ಬೆಳ್ತಂಗಡಿ: ನೇತ್ರಾವತಿ ಸ್ನಾನಘಟ್ಟದ ಸಮೀಪ ಶನಿವಾರ ಸಂಜೆ ವ್ಯಕ್ತಿಯೊಬ್ಬರು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಘಟನೆಯ ತಕ್ಷಣ ಸ್ಥಳೀಯರು ಧೈರ್ಯದಿಂದ ಮುನ್ನಡೆದು ಬೆಂಕಿಯನ್ನು ನಂದಿಸಿ, ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಧಾವಿಸಿದ ಧರ್ಮಸ್ಥಳ ಪೊಲೀಸರು ಗಾಯಾಳುವನ್ನು ವಿಚಾರಣೆ ನಡೆಸಿದಾಗ, ಆತನು ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹಚ್ಚಿಗಟ್ಟ ಗ್ರಾಮದ ನಿವಾಸಿ ನರೇಂದ್ರ (50) ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಮಾಡಲು ಉದ್ದೇಶಪೂರ್ವಕವಾಗಿ ಪೆಟ್ರೋಲ್ ತೆಗೆದುಕೊಂಡು ಧರ್ಮಸ್ಥಳದ ನೇತ್ರಾವತಿ ತೀರಕ್ಕೆ ಬಂದು ಈ ಕೃತ್ಯಕ್ಕೆ ಮುಂದಾಗಿರುವುದಾಗಿ ಆತ ಹೇಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಕುರಿತು ಪೊಲೀಸರು ನರೇಂದ್ರ ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ. ಅವರು ಸ್ಥಳಕ್ಕೆ ಆಗಮಿಸಿದ ಬಳಿಕ ಆತ್ಮಹತ್ಯೆ ಯತ್ನದ ನಿಖರ ಕಾರಣ ತಿಳಿದುಬರುವ ಸಾಧ್ಯತೆ ಇದೆ.ಪ್ರಕರಣದ ಸಂಬಂಧ ಧರ್ಮಸ್ಥಳ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ
Author: main-admin
ಕಾರ್ಕಳ: ಬೆಳ್ತಂಗಡಿಯ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ನಿ ಸೌಮ್ಯ ಶೆಟ್ಟಿ (28)ಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.ಮೂಲತಃ ಪುತ್ತೂರು ನೆಲ್ಯಾಡಿಯ ಸುದೀಪ್ ರೈ ಮತ್ತು ಕಾರ್ಕಳ ಕಜೆ ನಿವಾಸಿ, ಪುತ್ತೂರು ಸಬ್ ರಿಜಿಸ್ಟ್ರಾರ್ ಕಚೇರಿ ಉದ್ಯೋಗಿ ಸೌಮ್ಯ ಶೆಟ್ಟಿ ಫೆ.17ರಂದು ರಿಜಿಸ್ಟರ್ ಮ್ಯಾರೇಜ್ ಆಗಿದ್ದರು. ಬಳಿಕ ಸುದೀಪ್ ಮತ್ತು ಸೌಮ್ಯ ಕಾರ್ಕಳ ಜೋಡುರಸ್ತೆಯ ಬಂಗ್ಲೆಗುಡ್ಡೆ ಕಜೆ ಎಂಬಲ್ಲಿ ವಾಸವಾಗಿದ್ದರು. ಮಾ.17ರಂದು ಸುದೀಪ್ ಕಾರಿನಲ್ಲಿ ತನ್ನ ತಾಯಿಯೊಂದಿಗೆ ಪೂಜಾ ಕಾರ್ಯಕ್ರಮದ ನಿಮಿತ್ತ ಕಡಬ ತಾಲೂಕಿನ ನೆಲ್ಯಾಡಿ ಪೇಟೆಯ ಸಮೀಪ ಹೋಗುತ್ತಿದ್ದಾಗ ಸೌಮ್ಯ ಸ್ಕೂಟಿಯಲ್ಲಿ ಬಂದು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಹಾಕಿದ್ದಳು ಎಂದು ದೂರಲಾಗಿತ್ತು. ನಂತರ ಸುದೀಪ್ ಕಾರ್ಕಳಕ್ಕೆ ಹೋಗಿದ್ದು, ಮಾ.22ರಂದು ಸುದೀಪ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಮಾ.24ರಂದು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಸುದೀಪ್ಗೆ ಸೌಮ್ಯ ಮಾನಸಿಕ ಚಿತ್ರಹಿಂಸೆ ನೀಡಿ ಆತ್ಮಹತ್ಯೆಗೆ ಪ್ರಚೋದಿಸಿರುವುದಾಗಿ ಮೃತರ ತಂದೆ ದಾಮೋದರ್ ರೈ ನೀಡಿದ ದೂರಿನಂತೆ…
ಬಂಟ್ವಾಳ: ಶುಕ್ರವಾರ ರಾತ್ರಿ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲ್ಲದಲ್ಲಿ ಮದರಂಗಿ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿದ್ದಾಗ ಯುವ ನಿರೂಪಕರೊಬ್ಬರು ವೇದಿಕೆಯ ಮೇಲೆ ಕುಸಿದು ಬಿದ್ದು ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಮೃತರನ್ನು ಫರಂಗಿಪೇಟೆಯ ಅಬ್ಬೆಟು ನಿವಾಸಿ ಅಶ್ವಿತ್ (32) ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ, ನಾಯಿಲ್ಲದಲ್ಲಿರುವ ಸಂಬಂಧಿಕರ ಮನೆಯಲ್ಲಿ ಮದರಂಗಿ ಕಾರ್ಯಕ್ರಮವನ್ನು ನಿರೂಪಣೆ ಮಾಡಲು ಅಶ್ವಿತ್ ವೇದಿಕೆಯ ಮೇಲೆ ಹೆಜ್ಜೆ ಹಾಕಿದ್ದರು. ಕಾರ್ಯಕ್ರಮವನ್ನು ಪ್ರಾರಂಭಿಸುತ್ತಿದ್ದಂತೆ, ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದರು. ಅವರನ್ನು ತಕ್ಷಣ ತುಂಬೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಅವರು ಈಗಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು. ಬಂಟ್ವಾಳ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಕ್ರೋ ಫೈನಾನ್ಸ್ ಹೆಸರಿನಲ್ಲಿ ಹಲವರಿಂದ ಭಾರಿ ಹಣ ಸಂಗ್ರಹಿಸಿ, ಹೆಚ್ಚಿನ ಲಾಭದ ಆಮಿಷವೊಡ್ಡಿ ವಂಚಿಸಿದ ಗಾಯಕಿ ಮಂಗ್ಲಿ ಮತ್ತು ಅವರ ಸಹೋದರನ ವಿರುದ್ಧ 10 ಕೋಟಿ ರೂ. ಮೋಸದ ಆರೋಪದಡಿ ಪ್ರಕರಣ ದಾಖಲಾಗಿದೆ. ಮಂಗ್ಲಿ ಅವರು ತೆಲುಗಿನವರಾದರೂ ಕನ್ನಡದಲ್ಲೂ ಜನಪ್ರಿಯತೆ ಪಡೆದ ಗಾಯಕಿ. ಇತ್ತೀಚಿಗೆ ಕನ್ನಡದ ಕೆಡಿ ಚಿತ್ರದ ಹಾಡಿಗೆ ಧ್ವನಿ ನೀಡಿದ್ದರು. ಈಗ ಅವರ ಮೇಲೆ 10 ಕೋಟಿ ರೂಪಾಯಿ ಮೋಸದ ಕೇಸ್ ದಾಖಲಾಗಿದೆ. ಪಂಜಗುಟ್ಟ ಪೊಲೀಸ್ ಠಾಣೆಯಲ್ಲಿ ಮಂಗ್ಲಿ ಹಾಗೂ ಅವರ ಸಹೋದರನ ವಿರುದ್ಧ ಕೇಸ್ ದಾಖಲಾಗಿದೆ. ಮಂಗ್ಲಿ ತಮಗೆ ಮೋಸ ಮಾಡಿದ್ದಾರೆ ಮತ್ತು ಅವರಿಂದ ಅಪಾಯವಿದೆ ಎಂದು ವಕೀಲರೊಬ್ಬರು ಆರೋಪಿಸಿದ್ದಾರೆ. ಮೈಕ್ರೋ ಫೈನಾನ್ಸ್ ಮಾಡುತ್ತಿದ್ದ ಮಂಗ್ಲಿ ಮತ್ತು ಅವರ ಸಹೋದರ ಸುಮಾರು 100 ಜನರಿಂದ ಭಾರಿ ಹಣವನ್ನು ಸಂಗ್ರಹಿಸಿದ್ದು, ಹಣವನ್ನು ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಬರುತ್ತದೆ ಎಂಬ ಆಸೆ ತೋರಿಲಾಗಿತ್ತು. ಇದನ್ನು ನಂಬಿ ಅನೇಕರು ಹಣ ನೀಡಿದ್ದರು. ನಿಗದಪಡಿಸಿದ ಸಮಯ ಕಳೆದರೂ ಲಾಭ ನೀಡಿಲ್ಲ, ಅಸಲನ್ನು…
ಉಡುಪಿ : ಜಿಲ್ಲೆಯ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದ ರೌಡಿ ಶೀಟರ್ ಕಾರ್ತಿಕ್ ಆಚಾರ್ ವಿರುದ್ಧ ಗಡಿಪಾರು ಆದೇಶವನ್ನು ಹೊರಡಿಸಲಾಗಿದೆ. ಕುಂದಾಪುರ ತಾಲೂಕು ಇಡೂರು ಕುಂಜ್ಞಾಡಿ ಗ್ರಾಮದ ಹೊಸಿಮನೆ ಕಾರ್ತಿಕ್ ನಿಲಯದ ಕಾರ್ತಿಕ್ ಆಚಾರ್ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಉಡುಪಿ ಪೊಲೀಸ್ ಅಧೀಕ್ಷಕರು ಎಪ್ರಿಲ್ 9ರಂದು ಗಡಿಪಾರು ಆದೇಶ ಹೊರಡಿಸಿದ್ದಾರೆ. ಈತನ ವಿರುದ್ಧ ಒಟ್ಟು 4 ಪ್ರಕರಣ ದಾಖಲಾಗಿದ್ದು, ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಈತನ ಮೇಲೆ ರೌಡಿಶೀಟ್ ತೆರೆಯಲಾಗಿದೆ. ಈತನನ್ನು ಬೆಂಗಳೂರು ಕಮೀಷನರೇಟ್ ನ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ಪ್ರಕಟಣೆ ತಿಳಿಸಿದೆ.
ಕುಂದಾಪುರ : ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಟಿಪ್ಪರ್ ಲಾರಿಯೊಂದು ಅದೇ ದಿಕ್ಕಿನಲ್ಲಿ ಹೋಗುತ್ತಿದ್ದ ಸ್ಕೂಟಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ ದಾರುಣ ಘಟನೆ ಶುಕ್ರವಾರ ಬೀಜಾಡಿ ಡಿವೈಡರ್ ಬಳಿ ನಡೆದಿದೆ. ಮೃತರನ್ನು ವಡ್ಡರ್ಸೆ ನೀರುಕೊಡ್ಲು ನಿವಾಸಿ ದಿ. ಮಂಜುನಾಥ್ ಆಚಾರಿ ಎಂಬವರ ಪತ್ನಿ ಶಾರದಾ (55) ಎಂದು ಗುರುತಿಸಲಾಗಿದೆ. ಶಾರದಾ ಅವರು ಕೋಟೇಶ್ವರ ಅಂಕದಕಟ್ಟೆಯಲ್ಲಿರುವ ತಮ್ಮ ತಂಗಿಯ ಮನೆಗೆ ತೆರಳುತ್ತಿದ್ದರೆಂದು ತಿಳಿದುಬಂದಿದೆ.ಈ ವೇಳೆ ಸ್ಕೂಟಿಯನ್ನು ಅವರ ಮಗ ಚಾಲನೆ ಮಾಡುತ್ತಿದ್ದು, ಅಪಘಾತದ ತೀವ್ರತೆಗೆ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಕೂಟಿ ಓಡಿಸುತ್ತಿದ್ದ ಮಗ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಕುಂದಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಮಂಗಳೂರು : ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ಅಪರಾಧಿ ಗದಗ ತಾಲೂಕಿನ ಹೊಳೆಮುನ್ನೂರು ನಿವಾಸಿ ಮಹೇಶ ಮಾದರ (20) ಎಂಬಾತನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್ಟಿಎಸ್ ಸಿ-2 (ಪೊಕ್ಸೊ) ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ನಗರ ಹೊರವಲಯದಲ್ಲಿ ಬಾಡಿಗೆ ಮನೆಯಲ್ಲಿ ತಂದೆ ತಾಯಿಯೊಂದಿಗೆ ವಾಸವಾಗಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿ ಹೋಮ್ ನರ್ಸ್ ಕೆಲಸ ಮಾಡಿಕೊಂಡಿದ್ದಳು. ಆರೋಪಿ ಮಹೇಶ ಮಾದರ ಕೂಡ ಪಕ್ಕದ ಮನೆಯಲ್ಲಿ ವಾಸವಾಗಿದ್ದ. ಇವರ ಮಧ್ಯೆ ಪರಿಚಯವಾಗಿ ಸ್ನೇಹ ಬೆಳೆದಿತ್ತು. 2015ರ ಮೇ 19ರಂದು ಮನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕರೆ ಮಾಡಿದ್ದ ಆರೋಪಿ ಮಹೇಶ ಬಲ್ಲಾಳ್ಬಾಗ್ಗೆ ಕರೆಸಿ ಅಲ್ಲಿಂದ ಆಟೋದಲ್ಲಿ ಕಾವೂರು ಬಳಿಯ ಶೆಡ್ಗೆ ಕರೆದುಕೊಂಡು ಹೋಗಿ ಅಂದು ರಾತ್ರಿ ಆಕೆಯ ಲೈಂಗಿಕ ದೌರ್ಜನ್ಯ ಎಸಗಿದ್ದ. ಮರುದಿನ ಬೆಳಗ್ಗೆ 11ಕ್ಕೆ ಸರ್ಕಾರಿ ಬಸ್ಸಿನಲ್ಲಿ ಬಳ್ಳಾರಿಗೆ ಕರೆದುಕೊಂಡು ಹೋಗಿದ್ದ. ಅಲ್ಲೂ ಲೈಂಗಿಕ ದೌರ್ಜನ್ಯ ಎಸಗಿದ್ದ. ಬಾಲಕಿ…
ಬೆಂಗಳೂರು : ಕಾಂತಾರ ಚಾಪ್ಟರ್-1 ಚಿತ್ರದ ದೈವಪಾತ್ರಕ್ಕೆ ಅಪಮಾನಕಾರಿ ಸನ್ನೆ ಮಾಡಿ ಮಾತನಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಷ್ಕೃತ ಕ್ಷಮಾಪಣಾ ಪತ್ರ ಸಲ್ಲಿಸುವುದಾಗಿ ನಟ ರಣವೀರ್ ಸಿಂಗ್ ಪರ ವಕೀಲರು ಹೈಕೋರ್ಟ್ಗೆ ತಿಳಿಸಿದ್ದಾರೆ. ವಿಚಾರಣೆಯ ವೇಳೆ ದೂರುದಾರರ ಪರ ವಕೀಲರು, ಅರ್ಜಿದಾರ ರಣವೀರ್ ಸಿಂಗ್ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಪಶ್ಚಾತ್ತಾಪವಿಲ್ಲ. ದೂರು ನೀಡಿರುವುದೇ ತಪ್ಪು ಎಂಬಂತೆ ಬಿಂಬಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು. ಇದಕ್ಕೆ ಅರ್ಜಿದಾರರ ಪರ ವಕೀಲರು, ದೂರುದಾರರೊಂದಿಗೆ ಚರ್ಚಿಸಿ ಅವರಿಗೆ ತೃಪ್ತಿಯಾಗುವ ಭಾಷೆಯಲ್ಲಿಯೇ ಪರಿಷ್ಕೃತ ಪ್ರಮಾಣ ಪತ್ರ ಸಲ್ಲಿಸುವುದಾಗಿ ಹೇಳಿದರು. ಗೋವಾದಲ್ಲಿ ಕೆಲ ತಿಂಗಳ ಹಿಂದೆ ನಡೆದ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (ಐಎಫ್ಎಫ್ಐ) ಕಾಂತಾರ ಚಾಪ್ಟರ್-1 ಚಿತ್ರದ ಚಾಮುಂಡಿ ದೈವಕ್ಕೆ ಅಪಮಾನ ಮಾಡಿದ ಆರೋಪದಡಿ ದಾಖಲಾಗಿರುವ ಖಾಸಗಿ ದೂರು ಮತ್ತು ಅದರ ಮುಂದುವರಿದ ಭಾಗವಾಗಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ, ರಣವೀರ್ ಸಿಂಗ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ವಿಚಾರಣೆ ನಡೆಸಿದರು. ಘಟನೆ ನಡೆದ ದಿನ ನಾನು…
ಜೊಂಬಿ ಡ್ರಗ್ಸ್ ಸೇವಿಸುತ್ತಿದ್ದ ಎಂಬ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಮಿಷನರ್ ರಿಂದ ಪ್ರಕರಣದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ.ಇದೊಂದು ಸುಳ್ಳು ಸುದ್ದಿ ಆಗಿದ್ದು, ಈ ಒಂದು ವಿಡಿಯೋ ವೈರಲ್ ಮಾಡಿದ ಯುವಕನನ್ನು ಸದ್ಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದರು. ಬೆಂಗಳೂರಲ್ಲಿ ಮಾಧ್ಯಮಗಳಲ್ಲಿ ಮಾತನಾಡಿದ ಅವರು ಜೊಂಬಿ ಡ್ರಗ್ಸ್ ಏನು ಇಲ್ಲ. ಅದು ಸತ್ಯಕ್ಕೆ ದೂರವಾದದ್ದು ಪಂಜಾಬ್ ಮೂಲದ ಲಾರಿ ಚಾಲಕನಿಗೆ ಕುಡಿತದ ಅಭ್ಯಾಸವಿತ್ತು. ಹಿಂದೆ ಪಂಜಾಬ್ ನಲ್ಲಿ ಡ್ರಗ್ಸ್ ತೆಗೆದುಕೊಂಡಿದ್ದೇನೆ ಎಂದು ಹೇಳಿದ್ದಾನೆ. ಯಾವುದೋ ಆರೋಗ್ಯ ಸಮಸ್ಯೆಗಳಿಗೂ ಔಷಧ ತೆಗೆದುಕೊಂಡಿದ್ದ. ಹಾಗಾಗಿ ಆತನಿಗೆ ಅದರಿಂದ ಪರಿಣಾಮ ಆಗಿತ್ತು. ಈ ಬಗ್ಗೆ ಜಾಲತಾಣದಲ್ಲಿ ಪೋಸ್ಟ್ ಮಾಡಿದವನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿಸಿದರು. ಜೊಂಬಿ ಡ್ರಗ್ಸ್ ಸೇವಿಸುತ್ತಿದ್ದ ಎಂದು ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಯುವಕ ಒಬ್ಬ ವೈರಲ್ ಮಾಡಿದ್ದ. ಈ ಕುರಿತಂತೆ ಬೆಂಗಳೂರಿನ ಬಾಗಲೂರು ಪೊಲೀಸರು ಹೇಮಂತ ಎಂಬತನನ್ನ ಅರೆಸ್ಟ್ ಮಾಡಿದ್ದಾರೆ.…
ಬೆಳ್ತಂಗಡಿ: ತಾನು ಕೆಲಸ ಮಾಡುತ್ತಿದ್ದ ಕೇರಳದ ಹೋಟೆಲ್ನ ಮಾಲಕನನ್ನೇ ಏ.6ರಂದು ಚೂರಿಯಿಂದ ಇರಿದು ಕೊಲೆ ಮಾಡಿದ ಪ್ರಕರಣದಲ್ಲಿ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕಿಲ್ಲೂರಿನ ಪೆರ್ದಾಡಿ ನಿವಾಸಿ ಉಮರಬ್ಬ ಎಂಬವರ ಪುತ್ರ ಇರ್ಷಾದ್ (32) ಎಂಬಾತನನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಕೇರಳದ ಚಡಯಮಂಗಳ- ಕುರಿಯೋಡು ಸ್ವೈಸಿ ಎಂಬ ಹೆಸರಿನ ಹೊಟೇಲ್ ಉದ್ಯಮ ನಡೆಸುತ್ತಿದ್ದ ಮಾಲೀಕ ಶಕೀರ್ ಹುಸೈನ್ ಎಂಬವರನ್ನು ಇರ್ಷಾದ್ ಕೊಲೆ ಮಾಡಿದ್ದಾನೆ. ಬಿರಿಯಾಣಿ ಪಾಕ ತಜ್ಞನಾಗಿದ್ದ ಬೆಳ್ತಂಗಡಿಯ ಇರ್ಷಾದ್ ತಾನು ಕೆಲಸ ಮಾಡುತ್ತಿದ್ದ ಹೋಟೆಲ್ಗೆ ಬರುತ್ತಿದ್ದ ಅಕ್ಕಿ ಮೂಟೆಯಲ್ಲಿರುವ 50,100,150 ರೂಪಾಯಿಗಳ ಕೂಪನ್ಗಾಗಿ ನಡೆದ ಜಗಳದಿಂದ ಈ ಕೃತ್ಯವೆಸಗಿದ್ದಾನೆ. ಅಕ್ಕಿಮೂಟೆಯಲ್ಲಿ ಬರುತ್ತಿದ್ದ ಕೂಪನ್ ಒಟ್ಟು ಸೇರಿಸಿ ಮಾಲಕರಿಗೆ ಕೊಡಬೇಕೆಂದು ಹೊಟೇಲ್ ಮಾಲಕ ಕೇರಳದ ಆಕಲ್ ನಿವಾಸಿ ಶಕೀರ್ ಹುಸೈನ್ ನಿರ್ದೇಶನ ನೀಡಿದ್ದರು. ಅದಾಗ್ಯೂ ಇರ್ಷಾದ್ ಕೂಪನ್ಗಳನ್ನು ತಾನೇ ಸಂಗ್ರಹಿಸಿಟ್ಟುಕೊಂಡಿದ್ದ. ಇದನ್ನುಪ್ರಶ್ನಿಸುವ ಸಲುವಾಗಿ ಪತ್ನಿಯೊಂದಿಗೆ ಆತ ವಿಶ್ರಾಂತಿ ಪಡೆಯುತ್ತಿದ್ದ ವಸತಿ ಗೃಹದ ಎರಡನೇ ಮಹಡಿಗೆ ಹೋಗಿದ್ದ ವೇಳೆ ಇಬ್ಬರ ನಡುವೆ ಮಾತಿಗೆ…










