ಸುಬ್ರಹ್ಮಣ್ಣ: ಕುಕ್ಕೆ ಕ್ಷೇತ್ರದಿಂದ ಅನತಿ ದೂರದಲ್ಲಿರುವ ನೂಚಿಲದ ಗುಡ್ಡ ಕುಸಿಯುವ ಭೀತಿ ಇರುವ ಹಿನ್ನೆಲೆಯಲ್ಲಿ ಅಲ್ಲಿನ 8 ಕುಟುಂಬಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂರಿಸಲಾಗಿದೆ. ಯಾವುದೇ ಸಮಯದಲ್ಲಿ ಈ ಗುಡ್ಡ ಕುಸಿಯುವ ಸಂಭವವಿದ್ದು ಮುಂಜಾಗ್ರತೆ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಅಭಯ ಪ್ರವಾಸಿ ಮಂದಿರದಲ್ಲಿ ತೆರೆಯಲಾದ ಕಾಳಜಿ ಕೇಂದ್ರಕ್ಕೆ 8 ಕುಟುಂಬಗಳನ್ನು ಸ್ಧಳಾಂತರಿಸಲಾಗಿದೆ. ಗೀತಾ ಸತೀಶ್ ನೂಚಿಲ, ಪದ್ದಯ್ಯ ನೂಚಿಲ, ದುಗ್ಗಣ್ಣ ನೂಚಿಲ, ದಿನೇಶ್ ನೂಚಿಲ, ಶೋಭಾ ಭಾಸ್ಕರ ನೂಚಿಲ, ದೇವಕಿ ಬಾಲಕೃಷ್ಣ, ಶೋಭಾ ಪ್ರಮೋದ್ ಕುಮಾರ್ ಮತ್ತು ಬಿ.ಎನ್. ರಾಧಾಕೃಷ್ಣ ಅವರ ಮನೆಗಳು ಬೆಟ್ಟದ ತಪ್ಪಲ್ಲಿನಲ್ಲಿವೆ. ಕಡಬ ತಹಶೀಲ್ದಾರ್ ರಮೇಶ್ ಬಾಬು ಅವರು ಈ ಕುಟುಂಬಗಳಿಗೆ ನೋಟಿಸ್ ಜಾರಿ ಮಾಡಿದ್ದು, ತಕ್ಷಣವೇ ಮನೆಗಳಿಂದ ತೆರವುಗೊಳಿಸಿ ಬೇರೆ ಕಡೆ ವಾಸ್ತವ್ಯ ಹೂಡಬೇಕು ಅಥವಾ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಗೊಳ್ಳಬೇಕು ಎಂದು ಸೂಚಿಸಿದ್ದಾರೆ. ಸುಬ್ರಹ್ಮಣ್ಯದ ನೂಚಿಲದಲ್ಲಿ ಬೆಟ್ಟದ ತಪ್ಪಲಿನಲ್ಲಿ ಅಪಾಯಕಾರಿ ಸ್ಥಿತಿಯಲ್ಲಿರುವ ಮನೆಗಳನ್ನು ಮಳೆಗಾಲ ಮುಗಿಯುವವರೆಗೆ ಬಳಸದಂತೆಯೂ ಸೂಚನೆ ನೀಡಲಾಗಿದೆ. ಎಸ್ಡಿಆರ್ಎಫ್ ತಂಡ ಸ್ಥಳ ಪರಿಶೀಲಿಸಿ…
Author: main-admin
ಬಜ್ಪೆ: ನೀರಿನ ಸಮಸ್ಯೆಯನ್ನು ಪರಿಹರಿಸಿ ಕೊಡುವಂತೆ ಕಂದಾವರ ಪಂಚಾಯತ್ ನ ಮೆಂಬರ್ ಸವಿತಾ ಎಂಬವರಿಗೆ ಯುವತಿಯೊಬ್ಬರು ಮನವಿ ಮಾಡಿದ್ದು, ಆದರೆ ಅವರು ಪುರುಷನೋರ್ವನಿಗೆ ಆ ಯುವತಿಯ ನಂಬರ್ ನೀಡಿ ಕರೆ ಮಾಡಿಸಿ ಕಿರುಕುಳ ನೀಡಿದ ಗಂಭೀರ ಆರೋಪ ಕೇಳಿ ಬಂದಿದೆ. ಹೌದು..! ಘಟನೆ ಸಂಬಂಧ ಯುವತಿಯ ಸಹೋದರ ಹಾಗೂ ಸ್ಥಳೀಯರು ಸೇರಿ ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆದರೆ ಪೊಲೀಸರು ದೂರು ದಾಖಲಿಸಿಕೊಂಡು ತಕ್ಷಣದಲ್ಲಿ ಕ್ರಮಕೈಗೊಳ್ಳುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿರುವ ಗ್ರಾಮಸ್ಥರು ಪೊಲೀಸ್ ಠಾಣೆ ಬಳಿ ಜಮಾಯಿಸಿ ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ. ಯುವತಿಯ ಸಹೋದರ ಚರಣ್ ಎಂಬವರು ಈ ಬಗ್ಗೆ ಮಾತನಾಡಿದ್ದು, ನಾನು ಮುಂಡಾಲ ಸಮುದಾಯದ ಯುವಕನಾಗಿದ್ದೇನೆ, ನಮ್ಮ ಗ್ರಾಮದಲ್ಲಿ ಹಲವು ಸಮಯಗಳಿಂದಲೂ ನೀರಿನ ಸಮಸ್ಯೆ ಇದೆ. ಇದರ ಬಗ್ಗೆ ನನ್ನ ತಂಗಿ ಪಂಚಾಯತ್ ಸದಸ್ಯೆ ಸವಿತಾ, ಗ್ರಾಮ ಪಂಚಾಯತ್ ಅಧ್ಯಕ್ಷೆ ಹಾಗೂ ಪಿಡಿಓಗೆ ಕರೆ ಮಾಡಿ ತಿಳಿಸಿದ್ದಾಳೆ. ಆದ್ರೆ ಸವಿತಾ ಅವರು, ನನ್ನ ತಂಗಿಯ ನಂಬರ್ ಸುದರ್ಶನ್ ಎಂಬ ವ್ಯಕ್ತಿಯೋರ್ವನಿಗೆ…
ಕಾಂಗ್ರೆಸ್ ಪಕ್ಷ 5ಗ್ಯಾರಂಟಿ ಯೋಜನೆಗಳಲ್ಲಿ ಒಂದೊಂದೇ ಯೋಜನೆಗಳ ಜಾರಿಗೆ ಕ್ರಮ ಕೈಗೊಂಡಿದ್ದು, ಇದೀಗ ಸರಕಾರವು ಅನ್ನಭಾಗ್ಯ ಯೋಜನೆ ಜಾರಿ ತರಲು ಅಕ್ಕಿ ಕೊರತೆ ಹಿನ್ನೆಲೆಯಲ್ಲಿ ನೇರ ನಗದು ವರ್ಗಾವಣೆಗೆ (ಡಿಬಿಟಿ) ಚಾಲನೆ ನೀಡಲಿದ್ದಾರೆ. ಆದರೆ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಸುಮಾರು 22 ಲಕ್ಷ ಕುಟುಂಬಗಳಿಗೆ ಬ್ಯಾಂಕ್ ಖಾತೆಗಳಿಲ್ಲದ ಕಾರಣ ತಕ್ಷಣವೇ ನೆರವು ಸಿಗುವುದಿಲ್ಲ.ಕರ್ನಾಟಕವು ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಕುಟುಂಬಗಳ 1.28 ಕೋಟಿ ಪಡಿತರ ಚೀಟಿಯನ್ನು ಹೊಂದಿದೆ. ಇವುಗಳಲ್ಲಿ ಶೇ 99 ರಷ್ಟು ಕಾರ್ಡ್ಗಳು ಆಧಾರ್ ಸಂಖ್ಯೆಗಳೊಂದಿಗೆ ಸೀಡ್ ಆಗಿವೆ. ಅವುಗಳಲ್ಲಿ, 1.06 ಕೋಟಿ ಕಾರ್ಡ್ಗಳನ್ನು ಹೊಂದಿರುವ ಶೇ 82 ರಷ್ಟು ಸಕ್ರಿಯ ಬ್ಯಾಂಕ್ ಖಾತೆಗಳೊಂದಿಗೆ ಲಿಂಕ್ ಆಗಿದೆ. ಅಂತವರಿಗೆ ಹಣವನ್ನು ವರ್ಗಾಯಿಸಲಾಗುತ್ತದೆ. ಉಳಿದವರಿಗೆ ಹೊಸ ಖಾತೆಗಳನ್ನು ತೆರೆಯಲು ತಿಳಿಸಲಾಗುವುದು ಎಂದು ಭಾನುವಾರ ತಿಳಿಸಿದೆ. ಒಟ್ಟು 1.27 ಕೋಟಿ ಪಡಿತರ ಚೀಟಿಗಳಲ್ಲಿ ಒಬ್ಬ ಸದಸ್ಯರನ್ನು ಕುಟುಂಬದ ಮುಖ್ಯಸ್ಥರಾಗಿ (ಎಚ್ಒಎಚ್) ಪರಿಗಣಿಸಲಾಗಿದೆ. ‘ಈ ಎಚ್ಒಎಚ್ಗಳ ಬ್ಯಾಂಕ್ ಖಾತೆಗಳಿಗೆ ಹಣವನ್ನು ವರ್ಗಾಯಿಸಲಾಗುತ್ತದೆ.…
ಸುಳ್ಯ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆತನನ್ನು ಬಂಧಿಸಲಾಗಿದೆ.ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಕಾರ್ತಿಕ್ ಉಬರಡ್ಕದ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಗರ್ಭವತಿಯಾಗಿದ್ದು, ವಿಷಯ ತಿಳಿದ ಬಳಿಕ ಬಾಲಕಿಯ ತಾಯಿ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದು, ಆ ದೂರಿನಂತೆ ಪೊಲೀಸರು ಆರೋಪಿ ಮೇಲೆ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸುಳ್ಯ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆತನನ್ನು ಬಂಧಿಸಲಾಗಿದೆ. ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಕಾರ್ತಿಕ್ ಉಬರಡ್ಕದ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಗರ್ಭವತಿಯಾಗಿದ್ದು, ವಿಷಯ ತಿಳಿದ ಬಳಿಕ ಬಾಲಕಿಯ ತಾಯಿ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದು, ಆ ದೂರಿನಂತೆ ಪೊಲೀಸರು ಆರೋಪಿ ಮೇಲೆ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜು. 7ರಂದು ಬಾಲಕಿ ಹೊಟ್ಟೆನೋವು ಎಂದು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ವೈದ್ಯರು ಪರೀಕ್ಷಿಸಿ ಸ್ಕ್ಯಾನಿಂಗ್ ಮಾಡಿದಾಗ ಬಾಲಕಿ 4 ತಿಂಗಳ ಗರ್ಭಿಣಿ ಆಗಿರುವ ವಿಚಾರ ತಿಳಿದುಬಂದಿದೆ. ಈ ಬಗ್ಗೆ ಬಾಲಕಿಯಲ್ಲಿ ವಿಚಾರಿಸಿದಾಗ ಕಲ್ಮಡ್ಕದ ಕಾರ್ತಿಕ್ ದೈಹಿಕ ಸಂಪರ್ಕ ಎಸಗಿರುವುದನ್ನು ತಿಳಿಸಿದ್ದಾಗಿ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಹೈದರಾಬಾದ್: ಯುವಕನೊಬ್ಬ ಶಿಶ್ನವನ್ನು ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಗದ್ಗಿರಿಗುಟ್ಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಎಂಬಿಬಿಎಸ್ ವಿದ್ಯಾರ್ಥಿ ದೀಕ್ಷಿತ್ ಆತ್ಮಹತ್ಯೆ ಮಾಡಿಕೊಂಡವರು.ಜಗದ್ಗಿರಿಗುಟ್ಟ ವ್ಯಾಪ್ತಿಯ ಪಾಪಿರೆಡ್ಡಿ ನಗರ ರಸ್ತೆ ಸಂಖ್ಯೆಯಲ್ಲಿನ ಮನೆಯಲ್ಲಿಯೇ ದೀಕ್ಷಿತ್ ಶಿಶ್ನವನ್ನು ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ದೀಕ್ಷಿತ್ ರೆಡ್ಡಿ ಆತ್ಮಹತ್ಯೆಗೆ ಕಾರಣಗಳು ಇನ್ನಷ್ಟೇ ತಿಳಿದುಬರಬೇಕಿದೆ. ದೀಕ್ಷಿತ್ ಶವವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ದೀಕ್ಷಿತ್ ಶಿಶ್ನವನ್ನು ಕತ್ತರಿಸಿದ ರೀತಿ ಪತ್ತೆಯಾದ ಕಾರಣ ಹಲವು ಅನುಮಾನಗಳಿಗೆ ಕಾರಣವಾಗಿದೆ.ಇದು ಕೊಲೆಯಾ ಅಥವಾ ಆತ್ಮಹತ್ಯೆಯ ಎಂಬ ಶಂಕೆ ಕೂಡ ಮೂಡಿದೆ ಎನ್ನಲಾಗಿದೆ.
ಮೈಸೂರು : ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಹನುಮ ಜಯಂತಿ ವೇಳೆ ಗುಂಪು ಘರ್ಷಣೆ ನಡೆದಿದ್ದು, ಈ ವೇಳೆ ಯುವ ಬ್ರಿಗೇಡ್ ಕಾರ್ಯಕರ್ತನನ್ನು ಬರ್ಬರ ಹತ್ಯೆ ಮಾಡಲಾಗಿದೆ. ಟಿ. ನರಸೀಪುರ ಪಟ್ಟಣದಲ್ಲಿ ಹನುಮಜಯಂತಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕ್ಷುಲ್ಲಕ ಕಾರಣಕ್ಕೆ 2 ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಬಳಿಕ ಪಟ್ಟಣದ ಹೊರವಲಯದಲ್ಲಿ ಟಿ.ನರಸೀಪುರ ಪಟ್ಟಣದ ಶ್ರೀರಾಂಪುರ ಕಾಲೋನಿ ನಿವಾಸಿ ವೇಣುಗೋಪಾಲ್ ನಾಯಕ್ (32) ಹತ್ಯೆ ಮಾಡಲಾಗಿದೆ. ಹನುಮ ಜಯಂತಿ ವೇಳೆ ಎರಡು ಗುಂಪುಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದ್ದು, ಗಲಾಟೆಯಲ್ಲಿದ್ದ ವೇಣುಗೋಪಾಲನನ್ನು ಪಟ್ಟಣದ ಹೊರವಲಯದಲ್ಲಿ ದುಷ್ಕರ್ಮಿಗಳು ಹತ್ಯೆ ಮಾಡಲಾಗಿದ್ದು, ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ: ಪಿಕಪ್ ವಾಹನವೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಬಂದಾರು-ಕುಪ್ಪೆಟ್ಟಿ ರಸ್ತೆ ಬನಾರಿ ಎಂಬಲ್ಲಿ ಇಂದು ಅಪರಾಹ್ನ ನಡೆದಿದೆ. ಮೃತರನ್ನು ಶುಂಠಿಪಲಿಕೆ ನಿವಾಸಿ ಅಬೂಬಕರ್ ಎಂದು ಗುರುತಿಸಲಾಗಿದೆ. ಮೃತರ ಪತ್ನಿ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.
ಕುಂಬಳೆ: ಇಂಟರ್ಲಾಕ್ ಲೋಡ್ಗೆ ರಿಕ್ಷಾ ಡಿಕ್ಕಿ ಹೊಡೆದು, ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ನಡೆದಿದೆ. ಪೆರ್ಮುದೆಯ ರಸ್ತೆಯಲ್ಲಿ ಮಲೆನಾಡು ಹೈವೇ ನಿರ್ಮಾಣಕ್ಕಾಗಿ ಇಳಿಸಿದ್ದ ಇಂಟರ್ಲಾಕ್ ಲೋಡಿಗೆ ರಿಕ್ಷಾ ಬಡಿದು ಕವುಚಿ ಬಿದ್ದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಚೇವಾರು ಮಿತ್ತಡ್ಕದ ರಾಮ ಎಂಬವರ ಪುತ್ರ, ರಿಕ್ಷಾ ಚಾಲಕ ಕಿಶೋರ್ ಯಾನೆ ಪ್ರಕಾಶ್ ಸಿ. ಎಚ್ (34) ಮೃತಪಟ್ಟ ಯುವಕ. ಇಂದು (ಜು.9) ಬೆಳಿಗ್ಗೆ 11 ಗಂಟೆಯ ವೇಳೆಗೆ ಅಪಘಾತ ಸಂಭವಿಸಿದೆ. ಪ್ರತಿದಿನ ಚೇವಾರು ರಿಕ್ಷಾ ಸ್ಟ್ಯಾಂಡಿನಲ್ಲಿ ಇರಿಸಿ ಬಾಡಿಗೆ ನಡೆಸುತ್ತಿದ್ದ ಕಿಶೋರ್ ಇಂದು ಪೆರ್ಮುದೆಗೆ ಔಷಧಿಗಾಗಿ ತೆರಳಿರುವ ವೇಳೆ ದುರ್ಘಟನೆ ಸಂಭವಿಸಿರುವುದಾಗಿ ತಿಳಿದು ಬಂದಿದೆ. ಗಾಯಗೊಂಡ ಕಿಶೋರ್ನನ್ನು ಬಂದ್ಯೋಡಿನ ಖಾಸಗೀ ಆಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಸಲಾಗಿಲ್ಲ. ಮೃತರು ಸ್ಥಳೀಯ ಹಲವಾರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದರು. ಈ ಬಗ್ಗೆ ಕುಂಬಳೆ ಪೊಲೀಸ ರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಗಳೂರು: ಕಳೆದ 8 ದಿನಗಳಿಂದ ನಾಪತ್ತೆಯಾಗಿರುವ ಪುತ್ರನನ್ನು ಹುಡುಕಿ ಕೊಡುವಂತೆ ತಾಯಿ ಕಾವೂರು ಠಾಣಾ ಪೊಲೀಸರಿಗೆ ದೂರು ನೀಡಿದ್ದಾರೆ. ಗುರುಪುರ ಕೈಕಂಬದ ಸರ್ಕಾರಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ನಾಗರಾಜ ಭರಮಪ್ಪ ಕೊಂಗವಾಡ(17) ಕಾಣೆಯಾದ ಯುವಕ. ಮಗ ನಾಗರಾಜ ಹುಷಾರಿಲ್ಲವೆಂದು 2 ದಿನ ಮನೆಯಲ್ಲೇ ಇದ್ದ. ಜು. 1ರಂದು ಮಧ್ಯಾಹ್ನ ಮನೆಯಲ್ಲಿ ಯಾರು ಇಲ್ಲದ ವೇಳೆ ತಿಳಿಸದೆ ಮನೆ ಬಿಟ್ಟು ಹೋಗಿದ್ದಾನೆ. ಮಗನನ್ನು ಯಾರೋ ಪುಸಲಾಯಿ ಅವರ ಜೊತೆ ಕರೆದುಕೊಂಡು ಹೋಗಿರಬಹುದು ಎಂಬ ಸಂಶಯವಿದೆ ಎಂದು ಆತನ ತಾಯಿ ಎದುರುಪದವು ನಿವಾಸಿ ರೇಣವ್ವ ಎಂಬಾಕೆ ದೂರು ನೀಡಿದ್ದು, ಮಗನನ್ನು ಹುಡುಕಿ ಕೊಡುವಂತೆ ಮನವಿ ಮಾಡಿದ್ದಾರೆ. ನಾಗರಾಜನ ವಯಸ್ಸು 17 ವರ್ಷ, ಎತ್ತರ 5 ಅಡಿ, ದುಂಡು ಮುಖ, ಗೋಧಿ ಮೈ ಬಣ್ಣ, ನಾಪತ್ತೆಯಾಗುವ ಸಂದರ್ಭ ಕಪ್ಪು ಬಣ್ಣದ ಪ್ಯಾಂಟ್, ಬನಿಯನ್ ಧರಿಸಿದ್ದ. ಕನ್ನಡ ಬಲ್ಲವನಾಗಿದ್ದು, ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮಾಡಿಕೊಂಡಿದ್ದಾನೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಈತನ ಬಗ್ಗೆ ಯಾರಿಗಾದರೂ ತಿಳಿದು…










