Author: main-admin

ಮನೆ ಅಂಗಳದಲ್ಲೇ ಕಾರಿನಡಿಗೆ ಸಿಲುಕಿ ಒಂದೂವರೆ ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಉಪ್ಪಳ ಸಮೀಪದ ಸೋಂಕಾಲ್ ನಲ್ಲಿ ನಡೆದಿದೆ. ಸೋಂಕಾಲ್ ಕೊಡಂಗೆಯ ನಿಸಾರ್ ಅವರ ಪುತ್ರ ಮಸ್ತುಲ್ ಜಿಶಾನ್ ಮೃತ ಪಟ್ಟ ಬಾಲಕ. ಜಿಶಾನ್ ನ ಚಿಕಪ್ಪ ಕಾರು ಮುಂದಕ್ಕೆ ತೆಗೆಯುತ್ತಿದ್ದಾಗ ಅಲ್ಲೇ ನಿಂತಿದ್ದ ಬಾಲಕನಿಗೆ ಡಿಕ್ಕಿ ಹೊಡೆದಿದ್ದು, ಕಾರಿನಡಿಗೆ ಸಿಲುಕಿದ್ದ ಬಾಲಕನನ್ನು ಆಸ್ಪತ್ರೆಗೆ ತಲಪಿಸದರೂ ಜೀವ ಉಳಿಸಲಾಗಳಿಲ್ಲ. ಇನ್ನು ಬೊಬ್ಬೆ ಕೇಳಿ ಪರಿಸರ ವಾಸಿಗಳು, ಸಂಬಂಧಿಕರು ಮಗುವನ್ನು ಹೊರತೆಗೆದು ಮಂಗಳೂರು ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಗಲಿಲ್ಲ. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಮಂಗಳೂರು : ಜೀವನದಲ್ಲಿ ಜಿಗುಪ್ಸೆಗೊಂಡು ಎಂಬಿಬಿಎಸ್ ವಿದ್ಯಾರ್ಥಿನಿ ಹಾಸ್ಟೆಲ್ ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಗರದ ಎಜೆ ಸಂಸ್ಥೆಯ ಎಂಬಿಬಿಎಸ್ ವಿದ್ಯಾರ್ಥಿನಿ ಪ್ರಕೃತಿ ಶೆಟ್ಟಿ (20) ಮಹಿಳಾ ಹಾಸ್ಟೆಲ್ ನ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಜೀವನದಲ್ಲಿ ಹತಾಶೆಗೊಂಡು ಈ ಕೃತ್ಯ ನಡೆಸಿರುವುದಾಗಿ ಬರೆಯಲಾಗಿದೆ.

Read More

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯ ಬಂದರಿನಲ್ಲಿ ದೀಪಾವಳಿ ಪ್ರಯುಕ್ತ ಪೂಜೆ ನಡೆಯುತ್ತಿದ್ದ ವೇಳೆ ಅಗ್ನಿ ಅವಘಡ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಏಳು ಮೀನುಗಾರಿಕಾ ದೋಣಿಗಳು ಬೆಂಕಿಗಾಹುತಿಯಾಗಿದ್ದು ಕೋಟ್ಯಾಂತರ ರೂಪಾಯಿ ನಷ್ಟ ಸಂಭವಿಸಿದೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯ ಅಗ್ನಿಶಾಮಕ ದಳ ರಕ್ಷಣಾ ಕಾರ್ಯಚರಣೆ ನಡೆಸಿದೆ. ಪಟಾಕಿ ಸಿಡಿದು ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದ್ದರೂ ನಿಖರ ಕಾರಣ ತಿಳಿದುಬಂದಿಲ್ಲ.

Read More

ಉಡುಪಿ : ನೇಜಾರುವಿನ ತೃಪ್ತಿ ಲೇಔಟ್ ನಲ್ಲಿ ಮೂವರು ಮಹಿಳೆಯರ ಸಹಿತ ಒಂದೇ ಕುಟುಂಬದ ನಾಲ್ವರನ್ನು ಕೊಲೆಗೈದ ಪ್ರಕರಣದ ಆರೋಪಿ ಸಂತೆಕಟ್ಟೆಯಿಂದ ತೃಪ್ತಿ ಲೇಔಟ್ ಗೆ ಆಟೋ ರಿಕ್ಷಾದಲ್ಲಿ ಆಗಮಿಸಿದ್ದು ಬೆಳಕಿಗೆ ಬಂದಿದೆ. ಆರೋಪಿ ಸಂತೆಕಟ್ಟೆಯಿಂದ ಶ್ಯಾಮ್ ಎಂಬವರು ಆಟೋ ರಿಕ್ಷಾದಲ್ಲಿ ಕೊಲೆಯಾದ ಹಸೀನಾ ಅವರ ಮನೆಗೆ ಆಗಮಿಸಿದ್ದಾನೆ. ಈ ಬಗ್ಗೆ ಮಾಧ್ಯಮದವರ ಜೊತೆ ಮಾತನಾಡಿದ ಶ್ಯಾಮ್, “ಬೆಳಗ್ಗೆ 8:30ರಿಂದ 9 ಗಂಟೆಯ ಮಧ್ಯೆ ದ್ವಿಚಕ್ರ ವಾಹನದಲ್ಲಿ ಬಂದಿದ್ದ ವ್ಯಕ್ತಿಯೋರ್ವ ಕ್ವೀನ್ಸ್ ರಸ್ತೆಯಲ್ಲಿ ನನ್ನ ರಿಕ್ಷಾವನ್ನು ಏರಿದ್ದಾನೆ. ನೇಜಾರುವಿನ ತೃಪ್ತಿ ಲೇಔಟ್ ಗೆ ಕರೆದೊಯ್ಯುವಂತೆ ಸೂಚಿಸಿದ್ದಾನೆ. ಅದರಂತೆ ಆತನನ್ನು ತೃಪ್ತಿ ಲೇಔಟ್ ನಲ್ಲಿ ಇದೀಗ ಕೊಲೆ ನಡೆದಿರುವ ಮನೆಯ ಗೇಟ್ ಬಳಿ ಬಿಟ್ಟಿದ್ದೇನೆ” ಎಂದು ತಿಳಿಸಿದ್ದಾರೆ. “ಕೊಲೆ ನಡೆದಿರುವ ಮನೆಗೆ ನಾನು ಬಿಟ್ಟ ಬಳಿಕ 15 ನಿಮಿಷಗಳ ಅಂತರದಲ್ಲಿ ಆತ ಮತ್ತೆ ಸಂತೆಕಟ್ಟೆ ಆಟೋ ನಿಲ್ದಾಣಕ್ಕೆ ಬಂದು ಕ್ಯೂನಲ್ಲಿದ್ದ ಬೇರೊಂದು ರಿಕ್ಷಾ ಏರಿದ್ದಾನೆ. ಈ ವೇಳೆ ಆತನನ್ನು ಗುರುತಿಸಿದ ನಾನು ಇಷ್ಟು…

Read More

ಉಡುಪಿ: ಉಡುಪಿ ತಾಲ್ಲೂಕಿನ ಕೆಮ್ಮಣ್ಣು ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದ ಪ್ರಕರಣ ನಡೆದಿದ್ದು ತನಿಖೆ ಮುಂದುವರಿದಿದ್ದು, ಪೊಲೀಸರಿಗೆ ಮಹತ್ವದ ಸುಳಿವು ಲಭಿಸಿದೆ ಎಂದು ತಿಳಿದು ಬಂದಿದೆ. ಉಡುಪಿಯ ಸಂತೆ ಕಟ್ಟೆಯಿಂದ ಆಟೋದಲ್ಲಿ ಬಂದ ಬೋಳು ತಲೆಯ , ಮಾಸ್ಕ್‌ ಧರಿಸಿದ್ದ ದುಷ್ಕರ್ಮಿ, ಉಡುಪಿ ಜಿಲ್ಲೆಯ ಮಲ್ಪೆ ಠಾಣಾ ವ್ಯಾಪ್ತಿಯ ನೇಜಾರು ಸಮೀಪದ ತೃಪ್ತಿ ಲೇ ಔಟ್‌ ವೊಂದರಲ್ಲಿದ್ದ ನಾಲ್ವರ ಹತ್ಯೆಗೈದಿದ್ದ. ತಾಯಿ ಮತ್ತು ಮೂವರು ಮಕ್ಕಳು ಹತ್ಯೆಯಾದವರು. ಇನ್ನೂ ನೂರ್‌ ಮೊಹಮ್ಮದ್‌ ಅವರ ತಾಯಿ ಹಾಜಿರಾಬಿ(70) ಅವರು ಗಂಭೀರ ಗಾಯಗೊಂಡು ಅರೆ ಪ್ರಜ್ಙಾವಸ್ಥೆಯಲ್ಲಿದ್ದು ಆಸ್ಫತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಭಾನುವಾರ (ನ.12) ಬೆಳಗಿನ ಸಮಯ ಈ ಬರ್ಬರ ಹತ್ಯೆ ನಡದಿದ್ದು, ತಾಯಿ ಹಸೀನಾ (46) ಹಾಗೂ ಮಕ್ಕಳಾದ ಅಫ್ನಾನ್ (23), ಅಯ್ನಾಝ್ (21), ಆಸಿಂ (12) ಮೃತ ದುರ್ದೈವಿಗಳು. ಹಸೀನಾ ಗೃಹಿಣಿಯಾಗಿದ್ದು ಈಕೆಯ ಪತಿ ನೂರ್ ಮಹಮ್ಮದ್ ಸೌದಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ದಂಪತಿಗೆ ಮೂವರು ಮಕ್ಕಳಿದ್ದು, ಹಿರಿಯ ಪುತ್ರಿ ಅಫ್ನಾನ್…

Read More

ಮಂಗಳೂರು:ನಿಷೇಧಿತ ಮಾದಕ ವಸ್ತುಗಳ ವಿರುದ್ಧ ಸಮರ ಸಾರಿರುವ ಮಂಗಳೂರು ಸಿಸಿಬಿ ಪೊಲೀಸರು ಓರ್ವ ಆರೋಪಿಯ ಹೆಡೆಮುರಿಟ್ಟಿ ಜೈಲಿಗಟ್ಟಿದ್ದಾರೆ. ಬಂಧಿತ ಆರೋಪಿ ಉಳ್ಳಾಲದ ಹರೇಕಳ ಗ್ರಾಮದ, ಪ್ರಸ್ತುತ ಬಜಾಲ್ ಪಡ್ಪು ನಿವಾಸಿ ಹಸೈನಾರ್ ಯಾನೆ ಅಚ್ಚು(32) ಎಂದು ಗುರುತಿಸಲಾಗಿದೆ. ಈತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.ಈ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ ಪೊಲೀಸರು ಆರೋಪಿಯಿಂದ 12 ಗ್ರಾಂ ತೂಕದ 60,000 ಮೌಲ್ಯದ ಎಂಡಿಎಂಎ ಮಾದಕ ವಸ್ತು, 1 ಮೊಬೈಲ್ ಫೋನ್, 1 ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ.ಸೊತ್ತುಗಳ ಒಟ್ಟು ಮೌಲ್ಯ 70,500 ಆಗಬಹುದು ಎಂದು ಅಂದಾಜು ಮಾಡಲಾಗಿದೆ.ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.ಇನ್ನು ವಿಚಾರಣೆಯ ವೇಳೆ ಈ ಹಿಂದೆ ಆರೋಪಿ ವಿರುದ್ಧ ನಗರದ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಮತ್ತು ಹಲ್ಲೆ ಪ್ರಕರಣ ಹಾಗೂ ಪಾಂಡೇಶ್ವರ ಠಾಣೆಯಲ್ಲಿ ಹಲ್ಲೆ…

Read More

ಪುತ್ತೂರು: ಮಗನ ಮೇಲೆ ಜೀವಬೆದರಿಕೆ ಇದೆಯೆಂದು ಈ ಹಿಂದೆ ನಡೆದ ಘಟನೆಗೆ ಸಂಬಂಧಿಸಿದಂತೆ ಇದೀಗ ಹಲ್ಲೆ ಯತ್ನ ನಡೆದಾಗ ಮನೀಶ್ ಕುಲಾಲ್ ತಂದೆ ಆನಂದ್ ಎಂಬವರು ಹಿಂದೂ ಜಾಗರಣ ವೇದಿಕೆಯ ಮುಖಂಡ ಅಜಿತ್ ರೈ ಹೊಸಮನೆ ಮೇಲೆ ದೂರು ದಾಖಲಿಸಿದ್ದಾರೆ. ತನ್ನ ಮನೆಗೆ ಅಕ್ರಮ ಪ್ರವೇಶ ಮಾಡಿ ಮಗನಿಗೆ ಹಲ್ಲೆಯತ್ನ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವಬೆದರಿಕೆಯೊಡ್ಡಿರುವುದಾಗಿ ಆರೋಪಿಸಿ ಅಜಿತ್ ರೈ ಹೊಸಮನೆ ವಿರುದ್ಧ ಆನಂದ ಎಸ್.ಅವರು ಪುತ್ತೂರು ನಗರ ಪೊಲೀಸ್ ಠಾಣೆಗೆ ನ.10ರಂದು ದೂರು ನೀಡಿದ್ದಾರೆ. ಜುಲೈ 10ರಂದು ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಆರೋಪಿತ ಅಜಿತ್ ರೈ ಹೊಸಮನೆ ಅವರು ಮನೆಗೆ ಅಕ್ರಮವಾಗಿ ಪ್ರವೇಶಿಸಿ ನನ್ನ ಮಗ ಮನೀಶ್ ಕುಲಾಲ್ ಮೇಲೆ ಹಲ್ಲೆ ಮಾಡಲು ಪ್ರಯತ್ನಿಸಿ ಅವಾಚ್ಯ ಶಬ್ದಗಳಿಂದ ಬೈದು ಮಗನಿಗೆ ಜೀವ ಬೆದರಿಕೆ ಒಡ್ಡಿರುವುದು ನನಗೆ ತಡವಾಗಿ ತಿಳಿದಿರುತ್ತದೆ.ಈ ವಿಷಯವನ್ನು ದೊಡ್ಡದು ಮಾಡಬಾರದೆಂದು ನನ್ನ ಮಕ್ಕಳು ನನಗೆ ತಿಳಿಸಿರಲಿಲ್ಲ.ಆದರೆ ನ.10ರಂದು ಮಗ ಮನೀಶ್ ಕುಲಾಲ್‌ನ ಮೇಲೆ ಹಲ್ಲೆ…

Read More

ಮಲ್ಪೆ: ಉಡುಪಿಯ ನೇಜಾರು ಸಮೀಪ ಒಂದೇ ಕುಟುಂಬದ ನಾಲ್ವರ ಹತ್ಯೆ ನಡೆದಿದ್ದು ಹಬ್ಬದ ದಿನ ಸುದ್ದಿ ಕೇಳಿ ಜನ ಬೆಚ್ಚಿ ಬಿದ್ದಿದ್ದಾರೆ.ಮನೆಗೆ ನುಗ್ಗಿ ತಾಯಿ ಹಾಗೂ ಮೂವರು ಮಕ್ಕಳನ್ನು ಹತ್ಯೆ ಮಾಡಲಾಗಿದೆ. ವಿಷಯ ತಿಳಿದು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಮಲ್ಪೆ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಹಸೀನಾ 46,ಅಫ್ನಾನ್ 23,ಅಯ್ನಾಝ್ 21 ,ಆಸಿಂ 12 ಕೊಲೆಗೀಡಾದವರು. ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.

Read More

ಮಂಗಳೂರು: ನಗರದ ಪ್ರಮುಖ ಆಸ್ಪತ್ರೆಗಳು, ಶಾಲಾ – ಕಾಲೇಜು ಸೇರಿದಂತೆ ಕೆಲ ವಸತಿ ಪ್ರದೇಶಗಳನ್ನು ಗುರುತಿಸಿ ನಗರದ 10 –15 ಕಡೆಗಳಲ್ಲಿ ನಿಶಬ್ದ ವಲಯ ಘೋಷಣೆಗೆ ಸಿದ್ಧತೆ ನಡೆಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದರು. ಕಚೇರಿಯಲ್ಲಿ ಪೊಲೀಸ್ ಫೋನ್ – ಇನ್ ಕಾರ್ಯಕ್ರಮದಲ್ಲಿ ನಗರದ ನಾಗರಿಕರೊಬ್ಬರು, ಬಿಜೈನಲ್ಲಿ ಬಸ್‌ಗಳಿಂದ ಕರ್ಕಶ ಹಾರನ್‌ಗಳು ಕೇಳುತ್ತದೆ. ತಕ್ಷಣ ಕ್ರಮಕೈಗೊಳ್ಳಬೇಕು ಎಂದು ದೂರಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೊಲೀಸ್ ಕಮಿಷನರ್ ಪ್ರತಿಕ್ರಿಯಿಸಿ ಈಗಾಗಲೇ ಹಂಪನಕಟ್ಟೆಯ ಲೇಡಿಗೋಶನ್ ಆಸ್ಪತ್ರೆ ವ್ಯಾಪ್ತಿಯಲ್ಲಿ ಹಾರನ್ ರಹಿತ ವಲಯವನ್ನಾಗಿ ಘೋಷಿಸಲಾಗಿದ್ದು, ಉತ್ತಮ ಸ್ಪಂದನೆ ದೊರೆತಿದೆ ಎಂದರು. ಮಂಗಳೂರು ಸೆಂಟ್ರಲ್ ಮತ್ತು ಜಂಕ್ಷನ್‌ ರೈಲು ನಿಲ್ದಾಣಗಳಲ್ಲಿ ಆಟೋದಲ್ಲಿ ಪ್ರೀ ಪೇಯ್ಡ್‌ಗಿಂತ ಅಧಿಕ ಹಣ ವಿಧಿಸಲಾಗುತ್ತದೆ ಎಂದು ಸಾರ್ವಜನಿಕರೊಬ್ಬರು ದೂರಿದರು. ನಗರದ ಕೆಲವು ಪ್ರಮುಖ ಹೊಟೇಲ್‍ಗಳಲ್ಲಿ ಏಜೆನ್ಸಿಗಳು ರಜಾದಿನಗಳ ಪ್ಯಾಕೇಜ್ ಎಂದು ಸದಸ್ಯತ್ವ ಮಾಡಿ ಹಣ ವಂಚನೆ ಮಾಡುತ್ತಿವೆ ಎಂದು ಕದ್ರಿಯ ನಿವಾಸಿಯೊಬ್ಬರು ತಿಳಿಸಿದರು. ಈ ಬಗ್ಗೆ ಕ್ರಮ ವಹಿಸುವಂತೆ ಕಮಿಷನರ್…

Read More

ಪುತ್ತೂರು : ಪುತ್ತಿಲ ಪರಿವಾರ ಕಚೇರಿ ಮುಂಭಾಗ ತಲವಾರು ಪ್ರದರ್ಶಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ವಶದಲ್ಲಿರುವ ಹಿಂದೂ ಜಾಗರಣ ವೇದಿಕೆಯ ದಿನೇಶ್ ಪಂಜಿಗ ಸೇರಿದಂತೆ 9 ಮಂದಿಗೆ ನವೆಂಬರ್ 15ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನವೆಂಬರ್ 10ರಂದು ಮಧ್ಯಾಹ್ನ ಪುತ್ತಿಲ ಪರಿವಾರದ ಕಚೇರಿ ಮುಂಭಾಗ ಕಾರಿನಲ್ಲಿ ಬಂದ ಜಾಗರಣ ವೇದಿಕೆಯ ದಿನೇಶ್ ಪಂಜಿಗ ಮತ್ತು ಅವರ ತಂಡ ತಲವಾರು ಪ್ರದರ್ಶಿಸಿ ಪುತ್ತಿಲ ಪರಿವಾರದ ಮನೀಶ್ ಕುಲಾಲ್ ಗೆ ಬೆದರಿಕೆ ಹಾಕಿದ್ದರು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಪೊಲೀಸರು ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಹಸಂಯೋಜಕ ದಿನೇಶ್ ಪಂಜಿಗ, ಭವಿತ್, ಮನ್ವಿತ್, ಜಯಪ್ರಕಾಶ್, ಚರಣ್, ಮನೀಶ್, ವಿನೀತ್ ಸೇರಿದಂತೆ ಇಬ್ಬರು ಅಪ್ರಾಪ್ತ ಬಾಲಕರ ಬಂಧಿಸಿದ್ದರು. ಇದೀಗ ನ್ಯಾಯಲಯ ಎಲ್ಲಾ ಆರೋಪಿಗಳಿಗೆ ನವೆಂಬರ್ 15 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

Read More