ಕಾಸರಗೋಡು: ಕ್ಷುಲ್ಲಕ ಕಾರಣಕ್ಕೆ ಮರದ ಹಲಗೆ ಯಿಂದ ಬಡಿದು ತಾಯಿ ಯನ್ನು ಕೊಲೆಗೈದ ಘಟನೆ ನೀಲೇಶ್ವರ ದಲ್ಲಿ ಗುರುವಾರ ಬೆಳಿಗ್ಗೆ ಘಟನೆ ನಡೆದಿದೆ.ನೀಲೇಶ್ವರ ಕಣಿಚ್ಚರದ ರುಕ್ಮಿಣಿ (63) ಕೊಲೆ ಆದವರು. ಕೃತ್ಯವೆಸಗಿದ ಪುತ್ರ ಸುಜಿತ್ (34) ನನ್ನು ನೀಲೇಶ್ವರ ಪೊಲೀಸರು ಬಂಧಿಸಿದ್ದಾರೆ.ಈತನನ್ನು ಹೆಚ್ಚಿನ ಚಿಕಿತ್ಸೆ ಗಾಗಿ ಮಾನಸಿಕ ಆರೋಗ್ಯ ಕೇಂದ್ರಕ್ಕೆ ಸೇರಿಸಲಾಗಿದೆ. ಮೊಬೈಲ್ ಫೋನ್ ಬಳಕೆ ಬಗ್ಗೆ ಉಂಟಾದ ಮಾತಿನ ಚಕಮಕಿ ಕೊಲೆ ಯಲ್ಲಿ ಕೊನೆ ಗೊಂಡಿದೆ. ಹಲಗೆಯಿಂದ ತಲೆಗೆ ಬಡಿದ ಪರಿಣಾಮ ರುಕ್ಮಿಣಿ ಗಂಭೀರ ಗಾಯಗೊಂಡು ಕಣ್ಣೂರಿನ ಆಸ್ಪತ್ರೆಗೆ ದಾಖಲಿಸಲಾಗಿ ದ್ದರೂ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಮೃತ ಪಟ್ಟಿದ್ದಾರೆ .ಪೊಲೀಸರು ಆರೋಪಿಯನ್ನು ಬಂಧಿಸಿ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದ್ದು, ವೈದ್ಯರು ಈತನಿಗೆ ಮಾನಸಿಕ ಸಮಸ್ಯೆ ಗಳಿರು ವುದಾಗಿ ವೈದ್ಯರು ವರದಿ ನೀಡಿದ್ದಾರೆ. ಈತನನ್ನು ಚಿಕಿತ್ಸೆಗಾಗಿ ಕುದಿರವೆಟ್ಟ ಎಂಬಲ್ಲಿನ ಮಾನಸಿಕ ಆರೋಗ್ಯ ಕೇಂದ್ರಕ್ಕೆ ಸೇರಿಸಲಾಗಿದೆ.
Author: main-admin
ಮಂಗಳೂರು: ಹಮಾಸ್ ಉಗ್ರರನ್ನು ಬೆಂಬಲಿಸಿ ಮಂಗಳೂರಿನ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಘಟನೆ ನಡೆದಿದೆ. ಹಮಾಸ್ ಉಗ್ರರರನ್ನು ದೇಶ ಪ್ರೇಮಿಗಳೆಂದು ಮಂಗಳೂರಿನ ಝಾಕಿರ್ ಕರೆದಿದ್ದಾನೆ. ಅಲ್ಲದೆ ಹಮಾಸ್ ಉಗ್ರರರ ವಿಜಯಕ್ಕೆ ಪ್ರಾರ್ಥನೆ ಸಲ್ಲಿಸುವಂತೆಷ ಝಾಕಿರ್ ಕರೆ ನೀಡಿದ್ದಾನೆ. ಪ್ಯಾಲಿಸ್ಟೈನ್ , ಗಾಝಾ ಹಾಗೂ ಹಮಾಸ್ ದೇಶಪ್ರೇಮಿ ಯೋಧರಿಗೆ ಜಯ ಸಿಗಲು ಪ್ರಾರ್ಥಿಸೋಣ, ಹಮಾಸ್ ಉಗ್ರರರು ದೇಶ ಪ್ರೇಮಿ ಯೋಧರು ಎಂದು ಬಣ್ಣಿಸಿದ್ದಾನೆ. ಮಂಗಳೂರಿನ ಬಂದರು ಪ್ರದೇಶದಲ್ಲಿ ತಾಲಿಬನ್ ಎಂಬ ಹೆಸರಿನಲ್ಲಿ ಝಾಕಿರ್ ಗುರುತಿಸಿಕೊಳ್ಳುತ್ತಿದ್ದ. ವಿಶ್ವ ಕಬರಸ್ಥಾನ್ ಸಂಘದ ಸದಸ್ಯರು ಪ್ರತ್ಯೇಕ ಪ್ರಾರ್ಥನೆ ಸಲ್ಲಿಸುವಂತೆ ಝಾಕಿರ್ ಕರೆ ನೀಡಿದ್ದಾನೆ. ಇನ್ನು ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಹಿಂದೂ ಸಂಘಟನೆಗಳಿಂದಲೂ ಭಾರೀ ವಿರೋಧ ವ್ಯಕ್ತವಾಗಿದೆ. ಝಾಕಿರ್ ನನ್ನು ಈ ಕೂಡಲೇ ಬಂಧಿಸುವಂತೆ ಹಿಂದೂ ಸಂಘಟನೆಗಳ ಒತ್ತಾಯಿಸಿವೆ.
ಕಾಪು: ಹತ್ತು ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಕಾಪು ಪೊಲೀಸರು ಮುಂಬಯಿಯಲ್ಲಿ ಬಂಧಿಸಿ, ಕರೆ ತಂದು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಉದ್ಯಾವರ ಅಂಕುದ್ರು ನಿವಾಸಿ ಗಣೇಶ್ ಪೂಜಾರಿ (44) ಬಂಧಿತ ಆರೋಪಿ. 2013 ಮತ್ತು 2014ರಲ್ಲಿ ಕಾಪು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮೂರು ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯು ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಆತನ ವಿರುದ್ಧ ವಾರಂಟ್ ಮತ್ತು ಪ್ರೋಕ್ಲಮೇಷನ್ ಹೊರಡಿಸಲಾಗಿತ್ತು. ಆರೋಪಿಯನ್ನು ಕಾಪು ಎಸೈ ಅಬ್ದುಲ್ ಖಾದರ್ ಮತ್ತು ಕ್ರೈಂ ಎಸೈ ಪುರುಷೋತ್ತಮ್ ಅವರ ಆದೇಶದಂತೆ ಕ್ರೈಂ ಸಿಬಂದಿ ನಾರಾಯಣ ಮತ್ತು ಗಣೇಶ್ ಶೆಟ್ಟಿ ಅ. 13ರಂದು ಮಹಾರಾಷ್ಟ್ರ ನಲಸೋಪರ್ ಈಸ್ಟ್ ಬಳಿ ವಶಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಯ ವಿರುದ್ಧ ಬೇರೆ ಯಾವುದಾದರೂ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದಾರೆ ಉಡುಪಿ ಜಿಲ್ಲಾ ಕಾರಾಗೃಹವನ್ನು ಸಂಪರ್ಕಿಸುವಂತೆ ಕಾಪು ಪೊಲೀಸರು ತಿಳಿಸಿದ್ದಾರೆ.
ಬಂಟ್ವಾಳ: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಉತ್ತರ ಪ್ರದೇಶ ಮೂಲದ ಬಬುಲು ಸಹಾನಿ, ರಾಮ್ ಗೋವಿಂದ ಸಹಾನಿ, ಅಮಿತ್ ಕುಮಾರ್, ಸತ್ಯೇಂದ್ರ ಸಹಾನಿ, ಸೈದಾನ್ ಸಹಾನಿ, ಅಭಯ್ ನಾರಾಯಣ್ ಬಂಧಿತ ಆರೋಪಿಗಳು. ಪರಂಗಿಪೇಟೆಯಲ್ಲಿ ಅಕ್ರಮ ಮರಳು ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮೂಲದ ಆರು ಮಂದಿಯ ಮೇಲೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ 2017 ರಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಆರೋಪಿಗಳಾದ ಇವರು ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ಊರಿಗೆ ಹೋಗಿ ತಲೆಮರೆಸಿಕೊಂಡಿದ್ದರು. ಇದೀಗ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಬಿ.ಹಾಗೂ ಪೋಲಿಸ್ ಉಪನಿರೀಕ್ಷಕರುಗಳಾದ ಹರೀಶ್ ಎಂ.ಆರ್,ಮತ್ತು ಮೂರ್ತಿ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ಯೋಗೇಶ್ ಡಿ.ಎಲ್, ವಿಜಯಕುಮಾರ್ ಮಾಹಿತಿ ಸಂಗ್ರಹಿಸಿ ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಸುಳ್ಯ:ತಿಂಗಳ ಹಿಂದೆ ಸಂಪಾಜೆ ಕಲ್ಲುಗುಂಡಿಯ ಗೂನಡ್ಕದಲ್ಲಿ ಹಟ್ಟಿಯಿಂದ ದನ ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ಪೊಲೀಸರು ಆರೋಪಿಗಳನ್ನು ಕೇರಳದಲ್ಲಿ ಬಂಧಿಸಿದ್ದಾರೆ. ಸುಳ್ಯ ಮರ್ಕುಂಜ ನಿವಾಸಿ ಗಣೇಶ್ ಕಾಯಾರ ಮತ್ತು ಕೇರಳದ ಚೆಂಬೇರಿಯ ನಿವಾಸಿ ಅಬ್ದುಲ್ ಬಂಧಿತ ಆರೋಪಿಗಳು. ಸೆ. 13ರಂದು ತಡರಾತ್ರಿ ಎರಡು ಗಂಟೆ ವೇಳೆಗೆ ಗೂನಡ್ಕದ ವರದರಾಜ್ ಸಂಕೇಶ್ವರ್ ಅವರ ಮನೆಯ ಹಟ್ಟಿಯಲ್ಲಿದ್ದ ಎರಡು ಹಸುಗಳನ್ನು ಪಿಕಪ್ ಗೆ ತುಂಬಿ ಕದ್ದೊಯ್ಯಲಾಗಿತ್ತು. ಆರೋಪಿಗಳ ಚಲನ ವಲನಗಳನ್ನು ಸಿಸಿ ಕ್ಯಾಮೆರಾಗಳ ಸಹಾಯದಿಂದ ಸೆರೆ ಹಿಡಿಯಲಾಗಿದೆ. ಇದೀಗ ಆರೋಪಿಗಳನ್ನು ಸುಳ್ಯ ಪೊಲೀಸರು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಮಂಗಳೂರು : ನಾಡ ಹಬ್ಬ ದಸರಾ ರಜೆಯನ್ನು ಪದವಿ ಕಾಲೇಜುಗಳಿಗೂ ವಿಸ್ತರಿಸುವಂತೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಸರ್ಕಾರವನ್ನು ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ಈಗಾಗಲೇ ಶಾಲಾ ಮಕ್ಕಳಿಗೆ ದಸರಾ ರಜೆ ನೀಡಲಾಗಿದ್ದು ಪದವಿ ವಿದ್ಯಾರ್ಥಿಗಳಿಗೆ ರಜೆ ಘೋಷಿಸದಿರುವುದು ಹಬ್ಬದ ಸಂಭ್ರಮ ಸವಿಯಲು ಅಡ್ಡಿಯಾಗಿದೆ. ನಾಡಿನ ಪ್ರಮುಖ ಹಬ್ಬ ದಸರಾಗೆ ಪೂರಕವಾಗುವಂತೆ ಪದವಿ ವಿದ್ಯಾರ್ಥಿಗಳಿಗೂ ರಜೆ ನೀಡುವ ಬಗ್ಗೆ ಹಲವಾರು ಪೋಷಕರು ಈಗಾಗಲೇ ಮನವಿ ಮಾಡುತ್ತಿದ್ದು ಸರಕಾರ ಈ ಬಗ್ಗೆ ಗಮನ ಹರಿಸಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಆಗ್ರಹಿಸಿದರು. ದಸರಾವು ನಾಡಿನ ಅತ್ಯಂತ ಪ್ರಮುಖ ಹಬ್ಬವಾಗಿದ್ದು ಮಂಗಳೂರು ದಸರಾವು ಮೈಸೂರು ನಂತರ ಅತ್ಯಂತ ಜನಾಕರ್ಷಣೆ ಗಳಿಸಿರುವ ಹಬ್ಬವಾಗಿದೆ. ಹೀಗಾಗಿ ನವರಾತ್ರಿಯನ್ನು ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು, ಸೇರಿದಂತೆ ಎಲ್ಲರೂ ಸಂಭ್ರಮದಿಂದ ಆಚರಿಸುವಂತಾಗಲು ರಜೆ ನೀಡುವ ಬಗ್ಗೆ ಆದೇಶ ಹೊರಡಿಸಬೇಕೆಂದು ಉನ್ನತ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳ ಮೂಲಕ ಸರ್ಕಾರವನ್ನು ಆಗ್ರಹಿಸಿದರು. ಹಿಂದಿನ ಸರ್ಕಾರದ ಅವಧಿಯಲ್ಲಿ ದಸರಾ ಹಬ್ಬದ ರಜೆಯಲ್ಲಿ ಉಂಟಾಗಿದ್ದ…
ಮಂಗಳೂರು: ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧೆಡೆ ಗಾಂಜಾ ಸೇವನೆ ಮಾಡುತ್ತಿದ್ದ ಆರೋಪದಲ್ಲಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಪೋರ್ಕೊಡಿ ನಿವಾಸಿ ಮುಹಮ್ಮದ್ ಮುನಾಝ್, ಕಸಬಾ ಬೆಂಗ್ರೆಯ ನಿವಾಸಿ ಮುಹಮ್ಮದ್ ಅಫ್ರಾರ್, ಬಡಗುಳಿಪಾಡಿ ಗ್ರಾಮದ ನಿವಾಸಿ ರಾಹಿಲ್ ಮೊಯ್ದಿನ್ ಶರೀಫ್, ಮೂಡುಪೆರಾರ ಗ್ರಾಮದ ಗುರುಕಂಬಳದ ನಿವಾಸಿ ಮುಲ್ಲಾ ಅಬ್ದುಲ್ ಅಮನ್ ಮತ್ತು ಕಂದಾವರ ಗ್ರಾಮದ ಅಮಾನುಲ್ಲಾ ಕಂಪೌಂಡ್ ನಿವಾಸಿ ಮುಹಮ್ಮದ್ ಶಾಹಿನ್ ಎಂದು ಗುರುತಿಸಲಾಗಿದೆ.ಇನ್ನು ಮುನಾಝ್ ಮತ್ತು ಮುಹಮ್ಮದ್ ಅಫ್ರಾರ್ ಕಂಜಾರು ಗ್ರಾಮದ ಪೋರ್ಕೊಡಿ ಎಂಬಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದು, ರಾಹಿಲ್ ಮೊಯ್ದಿನ್ ಶರೀಫ್, ಮುಲ್ಲಾ ಅಬ್ದುಲ್ ಅಮನ್ ಮತ್ತು ಮುಹಮ್ಮದ್ ಶಾಹಿನ್ ಅವರು ಕೊಳಂಬೆ ಗ್ರಾಮದ ಕಾಲೇಜ್ ಬಳಿ ಹಾಗೂ ಕಂದಾವರ ಗ್ರಾಮದ ಅದ್ಯಪಾಡಿ ದ್ವಾರದ ಬಳಿ ಗಾಂಜಾ ಸೇವನೆ ಮಾಡುತ್ತಿದ್ದ ವೇಳೆ ಪೊಲೀಸರ ಬಲೆಗೆ ಬಿದ್ದಿದ್ದಾರೆ.ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಿದ್ದು, ಗಾಂಜಾ ಸೇವಿಸಿರುವುದು ದೃಢಪಟ್ಟಿದ್ದ ಹಿನ್ನೆಲೆಯಲ್ಲಿ ಎಲ್ಲರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ…
ಉಡುಪಿ: ಉಡುಪಿ ತಾಲೂಕು ಪುತ್ತೂರು ಗ್ರಾಮದ ಕೊಡಂಕೂರು ನಿವಾಸಿ ಅಕ್ಷತಾ (25) ಎಂಬ ಮಹಿಳೆಯು ತನ್ನ ಇಬ್ಬರು ಹೆಣ್ಣುಮಕ್ಕಳಾದ ವಿದ್ಯಾಶ್ರೀ (7) ಹಾಗೂ ಮಲ್ಲು (4)ರೊಂದಿಗೆ ಕಾಣೆಯಾಗಿದ್ದಾರೆ.ಅ.6 ರಂದು ಬೆಳಗ್ಗೆ 8 ಗಂಟೆಯ ಸುಮಾರಿಗೆ ಮಕ್ಕಳೊಂದಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. ಅಕ್ಷತಾ 5 ಅಡಿ ಎತ್ತರ, ಸಾಧಾರಣ ಶರೀರ, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ಹಿಂದಿ, ತೆಲುಗು ಹಾಗೂ ತುಳು ಭಾಷೆ ಮಾತನಾಡುತ್ತಾರೆ. ವಿದ್ಯಾಶ್ರೀ 3 ಅಡಿ 6 ಇಂಚು ಎತ್ತರ, ಸಪೂರ ಶರೀರ, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾಳೆ. ಮಲ್ಲು 3 ಅಡಿ ಎತ್ತರ, ಸಾಧಾರಣ ಶರೀರ, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾಳೆ. ಇವರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಮಂಗಳೂರು: ಜನನ ಮತ್ತು ಮರಣ ನೋಂದಣಿಯಲ್ಲಿ ಯಾವುದೇ ವಿಳಂಬ ಸಲ್ಲದು. ಜನಸಾಮಾನ್ಯರನ್ನು ಸತಾಯಿಸಲೂ ಬಾರದು. ಇ-ಜನ್ಮ ತಂತ್ರಾಂಶದಲ್ಲಿ ನೋಂದಣಿಯಾಗುವ ಮರಣಗಳಿಗೆ ಸಂಬಂಧಿಸಿ ಕಾರಣಗಳನ್ನು ಸರಿಯಾಗಿ ನಮೂದಿಸಬೇಕು. ಅಲ್ಲದೆ ಜನನ ಮತ್ತು ಮರಣ ನೋಂದಣಿಗೆ ಆಧಾರ್ ಕಡ್ಡಾಯ ವಲ್ಲ. ಬೇರೆ ದಾಖಲೆಗಳನ್ನು ಕೂಡ ಬಳಸಬಹುದಾಗಿದೆ. ಗ್ರಾಮ್ ಒನ್ ಕಚೇರಿಯಲ್ಲಿ ಕೂಡ ಸಾರ್ವಜನಿಕರು ಅರ್ಜಿ ಸಲ್ಲಿಸಬಹುದು ಎಂದು ಪ್ರಭಾರ ಜಿಲ್ಲಾಧಿಕಾರಿ ಡಾ.ಆನಂದ್ ಕೆ. ಹೇಳಿದ್ದಾರೆ. ದ.ಕ. ಜಿಲ್ಲಾಧಿಕಾರಿಯ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜನನ- ಮರಣ ನೋಂದಣಿಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಸೆಕ್ಷನ್ 18ರ ಪ್ರಕಾರ ಜಿಲ್ಲೆಯ ಎಲ್ಲಾ ನೋಂದಣಿ ಘಟಕವು ನಿಯಾಮಾನುಸಾರ ನೋಂದಣಿ ಚಟುವಟಿಕೆ ನಡೆಯುತ್ತಿರುವ ಬಗ್ಗೆ ಹಾಗೂ ಶೇ.100ರಷ್ಟು ಘಟನೆಗಳು ದಾಖಲಾತಿಯಾಗಿರುವ ಬಗ್ಗೆ ಪರಿಶೀಲನೆಯನ್ನು ಕಂದಾಯ ಇಲಾಖೆ, ನಗರ ಅಭಿವೃದ್ಧಿ, ಸಾಂಖ್ಯಿಕ ಇಲಾಖೆ ಅಧಿಕಾರಿಗಳು ನಡೆಸಬೇಕು. ಪರಿಶೀಲನಾ ವರದಿಯನ್ನು ಪ್ರತೀ ತೈಮಾಸಿಕಕ್ಕೆ ಕಳುಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಉಡುಪಿ: ಪಡುಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐದು ವರ್ಷಗಳ ಹಿಂದೆ ನಡೆದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಗ್ರಾಮ ಲೆಕ್ಕಾಧಿಕಾರಿಯೊಬ್ಬರಿಗೆ ಮೂರು ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯ ಗುರುವಾರ ಆದೇಶಿಸಿದೆ. 2018ರಲ್ಲಿ ಹೆಜಮಾಡಿ ಗ್ರಾಮ ಲೆಕ್ಕಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೇ ಈ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾದ ಆರೋಪಿ. 17 ವರ್ಷದ ಪ್ರಾಯದ ನೊಂದ ಬಾಲಕಿ ತನ್ನ ಚಿಕ್ಕಮ್ಮಳೊಂದಿಗೆ ತನ್ನ ಅಕ್ಕನ ಜಾಗದ ತಕರಾರಿಗೆ ಸಂಬಂಧಿಸಿದಂತೆ ದಾಖಲೆಗಳ ಬಗ್ಗೆ ವಿಚಾರಿಸಲು ಹೆಜಮಾಡಿ ಗ್ರಾ.ಪಂ.ಕಚೇರಿಗೆ ಹೋಗಿದ್ದು, ಈ ವೇಳೆ ಆರೋಪಿಯು ನೊಂದ ಬಾಲಕಿ ಮತ್ತು ಆಕೆಯ ಚಿಕ್ಕಮ್ಮನನ್ನು ವಾಪಾಸು ಕಳುಹಿಸಿ ಅವರನ್ನು ಹಿಂಬಾಲಿಸಿಕೊಂಡು ಬಂದು ಬಸ್ ನಿಲ್ದಾಣದ ಬಳಿ ನಿಮ್ಮ ಕೆಲಸ ಆಗಿದೆ ಎಂದು ಹೇಳಿ 5 ಸಾವಿರ ರೂ.ಪಡೆದನು. ಅನಂತರ ನೊಂದ ಬಾಲಕಿಯೊಂದಿಗೆ ಸಲುಗೆಯಿಂದ ಮಾತನಾಡಿ ಆಕೆಯ ಮೊಬೈಲ್ ಸಂಖ್ಯೆ ಪಡೆದುಕೊಂಡಿದ್ದನು…










