Author: main-admin

ಬೆಂಗಳೂರು: ಖ್ಯಾತ ನಟ ದರ್ಶನ್ ಮನೆಯ ನಾಯಿ ಮಹಿಳೆಯೊಬ್ಬರಿಗೆ ಕಚ್ಚಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ನಟ ದರ್ಶನ್ ರಾಜರಾಜೇಶ್ವರಿ ನಗರ ಪೊಲೀಸ್‌ ಠಾಣೆಗೆ ಹಾಜರಾಗಿದ್ದಾರೆ. ಅಮಿತಾ ಜಿಂದಾಲ್​ ಎಂಬ ಮಹಿಳೆಗೆ ದರ್ಶನ್​ ಮನೆಯ ನಾಯಿ ಕಚ್ಚಿತ್ತು. ಹೀಗಾಗಿ ಅಮಿತಾ ಅವರು ರಾಜರಾಜೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ಬಳಿಕ ಪೊಲೀಸರು ಐಪಿಸಿ ಸೆಕ್ಷನ್​ 289ರ ಅಡಿಯಲ್ಲಿ ಕೇಸ್​ ದಾಖಲು ಮಾಡಿಕೊಳ್ಳಲಾಗಿತ್ತು. ನಟ ದರ್ಶನ್‌ ಅವರನ್ನು ಈ ಪ್ರಕರಣದಲ್ಲಿ ಎ2 ಆರೋಪಿಯನ್ನಾಗಿ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಠಾಣೆಗೆ ಹಾಜರಾಗಿ ಹೇಳಿಕೆ ನೀಡುವಂತೆ ಪೊಲೀಸರು ದರ್ಶನ್‌ಗೆ ನೋಟಿಸ್​ ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸ್‌ ಠಾಣೆಗೆ ದರ್ಶನ್‌ ಭೇಟಿ ನೀಡಿದ್ದು, ಹೇಳಿಕೆ ನೀಡಿದ್ದಾರೆ.ಈ ಕುರಿತು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಅಮಿತಾ ಅವರು ದೂರಿನ ಜತೆ ನೀಡಿದ ಸಿಸಿಟಿವಿ ದೃಶ್ಯಾವಳಿಗಳನ್ನು ಸಹ ಪರಿಶೀಲನೆ ನಡೆಸಿದ್ದಾರೆ. ತನಿಖೆಯನ್ನು ಚುರುಕುಗೊಳಿಸಿ, ನಟ ದರ್ಶನ್‌ ಅವರಿಗೆ ಪೊಲೀಸ್ ಠಾಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ್ದರು. ಈ ಸಂಬಂಧ ನಟ…

Read More

ಕೊಚ್ಚಿ : ಕೇರಳದ ಆಲುವಾದಲ್ಲಿ ಐದು ವರ್ಷದ ಮಗುವಿನ ಮೇಲೆ ಅಮಾನುಷವಾಗಿ ಲೈಂಗಿಕ ಕಿರುಕುಳ ನೀಡಿ ಹತ್ಯೆಗೈದ ಅಶ್ಪಾಕ್ ಆಲಂ ಎಂಬಾತನಿಗೆ ಎರ್ನಾಕುಲಂ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ (ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ) ಮಂಗಳವಾರ ಮರಣದಂಡನೆ ವಿಧಿಸಿದೆ. ಪೋಕ್ಸೊ ಕಾಯಿದೆ ಮತ್ತು ಐಪಿಸಿಯ ಐದು ಸೆಕ್ಷನ್‌ಗಳ ಅಡಿಯಲ್ಲಿ ಅವರ ಸಹಜ ಜೀವನದ ಉಳಿದ ಅವಧಿಗೆ ಐದು ಜೀವಾವಧಿ ಶಿಕ್ಷೆಯನ್ನು ಸಹ ಅವರಿಗೆ ನೀಡಲಾಗಿದೆ. ಬಿಹಾರದ ವಲಸೆ ಕಾರ್ಮಿಕರ ಪುತ್ರಿಯಾಗಿದ್ದ ಬಾಲಕಿಯನ್ನು ಆಲಂ ಅಪಹರಿಸಿ, ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿ ಕತ್ತು ಹಿಸುಕಿ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆಲಂ ಬಿಹಾರದ ಅರಾರಿಯಾ ಜಿಲ್ಲೆಯ ಪರಾರಿಯಾ ಗ್ರಾಮದವರು . ಅವರು ಕೂಲಿ ಕೆಲಸ ಮಾಡುತ್ತಿದ್ದು, ಆಲುವಾ ಬಳಿ ಐದು ವರ್ಷದ ಮಗು ತನ್ನ ಪೋಷಕರು ಮತ್ತು ಒಡಹುಟ್ಟಿದವರ ಜೊತೆ ವಾಸಿಸುತ್ತಿದ್ದ ಮನೆಯ ಸಮೀಪ ಬಾಡಿಗೆ ಆವರಣದಲ್ಲಿ ವಾಸಿಸುತ್ತಿದ್ದರು. ಜುಲೈ 28 ರಂದು, ಮಧ್ಯಾಹ್ನ 3 ಗಂಟೆಯ ಸುಮಾರಿಗೆ, ಆಲಂ ಹುಡುಗಿಗೆ ಸಿಹಿ ಪಾನೀಯವನ್ನು ಖರೀದಿಸುವುದಾಗಿ ಹೇಳಿ…

Read More

ಉಡುಪಿ: ಉಡುಪಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ‌ನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಆಯಾಮದಲ್ಲಿ ತನಿಖೆ ಮಾಡುತ್ತಿದ್ದೇವೆ. ಪ್ರವೀಣ್ ಅರುಣ್ ಚೌಗಲೆಯನ್ನು ವಶಕ್ಕೆ ಪಡೆದಿದ್ದು ಸಂಜೆಯೊಳಗೆ ತನಿಖೆ ಮಾಡಿ ಪೂರ್ಣ ಚಿತ್ರಣ ಸಿಗಲಿದೆ ಎಂದು ಉಡುಪಿ ಎಸ್ ಪಿ ಡಾ. ಅರುಣ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಪ್ರವೀಣ್ ಅರುಣ್ ಚೌಗಲೆಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದೇವೆ, ಟೆಕ್ನಿಕಲ್ ಮತ್ತು ಹ್ಯೂಮನ್ ಇಂಟೆಲಿಜೆನ್ಸ್ ಮೇರೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸುತ್ತಿದ್ದೇವೆ ಸಂಜೆಯೊಳಗೆ ತನಿಖೆ ಮಾಡಿ ಪೂರ್ಣ ಚಿತ್ರಣ ಸಿಗಲಿದೆ ಎಂದರು. ಇನ್ನು ಪ್ರವೀಣ್ ಅರುಣ್ ಚೌಗಲೆಯನ್ನು ಉಡುಪಿ ಜಿಲ್ಲೆ ಮತ್ತು ಬೆಳಗಾವಿ ಜಿಲ್ಲೆಯ ಪೊಲೀಸರ ಸಹಕಾರದಿಂದ ವಶಕ್ಕೆ ಪಡೆಯಲಾಗಿದ್ದು, ಹಲವಾರು ಶಂಕಿತರ ವಿಚಾರಣೆ ಮಾಡುತ್ತಿದ್ದೇವೆ. ಜಿಲ್ಲೆಯ ಎಲ್ಲಾ ಕಡೆ ಮುಂಜಾಗ್ರತಾ ಕ್ರಮವಾಗಿ ಬಿಗಿ ಬಂದೋಬಸ್ತ್ ಮಾಡಿದ್ದೇವೆ. ಬಲವಾದ ಶಂಕೆಯ ಮೇರೆಗೆ ಪ್ರವೀಣ್ ಅರುಣ್ ಚೌಗಲೆ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

Read More

ಪುತ್ತೂರು : ನದಿಯಲ್ಲಿ ಈಜಾಡುತ್ತಿರುವಾಗಲೇ ಯುವಕನೊಬ್ಬ ಹೃದಯಾಘಾತಕ್ಕೆ ಬಲಿಯಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಮೃತ ಪುತ್ತೂರಿನ ದೇವಸ್ಯ ನಿವಾಸಿ ಸುಜಿತ್ (27) ಎಂದು ಗುರುತಿಸಲಾಗಿದೆ. ಸುಜಿತ್ ರವರು ಬೆಂದ್ರ್ ತೀರ್ಥದಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದ ಸಮಯದಲ್ಲಿ ಅಲ್ಲೇ ಪಕ್ಕದಲ್ಲಿರುವ ನದಿಯೊಂದಕ್ಕೆ ಈಜಾಡಲು ತೆರಳಿದ್ದರು, ಈಜಾಡುತ್ತಿದ್ದ ವೇಳೆಯೇ ಹೃದಯಾಘಾತಕ್ಕೊಳಗಾಗಿ ಸಾವನ್ನಪಿದ್ದಾರೆ.ಸುಜಿತ್ ಪುತ್ತೂರು ಬೊಳುವಾರಿನಲ್ಲಿ ಗ್ಯಾರೇಜ್ ವೊಂದರಲ್ಲಿ ಕೆಲಸಮಾಡುತ್ತಿದ್ದು,ದೀಪಾವಳಿಯ ಪ್ರಯುಕ್ತ ಸಂಬಂಧಿಕರ ಮನೆಗೆ ಹೋಗಿದ್ದರೆಂದು ತಿಳಿದು ಬಂದಿದೆ.

Read More

ಮಂಗಳೂರು : ಆಟೋ ರಿಕ್ಷಾ ಚಾಲಕನಿಗೆ ಹಲ್ಲೆಗೈದು ಪರಾರಿಯಾಗಿದ್ದ ಮತ್ತೊಬ್ಬ ಆಟೋ ರಿಕ್ಷಾ ಚಾಲಕನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ರೋಕೇಶ್(37) ಯಾನೆ ಸೈಕೋ ರೋಸ್ ಎಂದು ಗುರುತಿಸಲಾಗಿದೆ. ಈತ ಕುಂಪಲದ ಬೈಪಾಸ್ ಆಟೋ ರಿಕ್ಷಾ ಪಾರ್ಕಿನಲ್ಲಿ ರಿಕ್ಷಾ ಚಾಲಕರಾಗಿದ್ದು, ಅದೇ ಸ್ಟ್ಯಾಂಡ್ ನಲ್ಲಿದ್ದ ಮತ್ತೊಬ್ಬ ರಿಕ್ಷಾಚಾಲಕ ಸುಶಾಂತ್(31) ಎಂಬವರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದ. ಆದಿತ್ಯವಾರ ಆರೋಪಿ ರೋಕೇಶ್ ಯಾನೆ ಸೈಕೋ ರೋಸ್ ಸುಶಾಂತ್ ಅವರಿಗೆ ಅವಾಚ್ಯ ಶಬ್ದಗಳಿಂದ ಬೈದು ಕೈಯಿಂದ ಮುಖಕ್ಕೆ ಬಲವಾಗಿ ಗುದ್ದಿ ಹಲ್ಲೆ ಮಾಡಿದ್ದಾರೆ. ಇದರಿಂದಾಗಿ ಸುಶಾಂತ್ ಅವರ ಎರಡು ಹಲ್ಲು ಉದುರಿ ಹೋಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಬಳಿಕ ಅವರು ಸಹೋದ್ಯೋಗಿ ರೋಕೇಶ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಠಾಣೆಯಲ್ಲಿ ತನ್ನ ವಿರುದ್ದ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಲೆಮರೆಸಿಕೊಂಡಿದ್ದ ಆರೋಪಿ ರೋಕೇಶ್ ನನ್ನು ಉಳ್ಳಾಲ ಪೊಲೀಸ್ ಠಾಣೆಯ ಪಿಐ ಬಾಲಕೃಷ್ಣ ಅವರು…

Read More

ಉಡುಪಿ : ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿದ ಹೃದಯ ವಿದ್ರಾವಕ ಘಟನೆಯೊಂದು ನಡೆದಿತ್ತು. ಈ ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಉಡುಪಿಯಲ್ಲಿ ಕೆಲ ದಿನಗಳ ಹಿಂದೆ ಒಂದೇ ಕುಟುಂಬದ ನಾಲ್ವರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಂತ ಘಟನೆ ನಡೆದಿತ್ತು. ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ಹತ್ಯೆ ಮಾಡಲಾಗಿತ್ತು. ಕೊಲೆಯಾದವರನ್ನು ಹಸೀನಾ (46 ), ಅಫ್ನಾನ್ (23 ), ಅಯ್ನಾಝ್ (21 ), ಆಸಿಂ (12 ) ಎಂದು ಗುರುತಿಸಲಾಗಿತ್ತು. ಈ ಘಟನಾ ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿದ್ದು, ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳ ಸಹಿತ, ಮಾಹಿತಿ ಸಂಗ್ರಹಿಸುತ್ತಿದ್ದರು. ಏಕಾಏಕಿ ಮನೆಗೆ ನುಗ್ಗಿ ಮಾತಿನ ಚಕಮಕಿ ನಡೆದ ಬಳಿಕ ಮೊದಲು ಮಹಿಳೆ ಹಾಗೂ ಮಕ್ಕಳಾದ ಹಸಿನಾ, ಅಫ್ನಾನ್, ಐನಾಜ್ ಗೆ ಇರಿದ ದುಷ್ಕರ್ಮಿ, ಬಳಿಕ ಅಲ್ಲೇ ಆಟವಾಡುತ್ತಿದ್ದ ಆಸೀಮ್ ಸದ್ದು ಕೇಳಿ ಒಳ ಬರುತ್ತಿದ್ದಂತೆ ಆತನನ್ನು ಕೂಡ…

Read More

ಬೆಂಗಳೂರು: ಬಿಗ್‌ ಬಾಸ್‌ ಕನ್ನಡ ಸೀಸನ್‌ 10 ನಲ್ಲಿ ಸ್ಪರ್ಧಿಯಾಗಿರುವ ನಟಿ ತನಿಷಾ ಕುಪ್ಪಂಡ ಅವರ ವಿರುದ್ಧ ಜಾತಿ ನಿಂದನೆ ಆರೋಪದ ಮೇಲೆ ಎಫ್ಐಆರ್ ದಾಖಲಾಗಿದೆ. ಅಖಿಲ ಕರ್ನಾಟಕ ಬೋವಿ ಸಮಾಜದ ರಾಜ್ಯಾಧ್ಯಕ್ಷೆ ಪಿ.ಪದ್ಮಾ ಎಂಬವರು ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಎಸ್ ಸಿ ಎಸ್ಟಿ ಕಾಯ್ದೆಯಡಿ ಅಟ್ರಾಸಿಟಿ ಕೇಸ್ ದಾಖಲಿಸಿದ್ದಾರೆ. ಖಾಸಗಿ ವಾಹಿನಿಯ ಬಿಗ್ ಬಾಸ್ ರಿಯಾಲಿಟಿ ಶೋ ನಲ್ಲಿ ಅವಹೇಳನಕಾರಿ ಪದ ಬಳಕೆ ಆರೋಪಿಸಿ ಅವರು ದೂರು ನೀಡಿದ್ದಾರೆ. ಪದಬಳಕೆ ಮಾಡಿ ಬೋವಿ ಜನಾಂಗಕ್ಕೆ ಅವಮಾನ ಮಾಡಿದ್ದಾರೆಂದು ದೂರಿನಲ್ಲಿ ಹೇಳಲಾಗಿದೆ.

Read More

ಬೆಂಗಳೂರು: ಖಾತೆಗೆ ಹಣ ಬಾರದೇ ಇರುವ ಯಜಮಾನಿಯರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯ ಹಣವನ್ನು ಅರ್ಹ ಪಲಾನುಭವಿಗಳಿಗೆ ತಲುಪಿಸಲು ಮಹತ್ವದ ಕ್ರಮ ಕೈಗೊಂಡಿದೆ. ಹೌದು, ಅಂಗನವಾಡಿ ಕಾರ್ಯಕರ್ತೆಯರು ಮನೆಗಳಿಗೆ ಹೋಗಿ ತಿಳಿವಳಿಕೆ ನೀಡಿ ಗೃಹಲಕ್ಷ್ಮಿ ಯೋಜನೆಗೆ ಯಜಮಾನಿಯರನ್ನು ಸೇರ್ಪಡೆ ಮಾಡುತ್ತಿದ್ದಾರೆ. ಬ್ಯಾಂಕ್ ಖಾತೆ ಸಮಸ್ಯೆ ಇದ್ದರೆ ಅಂಚೆ ಕಚೇರಿಯಲ್ಲಿ ಖಾತೆ ತೆರೆದು ಗೃಹಿಣಿಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಪಾವತಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಗೃಹಲಕ್ಷ್ಮಿ ಯೋಜನೆಗೆ ಬೇಕಾಗುವ ದಾಖಲೆಗಳು ಈ ಯೋಜನೆಗೆ ಕಡ್ಡಾಯವಾಗಿ ಬಿಪಿಎಲ್ ಕಾರ್ಡ್ ಅಥವಾ ಅಂತ್ಯೋದಯ ಕಾರ್ಡ್ ಅಥವಾ ಎಪಿಎಲ್ ಕಾರ್ಡ್ ಹೊಂದಿರತಕ್ಕದ್ದು. ಕುಟುಂಬದ ಮಹಿಳೆಯ ಗಂಡನ ಅಥವಾ ಪೋಷಕರ ಆಧಾರ್ ಕಾರ್ಡ್ ಇರಬೇಕು ಮತ್ತು ಮಹಿಳೆಯ ಬ್ಯಾಂಕ್ ಪಾಸ್ ಬುಕ್ ಇರಬೇಕು. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ಯಜಮಾನಿಯರ ಖಾತೆಗೆ ಹಣ ಜಮಾ ಮಾಡಲಾಗುತ್ತಿದೆ. ಒಂದೆರಡು ದಿನ ವಿಳಂಬ ಆಗಬಹುದು. 1.8 ಕೋಟಿ ಮಹಿಳೆಯರಿಗೆ ಪ್ರತಿ ತಿಂಗಳು 2.500 ಕೋಟಿ ರೂ. ಸಂದಾಯ…

Read More

ಕರ್ನಾಟಕದಲ್ಲಿ ನಕ್ಸಲ್ ಚಳುವಳಿ ಸಂಪೂರ್ಣ ನಿಂತು ಹೋಗಿರುವ ಈ ಸಂದರ್ಭ ಇದೀಗ ಕೇರಳದ ನಕ್ಸಲ್ ಚಟುವಟಿಕೆಯಿಂದಾಗಿ ಮತ್ತೆ ಸುದ್ದಿಯಲ್ಲಿದೆ. ಕಳೆದ ಒಂದು ವಾರದಿಂದ ಕೇರಳದಲ್ಲಿ ನಕ್ಸಲ್ ರು ಹಾಗೂ ಪೊಲೀಸರ ನಡುವೆ ಕಾಳಗ ನಡೆಯುತ್ತಿದೆ. ಇದೀಗ ಕರ್ನಾಟಕ ಗಡಿ ಸಮೀಪ ಇದ್ದ ನಕ್ಸಲ್ ತಂಡಕ್ಕೂ ಕೇರಳ ನಕ್ಸಲ್ ನಿಗ್ರಹ ಪಡೆಗೂ ತೀವ್ರತರವಾದ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಎಲ್ಲ ನಕ್ಸಲರೂ ಪರಾರಿಯಾಗಿದ್ದಾರೆ. ಗಡಿಗ್ರಾಮ ಕುಟ್ಟಕ್ಕೆ ಕೆಲವೇ ಕಿ.ಮೀ ದೂರದಲ್ಲಿರುವ ಕೇರಳದ ಐಯಮ್ಮುನ್ ಎಂಬ ಸ್ಥಳದಲ್ಲಿ 9 ಮಂದಿಯ ನಕ್ಸಲ್ ತಂಡವು ಶಿಬಿರ ಹಾಕಿಕೊಂಡಿತ್ತು. ಕೂಂಬಿಂಗ್ ನಡೆಸುತ್ತಿದ್ದ ನಕ್ಸಲ್ ನಿಗ್ರಹ ಪಡೆಯು ಗುಂಡಿನ ದಾಳಿ ನಡೆಸಿತು.‌ ಪ್ರತಿಯಾಗಿ ನಕ್ಸಲರ ತಂಡವೂ ತೀವ್ರವಾದ ಗುಂಡಿನ ಚಕಮಕಿ ನಡೆಸಿದೆ. ಈ ವೇಳೆ ಎಲ್ಲರೂ ಪರಾರಿಯಾಗಿದ್ದಾರೆ.ಸ್ಥಳದಲ್ಲಿ ಎರಡು ರೈಫಲ್ಸ್ ಸಿಕ್ಕಿದ್ದು, ರಕ್ತದ ಕಲೆ ಪತ್ತೆಯಾಗಿವೆ. ಹೀಗಾಗಿ ಗುಂಡಿನ ಚಕಮಕಿಯಲ್ಲಿ ನಕ್ಸಲರು ಗಾಯಗೊಂಡಿರಬಹುದು ಎಂದು ಶಂಕಿಸಲಾಗಿದೆ. ಗಾಯಗೊಂಡಿರುವ ನಕ್ಸಲರು ಚಿಕಿತ್ಸೆ ಪಡೆಯಲು ಕರ್ನಾಟಕಕ್ಕೆ ನುಸುಳುವ ಶಂಕೆಯಿದೆ. ಗಡಿ…

Read More

ಹೆಬ್ರಿ: ದೀಪಾವಳಿ ಹಬ್ಬದ ಪ್ರಯುಕ್ತ ಗದ್ದೆ ಹಾಗೂ ಬಾವಿಗೆ ದೀಪ ಇಡಲು ಹೋದಾಗ ಯುವಕನೋರ್ವ ಮೃತಪಟ್ಟ ಘಟನೆ ವರದಿಯಾಗಿದೆ. ಆವರಣವಿಲ್ಲದ ಬಾವಿ ಬಳಿ ದೀಪ ಇಡುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಯ ನೀರಿಗೆ ಬಿದ್ದು ಹೆಬ್ರಿ ತಾಲೂಕು ಚಾರ ಗ್ರಾಮದ ಚಾರ ಬಸದಿ ಬಳಿ ನಿವಾಸಿ ಸಚಿನ್‌ (35) ಮೃತಪಟ್ಟಿದ್ದಾನೆ. ನ. 12ರಂದು ಸಂಜೆ ದೀಪಾವಳಿ ಸಂದರ್ಭ ಮನೆಯ ಹತ್ತಿರದ ಬಾವಿ ಬಳಿ ಘಟನೆ ನಡೆದಿದ್ದು, ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More