Author: main-admin

ಬಂಟ್ವಾಳ: ಹೋಟೆಲ್‌‌ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನೆತ್ರಕೆರೆ ನಿವಾಸಿ ಹರೀಶ್ ಎಂದು ಗುರುತಿಸಲಾಗಿದೆ. ಕಳ್ಳಿಗೆ ಗ್ರಾಮದ ನೆತ್ರಕೆರೆ ಹೊಟೇಲ್‌ನಲ್ಲಿ ಪರವಾನಗಿ ಇಲ್ಲದ ಮದ್ಯವನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ದಾಳಿಯ ವೇಳೆ ಹೋಟೆಲ್‌ನಲ್ಲಿ ರೂ.4 ಸಾವಿರ ಮೌಲ್ಯದ ರೂ.50. ಮುಖಬೆಲೆಯ 90 ml ನ 80 ಸ್ಯಾಚೆಟ್‌‌ಗಳು ಹಾಗೂ ಮಾರಾಟದ ಬಳಿಕ ಬಂದ ರೂ.1000 ಸಾವಿರವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Read More

ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು, ಕರಂಬಾರು, ಭಟ್ರಕೆರೆ ಸೇರಿದಂತೆ ವಿವಿಧ ಪ್ರದೇಶಗಳಿಂದ ಜಾನುವಾರುಗಳನ್ನು ಕಳ್ಳತನ ಮಾಡಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 8 ಮಂದಿ ಆರೋಪಿಗಳನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಬಜ್ಜೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಜಾನುವಾರು ಕಳ್ಳತನ ಹಾಗೂ ಮಾಂಸ ಮಾರಾಟ-ಸಾಗಾಟಕ್ಕೆ ಸಂಬOಧಿಸಿದ ಮೂರು ಪ್ರತ್ಯೇಕ ಪ್ರಕರಣಗಳ ಕುರಿತು ತನಿಖೆ ನಡೆಸಿದ ಪೊಲೀಸರು, ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಜುಲೈ ತಿಂಗಳಲ್ಲಿ ಬಜ್ಪೆ ಸಮೀಪದ ಭಟ್ರಕೆರೆ ಮಸೀದಿಯ ಬಳಿ ಸುಮಾರು 50 ಸಾವಿರ ರೂ. ಮೌಲ್ಯದ ಜೆರ್ಸಿ ದನವನ್ನು ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬAಧಿಸಿ ಆದ್ಯಪಾಡಿ ಸೈಟ್ ನಿವಾಸಿ ಮನ್ಸೂರು ಆದ್ಯಪಾಡಿ (42), ತೊಕ್ಕೊಟ್ಟು-ಪೆರ್ಮನ್ನೂರು ಗ್ರಾಮದ ಮಹಮ್ಮದ್ ಅಶ್ವದ್ (25) ಹಾಗೂ ಉಲ್ಲಾಳ ತಾಲೂಕಿನ ಕೋಟೆಪುರ ನಿವಾಸಿ ರಿಲ್ವಾನ್ ಅಹ್ಮದ್ ಅಲಿಯಾಸ್ ರಿಲ್ಲು (26) ಎಂಬವರನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಸುಮಾರು 5 ಲಕ್ಷ ರೂ. ಮೌಲ್ಯದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಡಿ.12ರಂದು ಕೆಂಜಾರು ಗ್ರಾಮದ ಕಪಿಲಾ ಗೋ ಶಾಲೆಯ ಬಳಿ…

Read More

ಉಡುಪಿ: 2026ರ ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಹೋಟೆಲ್‌, ಲಾಡ್ಜ್‌, ಹೋಂಸ್ಟೇ ಹಾಗೂ ರೆಸಾರ್ಟ್‌ ಮಾಲಕರ ಸಭೆ ಬುಧವಾರ ಬೆಳಿಗ್ಗೆ 11.30ಕ್ಕೆ ಉಡುಪಿ ಟೌನ್‌ ಹಾಲ್‌ನಲ್ಲಿ ನಡೆಯಿತು. ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಐಪಿಎಸ್ ಅವರ ಮಾರ್ಗದರ್ಶನದಲ್ಲಿ ಸಹಾಯಕ ಪೊಲೀಸ್ ಅಧೀಕ್ಷಕ ಡಾ. ಹರ್ಷ ಪ್ರಿಯಂವದ ಐಪಿಎಸ್ ಸಭೆಯಲ್ಲಿ ಭಾಗವಹಿಸಿ, ಹೊಸ ವರ್ಷಾಚರಣೆ ವೇಳೆ ಕೈಗೊಳ್ಳಬೇಕಾದ ಮುನ್ನಚ್ಚರಿಕಾ ಕ್ರಮಗಳು ಹಾಗೂ ಪಾಲಿಸಬೇಕಾದ ಕಾನೂನು ನಿಯಮಗಳ ಬಗ್ಗೆ ವಿವರಿಸಿದರು. ಮಣಿಪಾಲ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಹಾಗೂ ಪಿಎಸ್ಐ ಹರೀಶ್ ಸೇನ್ ಕೂಡ ಮಾಹಿತಿ ನೀಡಿದರು. ಸಭೆಯಲ್ಲಿ ಮಾನ್ಯ ಸುಪ್ರೀಂ ಕೋರ್ಟ್ ಆದೇಶದಂತೆ, ಹೊಸ ವರ್ಷಾಚರಣೆ ಸಂದರ್ಭದಲ್ಲಿ ರಾತ್ರಿ 10 ಗಂಟೆಯೊಳಗೆ ಧ್ವನಿವರ್ಧಕ ಬಳಕೆಯನ್ನು ಕಡ್ಡಾಯವಾಗಿ ನಿಲ್ಲಿಸಿ, ನಿಗದಿತ ಸಮಯದೊಳಗೆ ಎಲ್ಲಾ ಕಾರ್ಯಕ್ರಮಗಳನ್ನು ಮುಕ್ತಾಯಗೊಳಿಸಬೇಕೆಂದು ಸೂಚಿಸಲಾಯಿತು. ಅಬ್ಬರದ ಸಂಗೀತ, ಫೈರ್ ಕ್ಯಾಂಪ್‌ಗಳಿಂದ ನೆರೆಹೊರೆಯವರ ಶಾಂತಿಗೆ ಧಕ್ಕೆಯಾಗಬಾರದೆಂದು ಎಚ್ಚರಿಕೆ ನೀಡಲಾಯಿತು. ಹೋಂಸ್ಟೇ ಹಾಗೂ ರೆಸಾರ್ಟ್‌ಗಳಲ್ಲಿ ವಾಸಿಸುವ ದೇಶೀಯ ಹಾಗೂ ವಿದೇಶಿ ಪ್ರವಾಸಿಗರ ಸುರಕ್ಷತೆಗೆ…

Read More

ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 53/2025, ಕಲಂ 306 ಬಿ.ಎನ್.ಎಸ್ ಅಡಿಯಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರೇರಣೆ ಪ್ರಕರಣದಲ್ಲಿ ಆರೋಪಿಗೆ ನ್ಯಾಯಾಲಯವು ಶಿಕ್ಷೆ ವಿಧಿಸಿದೆ.ಸುಳ್ಯ ತಾಲೂಕಿನ ಐವರ್ನಾಡು ನಿವಾಸಿ ಶಿವಪ್ರಸಾದ್ (41) ಎಂಬಾತನ ವಿರುದ್ಧ ದಾಖಲಾಗಿದ್ದ ಪ್ರಕರಣದ ವಿಚಾರಣೆಯನ್ನು ಮಾನ್ಯ ಎ.ಎಸ್.ಸಿ.ಜೆ & ಜೆ.ಎಂ.ಎಫ್.ಸಿ ನ್ಯಾಯಾಲಯ, ಪುತ್ತೂರು ನಡೆಸಿದ್ದು, ನ್ಯಾಯಾಧೀಶರಾದ ದೇವರಾಜ್ ಅವರು ಆರೋಪಿಗೆ 3 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ₹10,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ ಆರು ತಿಂಗಳ ಸಾದಾ ಕಾರಾಗೃಹ ಶಿಕ್ಷೆಯನ್ನು ಅನುಭವಿಸಬೇಕೆಂದು ನ್ಯಾಯಾಲಯ ಸೂಚಿಸಿದೆ. ಈ ಪ್ರಕರಣದ ತನಿಖೆಯನ್ನು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಸುಷ್ಮಾ ಬಂಡಾರಿ ಅವರು ನಡೆಸಿದ್ದು, ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ತ್ವರಿತವಾಗಿ ಮಾನ್ಯ ನ್ಯಾಯಾಲಯಕ್ಕೆ ಅಂತಿಮ ವರದಿಯನ್ನು ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಚೇತನಾ ದೇವಿ ಅವರು ಸಮರ್ಥವಾಗಿ ವಾದ ಮಂಡನೆ ನಡೆಸಿ, ಪ್ರಕರಣದ ವಿಚಾರಣೆಯಲ್ಲಿ ಪ್ರಮುಖ ಪಾತ್ರ…

Read More

ಮಂಗಳೂರು: ಪಾರ್ಕ್ ಮಾಡಿದ್ದ ಕಾರೊಂದು ಚಾಲಕನಿಲ್ಲದೇ ಸ್ವಯಂಚಾಲಿತವಾಗಿ ಚಲಿಸಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳೂರು ಜೈಲ್ ರೋಡ್‌‌ನಲ್ಲಿ ನಡೆದಿದೆ. ಮುಂದೆಯೇ ಇಳಿಜಾರು ರಸ್ತೆ ಇದ್ದು, ಸದ್ಯ ಸಂಭಾವ್ಯ ಅಪಾಯ ತಪ್ಪಿದೆ. ರಸ್ತೆಯಲ್ಲಿ ವಾಹನ ಸಂಚಾರ ಮತ್ತು ಪಾದಚಾರಿಗಳ ಓಡಾಟ ಹೆಚ್ಚಿರುವುದರಿಂದ, ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಆದರೆ ಘಟನೆ ಸಂದರ್ಭ ಕಾರಿನಲ್ಲೂ ಯಾರೂ ಇಲ್ಲದಿರುವುದರಿಂದ ಅಪಾಯ ತಪ್ಪಿದಂತಾಗಿದೆ.

Read More

ತುಳುನಾಡಿನ ಶ್ರೀಮಂತ ಸಂಸ್ಕೃತಿಯ ಭಾಗವಾಗಿರುವ ಕಂಬಳ ನೂರಾರು ವರ್ಷಗಳ ಘನ ಪರಂಪರೆಯನ್ನು ಹೊಂದಿದ್ದು, ಈ ಮಣ್ಣಿನ ಧಾರ್ಮಿಕ ಕಟ್ಟುಕಟ್ಟಳೆಗಳೊಂದಿಗೆ ಗ್ರಾಮೀಣ ಸೊಗಡನ್ನು ಸಾರುವ ಇಲ್ಲಿನ ಜನಜೀವನವನ್ನು ಪ್ರತಿಬಿಂಬಿಸುವ ಕೃಷಿಕ ಮತ್ತು ಜಾನುವಾರುಗಳ ಬದುಕಿನ ನಂಟಿನೊಂದಿಗೆ ಆರಂಭವಾದ ಸಾಂಪ್ರದಾಯಿಕ ಕ್ರೀಡೆಯು ಕಾಲಕ್ರಮೇಣ ಆಧುನಿಕತೆಗೆ ತೆರೆದುಕೊಳ್ಳುವ ಮೂಲಕ ವಿಶ್ವವ್ಯಾಪಿಯಾಗಿ ಇನ್ನಷ್ಟು ಜನಪ್ರಿಯವಾಗುತ್ತ ಬಂದಿದೆ. ಕಂಬಳವನ್ನು ನಿಷೇಧಿಸುವ ಮೂಲಕ ಇಲ್ಲಿನ ಮಣ್ಣಿನ ಮೂಲ ಸತ್ವಕ್ಕೆ ಕೊಡಲಿ ಏಟು ಕೊಟ್ಟು ನಮ್ಮ ಸಂಸ್ಕೃತಿಗೆ ಧಕ್ಕೆ ತರಲು ಯತ್ನಿಸಿದವರ ವಿರುದ್ಧ ನಡೆದ ಪ್ರಬಲ ಹೋರಾಟದಲ್ಲಿ ಹುಟ್ಟಿಕೊಂಡ ಕಿಚ್ಚು ‘ಮಂಗಳೂರು ಕಂಬಳ’ವು ಇಂದು ನವೋತ್ಸಾಹದ ೯ನೇ ವರ್ಷಕ್ಕೆ ಹೆಜ್ಜೆಯನ್ನಿರಿಸಿದೆ. ಕಂಬಳ ಕ್ಷೇತ್ರವು ಇಂದು ಅನೇಕ ದಾಖಲೆಗಳ ಮೂಲಕ ಜನಾಕರ್ಷಣೆ ಪಡೆಯುತ್ತಿರುವ ಈ ಕಾಲಘಟ್ಟದಲ್ಲಿ ‘ಅಲೇ ಬುಡಿಯೆರ್’ ಎಂಬ ಝೇಂಕಾರವು ಮಾರ್ದನಿಸುವುದರ ಜೊತೆಗೆ ಕೋಣಗಳು ಓಡುವಾಗ ಕರೆಯ ನೀರು ಬಾನೆತ್ತರಕ್ಕೆ ಚಿಮ್ಮುವಂತೆ ಈ ಜನಪದ ಕ್ರೀಡೆಯ ಪರಿಮಳವು ಜಗದಗಲ ಪಸರಿಸಲಿ ಎಂಬ ಆಶಾವಾದದೊಂದಿಗೆ ಮಂಗಳೂರು ಕಂಬಳಕ್ಕೆ ತಮ್ಮನ್ನು ಪ್ರೀತಿಯಿಂದ ಆಹ್ವಾನಿಸುತ್ತಿದ್ದೇವೆ. ಉದ್ಘಾಟನೆ…

Read More

ಮಂಗಳೂರು ಹೊರವಲಯದ ತಲಪಾಡಿ ಗ್ರಾಮದ ಕೆ.ಸಿ ರೋಡ್ ಫಲಾಹ್ ಶಾಲಾ ಬಸ್ಸು ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಎಮ್ ಡಿಎಮ್ಎ ಕ್ರಿಸ್ಟಲ್ ಎಂಬ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.  ಕೇರಳದ ಉಪ್ಪಳ, ಮಂಗಲ್ಪಾಡಿ ನಿವಾಸಿ ಶೇಖ್ ಮೊಹಮ್ಮದ್ ಕೈಫ್ (22) ಬಂಧಿತ ಆರೋಪಿ. ಕೃತ್ಯದಲ್ಲಿ ತೊಡಗಿದ್ದ ಮತ್ತಿಬ್ಬರು ಪೆಡ್ಲರ್ ಗಳು ಪರಾರಿಯಾಗಿದ್ದಾರೆ.  ಬಂಧಿತ ಆರೋಪಿ ಮೊಹಮ್ಮದ್ ಕೈಫ್ ನಿಂದ 55,000 ರೂಪಾಯಿ ಬೆಲೆ ಬಾಳುವ ನಿಷೇಧಿತ 11 ಗ್ರಾಂ ಎಮ್ ಡಿಎಮ್ಎ ಕ್ರಿಸ್ಟಲ್ ಮತ್ತು ಕೃತ್ಯಕ್ಕೆ ಬಳಸಿದ್ದ 1 ತೂಕ ಮಾಪನ, 500 ರೂಪಾಯಿ ನಗದು ಮತ್ತು 1 ಮೊಬೈಲ್ ಫೋನನ್ನು ಪೊಲೀಸರು ವಶಪಡಿಸಿದ್ದಾರೆ .  ಸ್ಥಳದಲ್ಲಿದ್ದ ಮತ್ತಿಬ್ಬರು ಡ್ರಗ್ ಪೆಡ್ಲರ್ ಗಳಾದ ಶಮೀರ್ ಕಾಂಬ್ಳೆ ಮತ್ತು ಜಾವೀದ್ ಎಂಬವರು ಪರಾರಿಯಾಗಿದ್ದಾರೆ. ಮೊಹಮ್ಮದ್ ಕೈಫ್ ಎಂಬಾತನು ವಿಲಾಸಿ ಜೀವನ ನಡೆಸಲು ಉಪ್ಪಳದ ಶಮೀರ್ ಕಾಂಬ್ಳೆ ಮತ್ತು ಜಾವೀದ್ ಎಂಬವರೊಂದಿಗೆ ಸೇರಿ ಕೆಸಿ ರೋಡ್ ಫಲಾಹ್ ಶಾಲಾ…

Read More

ಬೆಳ್ತಂಗಡಿ: ಪತಿಯನ್ನೇ ಕೊಂದ ಪತ್ನಿಯ ಪ್ರಕರಣದ ಆರೋಪಿ ಎಲಿಯಮ್ಮ ನ ಕೃತ್ಯ ಸಾಬೀತಾದರೂ, ಆಕೆ ‘Delusional Disorder’ ನಿಂದ ಬಳಲುತ್ತಿದ್ದ ಕಾರಣ ಅಪರಾಧ ಮುಕ್ತಗೊಳಿಸಿದ ಘಟನೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್.ಟಿ.ಎಸ್.ಸಿ -1 (ಪೋಕ್ಸೋ) ದಲ್ಲಿ ನಡೆದಿದೆ. ನ್ಯಾಯಾಧೀಶರಾದ  ಮೋಹನ ಜೆ.ಎಸ್. ಅವರು ತೀರ್ಪು ನೀಡಿದ್ದಾರೆ. 2022 ರ ಜುಲೈ 5 ರಂದು ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದಲ್ಲಿ ಬೆಳಗಿನ ಜಾವ 5:30 ಕ್ಕೆ ಯೋಹಾನನ್ ಎಂಬುವರನ್ನು ಅವರ ಪತ್ನಿ ಎಲಿಯಮ್ಮ ಕತ್ತಿಯಿಂದ ಕಡಿದು ಕೊಲೆ ಮಾಡಿದ್ದರು. ಬೆಳ್ತಂಗಡಿ ಪೊಲೀಸರು ದಾಖಲಿಸಿದ ಈ ಪ್ರಕರಣದ ವಿಚಾರಣೆ ವೇಳೆ, ಆರೋಪಿ ಎಲಿಯಮ್ಮ “ತಾನು ಕೊಂದಿರುವುದು ಹೌದು” ಎಂದು ಒಪ್ಪಿಕೊಂಡಿದ್ದರು. ಆದರೆ, ಕೃತ್ಯದ ಗಂಭೀರತೆಯನ್ನು ಪರಿಗಣಿಸಿ ನ್ಯಾಯಾಲಯ ಸಾಕ್ಷಿ ವಿಚಾರಣೆಯನ್ನು ಮುಂದುವರೆಸಿತ್ತು. ಸಾಕ್ಷಿದಾರರು ಆಕೆಯ ವಿರುದ್ಧ ಸಾಕ್ಷಿ ನುಡಿದಿದ್ದರು. ವಿಚಾರಣೆಯ ಕ್ರಾಸ್ ಎಕ್ಸಾಮಿನೇಷನ್ ಹಂತದಲ್ಲಿ, ಆರೋಪಿ ಪರ ವಕೀಲರಾದ ವಿಕ್ರಮ್ ರಾಜ್ ಎ. ಅವರು ಆರೋಪಿಯ ವೈದ್ಯಕೀಯ ಹಿನ್ನೆಲೆಯನ್ನು ಅನಾವರಣಗೊಳಿಸಿದರು.…

Read More

ಮಂಗಳೂರು: ಪಾಸ್‌ಪೋರ್ಟ್‌ ಅರ್ಜಿಯ ಪೊಲೀಸ್‌ ಪರಿಶೀಲನಾ ವರದಿಯಲ್ಲಿ ವಂಚನೆ ಎಸಗಿ, ಸಹಿ ಫೋರ್ಜರಿ ಮಾಡಿದ ಆರೋಪದಡಿ ವಿಟ್ಲ ಪೊಲೀಸ್‌ ಠಾಣೆಯ ಸಿಬ್ಬಂದಿ ಪ್ರದೀಪ್‌ ಹಾಗೂ ಸುಳ್ಳು ದಾಖಲೆ ನೀಡಿ ಪಾಸ್‌ಪೋರ್ಟ್‌ ಪಡೆದ ಶಕ್ತಿ ದಾಸ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಶಕ್ತಿ ದಾಸ್‌ ಎಂಬಾತ ಫೆಬ್ರವರಿ 2025ರಲ್ಲಿ ಪಾಸ್‌ಪೋರ್ಟ್‌ಗಾಗಿ ಅರ್ಜಿ ಸಲ್ಲಿಸಿದ್ದನು. ಆದರೆ ಪೊಲೀಸ್‌ ವೆರಿಫಿಕೇಶನ್‌ ವೇಳೆ ಆತ ನೀಡಿದ್ದ ವಿಳಾಸವು ದಾಖಲಾತಿಗಳಿಗೆ ತಾಳೆಯಾಗದ ಕಾರಣ ಅರ್ಜಿಯನ್ನು ತಿರಸ್ಕರಿಸಲಾಗಿತ್ತು. ತದನಂತರ ಜೂನ್‌ನಲ್ಲಿ ಆತ ಮತ್ತೆ ಮರು ಅರ್ಜಿ ಸಲ್ಲಿಸಿದ್ದನು. ಈ ಮರು ಅರ್ಜಿಯ ಪರಿಶೀಲನೆಯ ಹೊಣೆ ಹೊತ್ತಿದ್ದ ಠಾಣಾ ಸಿಬ್ಬಂದಿ ಪ್ರದೀಪ್‌, ಸಂಬಂಧಪಟ್ಟ ಬೀಟ್‌ ಸಿಬ್ಬಂದಿ ಸಾಬು ಮಿರ್ಜಿ ಎಂಬವರ ಗಮನಕ್ಕೆ ಬಾರದಂತೆ ಅವರ ಹೆಸರಿನಲ್ಲೇ ನಕಲಿ ವರದಿ ಸಿದ್ಧಪಡಿಸಿದ್ದರು. ಅಷ್ಟೇ ಅಲ್ಲದೆ, ಸಾಬು ಮಿರ್ಜಿ ಅವರ ಸಹಿಯನ್ನು ಫೋರ್ಜರಿ ಮಾಡಿ ಮೇಲಾಧಿಕಾರಿಗಳಿಂದ ಶಿಫಾರಸ್ಸು ಮಾಡಿಸಿ ಪಾಸ್‌ಪೋರ್ಟ್‌ ಹಾಗೂ ಪೊಲೀಸ್‌ ಕ್ಲಿಯರೆನ್ಸ್‌ ಸರ್ಟಿಫಿಕೇಟ್‌ ಸಿಗುವಂತೆ ಮಾಡಿದ್ದರು. ಬಳಿಕ ಈ ಅಕ್ರಮ ಯಾರಿಗೂ ತಿಳಿಯಬಾರದೆಂದು…

Read More

ರಾಜ್ಯ ಕಾರಾಗೃಹ ಇಲಾಖೆ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಅವರು ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅಲೋಕ್ ಕುಮಾರ್, ರಾಜ್ಯದ ಎಲ್ಲಾ ಜೈಲುಗಳನ್ನು ಹಂತ ಹಂತವಾಗಿ ಪರಿಶೀಲಿಸಲಾಗುವುದು ಎಂದು ಹೇಳಿದರು. ಮಂಗಳೂರು ಜೈಲು ಸೂಕ್ಷ್ಮ ಪ್ರದೇಶದಲ್ಲಿದೆ ಮತ್ತು ಆದ್ದರಿಂದ ಅದರ ಭದ್ರತಾ ವ್ಯವಸ್ಥೆಗಳಿಗೆ ವಿಶೇಷ ಆದ್ಯತೆ ನೀಡಲಾಗಿದೆ. ಜೈಲಿನೊಳಗೆ ಶಿಸ್ತು ಉಲ್ಲಂಘಿಸುವ ಮತ್ತು ಗಲಭೆಯಲ್ಲಿ ತೊಡಗಿರುವ ಕೈದಿಗಳನ್ನು ಈಗಾಗಲೇ ಗುರುತಿಸಿ ಇತರ ಜಿಲ್ಲೆಗಳ ಜೈಲುಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಹೇಳಿದರು. ಜೈಲಿನೊಳಗೆ ಮೊಬೈಲ್ ಫೋನ್‌ಗಳನ್ನು ಹೇಗೆ ಪೂರೈಸಲಾಗುತ್ತಿದೆ ಎಂಬುದರ ಕುರಿತು ವಿವರವಾದ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಡಿಜಿಪಿ ಹೇಳಿದರು. ಮೊಬೈಲ್ ಜಾಮರ್‌ಗಳ ಸಮಸ್ಯೆಗಳ ಕುರಿತು ದೂರುಗಳನ್ನು ಉಲ್ಲೇಖಿಸಿದ ಅವರು, ಸಮಸ್ಯೆಯನ್ನು ಪರಿಹರಿಸಲು ಮತ್ತು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಸುಧಾರಣೆಗಳನ್ನು ತರುವ ನಿಟ್ಟಿನಲ್ಲಿ ಶೀಘ್ರದಲ್ಲೇ ಸಭೆ ನಡೆಸಲಾಗುವುದು ಎಂದು ಹೇಳಿದರು. ಬೆಂಗಳೂರು ಮತ್ತು ಮೈಸೂರು ಜೈಲುಗಳಲ್ಲಿ ಈಗಾಗಲೇ ಪ್ರಾಯೋಗಿಕವಾಗಿ AI ಆಧಾರಿತ…

Read More