Author: main-admin

ಮಂಗಳೂರು : ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪತಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ (ಎಫ್‌ಎಂಸಿಐ) ಆಶ್ರಯದಲ್ಲಿ ಅಂತರರಾಷ್ಟ್ರೀಯ ಹೋಮಿಯೋಪತಿ ಸಮ್ಮೇಳನ-ಎಕ್ಸ್‌ಪ್ಲೋರಾ ನ.14ರಿಂದ 16ರ ವರೆಗೆ ಫಾದರ್ ಮುಲ್ಲರ್ ಕನ್ವೆನ್ಶನ್ ಸೆಂಟರ್‌ನಲ್ಲಿ ನಡೆಯಲಿದೆ. ಫಾದರ್ ಮುಲ್ಲರ್ ಗ್ರಂಥಾಲಯ ಕಟ್ಟಡದ ಡೆಸೆನಿಯಲ್ ಮೆಮೋರಿಯಲ್ ಹಾಲ್‌ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಎಫ್‌ಎಂಸಿಐ ನಿರ್ದೇಶಕ ಫಾ. ಫೌಸ್ಟಿನ್ ಲ್ಯೂಕಸ್ ಲೋಬೊ ಅವರು, ನ.14ರಂದು ಮಧ್ಯಾಹ್ನ 12ಕ್ಕೆ ಸಮ್ಮೇಳನದ ಉದ್ಘಾಟನೆ ನಡೆಯಲಿದ್ದು, ಈ ಸಮ್ಮೇಳನದಲ್ಲಿ ಭಾರತ ಮತ್ತು ವಿದೇಶಗಳಿಂದ 1,500 ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಯುಕೆ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ, ಜರ್ಮನಿ ಮತ್ತು ಭಾರತ ಸೇರಿದಂತೆ ಐದು ದೇಶಗಳ ತಜ್ಞರು ಭಾಗವಹಿಸಲಿದ್ದಾರೆ ಎಂದರು. ಕರ್ನಾಟಕ ಸರಕಾರದ ಆಯುಷ್ ಇಲಾಖೆಯ ಮುಖ್ಯ ನಿರ್ದೇಶಕ ಕಮಲಾ ಬಾಯಿ ಬಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ದಕ್ಷಿಣ ಆಫ್ರಿಕಾದ ದರ್ಬನ್ ತಾಂತ್ರಿಕ ವಿಶ್ವವಿದ್ಯಾಲಯದ ಹೋಮಿಯೊಪತಿ ವಿಭಾಗದ ಮುಖ್ಯಸ್ಥೆ ಡಾ. ಆಶ್ಲೇ ರೋಸ್ ಮತ್ತು ಯು.ಕೆ. ಫಮಖ್ಷನಲ್ ಶಿಫ್ಟ್ ಕನ್ಸಲ್ಟಿಂಗ್‌ನ ನಿರ್ದೇಶಕ ಡಾ. ಕಿಮ್…

Read More

ಎಂಸಿಸಿ ಬ್ಯಾಂಕ್ ತನ್ನ ಅರ್ಧ ವಾರ್ಷಿಕ ಕಾರ್ಯಕ್ಷಮತೆ ವಿಮರ್ಶೆ ಮತ್ತು ಸೈಬರ್ ಭದ್ರತಾ ಜಾಗೃತಿ ಕಾರ್ಯಕ್ರಮವನ್ನು “ಸೈಬರ್ ಸೇಫ್ ಬ್ಯಾಂಕ್” ಎಂಬ ಶೀರ್ಷಿಕೆಯೊಂದಿಗೆ ನವೆಂಬರ್ 8, 2025 ರಂದು ಮಂಗಳೂರಿನ ಆಡಳಿತ ಕಚೇರಿಯ ಪಿ.ಎಫ್.ಎಕ್ಸ್. ಸಲ್ಡಾನಾ ಸ್ಮಾರಕ ಸಭಾಂಗಣದಲ್ಲಿ ನಡೆಸಿತು. ಬ್ಯಾಂಕಿನ ಅಧ್ಯಕ್ಷರಾದ ‘ಸಹಕಾರ ರತ್ನ’ ಶ್ರೀ ಅನಿಲ್ ಲೋಬೊ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬೋಂದೆಲ್‌ನ ಸೇಂಟ್ ಲಾರೆನ್ಸ್ ಚರ್ಚಿನ ಧರ್ಮಗುರು ವಂದನೀಯ ಫಾ| ಆಂಡ್ರ‍್ಯೂ ಲಿಯೋ ಡಿಸೋಜಾ ಮುಖ್ಯ ಅತಿಥಿಯಾಗಿದ್ದರು. Principal Investigator & Cyber Security Expert ಡಾ| ಅನಂತ್ ಪ್ರಭು, ಬ್ಯಾಂಕಿನ ಮಹಾಪ್ರಬಂಧಕ ಶ್ರೀ ಸುನಿಲ್ ಮಿನೇಜಸ್ ವೇದಿಕೆಯಲ್ಲಿ ಹಾಜರಿದ್ದರು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಅಧ್ಯಕ್ಷೀಯ ಭಾಷಣದಲ್ಲಿ, ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಅವರು ತಮ್ಮ ಸಮರ್ಪಿತ ಪ್ರಯತ್ನಗಳಿಂದ ಗುರಿಗಳನ್ನು ಸಾಧಿಸಿದ ಬ್ಯಾಂಕಿನ ಶಾಖಾ ಸಿಬ್ಬಂದಿಗಳನ್ನು ಅಭಿನಂದಿಸಿದರು. ಬ್ಯಾಂಕಿನ ಪ್ರಗತಿಗೆ ಅಡ್ಡಿಯಾಗುವ ಸಮಸ್ಯೆಗಳನ್ನು ಪರಿಹರಿಸುವ ಅಗತ್ಯವನ್ನು ಅವರು ಒತ್ತಿ ಹೇಳಿ ನಿರಂತರ…

Read More

ಬೆಳ್ತಂಗಡಿ: ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸುತ್ತಿದ್ದ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯೋರ್ವನನ್ನು ಪೂಂಜಾಲಕಟ್ಟೆ ಠಾಣಾ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಕೇರಳ ಮೂಲದ ತಲಪಾಡಿ ನಿವಾಸಿ ಕಿರಣ್ ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ಮಾಲಾಡಿ ಗ್ರಾಮದ ನಿವಾಸಿ ಪ್ರಕಾಶ್‌ ಶೆಟ್ಟಿ ಎಂಬವರ ದೂರಿನಂತೆ ಅವರ ಮನೆಯ ಸಮೀಪ ಶ್ರೀಮತಿ ಪ್ರೇಮಾ ಶೆಟ್ಟಿ ಎಂಬವರ ಮನೆಯಿದ್ದು, ಪ್ರೇಮಾ ಶೆಟ್ಟಿರವರು ಕೆಲ ಸಮಯದಿಂದ ವಿದೇಶದಲ್ಲಿದ್ದು, ಮನೆಯಲ್ಲಿ ಯಾರೂ ಇಲ್ಲದ ಕಾರಣ ಮನೆಗೆ ಸಿ.ಸಿ ಟಿ.ವಿ ಅಳವಡಿಸಿರುತ್ತಾರೆ. ನ.9ರಂದು ಬೆಳಿಗ್ಗೆ, ಪ್ರೇಮಾರವರ ಮಗಳು ಪ್ರಕಾಶ್‌ ಶೆಟ್ಟಿರವರಿಗೆ ಕರೆ ಮಾಡಿ ಅವರ ತಾಯಿಯ ಮನೆಯಲ್ಲಿ ಯಾರೋ ವ್ಯಕ್ತಿ ಕಳ್ಳತನಕ್ಕೆ ಬಂದಿರುವಂತೆ ಸಿ.ಸಿ ಟಿ.ವಿಯಲ್ಲಿ ಕಾಣುತ್ತಿರುವುದಾಗಿ ತಿಳಿಸಿರುತ್ತಾರೆ. ತಕ್ಷಣ ಪ್ರೇಮರವರ ಮನೆಯ ಬಳಿ ತೆರಳಿ ನೋಡಿದಾಗ ಪ್ರೇಮಾರವರ ಮನೆಯ ಮೇಲ್ಚಾವಣಿಯಲ್ಲಿ ಒಬ್ಬ ಅಪರಿಚಿತ ವ್ಯಕ್ತಿಯು ಕೈಯಲ್ಲಿ ಕಬ್ಬಿಣದ ರಾಡ್ ಹಿಡಿದು ನಿಂತುಕೊಂಡಿದ್ದು, ಪ್ರಕಾಶ್‌ ಶೆಟ್ಟಿಯವರನ್ನು ನೋಡಿ ಕೆಳಗೆ ಹಾರಿ ಓಡಿ…

Read More

ಬಂಟ್ವಾಳ : ವಾಟ್ಸ್ಆ್ಯಪ್ ಮೂಲಕ ಮಹಿಳೆಯೊಬ್ಬರಿಗೆ ವಿಡಿಯೋ ಕರೆ ಮಾಡಿ ಬೆದರಿಕೆ ಹಾಕಿ, ಡಿಜಿಟಲ್ ಅರೆಸ್ಟ್ ಮಾಡಿ ಬಳಿಕ ಸುಮಾರು 1.16 ಕೋಟಿ ರೂ. ಲಪಟಾಯಿಸಿದ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆ.24ರಂದು ಬೆಳಗ್ಗೆ ಮಹಿಳೆ ಮನೆಯಲ್ಲಿದ್ದ ಸಮಯ ವಾಟ್ಸ್ಆ್ಯಪ್ ಮೂಲಕ ವಿಡಿಯೊ ಕರೆ ಬಂದಿದ್ದು, ಟೆಲಿ ಕಮ್ಯುನಿಕೇಶನ್ ಡಿಪಾರ್ಟ್ಮೆಂಟ್ ದಿಲ್ಲಿಯಿಂದ ಮಾತನಾಡುವುದಾಗಿ ಹೇಳಿದ್ದರು. ನಿಮ್ಮ ಹೆಸರಿನಲ್ಲಿರುವ ಆಧಾರ್ ಕಾರ್ಡ್ ಮತ್ತು ಪಾನ್‌ ಕಾರ್ಡ್ ಬಳಸಿ ಮೊಬೈಲ್ ನಂಬರ್ ಖರೀದಿಸಿ ದಿಲ್ಲಿಯಲ್ಲಿ ಸಾರ್ವಜನಿಕರಿಗೆ ಅಕ್ರಮವಾಗಿ ಜಾಹೀರಾತು ಹಾಗೂ ಕಿರುಕುಳದ ಸಂದೇಶಗಳನ್ನು ಕಳುಹಿಸಿದ್ದೀರಿ ಎಂದು ತಿಳಿಸಿದ್ದಾರೆ. ಅಲ್ಲದೆ ನಾನಾ ಮೊಬೈಲ್ ನಂಬರ್‌ಗಳಿಂದ ಆರೋಪಿಗಳು ವಿಡಿಯೋ ಕರೆ ಮಾಡಿ, ನಿಮ್ಮ ಮೇಲೆ ಕಾಂಬೋಡಿಯಾ ಹಾಗೂ ಮಂಗೋಲಿಯಾ ದೇಶಗಳಿಗೆ ಮಕ್ಕಳನ್ನು ಕಳ್ಳಸಾಗಣಿಕೆ ಮಾಡಿ ಹಣ ವರ್ಗಾವಣೆ ನಡೆಸಿದ ಬಗ್ಗೆ ಪ್ರಕರಣ ದಾಖಲಾಗಿದೆ ಎಂಬುದಾಗಿ ಹೆದರಿಸಿದ್ದು ನಿಮ್ಮನ್ನು ತನಿಖೆಯ ಸಲುವಾಗಿ ಡಿಜಿಟಲ್ ಅರೆಸ್ಟ್ ಮಾಡಿದ್ದಾಗಿ ತಿಳಿಸಿದ್ದರು. ಬ್ಯಾಂಕ್ ಖಾತೆಗಳ ಬಗ್ಗೆ ಮಾಹಿತಿಯನ್ನೂ ಕೇಳಿದ್ದು ನೀವು…

Read More

ಬೆಂಗಳೂರು : ಪರಪ್ಪನ ಅಗ್ರಹಾರದಲ್ಲಿ ಅಕ್ರಮದ ವಿಡಿಯೋ ವಿಚಾರಕ್ಕೆ ಸಂಬಂಧಪಟ್ಟಂತೆ ಪೊಲೀಸ ಅಧಿಕಾರಕ್ಕೆ ಗೃಹ ಸಚಿವ ಜಿ ಪರಮೇಶ್ವರಿ ಸಭೆ ನಡೆಸಿದ್ದು ಸಭೆಯಲ್ಲಿ ಜೈಲು ಅಧಿಕಾರಿಗಳಿಗೆ ಗೃಹ ಸಚಿವ ಪರಮೇಶ್ವರ ಅವರು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ. ಹೌದು ಗೃಹ ಸಚಿವ ಪರಮೇಶ್ವರ ಜೊತೆ ಜೈಲಾಧಿಕಾರಿಗಳ ಸಭೆ ನಡೆಯುತ್ತಿದ್ದು, ಜೈಲಿನಲ್ಲಿ ಕೈದಿಗಳ ಮೋಜು ಮಸ್ತಿ ವಿಡಿಯೋ ಬಗ್ಗೆ ತರಾಟೆ ತೆಗೆದುಕೊಂಡಿದ್ದಾರೆ. ಅಧಿಕಾರಿಗಳಿಗೆ ಪರಮೇಶ್ವರ್ ಅವರು ಹಿಗ್ಗಾಮುಗ್ಗ ಕ್ಲಾಸ್ ತೆಗೆದುಕೊಂಡಿದ್ದಾರೆ. ವಿಡಿಯೋ ಫೋಟೋಗಳನ್ನು ತೋರಿಸಿ ಪರಮೇಶ್ವರ್ ಕೆಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಪ್ರಾಜೆಕ್ಟ್ ನಲ್ಲಿ ಪ್ರದರ್ಶಿಸಿ ಸಚಿವರು ವಿವರಣೆ ಕೇಳಿದ್ದಾರೆ ಎಲ್ಲಾ ಫೋಟೋ ವಿಡಿಯೋಗಳನ್ನು ತೋರಿಸಿ ಪ್ರಶ್ನೆ ಕೇಳಿದ್ದಾರೆ ಜೈಲು ಅಧಿಕಾರಿಗಳು ಎದ್ದುನಿಂತು ಗೃಹ ಸಚಿವರಿಗೆ ಉತ್ತರ ನೀಡಿದ್ದಾರೆ ಯಾವ್ಯಾವ ಫೋಟೋ ಯಾವಾಗ ತೆಗೆದಿರುವುದು ಎಂಬುದರ ಕುರಿತು ಎಲ್ಲಾ ಮಾಹಿತಿಯನ್ನು ಗೃಹ ಸಚಿವ ಪರಮೇಶ್ವರ್ ಸಂಗ್ರಹಿಸುತ್ತಿದ್ದಾರೆ. ಬೆಂಗಳೂರಿನ ಕಾರಾಗೃಹ ಕಚೇರಿಯಲ್ಲಿ ಈ ಒಂದು ಮಹತ್ವದ ಸಭೆ ನಡೆಯುತ್ತಿದೆ.

Read More

ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯ ಫಲಿತಾಂಶವು ಪ್ರಕಟವಾಗಿದ್ದು, ನೂತನ ಅಧ್ಯಕ್ಷರಾಗಿ ವಾರ್ತಾಭಾರತಿ ದಿನಪತ್ರಿಕೆಯ ಮಂಗಳೂರು ಬ್ಯೂರೋ ಚೀಫ್ ಪುಷ್ಪರಾಜ್ ಬಿ.ಎನ್‌. ಆಯ್ಕೆಯಾಗಿದ್ದಾರೆ. ದ.ಕ.ಜಿಲ್ಲಾ ವಾರ್ತಾ ಇಲಾಖೆಯ ಸಭಾಂಗಣದಲ್ಲಿ ರವಿವಾರ ನಡೆದ ಚುನಾವಣೆಯಲ್ಲಿ 2025-28ನೆ ಸಾಲಿನ ಅಧ್ಯಕ್ಷರಾಗಿ ಆಯ್ಕೆಯಾದರು. ಪುಷ್ಪರಾಜ್ 187 ಮತಗಳನ್ನು ಗಳಿಸಿದರೆ ಅವರ ಪ್ರತಿಸ್ಪರ್ಧಿ ವಿಜಯವಾಣಿ ಪತ್ರಿಕೆಯ ವರದಿಗಾರ ಶ್ರವಣ್ ಕುಮಾರ್ ನಾಳ 144 ಮತಗಳನ್ನು ಪಡೆದರು. ರಾಜ್ಯ ಕಾರ್ಯಕಾರಣಿ ಸಮಿತಿಯ ಸದಸ್ಯರಾಗಿ ಪತ್ರಕರ್ತರ ಸಂಘದ ನಿಕಟಪೂರ್ವ ಅಧ್ಯಕ್ಷ ಶ್ರೀನಿವಾಸ ನಾಯಕ್ ಆಯ್ಕೆಯಾಗಿದ್ದಾರೆ. ಶ್ರೀನಿವಾಸ ನಾಯಕ್ 204 ಮತ ಪಡೆದರೆ, ಅವರ ಪ್ರತಿಸ್ಪರ್ಧಿ ವಿಜಯವಾಣಿ ಪತ್ರಿಕೆಯ ವರದಿಗಾರ ಅನ್ಸಾರ್ ಇನೋಳಿ 124 ಮತಗಳನ್ನು ಗಳಿಸಿದರು. ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಪೂಜಾರಿ ಮತ್ತು ಕೋಶಾಧಿಕಾರಿಯಾಗಿ ವಿಜಯ ಕೋಟ್ಯಾನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮುಹಮ್ಮದ್ ಆರೀಫ್, ವಿಲೈಡ್ ಡಿ ಸೋಜ ಮತ್ತು ರಾಜೇಶ್ ಶೆಟ್ಟಿ, ಕಾರ್ಯದರ್ಶಿಗಳಾಗಿ ಸತೀಶ್ ಇರಾ, ಸಿದ್ದೀಕ್ ನೀರಾಜೆ, ಸುರೇಶ್ ಪಳ್ಳಿ ಗೆಲುವು ಸಾಧಿಸಿದ್ದಾರೆ. ಕಾರ್ಯಕಾರಿ ಸಮಿತಿ…

Read More

ಪರಪ್ಪನ ಅಗ್ರಹಾರ ಜೈಲಿನ ಕರ್ಮಕಾಂಡ ಮತ್ತೊಮ್ಮೆ ಬಯಲಾಗಿದ್ದು ಜೈಲಿನಲ್ಲಿ ಉಮೇಶ್ ರೆಡ್ಡಿ ಹಾಗೂ ಭಯೋತ್ಪಾದಕರು ಸೇರಿದಂತೆ ಹಲವು ಕೈದಿಗಳ ಕೈಯಲ್ಲಿ ಮೊಬೈಲ್ ಕಂಡುಬಂದಿದ್ದು ಈ ಒಂದು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಈ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿ ಇದಕ್ಕೆ ಯಾರು ಹೊಣೆಗಾರರಾಗಿದ್ದಾರೆ. ಅಂಥವರ ವಿರುದ್ಧ ಕಠಿಣವಾದ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ಇವಂದು ಘಟನೆಗಳು ಮಂಗಳೂರು ಬೆಳಗಾವ್ ಸೇರಿದಂತೆ ಬಹಳ ಕಡೆ ಆದ ಸಂದರ್ಭದಲ್ಲಿ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ಅವರ ವಿರುದ್ಧ ಕ್ರಮ ತೆಗೆದುಕೊಂಡಿದ್ದೇವೆ ಆದರೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಪದೇಪದೇ ಆಗಿದ್ದು ಕೇಳಿಬಂದಿದ್ದು ಇದೇ ಕೂಡ ಇದೇ ರೀತಿಯಾದಾಗ ಕೆಲವರನ್ನು ಸಸ್ಪೆಂಡ್ ಮಾಡಲಾಗಿತ್ತು. ಎಡಿಜಿಪಿ ಬಿ ದಯಾನಂದ ಜೊತೆಗೆ ನಾನು ಮಾತನಾಡಿದ್ದೇನೆ ಯಾರು ಹೊಣೆಗಾರರಾಗಿದ್ದಾರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಸೂಪರಿಟೆಂಡೆಂಟ್ ಮತ್ತು ಕೆಳ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಕೂಡಲೇ ವರದಿ ನೀಡುವಂತೆ ನಾನು…

Read More

ಬೆಂಗಳೂರು: ಸ್ಥಳ ಮಹಜರಿಗೆ ಕರೆದೊಯ್ದಿದ್ದ ವೇಳೆ ಪೊಲೀಸರ ಮೇಲೆ ದಾಳಿ ನಡೆಸಿ ಎಸ್ಕೇಪ್​ ಆಗಲು ಯತ್ನಿಸಿದ ಆರೋಪಿ ಮೇಲೆ ಫೈರಿಂಗ್​ ನಡೆಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಬೊಮ್ಮಸಂದ್ರ ಸ್ಮಶಾನದ ಬಳಿ ನಿನ್ನೆ (ನ.8) ರಾತ್ರಿ 10.30ರ ಸುಮಾರಿಗೆ ಘಟನೆ ನಡೆದಿದ್ದು, ಕಿಡ್ನಾಪ್​ & ಇಬ್ಬರ ಕೊಲೆ ಪ್ರಕರಣದ ಆರೋಪಿಯಾಗಿರುವ ಆಂಧ್ರ ಮೂಲದ ರವಿ ಪ್ರಸಾದ್ ರೆಡ್ಡಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಉದ್ಯಮಿ ಬಾಲಪ್ಪ ರೆಡ್ಡಿ, ಮಾದೇಶ್ ಎಂಬುವರ ಕೊಲೆ ಪ್ರಕರಣದ ಸಂಬಂಧ ಆರೋಪಿ ರವಿ ಪ್ರಸಾದ್ ರೆಡ್ಡಿಯನ್ನ ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದರು. ಕೇಸ್​ ಸಂಬಂಧ ಸ್ಥಳ ಮಹಜರಿಗೆ ಪೊಲೀಸರು ಕರೆದೊಯ್ದಿದ್ದ ವೇಳೆ ಆರೋಪಿ, ಹೆಡ್​​ ಕಾನ್ಸ್​ಸ್ಟೇಬಲ್​​ ಅಶೋಕ್ ಮೇಲೆ ಏಕಾಏಕಿ ದಾಳಿ ನಡೆಸಿದ್ದಾನೆ. ಈ ವೇಳೆ ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿ ವಾರ್ನಿಂಗ್​​ ನೀಡಿದರೂ ದಾಳಿ ನಿಲ್ಲಿಸದಿದ್ದಾಗ ಆರೋಪಿ ಮೇಲೆ ಹೆಬ್ಬಗೋಡಿ ಇನ್ಸ್​​ಪೆಕ್ಟರ್​​ ಸೋಮಶೇಖರ್ ಫೈರಿಂಗ್ ಮಾಡಿದ್ದಾರೆ. ರವಿ ಪ್ರಸಾದ್ ರೆಡ್ಡಿ…

Read More

ಬ್ರಹ್ಮಾವರದ ಹಿಂದುಳಿದ ವರ್ಗಗಳ ಹಾಸ್ಟೆಲ್ ನಿಂದ ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿನಿಯರು ಮಂಗಳೂರಿನಲ್ಲಿ ಪತ್ತೆಯಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ನಿನ್ನೆ (ನ.8) ಬೆಳಗ್ಗೆ ಮೂವರು ವಿದ್ಯಾರ್ಥಿನಿಯರು ಹಾಸ್ಟೆಲ್ ನಿಂದ ನಾಪತ್ತೆಯಾಗಿದ್ದರು. ತನಿಖೆ ನಡೆಸಿದ ಬ್ರಹ್ಮಾವರ ಪೊಲೀಸರು ಸಿಸಿ ಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಅಲ್ಲದೇ ಮೊಬೈಲ್ ಲೊಕೇಶನ್ ಆಧಾರದ ಮೇಲೆ ವಿದ್ಯಾರ್ಥಿನಿಯರು ಮಂಗಳೂರಿನಲ್ಲಿ ಇರುವುದನ್ನು ಪತ್ತೆ ಹಚ್ಚಿದ್ದಾರೆ. ಬ್ರಹ್ಮಾವರ ಪೊಲೀಸರು ಪೋಷಕರೊಂದಿಗೆ ಮಂಗಳೂರಿಗೆ ತೆರಳಿದ್ದು, ಅಲ್ಲಿಂದ ಕರೆತರುತ್ತಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ. ಬ್ರಹ್ಮಾವರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ನಾಪತ್ತೆ ಪ್ರಕರಣ ಸುಖಾಂತ್ಯಗೊಂಡಿದೆ

Read More

ಪುತ್ತೂರು: ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಆಟೋ ರಿಕ್ಷಾದಲ್ಲಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪುತ್ತೂರು ನಗರ ಪೊಲೀಸ್ ಠಾಣೆಯವರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನ.08, 2025 ರಂದು ಮಧ್ಯಾಹ್ನ ಸವಣೂರು ಕಡೆಯಿಂದ ಪುತ್ತೂರು ಕಡೆಗೆ ಆಟೋ ರಿಕ್ಷಾದಲ್ಲಿ ಗಾಂಜಾ ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ, ಪುತ್ತೂರು ನಗರ ಠಾಣೆಯ ಉಪನಿರೀಕ್ಷಕ ಜನಾರ್ಧನ ಕೆ.ಎಂ. ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ವಾಹನವನ್ನು ತಡೆದು ಪರಿಶೀಲನೆ ನಡೆಸಿದರು. ಪರಿಶೀಲನೆ ವೇಳೆ 1 ಕಿಲೋ ಗಿಂತಲೂ ಹೆಚ್ಚು ಪ್ರಮಾಣದ ನಿಷೇಧಿತ ಮಾದಕ ವಸ್ತು ಗಾಂಜಾ ಹಾಗೂ ಸುಮಾರು 25 ಇಂಚು ಉದ್ದದ ಕತ್ತಿ ಪತ್ತೆಯಾಗಿದ್ದು, ಆಟೋ ಚಾಲಕನನ್ನು ವಿಚಾರಿಸಿದಾಗ ಆತ ಕಡಬ ತಾಲೂಕಿನ ಸವಣೂರು ನಿವಾಸಿ ಪ್ರಸಾದ್ ಇ (35) ಎಂದು ತಿಳಿದುಬಂದಿದೆ. ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 106/2025ರಂತೆ NDPS ಕಾಯ್ದೆಯ ಸೆಕ್ಷನ್ 8(c), 20(ii)(c) ಹಾಗೂ Indian Arms Act ಸೆಕ್ಷನ್ 25(1B)(b) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು,…

Read More