Author: main-admin

ಭಟ್ಕಳ: ಚಲಿಸುತ್ತಿದ್ದ ರೈಲನ್ನು ಏರಲು ಹೋದ ಪ್ರಯಾಣಿಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ರೈಲಿಗೆ ಸಿಲುಕುವ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಕೊಂಕಣ ರೈಲ್ವೆ ಸಿಬ್ಬಂದಿ ತಕ್ಷಣವೇ ಅವರನ್ನು ಹಿಡಿದು ಅಪಾಯದಿಂದ ಪಾರು ಮಾಡಿದ್ದಾರೆ. ರೈಲ್ವೆ ನಿಲ್ದಾಣದ ಸಿಸಿ ಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ಗೋವಾದ ಮಡಗಾಂವ್‌ನಿಂದ ಎರ್ನಾಕುಲಂ ಕಡೆಗೆ ಸಾಗುತಿದ್ದ ರೈಲು ಸಂಖ್ಯೆ 10215 ಭಟ್ಕಳದಲ್ಲಿ ನಿಲುಗಡೆಯಾಗಿತ್ತು. ರೈಲು ಪುನಃ ಹೊರಡುವಾಗ ಓರ್ವ ಪ್ರಯಾಣಿಕ ರೈಲು ಏರುವಾಗ ಎಡವಿದಂತೆ ತೋರಿದರು. ಇದನ್ನು ಅರಿತ ಕೊಂಕಣ ರೈಲ್ವೆ ಪಾಯಿಂಟ್ಸಮನ್ ಮಣ್ಕುಳಿಯ ಯೋಗೇಶ ನಾಯ್ಕ ಅವರನ್ನು ರೈಲು ಏರಿಸಲು ಪ್ರಯತ್ನಿಸಿದರೂ ಸಾಧ್ಯವಾಗದೇ ಅವರ ಒಂದು ಕಾಲು ರೈಲಿನಿಂದ ಕೆಳಗೆ ಜಾರಿತು. ರೈಲಿನ ಕೆಳಗಡೆ ಸಿಲುಕುವಷ್ಟರಲ್ಲಿ ಯೋಗೇಶ ನಾಯ್ಕ ತಮ್ಮ ಸಮಯಪ್ರಜ್ಞೆಯಿಂದ ಅವರನ್ನು ಪ್ಲಾಟ್‌ಫಾರಂ ಕಡೆಗೆ ಎಳೆದು ಜೀವ ರಕ್ಷಿಸಿದ್ದಾರೆ. ನಂತರ ರೈಲು ನಿಲುಗಡೆಗೆ ಸಿಗ್ನಲ್ ತೋರಿಸಿ ಪ್ರಯಾಣಿಕನನ್ನು ಪುನಃ ರೈಲು ಹತ್ತಿಸಿ ಕಳುಹಿಸಿದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಅಪಾಯಕಾರಿ ಸನ್ನಿವೇಶದಲ್ಲಿ ಸಮಯಪ್ರಜ್ಞೆಯಿಂದ ತನ್ನನ್ನು ಪಾರು ಮಾಡಿದ…

Read More

ಮೂಡುಬಿದಿರೆ: ಮಂಗಳೂರು ನಗರಕ್ಕೆ ಸರ್ಕಾರಿ ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸಿದ್ದ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರಿಗೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಡಾ. ಮೋಹನ್‌ ಆಳ್ವ ಅವರ ನಿವಾಸದಲ್ಲಿ ಆಯೋಜಿಸಲಾಗಿದ್ದ ಶುಕ್ರವಾರದ ಬೆಳಗ್ಗಿನ ಉಪಹಾರ ಕೂಟವನ್ನು ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರ ಭಾರೀ ಅಸಮಾಧಾನದ ಹಿನ್ನೆಲೆಯಲ್ಲಿ ರದ್ದುಪಡಿಸಿದ ವಿದ್ಯಮಾನ ನಡೆದಿದೆ. ರಾಜ್ಯ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಶುಕ್ರವಾರ ಎಮ್ಮೆಕೆರೆ ಅಂತಾರಾಷ್ಟ್ರೀಯ ಈಜು‌ಕೊಳ ಉದ್ಘಾಟನೆಗಾಗಿ ನಗರಕ್ಕೆ ಆಗಮಿಸಿದ್ದರು, ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಗಳ‌ ಮುಖ್ಯಸ್ಥ ಮೋಹನ್‌ ಆಳ್ವ ಅವರ ನಿವಾಸದಲ್ಲಿ ಸಚಿವರಿಗೆ ಬೆಳಗ್ಗಿನ ಉಪಾಹಾರ ಕೂಟ ಏರ್ಪಡಿಸಲಾಗಿತ್ತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿ ಅವರ ಉಮೇದುವಾರಿಕೆ‌ ಸಲ್ಲಿಸುವಾಗಲೂ ಜೊತೆಯಾಗಿದ್ದ ಡಾ. ಮೋಹನ್ ಆಳ್ವರ ನಿವಾಸದಲ್ಲಿ ಸಚಿವರು ಉಪಹಾರ ಕೂಟದಲ್ಲಿ ಪಾಲ್ಗೊಳ್ಳೂವುದು ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರಿಗೆ ನೋವುಂಟು ಮಾಡಿತ್ತು‌. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತವಾಗಿತ್ತು. ಚುನಾವಣೆಯಲ್ಲಿ ನೇರವಾಗಿ ಬಿಜೆಪಿಯನ್ನು ಬೆಂಬಲಿಸಿದವರ ಮನೆಗೆ…

Read More

ಮಂಗಳೂರು : ಅಜ್ಜನ ಮರಣ ಪ್ರಮಾಣ ಪತ್ರದ ದೃಢೀಕರಣಕ್ಕೆ 13 ಸಾವಿರ ಲಂಚ ಕೇಳಿದ ಚೇಳ್ಯಾರು ಗ್ರಾಮದ ವಿಎ ಶ್ರೀ ವಿಜಿತ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ವ್ಯಕ್ತಿಯೊಬ್ಬರು ತನ್ನ ತಾಯಿಯ ಹೆಸರಿನಲ್ಲಿ ಜಾಗ ಮಾರಾಟ ಮಾಡಲು ದಾಖಲಾತಿಗಳನ್ನು ತಯಾರು ಮಾಡುವ ವೇಳೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಜ್ಜನ ಮರಣ ಪ್ರಮಾಣ ಪತ್ರ ಮತ್ತು ಸಂತತಿ ನಕ್ಷೆ ಮಾಡಿಕೊಂಡು ಬನ್ನಿ ಎಂದು ತಿಳಿಸಿದ್ದಾರೆ. ಅದರಂತೆ ದೂರುದಾರರು ಸೆಪ್ಟೆಂಬರ್ ತಿಂಗಳಿನಲ್ಲಿ ಚೇಳ್ಯಾರು ಗ್ರಾಮಕರಣಿಕರ ಕಚೇರಿಗೆ ಹೋಗಿ ತನ್ನ ಅಜ್ಜನ ಮರಣದ ದೃಢಪತ್ರಕ್ಕೆ ಅರ್ಜಿ ಸಲ್ಲಿಸಿರುತ್ತಾರೆ. ನಂತರ ಫಿರ್ಯಾದಿದಾರರು ಎರಡು ಮೂರು ಸಲ ಜೇಳ್ಳಾರು ಗ್ರಾಮಕರಣಿಕರ ಕಚೇರಿಗೆ ಹೋಗಿ ದೃಢೀಕರಣ ಪತ್ರದ ಬಗ್ಗೆ ಶ್ರೀ ವಿಜಿತ್, ಗ್ರಾಮ ಆಡಳಿತ ಅಧಿಕಾರಿ, ಜೇಳ್ಯಾರು ಗ್ರಾಮ ಇವರಲ್ಲಿ ವಿಚಾರಿಸಿದ್ದು, ಯಾವುದೇ ಉತ್ತರ ನೀಡಿರುವುದಿಲ್ಲ. ನಂತರ ಫಿರ್ಯಾದಿದಾರರು ದಿನಾಂಕ 20.11.2023 ರಂದು ಗ್ರಾಮ ಆಡಳಿತ ಅಧಿಕಾರಿಯವರ ಮೊಬೈಲ್ ನಂಬರಿಗೆ ಕಾಲ್ ಮಾಡಿ ಮಾತನಾಡಿದಾಗ ನಿಮ್ಮ…

Read More

ಉಡುಪಿ: ಇವತ್ತಿನ ಕೆಡಿಪಿ ಸಭೆ ಮಾಜಿ ಸಚಿವ ಸುನಿಲ್ ಕುಮಾರ್ ಮತ್ತು ಎಸ್‌ಪಿ ಜಟಾಪಟಿಗೆ ಸಾಕ್ಷಿಯಾಯಿತು. ಲಾರಿ ಮುಷ್ಕರ ಸಂದರ್ಭ ಪ್ರತಿಭಟನಾಕಾರರಿಗೆ ಎಸ್‌ಪಿ ನೋಟಿಸ್ ನೀಡಿದ ವಿಚಾರವಾಗಿ ಮಾಜಿ ಸಚಿವ, ಕಾರ್ಕಳ ಶಾಸಕ ಸುನಿಲ್ ಕುಮಾರ್ ತರಾಟೆಗೆ ತೆಗೆದುಕೊಂಡಿದ್ದಲ್ಲದೆ, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್. ಕೆ ವಿರುದ್ಧ ಕೆಂಡಾಮಂಡಲರಾದರು. ಪ್ರತಿಭಟನೆ ಹೇಗೆ ಮಾಡಬೇಕು ಎಂದು ನೀವು ನಿರ್ಧರಿಸುತ್ತೀರಾ? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವ ಹಕ್ಕು ಎಲ್ಲರಿಗೂ ಇದೆ. ಯಾವ ರೀತಿ ಪ್ರತಿಭಟನೆ ಮಾಡಬೇಕು ಎಂದು ನಿಬಂಧನೆಗಳನ್ನು ಹೇಳಿ. ನಾವು ಮನೆಯಲ್ಲಿ ಕೂತು ಭಜನೆ ಮಾಡಬೇಕಾ? ನಮ್ಮ ಜಿಲ್ಲೆಯಲ್ಲಿ ಹೇಗೆ ಪ್ರತಿಭಟನೆ ಮಾಡಬೇಕೆಂದು ನೀವೇ ಹೇಳಿ…ಎಂದು ಸುನೀಲ್ ಕುಮಾರ್ ಆಕ್ರೋಶಗೊಂಡಿದ್ದಾರೆ. ಮಾಜಿ ಸಚಿವರ ಮಾತಿಗೆ ಎಸ್‌ಪಿ ತಿರುಗೇಟು ನೀಡಿದ್ದು, ನಾನು ಕಾನೂನು ಪ್ರಕಾರ ಕಾರ್ಯನಿರ್ವಹಿಸಿದ್ದೇನೆ ಎಂದು ಹೇಳಿದ್ದಾರೆ. ಕೆಲ ನಿಮಿಷಗಳ ಕಾಲ ಮಾತಿನ ಜಟಾಪಟಿ ಮುಂದುವರೆದಾಗ ಜಿಲ್ಲಾ ಉಸ್ತುವಾರಿ ಸಚಿವೆ ಹೆಬ್ಬಾಳ್ಕರ್, “ಸಾಕು ಸುಮ್ನಿರಪ್ಪಾ…ಜಾಸ್ತಿ ಆಯ್ತು ಎಂದು ಎಸ್‌ಪಿಗೆ ಬುದ್ಧಿವಾದ…

Read More

ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ದ್ವಿಗುಣಗೊಳಿಸಿ ಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ 21.50 ಲಕ್ಷ ರೂ. ಪಡೆದು ವಂಚಿಸಿರುವ ಬಗ್ಗೆ ನಗರದ ಸೆನ್ ಠಾಣೆಗೆ ದೂರು ನೀಡಲಾಗಿದೆ. ತಮಿಳುನಾಡಿನ ಕಣ್ಣನ್‌ (45)ಎಂಬವರ ಫೇಸ್‌ಬುಕ್ ಖಾತೆಗೆ ಬಂದ ಲಿಂಕ್ ತೆರೆದಾಗ ಅದರಲ್ಲಿದ್ದ ಮಾಹಿತಿಯನ್ನು ನಂಬಿ ಟ್ರೇಡಿಂಗ್ ಖಾತೆ ತೆರೆದಿದ್ದರು ಎನ್ನಲಾಗಿದೆ. ಬಳಿಕ ಅವರ ಖಾತೆಯಿಂದ ಮೂರು ಬಾರಿ ಹಣ ವರ್ಗಾಯಿಸಿ ಕೊಳ್ಳಲಾಗಿದೆ. ಆದರೆ ಯಾವುದೇ ಮೊತ್ತ ವಾಪಸ್ ಬಂದಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Read More

10 ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ವಿವಿಧ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಬಂಪರ್ ನೇಮಕಾತಿಗೆ ಅವಕಾಶವಿದೆ. ಸ್ಟಾಫ್ ಸೆಲೆಕ್ಷನ್ ಕಮಿಷನ್ ಜಿಡಿ ಕಾನ್ಸ್ಟೇಬಲ್ ನೇಮಕಾತಿ 2023 ರ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಇದರ ಮೂಲಕ 75768 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹೊರಡಿಸಿದ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಇಂದಿನಿಂದ ನವೆಂಬರ್ 24 ರಿಂದ ಎಸ್‌ಎಸ್ಸಿಯ ಅಧಿಕೃತ ವೆಬ್ಸೈಟ್ ssc.nic.in ಭೇಟಿ ನೀಡುವ ಮೂಲಕ ಆನ್ಲೈನ್ ಅರ್ಜಿಗಳನ್ನು ಸಲ್ಲಿಸಲು ಸಾಧ್ಯವಾಗುತ್ತದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 28 ಕೊನೆಯ ದಿನವಾಗಿದೆ. ವಿವಿಧ ಭದ್ರತಾ ಪಡೆಗಳಲ್ಲಿ ಜನರಲ್ ಡ್ಯೂಟಿ ಕಾನ್ಸ್ಟೇಬಲ್ ಹುದ್ದೆಗಳನ್ನು ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತದೆ. ಇದರಲ್ಲಿ ಬಿಎಸ್‌ಎಫ್ನ 27,875 ಹುದ್ದೆಗಳು, ಸಿಐಎಸ್‌ಎಫ್ನ 8,598 ಹುದ್ದೆಗಳು, ಸಿಆರ್ಪಿಎಫ್ನ 25,427 ಹುದ್ದೆಗಳು, ಎಸ್‌ಎಸ್ಬಿಯ 5,278 ಹುದ್ದೆಗಳು, ಐಟಿಬಿಪಿಯ 3,006 ಹುದ್ದೆಗಳು, ಅಸ್ಸಾಂ ರೈಫಲ್ಸ್ನ 4,776 ಹುದ್ದೆಗಳು ಮತ್ತು ಎಸ್‌ಎಸ್‌ಎಫ್ನ 583 ಹುದ್ದೆಗಳು ಸೇರಿವೆ. ಸಾಮರ್ಥ್ಯ ನೇಮಕಾತಿ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ…

Read More

ಒಂದೇ ಸರ್ಕಾರಿ ಹುದ್ದೆಗಾಗಿ ಇಬ್ಬರು ಅಧಿಕಾರಿಗಳು ಗುದ್ದಾಟ ನಡೆಸಿ, ಇಬ್ಬರೂ ಅಧಿಕಾರಿಗಳು ಪ್ರತ್ಯೇಕ ಕುರ್ಚಿ ಹಾಕಿಕೊಂಡು ಕುಳಿತ ಘಟನೆ ಯಾದಗಿರಿ ತಾಲೂಕು ಸಮಾಜ ಕಲ್ಯಾಣ ಇಲಾಖೆ ಕಚೇರಿಯಲ್ಲಿ ನಡೆದಿದೆ. ನಗರದ ಹೊಸಳ್ಳಿ ಕ್ರಾಸ್ ಬಳಿಯಿರುವ ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಸಂಗಪ್ಪ ಪೂಜಾರಿ ಹಾಗೂ ಡಿ.ರಾಜಕುಮಾರ್ ಎಂಬ ಇಬ್ಬರು ಅಧಿಕಾರಿಗಳ ಮಧ್ಯೆ ಕುರ್ಚಿಗಾಗಿ ಕಿತ್ತಾಟ ನಡೆಯುತ್ತಿದೆ. ಇದರಿಂದ ಇಲಾಖೆಯ ಕೆಲಸ ಕಾರ್ಯಗಳಿಗೆ ಕಚೇರಿಗೆ ಬಂದಿರುವ ಸಾರ್ವಜನಿಕರು ಒಂದೇ ಹುದ್ದೆಯಲ್ಲಿ ಇಬ್ಬರು ಅಧಿಕಾರಿಗಳನ್ನ ಕಂಡು ಗೊಂದಲಕ್ಕೆ ಸಿಲುಕಿದ್ದಾರೆ. ಸಂಗಪ್ಪ ಅವರು ಫೆ.1 ರಿಂದ ಅ.16ರ ವರೆಗೆ ಸಹಾಯಕ ನಿರ್ದೇಶಕರ ಹುದ್ದೆಯಲ್ಲಿ ಕೆಲಸ ಮಾಡಿದ್ದಾರೆ. ಇನ್ನೂ ರಾಜಕುಮಾರ್ ಅವರು ಇದೇ ಹುದ್ದೆಗೆ ಸರ್ಕಾರದಿಂದ ಆದೇಶ ತಂದು ಅಕ್ಟೋಬರ್ 16 ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಆದೇಶವನ್ನು ಪ್ರಶ್ನಿಸಿ ಸಂಗಪ್ಪ ಪೂಜಾರಿ ಅವರು ಅವಧಿಗೂ ಮುನ್ನವೆ ನನ್ನ ಜಾಗಕ್ಕೆ ಮತ್ತೊಬ್ಬರಿಗೆ ಆದೇಶ ಆಗಿದೆ ಎಂದು ಪ್ರಶ್ನಿಸಿ ಕಲಬುರಗಿ ಹೈಕೋರ್ಟ್ ವಿಭಾಗೀಯ ಪೀಠದ ಮೊರೆ ಹೋಗಿದ್ದರು. ಕೋರ್ಟ್…

Read More

ಮಂಗಳೂರು:ಸರೋವರ ಕ್ಷೇತ್ರವೆಂದೇ ಪ್ರಸಿದ್ಧಿ ಪಡೆದಿರುವ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ಅನಂತಪುರ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ಮಕರ ಸಂಭ್ರಮ ಕಾಠ್ಯಕ್ರಮ ಮತ್ತು ಮಧ್ಯಾಹ್ನ ಭಕ್ತರ ಸಮಾಲೋಚನೆ ಸಭೆ ಜರುಗಿತು. ಈ ಸಂದರ್ಭ ಶ್ರೀ ಕ್ಷೇತ್ರದ ಪರಮ ಪವಿತ್ರ ಸರೋವರದಲ್ಲಿ ಇತ್ತೀಚೆಗೆ ಪ್ರತ್ಯಕ್ಷಗೊಂಡ ಮೂರನೇ ದೇವರ ಮೊಸಳೆಗೆ ಶಾಸ್ರೋಕ್ತವಾಗಿ ವೇದ ಮಂತ್ರಘೋಷಗಳೊಂದಿಗೆ ‘ಬಬಿಯಾ’ ಎಂದು ನಾಮಕರಣ ಮಾಡಲಾಯಿತು. ಕಾರ್ಯಕ್ರಮದಲ್ಲಿ ದೇಗುಲದ ತಂತ್ರಿವರ್ಯ ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿ ದೀಪ ಬೆಳಗಿಸಿ ವಿಧಿವಿಧಾನಗಳನ್ನು ನೆರವೇರಿಸಿದರು. ಧಾರ್ಮಿಕ ಮುಂದಾಳು, ವಕೀಲ ಹಾಗೂ ಕಲಾರತ್ನ ಶಂನಾಡಿಗ ಮುಖ್ಯ ಭಾಷಣ ಮಾಡಿದರು. ಜೀರ್ಣೋದ್ಧಾರ ಬ್ರಹ್ಮಕಲಶೋತ್ಸವ ಸಮಿತಿ ಕಾರಾಧ್ಯಕ್ಷ ಮಾಧವ ಕಾರಂತ ಆಧ್ಯಕ್ಷತೆ ವಹಿಸಿದ್ದರು.ಮಲಬಾರ್ ಕಾಸರಗೋಡು ಮಂಡಳಿಯ ವಲಯ ಅಧ್ಯಕ್ಷ ಕೊಟ್ಟಾರ ವಾಸುದೇವನ್, ವಲಯ ಸದಸ್ಯ ಎಂ.ಶಂಕರ ರೈ ಉಪಸ್ಥಿತರಿದ್ದರು. ಶ್ರೀ ಕ್ಷೇತ್ರದ ಕಾರನಿರ್ವ ಹಣಾಧಿಕಾರಿ ರಮಾನಾಥ ಶೆಟ್ಟಿ ಸ್ವಾಗತಿ ಸಿದರು. ಸತ್ಯಶಂಕರ ಅನಂತಪುರ ವಂದಿಸಿದರು. ಶ್ರೀ ಅನಂತಪದ್ಮನಾಭ ಸ್ವಾಮಿಗೆ ಮಧ್ಯಾಹ್ನ ಮಹಾಪೂಜೆ ನೆರವೇರುತ್ತಿದ್ದ ಸಂದರ್ಭ…

Read More

ಉಡುಪಿ: ಇಲ್ಲಿನ ನೇಜಾರು ತೃಪ್ತಿ ನಗರದಲ್ಲಿ ನವೆಂಬರ್ 12 ರಂದು ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಎಸ್‌ಪಿ ಡಾ. ಅರುಣ್ ಕೆ ಅವರು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. “ತನಿಖೆಗೆ ಬೇಕಾದ ಎಲ್ಲಾ ದಾಖಲಾತಿ ಪ್ರಕ್ರಿಯೆ ಮಾಡಿದ್ದೇವೆ. ಆರೋಪಿ ಪ್ರವೀಣ್ ಮತ್ತು ಅಯ್ನಾಝ್ ಗೆ ಎಂಟು ತಿಂಗಳಿನಿಂದ ಪರಿಚಯವಿತ್ತು. ಇಬ್ಬರಿಗೂ ಮಧ್ಯೆಯಲ್ಲಿ ಗೆಳೆತನವಿತ್ತು. ಪ್ರವೀಣ್ – ಅಯ್ನಾಝ್ ಗೆ ಹಲವಾರು ಸಹಾಯ ಮಾಡಿದ್ದಾರೆ. ಆದರೆ ಒಂದು ತಿಂಗಳಿಂದ ಸರಿಯಾಗಿ ಮಾತನಾಡುತ್ತಿರಲಿಲ್ಲ. ಹೀಗಾಗಿ ಪ್ರವೀಣ್ ಪೊಸೆಸಿವ್ ನೆಸ್ ನಿಂದ ಕೊಲೆ ಮಾಡಬೇಕೆಂದು ಪೂರ್ವ ಸಿದ್ಧತೆ ಮಾಡಿಕೊಂಡಿದ್ದ” ಎಂದು ಮಾಹಿತಿ ನೀಡಿದರು. ಪ್ರವೀಣ್ ಅಂದು ಆರಂಭದಲ್ಲಿ ಅಯ್ನಾಝ್ ಗೆ ಮೊದಲು ದಾಳಿ ಮಾಡುತ್ತಾನೆ. ಹಸೀನಾ, ಅಫ್ನಾನ್, ಆಸಿಂ ಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಒಂದೇ ಚಾಕುವಿನಲ್ಲಿ ನಾಲ್ವರ ಕೊಲೆಗೈದಿದ್ದಾನೆ. ಬಳಿಕ ಬೇರೆ ಬೇರೆ ವಾಹನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಪರಾರಿಯಾಗಿದ್ದಾನೆ. ಕೈ ಗಾಯಕ್ಕೆ ಚಿಕಿತ್ಸೆ ಪಡೆದು, ಚಾಕು ಮನೆಯಲ್ಲೇ…

Read More

ಮಂಗಳೂರು: ಫುಡ್ ಡೆಲಿವರಿ ಬ್ಯಾಗ್‌ನಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಕದ್ರಿ ಠಾಣೆಯ ಪೊಲೀಸರು ಅಪ್ಪರ್ ಬೆಂದೂರು ರಸ್ತೆಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ವ್ಯಕ್ತಿಗಳು ಕೇರಳದ ತ್ರಿಶೂರ್ ಜಿಲ್ಲೆಯ ಮುಹಮ್ಮದ್ ಜಾಸೀಮ್ ಕೆ.ಎ. (20) ಮತ್ತು ಕೊಲ್ಲಂ ಜಿಲ್ಲೆಯ ಅಲ್ ಅನೀಶ್ (21) ಎಂದು ಗುರುತಿಸಲಾಗಿದೆ. ಅಪ್ಪರ್ ಬೆಂದೂರು 1ನೇ ಕ್ರಾಸ್ ಮೋಹನ್‌ಬಾಗ್ ಹಿಂಬದಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ರಸ್ತೆಯಲ್ಲಿ ಹೋಗುವ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡಿ ಲಾಭಗಳಿಸುವ ಯೋಜನೆ ಹಾಕಿದ್ದರು ಎನ್ನಲಾಗಿದೆ. ಬಂಧಿತರಿಂದ 40 ಸಾವಿರ ರೂ. ಮೌಲ್ಯದ 1.38 ಕೆ.ಜಿ. ಗಾಂಜಾ, ಡಿಜಿಟಲ್ ತೂಕ ಮಾಪನ, ಸ್ಕೂಟರ್, ಎರಡು ಮೊಬೈಲ್ ಫೋನ್‌ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Read More