ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ. ಒಂದೇ ವೇಳೆ ಬರೆಸಿದ್ದರೇ ಅದು ಕಾನೂನು ಉಲ್ಲಂಘಿಸಿದಂತೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಸ್ಪಷ್ಟ ಸೂಚನೆ ನೀಡಿದ್ದಾರೆ.ಶ್ರವಣ ಬೆಳಗೊಳದ ಶಾಸಕ ಬಾಲಕೃಷ್ಣ ಸಿಎನ್ ಅವರ ಪ್ರಶ್ನೆಗೆ ಸಚಿವ ಡಾ. ಜಿ ಪರಮೇಶ್ವರ್ ಉತ್ತರ ನೀಡಿದ್ದಾರೆ.ರಾಜ್ಯದ ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರು ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸಿಕೊಂಡು ಸಂಚಾರ ಮಾಡಲು ಕಾನೂನಿನಲ್ಲಿ ಅವಕಾಶವಿದೆಯೇ? ಎಂದು ಪ್ರಶ್ನಿಸಿದ್ದಾರೆ. ರಾಜ್ಯದ ಪೊಲೀಸ್ ಇಲಾಖೆಯ ಅಧಿಕಾರಿಗಳು ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸಿಕೊಂಡು ಸಂಚಾರ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಉತ್ತರಿಸಿದ್ದಾರೆ.ಇದೇ ವೇಳೆ ಅವರು ಹಾಗಿದ್ದಲ್ಲಿ, ಸ್ವಂತ ವಾಹನಗಳ ಮೇಲೆ ಪೊಲೀಸ್ ಎಂದು ಬರೆಸಿಕೊಂಡು ಕೆಲ ಪೊಲೀಸ್ ನೌಕರರು ಮತ್ತು ಅಧಿಕಾರಿಗಳು ಕಾನೂನಿನ ಉಲ್ಲಂಘನೆ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ? ಬಂದಿದ್ದಲ್ಲಿ, ಇವರ ವಿರುದ್ಧ ಸರ್ಕಾರವು ತೆಗೆದುಕೊಂಡಿರುವ ಕ್ರಮಗೇಳನು? ಎಂದು ಕೇಳಿದ್ದಾರೆ.…
Author: main-admin
ವಾಹನ ಸವಾರರೇ ಗಮನಿಸಿ ಯಾವ ಸಂಚಾರ ನಿಯಮ ಉಲ್ಲಂಘನೆ ಮಾಡಿದರೆ ಯಾವುದಕ್ಕೆ ಎಷ್ಟು ದಂಡ ಬೀಳಲಿದೆ ಎಂಬುದರ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ. 01. ಹೆಲ್ಮಟ್ ಧರಿಸದೇ ವಾಹನ ಚಾಲನೆ ಐ.ಎಂ.ವಿ ಕಾಯ್ದೆ ಸೆಕ್ಷನ್ 194(ಡಿ) 500 ರೂ. ದಂಡ. 02. ಹಿಂಬದಿ ಸವಾರ ಹೆಲೈಟ್ ಧರಿಸದೇ ವಾಹನ ಸವಾರಿ ಕೆ.ಎಂ.ವಿ ನಿಯಮ 230(1) 500 ರೂ. ದಂಡ 03. ಸೀಟ್ ಬೆಲ್ಟ್ ಧರಿಸದೇ ವಾಹನ ಚಾಲನೆ ಐ.ಎಂ.ವಿ ಕಾಯ್ದೆ ಸೆಕ್ಷನ್ 194(ಬಿ) 500 ರೂ. ದಂಡ 04. ವಾಹನ ಚಾಲನೆ ವೇಳೆ ಮೊಬೈಲ್ ಬಳಕೆ ಐ.ಎಂ.ವಿ ಕಾಯ್ದೆ ಸೆಕ್ಷನ್ 184 (ಸಿ) 1,000 ರೂ. ದಂಡ 05. ಅಜಾಗರೂಕತೆ/ಅಪಾಯಕಾರಿ ಯಾಗಿ ವಾಹನ ಚಾಲನೆ. ಐ.ಎಂ.ವಿ ಕಾಯ್ದೆ ಸೆಕ್ಷನ್ 184 1,000 ರೂ. ದಂಡ 06. ತುರ್ತು ಸೇವಾ ವಾಹನಗಳಿಗೆ ದಾರಿಕೊಡಲು ವಿಫಲವಾದರೆ ಐ.ಎಂ.ವಿ ಕಾಯ್ದೆ ಸೆಕ್ಷನ್ 194(ಇ) 1,000 ರೂ. ದಂಡ 07. ನಿಷೇದಿತ/ನಿರ್ಬಂಧಿತ ವಲಯಗಳಲ್ಲಿ ಹಾರ್ನ್ ಬಳಕೆ ಐ.ಎಂ.ವಿ…
ಪುತ್ತೂರು: ಇನ್ಸ್ಟಾಗ್ರಾಂನಲ್ಲಿ ಬಂದ ಜಾಹೀರಾತಿಗೆ ಟ್ರೇಡಿಂಗ್ ಇನ್ವೆಸ್ಟ್ಮೆಂಟ್ ಮಾಡಿದ ಬನ್ನೂರಿನ ಯುವತಿ 4.90 ಲಕ್ಷ ರೂ. ಕಳೆದುಕೊಂಡಿರುವ ಬಗ್ಗೆ ಮಂಗಳೂರು ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿ ಬೆಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಮಾ. 1ರಂದು ಇನ್ಸ್ಟಾಗ್ರಾಂ ಖಾತೆಯಿಂದ ಇನ್ವೆಸ್ಟ್ ಟಾಸ್ಕ್ ಮಾಡಲು ಯುಪಿಐಐಡಿಗೆ 10 ಸಾವಿರ ರೂ. ಕಳುಹಿಸುವಂತೆ ತಿಳಿಸಿದ್ದು, ಹೀಗಾಗಿ ಆಕೆ ಹಣವನ್ನು ಫೋನ್ ಪೇ ಮಾಡಿದ್ದಾರೆ. ಇನ್ವೆಸ್ಟ್ ಟ್ರೇಡ್ ಬಗ್ಗೆ ಇನ್ನು ಹೆಚ್ಚಿನ ಮಾಹಿತಿಗಾಗಿ ಪಡೆಯಲು ನೀಡಿದ್ದ ಮೊಬೈಲ್ ನಂಬರಿನ ವಾಟ್ಸಪ್ ಮುಖಾಂತರ ಮೆಸೇಜ್ ಕಳಿಸಿದ್ದು, ಈ ವೇಳೆ ಯುವತಿಗೆ 10 ಸಾವಿರ ರೂ. ಹಾಕಿದರೆ 2 ಲಕ್ಷ ರೂ. ಗಳಿಸಬಹುದು ಎಂಬ ಸಂದೇಶ ಬಂದಿತ್ತು. ಇದಾದ ಅನಂತರ ಯುವತಿ ಹಂತ ಹಂತವಾಗಿ ಹಣ ವರ್ಗಾವಣೆ ಮಾಡಿದ್ದು, ಒಟ್ಟು 4,90,997 ರೂ. ಪಾವತಿ ಮಾಡಿದ್ದರು. ಆದರೆ ಯುವತಿಯ ಖಾತೆಗೆ ಹಣ ಬಾರದೆ ವಂಚನೆ ಆಗಿರುವುದು ಅರಿವಾಗಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಸಿಇಎನ್ ಅಪರಾಧ ಪೊಲೀಸು ಠಾಣಾ ಅ.ಕ್ರ. 11-2025, U/S 66(C ) 66(D) IT Act and 308, 318 (4),319(2)BNS.ಪ್ರಕರಣದಲ್ಲಿ ಆರೋಪಿ ಪತ್ತೆ ಬಗ್ಗೆ ಮಾನ್ಯ ಪೊಲೀಸ್ ಅಧೀಕ್ಷಕರು ದಕ್ಷಿಣ ಕನ್ನಡ ಜಿಲ್ಲೆ, ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ದಕ್ಷಿಣ ಕನ್ನಡ ಜಿಲ್ಲೆ ಇವರುಗಳ ನಿರ್ದೇಶನದಂತೆ ಸಿಇಎನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಮಂಜುನಾಥ ಆರ್.ಜಿ ರವರ ನೇತೃತ್ವದಲ್ಲಿ ಪಿಎಸ್ಐ ಯೂನುಸ್ ಆರ್ ಗಡ್ಡೆಕಾರ್ ಪಿಸಿ 2489 ನಾಗಪ್ಪ ಬೆನಕಟ್ಟಿ, ಇವರುಗಳ ತಂಡ ಆರೋಪಿಗಳಾದ 1)ಬೆಳಗಾವಿ ಜಿಲ್ಲೆ ರಾಮದೇವ್ ಗಲ್ಲಿಯ ಅನೂಪ್ ವಿಜಯ ಕಾರೇಕರ ವಡಗಾಂವ್, ಮತ್ತು 2)ಹುಕ್ಕೇರಿ ತಾಲೂಕಿನ ತಹಶೀಲ್ದಾರ್ ಗಲ್ಲಿ ಅವಿನಾಶ್ ವಿಠಲ ಸುತಾರ ಎಂಬವರನ್ನು ಬೆಳಗಾವಿಯಲ್ಲಿ ದಿನಾಂಕ: 10-03-2025 ರಂದು ದಸ್ತಗಿರಿ ಮಾಡಿದ್ದು, ಆರೋಪಿಗಳಿಂದ ಒಟ್ಟು 19 ಬ್ಯಾಂಕ್ ಖಾತೆಗಳು, 18 ಚೆಕ್ ಬುಕ್ಗಳು 15ಎಟಿಎಮ್ ಕಾರ್ಡ್ ಗಳು, 14 ಮೊಬೈಲ್ ಸಿಮ್ಗಗಳು ಹಾಗೂ ಒಂದು ಮೊಬೈಲ್ ನ್ನು ವಶಪಡಿಸಿಕೊಂಡಿದ್ದು,…
ಕಾರ್ಕಳ: ಕಾರ್ಕಳ ತಾಲೂಕಿನ ನೀರೆ ಗ್ರಾಮದಲ್ಲಿ ಫೆಬ್ರವರಿ 26ರಂದು ಸಂಭವಿಸಿದ ಸ್ಕೂಟರ್ ಅಪಘಾತದಲ್ಲಿ ಪಲಾಯನ ಮಾಡಿದ ಕಾರಿನ ಚಾಲಕನನ್ನು ಪೊಲೀಸರು ಉಜಿರೆಯಲ್ಲಿ ಗುರುತಿಸಿ, ವಾಹನವನ್ನು ಪತ್ತೆಹಚ್ಚಿದ್ದಾರೆ. ಈ ದುರ್ಘಟನೆಯಲ್ಲಿ ಸ್ಕೂಟರ್ ಸವಾರ ರಾಜೇಶ್ ಶೆಟ್ಟಿ (35) ಗಂಭೀರ ಗಾಯಗೊಂಡಿದ್ದರು. ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದರು. ಅಪಘಾತದ ಬಳಿಕ ಕಾರಿನ ಚಾಲಕ ಹಾಗೂ ಪ್ರಯಾಣಿಕರು ಸ್ಥಳದಿಂದ ಪರಾರಿಯಾಗಿದ್ದರು. ಪೊಲೀಸರು ಸಿ.ಸಿ.ಟಿವಿ ದೃಶ್ಯ ಹಾಗೂ ಇತರ ಸಾಕ್ಷ್ಯಾಧಾರಗಳನ್ನು ಅನ್ವೇಷಿಸಿ, ಕಾರಿನ ಪತ್ತೆ ಹಚ್ಚಿದ್ದಾರೆ. ತನಿಖೆಯ ಪ್ರಕಾರ, ಈ ಕಾರು ವಿವಾಹ ಸಮಾರಂಭಕ್ಕೆ ತೆರಳುತ್ತಿತ್ತು. ಈಗ ಪೊಲೀಸರು ಅಪಘಾತಕ್ಕೆ ಕಾರಣವಾದ ಚಾಲಕನ ಬಂಧನಕ್ಕೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪ್ರಕರಣವನ್ನು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.
ಮಂಗಳೂರು : ಭಜರಂಗದಳದ ಮಿಂಚಿನ ಕಾರ್ಯಾಚರಣೆ ನಡೆಸಿ ಅಕ್ರಮ ಗೋ ಮಾಂಸ ಸಾಗಾಟ ಮಾಡುತ್ತಿದ್ದವರನ್ನು ತಡೆದು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳೂರಿನ ಕದ್ರಿ ದೇವಸ್ಥಾನದ ದ್ವಾರದ ಬಳಿ ಇಂದು (ಮಾ.10) ಮುಂಜಾನೆ ನಡೆದಿದೆ. ಟೆಂಪೋದಲ್ಲಿ ಅಕ್ರಮ ಗೋ ಮಾಂಸ ಸಾಗಾಟ ಮಾಡುತ್ತಿರುವ ಕುರಿತು ಭಜರಂಗದಳ ಕಾರ್ಯಕರ್ತರಿಗೆ ಮಾಹಿತಿ ದೊರಕಿದ್ದು, ಅವರು ಕದ್ರಿ ದೇವಸ್ಥಾನದ ಬಳಿ ವಾಹನವನ್ನು ತಡೆದು ಪರಿಶೀಲನೆ ಮಾಡಿದಾಗ ಅದರಲ್ಲಿ ಗೋ ಮಾಂಸ ಇರುವುದು ಪತ್ತೆಯಾಗಿದೆ. ಬಳಿಕ ಗೋ ಮಾಂಸ ಪತ್ತೆಯ ಕುರಿತು ಭಜರಂಗದಳದ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ತಕ್ಷಣವೇ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ ಸಂದರ್ಭ ವಾಹನದಲ್ಲಿ ಸುಮಾರು 100 ಕೆಜಿಗೂ ಅಧಿಕ ಗೋ ಮಾಂಸ ಇರುವುದು ಪತ್ತೆಯಾಗಿದೆ. ನಂತರ ಪೊಲೀಸರು ಗೋ ಮಾಂಸ ಹಾಗೂ ವಾಹನವನ್ನು ಜಪ್ತಿ ಮಾಡಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕುರಿತು ಕದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು: ವಿ.ಕೆ ಫಿಲ್ಸ್ ತನ್ನ ಎರಡನೇ ದೊಡ್ಡ ಪ್ರಾಜೆಕ್ಟ್ “ವೈಲ್ಡ್ ಟೈಗರ್ ಸಫಾರಿ” ಚಲನಚಿತ್ರವನ್ನು ಘೋಷಿಸಿದೆ. ಈ ಸಂಸ್ಥೆಯ ಮೊದಲ ಚಿತ್ರ”ಕರಾವಳಿ” ಆಗಿದ್ದು, ಅದರಲ್ಲಿ ಶಿಥಿಲ್ ಪೂಜಾರಿ ಮುಖ್ಯ ಪಾತ್ರನಿರ್ವಹಿಸಿದ್ದರು. ಈ ಹೊಸ ಸಿನಿಮಾ ವಿನೋದ್ ಕುಮಾರ್ ಅವರಪ್ರೊಡಕ್ಷನ್ ಅಡಿಯಲ್ಲಿ ಮೂಡಿ ಬರುತ್ತಿದ್ದು, ಅವರು ಸಿನಿಮಾ ಕ್ಷೇತ್ರದ ಬಗ್ಗೆ ಅಪಾರವಾದ ಆಸಕ್ತಿಯನ್ನು ಹೊಂದಿದ್ದಾರೆ.ಶಿಥಿಲ್ ಪೂಜಾರಿ ಅವರು “ಕರಾವಳಿ” ಸಿನಿಮಾದಲ್ಲಿ ನೆಗೆಟಿವ್ ಶೇಡ್ ಪಾತ್ರ ಮಾಡಿದ್ದು, 2019ರಲ್ಲಿ Mr. MH International UAE ಹಾಗೂMr. Billava ಪ್ರಶಸ್ತಿಗಳನ್ನು ಗೆದ್ದಿದ್ದಾರೆ.ಧರ್ಮೇಶ್ ಯೆಲಂದೆ ಅವರು ಭಾರತದ ಪ್ರಸಿದ್ಧ ನೃತ್ಯಗಾರ ಹಾಗೂ ಕೊರಿಯೋಗ್ರಾಫರ್ ಆಗಿದ್ದಾರೆ.ಸುಶಾಂತ್ ಪೂಜಾರಿ “ABCD” ಮತ್ತು ಇತರೆ ಸಿನಿಮಾದಲ್ಲಿ ನಟಿಸಿದ್ದರು ಹಾಗೂ ಒಬ್ಬ ನೃತ್ಯಗಾರ.ನಿಮಿಕಾ ರತ್ನಾಕರ್ “Shake It Pushpavathi” ಗೀತೆಯಿಂದ ಖ್ಯಾತಿಯನ್ನು ಗಳಿಸಿದವರು. ಅವರು ನಟಿಯಾಗಿದ್ದು ಮಾತ್ರವಲ್ಲ,ಗಾಯಕಿ ಹಾಗೂ Miss India Super Talent ನಲ್ಲಿ ಬಾಗಿಯಾಗಿದ್ದಾರೆ.ಅಚೂತ್ ರಾವ್ ತಮ್ಮ ವಿಭಿನ್ನ ಅಭಿನಯ ಶೈಲಿಗೆ ಪ್ರಸಿದ್ಧ. ಮತ್ತು ಯಶ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ…
ಮಂಗಳೂರು : ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿದೆ. ಅದರಲ್ಲಿಯೂ ಹೆಚ್ಚಿನವರು ಕಾಲೇಜು ವಿದ್ಯಾರ್ಥಿಗಳೇ ಆಗುತ್ತಿದ್ದು, ಪೋಷಕರಲ್ಲಿ, ಸಮಾಜದಲ್ಲಿ ಈ ಕುರಿತು ಆತಂಕ ಹೆಚ್ಚುತ್ತಿದೆ. ಮಕ್ಕಳನ್ನು ಯಾವ ರೀತಿ ನೋಡಿಕೊಳ್ಳುವುದು ಎನ್ನುವುದೇ ಆತಂಕ ಸೃಷ್ಠಿಸುತ್ತದೆ. ಕೆಲ ದಿನಗಳ ಹಿಂದೆ ಬಂಟ್ವಾಳದ ದಿಗಂತ್ ಎಂಬ ವಿದ್ಯಾರ್ಥಿ ನಾಪತ್ತೆಯಾಗಿದ್ದು, ರಾಜ್ಯದ್ಯಂತ ಈ ಪ್ರಕರಣ ಸಂಚಲನ ಮೂಡಿಸಿತ್ತು. ಆದರೆ ಎರಡು ದಿನಗಳ ಹಿಂದೆ ದಿಗಂತ್ ಪತ್ತೆಯಾಗಿದ್ದಾನೆ. ಪರೀಕ್ಷೆ ಭಯದಿಂದ ಈತ ಮನೆ ಬಿಟ್ಟು ಹೋಗಿದ್ದ ಎಂಬ ವಿಚಾರದಿಂದ ಈ ಕೇಸ್ ಸುಖಾಂತ್ಯ ಕಂಡಿದೆ. ಈ ನಡುವೆ ಮಂಗಳೂರಿನ ಮತ್ತೊಬ್ಬ ಕಾಲೇಜು ವಿದ್ಯಾರ್ಥಿಯ ನಾಪತ್ತೆ ಪ್ರಕರಣ ಸದ್ದು ಮಾಡುತ್ತಿದ್ದು, ಮೂಡು ಪೆರಾದ ನಿತೇಶ್ ಬೆಲ್ಚಡ ಇನ್ನೂ ಕೂಡ ಪತ್ತೆಯಾಗಿಲ್ಲ. ಬಜಪೆ ಮೂಡು ಪೆರಾರ ಗ್ರಾಮದ ಅರ್ಕೆ ಪದವು ನಿವಾಸಿ, ನೀರುಮಾರ್ಗದ ಪ್ಯಾರಾಮೆಡಿಕಲ್ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ನಿತೇಶ್ ಬೆಲ್ಚಡ (19) ಫೆ. 13ರಂದು ನಾಪತ್ತೆಯಾಗಿದ್ದು, ಆತ ಎಲ್ಲಿಗೆ ಹೋಗಿದ್ದಾನೆ ? ಎನ್ನುವ ಸುಳಿವು ಇಲ್ಲಿಯವರೆಗೆ ಸಿಕ್ಕಿಲ್ಲ.…
ಮಂಗಳೂರು: ಮಂಗಳೂರು ವಿಶೇಷ ಆರ್ಥಿಕ ವಲಯ (ಎಂಎಸ್ಇಝಡ್)ನಿಂದ ನೆಲ್ಲಿದಡಿ ಗುತ್ತಿನ ಪ್ರಸಿದ್ಧ ಕಾಂತೇರಿ ಜುಮಾದಿ ದೈವದ ಆರಾಧನೆಗೆ ತೊಡಕುಂಟಾಗಿರುವ ವಿವಾದವನ್ನು ಸೌಹಾರ್ದಯುತವಾಗಿ ಪರಿಹರಿಸಲು ಜಿಲ್ಲಾಡಳಿತ ಮುಂದಾಗಿದ್ದು, ಸದ್ಯಕ್ಕೆ ಅಲ್ಲಿ ಯಥಾಸ್ಥಿತಿ ಕಾಪಾಡಿಕೊಳ್ಳಬೇಕೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ. ನೆಲ್ಲಿದಡಿಯಲ್ಲಿ ಈವರೆಗೂ ದೈವಾರಾಧನೆ ನಿಂತಿಲ್ಲ. ಲಿಖಿತವಾಗಿ ಅನುಮತಿ ಪಡೆಯದಿದ್ದರೆ ಅವಕಾಶ ಇಲ್ಲ ಎಂದಿದ್ದರಿಂದ ಗೊಂದಲಕ್ಕೆ ಕಾರಣವಾಗಿದೆ. ಶಾಶ್ವತ ಪರಿಹಾರ ಸಿಗುವವರೆಗೂ ಯಥಾಸ್ಥಿತಿ ಕಾಪಾಡಲು ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.ನಿನ್ನೆ ಎಂಎಸ್ಇಝಡ್ ಅಧಿಕಾರಿಗಳು ಹಾಗೂ ಕುಟುಂಬಸ್ಥರ ಸಭೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮತ್ತು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಧ್ಯಸ್ಥಿಕೆಯಲ್ಲಿ ಸಭೆ ನಡೆದು ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗಿದೆ. ಎಂಎಸ್ಇಝಡ್ ಅಧಿಕಾರಿಗಳು ಅನುಮತಿ ಇಲ್ಲ ಎಂದು ಬರೆದಿದ್ದಾರೆಯೇ ಹೊರತು ದೈವಾರಾಧನೆ ನಿಲ್ಲಿಸಬೇಕೆಂದು ಹೇಳಿಲ್ಲ. ಕಳೆದ ವರ್ಷವೂ ದೊಡ್ಡಮಟ್ಟದ ಬಂಡಿ ಉತ್ಸವ ಇಲ್ಲಿ ನಡೆದಿದೆ. ಪ್ರತ್ಯೇಕ ರಸ್ತೆ ನಿರ್ಮಾಣಕ್ಕೆ ಕಾನೂನಾತ್ಮವಾಗಿ ಸಾಧ್ಯತೆ ಬಗ್ಗೆ ಪರಿಶೀಲನೆ ಮಾಡಲು ಸೂಚಿಸಲಾಗಿದೆ ಎಂದು ಮುಲ್ಲೈ ಮುಗಿಲನ್ ಹೇಳಿದ್ದಾರೆ. ಎಂಎಸ್ಇಝಡ್…
ಕಾರ್ಕಳ: ಅನೇಕ ವರ್ಷಗಳಿಂದ ತಲೆಮರೆಸಿಕೊಂಡಿದ್ದ ನಟೋರಿಯಸ್ ದನಕಳ್ಳನನ್ನು ಬಂಧಿಸುವಲ್ಲಿ ಕಾರ್ಕಳ ನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ನಲ್ಲೂರು ಗ್ರಾಮದ ಬೋರ್ಕಟ್ಟೆ ದೊಡ್ಡಕಜೆಯ ಮೊಹಮ್ಮದ್ ಯೂನಸ್ (30) ಎಂದು ಗುರುತಿಸಲಾಗಿದೆ. ಈತನ ಮೇಲೆ ದನಕಳ್ಳತನಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರ, ಅಜೆಕಾರು, ಹೆಬ್ರಿ, ಶಿರ್ವ, ಮೂಡುಬಿದಿರೆ ಮಾತ್ರವಲ್ಲದೇ ಚಿಕ್ಕಮಗಳೂರು, ಮೂಡುಗೆರೆ, ಆಲ್ದೂರು ಠಾಣೆಗಳಲ್ಲೂ ಪ್ರಕರಣ ದಾಖಲಾಗಿದ್ದವು. ವಿವಿಧ ಠಾಣೆಗಳ ಪೊಲೀಸರಿಗೆ ಬೇಕಾಗಿದ್ದ ಈತ ಅನೇಕ ವರ್ಷಗಳಿಂದ ತಲೆಮರೆಸಿಕೊಂಡಿದ್ದನು. ಈತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದರು.