Author: main-admin

ಮಂಗಳೂರು : ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಕರಾವಳಿ ಮೂಲದ ಕನ್ನಡಿಗ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಹುತಾತ್ಮರಾಗಿದ್ದಾರೆ. 63–ರಾಷ್ಟ್ರೀಯ ರೈಫಲ್ಸ್‌ನ ಕ್ಯಾಪ್ಟನ್‌ ಎಂ.ವಿ.ಪ್ರಾಂಜಲ್‌ ಅವರು ಮಂಗಳೂರು ರಿಫೈನರಿ ಅಂಡ್ ಪೆಟ್ರೊಕೆಮಿಕಲ್ಸ್ ಲಿಮಿಟೆಡ್‌ನ (ಎಂಆರ್‌ಪಿಎಲ್‌) ಮಾಜಿ ನಿರ್ದೇಶಕ ಎಂ.ವೆಂಕಟೇಶ್ ಅವರ ಪುತ್ರ. ಪ್ರಾಂಜಲ್‌, ಎಂಆರ್‌ಪಿಎಲ್‌ನ ದೆಹಲಿ ಪಬ್ಲಿಕ್‌ ಸ್ಕೂಲ್‌ ಹಳೆ ವಿದ್ಯಾರ್ಥಿ. ಮಂಗಳೂರಿನಲ್ಲಿ ಎಂಆರ್ ಪಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಂ.ವೆಂಕಟೇಶ್-ಅನುರಾಧಾ ದಂಪತಿಯ ಏಕೈಕ ಪುತ್ರ. ಮಂಗಳೂರಿನಲ್ಲೇ ಹುಟ್ಟಿ ಬೆಳೆದ ಪ್ರಾಂಜಲ್. ಎಂಆರ್​​ಪಿಎಲ್ ಡೆಲ್ಲಿ ಸ್ಕೂಲ್ ನಲ್ಲಿ ಹತ್ತನೇ ತರಗತಿವರೆಗೆ ವಿಧ್ಯಾಭ್ಯಾಸ ಮಾಡಿದ್ದರು. ನಂತರ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಪಡೆದಿದ್ರು. ಬಳಿಕ ಮಧ್ಯಪ್ರದೇಶದ ಮಿಲಿಟರಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಶಿಕ್ಷಣ ಪಡೆದುಕೊಂಡಿದ್ದರು. ಎರಡು ವರ್ಷಗಳ ಹಿಂದೆಯಷ್ಟೇ ಪ್ರಾಂಜಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಪ್ರಾಂಜಲ್ ಓದಿದ್ದ ಎಂಆರ್​ಪಿಎಲ್ ಡೆಲ್ಲಿ ಶಾಲೆಗೆ ಇಂದು ರಜೆ ಘೋಷಿಸಲಾಗಿದೆ.

Read More

ಬೆಳ್ತಂಗಡಿ: ಕುತ್ಲೂರಿನಲ್ಲಿ ಮನೆಯೊಂದಕ್ಕೆ ಮಂಗಳವಾರ ತಡರಾತ್ರಿ ನಕ್ಸಲರು ಭೇಟಿ ನೀಡಿದ್ದರು ಎಂಬ ವದಂತಿಯೊಂದು ಬುಧವಾರ ಬೆಳಗ್ಗೆ ಸೃಷಿಯಾಗಿತ್ತು. ಆದರೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಿಷ್ಯಂತ್‌ ಮತ್ತು ಮಂಗಳೂರು ನಗರ ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ಅವರು ಸ್ಪಷ್ಟನೆ ನೀಡಿದ್ದು, ಪ್ರಕರಣವೊಂದರ ತನಿಖೆಗಾಗಿ ಮೂಡುಬಿದಿರೆ ಪೊಲೀಸರು ಅಲ್ಲಿಗೆ ತೆರಳಿದ್ದರು ಎಂದು ತಿಳಿಸಿದ್ದಾರೆ. ಕುತ್ಲೂರು ಗ್ರಾಮದ ನಿವಾಸಿ ಜೋಸಿ ಆಂಟೋನಿ ತನ್ನ ಮನೆಗೆ ರಾತ್ರಿಯ ವೇಳೆ ಮಹಿಳೆ ಸೇರಿದಂತೆ ಅಪರಿಚಿತರ ತಂಡ ಬಂದು ಬಾಗಿಲು ಬಡಿದಿದೆ; ಆದರೆ ನಾನು ಬಾಗಿಲು ತೆರೆಯಲಿಲ್ಲ ಎಂದು ನ. 21ರ ರಾತ್ರಿ ಪೊಲೀಸರ ತುರ್ತು ಸಹಾಯವಾಣಿ 112ಕ್ಕೆ ಕರೆಮಾಡಿ ಹೇಳಿದ್ದರು. ಅವರು ಪೊಲೀಸರು ಎಂದು ಹೇಳಿದರೂ ಸಮವಸ್ತ್ರದಲ್ಲಿರದ ಕಾರಣ ಅನುಮಾನವಿದೆ, ನಕ್ಸಲರಾಗಿ ರಬಹುದು ಎಂಬ ಹೇಳಿಕೆಯನ್ನು ನೀಡಿದ್ದು ಇದು ಹಲವಾರು ಗೊಂದಲ ಗಳಿಗೆ ಕಾರಣವಾಗಿತ್ತು. ಮಾಹಿತಿ ತಿಳಿದ ತತ್‌ಕ್ಷಣ ಬೆಳ್ತಂಗಡಿ ವೃತ್ತನಿರೀಕ್ಷಕ ನಾಗೇಶ್‌ ಕದ್ರಿ, ವೇಣೂರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದರು. ನಿಜ ವಿಚಾರ ಏನು?ಇಲ್ಲಿನ ಜೋಸಿ…

Read More

ಉಡುಪಿ :ನೇಜಾರುವಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಆರೋಪಿ ಪ್ರವೀಣ್ ಅರುಣ್ ಚೌಗುಲೆ(39)ಯನ್ನು ಉಡುಪಿ ಪೊಲೀಸರು ಇಂದು ಪ್ರಧಾನ ಸಿವಿಲ್ ಹಾಗೂ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯ ಆರೋಪಿಯನ್ನು ಡಿ.5 ರವರಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ. ಬಂಧಿತ ಆರೋಪಿ ಪ್ರವೀಣ್ ನನ್ನು ನ.15ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಪೊಲೀಸರು, ಗಂಭೀರ ಪ್ರಕರಣದ ಹಿನ್ನೆಲೆಯಲ್ಲಿ ಹೆಚ್ಚಿನ ತನಿಖೆಗಾಗಿ 14 ದಿನಗಳ ಕಾಲ ಪೊಲೀಸ್ ಕಸ್ಟಡಿ ಪಡೆದುಕೊಂಡಿದ್ದರು. ಈ ವೇಳೆ ಆರೋಪಿಯನ್ನು ನ.28ರಂದು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ನ್ಯಾಯಾಲಯ ಆದೇಶ ನೀಡಿತ್ತು. ಪ್ರವೀಣ್ ನನ್ನು ಕಸ್ಟಡಿಗೆ ಪಡೆದಿದ್ದ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿ ಸ್ಥಳ ತನಿಖೆ, ಮಹಜರು, ಹೇಳಿಕೆ, ಆರೋಪಿ ಗುರುತು ಸೇರಿದಂತೆ ಎಲ್ಲ ರೀತಿಯ ತನಿಖೆ ಪ್ರಕ್ರಿಯೆಯನ್ನು ವಾರದೊಳಗೆ ಪೂರ್ಣಗೊಳಿಸಿದ್ದಾರೆ. ಇದೀಗ ಆರೋಪಿಯನ್ನು ನ.28ರವರೆಗೆ ಕಸ್ಟಡಿಯಲ್ಲಿ ಇಟ್ಟುಕೊಳ್ಳುವ ಅಗತ್ಯ ಇಲ್ಲ ಎಂಬುದನ್ನು ಮನಗಂಡ ಪೊಲೀಸರು, ಇಂದು ಬಿಗಿ ಪೊಲೀಸ್ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಡಿ.5ರಂದು…

Read More

ತಂಬಾಕು ಸೇವನೆಯಿಂದ ಮಾನವನ ಆರೋಗ್ಯಕ್ಕೆ ತುಂಬಾ ಅಪಾಯ ಸಂಭವಿಸಿದೆ. ಇದನ್ನರಿತ ವಿಟ್ಲದ ಜನತೆ ಎಚ್ಚೆತ್ತು ತಂಬಾಕು ಮಾರಾಟದ ಕಾನೂನು ಬಾಹಿರ ನಿಯಂತ್ರಣಕ್ಕಾಗಿ ಸಂಬಂದಪಟ್ಟ ಇಲಾಖೆಗೆ ಲಿಖಿತ ರೂಪದಲ್ಲಿ ತಿಳಿಸಿರುತ್ತಾರೆ. ಈ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು, ಪೊಲೀಸ್ ಇಲಾಖೆ ಜಂಟಿಯಾಗಿ ವಿವಿಧ ಅಂಗಡಿಗಳಿಗೆ ಭೇಟಿ ನೀಡಿ ಸುಮಾರು 6,600 ರೂ ದಂಡ ಸಂಗ್ರಹಿಸಿರುತ್ತಾರೆ. ದಂಡ ನೀಡಿರುವ ಹಲವು ಅಂಗಡಿ ಮಾಲಕರು ವಿಷಯವನ್ನು ಅರಿತು ಇನ್ನು ಮುಂದೆ ಕಾನೂನು ಬಾಹಿರವಾಗಿಯೂ ಅಲ್ಲದೆ ಮಾರಾಟವೇ ಮಾಡುವುದಿಲ್ಲ ಎಂಬುದಾಗಿ ತಿಳಿಸಿ ಉತ್ತಮವಾಗಿ ಇಲಾಖೆಯೊಂದಿಗೆ ಸ್ಪಂದಿಸಿರುತ್ತಾರೆ. ವಿಟ್ಲದ ಜನತೆಗೆ ಇಲಾಖೆ ಧನ್ಯವಾದ ವ್ಯಕ್ತಪಡಿಸಿದೆ.

Read More

ಬಜಪೆ : ನದಿಯ ನೀರಿಗೆ ಬಿದ್ದು ಯುವಕನೊಬ್ಬ ನೀರು ಪಾಲಾದ ಘಟನೆ ಪೊಳಲಿ ಸೇತುವೆ ಬಳಿ ಫಲ್ಗುಣಿ ನದಿಯಲ್ಲಿ ನಡೆದಿದೆ. ಕಾವೂರು ಆಕಾಶಭವನ ನಿವಾಸಿ ಪ್ರಶಾಂತ್ ಕುಮಾರ್(41) ನೀರುಪಾಲಾದ ಯುವಕ. ತನ್ನ ಗೆಳೆಯರೊಂದಿಗೆ ಪೊಳಲಿ ದೇವಸ್ಥಾನಕ್ಕೆ ತೆರಳಿದ್ದ ಪ್ರಶಾಂತ್‌ ಆಚಾರಿ, ನದಿಗೆ ಇಳಿದು ಸ್ನಾನ ಮಾಡಿದ್ದರು. ಅವರ ಶೂವೊಂದರ ದಾರ ನೀರಿನಲ್ಲಿ ನಾಪತ್ತೆಯಾಗಿತ್ತು. ಅದನ್ನು ಹೆಕ್ಕಲೆಂದು ನೀರಿಗೆ ಇಳಿದಿದ್ದ ವೇಳೆ ಅವರು ನದಿ ನೀರಿನಲ್ಲಿ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಪ್ರಶಾಂತ್‌ ಆಚಾರಿ ವಿವಾಹಿತರಾಗಿದ್ದು, ತಿಂಗಳು ಪ್ರಾಯದ ಮಗು ಇದ್ದು, ಮಗುವು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದೆ ಎನ್ನಲಾಗಿದೆ. ಸ್ಥಳಕ್ಕೆ ಬಜಪೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.

Read More

ಮಣಿಪಾಲ: ಬೈಕ್‌ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಯುವತಿಯೊಬ್ಬರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಮಣಿಪಾಲದ ರೋಯಲ್ ಅಂಬೆಸಿ ಅಪಾರ್ಟ್‌ಮೆಂಟ್ ಸಮೀಪ ನಡೆದಿದೆ. ಮೃತರನ್ನು ಹಿರಿಯಡಕ ನಿವಾಸಿ ಸುಶ್ಮಿತಾ(19) ಎಂದು ಗುರುತಿಸಲಾಗಿದೆ. ಬೈಕ್ ಸವಾರ ರಾಹುಲ್, ಸ್ಕೂಟರ್ ಸವಾರರಾದ ಅನೂಜ್ ಮತ್ತು ಆದರ್ಶ ಎಂಬವರು ಗಾಯಗೊಂಡಿದ್ದಾರೆ. ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ರಸ್ತೆಯ ಕಾಯಿನ್ ಸರ್ಕಲ್ ನಿಂದ ಸಿಂಡಿಕೇಟ್ ಸರ್ಕಲ್ ಕಡೆಗೆ ಹೋಗುತ್ತಿದ್ದಾಗ ಬೈಕಿಗೆ, ಅದೇ ದಿಕ್ಕಿನಲ್ಲಿ ಬಂದ ಸ್ಕೂಟರ್ ಡಿಕ್ಕಿ ಹೊಡೆದಿದೆ. ಇದರಿಂದ ರಸ್ತೆಗೆ ಬಿದ್ದು ನಾಲ್ವರು ಸವಾರರು ಗಾಯಗೊಂಡರು. ಇವರಲ್ಲಿ ಗಂಭೀರವಾಗಿ ಗಾಯಗೊಂಡ ಸುಶ್ಮಿತಾ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉಡುಪಿ: ನೇಜಾರಿನಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಆರೋಪಿ ಪ್ರವೀಣ್‌ ಚೌಗಲೆಯ ಮಹಜರು ಪ್ರಕ್ರಿಯೆ ಶೇ.98ರಷ್ಟು ಪೂರ್ಣಗೊಂಡಿದೆ. ಪೊಲೀಸರು ಆತನನ್ನು ನ.28ರ ವರೆಗೆ ಕಸ್ಟಡಿಗೆ ತೆಗೆದುಕೊಂಡಿದ್ದು, ತನಿಖೆ ಈಗಾಗಲೇ ಬಹುತೇಕ ಪೂರ್ಣಗೊಂಡಿರುವ ಕಾರಣ ಆ ದಿನಾಂಕಕ್ಕೂ ಮುನ್ನ ಆತನನ್ನು ಕೋರ್ಟ್‌ಗೆ ಹಾಜರುಪಡಿಸುವ ಸಾಧ್ಯತೆಗಳಿವೆ. ಸಂಪೂರ್ಣ ಮಾಹಿತಿ ಸಂಗ್ರಹಪೊಲೀಸರು ನಿರಂತರವಾಗಿ ಆತನನ್ನು ಮಹಜರು ಪ್ರಕ್ರಿಯೆಗೆ ಒಳಪಡಿಸಿದ್ದು, ಕೃತ್ಯಕ್ಕೆ ಬಳಸಿದ್ದ ಚಾಕು, ಮಾಸ್ಕ್, ಬ್ಯಾಗ್‌ ಸಹಿತ ಇತರ ವಸ್ತುಗಳು ಆತನ ಬಿಜೈಯ ಫ್ಲ್ಯಾಟ್‌ನಲ್ಲಿ ಪತ್ತೆಯಾಗಿವೆ. ಬಿಜೈನಲ್ಲಿರುವ ಮೃತ ಯುವತಿ ಅಯ್ನಾಝ್ ಬಾಡಿಗೆ ರೂಂ ಬಳಿ ಪಾರ್ಕ್‌ ಮಾಡಿದ್ದ ಚೌಗಲೆ ಹೆಸರಿನಲ್ಲಿರುವ ಸ್ಕೂಟರ್‌ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರವೀಣ್‌ ಚೌಗಲೆ ಕಾರು ಖರೀದಿ ಮಾಡಿದ ಬಳಿಕ ತನ್ನಲ್ಲಿದ್ದ ಸ್ಕೂಟರ್‌ ಅನ್ನು ಸಹೋದ್ಯೋಗಿ ಅಯ್ನಾಝ್ಗೆ ಬಳಕೆ ಮಾಡಲು ನೀಡಿದ್ದ. ಆರೋಪಿ ಆಕೆಗೆ ಸ್ಕೂಟರ್‌ ಅನ್ನು ಮಾರಾಟ ಮಾಡಿದ್ದನೇ ಅಥವಾ ಉಪಯೋಗಿಸಲು ನೀಡದ್ದನೇ ಎಂಬುದನ್ನು ಪೊಲೀಸರು ಇನ್ನಷ್ಟೇ ವಿಚಾರಣೆ ನಡೆಸಬೇಕಿದೆ. ಸುಟ್ಟ ಬಟ್ಟೆ ಪತ್ತೆನೇಜಾರಿನಲ್ಲಿ ಕೊಲೆ…

Read More

ಹಿರಿಯ ಭೂ ವಿಜ್ಞಾನಿ ಪ್ರತಿಮಾ ಕೊಲೆ ಪ್ರಕರಣ ಸಂಬಂಧ ತನಿಖೆ ವೇಳೆ ಸ್ಫೋಟಕ ಮಾಹಿತಿ ಬಯಲಾಗಿದೆ. ಪ್ರತಿಮಾ ಕೊಲೆ ಕೆಲಸದ ಕಾರಣಕ್ಕೆ ನಡೆದಿಲ್ಲ, ಆರೋಪಿ ಕಿರಣ್​​ ಅರೆಸ್ಟ್ ಆದಾಗ ಸುಳ್ಳು ಹೇಳಿದ್ದಾನೆ. ಕಿರಣ್​​ ಹಣಕ್ಕಾಗಿ ಕೊಲೆ ಮಾಡಿದ್ದು ಬಹಿರಂಗವಾಗಿದ್ದು, ವಿಚಾರಣೆಯ ವೇಳೆ ಅಸಲಿ ಸತ್ಯ ಬಯಲಾಗಿದೆ.ತಲಘಟ್ಟಪುರ ಇನ್ಸ್​ಪೆಕ್ಟರ್​​​​​​ ಜಗದೀಶ್ ನೇತೃತ್ವದಲ್ಲಿ ತನಿಖೆ ನಡೆದಿದೆ. ಆರೋಪಿ ಕೊಲೆ ಬಳಿಕ ಮನೆಯಲ್ಲಿ ಹಣ, ಒಡವೆ ದೋಚಿದ್ದಾನೆ. ಪ್ರತಿಮಾ ಮನೆಯಲ್ಲಿದ್ದ 5 ಲಕ್ಷ ಹಣವನ್ನೂ ಹಾಗೂ ಪ್ರತಿಮಾ ಕೈನಲ್ಲಿದ್ದ ಎರಡು ಚಿನ್ನದ ಬಳೆ, ಬ್ರೇಸ್​ಲೆಟ್ ದೋಚಿದ್ದಾನೆ. 4 ಲಕ್ಷ ಮೌಲ್ಯದ ಚಿನ್ನಾಭರಣ ಹೊತ್ತೊಯ್ದಿದ್ದಾನೆ. ಹಣವನ್ನು ಕೋಣನಕುಂಟೆಯ ಶಿವು ಮನೆಯಲ್ಲಿ ಇಟ್ಟಿದ್ದ.ಯಾರೋ ಕೊಡಬೇಕಿದ್ದ ಹಣ, ನಿಮ್ಮ ಮನೆಯಲ್ಲಿ ಇರ್ಲಿ ಎಂದಿದ್ದನಂತೆ, ತಲಘಟ್ಟಪುರ ಪೊಲೀಸರು ಶಿವುನನ್ನು ಸಾಕ್ಷಿಯಾಗಿ ಮಾಡಿದ್ದಾರೆ. ಕಿರಣ್​ ಬಳಿ ಐದು ಲಕ್ಷ ನಗದು ಮತ್ತು ಚಿನ್ನ ವಶಕ್ಕೆ ಪಡೆದಿದ್ದಾರೆ.ಪ್ಲಾನ್ ಮಾಡಿಯೇ ಮನೆಗೆ ನುಗ್ಗಿ ಕೊಲೆ ಮಾಡಿರುವುದು ಬಯಲಾಗಿದೆ.

Read More

ಉಳ್ಳಾಲ: ಮುಡಿಪು ಬಳಿಯ ಕಾರ್ ಗ್ಯಾರೇಜ್‌ನಲ್ಲಿ ನೇಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಯುವಕನನ್ನು ಕಿಶೋರ್ (25) ಎಂದು ಗುರುತಿಸಲಾಗಿದ್ದು, ಮುಡಿಪುವಿನಲ್ಲಿ ಜಯಾ ಎಂಬುವರಿಗೆ ಸೇರಿದ್ದ ಕಾರು ಗ್ಯಾರೇಜ್‌ನಲ್ಲಿ ಕಬ್ಬಿಣದ ರಾಡ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಿಶೋರ್‌ ಕಂಕನಾಡಿಯ ಕಾರ್ ಶೋ ರೂಂನಲ್ಲಿ ಮೆಕ್ಯಾನಿಕ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ನ.20 ರಂದು ಕೆಲಸಕ್ಕೆ ಹೋಗಿದ್ದು ತಡವಾದರೂ ಮನೆಗೆ ಬಂದಿರಲಿಲ್ಲ. ಹೀಗಾಗಿ ಆತನ ಕುಟುಂಬಸ್ಥರು ಸಂಬಂಧಿಕರ ಮನೆಗಳಲ್ಲಿ ಹುಡುಕಾಡಿದರೂ ಕಿಶೋರ್ ಪತ್ತೆಯಾಗಿರಲಿಲ್ಲ. ಕೊನೆಗೆ ಕಿಶೋರ್‌ ಪ್ರತಿದಿನ ಕೆಲಸ ಬಿಟ್ಟು ಕೆಲಹೊತ್ತು ಕುಳಿತುಕೊಳ್ಳುತ್ತಿದ್ದ ಮುಡಿಪುವಿನ ಗ್ಯಾರೇಜ್‌ ನಲ್ಲಿ ಹುಡುಕಾಟ ನಡೆಸಿದ್ದರು. ಆ ವೇಳೆ ಆತನ ಬೈಕ್‌ ಕಂಡಿದ್ದು, ಗ್ಯಾರೇಜ್‌ನಲ್ಲಿ ಕಬ್ಬಿಣದ ರಾಡ್‌ಗೆ ಕಿಶೋರ್ ನೇಣು ಬಿಗಿದುಕೊಂಡಿರುವುದು ಪತ್ತೆಯಾಗಿದೆ. ಕಿಶೋರ್ ಕೆಲಸ ಮಾಡುತ್ತಿದ್ದ ಶೋರೂಂನ ಮೇಲ್ವಿಚಾರಕ ಆರು ತಿಂಗಳ ಹಿಂದೆಯಷ್ಟೇ ಆತ್ಮಹತ್ಯೆ ಮಾಡಿಕೊಂಡಿದ್ದರು. ಆ ಮೇಲ್ವಿಚಾರಕ ಕಿಶೋರ್ ಅವರಿಗೆ ಅತ್ಯಂತ ಆತ್ಮೀಯ ಸ್ನೇಹಿತರಾಗಿದ್ದು, ಆತನ ಅಗಲಿಕೆಯ ಖಿನ್ನತೆಯಿಂದ ಕಿಶೋರ್‌ ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದೆ. ಕೊಣಾಜೆ…

Read More

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ ನವೆಂಬರ್ 21ರಂದು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯುತಿದೆ. ಸಮ್ಮೇಳನದ ಅಂಗವಾಗಿ ಏರ್ಡಿಸಿದ ಛಾಯಾಚಿತ್ರ ಪ್ರದರ್ಶನವನ್ನು ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ಉದ್ಘಾಟಿಸಿದರು. ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮತ್ತಿತರರು ಉಪಸ್ಥಿತರಿದ್ದರು.

Read More