್ರಿ 8.30ರಿಂದ ಬೆಂಗಳೂರಿನ ಜತಿನ್…










