ಮಂಗಳೂರು: ನಾನಾ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಇಬ್ಬರು ಪ್ರಮುಖ ಆರೋಪಿಗಳ ಬಂಧನಕ್ಕೆ ಇಂಟರ್ಪೋಲ್ ಮೂಲಕ ಪೊಲೀಸ್ ಇಲಾಖೆ ರೆಡ್ಕಾರ್ನರ್ ನೋಟಿಸ್ ಜಾರಿಗೊಳಿಸಿದೆ. ಕೊಡಗು ಜಿಲ್ಲೆಯ ಕುಶಾಲನಗರದ ಸುಲೈಮಾನ್ ಯಾನೆ ಶಮೀರ್ (38) ಮತ್ತು ಶಂಶುದ್ದೀನ್ (36) ವಿದೇಶದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. 2017ರಲ್ಲಿ ಕುಶಾಲನಗರದ ಸುಲೈಮಾನ್ ಯಾನೆ ಶಮೀರ್ ನಗರದ ಲೇಡಿಹಿಲ್ ಬಳಿ ಉರ್ವ ಠಾಣೆಯಲ್ಲಿ ಆಗ ಎಎಸ್ಸೈ ಆಗಿದ್ದ ಐತಪ್ಪ ಮೇಲೆ ರಾಡ್ನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದ. 2013ರಲ್ಲಿ ದೇರಳಕಟ್ಟೆಯಲ್ಲಿ ಗ್ಯಾಂಗ್ರೇಪ್ ಪ್ರಕರಣದಲ್ಲಿ ಕೂಡ ಈತ ಆರೋಪಿಯಾಗಿದ್ದ. ಈತನ ವಿರುದ್ಧ 14 ಪ್ರಕರಣಗಳು ದಾಖಲಾಗಿವೆ. ಈತ ಸೌದಿ ಅರೇಬಿಯಾದಲ್ಲಿ ತಲೆಮರೆಸಿಕೊಂಡಿರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂಶುದ್ದೀನ್ ಯಾನೆ ಅಲ್ತಾಫ್ ಯಾನೆ ಅಲ್ತಾಫ್ ಇಮ್ರಾನ್ ಯಾನೆ ಇಮ್ರಾನ್ 2008ರಲ್ಲಿ ಮೂಲ್ಕಿಯ ಪಾವಂಜೆ ಬಳಿ ಪ್ರವೀಣ್ ಎಂಬವರನ್ನು ಅಪಹರಿಸಿ ಕಾರು ಮತ್ತು ಬೆಲೆ ಬಾಳುವ ಸೊತ್ತುಗಳನ್ನು ದೋಚಿ, ಕಳವಾರು ಬಳಿಯ ಕೋರೆಯೊಂದಕ್ಕೆ ಕರೆದುಕೊಂಡು ಹೋಗಿ…
Author: main-admin
ಗುರುಪುರ ಫಲ್ಗುಣಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಕಜೆ ಪಡ್ಡಾಯಿಬೆಟ್ಟು ನಿವಾಸಿ ಕೌಶಿಕ್ ಬೆಲ್ಚಡ (30) ಎಂಬವರ ಮೃತದೇಹ ಗುರುವಾರ ಮಧ್ಯಾಹ್ನ ಪತ್ತೆಯಾಗಿದೆ. ಬುಧವಾರ ಸಂಜೆ 6:30ಕ್ಕೆ ಗುರುಪುರದತ್ತ ಸ್ಕೂಟರ್ ನಲ್ಲಿ ಆಗಮಿಸಿದ್ದ ಕೌಶಿಕ್ ಫಲ್ಗುಣಿ ಸೇತುವೆ ಮೇಲೆ ಸ್ಕೂಟರ್ ನಿಲ್ಲಿಸಿ ನದಿಗೆ ಹಾರಿದ್ದರು ಎನ್ನಲಾಗಿದೆ. ಕತ್ತಲಾದ ಕಾರಣ ಬುಧವಾರ ಕಾರ್ಯಾಚರಣೆ ನಡೆಸಲು ಸಾಧ್ಯವಾಗಿರಲಿಲ್ಲ. ಇಂದು ಮಂಗಳೂರು ಅಗ್ನಿಶಾಮಕ ದಳದ ಸಿಬ್ಬಂದಿಯು ಕೌಶಿಕ್ಗಾಗಿ ಹುಡುಕಾಟ ಆರಂಭಿಸಿದ್ದರು. ಪಾಣೆಮಂಗಳೂರಿನ ಮುಳುಗು ತಜ್ಞರು ಕೂಡ ಆಗಮಿಸಿ ಸೇತುವೆ ಕಂಬಗಳ ಬಳಿ ಕಾರ್ಯಾಚರಣೆ ಮೃತದೇಹವನ್ನು ಪತ್ತೆಹಚ್ಚಿದ್ದಾರೆ. ಬಜ್ಪೆ ಪೊಲೀಸರು ಸ್ಕೂಟರ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದಾರೆ.
ಮಂಗಳೂರು: ಎಸ್.ಐ ಐತಪ್ಪ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಸಮೀರ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಲಾಗಿದೆ. ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ. ಆರೋಪಿ ಸಮೀರ್ ವಿರುದ್ಧ ಸಾಮೂಹಿಕ ಅತ್ಯಾಚಾರ ಸಹಿತ 14 ಪ್ರಕರಣಗಳು ದಾಖಲಾಗಿವೆ. ಈತನ ಸುಳಿವು ಪತ್ತೆಯಾದಲ್ಲಿ ಮಾಹಿತಿ ನೀಡುವಂತೆ ಕಮಿಷನರ್ ಮನವಿ ಮಾಡಿದ್ದಾರೆ. ಈ ಹಿಂದೆ ಆರೋಪಿ ಸಫ್ಘಾನ್ ಎಂಬಾತನ ಮೇಲೂ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಿ ಕಾನೂನು ಕ್ರಮ ಜರುಗಿಸಲಾಗಿತ್ತು ಎಂದು ಅಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಮಂಗಳೂರು: ನಗರದ ಮೀನುಗಾರಿಕಾ ದಕ್ಕೆಯ ಬಳಿಯ ನದಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ನಾಸಿರ್ ಯಾನೆ ದಕ್ಕೆ ನಾಸಿರ್ ಕೊಲೆಯಾದ ವ್ಯಕ್ತಿ. ಈತ ಹಲವಾರು ಕಳ್ಳತನ, ದರೋಡೆ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿಯಾಗಿದ್ದಾನೆ. ಈತನನ್ನು ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ನದಿಗೆ ಹಾಕಿರುವ ಶಂಕೆ ವ್ಯಕ್ತವಾಗಿದೆ. ಆತನ ಹಣೆ ಮತ್ತು ದೇಹದಲ್ಲಿ ಗಾಯದ ಗುರುತಿದೆ. ದಕ್ಕೆಯ ಸಮೀಪ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಸಮೀಪದ ನದಿಯ ಪಕ್ಕ ಶವ ಪತ್ತೆಯಾಗಿರುವುದಾಗಿದೆ. ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.
ಮಂಗಳೂರು: ನಗರದಲ್ಲಿ ಶೈಕ್ಷಣಿಕ ಹಂತದಲ್ಲೇ ಮಾದಕ ದ್ರವ್ಯ ಜಾಲ ವಿಸ್ತರಿಸುತ್ತಿರುವ ಆತಂಕಕಾರಿ ಬೆಳವಣಿಗೆಯೊಂದು ಬೆಳಕಿಗೆ ಬಂದಿದೆ. ಗಾಂಜಾ ಮಾರಾಟ ದಂಧೆಯಲ್ಲಿ ತೊಡಗಿದ್ದ ಐವರು ಕಾಲೇಜು ವಿದ್ಯಾರ್ಥಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿಯೊಬ್ಬನ ಬಳಿ ಸಣ್ಣ ಪ್ರಮಾಣದ ಗಾಂಜಾ ಪೊಟ್ಟಣ ಪತ್ತೆಯಾದ ಹಿನ್ನೆಲೆಯಲ್ಲಿ ಆತನ ಪೋಷಕರು ನೀಡಿದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ತನಿಖೆಯ ವೇಳೆ ಈ ವಿದ್ಯಾರ್ಥಿಯ ಹಿಂದೆ ಐವರು ವಿದ್ಯಾರ್ಥಿಗಳ ದೊಡ್ಡ ಪೆಡ್ಲಿಂಗ್ ಜಾಲವೇ ಇರುವುದು ದೃಢಪಟ್ಟಿದೆ. ಬಂಧಿತ ವಿದ್ಯಾರ್ಥಿಗಳು ನಗರದ ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದು, ಹಾಸ್ಟೆಲ್ಗಳ ಬದಲಾಗಿ ಪ್ರತ್ಯೇಕವಾಗಿ ಬಾಡಿಗೆ ಕೊಠಡಿಯಲ್ಲಿ ವಾಸವಿದ್ದರು. ಇದೇ ಕೊಠಡಿಯನ್ನು ಕೇಂದ್ರವಾಗಿಸಿಕೊಂಡು ಗಾಂಜಾವನ್ನು ಸಣ್ಣ ಪೊಟ್ಟಣಗಳನ್ನಾಗಿ ಮಾಡಿ ಗ್ರಾಹಕರಿಗೆ ಸರಬರಾಜು ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಆರು ವಿವಿಧ ಕಾಲೇಜುಗಳ ಸುಮಾರು 40 ವಿದ್ಯಾರ್ಥಿಗಳು ಹಾಗೂ ಇತರ 10 ಮಂದಿ ಇವರಿಂದ ಗಾಂಜಾ ಖರೀದಿಸುತ್ತಿದ್ದರು ಎಂದು ತನಿಖೆ ವೇಳೆ ತಿಳಿದು ಬಂದಿದೆ. ಮಕ್ಕಳ ವರ್ತನೆಯಲ್ಲಿ ಸಣ್ಣ ಬದಲಾವಣೆ ಕಂಡರೂ ಪೋಷಕರು…
ಮಂಗಳೂರಿನಿಂದ ಮೂಡುಬಿದ್ರೆ ತೆರಳುತ್ತಿದ್ದ ಕೆಕೆಬಿ ಟ್ರಾವೆಲ್ಸ್ ಹೆಸರಿನ ಎಕ್ಸೆಸ್ ಬಸ್ ಮತ್ತು ಕಂಟೇನರ್ ಲಾರಿ ಗುರುಪುರ ಹೆದ್ದಾರಿ ತಿರುವಿನಲ್ಲಿ ಮುಖಾಮುಖಿ ಡಿಕ್ಕಿಯಾಗಿದ್ದು ಚಾಲಕರಿಬ್ಬರು ತೀವ್ರ ಗಾಯಗೊಂಡಿದ್ದಾರೆ. ಹಲವು ಪ್ರಯಾಣಿಕರಿಗೂ ಗಾಯಗಳಾಗಿವೆ. ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಓವರ್ ಟೇಕ್ ಮಾಡಲು ಬಂದ ಬಸ್ಸಿಗೆ ಕಂಟೇನರ್ ಲಾರಿ ಡಿಕ್ಕಿಯಾಗಿದ್ದು ಮುಂಭಾಗ ನಜ್ಜುಗುಜ್ಜಾಗಿದೆ. ಅಲ್ಲದೆ, ಲಾರಿಯ ಚಾಲಕ ಎಡೆಯಲ್ಲಿ ಸಿಕ್ಕಿಕೊಂಡು ಸ್ಥಳೀಯರ ಹರಸಾಹಸದ ಬಳಿಕ ಹೊರ ತೆಗೆಯಲಾಯಿತು. ಇತರೇ ವಾಹನಗಳ ಚಾಲಕರು, ಪ್ರಯಾಣಿಕರು, ಸ್ಥಳೀಯರು ಸೇರಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಸ್ಸಿನಲ್ಲಿದ್ದ ಏಳು ಮಂದಿ ಪ್ರಯಾಣಿಕರಿಗೆ ಗಾಯವಾಗಿದೆ. ಬಸ್ ಚಾಲಕ ಮತ್ತು ಲಾರಿಯ ಚಾಲಕರಿಗೆ ಕಾಲು ಮತ್ತು ಕೈಗೆ ಹೆಚ್ಚು ಪೆಟ್ಟು ಬಿದ್ದಿದೆ. ಹುಬ್ಬಳ್ಳಿ ಮೂಲದ ಕಂಟೇನರ್ ಲಾರಿಯಲ್ಲಿ ಭಾರೀ ಸರಕು ತುಂಬಿಕೊಂಡಿದ್ದು ಬಸ್ಸಿಗೆ ಗುದ್ದಿ ನಿಂತುಬಿಟ್ಟಿದೆ. ಇದರಿಂದಾಗಿ ಎರಡೂ ವಾಹನಗಳ ಮುಂಭಾಗ ಒಂದಕ್ಕೊಂದು ಅಂಟಿಕೊಂಡು ಜಖಂ ಆಗಿತ್ತು. ಮಂಗಳೂರು- ಮೂಡುಬಿದ್ರೆ ನಡುವೆ ಚಲಿಸುವ ಖಾಸಗಿ ಬಸ್ಸುಗಳನ್ನು ಅತಿ ವೇಗದಿಂದ ಚಲಾಯಿಸುವುದು,…
ಮಂಗಳೂರು : ತೊಕ್ಕೊಟ್ಟಿನಲ್ಲಿ ರೌಡಿಶೀಟರ್ ಆರಿಫ್ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಸಿಸಿಬಿ ಪೊಲೀಸರು ಆರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆಂದು ಮಾಹಿತಿ ದೊರೆತಿದೆ. ಬಂಧಿತ ಆರೋಪಿಗಳು ಉಳ್ಳಾಲದ ರಫತ್ ಆಲಿ, ಮೂಡುಶೆಡ್ಡೆಯ ರಿಜ್ವಾನ್, ಫೈಸಲ್ ನಗರದ ಜುಟ್ಟು ಅಶ್ಫಕ್, ಕಲ್ಲಡ್ಕದ ಖಲೀಲ್, ಬಜಾಲ್ ನ ಶಾಕೀರ್ ಹಾಗೂ ಸುರತ್ಕಲ್ ಕಾಟಿಪಳ್ಳದ ಉಮರ್ ಫಾರೂಕ್ ಎಂದು ತಿಳಿದುಬಂದಿದೆ. ಆರೋಪಿಗಳನ್ನು ನಿಗೂಢ ಸ್ಥಳದಲ್ಲಿ ತೀವ್ರ ವಿಚಾರಣೆ ನಡೆಸಿದ್ದು ಒಟ್ಟು ಆರು ಮಂದಿ ಹಂತಕರು ಕೊಲೆಯಲ್ಲಿ ನೇರ ಪಾಲ್ಗೊಂಡ ಮಾಹಿತಿ ದೊರೆತಿದೆ. ಪೋಲಿಸರು ಕೃತ್ಯಕ್ಕೆ ಬಳಸಿದ್ದ ಇನೋವಾ ಕಾರನ್ನು ವಿಟ್ಲದ ಬುಡೋಳಿ ಎಂಬಲ್ಲಿ ವಶಕ್ಕೆ ಪಡೆದಿದ್ದು ಆರೋಪಿಗಳು ಮೈಸೂರು, ಬೆಂಗಳೂರು ಕಡೆಗೆ ಪರಾರಿಯಾಗಿದ್ದರೆಂದು ತನಿಖೆಯಲ್ಲಿ ತಿಳಿದುಬಂದಿದೆ.
ಮಂಗಳೂರು: ನಾನಾ ಕಾರಣಗಳಿಗಾಗಿ ಸಾರ್ವಜನಿಕರು ಕಳೆದುಕೊಂಡ 150 ಮೊಬೈಲ್ಗಳನ್ನು ಪೊಲೀಸರು ವಿಶೇಷ ಕಾರ್ಯಾಚರಣೆಯ ಮೂಲಕ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ಕಳೆದ ಮಾರ್ಚ್ನಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು CEIR Portal ಮೂಲಕ ಪತ್ತೆ ಹಚ್ಚಿದರು. ಸಾರ್ವಜನಿಕರು ಮೊಬೈಲ್ ಕಳೆದುಕೊಂಡಿರುವ ಬಗ್ಗೆ CEIR (Central Equipment Identity Register, https://ceir.sancharsaathi.gov.in ) Portal ನಲ್ಲಿ ದಾಖಲಿಸಿದ್ದ ದೂರುಗಳನ್ನು ಪರಿಶೀಲಿಸಿ ಜಿಲ್ಲಾದ್ಯಂತ ಮಾರ್ಚ್ ತಿಂಗಳಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದರು. ಹಾಗೇ 150 ಮೊಬೈಲ್ಗಳನ್ನು ಪತ್ತೆ ಹಚ್ಚಿ ಆಯಾ ಠಾಣಾ ವ್ಯಾಪ್ತಿಯಲ್ಲೇ ವಾರಸುದಾರರಿಗೆ ಹಸ್ತಾಂತರಿಸಲಾಯಿತು ಎಂದು ಪೊಲೀಸ್ ಇಲಾಖೆಯು ಪ್ರಕಟನೆಯಲ್ಲಿ ತಿಳಿಸಿದೆ.
ಮಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ಮಂಗಳೂರಿನ ಪ್ರಾದೇಶಿಕ ಉಪ ಡ್ರಗ್ ಕಂಟ್ರೋಲರ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಹಾಯಕ ಡ್ರಗ್ ಕಂಟ್ರೋಲರ್ ಬಾಬು ಬಿ.ಎನ್ ಅವರ ಮನೆ ಹಾಗೂ ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿದ್ದು ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಪತ್ತೆಯಾಗಿದೆ. ಪೊಲೀಸ್ ವರಿಷ್ಠಾಧಿಕಾರಿ ಬಿ.ಪಿ. ದಿನೇಶ್ ಕುಮಾರ್ ಅವರ ಮೇಲ್ವಿಚಾರಣೆಯಲ್ಲಿ, ಆರು ಲೋಕಾಯುಕ್ತ ತಂಡಗಳು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣ, ಬೆಂಗಳೂರು ನಗರ ಮತ್ತು ಮಂಗಳೂರಿನಲ್ಲಿರುವ ಆರೋಪಿಗಳಿಗೆ ಸಂಬಂಧಿಸಿದ ಆಸ್ತಿಗಳ ಮೇಲೆ ದಾಳಿ ನಡೆಸಿವೆ. ದಾಳಿಯಲ್ಲಿ ಬಾಬು ಬಿ.ಎನ್ ಗೆ ಸಂಬಂಧಿಸಿದ ವಸತಿ ಮನೆಗಳು, ವಾಣಿಜ್ಯ ಸಂಸ್ಥೆಗಳು, ಫ್ಲಾಟ್ಗಳು ಮತ್ತು ಕಚೇರಿಗಳು ಸೇರಿವೆ. ಶೋಧದ ಸಮಯದಲ್ಲಿ ಆದಾಯಕ್ಕಿಂತ ಹೆಚ್ಚುವರಿಯಾಗಿ ಸುಮಾರು 3.37 ಕೋಟಿ ರೂ. ಮೌಲ್ಯದ ಚರಾಸ್ತಿ ಮತ್ತು ಸ್ಥಿರ ಆಸ್ತಿಗಳನ್ನು ಪತ್ತೆಹಚ್ಚಿದ್ದಾರೆ ಎಂದು ಹೇಳಲಾಗುತ್ತದೆ. ಬೆಂಗಳೂರಿನ ನಿವಾಸದಲ್ಲಿ, ಚಿನ್ನ ಮತ್ತು ಬೆಳ್ಳಿ ಆಭರಣಗಳ ಜೊತೆಗೆ 23.64 ಲಕ್ಷ ರೂ. ನಗದು ಸಹ ಪತ್ತೆಯಾಗಿದೆ. ಭ್ರಷ್ಟಾಚಾರ…
ಉಡುಪಿ : ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟ ಪ್ರಕರಣಗಳಲ್ಲಿ ನಿರಂತರವಾಗಿ ಭಾಗಿಯಾಗಿ ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ಉಂಟುಮಾಡುತ್ತಿದ್ದ ಆರೋಪಿಯ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಕಾರ್ಕಳ ನಗರ ಠಾಣಾ ವ್ಯಾಪ್ತಿಯ ಮಹಮ್ಮದ್ ಫೈಜಲ್ (22), ತಂದೆ: ದಿ. ಸುಲೇಮಾನ್, ವಾಸ: ಸಾದತ್ ಕಾಟೇಜ್, ಬಂಗ್ಲೆಗುಡ್ಡೆ, ಕಸಬ ಗ್ರಾಮ, ಕುಕ್ಕುಂದೂರು ಪೋಸ್ಟ್, ಕಾರ್ಕಳ ತಾಲೂಕು, ಉಡುಪಿ ಜಿಲ್ಲೆ ಇವರ ವಿರುದ್ಧ ಪಿ.ಐ.ಟಿ. ಎನ್.ಡಿ.ಪಿ.ಎಸ್. ಕಾಯ್ದೆಯಡಿ ಬಂಧನ ಕ್ರಮ ಜರುಗಿಸಲು ಪ್ರಸ್ತಾವನೆ ಸಲ್ಲಿಸಲಾಗಿತ್ತು. ಪೊಲೀಸ್ ನಿರೀಕ್ಷಕರು, ಕಾರ್ಕಳ ನಗರ ಠಾಣೆಯಿಂದ ಸಲ್ಲಿಸಿದ ವರದಿಯ ಆಧಾರದಲ್ಲಿ, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಈ ಕುರಿತು ಕ್ರಮ ಕೈಗೊಂಡು, ಪೊಲೀಸ್ ಮಹಾನಿರೀಕ್ಷಕರು, ಪಶ್ಚಿಮ ವಲಯ, ಮಂಗಳೂರು ಇವರಿಗೆ ಬಂಧನ ಆದೇಶಕ್ಕಾಗಿ ಶಿಫಾರಸು ಮಾಡಿದ್ದರು. ಅದರ ಮೇರೆಗೆ, ಮಾನ್ಯ ಪೊಲೀಸ್ ಮಹಾನಿರೀಕ್ಷಕರು ಪ್ರಕರಣಗಳನ್ನು ಪರಿಶೀಲಿಸಿ, ದಿನಾಂಕ 07/04/2026ರಂದು ಆರೋಪಿಯ ವಿರುದ್ಧ ಬಂಧನ ಆದೇಶ ಹೊರಡಿಸಿದ್ದಾರೆ. ಕಾರ್ಕಳ ನಗರ ಠಾಣೆಯ ಪೊಲೀಸ್ ನಿರೀಕ್ಷಕರು ದಿನಾಂಕ 07/04/2026ರಂದು ಆರೋಪಿಗೆ ಬಂಧನ…










