ಕಾಸರಗೋಡು; ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಾಸರಗೋಡು ಶಾಖೆಯ ಮ್ಯಾನೇಜರ್, ಅವರ ಪತಿ ಮತ್ತು ಇಬ್ಬರು ಮಕ್ಕಳ ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಲಪ್ಪುರಂ ಮುಂಡುಪರಂಬ ಮೈತ್ರಿ ಕಾಲನಿಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ಎಸ್ಬಿಐಯ ಕಾಸರಗೋಡು ಶಾಖೆಯ ಮ್ಯಾನೇಜರ್ ಶೀನಾ(35), ಅವರ ಪತಿ ಮಲಪ್ಪುರಂನ ಖಾಸಗಿ ಹಣಕಾಸು ಸಂಸ್ಥೆಯ ಮ್ಯಾನೇಜರ್ ಮೇಲೋಕಾಟಿಲ್ ಪರಂಬಿಲ್ ಸಬೀಶ್ (37), ಮಕ್ಕಳಾದ ಹರಿಗೋವಿಂದ್(6) ಮತ್ತು ಶ್ರೀವರ್ಧನ್(2) ಮನೆಯೊಳಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸಬೀಶ್ ಮನೆಯ ಒಂದು ಕೊಠಡಿಯೊಳಗೆ ಹಾಗೂ ಶೀನಾ ಇನ್ನೊಂದು ಕೊಠಡಿಯಲ್ಲಿ ಫ್ಯಾನ್ಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸಬೀಶ್ ನೇಣು ಬಿಗಿದ ಕೊಠಡಿಯ ಹಾಸಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಕೆಳಗೆ ನೆಲದಲ್ಲಿ ಪತ್ತೆಯಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Author: main-admin
ಬಂಟ್ವಾಳ: ಸರಕಾರಿ ನೌಕರನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ನಡೆದಿದೆ. ಮೇಗಿನಪೇಟೆ ನಿವಾಸಿ ಪ್ರಶಾಂತ್ ( 30) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ವಿಟ್ಲ ಸರಕಾರಿ ಆಸ್ಪತ್ರೆಯಲ್ಲಿ ಡಿ.ಗ್ರೂಪ್ ನೌಕರರನಾಗಿ ಕೆಲಸ ಮಾಡುತ್ತಿದ್ದ ಈತ ಕೌಟುಂಬಿಕ ವಿಚಾರದಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದೆ. ವಿಟ್ಲ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆಲಪ್ಪುಝ: ಕೇರಳದ ಅಲಪ್ಪುಝ ಜಿಲ್ಲೆಯಲ್ಲಿ ಅಪರೂಪದ ಖಾಯಿಲೆಗೆ ಬಾಲಕ ಬಲಿಯಾಗಿದ್ದಾನೆ. ಪಾನವಳ್ಳಿ ಪಂಚಾಯತ್ನ 15 ವರ್ಷದ ಬಾಲಕ ಈ ಅಪರೂಪದ ಅಮೀಬಿಕ್ ಮೆನಿಂಗೊ ಎನ್ಸೆಫಾಲಿಟಿಸ್ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ. ಪಾನವಳ್ಳಿ ಪೂರ್ವ ಮೈತಾರದ ಅನಿಲ್ ಕುಮಾರ್ ಮತ್ತು ಶಾಲಿನಿ ದಂಪತಿಯ ಪುತ್ರ ಗುರುದತ್ (15) ಮೃತ ದುರ್ದೈವಿ. ಈ ಬಾಲಕ 10ನೇ ತರಗತಿ ಓದುತ್ತಿದ್ದ. ಹೊಳೆಯಲ್ಲಿ ಸ್ನಾನ ಮಾಡಿದ ಬಳಿಕ ಬಾಲಕ ಅಸ್ವಸ್ಥಗೊಂಡಿರುವುದಾಗಿ ವರದಿಯಾಗಿದೆ. ಕೆಸರಿನ ಜಲಮೂಲಗಳಲ್ಲಿ ನೇಗ್ಲೇರಿಯಾ ಫೌಲೆರಿ ಕಂಡುಬರುತ್ತವೆ. ಮನುಷ್ಯರು ಧುಮುಕಿದಾಗ ಮೂಗಿನ ಮೂಲಕ ತಲೆಯನ್ನು ತಲುಪಿ, ಮೆದುಳಿನ ಸೋಂಕು ಉಂಟಾಗುತ್ತದೆ. ಜೊತೆಗೆ ಜೀವಕ್ಕೂ ಹಾನಿಯಾಗಬಹುದು ಎಂದು ವೈದ್ಯರು ತಿಳಿಸಿದ್ದಾರೆ. ಪರಾವಲಂಬಿ ಸ್ವಭಾವವಿಲ್ಲದೇ ನೀರಿನಲ್ಲಿ ಮುಕ್ತವಾಗಿ ವಾಸಿಸುವ ಅಮೀಬಾ ವರ್ಗಕ್ಕೆ ಸೇರಿದ ರೋಗಕಾರಕಗಳು ಚರಂಡಿ ಅಥವಾ ಕೊಳಕು ನೀರಿನಲ್ಲಿ ಸ್ನಾನ ಮಾಡುವುದರಿಂದ ಮೂಗಿನ ತೆಳ್ಳಗಿನ ಚರ್ಮದ ಮೂಲಕ ಮಾನವ ದೇಹವನ್ನು ಪ್ರವೇಶಿಸುವ ಈ ಜೀವಿ ಮೆದುಳು ಜ್ವರವನ್ನು ಉಂಟು ಮಾಡುತ್ತದೆ. ಇದು ಮೆದುಳಿನ ಮೇಲೆ ಗಂಭೀರವಾದ ಪರಿಣಾಮ ಬೀರುತ್ತದೆ. ಇದರ ಮುಖ್ಯ…
ಮಂಗಳೂರು: ಶಾಲೆಯ ನಿವೃತ್ತ ಶಿಕ್ಷಕಿಯ ಪೆನ್ಷನ್ ಹಣಕ್ಕೆ ಅಗತ್ಯವಾಗಿರುವ ದಾಖಲೆ ನೀಡಲು ಶಾಲೆಯ ಸಂಚಾಲಕಿ 5 ಲಕ್ಷ ರೂಪಾಯಿ ಲಂಚ ಪಡೆಯುವ ವೇಳೆ ರೆಡ್ ಹ್ಯಾಂಡ್ ಅಗಿ ಮಂಗಳೂರು ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಮಂಗಳೂರು ಹೊರವಲಯದ ಬಜ್ಪೆ ನಿರಂಜನ ಸ್ವಾಮಿ ಸರ್ಕಾರಿ ಅನುದಾನಿತ ಶಾಲೆಯ ಸಂಚಾಲಕಿ ಜ್ಯೋತಿ ಪೂಜಾರಿ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿ ಬಿದ್ದ ಆರೋಪಿಯಾಗಿದ್ದಾರೆ. ಸುಂಕದಕಟ್ಟೆಯಲ್ಲಿರುವ ಶ್ರೀ ನಿರಂಜನ ಸ್ವಾಮಿ ಶಿಕ್ಷಣ ಪ್ರತಿಷ್ಠಾನಕ್ಕೆ ಸೇರಿದ ಶ್ರೀ ನಿರಂಜನ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಹಾಗು ಮುಖ್ಯ ಶಿಕ್ಷಕಿಯಾಗಿ 42 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಶೋಭಾರಾಣಿರವರು ದಿನಾಂಕ 31.07.2023 ರಂದು ವಯೋನಿವೃತ್ತಿ ಹೊಂದಲಿದ್ದು, ತನ್ನ ವಯೋ ನಿವೃತ್ತಿ ಪಿಂಚಣಿ ಉಪದಾನ ಪತ್ರಗಳಿಗೆ ಸಹಿ ಹಾಕಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಳುಹಿಸುವಂತೆ ದಿನಾಂಕ 25.05.2023 ರಂದು ಶ್ರೀ ನಿರಂಜನ ಸ್ವಾಮೀ ಅನುದಾನಿತ ಶಾಲೆಯ ಮ್ಯಾನೇಜ್ಮೆಂಟ್ ಸಂಚಾಲಕರಾದ ಶ್ರೀಮತಿ ಜ್ಯೋತಿ ಎನ್ ಪೂಜಾರಿರವರಿಗೆ ಮನವಿ ಪತ್ರದೊಂದಿಗೆ ವಿನಂತಿಸಿಕೊಂಡು ಸ್ವೀಕೃತಿಯನ್ನು ನೀಡುವಂತೆ ಕೋರಿಕೊಂಡಿದ್ದರು.…
ಬೆಳ್ತಂಗಡಿ: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ ಐತಿಹಾಸಿಕ ಪ್ರವಾಸಿ ತಾಣ ಗಡಾಯಿಕಲ್ಲಿಗೆ ಚಾರಣ ತೆರಳುವುದನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಧಾರಾಕಾರ ಮಳೆಯಿಂದಾಗಿ ಬಂಡೆಯಲ್ಲಿ ನೀರು ಹರಿಯುತ್ತಿದ್ದು, ಮೆಟ್ಟಿಲುಗಳಲ್ಲಿ ಪಾಚಿ ಬೆಳೆದು ಜಾರುವ ಅಪಾಯ ಇರುವುದರಿಂದ ಜು.7ರಿಂದ ಮುಂದಿನ ಆದೇಶದ ತನಕ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ವನ್ಯಜೀವಿ ವಿಭಾಗದ ಬೆಳ್ತಂಗಡಿ ವಲಯಾರಣ್ಯಧಿಕಾರಿ ಸ್ವಾತಿ ಅವರು ತಿಳಿಸಿದ್ದಾರೆ.
ನವದೆಹಲಿ : ದೇಶದ ಮಹಿಳೆಯರನ್ನ ಆರ್ಥಿಕವಾಗಿ ಸದೃಡಗೊಳಿಸಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನ ಜಾರಿಗೆ ತಂದಿದೆ. ಅದ್ರಲ್ಲಿ ‘ಉದ್ಯೋಗಿನಿ’ ಯೋಜನೆಯೂ ಒಂದು. ಈ ಯೋಜನೆಯಡಿ, ಮಹಿಳೆಯರಿಗೆ 3 ಲಕ್ಷದವರೆಗೆ ಸಾಲ ನೀಡಲಾಗುತ್ತದೆ. ಅದ್ರಂತೆ, ಮಹಿಳೆಯರು 88 ಬಗೆಯ ಸಣ್ಣ ಉದ್ದಿಮೆಗಳನ್ನ ಸ್ಥಾಪಿಸಿ, ಆರ್ಥಿಕವಾಗಿ ಸದೃಢರಾಗಬೇಕು ಎಂದು ಕೇಂದ್ರ ಸರ್ಕಾರ ಬಯಸಿದೆ. ಉದ್ಯೋಗಿನಿ ಯೋಜನೆ ಎಂದರೇನು.? ಅದರ ಅಡಿಯಲ್ಲಿ ಸಾಲ ಪಡೆಯುವುದು ಹೇಗೆ.? ಅನುಸರಿಸಬೇಕಾದ ನಿಯಮಗಳೇನು.? ಹೇಗೆ ಅರ್ಜಿ ಸಲ್ಲಿಸಬೇಕು.? ಯಾವ ವ್ಯವಹಾರಕ್ಕೆ ಸಾಲ ನೀಡಲಾಗುತ್ತದೆ.? ಮುಂದಿದೆ ಮಾಹಿತಿ. ಉದ್ಯೋಗಿನಿ ಯೋಜನೆ ಎಂದರೇನು?* ಮಹಿಳೆಯರ ಆರ್ಥಿಕ ಸ್ವಾವಲಂಬನೆಗಾಗಿ ಆರ್ಥಿಕ ನೆರವು ನೀಡುವುದು ಕೇಂದ್ರ ಸರ್ಕಾರದ ಆತ್ಮ ನಿರ್ಭರ್ ಕಾರ್ಯಕ್ರಮದ ಉದ್ದೇಶಗಳಲ್ಲಿ ಒಂದಾಗಿದೆ.* ಉದ್ಯೋಗಿ ಎನ್ನುವುದು ಮಹಿಳೆಯರು ಉದ್ಯಮಿಗಳಾಗಿ ಮತ್ತು ಉದ್ಯಮಿಗಳಾಗಿ ಬೆಳೆದು ತಮ್ಮ ಸ್ವಂತ ಕಾಲಿನ ಮೇಲೆ ನಿಲ್ಲಲು ಪರಿಚಯಿಸಿದ ಯೋಜನೆಯಾಗಿದೆ.* ಇದನ್ನ ಮೊದಲು ಕರ್ನಾಟಕ ಸರ್ಕಾರ ಜಾರಿಗೆ ತಂದಿದ್ದು, ನಂತ್ರ ಕೇಂದ್ರ ಸರ್ಕಾರವು ಮಹಿಳಾ ಅಭಿವೃದ್ಧಿ ನಿಗಮದ ಮೇಲ್ವಿಚಾರಣೆಯಲ್ಲಿ ದೇಶಾದ್ಯಂತ ಜಾರಿಗೆ…
ಕಾಸರಗೋಡು: ಬೈಕ್ ಮತ್ತು ಜೀಪು ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಜಾಲ್ಸೂರು ಚೆರ್ಕಳ ರಸ್ತೆಯ ಬೋವಿಕ್ಕಾನದಲ್ಲಿ ಗುರುವಾರ ರಾತ್ರಿ ನಡೆದಿದೆ. ಮಲ್ಲ ಕಲ್ಲುಕಂಡದ ಅಖಿಲ್ (22) ಮೃತಪಟ್ಟ ಯುವಕ.ಅಖಿಲ್ ಎಸ್ಎಫ್ಐ ಕಾರ್ಯಕರ್ತನಾಗಿದ್ದನು. ಅಖಿಲ್ ಬೋವಿಕ್ಕಾನದಿಂದ ಕಲ್ಲು ಕಂಡದ ಮನೆಗೆ ತೆರಳುತ್ತಿದ್ದಾಗ ಈ ಅಪಘಾತ ನಡೆದಿದ್ದು, ಗಂಭೀರ ಗಾಯಗೊಂಡ ಅಖಿಲ್ನನ್ನು ಕಾಸರಗೋಡಿನ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಳಿಲ್ಲ. ಈ ಕುರಿತು ಆದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಡುಪಿ : ಜಿಲ್ಲೆಯಲ್ಲಿ ವರುಣ ಅರ್ಭಟ ಇಂದು ಸಹ ಮುಂದುವರೆದಿದ್ದು, ಭಾರೀ ಗಾಳಿ ಧಾರಾಕಾರ ಮಳೆಗೆ ಮತ್ತೊಂದು ಬಲಿಯಾಗಿದೆ. ಕಾರ್ಕಳ ತಾಲೂಕಿನ ಬೆಳ್ಮಣ್ ದಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಏಕಾಏಕಿ ಬೃಹತ್ ಆಲದ ಮರ ಬಿದ್ದಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಪ್ರವೀಣ್ ಆಚಾರ್ಯ ಮೃತ ದುರ್ವೈವಿ. ಪ್ರವೀಣ್ ತಮ್ಮ ಪಾಡಿಗೆ ತಾವು ಬೈಕ್ನಲ್ಲಿ ಹೋಗುತ್ತಿದ್ದಾಗ, ದೊಡ್ಡ ಆಲದ ಮರ ರಪ್ ಅಂತ ಬಿದ್ದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮರ ಬಿದ್ದ ಹಿನ್ನಲೆ ವಿದ್ಯುತ್ ಕಂಬ ಸೇರಿದಂತೆ ಇತರ ಕಟ್ಟಡಗಳಿಗೂ ಹಾನಿಯಾಗಿದ್ದು, ಸ್ಥಳೀಯರು ಮರ ತೆರವು ಮಾಡಿದ್ದಾರೆ. ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಮಳೆಯಿಂದಾಗಿ ಇಬ್ಬರು ಬಲಿಯಾಗಿದ್ದಾರೆ. ಭಾರೀ ಮಳೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಇಬ್ಬರೂ ಕಾಲು ಜಾರಿ ಬಿದ್ದು ಸಾವನಪ್ಪಿದ್ದಾರೆ. ಸತೀಶ ಪಾಂಡುರಂಗ ನಾಯ್ಕ (40), ಉಲ್ಲಾಸ ಗಾವಡಿ (50) ಮೃತ ದುರ್ದೈವಿಗಳು. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬೆಟ್ಟುಳಿ ಗ್ರಾಮ ಗದ್ದೆಯಲ್ಲಿ…
ಮಂಗಳೂರು: ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲದ ಪಜೀರು ಗ್ರಾಮದ ಅಡಪ್ಪ ರೆಸಿಡೆನ್ಸಿಯಲ್ಲಿ ನಡೆದಿದೆ.ಪ್ರೀತಿಕಾ ಪೂಜಾರಿ(21) ಮೃತ ದುರ್ದೈವಿ. ಪ್ರೀತಿಕಾ ತನ್ನ ತಾಯಿ ಮತ್ತು ಅಣ್ಣನೊಂದಿಗೆ ಪಜೀರು ಗ್ರಾಮದ ಅಡಪ್ಪ ರೆಸಿಡೆನ್ಸಿಯ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಮಂಗಳೂರಿನ ಕಾಲ್ ಸೆಂಟರ್ ಒಂದರಲ್ಲಿ ಪ್ರೀತಿಕಾ ಉದ್ಯೋಗದಲ್ಲಿದ್ದರು. ನಿನ್ನೆ ಮದ್ಯಾಹ್ನ 12.30 ರ ವೇಳೆಗೆ ಪ್ರೀತಿಕಾ ಮನೆಯೊಳಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಣಾಜೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ದ.ಕ. ಜಿಲ್ಲೆಯಲ್ಲಿ ಮುಂದುವರೆದ ಭಾರೀ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಜುಲೈ 7ರ ಶುಕ್ರವಾರದಂದು ಶಾಲೆ, ಪಿ.ಯು. ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.










