Author: main-admin

ಮಂಗಳೂರು: ನಗರದ ಜೆಪ್ಪು ಮಹಾಕಾಳಿಪಡ್ಪುಬಳಿ ಗೆಳೆಯರೊಂದಿಗೆ ಕ್ರಿಕೆಟ್ ಆಟವಾಡುತ್ತಿದ್ದ ಬಾಲಕ ವಿದ್ಯುತ್ ತಂತಿ ತಗುಲಿದ ಪರಿಣಾಮ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಮೂಲತಃ ಹಾವೇರಿಯ ಜಿಲ್ಲೆಯ ಬ್ಯಾಡಗಿ ತಾಲೂಕಿನ ಬನ್ನಿಹಟ್ಟಿ ಗ್ರಾಮದ ಪ್ರಸಕ್ತ ಜೆಪ್ಪು ಮಹಾಕಾಳಿಪಡ್ಪುನಿರ್ಮಲ ನಗರದಲ್ಲಿ ವಾಸವಾಗಿದ್ದ ಕಣ್ಣನ ಗೌಡ ಎಂಬವರ ಪುತ್ರ ವರುಣ್ (15) ಮೃತಪಟ್ಟ ಬಾಲಕ. ಎ.11ರಂದು ಮಹಾಕಾಳಿಪಡ್ಪಿಅಂಡರ್‌ಪಾಸ್ ಬಳಿಯ ಭಜನಾಮಂದಿರದ ಸಮೀಪ ಕ್ರಿಕೆಟ್ ಆಟವಾಡುತ್ತಿದ್ದ ವೇಳೆ ಮಂದಿರದ ಛಾವಣಿ ಬಿದ್ದ ಬಾಲ್ ಹೆಕ್ಕಲು ಹೋದಾಗ ವಿದ್ಯುತ್ ತಂತಿ ತಗುಲಿದ್ದು ಸ್ಥಳದಲ್ಲೇ ಮೃತಪಟ್ಟಿದ್ದ. ವಾರದ ಹಿಂದೆಷ್ಟೇ ಎಸೆಸೆಲ್ಸಿ ಪರೀಕ್ಷೆ ಬರೆದಿದ್ದ ವರುಣ್ ಫಲಿತಾಂಶದ ನಿರೀಕ್ಷೆಯಲ್ಲಿದ್ದ. ತಂದೆ ಕಣ್ಣನ ಗೌಡ ಮಹಾಕಾಳಿಪಡ್ಪುವಿನಲ್ಲಿ ಸಣ್ಣ ಕ್ಯಾಂಟೀನ್ ನಡೆಸುತ್ತಿದ್ದಾರೆ. ತಂದೆ-ತಾಯಿ, ಅಣ್ಣ ಮತ್ತು ಮೂರುವರೆ ವರ್ಷದ ತಂಗಿಯನ್ನು ವರುಣ್ ಅಗಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಬಾಲಕನ ಮನೆಗೆ ಭೇಟಿ ನೀಡಿದ್ದು, ಹೆತ್ತವರಿಗೆ ಸಾಂತ್ವನ ಹೇಳಿ ಪರಿಹಾರ ದೊರಕಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ.

Read More

ವಿಟ್ಲ: ಮನೆಯ ಆವರಣದಲ್ಲಿ ಯಾವುದೇ ಮುನ್ನೆಚ್ಚರಿಕೆ ವಹಿಸದೆ ಅಕ್ರಮವಾಗಿ ಸ್ಫೋಟಕ ಸಾಮಗ್ರಿಗಳನ್ನು ಸಂಗ್ರಹಿಸಿ ಸುಡುಮದ್ದು ತಯಾರಿಸುತ್ತಿದ್ದ ವ್ಯಕ್ತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕಂಬಳಬೆಟ್ಟು ಬಳಿಯ ಅಮೈ ನಿವಾಸಿ ಜಗದೀಶ ಪೂಜಾರಿ ಎಂದು ಗುರುತಿಸಲಾಗಿದೆ. ಏಪ್ರಿಲ್ 13ರಂದು ರಾತ್ರಿ ಜಗದೀಶ ಅವರು ತಮ್ಮ ಮನೆಯ ಆವರಣದಲ್ಲಿ ಸ್ಫೋಟಕ ವಸ್ತುಗಳನ್ನು ದಾಸ್ತಾನು ಮಾಡಿರುವ ಕುರಿತು ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಹಿನ್ನೆಲೆ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಬಿ.ಎಸ್. ನಾಯಕ್ ನೇತೃತ್ವದ ತಂಡ ಸ್ಥಳಕ್ಕೆ ದಾಳಿ ನಡೆಸಿದ ವೇಳೆ ಸುಮಾರು 1.9 ಕೆ.ಜಿ ತೂಕದ ಸಂಶಯಾಸ್ಪದ ಸ್ಫೋಟಕ ವಸ್ತುಗಳನ್ನು ಪತ್ತೆಹಚ್ಚಲಾಗಿದೆ. ಜನವಸತಿ ಪ್ರದೇಶದಲ್ಲಿ ಯಾವುದೇ ಸುರಕ್ಷತಾ ಕ್ರಮಗಳಿಲ್ಲದೆ ಅಪಾಯಕಾರಿ ಸ್ಫೋಟಕ ವಸ್ತುಗಳನ್ನು ಸಂಗ್ರಹಿಸಿದ್ದ ಹಿನ್ನೆಲೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 93/2026ರಂತೆ ಸ್ಫೋಟಕ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Read More

ಮಂಗಳೂರು: ನಂತೂರು ತಾರಾಯಿತೋಟ ಎಂಬಲ್ಲಿ ಕಳೆದ ಶನಿವಾರ ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹಿರಿಯ ಛಾಯಾಗ್ರಾಹಕ ಕೆ. ಮೋಹನ್ ಚಂದರ್ (64) ಅವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಬೆಳಿಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶನಿವಾರ ರಾತ್ರಿ ಸುಮಾರು 8:30ರ ಸುಮಾರಿಗೆ ಧರ್ಮಸ್ಥಳ ಮೂಲದ ಬೈಕ್ ಸವಾರ ಗೋಪಾಲಕೃಷ್ಣ (27) ಎಂಬಾತ ಅತಿವೇಗವಾಗಿ ಬೈಕ್ ಚಲಾಯಿಸಿ, ಓವರ್‌ಟೇಕ್ ಮಾಡುವ ಭರದಲ್ಲಿ ಮೋಹನ್ ಚಂದರ್ ಅವರ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದ. ಡಿಕ್ಕಿಯ ರಭಸಕ್ಕೆ ಗೋಪಾಲಕೃಷ್ಣ ಟಿಪ್ಪರ್‌ಗೆ ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದರೆ, ರಸ್ತೆಗೆ ಎಸೆಯಲ್ಪಟ್ಟ ಮೋಹನ್ ಚಂದರ್ ಅವರ ತಲೆಗೆ ಗಂಭೀರ ಗಾಯವಾಗಿತ್ತು.ಅಪಘಾತದ ದೃಶ್ಯವು ಟೆಂಪೋ ಒಂದರ ಡ್ಯಾಶ್ ಕ್ಯಾಮ್‌ನಲ್ಲಿ ಸೆರೆಯಾಗಿದ್ದು, ಟೆಂಪೋ ಚಾಲಕ ಗಂಗಾಧರ್ ಅವರು ತಕ್ಷಣ ಮೋಹನ್ ಅವರನ್ನು ಕಂಕನಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಕಳೆದ ಎರಡು ದಿನಗಳಿಂದ ಐಸಿಯುನಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಮೋಹನ್ ಚಂದರ್ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಮೃತರು ಪದವಿನಂಗಡಿಯಲ್ಲಿ ಸ್ಟುಡಿಯೋ ಹೊಂದಿದ್ದರು.

Read More

ಬೆಂಗಳೂರು: ರಾಜ್ಯದ ಎಸ್‌ಎಸ್‌ಎಲ್‌ಸಿ (SSLC) ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯು ಮಹತ್ವದ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಒಟ್ಟು ಅಂಕಗಳಲ್ಲಿ ಬದಲಾವಣೆಯಾಗಲಿದ್ದು, ಈ ಕುರಿತು ಶಿಕ್ಷಣ ಇಲಾಖೆಯು ಅಧಿಕೃತ ಕರಡು ಅಧಿಸೂಚನೆಯನ್ನು ಹೊರಡಿಸಿದೆ. 525 ಅಂಕಗಳ ಹೊಸ ಸೂತ್ರ: ಈ ಮೊದಲು ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಒಟ್ಟು 625 ಅಂಕಗಳಿಗೆ ನಡೆಯುತ್ತಿತ್ತು. ಆದರೆ, ಹೊಸ ನಿಯಮದ ಪ್ರಕಾರ ತೃತೀಯ ಭಾಷೆ (Third Language) ವಿಷಯಕ್ಕೆ ನೀಡಲಾಗುತ್ತಿದ್ದ 100 ಅಂಕಗಳನ್ನು ತೆಗೆದುಹಾಕಲಾಗಿದೆ. ಇದರ ಬದಲಾಗಿ ತೃತೀಯ ಭಾಷೆಯಲ್ಲಿ ಕೇವಲ ‘ಗ್ರೇಡ್‌’ (Grade System) ನೀಡಲು ತೀರ್ಮಾನಿಸಲಾಗಿದೆ. ಹೀಗಾಗಿ, ಇನ್ಮುಂದೆ ಫಲಿತಾಂಶವನ್ನು ಒಟ್ಟು 525 ಅಂಕಗಳಿಗೆ ಪರಿಗಣಿಸಲಾಗುತ್ತದೆ. ಉತ್ತೀರ್ಣರಾಗಲು ಮಾನದಂಡಗಳೇನು? ಹೊಸ ಅಧಿಸೂಚನೆಯಲ್ಲಿ ಉತ್ತೀರ್ಣರಾಗಲು ಅಗತ್ಯವಿರುವ ಕನಿಷ್ಠ ಅಂಕಗಳ ಬಗ್ಗೆ ಸ್ಪಷ್ಟಪಡಿಸಲಾಗಿದೆ: ಒಟ್ಟು ಅಂಕಗಳು: 525 ಅಂಕಗಳಲ್ಲಿ ಕನಿಷ್ಠ 173 ಅಂಕಗಳನ್ನು (ಶೇ. 33) ಗಳಿಸುವುದು ಕಡ್ಡಾಯ. ವಿಷಯವಾರು ಅಂಕ: ಪ್ರತಿ ವಿಷಯದಲ್ಲಿ ಕನಿಷ್ಠ ಶೇ. 30ರಷ್ಟು ಅಂಕಗಳನ್ನು ಪಡೆಯಲೇಬೇಕು. ತೃತೀಯ ಭಾಷೆಗೆ ಗ್ರೇಡ್ ಸಿಸ್ಟಮ್: ತೃತೀಯ ಭಾಷೆಯ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಪಡೆಯುವ ಅಂಕಗಳ ಆಧಾರದ ಮೇಲೆ ಕೆಳಗಿನಂತೆ ಗ್ರೇಡ್ ನೀಡಲಾಗುತ್ತದೆ:…

Read More

ಬಾಲಕಿಯೊಬ್ಬಳು ಜೋಕಾಲಿ ಆಡಲು ಹೋಗಿ ಪ್ರಾಣ ಕಳೆದುಕೊಂಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಲೇಖನಾ (10) ಮೃ*ತ ದುರ್ದೈ*ವಿ. ಘಟನೆ ನಡೆದ ಸಮಯದಲ್ಲಿ ಬಾಲಕಿಯ ಪೋಷಕರು ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ. ಮನೆಯವರು ಹೊರಗೆ ಹೋಗಿದ್ದಾಗ ಒಂಟಿಯಾಗಿದ್ದ ಲೇಖನಾ, ಮನೆಯಲ್ಲಿ ಹಾಕಿದ್ದ ಸೀರೆ ಜೋಕಾಲಿಯಲ್ಲಿ ಆಟವಾಡಲು ಮುಂದಾಗಿದ್ದಾಳೆ. ಈ ವೇಳೆ ಆಕಸ್ಮಿಕವಾಗಿ ಸೀರೆ ಆಕೆಯ ಕೊರಳಿಗೆ ಬಿಗಿದುಕೊಂಡಿದೆ. ಗಾಬರಿಗೊಂಡ ಬಾಲಕಿ ಸೀರೆಯನ್ನು ಬಿಡಿಸಿಕೊಳ್ಳಲು ಪ್ರಯತ್ನಿಸಿದರೂ ಸಾಧ್ಯವಾಗದೆ, ಕತ್ತು ಸಿಲುಕಿ ಸ್ಥಳದಲ್ಲೇ ಉಸಿರುಗಟ್ಟಿ ಸಾವನ್ನಪ್ಪಿದ್ದಾಳೆ. ಪೋಷಕರು ಮನೆಗೆ ಮರಳಿದಾಗ ಬಾಲಕಿ ಶವವಾಗಿ ಪತ್ತೆಯಾಗಿದ್ದು, ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ಸಂಬಂಧ ಚಿಕ್ಕಮಗಳೂರು ಗ್ರಾಮಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ವಿಜಯಪುರ ನಗರದ ಆದರ್ಶನಗರ ಪೊಲೀಸ್ ಠಾಣೆಯ ಪಿಎಸ್‌ಐ ಸೀತಾರಾಮ್ ಲಮಾಣಿ ಭ್ರಷ್ಟಾಚಾರ ಕಿರುಕುಳಕ್ಕೆ ಬೇಸತ್ತು ಸಿಎಂ, ಗೃಹಸಚಿವ ಸೇರಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ಠಾಣಾ ಸಿಬ್ಬಂದಿ ಹಾಗೂ ಅಧಿಕಾರಿಗಳು ಸಾಮೂಹಿಕ ದಯಾಮರಣ ಕೋರಿ ಪತ್ರ ಬರೆದಿದ್ದಾರೆ. ಪಿಎಸ್‌ಐ ಲಮಾಣಿ ಆದರ್ಶನಗರ ಪೊಲೀಸ್ ಠಾಣೆಯಿಂದ ತಿಕೋಟ ಪೊಲೀಸ್ ಠಾಣೆಗೆ ವರ್ಗಾವಣೆಗಾಗಿ ಹಣ ಹೊಂದಿಸುತ್ತಿದ್ದಾರೆ. ಹೀಗಾಗಿ ಹಣಕ್ಕಾಗಿ ವಿಪರೀತ ಭ್ರಷ್ಟಾಚಾರ, ಕಾನೂನು ಬಾಹಿರ ಚಟುವಟಿಕೆಗಳಿಂದ ಸಾರ್ವಜನಿಕರಲ್ಲಿ ಹಾಗೂ ಸಿಬ್ಬಂದಿ ವರ್ಗದಲ್ಲಿ ಪಿಎಸ್‌ಐ ತೊಂದರೆಯುಂಟು ಮಾಡುತ್ತಿದ್ದಾರೆ. ಠಾಣೆಯಲ್ಲಿ ದಾಖಲಾಗುವ ಎಫ್‌ಐಆರ್, ದೂರುದಾರರಿಂದ 10,000 ರೂ.ಯಿಂದ 1 ಲಕ್ಷ ರೂ.ವರೆಗೆ ಸಿಬ್ಬಂದಿ ಹಣ ವಸೂಲಿ ಮಾಡಬೇಕು ಎಂದು ಒತ್ತಡ ಹೇರಿದ್ದಾರೆ. ಇನ್ನು ಹಣ ವಸೂಲಿಗೆ 5.0 ಕೋಡ್ ಅಂದ್ರೆ 50,000 ರೂ. ಹೀಗೆ ಕೋಡ್ ಬಳಸಿ ಹಣ ವಸೂಲಿ ಮಾಡಲು ಒತ್ತಡ ಹೇರುತ್ತಿದ್ದಾರೆ. ಇದರ ಜೊತೆಗೆ ಬಾರ್, ಸ್ಪಾ, ಸಿಗರೇಟ್ ಹಾಗೂ ಮಾವಾ (ತಂಬಾಕು), ವೇಶ್ಯಾವಾಟಿಕೆ ಸೇರಿದಂತೆ ಅನೇಕ ವ್ಯವಹಾರಗಳಿಂದ ವಸೂಲಿಗೆ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿಸಿದ್ದಾರೆ.…

Read More

ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ ಅಕ್ರಮವಾಗಿ ಸಾಗಿಸುತ್ತಿದ್ದ ಎಂಟು ಜಾನುವಾರುಗಳನ್ನು ಹಾಗೂ ಸಾಗಾಟಕ್ಕೆ ಬಳಸಿದ ಎರಡು ವಾಹನಗಳನ್ನು ಮೂಡುಬಿದಿರೆ ಪೊಲೀಸರು ಭಾನುವಾರ ತೋಡಾರು ಎಂಬಲ್ಲಿ ವಶಕ್ಕೆ ಪಡೆದಿದ್ದಾರೆ. ಮೂಡುಬಿದಿರೆ ಪೊಲೀಸ್ ಠಾಣೆಯ ಪಿಎಸ್‌ಐ ಪ್ರತಿಭಾ ಕೆ.ಸಿ. ಹಾಗೂ ಸಿಬ್ಬಂದಿ ಗಸ್ತು ಕರ್ತವ್ಯದಲ್ಲಿದ್ದಾಗ, ತೋಡಾರು ಕಡೆಗೆ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಲಭಿಸಿದೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ತೋಡಾರು ಗ್ರಾಮದ ಪ್ರವೇಶದ್ವಾರದ ಬಳಿ ಗರಡಿ ಕಡೆಯಿಂದ ಬರುತ್ತಿದ್ದ ವ್ಯಾಗನ್-ಆರ್ ಕಾರು ಮತ್ತು ಅದನ್ನು ಹಿಂಬಾಲಿಸುತ್ತಿದ್ದ ಪಿಕಪ್ ವಾಹನವನ್ನು ತಡೆಯಲು ಸಂಕೇತ ನೀಡಿದರು. ಆದರೆ, ವಾಹನಗಳು ನಿಲ್ಲಿಸದೆ ಮುನ್ನುಗ್ಗಿದಾಗ ಪೊಲೀಸರು ಬೆನ್ನಟ್ಟಿ ಅವುಗಳನ್ನು ತಡೆದಿದ್ದಾರೆ. ಪೊಲೀಸರು ವಾಹನವನ್ನು ಸುತ್ತುವರಿಯುತ್ತಿದ್ದಂತೆಯೇ, ಪಿಕಪ್ ಚಾಲಕ ಹರ್ಷದ್ ಮತ್ತು ಆತನೊಂದಿಗಿದ್ದ ಇತರರು ಸ್ಥಳದಿಂದ ಓಡಿಹೋಗಿದ್ದಾರೆ. ಪಿಕಪ್ ವಾಹನಕ್ಕೆ ಬೆಂಗಾವಲಾಗಿ (ಎಸ್ಕಾರ್ಟ್) ಬಂದಿದ್ದ ವ್ಯಾಗನ್-ಆರ್ ಕಾರಿನ ಚಾಲಕ ಸಫರ್ ಹಾಗೂ ಹಂಡೇಲು ನಿವಾಸಿ ಅಬೂಬಕರ್ ಕೂಡ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರು ಪಿಕಪ್ ವಾಹನವನ್ನು ಪರಿಶೀಲಿಸಿದಾಗ, ಅದರಲ್ಲಿ…

Read More

ಮಂಗಳೂರು: ಗಂಜಿಮಠದ ಮುಚ್ಚೂರು ಕ್ರಾಸ್ ಬಳಿ ಮದುವೆ ಕಾರ್ಯಕ್ರಮದ ಹಿನ್ನೆಲೆ ಭಾರೀ ಟ್ರಾಫಿಕ್ ಜಾಮ್ ಉಂಟಾದ ಪ್ರಕರಣದಲ್ಲಿ ಹಾಲ್ ಮಾಲೀಕರು ಮತ್ತು ಆಯೋಜಕರ ವಿರುದ್ಧ ಬಜಪೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 12ರಂದು ಮಧ್ಯಾಹ್ನ 12ರಿಂದ 2 ಗಂಟೆಯವರೆಗೆ ನಡೆದ ಈ ಘಟನೆ ವೇಳೆ, ರಾಯಲ್ ಪ್ಯಾಲೇಸ್ ಮತ್ತು ಒಂಡೆಲಾ ಹಾಲ್‌ನಲ್ಲಿ ಮದುವೆ ಕಾರ್ಯಕ್ರಮಕ್ಕೆ ಬಂದ ವಾಹನಗಳಿಗೆ ಸಮರ್ಪಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿರಲಿಲ್ಲ. ಪರಿಣಾಮವಾಗಿ ರಾಷ್ಟ್ರೀಯ ಹೆದ್ದಾರಿ 169ರ ಮೇಲೆಯೇ ವಾಹನಗಳನ್ನು ನಿಲುಗಡೆ ಮಾಡಲಾಗಿದ್ದು, ಸಂಚಾರಕ್ಕೆ ಭಾರೀ ಅಡ್ಡಿ ಉಂಟಾಗಿದೆ.ಈ ಅವ್ಯವಸ್ಥೆಯಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗಿದ್ದು, ಅಪಾಯಕರ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಲ್ ಮಾಲೀಕರು ಹಾಗೂ ಕಾರ್ಯಕ್ರಮ ಆಯೋಜಕರ ವಿರುದ್ಧ ಬಜಪೆ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲಾಗಿದೆ.ಭಾರತೀಯ ನ್ಯಾಯ ಸಂಹಿತೆ (BNS) ಕಲಂ 126(2), 285, 292 ಮತ್ತು ಮೋಟಾರು ವಾಹನ ಕಾಯ್ದೆ (IMV Act) ಕಲಂ 122ರಡಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ.

Read More

ಶಿಕ್ಷಕರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ದುರ್ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮೃತ ವಿದ್ಯಾರ್ಥಿಯನ್ನು ಅನಿಕೇತ್ (14) ಎಂದು ಗುರುತಿಸಲಾಗಿದೆ. ಆತ ಜಯಪುರದ ಗುರುಕುಲ ಮಾದರಿಯ ಶ್ರೀ ಸತ್ಯಸಾಯಿ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಮೃತ ವಿದ್ಯಾರ್ಥಿ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಮೂಲದವನಾಗಿದ್ದಾನೆ. ಭಾನುವಾರ ಮಧ್ಯಾಹ್ನ ಶಿಕ್ಷಕರೊಂದಿಗೆ ಈಜುಕೊಳಕ್ಕೆ ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದೆ. ಈಜಾಡುತ್ತಿದ್ದಾಗ ಅನಿಕೇತ್ ನೀರಿನಲ್ಲಿ ಮುಳುಗಿ ತೀವ್ರ ಅಸ್ವಸ್ಥಗೊಂಡಿದ್ದಾನೆ. ತಕ್ಷಣವೇ ಆತನನ್ನು ನೀರಿನಿಂದ ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಕೊನೆಯುಸಿರೆಳೆದಿದ್ದಾನೆ. ಮೃತ ಅನಿಕೇತ್ ವಿಟ್ಲದ ಕಾಶಿಮಠ ನಿವಾಸಿ ಗೋವರ್ಧನ್ ನಾಯಕ್ ಅವರ ಪುತ್ರನಾಗಿದ್ದಾನೆ. ಗೋವರ್ಧನ್ ನಾಯಕ್ ಅವರು ಜೀವವಿಮಾ ಪ್ರತಿನಿಧಿಯಾಗಿದ್ದು, ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಜೀವವಿಮಾ ನಿಗಮದ ಕಚೇರಿಯನ್ನು ಹೊಂದಿದ್ದಾರೆ. ಅವರು ವಿವಿಧ ಧಾರ್ಮಿಕ ಹಾಗೂ ಸಮಾಜಸೇವಾ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ.ಮೃತ ವಿದ್ಯಾರ್ಥಿಯ ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿದ್ದು, ಮೃತದೇಹವನ್ನು ಜಯಪುರದಿಂದ ವಿಟ್ಲಕ್ಕೆ…

Read More

ಮಣಿಪಾಲ: ಮಣಿಪಾಲ ಕೆಎಂಸಿ ಆಸ್ಪತ್ರೆ ಹೊರಭಾಗದಲ್ಲಿ ವ್ಯಕ್ತಿಯನ್ನು ಬಲವಂತವಾಗಿ ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತೆಲಂಗಾಣದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ ಅಪಹರಣಕ್ಕೊಳಗಾದ ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ ಮಾರ್ಚ್ 31 ರಾತ್ರಿ 8.15 ಗಂಟೆ ಸುಮಾರಿಗೆ ಕುಂದಾಪುರ ತಾಲೂಕಿನ ದಾಸರಮಕ್ಕಿ ನಿವಾಸಿ ರಾಮ ಮಡಿವಾಳ ಅವರು ತಮ್ಮ ತಮ್ಮ ಲಕ್ಷ್ಮಣರಿಗೆ ಚಿಕಿತ್ಸೆ ನೀಡಲು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಚಿಕಿತ್ಸೆ ಬಳಿಕ ಆಸ್ಪತ್ರೆಯ ಕ್ಯಾಂಟೀನಿನಲ್ಲಿ ರಾಮ ಮಡಿವಾಳ, ಅವರ ಅಣ್ಣ ರಾಜೇಶ್ ಹಾಗೂ ಸುಧೀರ್ ಟೀ ಕುಡಿಯುತ್ತಿದ್ದ ವೇಳೆ ಮಧ್ಯಾಹ್ನ ಸುಮಾರು 12.15 ಗಂಟೆಗೆ ನಂಬರ್ ಪ್ಲೇಟ್ ಇಲ್ಲದ ಕಪ್ಪು ಬಣ್ಣದ ಕಾರಿನಲ್ಲಿ ಏಳು-ಎಂಟು ಮಂದಿ ಬಂದು ರಾಜೇಶ್ ಅವರನ್ನು ಬಲವಂತವಾಗಿ ಹಿಡಿದು ಕಾರಿನಲ್ಲಿ ಕೂರಿಸಿ ಅಪಹರಿಸಿ ಮಣಿಪಾಲದಿಂದ ಹಿರಿಯಡ್ಕ ರಸ್ತೆಯ ಕಡೆಗೆ ತೆರಳಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಕುರಿತು ನೀಡಿದ ದೂರಿನ ಮೇರೆಗೆ ಮಲ್ಲಾರೆಡ್ಡಿ, ತುಳಜಾ, ನರಸಿಂಗ, ಹುಸೇನ್, ಶಂಕರ, ನಾಗೇಶ್, ಪರಮೇಶ್ವರ್ ಹಾಗೂ ವಿಜಯ್…

Read More