ಪುತ್ತೂರು: ವಿಷಪೂರಿತ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಶಾಸಕ ಸಂಜೀವ ಮಠಂದೂರು ಅವರನ್ನು ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ಮಾಡಿದರು.ಹಿರೇಬಂಡಾಡಿಯಲ್ಲಿ ಮನೆ ಬಳಿಯ ತೋಟಕ್ಕೆ ಹೋದ ವೇಳೆ ಅವರಿಗೆ ವಿಷಪೂರಿತ ಕಟ್ಟು ಹಾವು (ಕ್ರೈಟ್) ಕಡಿದಿತ್ತು. ಅವರಿಗೆ ಪ್ರಥಮ ಚಿಕಿತ್ಸೆ ಕೊಡಿಸಿ, ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರಿನ ಮಹಾವೀರ ಮೆಡಿಕಲ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂಜೀವ ಮಠಂದೂರು ಅವರನ್ನು ಭೇಟಿ ಮಾಡಿದ ಸಂಸದ ನಳಿನ್ ಕುಮಾರ್ ಕಟೀಲ್ ಆರೋಗ್ಯ ವಿಚಾರಿಸಿದರು.
Author: main-admin
ಉಡುಪಿ : ರೈಲ್ವೆ ಹಳಿಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಕಟಪಾಡಿ ಸನಿಹದ ಅಚ್ಚಡ ಬಳಿ ನಡೆದಿದೆ.ರೈಲು ಹಳಿಯಲ್ಲಿ ಓಡಾಡುವ ವೇಳೆ ಮುಂಜಾನೆ 4.30 ಗಂಟೆ ಸುಮಾರಿಗೆ ಸಂಚರಿಸುವ ರೈಲು ಡಿಕ್ಕಿ ಹೊಡೆದಿರಬಹುದು ಅಥವಾ ರೈಲಿನಿಂದ ಆಯ ತಪ್ಪಿ ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ.ಸಮಾಜ ಸೇವಕರಾದ ಸೂರಿ ಶೆಟ್ಟಿ ಕಾಪು, ಆಸ್ಟಿನ್ ಕೋಟ್ಯಾನ್ ಕಟಪಾಡಿ, ಆಂಬುಲೆನ್ಸ್ ಚಾಲಕ ನಾಗರಾಜ ಛಿದ್ರಗೊಂಡಿರುವ ಯುವಕನ ಶವವನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ಕಾರ್ಯಾಚರಿಸುತ್ತಿದ್ದಾರೆ. ಪೊಲೀಸರು ಸ್ಥಳಕ್ಕಾಮಿಸಿ ಪರಿಶೀಲನೆ ನಡೆಸಲಿದ್ದಾರೆ.
ಉಡುಪಿ: ಜಿಲ್ಲೆಯನ್ನು ಬೆಚ್ಚಿ ಬೀಳಿಸಿದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ,ಹತ್ಯೆಯನ್ನು ಸಂಭ್ರಮಿಸಿ ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಪೋಸ್ಟ್ ಹರಿಬಿಟ್ಟಿದ್ದಾರೆ. ‘ಹಿಂದೂ ಮಂತ್ರ’ ಹೆಸರಿನ ಇನ್ಸ್ಟಾ ಗ್ರಾಮ್ ಪೇಜ್ ನಲ್ಲಿ ಈ ಪೋಸ್ಟ್ ಮಾಡಲಾಗಿದೆ. ’15 ನಿಮಿಷದಲ್ಲಿ ನಾಲ್ಕು ಮುಸ್ಲಿಮರನ್ನು ಕೊಂದು ವಿಶ್ವ ದಾಖಲೆ ನಿರ್ಮಿಸಿದ್ದಾನೆ’ ಎನ್ನುವ ಶೀರ್ಷಿಕೆಯನ್ನು ಈ ಪೇಜ್ ಹೊಂದಿದೆ. ಪೋಸ್ಟ್ ನಲ್ಲಿ ಹತ್ಯೆಯ ಆರೋಪಿ ಪ್ರವೀಣ್ ಅರುಣ್ ಚೌಗುಲೆ ತಲೆಗೆ ಕಿರೀಟ ತೊಡಿಸಲಾಗಿದೆ.ಉಡುಪಿಯ ಹುಡುಗಿಯರ ವಿಚಾರದಲ್ಲಿ ಯಾರೂ ಬಂದಿಲ್ಲ, ಆದ್ದರಿಂದ ನಾವು ಈ ವಿಚಾರಕ್ಕೆ ಬರುವುದಿಲ್ಲ ಎನ್ನುವ ಅಡಿಬರಹವನ್ನು ಈ ಪೋಸ್ಟ್ ಹೊಂದಿದೆ.ಪೋಸ್ಟ್ ಗಮನಿಸಿದ ಪೊಲೀಸರು ,ಹಿಂದೂ ಮಂತ್ರ ಇನ್ಸ್ಟಾ ಗ್ರಾಮ್ ಪೇಜ್ ಮೇಲೆ ಸೂಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು : ಮಂಗಳೂರಿನ ಪ್ರಸಿದ್ಧ ಮೂತ್ರಶಾಸ್ತ್ರದ ತಜ್ಞರು (ಯುರೋಲಜಿಸ್ಟ್) ಡಾ.ಜಿ.ಜಿ. ಲಕ್ಷ್ಮಣ ಪ್ರಭು ನಿಧನರಾಗಿದ್ದಾರೆ. 61 ವರ್ಷದ ಲಕ್ಷ್ಮಣ ಪ್ರಭು ಅವರು ವಾರದ ಹಿಂದೆ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿರುವಾಗ ಹೃದಯಾಘಾತಕ್ಕೆ ಒಳಗಾಗಿದ್ದರು. ಆ ಬಳಿಕ ಅವರು ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಇಂದು ಬೆಳಿಗ್ಗೆ ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ ಎನ್ನಲಾಗಿದೆ36 ವರ್ಷಗಳಿಗೂ ಹೆಚ್ಚು ಅನುಭವ ಹೊಂದಿದ್ದ ಅವರು ಹಲವು ವರ್ಷಗಳ ಕಾಲ ಕೆಎಂಸಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿದ್ದರು.ಹಲವಾರು ಸಂಕೀರ್ಣ ವೈದ್ಯಕೀಯ ಪ್ರಕರಣಗಳನ್ನು ನಿರ್ವಹಿಸಿದ್ದ ಅವರು, ಯುರೊಲಿಥಿಯಾಸಿಸ್, ಆಂಡ್ರಾಲಜಿ, ಯುರೊಡೈನಾಮಿಕ್ಸ್, ರೆಕಾನ್-ಯೂರಾಲಜಿ, ಯುರೊಜಿನೆಕಾಲಜಿ ಮತ್ತು ಎಂಡೋರಾಲಜಿಯಲ್ಲಿ ಪರಿಣತಿಯನ್ನು ಹೊಂದಿದ್ದರು.
ಉಡುಪಿ: ಮಾತ್ರವಲ್ಲ ಇಡೀ ರಾಜ್ಯವೇ ಬೆಚ್ಚಿಬೀಳಿಸಿದ ಘಟನೆಯೇ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಎಲ್ಲೆಡೆ ಚರ್ಚೆಗೆ ಕಾರಣವಾಗಿದೆ. ಇದರ ನಡುವೆ, ನೇಜಾರು ಕುಟುಂಬದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ವೇಳೆ ರೋಚಕ ಮಾಹಿತಿಗಳು ಹೊರಬಿದ್ದಿವೆ. ಇದರ ಬೆನ್ನಲ್ಲೇ ಆರೋಪಿಯನ್ನು ಸ್ಥಳ ಮಹಜರು ಮಾಡಲು ಹತ್ಯೆಗೈದ ಮನೆಗೆ ಕರೆತಂದಿದ್ದಾರೆ. ಬೆಳಗ್ಗೆಯಿಂದಲೇ ಘಟನಾ ಸ್ಥಳದಲ್ಲಿ ಜನ ಜಮಾಯಿಸಿದ್ದು, 11.30 ಗಂಟೆಗೆ ಆರೋಪಿಯನ್ನು ಸ್ಥಳ ಮಹಜರು ಸ್ಥಳಕ್ಕೆ ಬರುವುದಾಗಿ ಹೇಳಲಾಗಿತ್ತು. ಆದರೆ ಸಂಜೆ 4.30 ಕ್ಕೆ ಆರೋಪಿಯನ್ನು ಕರೆತರಲಾಗಿತ್ತು. ಈ ಎಲ್ಲಾ ಪ್ರಕ್ರಿಯೆ ನಡೆಯುವ ಸಂದರ್ಭ ಹಸೀನಾ ಅವರ ಪತಿ ಕುಸಿದು ಬಿದ್ದಿರುವ ಘಟನೆ ಕೂಡಾ ನಡೆಯಿತು. ಬೆಳಗ್ಗಿನಿಂದಲೇ ಜನ ಆರೋಪಿಯನ್ನು ನೋಡಲು ನಿಂತಿದ್ದರು. ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಪ್ರವೀಣ್ ಚೌಗಲೆ ವಿಚಾರಣೆಯ ಸಂದರ್ಭ ತಪ್ಪೊಪ್ಪಿಕೊಂಡಿದ್ದಾನೆ ಎಂದು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ತಿಳಿಸಿದ್ದಾರೆ. ಈ ಹತ್ಯೆ ಪ್ರಕರಣದ ತನಿಖೆಸಂಬಂಧಿಸಿದಂತೆ ಆರೋಪಿಯನ್ನು ಸ್ಥಳ…
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವಕಪ್ ಸೆಮಿಫೈನಲ್ ನಲ್ಲಿ ನ್ಯೂಜಿಲೆಂಡ್ ಮಣಿಸಿ ಭಾರತ ತಂಡ ಫೈನಲ್ ಪ್ರವೇಶಿದ್ದು, ಭಾರತೀಯರಲ್ಲಿ ಸಂಭ್ರಮ ಮನೆ ಮಾಡಿದೆ. ಇಡೀ ಭಾರತ ಫೈನಲ್ ಗಾಗಿ ಎದುರು ನೋಡುತ್ತಿದೆ. ಇದೀಗ ತೆಲುಗಿನ ನಟಿಯೊಬ್ಬರು ವಿಶ್ವಕಪ್ ಫೈನಲ್ ನಲ್ಲಿ ‘ಟೀಮ್ ಇಂಡಿಯಾ’ ಗೆದ್ದರೆ ಬೆತ್ತಲಾಗುವೆ ಎಂದು ಹೇಳಿಕೆ ನೀಡುವ ಮೂಲಕ ವ್ಯಾಪಕ ಸುದ್ದಿಯಾಗಿದ್ದಾರೆ. ವಿಶ್ವಕಪ್ ಫೈನಲ್ ನಲ್ಲಿ ಭಾರತ ಗೆದ್ದರೆ ವಿಶಾಖಪಟ್ಟಣಂ ಸಮುದ್ರದಲ್ಲಿ ಬೆತ್ತಲೆಯಾಗಿ ನಡೆಯುತ್ತೇನೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ನಟಿಯ ಪೋಸ್ಟ್ ಗೆ ತರಹೇವಾರಿ ಕಮೆಂಟ್ ಗಳು ಬರುತ್ತಿದೆ. ಕೆಲವರು ಇಂಡಿಯಾ ಗ್ಯಾರಂಟಿ ಗೆಲ್ಲುತ್ತದೆ ಎಂದಿದ್ದರೆ, ಇನ್ನೂ ಕೆಲವರು ನೀವು ಕೊಟ್ಟ ಮಾತಿಗೆ ತಪ್ಪಬೇಡಿ ಎಂದಿದ್ದಾರೆ.ಸುಮಾರು 12 ವರ್ಷಗಳ ಹಿಂದೆ ನಟಿ ಪೂನಂ ಪಾಂಡೆ ಈ ತರಹದ ಹೇಳಿಕೆ ನೀಡಿ ಸುದ್ದಿಯಾಗಿದ್ದರು. ಇದೀಗ ನಟಿ ರೇಖಾ ಮತ್ತೆ ಈ ತರಹದ ಹೇಳಿಕೆ ನೀಡಿದ್ದಾರೆ. ಏಕದಿನ ವಿಶ್ವಕಪ್ ಸೆಮಿಫೈನಲ್ ನಲ್ಲಿ ನ್ಯೂಜಿಲೆಂಡ್ ಮಣಿಸಿ ಭಾರತ ತಂಡ…
ಚಿತ್ರದುರ್ಗ: ಕಳೆದ 14 ತಿಂಗಳಿಂದ ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿದ್ದ ಮುರುಘಾ ಮಠದ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು ಇಂದು ಜೈಲಿನಿಂದ ಬಿಡುಗಡೆಗೊಂಡರು. ಮೊದಲನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಈ ಸಂಬಂಧ ವಿಚಾರಣಾ ನ್ಯಾಯಾಲಯವಾದ ಚಿತ್ರದುರ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಇಬ್ಬರ ಶ್ಯೂರಿಟಿ ಮತ್ತಿತರೆ ಅಂಶಗಳನ್ನು ಪರಿಶೀಲಿಸಿ ಬುಧವಾರ ಮಧ್ಯಾಹ್ನ ಬಿಡುಗಡೆಗೆ ಆದೇಶ ಮಾಡಿತ್ತು. ಆದರೆ, ಸಂಜೆ ನ್ಯಾಯಾಲಯದ ಆದೇಶ ಪ್ರತಿ ತಲುಪುವುದು ವಿಳಂಭವಾಗಿದ್ದ ಕಾರಣಕ್ಕೆ ಇಂದು ಬೆಳಗ್ಗೆ ಜಿಲ್ಲಾ ಕಾರಾಗೃಹದಲ್ಲಿ ಬಿಡುಗಡೆ ಪ್ರಕ್ರಿಯೆ ನಡೆಸಿ ಮಧ್ಯಾಹ್ನ 12.40ಕ್ಕೆ ಬಿಡುಗಡೆಯಾದರು. ಜೈಲಿನಿಂದ ಹೊರಗೆ ಬಂದ ಮುರುಘಾ ಶರಣರನ್ನು ಭಕ್ತರು, ವಕೀಲರು ಸ್ವಾಗತಿಸಿದರು. ಇಲ್ಲಿಂದ ಶರಣರು ದಾವಣಗೆರೆ ವಿರಕ್ತಮಠದ ಕಡೆಗೆ ಪ್ರಯಾಣ ಬೆಳೆಸಿದರು. ಒಂದನೇ ಪ್ರಕರಣರದಲ್ಲಿ ನವೆಂಬರ್ 8ರಂದು ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು. ಹೀಗಾಗಿ ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಇಂದು ಮುರುಘಾಶ್ರೀಗಳನ್ನು ಬಿಡುಗಡೆ ಮಾಡಲಾಗಿದೆ. ಷರತ್ತು ವಿಧಿಸಿದ ಹೈಕೋರ್ಟ್ಜೈಲಿನಿಂದ ಬಿಡುಗಡೆಗೊಂಡಿರುವ ಮುರುಘಾ ಶರಣರಿಗೆ ಕೋರ್ಟ್ ಕೆಲವು…
ಮಂಗಳೂರು : ನೈತಿಕ ಪೊಲೀಸ್ ಗಿರಿ ಸೇರಿದಂತೆ ಇತರ ಪ್ರಕರಣದಲ್ಲಿ ಭಾಗಿಯಾಗಿದ್ದ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ದ ಇದೀಗ ಪೊಲೀಸರು ಮತ್ತೆ ಗಡೀಪಾರು ಅಸ್ತ್ರ ಪ್ರಯೋಗ ಮಾಡಿದ್ದು, ದಕ್ಷಿಣಕನ್ನಡ ಜಿಲ್ಲೆಯ 5 ಮಂದಿ ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟೀಸ್ ನೀಡಲಾಗಿದೆ. ಭಜರಂಗದಳ ಕಾರ್ಯಕರ್ತರಾದ ಲತೇಶ್ ಗುಂಡ್ಯ, ಪ್ರಜ್ವಲ್, ನಿಶಾಂತ್, ಪ್ರದೀಪ್ ಮತ್ತು ದಿನೇಶ್ ಗೆ ಅವರಿಗೆ ಗಡಿಪಾರು ಮಾಡುವ ಕುರಿತಂತೆ ಕಾರಣ ಕೇಳಿ ಪೊಲೀಸ್ ಇಲಾಖೆ ನೋಟೀಸ್ ಜಾರಿ ಮಾಡಿದೆ. ಭಜರಂಗದಳದಲ್ಲಿ ಪುತ್ತೂರು ತಾಲೂಕು ಜವಾಬ್ದಾರಿ ಹೊಂದಿರೋ ದಿನೇಶ್, ಪ್ರಜ್ವಲ್, ಭಜರಂಗದಳ ಪುತ್ತೂರು ಜಿಲ್ಲಾ ಸಹ ಸಂಯೋಜಕ್ ಆಗಿರೋ ಲತೇಶ್ ಗುಂಡ್ಯ ಹಾಗೂ ಭಜರಂಗದಳ ಕಾರ್ಯಕರ್ತರಾದ ನಿಶಾಂತ್, ಪ್ರದೀಪ್ ಮತ್ತು ದಿನೇಶ್ ಗೆ ನೋಟೀಸ್ ನೀಡಲಾಗಿದೆ. ಎಲ್ಲರಿಗೂ ನವೆಂಬರ್ 22 ರಂದು ಪುತ್ತೂರು ಸಹಾಯಕ ಆಯುಕ್ತರ ಎದುರು ಹಾಜರಾಗಲು ಸೂಚನೆ ನೀಡಲಾಗಿದೆ. ಈ ಐವರಲ್ಲಿ ಲತೇಶ್ ಹೊರತುಪಡಿಸಿ ಉಳಿದ ನಾಲ್ವರ ಮೇಲೆ ಒಂದೊಂದು ಪ್ರಕರಣಗಳಿದ್ದು, ಕೋಮು ಗಲಭೆ, ದನಸಾಗಾಟ ಹಲ್ಲೆ, ನೈತಿಕ…
ತಿರುವನಂತಪುರಂ:ತಿರುವಾಂಕೂರು ದೇವಸ್ವಂ ಮಂಡಳಿಯು ನಿಲಕ್ಕಲ್ನಲ್ಲಿ ಪಾರ್ಕಿಂಗ್ಗಾಗಿ ಫಾಸ್ಟ್ಟ್ಯಾಗ್ ವ್ಯವಸ್ಥೆಯನ್ನು ಜಾರಿಗೊಳಿಸಿರುವುದರಿಂದ ಶಬರಿಮಲೆ ಕಡೆಗೆ ಹೋಗುವ ಎಲ್ಲಾ ವಾಹನಗಳು ಫಾಸ್ಟ್ಟ್ಯಾಗ್ ಹೊಂದಿರಬೇಕು ಎಂದು ಡಿಜಿಪಿ ಶೇಖ್ ದರ್ವೇಶ್ ಸಾಹೇಬ್ ಬುಧವಾರ ಹೇಳಿದ್ದಾರೆ. ಶಬರಿಮಲೆಗೆ ಹೋಗುವ ಯಾವುದೇ ವಾಹನಗಳನ್ನು ಅಲಂಕರಿಸಬಾರದು ಎಂದು ಅವರು ಸಲಹೆ ನೀಡಿದರು. ಸುರಕ್ಷಿತ ಶಬರಿಮಲೆ ಮಂಡಲಂ-ಮಕರವಿಳಕ್ಕು ಯಾತ್ರೆಯನ್ನು ಖಚಿತಪಡಿಸಿಕೊಳ್ಳಲು ಮಾಡಲಾದ ಎಲ್ಲಾ ವ್ಯವಸ್ಥೆಗಳನ್ನು ಡಿಜಿಪಿ ಪರಿಶೀಲಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರಿಂದ ಎಲ್ಲ ಬಂದೋಬಸ್ತ್ ಮಾಡಲಾಗಿದೆ. ಈ ತೀರ್ಥಯಾತ್ರೆಯಲ್ಲಿ ಆರು ಹಂತಗಳಲ್ಲಿ ಒಟ್ಟು 13,000 ಪೊಲೀಸರು ಕರ್ತವ್ಯ ನಿರ್ವಹಿಸಲಿದ್ದಾರೆ. “ಮಕ್ಕಳು ಮತ್ತು ಮಹಿಳೆಯರಿಗೆ ವಿಶೇಷ ಸರತಿ ಸಾಲು ವ್ಯವಸ್ಥೆ ಮಾಡಲಾಗುವುದು. ಸನ್ನಿಧಾನಂ, ನಿಲಕ್ಕಲ್ ಮತ್ತು ವಡಸೇರಿಕ್ಕರದಲ್ಲಿ ಮೂರು ತಾತ್ಕಾಲಿಕ ಪೊಲೀಸ್ ಠಾಣೆಗಳನ್ನು ತೆರೆಯಲಾಗಿದೆ. ಭದ್ರತಾ ವ್ಯವಸ್ಥೆಗಳ ಭಾಗವಾಗಿ ಡ್ರೋನ್ ಸೌಲಭ್ಯವನ್ನು ಸಹ ಬಳಸಲಾಗುವುದು” ಎಂದು ಅವರು ಹೇಳಿದರು.
ಮಾಣಿ : ವಾಹನ ತಪಾಸಣೆ ವೇಳೆ ಓಮ್ನಿ ಕಾರು ಡಿಕ್ಕಿ ಹೊಡೆದು ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನೆಟ್ಟಮುಡ್ನರು ಗ್ರಾಮದ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಗಾಯಗೊಂಡ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿಯನ್ನು ಸದಾಶಿವ ಎಂದು ಗುರುತಿಲಾಗಿದೆ. ಸದಾಶಿವ ಅವರು ಬುಧವಾರ ಮಧ್ಯಾಹ್ನ ಬಂಟ್ವಾಳ ಸಂಚಾರ ಠಾಣೆಯ ಎಎಸ್ಸೈ ಅವರೊಂದಿಗೆ ನೇರಳಕಟ್ಟೆ ಮಾಣಿ-ಮೈಸೂರು ಹೆದ್ದಾರಿಯಲ್ಲಿ ಓಮ್ಮಿ ಕಾರನ್ನು ತಪಾಸಣೆಯ ಸಲುವಾಗಿ ನಿಲ್ಲಿಸಲು ಸೂಚನೆ ನೀಡಿದರೂ, ಒಮ್ಮಿ ಕಾರಿನ ಚಾಲಕ ರಾಧಾಕೃಷ್ಣ ಎಂಬವರು ಅಜಾಗರೂಕತೆ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದು, ಸದಾಶಿವ ಅವರಿಗೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ತೀವ್ರತೆಗೆ ಸದಾಶಿವ ಅವರು ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದು, ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.










