Author: main-admin

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹಾಲಿ ಸಂಸದೆ ಮತ್ತು ಹಾಲಿ ಕೇಂದ್ರ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೆಸರು ಫಿಕ್ಸ್‌ ಆಗಿದ್ದು, ವಿಜಯ ದಶಮಿ ಹಬ್ಬದ ಬಳಿಕ ಈ ಹೆಸರನ್ನು ಹೈಕಮಾಂಡ್‌ ಘೋಷಣ ಮಾಡಲಿದ್ದಾರೆ ಎನ್ನಲಾಗಿದೆ. ಇದಲ್ಲದೇ ಸದ್ಯ ವಿ.ಪ ನಾಯಕನ ಸ್ಥಾನ ಕೂಡ ಖಾಲಿ ಉಳಿದಿದ್ದು, ಈಗಾಗಲೇ ರಾಜ್ಯ ಸರ್ಕಾರವು ಕೂಡ ವಿ.ಪ ನಾಯಕನ ಹೆಸರನ್ನು ತಿಳಿಸದೇ ಇರುವುದಕ್ಕೆ ಬಿಜೆಪಿ ವಿರುದ್ದ ವ್ಯಂಗ್ಯವಾಡುತ್ತಿದೆ. ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ವಿಪ ನಾಯಕನ ಹೆಸರನ್ನು ಒಟ್ಟಿಗೆ ತಿಳಿಸಲಾಗುವುದು ಎನ್ನಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೋಭಾ ಕರಂದ್ಲಾಜೆ ಆಯ್ಕೆಯಾದರೇ ಅವರು ಈ ಬಾರಿ ಸಂಸದ ಸ್ಥಾನದ ಚುನಾವಣೆಗೆ ನಿಲ್ಲುವುದಿಲ್ಲ ಎನ್ನಲಾಗತ್ತಿದ್ದು, ಉಡುಪಿ ಚಿಕ್ಕಮಗಳೂರಿನಿಂದ ಹೊಸಬರಿಗೆ ಸ್ಥಾನ ಕೊಡಲಿದ್ದಾರೆ ಎನ್ನಲಾಗಿದೆ. ಬಿಎಸ್‌ವೈ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಶೋಭಾ ಕರಂದ್ಲಾಜೆ ಅವರ ಕಾರ್ಯವೈಖರಿ ಬಗ್ಗೆ ಟೀಕೆಗಳು ಕೂಡ ಕೇಳಿ ಬಂದಿದ್ದು, ಅವರ ಆಯ್ಕೆಗೆ ಪಾರ್ಟಿಯಲ್ಲಿ ಅಸಮಾಧಾನ ಮೂಡುವುದು ಸುಳ್ಳಲ್ಲ ಅಂತ ಬಿಜೆಪಿ ನಾಯಕರೇ ಹೇಳುತ್ತಿದ್ದಾರಂತೆ.…

Read More

ಪುತ್ತೂರು: ಬೆಳ್ಳಾರೆಯಿಂದ ಪುತ್ತೂರು ಈಶ್ವರಮಂಗಲ ಕಡೆಗೆ ತೆರಳುತ್ತಿದ್ದ ಮದುವೆ ದಿಬ್ಬಣದ ಟೆಂಪೊ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಪಾಲ್ತಾಡಿ ಬಳಿ ನಡೆದಿದೆ. ಘಟನೆಯಲ್ಲಿ ಈಶ್ವರಮಂಗಲ ಮೂಲದ ವರನ ಕಡೆಯ ಸಂಬಂಧಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಇನ್ನು ಟೆಂಪೋದಲ್ಲಿ ಮಹಿಳೆಯರು ಕೂಡಾ ಇದ್ದರು. ಗಾಯಾಳುಗಳನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆ ತಂದು ಚಿಕಿತ್ಸೆ ನೀಡಲಾಗಿದೆ. ಘಟನಾ ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Read More

ಮಂಗಳೂರು : ತಮ್ಮ ವೀಸಾ ಅವಧಿ ಮುಗಿದರೂ ಮಂಗಳೂರಿನಲ್ಲಿದ್ದ ಇಬ್ಬರು ವಿದೇಶಿಯರನ್ನು ಕದ್ರಿ ಪೊಲೀಸರು ವಶಕ್ಕ ಪಡೆದಿದ್ದಾರೆ. ವಶಕ್ಕೆ ಪಡೆದವರನ್ನು ಘಾನಾ ದೇಶದ ಸಲಾಂ ಕ್ರಿಸ್ಟೆನ್ ಮತ್ತು ನೈಜೀರಿಯಾದ ಅಂಕಿತೋಲ ಎಂಬ ಇಬ್ಬರು ವೀಸಾ ಅವಧಿ ಮೀರಿದ ಬಳಿಕವೂ ನಗರದಲ್ಲಿ ಉಳಕೊಂಡಿದ್ದರು ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಗೆ ಹಸ್ತಾಂತರಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Read More

ಮಂಗಳೂರು: ಯಾವುದೇ ಮಾಹಿತಿ ಇಲ್ಲದೆ ತನ್ನ ಬ್ಯಾಂಕ್ ಖಾತೆಯಿಂದ ಅಪಾರ ಮೌಲ್ಯದ ನಗದು ಕಡಿತಗೊಂಡು ಇತರ ಯಾರೋ ಅಪರಿಚಿತ ವ್ಯಕ್ತಿಗಳಿಗೆ ಹಣ ವರ್ಗಾವಣೆಗೊಂಡಿರುವುದಾಗಿ ಹಣ ಕಳೆದುಕೊಂಡಿರುವ ವ್ಯಕ್ತಿ ಕೊಣಾಜೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರುದಾರರಾದ ಅಬ್ದುಲ್ ಸಲೀಂ ಅವರ ಕೆನರಾ ಬ್ಯಾಂಕ್ ನರಿಂಗಾನ ಶಾಖೆ, ಕೆನರಾ ಬ್ಯಾಂಕ್‌ನ ಫಿಷರಿಸ್ ಖಾತೆ, ಕೆನರಾ ಬ್ಯಾಂಕ್‌ ದೇರಳಕಟ್ಟೆ ಶಾಖೆ ಹಾಗೂ ಯೂನಿಯನ್‌ ಬ್ಯಾಂಕ್ ದೇರಳಕಟ್ಟೆ ಶಾಖೆಯಿಂದ ಒಟ್ಟು 2,48,100 ರೂ., ಬೇರೆ ಬೇರೆ ದಿನಾಂಕಗಳಲ್ಲಿ ಕಡಿತಗೊಂಡಿದೆ. ಈ ಬಗ್ಗೆ ಬ್ಯಾಂಕ್‌ಗೆ ಲಿಂಕ್ ಆದ ಮೊಬೈಲ್‌ ನಿಂದ ಮಾಹಿತಿ ಬಂದ ಬಳಿಕ ಈ ಬಗ್ಗೆ ದೂರುದಾರರು ಬ್ಯಾಂಕ್‌ಗೆ ಹೋಗಿ ಪರಿಶೀಲಿಸಿದಾಗ ಅಬ್ದುಲ್ ಹೈ, ಅಬ್ದೇಶ್ ರಾಯ್, ಧರ್ಮದಾಸ್ ದಿಬಾ‌ರ್, ಬಿಪ್ಲಬ್ ಪಾಲ್ ಎಂಬವರ ಖಾತೆಗಳಿಗೆ ವರ್ಗಾವಣೆಗೊಂಡಿರುವುದು ಕಂಡು ಬಂದಿದೆ. ವಂಚನೆಗೊಳಗಾದ ವ್ಯಕ್ತಿ ತನ್ನ ಬ್ಯಾಂಕ್ ಖಾತೆಯಿಂದ ಹಣ ಕಡಿತಗೊಂಡು ಬೇರೆ ಅಪರಿಚಿತ ವ್ಯಕ್ತಿಗಳ ಖಾತೆಗಳಿಗೆ ವರ್ಗಾವಣೆಗೊಂಡಿರುವ ಬಗ್ಗೆ ಕೊಣಾಜೆ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ತನಿಖೆ…

Read More

ಉಡುಪಿ: ಸ್ನಾನ ಮಾಡಲು ನದಿಗೆ ಇಳಿದಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಿನ್ಬೆ ಸಂಜೆ ಹೆಬ್ರಿ ಸಮೀಪದ ಮತ್ತಾವು ಎಂಬಲ್ಲಿ ನಡೆದಿದೆ. ಕರ್ಜೆ ನಿವಾಸಿ ಉಮೇಶ್ ಶೆಟ್ಟಿ(48) ಹಾಗೂ ಚಾರಾ ಹುರ್ತುಕೆ ನಿವಾಸಿ ಪ್ರಸ್ತುತ್ ಹೆಗ್ಡೆ(21) ಮೃತ ದುರ್ದೈವಿಗಳು. ಇವರಿಬ್ಬರು ಸ್ನಾನಕ್ಕೆಂದು ಮತ್ತಾವು ನದಿಗೆ ತೆರಳಿದ್ದರು. ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಮನೆಯವರು ಇವರ ಮೊಬೈಲ್ ಪೋನ್ ಗೆ ಕರೆ ಮಾಡಿದ್ದಾರೆ. ಕರೆ ಸ್ವೀಕರಿಸಿದ್ದಾಗ ಮೊಬೈಲ್ ಲೋಕೇಶನ್ ಪತ್ತೆ ಹಚ್ಚಿ ಹುಡುಕಾಟ ನಡೆಸಿದ್ದರು. ರಾತ್ರಿ ಅವರಿಬ್ಬರ ಮೃತದೇಹಗಳು ಪತ್ತೆಯಾಗಿವೆ. ಎಂದು ಗುರುತಿಸಲಾಗಿದೆ. ಪ್ರಸ್ತುತ್ ಹೆಗ್ಡೆ ಅಂತಿಮ ವರ್ಷ ಇಂಜಿನಿಯರ್ ವಿದ್ಯಾರ್ಥಿಯಾಗಿದ್ದರು. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More

ಸುರತ್ಕಲ್:‌ ಗುಂಡು ಹಾರಿಸಿಕೊಂಡು ಸಿಐಎಸ್‌ಎಫ್ ಭದ್ರತಾ ಸಿಬ್ಬಂದಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆ.22ರ ರವಿವಾರ ಮುಂಜಾನೆ ಪಣಂಬೂರು ಎನ್.ಎಂ.ಪಿ.ಟಿ. ಮುಖ್ಯ ಗೇಟ್‌ ಬಳಿ ನಡೆದಿದೆ. ರಾಯಚೂರು ನಿವಾಸಿ, ಸಿಐಎಸ್‌ಎಫ್ ಪಿಎಸ್‌ಐ ಜಾಕೀರ್ ಹುಸೇನ್ (58) ತನ್ನ ಸೇವಾ ಆಯುಧದಿಂದ ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ. ಜಾಕೀರ್ ಹುಸೇನ್ ಅವರನ್ನು ಎನ್.ಎಂ.ಪಿ.ಟಿ ಮುಖ್ಯ ಗೇಟ್‌ನಲ್ಲಿ ನೈಟ್ ಶಿಫ್ಟ್‌ನಲ್ಲಿ ನಿಯೋಜಿಸಲಾಗಿತ್ತು. ರಾತ್ರಿ ಪಾಳಿಯ ಕೆಲಸ ಮುಗಿಸಿ ಮುಂಜಾನೆ ಸುಮಾರು 6.30 ರ ಸಮಯಕ್ಕೆ ಮುಖ್ಯ ಗೇಟ್‌ನ ಪಕ್ಕದಲ್ಲಿರುವ ವಾಶ್‌ರೂಮ್‌ಗೆ ತೆರಳಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ. ಆತ್ಮಹತ್ಯೆ ನಿಖರ ಕಾರಣ ತಿಳಿದು ಬಂದಿಲ್ಲ. ಶವವನ್ನು ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

Read More

ಉಳ್ಳಾಲ: ಉಳ್ಳಾಲದಲ್ಲಿ ಶುಕ್ರವಾರ ಮಧ್ಯಾಹ್ನ ಪಿಡಬ್ಲ್ಯೂಡಿ ಗುತ್ತಿಗೆದಾರನಿಗೆ ಚಾಕುವಿನಿಂದ ಇರಿದು ಕಾರು, ಲ್ಯಾಪ್ ಟಾಪ್‌ ದರೋಡೆ ಮಾಡಲಾಗಿದ್ದು, ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ರೌಡಿ ಶೀಟರ್ ಹಸೈನಾರ್‌ನನ್ನ ಕಾರು ಸಮೇತ ಅರೆಸ್ಟ್ ಮಾಡಲಾಗಿದ್ದು, ತಲೆಮರೆಸಿ ಕೊಂಡಿರುವ ಮತ್ತಿಬ್ಬರಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಶುಕ್ರವಾರ ಮಧ್ಯಾಹ್ನ ಉಳ್ಳಾಲ ದರ್ಗಾದಲ್ಲಿ ನಮಾಝ್ ಮುಗಿಸಿ ಸ್ವಿಫ್ಟ್‌ ಕಾರಿನಲ್ಲಿ ತೆರಳುತ್ತಿದ್ದ ಉಳ್ಳಾಲ ಮುಕ್ಕಚ್ಚೇರಿ ನಿವಾಸಿ ಶಮೀರ್(33) ಎಂಬ ಗುತ್ತಿಗೆದಾರನನ್ನು ಉಳ್ಳಾಲದ ಸುಂದರಿ ಭಾಗ್ ನಿವಾಸಿ ಹಸೈನಾರ್ ತಡೆದು ಪರಿಚಯಿಸಿದ್ದಾನೆ. ಕಟ್ಟಡವೊಂದರ ಕಾಮಗಾರಿ ಇದೆ ಮಾಡುತ್ತೀರಾ ಎಂದು ಶಮೀರ್‌ನನ್ನ ಯಾಮಾರಿಸಿದ ಹಸೈನಾರ್ ಗುತ್ತಿಗೆದಾರನ ಕಾರನ್ನೇರಿ ಅಬ್ಬಕ್ಕ ಸರ್ಕಲ್ ಕಡೆ ತೆರಳಿದ್ದಾನೆ. ಅಬ್ಬಕ್ಕ ಸರ್ಕಲ್ ಬಳಿ ಹಸೈನಾರ್‌ನ ಮತ್ತಿಬ್ಬರು ಸಹಚರರಾದ ಉಮರ್ ನವಾಬ್ ಮತ್ತು ಅಕ್ಬರ್ ಉಳ್ಳಾಲ್ ಎಂಬಿಬ್ಬರು ಕಾರು ಹತ್ತಿದ್ದಾರೆ. ಉಳ್ಳಾಲದ ಬಸ್ತಿ ಪಡ್ಪು ಎಂಬಲ್ಲಿ ಕಾರು ತಲುಪುತ್ತಿದ್ದಂತೆ ಶಮೀರ್ ಕಾಲಿಗೆ ಆರೋಪಿಗಳು ಚಾಕುವಿನಿಂದ ಇರಿದು ಹಲ್ಲೆಗೈದು ಹಣ ಸಿಗದಾಗ ಕಾರು, ಲ್ಯಾಪ್ ಟಾಪ್‌ ದರೋಡೆಗೈದಿದ್ದಾರೆ. ರೌಡಿಗಳಿಂದ ತಪ್ಪಿಸಿದ…

Read More

ಮಂಗಳೂರು: ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಎಂಡಿ ಪೂರೈಸಿ, 10 ವರ್ಷಗಳಿಂದ ಬಹರೇನ್‌ನಲ್ಲಿ ವಾಸವಿರುವ ಸುನಿಲ್ ರಾವ್ ಅವರನ್ನು ಇಸ್ರೇಲ್ ಪರ ಪೋಸ್ಟ್ ಹಾಕಿದ ಆರೋಪದ ಮೇಲೆ ಬಹರೇನ್ ಪೊಲೀಸರು ಬಂಧಿಸಿದ್ದಾರೆ. ಡಾ. ಸುನಿಲ್ ರಾವ್ ಅವರು ಹಮಾಸ್‌ ಉಗ್ರರನ್ನು ವಿರೋಧಿಸಿ ಟ್ವೀಟರ್ ನಲ್ಲಿ ಹಾಕಿರುವ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಕೆಲವರು ಈ ಪೋಸ್ಟ್‌ಗೆ ಆಕ್ಷೇಪ ವ್ಯಕ್ತಪಡಿಸಿ, ಬಹರೇನ್ ಆಡಳಿತವನ್ನು ಟ್ಯಾಗ್ ಮಾಡಿದ್ದರು. ಈ ವಿಚಾರವನ್ನು ಆಧರಿಸಿ, ಅಲ್ಲಿನ ಪೊಲೀಸರು ಅವರನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಈ ಘಟನೆಯ ಬೆನ್ನಲ್ಲೇ ಅವರು ಕಾರ್ಯ ನಿರ್ವಹಿಸುತ್ತಿದ್ದ ಬಹರೇನ್‌ನ ರಾಯಲ್ ಆಸ್ಪತ್ರೆ, ಅವರನ್ನು ಕರ್ತವ್ಯದಿಂದ ಬಿಡುಗಡೆ ಗೊಳಿಸಿದೆ. ಈ ಸಂಬಂಧ ಆಸ್ಪತ್ರೆ ತನ್ನ ‘X’ ನಲ್ಲಿ ಪೋಸ್ಟ್ ಹಾಕಿಕೊಂಡಿದೆ.

Read More

ಉಡುಪಿ: ಶಾಲೆಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ವಿದ್ಯಾರ್ಥಿ ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಉಡುಪಿ ಜಿಲ್ಲೆ ಕುಂದಾಪುರ ತಾಲ್ಲೂಕಿನ ತಲ್ಲೂರಿನಲ್ಲಿ ನಡೆದಿದೆ. ಅಕ್ಷರ ದಾಸೋಹ ಯೋಜನೆ ಕುಂದಾಪುರದ ಸಹಾಯಕ ನಿರ್ದೇಶಕ ಅರುಣ್‌ ಕುಮಾರ್‌ಶೆಟ್ಟಿ ಹಾಗೂ ಹಕ್ಲಾಡಿ ಪ್ರೌಢಶಾಲಾ ಶಿಕ್ಷಕಿ ಭಾರತಿ ದಂಪತಿಯ ಪುತ್ರ ಪೃಥ್ವಿರಾಜ್‌ ಶೆಟ್ಟಿ (12) ಕುಸಿದು ಬಿದ್ದು ಮೃತಪಟ್ಟ ವಿದ್ಯಾರ್ಥಿಯಾಗಿದ್ದಾನೆ.7ನೇ ತರಗತಿಯ ವಿದ್ಯಾರ್ಥಿ ಪೃಥ್ವಿರಾಜ್ ಶೆಟ್ಟಿ ಅಕ್ಕ ವರ್ಷದ ಹಿಂದೆಯಷ್ಟೇ ಹೃದಯಾಘಾತದಿಂದ ಮೃತಪಟ್ಟಿದ್ದಳು, ಅಕ್ಕನ ಸಾವಿನ ನೋವಲ್ಲಿರುವ ಪೋಷಕರಿಗೆ ಮಗನ ಸಾವು ಮತ್ತಷ್ಟು ಆಘಾತ ಉಂಟು ಮಾಡಿದೆ.ಶನಿವಾರ ಬೆಳಗ್ಗೆ ಮನೆಯ ಬಳಿ ಶಾಲೆಯ ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ಆಕಸ್ಮಿಕವಾಗಿ ಕುಸಿದು ಬಿದ್ದಿದ್ದಾರೆ. ಇದನ್ನು ಗಮನಿಸಿದ ಪೃಥ್ವಿರಾಜ್​ ಪೋಷಕರು ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.ಬಾಲಕನನ್ನು ಪರೀಕ್ಷಿಸಿದ ವೈದ್ಯರು ಮಾರ್ಗ ಮಧ್ಯೆಯೇ ಮೃತಪಟ್ಟಿರುವುದಾಗಿ ಪೋಷಕರಿಗೆ ತಿಳಿಸಿದ್ದಾರೆ. ಹೃದಯಾಘಾತದಿಂದ ಬಾಲಕ ಪೃಥ್ವಿರಾಜ್​ ಮೃತಪಟ್ಟಿರಬಹುದು ಎಂದು ವೃದ್ಯರು ಶಂಕಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕವಷ್ಟೇ ಪೃಥ್ವಿರಾಜ್ ಸಾವಿಗೆ ಕಾರಣ ತಿಳಿಯಲಿದೆ. ಮರುಕಳಿಸಿದ ದುರಂತ…

Read More

ಮಂಗಳೂರು: ನಿವೃತ್ತ ಅರಣ್ಯಾಧಿಕಾರಿಯೊಬ್ಬರಿಂದ ಬಿಲ್ ಪಾವತಿ ಗೆ ಬಿಲ್ ಮೊತ್ತದ 15 % ಕಮಿಷನ್ ಲಂಚ ಕೇಳಿದ ಮಹಿಳಾ ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಗಳೂರು ವಿಭಾಗದ ಉಪ ಕೃಷಿ ನಿರ್ದೇಶಕಿ ಭಾರತಮ್ಮ ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟ ಅಧಿಕಾರಿ.2022-23ನೇ ಸಾಲಿನಲ್ಲಿ ಕೃಷಿ ಇಲಾಖೆಯ ಅಧೀನದಲ್ಲಿ ಬರುವ ಜಲಾನಯನ ಅಭಿವೃದ್ಧಿ ವಿಭಾಗದ “ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ WDC 20” ಯೋಜನೆಯಡಿ ಬಂಟ್ವಾಳ ತಾಲೂಕಿನ ವಿವಿಧ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಸರಕಾರದ ವತಿಯಿಂದ ಉಚಿತವಾಗಿ ವಿವಿಧ ಜಾತಿ ಅರಣ್ಯ ಮತ್ತು ತೋಟಗಾರಿಕಾ ಗಿಡಗಳನ್ನು ನೀಡಲಾಗಿತ್ತು. ಇದನ್ನು ಕೆಲವು ನರ್ಸರಿಗಳ ಮೂಲಕ ಪಡೆದುಕೊಳ್ಳಲಾಗಿತ್ತು, ಅಲ್ಲದೆ ಅರಣ್ಯ ಇಲಾಖೆ ಗುತ್ತಿಗೆದಾರರಿಂದ ಗಿಡಗಳನ್ನು ನಾಟಿ ಮಾಡಿಸಿತ್ತು. ಈ ಒಟ್ಟಾರೆ ಕಾಮಗಾರಿಗೆ 50 ಲಕ್ಷದಷ್ಟು ಹಣ ಸರಕಾರದಿಂದ ಬರಬೇಕಾಗಿತ್ತು. ಈ ಹಿನ್ನಲೆ ಕೃಷಿ ಇಲಾಖೆಯಲ್ಲಿ ಅಂದು ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಇದೀಗ ನಿವೃತ್ತರಾಗಿರುವ ಪರಮೇಶ್ ಎನ್.ಪಿ ಅವರು ಬಿಲ್ ಬಾಕಿ ಪಾವತಿಗೆ ಮಂಗಳೂರು…

Read More