Author: main-admin

ಅಂಕೋಲಾ: ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್ ಉರುಳಿ ಬಿದ್ದು ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕಂಚಿನಬಾಗಿಲು ಬಳಿಯ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ನಡೆದಿದೆ. ಮಂಗಳೂರಿನಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಮೊದಲೇ ಪೆಟ್ರೋಲ್ ಇದ್ದಿದ್ದರಿಂದ ನೋಡ ನೋಡುತ್ತಿದ್ದಂತೇ ಟ್ಯಾಂಕರ್ ಹೊತ್ತಿ ಉರಿದಿದೆ. ಇಬ್ಬರಿಗೆ ಗಂಭೀರ ಅಲ್ಲದೇ ಬೆಂಕಿಯ ಜ್ವಾಲೆ ರಸ್ತೆ ಪಕ್ಕದ ಅರಣ್ಯಕ್ಕೂ ವ್ಯಾಪಿಸಿದ್ದು, ಬಳಿಕ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಟ್ಯಾಂಕರ್ ಸಂಪೂರ್ಣ ಸುಟ್ಟು ಕರಕಲಾಗಿದೆ.

Read More

ಬೆಳ್ತಂಗಡಿ: ನಿಷೇಧಿತ ಮಾದಕವಸ್ತು ಗಾಂಜಾ ಮಾರಾಟಕ್ಕೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿಗೆ ಜಿಲ್ಲಾ ವಿಶೇಷ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಮಂಗಳೂರು ಶಿಕ್ಷೆ ವಿಧಿಸಿದೆ. 2009ರ ಮಾರ್ಚ್ 8ರಂದು ಬೆಳ್ತಂಗಡಿ ತಾಲೂಕಿನ ಉಜಿರೆ ರಥಬೀದಿಯಲ್ಲಿ ಅಂದಾಜು ರೂ. 50,000 ಮೌಲ್ಯದ 1.500 ಕೆಜಿ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಪ್ರಕರಣ ಬೆಳಕಿಗೆ ಬಂದಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 60/09ರಂತೆ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(c) ಜೊತೆಗೆ 20(b) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯದ ಮಾನ್ಯ ನ್ಯಾಯಾಧೀಶರಾದ ಬಸವರಾಜ್ ಅವರು ಏಪ್ರಿಲ್ 10, 2026ರಂದು ಆರೋಪಿಯಾಗಿರುವ ಚಾರ್ಮಾಡಿ ನಿವಾಸಿ ಟಿ.ಇ. ಜೋಸೆಫ್ (42) ಅವರನ್ನು ದೋಷಿ ಎಂದು ತೀರ್ಪು ನೀಡಿದರು. ಬಳಿಕ ಏಪ್ರಿಲ್ 16ರಂದು ಶಿಕ್ಷೆ ಪ್ರಕಟಿಸಲಾಯಿತು.ನ್ಯಾಯಾಲಯವು ಎನ್‌ಡಿಪಿಎಸ್ ಕಾಯ್ದೆಯ ಸೆಕ್ಷನ್ 8(c) r/w 20(b)(ii)(B) ಅಡಿಯಲ್ಲಿ 5 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ರೂ. 50,000 ದಂಡ ವಿಧಿಸಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ…

Read More

ಮಂಗಳೂರಿನ ಪದವು ಕುಲಶೇಖರದಲ್ಲಿ ಹಿಂದೂ ಯುವಸೇನೆ ಸಂಚಾಲಿತ ಧಾರ್ಮಿಕ ಶ್ರದ್ಧಾಕೇಂದ್ರ ಶ್ರೀ ಶನೈಶ್ಚರ ದೇವಸ್ಥಾನದ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವವು ಎಪ್ರಿಲ್ 18ರಿಂದ 24ರ ತನಕ ಬಾಳಂಭಟ್ ಮನೆತನದ ಜ್ಯೋತಿಷ್ಯ ವಿದ್ವಾನ್ ವೇದಮೂರ್ತಿ ಎಂ. ಗಿರಿಧರ ಭಟ್ ಮತ್ತು ವೇದಮೂರ್ತಿ ಡಾ| ಸತ್ಯಕೃಷ್ಣ ಭಟ್ ಅವರ ನೇತೃತ್ವದಲ್ಲಿ ವಿವಿಧ ವೈಧಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಹಿಂದೂ ಯುವಸೇನೆ ಪದವು ಶಾಖೆಯ ಧಾರ್ಮಿಕ ವಿಭಾಗವಾಗಿ ಕಳೆದ ಎರಡೂವರೆ ದಶಕಗಳಿಂದ ಕಾರ್ಯ ನಿರ್ವಹಿಸುತ್ತಿರುವ ಶ್ರೀ ಶನೈಶ್ಚರ ಪೂಜಾ ಸಮಿತಿ (ರಿ.) ಶ್ರೀ ಸಗ್ರಹ ಮಖ ಶನೈಶ್ಚರ ಮಹಾಯಾಗವನ್ನು ಬಾಳಂಭಟ್ ಮನೆತನದ ವೇದಮೂರ್ತಿ ನಾರಾಯಣ ಭಟ್ ಅವರ ಮಾರ್ಗದರ್ಶನದಲ್ಲಿ 2000 ಹಾಗೂ 2018ರಲ್ಲಿ ನಡೆಸಲಾಗಿತ್ತು. ಶ್ರೀ ಸಗ್ರಹ ಮಖ ಶನೈಶ್ಚರ ಮಹಾಯಾಗವು 7 ದಿನಗಳ ಪರ್ಯಂತ ನಡೆದಿದ್ದು, ಧಾರ್ಮಿಕ ವಲಯದಲ್ಲಿ ಚರಿತ್ರೆ ನಿರ್ಮಿಸಿದ ಕಾರ್ಯಕ್ರಮವಾಗಿ ದಾಖಲಾಗಿದೆ. ಮಂಗಳೂರಿನ ಕುಲಶೇಖರದ ಪದವು ಮೇಗಿನಮನೆ ಬಳಿ 2010ರಲ್ಲಿ 600 ಚ.ಅಡಿಯಲ್ಲಿ ಶ್ರೀ ಶನೈಶ್ಚರ ಪೂಜಾ ಮಂದಿರವನ್ನು ನಿರ್ಮಿಸಿ…

Read More

ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ಸಿಪಿಐ ರಘುನಾಥ್ (45) ಮೃ*ತ ದುರ್ದೈವಿ. ರಘುನಾಥ್ ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ಡಿಸಿಆರ್‌ ಇ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಚಿತ್ರದುರ್ಗದ ಕಡೆಯಿಂದ ಜಗಳೂರು ಕಡೆಗೆ ಬರುತ್ತಿರುವಾಗ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿರುವ ಮರಕ್ಕೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸಿಪಿಐ ರಘುನಾಥ್ ಸ್ಥಳದಲ್ಲೇ ಸಾ*ವನ್ನಪ್ಪಿದ್ದಾರೆ. ಇದನ್ನೂ ಓದಿ: ಕರುಣಾಜನಕ ಘಟನೆ: ಹಾಸಿಗೆ ಹಿಡಿದಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂ*ದ ಪಾಪಿ ಮಗ! ಇವರು ದಾವಣಗೆರೆ, ಚಿತ್ರದುರ್ಗ ಸೇರಿದಂತೆ ಹಲವು ಕಡೆಗಳಲ್ಲಿ ಸೇವೆ ಸಲ್ಲಿಸಿದ್ದರು. ಘಟನಾ ಸ್ಥಳಕ್ಕೆ ಜಗಳೂರು ಸಿಪಿಐ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇವರ ನಿಧ*ನಕ್ಕೆ ಪೊಲೀಸ್ ಇಲಾಖೆ ಸಂತಾಪ ವ್ಯಕ್ತಪಡಿಸಿದೆ.

Read More

ಬೆಳ್ತಂಗಡಿ: ಸಾಮಾಜಿಕ ಮಾಧ್ಯಮದಲ್ಲಿ ದ್ವೇಷ ಭಾಷಣ ಪ್ರಸಾರ ಮತ್ತು ಪ್ರಸಾರಕ್ಕೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ಬೆಂಗಳೂರಿನಲ್ಲಿ ಬಲಪಂಥೀಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಬಂಧಿಸಿದ್ದಾರೆ. ಪ್ರಸ್ತುತ ಅವರನ್ನು ಹೆಚ್ಚಿನ ತನಿಖೆಗಾಗಿ ಬೆಳ್ತಂಗಡಿಗೆ ಕರೆತರಲಾಗುತ್ತಿದೆ. ಕೆರೆಹಳ್ಳಿ ಪದೇ ಪದೇ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಈ ಬಂಧನವಾಗಿದೆ. ಬೆಳ್ತಂಗಡಿಯ ಕಸ್ಬಾ ಗ್ರಾಮದ ಹುಣಸೆಕಟ್ಟೆ ನಿವಾಸಿ ಜೋರಾಮ್ ಬಾರ್ಬೋಜ ಅವರು ಆಗಸ್ಟ್ 7, 2025 ರಂದು ಸಲ್ಲಿಸಿದ ದೂರಿನ ಆಧಾರದ ಮೇಲೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.ಕೆರೆಹಳ್ಳಿ ಕೋಮು ಸಾಮರಸ್ಯವನ್ನು ಕೆರಳಿಸುವ ಗುರಿಯನ್ನು ಹೊಂದಿರುವ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಮತ್ತು ವೀಡಿಯೊವನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಪ್ರಸಾರ ಮಾಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.ಪ್ರಕರಣ ದಾಖಲಾದ ನಂತರ, ಬೆಳ್ತಂಗಡಿ ಪೊಲೀಸರು ಕೆರೆಹಳ್ಳಿಗೆ ಹಲವಾರು ನೋಟಿಸ್‌ಗಳನ್ನು ನೀಡಿದ್ದರು. ಅವರು ನಿರಂತರವಾಗಿ ನಿಯಮ ಪಾಲಿಸದ ಕಾರಣ, ಪೊಲೀಸರು ಬೆಳ್ತಂಗಡಿ ನ್ಯಾಯಾಲಯದಿಂದ ಬಂಧನ ವಾರಂಟ್ ಪಡೆದರು. ನಂತರ ವಿಶೇಷ ತಂಡವು ಬೆಂಗಳೂರಿಗೆ ಹೋಗಿ ಪುನೀತ್‌ ಕೆರೆಹಳ್ಳಿಯನ್ನು ವಶಕ್ಕೆ ತೆಗೆದುಕೊಂಡಿದರು.ಪ್ರಾಥಮಿಕ ವಿಚಾರಣೆಯ…

Read More

ಬಂಟ್ವಾಳ: ಗೂಡ್ಸ್ ರಿಕ್ಷಾ ಹಾಗೂ ದ್ವಿಚಕ್ರವಾಹನ ನಡುವೆ ನಡೆದ ಅಪಘಾತಕ್ಕೆ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃ*ತಪಟ್ಟ ಘಟನೆ ಕುಕ್ಕಾಜೆ ಎಂಬಲ್ಲಿ ನಡೆದಿದೆ. ಕುಕ್ಕಾಜೆಯ ಪಂಜಾಜೆ ನಿವಾಸಿ ಮನೀಶ್ (23) ಎಂಬಾತ ಮೃ*ತಪಟ್ಟ ಯುವಕನಾಗಿದ್ದಾನೆ. ಮೆಲ್ಕಾರ್ ಕಡೆಯಿಂದ ಸ್ನೇಹಿತ ಉದಯ ಎಂಬವರ ಜೊತೆ ಕುಕ್ಕಾಜೆ ಮನೆಯ ಕಡೆ ಸಂಚಾರ ಮಾಡುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸಹಸವಾರನಾಗಿದ್ದ ಮನೀಶ್ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಬುಲೆರೋ ವಾಹನಕ್ಕೆ ಸಿಮೆಂಟ್ ಟ್ಯಾಂಕರ್ ಡಿಕ್ಕಿ ; ಚಿಕ್ಕಮಗಳೂರು ಮೂಲದ 8 ಮಂದಿ ಭೀಕರ ಸಾ*ವು ಸವಾರ ಉದಯ ಅವರು ಅಲ್ಪಸ್ವಲ್ಪ ಗಾಯಗಳಿಂದ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ 2003ರ ಗಂಭೀರ ಅಪರಾಧ ಪ್ರಕರಣಕ್ಕೆ ಸಂಬಂಧಿಸಿ 23 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಯನ್ನು ಮಲ್ಪೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಮಾನ್ಯ ನ್ಯಾಯಾಲಯ ಉಡುಪಿ ಹಾಗೂ ಮಲ್ಪೆ ಠಾಣಾ ಅಪರಾಧ ಪ್ರಕರಣದಲ್ಲಿ ಆರೋಪಿಯಾಗಿದ್ದ ಎಂ. ಬಾಬು (52), ತಂದೆ ಮಹಮ್ಮದ್, ಶಿವನಗರ, ಬೆಂಗಳೂರು ನಿವಾಸಿಯಾಗಿದ್ದು, ಕಳೆದ 23 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ಪರಾರಿಯಾಗಿದ್ದ. ಆರೋಪಿಯ ಪತ್ತೆಗಾಗಿ ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ಮಲ್ಪೆ ಪೊಲೀಸ್ ವೃತ್ತ ನಿರೀಕ್ಷಕರ ಮಾರ್ಗದರ್ಶನದಲ್ಲಿ, ಮಲ್ಪೆ ಪೊಲೀಸ್ ಠಾಣಾ ಉಪನಿರೀಕ್ಷಕ ಅನೀಲ್ ಕುಮಾರ್ ಡಿ ಅವರ ನೇತೃತ್ವದಲ್ಲಿ ಕಳೆದ ಐದು ತಿಂಗಳಿನಿಂದ ಮಾಹಿತಿ ಸಂಗ್ರಹಿಸಿ ಶೋಧ ಕಾರ್ಯ ನಡೆಸಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಠಾಣಾ ಸಿಬ್ಬಂದಿಗಳಾದ ಹೆಡ್ ಕಾನ್ಸ್‌ಟೇಬಲ್ ಸುರೇಶ್ ಕುಮಾರ್ ಮತ್ತು ಹೆಡ್ ಕಾನ್ಸ್‌ಟೇಬಲ್ ವಿಶ್ವನಾಥ್ ಎಚ್. ಅವರು ಏಪ್ರಿಲ್ 12ರಂದು ಬೆಂಗಳೂರಿಗೆ ತೆರಳಿ, ಏಪ್ರಿಲ್ 14ರಂದು ರಾಮಮೂರ್ತಿ ನಗರದಲ್ಲಿ ಆರೋಪಿಯನ್ನು ಪತ್ತೆಹಚ್ಚಿ…

Read More

ಮಂಗಳೂರು : ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರ್ಕಾರದ ಸೌಲಭ್ಯಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಘಟನೆಗಳನ್ನು ಖಂಡಿಸಿ ‘ನವಸಹಜ ಸಮುದಾಯ ಸಂಘಟನೆ’ ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿತು.ನಕಲಿ ಗುರುತಿನ ಚೀಟಿ ಪಡೆದವರ ವಿರುದ್ಧ ಹಾಗೂ ಅದಕ್ಕೆ ಸಹಕರಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆ ಆಗ್ರಹಿಸಿದೆ. ದ.ಕ ಜಿಲ್ಲಾ ನವಸಹಜ ಸಂಘಟನೆಯ ಅಧ್ಯಕ್ಷೆ ನಿಖಿಲಾ ಮಾತನಾಡಿ, “ರಾಯಚೂರು ಮೂಲದ ಹನಿ ಮಂಗಳೂರು ಕಳೆದ 4-5 ವರ್ಷಗಳಿಂದ ಮಂಗಳೂರಿನಲ್ಲಿ ವಾಸವಾಗಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಪರಿಚಯವಾದ ಮೈಸೂರಿನ ವ್ಯಕ್ತಿಯನ್ನು ನಗರಕ್ಕೆ ಕರೆಸಿಕೊಂಡಿದ್ದಾಳೆ. ಸಂಘಟನೆಗೆ ಮಾಹಿತಿ ನೀಡದೆ ಆ ವ್ಯಕ್ತಿಗೆ ಮಂಗಳೂರಿನ ವಿಳಾಸದಲ್ಲಿ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ, ಮಹಿಳಾ ಅಭಿವೃದ್ಧಿ ನಿಗಮಕ್ಕೆ ತಪ್ಪು ಮಾಹಿತಿ ನೀಡಿ ರಾಷ್ಟ್ರೀಯ ಟ್ರಾನ್ಸ್‌ಜೆಂಡರ್ ಗುರುತಿನ ಚೀಟಿ ಮಾಡಿಸಲಾಗಿದೆ. ಬಳಿಕ ಆ ವ್ಯಕ್ತಿ ಮೈಸೂರಿಗೆ ತೆರಳಿ, ಮಂಗಳೂರಿನ ಸಮುದಾಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೂ ಸಂಘಟನೆಗೂ…

Read More

ಮಂಗಳೂರು: ಕಾವೂರಿನಿಂದ ಮಂಗಳೂರಿಗೆ ಬರುವ ರಸ್ತೆಯಲ್ಲಿ ಅಂದರೆ ನಗರದ ಕುಂಟಿಕಾನ ಫ್ಲೈಓವರ್ ಬಳಿ ವಾಹನವನ್ನು ಅಡ್ಡಗಟ್ಟಿ ಇತರ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ಇಬ್ಬರು ದ್ವಿಚಕ್ರ ವಾಹನ ಸವಾರರ ವಿರುದ್ಧ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಕುಂಜತ್ತಬೈಲ್ ನಿವಾಸಿ ತನ್ಸೀರ್ (25) ಮತ್ತು ಗದಗ ಜಿಲ್ಲೆ ನರಗುಂದ ತಂಡಾಪುರ ಓಣಿಲೆ ಚಂದ್ರಶೇಖರ್ (55) ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಾಹನವನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿದ ವಿಚಾರದಲ್ಲಿ ಈ ಇಬ್ಬರ ನಡುವೆ ಗಲಾಟೆಯಾಗಿತ್ತು.ಪರಿಣಾಮ ಇಬ್ಬರೂ ರಸ್ತೆಗೆ ತಮ್ಮ ವಾಹನಗಳನ್ನು ಅಡ್ಡವಾಗಿರಿಸಿ, ಪರಸ್ಪರ ಬೈದಾಡುತ್ತಾ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ. ಸ್ಥಳಕ್ಕೆ ಹೊಯ್ಸಳ ಪೊಲೀಸರು ಆಗಮಿಸಿ ಇಬ್ಬರನ್ನು ಚದುರಿಸಿದ್ದಾರೆ ಎಂದು ತಿಳಿದು ಬಂದಿದೆ.

Read More

ಕಾರ್ಕಳ: ಸೈಕಲ್ ಸರ್ಕಸ್‌ನಲ್ಲಿ ಡ್ಯಾನ್ಸ್ ಮಾಡಿದ ವಿಚಾರಕ್ಕೆ ಮೂವರು ಸೇರಿಕೊಂಡು ಯುವಕನ ಮೇಲೆ ಹಲ್ಲೆ ನಡೆಸಿದ ಘಟನೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದಲ್ಲಿ ನಡೆದಿದೆ. ವಿಜಯ ಕುಮಾರ್ (40) ಅವರು ಏಪ್ರಿಲ್ 12ರಂದು ದುರ್ಗಾನಗರದಲ್ಲಿ ನಡೆಯುತ್ತಿದ್ದ ಸೈಕಲ್ ಸರ್ಕಸ್‌ಗೆ ತೆರಳಿ ಡ್ಯಾನ್ಸ್ ಮಾಡಿ ಮನೆಗೆ ಹಿಂದಿರುಗುವಾಗ, ದುರ್ಗಾನಗರದ ಆಶ್ಲೇಶ್ ಹೋಟೆಲ್ ಬಳಿ ಅವರ ಸ್ನೇಹಿತರು ಗುರುಪ್ರಸಾದ್, ಶಿವ ಮತ್ತು ದಯಾನಂದ ಅಡ್ಡಗಟ್ಟಿದ್ದಾರೆ. ಈ ವೇಳೆ “ನೀನು ಸೈಕಲ್ ಸರ್ಕಸ್‌ನಲ್ಲಿ ಡ್ಯಾನ್ಸ್ ಮಾಡಿ ನಮ್ಮ ಊರಿನ ಮರ್ಯಾದೆ ತೆಗೆದುಕೊಳ್ಳುತ್ತಿದ್ದೀಯ” ಎಂದು ಪ್ರಶ್ನಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಬಳಿಕ ಗುರುಪ್ರಸಾದ್ ಮುಖ ಮತ್ತು ಕೆನ್ನೆಗೆ ಹೊಡೆದು ತಳ್ಳಿ ನೆಲಕ್ಕೆ ಬಿದ್ದು, ಮೂವರು ಸೇರಿಕೊಂಡು ಕಾಲಿನಿಂದ ಹಲ್ಲೆ ನಡೆಸಿದ್ದಾರೆ. ಹಲ್ಲೆ ವೇಳೆ ತಲೆಯ ಹಿಂಭಾಗ ಕಾಂಕ್ರೀಟ್‌ಗೆ ತಾಗಿ ರಕ್ತಗಾಯವಾಗಿದ್ದು, ವಿಜಯ ಕುಮಾರ್ ಬೊಬ್ಬೆ ಹಾಕುತ್ತಿದ್ದಂತೆ ಆರೋಪಿತರು ಸ್ಥಳದಿಂದ ಪರಾರಿಯಾಗಿದ್ದಾರೆ. ನಂತರ ವಿಜಯ ಎಂಬವರು ಗಾಯಾಳುವಿಗೆ ಸಹಾಯ ಮಾಡಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ…

Read More