Author: main-admin

ಪುತ್ತೂರು : ರಾಷ್ಟ್ರೀಯ ಹೆದ್ದಾರಿ ಬಳಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಉಪ್ಪಿನಂಗಡಿ 34 ನೆಕ್ಕಿಲಾಡಿಯ ಭಾರತ್ ಪೆಟ್ರೋಲ್ ಬಂಕ್ ಎದುರಿನಲ್ಲಿ ಇಂದು ನಡೆದಿದೆ. ಮೃತ ವ್ಯಕ್ತಿಯನ್ನು ಆಂಧ್ರ ಮೂಲದ ಶೇಖ್ ಖಾನ್ ಎಂದು ಗುರುತಿಸಲಾಗಿದೆ.ಇಂದು ಬೆಳಗ್ಗೆ 7:30ರ ಸುಮಾರಿಗೆ ಈ ಘಟನೆ ಬೆಳಕಿಗೆ ಬಂದಿದೆ. ಮುಂಜಾನೆ ಯಾವುದೋ ವಾಹನ ಅವರಿಗೆ ಢಿಕ್ಕಿ ಹೊಡೆದು ಪರಾರಿಯಾಗಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಹಾಗೂ ಪುತ್ತೂರು ಸಂಚಾರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು :ರಾಜ್ಯದಲ್ಲಿ ತಲ್ಲಣ ಮೂಡಿಸಿದ್ದ ಗಣಿ ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಕೊನೆಗೂ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಕೊಲೆಗೆ ನಿಜವಾದ ಕಾರಣ ಬಯಲಾಗಿದೆ. ಪೊಲೀಸರ ವಿಚಾರಣೆ ವೇಳೆ ಹಣ, ಚಿನ್ನಾಭರಣಕ್ಕಾಗಿ ಪ್ರತಿಮಾರನ್ನು ಕೊಲೆ ಮಾಡಿರುವುದಾಗಿ ಆರೋಪಿ ಕಿರಣ್ ಬಾಯಿ ಬಿಟ್ಟಿದ್ದಾನೆ. ಪ್ರತಿಮಾ ಕೊಲೆಗೆ ಸಂಚು ರೂಪಿಸಿ ಮನೆಗೆ ನುಗ್ಗಿ ಪ್ರತಿಮಾ ಅವರನ್ನು ಕೊಲೆ ಮಾಡಿ, ಬಳಿಕ ಮನೆಯಲ್ಲಿದ್ದ ಚಿನ್ನಾಭರಣ, ಹಣ ಕದ್ದು ಪರಾರಿಯಾಗಿದ್ದನು. 5 ಲಕ್ಷ ರೂ. ನಗದು, 3 ರಿಂದ 4 ಲಕ್ಷ ಮೌಲ್ಯದ 2 ಚಿನ್ನದ ಬಳೆ, ಬ್ರೇಸ್​​ ಲೇಟ್ ಆರೋಪಿ​ ಕಿರಣ್​ ದೋಚಿದ್ದನು. ಬಳಿಕ ಕಳ್ಳತನ ಮಾಡಿದ್ದ ಹಣ ಮತ್ತು ಚಿನ್ನವನ್ನು ಸ್ನೇಹಿತನ ಮನೆಯಲ್ಲಿ ಇಟ್ಟು ತಾನು ದೂರ ಹೋಗುವುದಿದೆ.ಬಂದ ಮೇಲೆ ತೆಗೆದುಕೊಳ್ಳುತ್ತೇನೆ ಎಂದು ಅಲ್ಲಿಯೇ ಇಟ್ಟಿದ್ದನು.ಈಗ ಪೋಲಿಸರು ಹಣ ಮತ್ತು ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

Read More

ಮಂಗಳೂರು : ನಗರದ ಗ್ರಾಹಕ ನ್ಯಾಯಾಲಯ ಗ್ರಾಹಕರೊಬ್ಬರ ಪರವಾಗಿ ನೀಡಿರುವ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಮಂಗಳೂರಿನ ಹೆಸರಾಂತ ರಿಯಲ್ ಎಸ್ಟೇಟ್ ಸಂಸ್ಥೆಯ ಐವರು ಬಿಲ್ಡರ್‌ಗಳಿಗೆ ಮೂರು ವರ್ಷ ಕಾರಾಗೃಹ ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ನೀಡುವಂತೆ ಆದೇಶಿಸಿದೆ. ನಗರದ ರಾಮ್ ಭವನದಲ್ಲಿ ಕಚೇರಿ ಹೊಂದಿರುವ ನಗರದ ಮಾರಿಯನ್ ಇನ್ಸಾಸ್ಪಕ್ಟರ್ ಸಂಸ್ಥೆಯ ಪಾಲುದಾರರು ಉಜ್ವಲ್‌ ಡಿಸೋಜ ಮತ್ತು ನವೀನ್ ಕಾರ್ಡೋಜ ಹಾಗೂ ಅವರೊಂದಿಗೆ ಅಭಿವೃದ್ಧಿ ಕಾರ್ಯದಲ್ಲಿ ಪಾಲುದಾರಿಕೆ ಹೊಂದಿರುವ ವಿಲಿಯಂ ಸಲ್ದಾನ್ಹ, ಗಾಯತ್ರಿ ಮತ್ತು ಲೂಸಿ ಸಲ್ದಾನ್ಹ ಶಿಕ್ಷೆಗೊಳಗಾದವರು. 2013ರಲ್ಲಿ ಮಂಗಳೂರಿನ ಗುಜ್ಜರಕೆರೆ ಎಂಬಲ್ಲಿ ಬಹುಮಹಡಿ ಅಪಾರ್ಟೆಂಟ್ ನಲ್ಲಿ ಫ್ಲಾಟ್ ವೊಂದನ್ನು ಕಾರ್ ಪಾರ್ಕಿಂಗ್ ಸಹಿತ 40 ಲಕ್ಷ ರೂ.ಗೆ ಖರೀದಿಸಲು ಒಪ್ಪಂದ ಮಾಡಿ ಡಾ.ಲವೀನಾ ಹಣ ನೀಡಿದ್ದರು. ಹಣ ಪಡೆದ ಬಳಿಕ ನೀಡಿರುವ ಮಾರಾಟ ಪತ್ರದಲ್ಲಿ ಈ ಹಿಂದೆ ಒಪ್ಪಿರುವಂತೆ ಆರೋಪಿಗಳು ಕಾರು ಪಾರ್ಕಿಂಗ್ ಸೌಲಭ್ಯ ನೀಡಿರಲಿಲ್ಲ. ಆಗ ಅವರು ಆರೋಪಿಗಳನ್ನು ಭೇಟಿ ಮಾಡಿ ಕಾರು ಪಾರ್ಕಿಂಗ್ ಒದಗಿಸುವಂತೆ…

Read More

ಬಂಟ್ವಾಳ: ಬಂಟ್ವಾಳ ಡಿ.ವೈ.ಎಸ್. ಪಿ.ಯಾಗಿದ್ದ ಪ್ರತಾಪ್ ಸಿಂಗ್ ಥೋರಾಟ್ ಅವರನ್ನು ಬೆಂಗಳೂರು ಲೋಕಾಯುಕ್ತ ಕಚೇರಿಗೆ ವರ್ಗಾವಣೆ ಮಾಡಿ ಸರಕಾರ ಅದೇಶ ಹೊರಡಿಸಿದೆ‌.ಪ್ರಸ್ತುತ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಡಿ.ಸಿ.ಆರ್.ಬಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಜಯಪ್ರಸಾದ್ ಇವರನ್ನು ಬಂಟ್ವಾಳ ಡಿವೈಎಸ್ಪಿಯಾಗಿ ಪೊಲೀಸ್ ಇಲಾಖೆ ನೇಮಕ ಮಾಡಲಾಗಿದೆ.ವೆಲೆಂಟೈನ್ ಡಿ.ಸೋಜ ಅವರ ವರ್ಗಾವಣೆ ಬಳಿಕ ಬಂಟ್ವಾಳದಲ್ಲಿ ಡಿ.ವೈಎಸ್.ಪಿ.ಯಾಗಿ ಕೆಲ ವರ್ಷಗಳಿಂದ ಕರ್ತವ್ಯ ಮಾಡುತ್ತಿದ್ದರು.ಇದೀಗ ರಾಜ್ಯದಲ್ಲಿ ಕೆಲವು ಪೋಲೀಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಅದೇಶ ಹೊರಡಿಸಿದೆ.

Read More

ಬಂಟ್ವಾಳ: ಕಳೆದ ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಳೆಯ ಆರೋಪಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೋಲಿಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯ ಪುದು ನಿವಾಸಿ ಮಹಮ್ಮದ್ ಜಯ್ನುದ್ದೀನ್ ಬಂಧಿತ ಆರೋಪಿ. ಸಾರ್ವಜನಿಕ ಸ್ಥಳದಲ್ಲಿ ಶಾಂತಿಭಂಗ ಉಂಟು ಮಾಡುತ್ತಿದ್ದ ಕಾರಣಕದಕ್ಕಾಗಿ 2021 ರ ಡಿ. 21 ರಂದು ಈತನ ಮೇಲೆ ಪ್ರಕರಣ ದಾಖಲಾಗಿತ್ತು. ಅ ಬಳಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಈತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಹಾಗೂ ಉಪನಿರೀಕ್ಷರುಗಳಾದ ಹರೀಶ್ ಮತ್ತು ಮೂರ್ತಿ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ರಾಧಕೃಷ್ಣ ,ಪುನೀತ್ ಮತ್ತು ನಾಗನಾಥ್ ಅವರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Read More

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕರ ಬಗ್ಗೆ ನಿಂದನಾತ್ಮಕ ಬರಹ ಹಾಗೂ ಗರ್ಭಗುಡಿಯ ಪೋಟೋ ತೆಗೆದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ದ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ವರ್ಗದವರು ಹಾಗೂ ಒಳಾಂಗಣ ನೌಕರರು ದೂರು ನೀಡಿದ್ದು, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಗರ್ಭಗುಡಿಯ ಫೋಟೋ ತೆಗೆಯುಲು ನಿಷೇಧವಿದ್ದರೂ ಕುಲ್ಕುಂದದ ವ್ಯಕ್ತಿಯೊಬ್ಬರು ಗರ್ಭ ಗುಡಿಯ ಪೋಟೋ ತೆಗೆದಿದ್ದಾರೆ. ಅಲ್ಲದೆ ಈ ಫೋಟೋವನ್ನು ಕುಕ್ಕೆ ಶ್ರೀ ದೇವಾಲಯ ಉಳಿಸಿ, ಶೈವಾಗಮ ಕ್ಷೇತ್ರ ಶ್ರೀ ಕುಕ್ಕೆ ವಾಟ್ಸಾಪ್ ಗ್ರೂಪ್ ಗಳಲ್ಲಿ ಹಂಚಿಕೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದಲ್ಲದೆ ಅರ್ಚಕರು, ಪುರೋಹಿತರ ನ್ನು ಉದ್ದೇಶಿಸಿ ಅವ್ಯಾಚ ಶಬ್ದಗಳನ್ನು, ನಿಂಧನಾತ್ಮಕವಾಗಿ ಬರೆದು ಇಲ್ಲಿನ ಅರ್ಚಕರನ್ನು ತೇಜೋವದೆ ಮಾಡುವ ಬರಹಗಳನ್ನು ಬರೆದಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ತುಪ್ಪ ಕಳವು ಆಗುತ್ತಿದೆಯೆಂಬ ಚರ್ಚೆ: “ತುಪ್ಪ ಕಳವಾಗುತ್ತಿರುವ ಬಗ್ಗೆ ಮೂರು ಬಾರಿ ದೂರು ಕೊಟ್ಟರೂ ಕಮಿಷನ್ ಆಸೆಗೆ ಠಾಣೆಗೆ ಕಾರ್ಯನಿರ್ವಹಣಾಧಿಕಾರಿ ದೂರು ನೀಡಿಲ್ಲ ,ಕದ್ದ ತುಪ್ಪದಲ್ಲಿ ಅವರಿಗೂ…

Read More

ಕಾಸರಗೋಡು: ಕೇರಳ-ಕರ್ನಾಟಕದ ಕಣ್ಣೂರು- ಕೊಡಗು ಗಡಿ ಪ್ರದೇಶದಲ್ಲಿ ಕೇರಳ ನಕ್ಸಲ್ ನಿಗ್ರಹ ಪಡೆ (ತಂಡ‌ರ್ ಬೋಲ್ಟ್) ಮತ್ತು ನಕ್ಸಲರ ಮಧ್ಯೆ ಗುಂಡಿನ ಚಕಮಕಿ ನಡೆದಿದ್ದು, ಓರ್ವ ನಕ್ಸಲ್ ಗಾಯಗೊಂಡಿದ್ದಾನೆ. ಆಂಧ್ರಪ್ರದೇಶದ ಲತಾ ಮತ್ತು ತಮಿಳುನಾಡಿನ ವನಜಾಕ್ಷಿ ಪರಾರಿಯಾಗಿದ್ದಾರೆ. ಅರಣ್ಯದಿಂದ ಪರಾರಿಯಾಗಿರುವ ಈ ಇಬ್ಬರು ಬಸ್‌ನಲ್ಲಿ ರೈಲು ನಿಲ್ದಾಣಕ್ಕೆ ಬಂದು ಅಲ್ಲಿಂದ ರೈಲಿನಲ್ಲಿ ಪ್ರಯಾಣಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕಾಸರಗೋಡು ಸಹಿತ ರಾಜ್ಯದ ಎಲ್ಲ ರೈಲು ನಿಲ್ದಾಣಗಳಲ್ಲಿ ಪೊಲೀಸರು ಬಿಗು ತಪಾಸಣೆ ನಡೆಸುತ್ತಿದ್ದಾರೆ. ಮಾತ್ರವಲ್ಲ ಕಣ್ಣೂರು ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಗುಂಡಿನ ಚಕಮಕಿ ನಡೆದ ಸ್ಥಳದಿಂದ ಮೂರು ರೈಫಲ್‌ಗಳು, ಒಂದು ಲ್ಯಾಪ್ ಟಾಪ್, ನಾಲ್ಕು ಮೊಬೈಲ್ ಫೋನ್ ಗಳು ಹಾಗೂ ಎರಡು ಟೆಂಟ್‌ಗಳನ್ನು ವಶಪಡಿಸಲಾಗಿದೆ. ಈ ಸ್ಥಳದಲ್ಲಿ 9 ಮಂದಿ ನಕ್ಸಲರು ಇದ್ದಿರಬಹುದೆಂದು ಶಂಕಿಸಲಾಗಿದೆ. ಪರಾರಿಯಾಗಿದ್ದವರು ಕಬಿನಿ ದಳದವರಾಗಿದ್ದಾರೆ. ಈ ದಳದ ಮುಖಂಡ ಮೊಯಿದೀನ್ ಈ ಪ್ರದೇಶದಲ್ಲಿ ತಂಗಿದ್ದನೆಂದು ಪೊಲೀಸರಿಗೆ ಮಾಹಿತಿ ಲಭಿಸಿದೆ. ಹೆಚ್ಚುವರಿ ಪೊಲೀಸ್ ಪಡೆಯನ್ನು ಸ್ಥಳಕ್ಕೆ ಕಳುಹಿಸಲಾಗಿದೆ.

Read More

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆದಿದ್ದು, 71 ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಐಪಿಎಸ್ ಅಧಿಕಾರಿ ಸೌಮೇಂದು ಮುಖರ್ಜಿ ಆದೇಶ ಹೊರಡಿಸಿದ್ದು ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಈ ಕೆಳಕಂಡ ಪೊಲೀಸ್ ಇನ್ಸ್ಪೆಕ್ಟರ್ (ಸಿವಿಲ್) ರವರುಗಳನ್ನು ಆಡಳಿತಾತ್ಮಕ ಕಾರಣಗಳಿಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಅವರುಗಳ ಹೆಸರಿನ ಮುಂದೆ ಸೂಚಿಸಿರುವ ಸ್ಥಳಕ್ಕೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ ಎಂದು ಸುತ್ತೋಲೆ ಹೊರಡಿಸಿದ್ದಾರೆ. ಯಾವುದೇ ಸೇರುವಿಕೆ ಕಾಲವನ್ನು ಉಪಯೋಗಿಸಿಕೊಳ್ಳದೆ ವರ್ಗಾಯಿಸಲಾದ ಸ್ಥಳದ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ಸೂಚಿಸುವುದು ಹಾಗೂ ಬಿಡುಗಡೆಗೊಂಡ ಮತ್ತು ವರದಿ ಮಾಡಿದ ಬಗ್ಗೆ ಈ ಕಛೇರಿಗೆ ಪಾಲನಾ ವರದಿ ಸಲ್ಲಿಸುವುದು.ಮೇಲ್ಕಂಡ ವರ್ಗಾವಣೆ ಆದೇಶದಲ್ಲಿ ಸ್ಥಳ ನಿಯುಕ್ತಿಗೊಳಿಸದೆ ಇರುವ ಪಿ.ಐ.(ಸಿವಿಲ್) ವೃಂದದ ಅಧಿಕಾರಿಗಳು ಮುಂದಿನ ಸ್ಥಳ ನಿಯುಕ್ತಿಗಾಗಿ ಪೊಲೀಸ್ ಪ್ರಧಾನ ಕಛೇರಿಯಲ್ಲಿ ವರದಿ ಮಾಡಿಕೊಳ್ಳುವುದು ಎಂದು ಸೂಚನೆ ನೀಡಿದ್ದಾರೆ.

Read More

ಮಂಗಳೂರು: ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಅವರು ಜಿಲ್ಲೆಗೆ ಮೊದಲ ಬಾರಿ ಆಗಮಿಸಿದ್ದಾರೆ. ಸಹಕಾರಿ ಇಲಾಖೆಯ ಆಳ ಅಗಲವನ್ನು ಬಲ್ಲ ಇವರು ಸಚಿವರಾಗಿರುವುದು ನಮ್ಮೆಲ್ಲರ ಪುಣ್ಯ” ಎಂದು ಎಸ್ ಸಿಡಿಸಿಸಿ ಬ್ಯಾಂಕ್ (SCDCC bank) ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು. ಬಳಿಕ ಮಾತಾಡಿದ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಅವರು, “ಬೇರೆ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಹಕಾರಿ ತತ್ವಗಳ ಸರಿಯಾದ ಪಾಲನೆಯಾಗುತ್ತಿದೆ. ಸಹಕಾರಿ ಆಂದೋಲನದ ಬೇಡಿಕೆ ಈಡೇರಿಸುವುದು ನಮ್ಮ ಮುಖ್ಯ ಜವಾಬ್ದಾರಿಯಾಗಿದೆ. ಇದಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ. ರೈತರಿಗೆ ಸಾಲ ನೀಡಿಕೆಯಲ್ಲಿ ಬ್ಯಾಂಕ್ ಗಳಿಗೆ ಹೆಚ್ಚಿನ ಲಾಭ ಇರದಿದ್ದರೂ ವ್ಯವಸಾಯೇತರ ಸಾಲ ನೀಡಿಕೆಯಲ್ಲಿ ಅದನ್ನು ಸರಿದೂಗಿಸುವ ಕೆಲಸವನ್ನು ಎಸ್ ಸಿಡಿಸಿಸಿ ಬ್ಯಾಂಕ್ ಮಾಡುತ್ತಿದೆ. ಈ ಮೂಲಕ ಇತರ ಬ್ಯಾಂಕ್ ಗಳಿಗೆ ಮಾದರಿಯಾಗಿದೆ. ಬ್ಯಾಂಕ್ ಅಧ್ಯಕ್ಷರಿಂದ ಹಿಡಿದು ಸಿಬ್ಬಂದಿಯವರೆಗೆ ಎಲ್ಲರೂ ಗ್ರಾಹಕರ ಹಿತಚಿಂತನೆಯನ್ನು ಕಾಯುತ್ತಿರುವುದು ಖುಷಿಯ ವಿಚಾರ”ಎಂದರು.“ನಮ್ಮೆಲ್ಲರ ಸಹಕಾರಿಗಳ ಉದ್ದೇಶ ಏನೆಂದರೆ ಸಹಕಾರಿ ಆಂದೋಲನದಿಂದ ಪ್ರಯೋಜನ ಪಡೆದು…

Read More

ಕಾಂಗ್ರೆಸ್ ಸರ್ಕಾರದ ಐದು ಭರವಸೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ಪ್ರತಿ ತಿಂಗಳು 2000 ರೂ.ಹಣ ಜಮಾ ಮಾಡಲಾಗುತ್ತಿದೆ. ಆದರೆ ಕೆಲವರ ಖಾತೆಗೆ ಇನ್ನೂ ಕೂಡ ಜಮಾ ಆಗಿಲ್ಲ. ಇಲ್ಲಿಯವರೆಗೆ 1.9 ಕೋಟಿ ಮಹಿಳೆಯರ ಖಾತೆಗೆ ಹಣ ತಲುಪಿದೆ ಆದರೆ ಇನ್ನು ಸುಮಾರು 9 ಲಕ್ಷದಷ್ಟು ಮಹಿಳೆಯರಿಗೆ ಹಣ ಸಂದಾಯವಾಗಿಲ್ಲ. ಇತ್ತೀಚಿಗೆ ಈ ಬಗ್ಗೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅರ್ಜಿ ಸಲ್ಲಿಸಿದ ಪ್ರತಿಯೊಬ್ಬ ಯಜಮಾನಿಯರ ಅಕೌಂಟ್ ಗೆ ಹಣ ಬರುತ್ತೆ, ಇದಕ್ಕಾಗಿ ಸರಳ ಸೀಡಿಂಗ್ ಆಗದೆ ಇರುವುದು ಹಾಗೂ ಕೆಲವು ತಾಂತ್ರಿಕ ದೋಷಗಳಿಂದ ಹಣ ಬಂದಿಲ್ಲ ಎಂದರು. ಗೃಹಲಕ್ಷ್ಮಿ ಯೋಜನೆಗೆ ಹಣ ಹಾಕಲು ಸರ್ಕಾರದ ಬಳಿ ದುಡ್ಡಿಲ್ಲ ಎಂದೆಲ್ಲಾ ಜನರು ಮಾತನಾಡಿಕೊಳ್ಳುತ್ತಿದ್ದಾರೆ, ಆದರೆ ಸಮಸ್ಯೆ ಅದಲ್ಲ. ನಾವು ಗೃಹಲಕ್ಷ್ಮಿ ಯೋಜನೆಗಾಗಿ ಹಣ ಮೀಸಲಿಟ್ಟಿದ್ದೇವೆ ಹಾಗಾಗಿ ಮಿಸ್ ಆಗದೆ ಪ್ರತಿಯೊಬ್ಬರ ಖಾತೆಗೂ ಹಣ ಜಮಾ ಮಾಡಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ. ಯಜಮಾನಿಯರು ಏನು ಮಾಡಬೇಕು..? ನಿಮ್ಮ ಖಾತೆಗೆ ಇನ್ನೂ ಹಣ…

Read More