Author: main-admin

ಬೆಂಗಳೂರು: ಜನರ ಆರೋಗ್ಯ ಮೇಲೆ ಪರಿಣಾಮ ಬೀರುವಂತ ಹುಕ್ಕಾಬಾರ್ ಗಳನ್ನು ರಾಜ್ಯಾಧ್ಯಂತ ನಿಷೇಧಿಸೋ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಈ ನಿಷೇಧ ಆದೇಶವನ್ನು ಶೀಘ್ರವೇ ಜಾರಿಗೊಳಿಸೋದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಇಂದು ಈ ಕುರಿತಂತೆ ವಿಧಾನಸೌಧದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಕ್ರೀಡಾ ಮತ್ತು ಯುವಜನ ಸಬಲೀಕರಣ ಸಚಿವ ಬಿ.ನಾಗೇಂದ್ರ ನೇತೃತ್ವದಲ್ಲಿ ಮಹತ್ವದ ಸಭೆಯನ್ನು ನಡೆಸಲಾಯಿತು. ಇಂತಹ ಸಭೆಯಲ್ಲಿ ರಾಜ್ಯಾಧ್ಯಂತ ಹುಕ್ಕಾಬಾರ್ ನಿಷೇಧಿಸೋ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಈ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಸಚಿವ ದಿನೇಶ್ ಗುಂಡೂರಾವ್ ಅವರು, ರಾಜ್ಯದ ಯುವಜನತೆ ಹಾಗೂ ಮಕ್ಕಳ ಮೇಲೆ ದಿನೇ ದಿನೇ ಹುಕ್ಕಾಬಾರ್ ಗಳು ವ್ಯಾಪಕವಾಗಿ ಪರಿಣಾಮ ಬೀರುತ್ತಿದ್ದಾವೆ. ಇಂತಹ ಆರೋಗ್ಯಕ್ಕೆ ಮಾರಕವಾಗುವಂತ ಹುಕ್ಕಾಬಾರ್ ಗಳನ್ನು ರಾಜ್ಯದಲ್ಲಿ ಶಾಶ್ವತವಾಗಿ ಕಡಿವಾಣ ಹಾಕೋ ನಿಟ್ಟಿನಲ್ಲಿ ನಿಷೇಧಿಸೋ ನಿರ್ಧಾರ ನಮ್ಮ ಮುಂದಿರುವ ಏಕೈಕ ಮಾರ್ಗವಾಗಿದೆ. ಈ ನಿಟ್ಟಿನಲ್ಲಿ ಕ್ರಮ ವಹಿಸೋದಕ್ಕೆ ಅಧಿಕಾರಿಗಳಿಂದ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ಮಾಡಲಾಯಿತು ಎಂದು ಅವರು ಹೇಳಿದರು. ರಾಜ್ಯದಲ್ಲಿ…

Read More

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಮುಂದಿನ ವರ್ಷದ ಯುಜಿಸಿ ಎನ್ ಇ ಟಿ ಮತ್ತು ಸಿಯುಇಟಿ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಿದೆ. ಈ ಬಗ್ಗೆ ವಿಶ್ವವಿದ್ಯಾಲಯ ಧನಸಹಾಯ ಆಯೋಗದ ಅಧ್ಯಕ್ಷ ಎಂ.ಜಗದೀಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಎನ್ಟಿಎ ನಡೆಸಲಿರುವ ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. . 2024-25ನೇ ಸಾಲಿನ ಸಿಯುಇಟಿ ಪಿಜಿ ಪರೀಕ್ಷೆ ಮಾರ್ಚ್ 11 ರಿಂದ 28 ರವರೆಗೆ ನಡೆಯಲಿದೆ ಎಂದಿದ್ದಾರೆ. 2024-25ನೇ ಶೈಕ್ಷಣಿಕ ವರ್ಷದ ಸಿಯುಇಟಿ -ಯುಜಿ ಪರೀಕ್ಷೆಯು ಮೇ 15ರಿಂದ 31ರವರೆಗೆ ನಡೆಯಲಿದೆ. ಕೊನೆಯ ಪರೀಕ್ಷೆ ನಡೆದ ನಂತರದ ಮೂರು ವಾರಗಳ ಒಳಗಾಗಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಯುಜಿಸಿ ಮುಖ್ಯಸ್ಥ ಎಂ.ಜಗದೀಶ್ ಕುಮಾರ್ ತಿಳಿಸಿದ್ದಾರೆ. ಸಿಯುಇಟಿ-ಪಿಜಿ ಪರೀಕ್ಷೆಯು ಮಾರ್ಚ್ 11ರಿಂದ 28ರವರೆಗೆ ನಡೆಯಲಿದೆ. ರಾಷ್ಟ್ರೀಯ ಅರ್ಹತಾ ಪರೀಕ್ಷೆಯು ಜೂನ್ 10ರಿಂದ 21ರವರೆಗೆ ನಡೆಯಲಿದೆ ಎಂದು ತಿಳಿಸಿದರು.ಜೂನ್ ತಿಂಗಳಲ್ಲಿ ಈ ಪರೀಕ್ಷೆ 10 ರಿಂದ 21 ರವರೆಗೆ ನಡೆಯಲಿದೆ. ಇದರ ವಿವರಗಳನ್ನು ಅಧಿಕೃತ ವೆಬ್ಸೈಟ್ ugcnet.nta.nic.in ನಲ್ಲಿ ನೋಡಬಹುದು. ಕಾಲೇಜುಗಳು…

Read More

ಕಾಪು: ಉಡುಪಿಯ ಕಟಪಾಡಿ ಸಮೀಪದ ಮಣಿಪುರದಲ್ಲಿ ಪತ್ನಿಯೊಬ್ಬಳು ತನ್ನ ಪತಿಯ ಮೈಮೇಲೆ ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎರಚಿದ್ದು ಪತಿ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾದ ಘಟನೆ ಸಂಭವಿಸಿದೆ. ಪತಿ ಮೊಹಮ್ಮದ್ ಅಶ್ರಫ್‌‌ಗೆ ಪತ್ನಿ ಅಫ್ರೀನ್, ಅತ್ತೆ, ಮಾವ ಹಾಗೂ ಮತ್ತಿತರರು ಸೇರಿ ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಇನ್ನು ಘಟನೆಯಲ್ಲಿ ಮುಖ, ದೇಹ, ಎಡಗೈ, ಎದೆ, ಬೆನ್ನು ಬಲಕೈ ಸುಟ್ಟು ಹೋಗಿ ಗಂಭೀರವಾಗಿ ಗಾಯಗೊಂಡಿರುವ ಆಸಿಫ್ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸಿಫ್ ಬೇರೆ ಹುಡುಗಿಯೊಂದಿಗೆ ಸಂಬಂಧ ಹೊಂದಿರುವುದಾಗಿ ಅನುಮಾನ ಹೊಂದಿದ್ದ ಅಫ್ರೀನ್, ಈ ಬಗ್ಗೆ ಆಗಾಗ್ಗೆ ಜಗಳವಾಡುತ್ತಿದ್ದಳೆನ್ನಲಾಗಿದೆ. ಸೆ.17ರಂದು ಸಂಜೆ ಆಸಿಫ್ ಬಾತ್ ರೂಮಿನಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಅಫ್ರೀನ್ ಹೊರಗಿನಿಂದ ಬಾಗಿಲು ಬಡಿದಿದ್ದು, ಆಸಿಫ್ ಬಾಗಿಲು ತೆರೆದಾಗ ಮೆಣಸಿನ ಹುಡಿ ಮಿಶ್ರಿತ ಬಿಸಿ ನೀರನ್ನು ಮೈ ಮೇಲೆ ಎರಚಿದ್ದಾಗಿ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಚೈತ್ರಾ ಕುಂದಾಪುರ ಗ್ಯಾಂಗ್‌ ನಡೆಸಿದ ಐದು ಕೋಟಿ ರೂ. ವಂಚನೆ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ವಿಜಯ ನಗರ ಜಿಲ್ಲೆ ಹೂವಿನ ಹಡಗಲಿ ತಾಲೂಕಿನ ಹಿರೇಹಡಗಲಿಯ ಹಾಲಸ್ವಾಮಿ ಮಠದ ಶ್ರೀ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಕೊನೆಗೂ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಪ್ರಕರಣದ ದಾಖಲಾದ ದಿನದಿಂದಲೇ ನಾಪತ್ತೆಯಾಗಿದ್ದ ಸ್ವಾಮೀಜಿ ಈಗ ಸೆರೆಸಿಕ್ಕಿದ್ದು ಒಡಿಶಾ ರಾಜ್ಯದ ಕಟಕ್‌ನಲ್ಲಿ! ಅಂದರೆ ಊರು ಬಿಟ್ಟು ಎಲ್ಲಾದರೂ ಹೋಗಿ ತಪ್ಪಿಸಿಕೊಳ್ಳುತ್ತೇನೆ ಎಂದು ಹೊರಟಿದ್ದ ಅವರು ಈಗ ಸಿಸಿಬಿಯ ಕೈಗೆ ಸಿಕ್ಕಿಬಿದ್ದಿದ್ದಾರೆ. ಉದ್ಯಮಿ ಗೋವಿಂದ ಪೂಜಾರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವ ಚೈತ್ರಾ ಕುಂದಾಪುರ ಗ್ಯಾಂಗ್‌ನ ವಂಚನಾ ಜಾಲದಲ್ಲಿ ಪ್ರಮುಖ ಕೊಂಡಿ ಈ ಸ್ವಾಮೀಜಿ. ಗೋವಿಂದ ಪೂಜಾರಿಯಿಂದ ನೇರವಾಗಿ 1.5 ಕೋಟಿ ರೂ. ಸ್ವೀಕರಿಸಿದ್ದ ಸ್ವಾಮೀಜಿ ಪ್ರಕರಣ ಕುತ್ತಿಗೆಗೆ ಬರುತ್ತದೆ ಎಂದು ಹೇಳುವಾಗ ಕಂತು ಕಂತಿನಲ್ಲಿ ನಿಮ್ಮ ಹಣ ವಾಪಸ್‌ ಮಾಡುತ್ತೇನೆ ಎಂದು ಅಂಗಲಾಚಿದ್ದರು. ಆದರೆ, ಗೋವಿಂದ ಪೂಜಾರಿ ಕೇಸು ದಾಖಲಿಸಿಯೇಬಿಟ್ಟಾಗ ತಲೆಮರೆಸಿಕೊಂಡರು. ಗೋವಿಂದ ಪೂಜಾರಿಯನ್ನು ಮಠಕ್ಕೆ ಕರೆಸಿಕೊಂಡು ಮಾತನಾಡಿ,…

Read More

ನವದೆಹಲಿ: ರಾಜಕೀಯದಲ್ಲಿ ಮಹಿಳೆಯರ ಪ್ರಾತಿನಿಧ್ಯವನ್ನು ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಐತಿಹಾಸಿಕ ನಿರ್ಧಾರ ಕೈಗೊಂಡಿದ್ದಾರೆ. ಸೆಪ್ಟೆಂಬರ್ 19 ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ರಾತ್ರಿ ನಡೆದ ಸಂಪುಟ ಸಭೆಯಲ್ಲಿ ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಶೇ.33ರಷ್ಟು ಮೀಸಲಾತಿ ಕಲ್ಪಿಸಲು ಮಹಿಳಾ ಮೀಸಲಾತಿ ಮಸೂದೆ ಮಂಡನೆಗೆ ಅನುಮೋದನೆ ನೀಡಲಾಗಿದೆ. ಈ ವಿಷಯವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳು ಮತ್ತು ಜಲಶಕ್ತಿ ರಾಜ್ಯ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್, ಮಹಿಳಾ ಮೀಸಲಾತಿಯ ಬೇಡಿಕೆಯನ್ನ ಈಡೇರಿಸುವ ನೈತಿಕ ಧೈರ್ಯ ಮೋದಿ ಸರ್ಕಾರಕ್ಕೆ ಮಾತ್ರ ಇತ್ತು, ಇದು ಸಂಪುಟದ ಅನುಮೋದನೆಯಿಂದ ಸಾಬೀತಾಗಿದೆ. ನರೇಂದ್ರ ಮೋದಿ ಜೀ ಮತ್ತು ಮೋದಿ ಸರ್ಕಾರಕ್ಕೆ ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ.

Read More

ಕಾಸರಗೋಡು: ರಸ್ತೆಯ ಹೊಂಡದಲ್ಲಿ ಸಿಲುಕಿದ ಸ್ಕೂಟರ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಎಂಬಿಬಿಎಸ್ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕಣ್ಣೂರು ಚೇಂಬರ್ ಆಫ್ ಕಾಮರ್ಸ್ ನ ಮಾಜಿ ಅಧ್ಯಕ್ಷ, ಕಣ್ಣೂರು ಸೈಂಟ್ ಮೈಕಲ್ ಶಾಲಾ ಸಮೀಪದ ಮಹೇಶ್ಚಂದ್ರ ಬಾಳಿಗಾ ರವರ ಪುತ್ರಿ ಶಿವಾನಿ ಬಾಳಿಗಾ (20) ಮೃತ ಪಟ್ಟವರು.ರವಿವಾರ ರಾತ್ರಿ ಏಳು ಗಂಟೆ ಸುಮಾರಿಗೆ ಕಾಸರಗೋಡು ಚಂದ್ರಗಿರಿ ರಸ್ತೆಯ ಪಿಲಿಕುಂಜೆ ಎಂಬಲ್ಲಿ ಅಪಘಾತ ನಡೆದಿತ್ತು. ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ ರಸ್ತೆಯ ಹೊಂಡಕ್ಕೆ ಬಿದ್ದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಶಿವಾನಿ ಗಂಭೀರ ಗಾಯಾಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಸಂಜೆ ಮೃತ ಪಟ್ಟಿದ್ದಾರೆ.ಈಕೆ ಮಣಿಪಾಲ ವಿಶ್ವ ವಿದ್ಯಾನಿಲಯದ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿದ್ದಳು. ಮೃತರು ತಂದೆ ತಾಯಿಯನ್ನು ಅಗಲಿದ್ದಾರೆ. ಇನ್ನು ಇವರ ಸಹೋದರ ಬೆಂಗಳೂರಿನಲ್ಲಿ ಇಂಜಿನಿಯರ್ ಆಗಿದ್ದಾರೆ.ಅಪಘಾತದ ಕುರಿತಂತೆ ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸುತ್ತಿದ್ದಾರೆ.

Read More

ಸುಳ್ಯ : ಸುಳ್ಯ ಜಯನಗರದ ಮಹಿಳೆಗೆ ವಿದೇಶದಲ್ಲಿರುವ ಪತಿ ವಾಟ್ಸಪ್‌ ಸಂದೇಶದ ಮೂಲಕ ತ್ರಿವಳಿ ತಲಾಕ್‌ ನೀಡಿರುವ ಘಟನೆ ನಡೆದಿದೆ.ಈ ಬಗ್ಗೆ ಮಹಿಳೆ ಸುಳ್ಯ ಪೊಲೀಸ್‌ ಠಾಣೆಗೆ ಪತಿಯ ವಿರುದ್ಧ ದೂರು ನೀಡಿದ್ದಾರೆ. ಕೇರಳ ತ್ರಿಶೂರ್‌ ಮೂಲದ ಅಬ್ದುಲ್‌ ರಾಶಿದ್‌ ತಲಾಕ್‌ ನೀಡಿದ ಪತಿ. ಏಳು ವರ್ಷಗಳ ಹಿಂದೆ ಸುಳ್ಯ ಜಯನಗರದ ಯುವತಿಯನ್ನು ವಿವಾಹವಾಗಿದ್ದರು.ಈ ದಂಪತಿಗೆ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಎರಡು ವರ್ಷಗಳ ಹಿಂದೆ ರಾಶಿದ್‌ ಪತ್ನಿಯನ್ನು ವಿದೇಶಕ್ಕೆ ಕರೆಸಿಕೊಂಡಿದ್ದರು. ಬಳಿಕ ಎರಡನೇ ಮಗುವಿನ ಹೆರಿಗೆಗಾಗಿ ಪತ್ನಿಯನ್ನು ಸುಳ್ಯದ ಪತ್ನಿ ಮನೆಯಲ್ಲಿ ಬಿಟ್ಟು ವಿದೇಶಕ್ಕೆ ಉದ್ಯೋಗಕ್ಕೆ ತೆರಳಿದ್ದರು.ಕಳೆದ ಆರು ತಿಂಗಳಿನಿಂದ ಸಂಸಾರದಲ್ಲಿ ಮನಸ್ತಾಪ ಉಂಟಾಗಿತ್ತು. ಸಂಬಂಧಿಕರು, ಹಿರಿಯರು ಇದರ ಬಗ್ಗೆ ಮಾತನಾಡಿ ಸರಿಪಡಿಸಲು ಪ್ರಯತ್ನಿಸಿದ್ದರು. ಆದರೆ ಇದು ಯಾವುದನ್ನು ಕೇಳದೆ ಏಕಾಏಕಿ ರಾಶಿದ್ ಪತ್ನಿಯ ಮೊಬೈಲ್‌ಗೆ ಮೂರು ತಲಾಕ್‌ನ ವಾಟ್ಸಾಪ್‌ ಸಂದೇಶ ಕಳುಹಿಸಿದ್ದಾರೆ. ಮಹಿಳೆ ಸುಳ್ಯ ಪೊಲೀಸರಿಗೆ ತನಗೆ ನ್ಯಾಯ ಕೊಡಿಸುವಂತೆ ದೂರು ನೀಡಿದ್ದಾರೆ. ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬಂಟ್ವಾಳ: ಔಷಧಕ್ಕೆ ಬಂದ ವ್ಯಕ್ತಿ ಕುಸಿದು ಬಿದ್ದು ಮೃತ ಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಸರ್ಕಾರಿ ಆಸ್ಪತ್ತೆಯಲ್ಲಿ ನಡೆದಿದೆ. ಬಿಜೆಪಿ ಸಕ್ರೀಯ ಯುವ ಕಾರ್ಯಕರ್ತ ಪ್ರಕಾಶ್ ಬೆಳ್ಳೂರು (43) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಅಮ್ಟಾಡಿ ಮಹಾಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿಯಾಗಿದ್ದ ಪ್ರಕಾಶ್ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು ಎನ್ನಲಾಗಿದೆ.ಔಷಧಿಗೆಂದು ಅವರು ಇಂದು‌ ಬೆಳಿಗ್ಗೆ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಬಂದಿದ್ದರು ಎಂದು ಹೇಳಲಾಗಿದೆ. ಈ ವೇಳೆ ವೈದ್ಯರು ಪರೀಕ್ಷೆ ಮಾಡುವ ಮೊದಲೇ ಆಸ್ಪತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಜ್ವರದಿಂದ ಬಳಲುತ್ತಿದ್ದ ಪ್ರಕಾಶ್ ಅವರು ಯಾವ ಕಾರಣದಿಂದ ಸಾವನ್ನಪ್ಪಿದ್ದಾರೆ ಎಂಬುದರ ಬಗ್ಗೆ ಸ್ಪಷ್ಟವಾದ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಬಿಜೆಪಿ ಕಾರ್ಯಕರ್ತ ಪ್ರಕಾಶ್ ಬೆಳ್ಳೂರು ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಶಾಸಕ ರಾಜೇಶ್ ನಾಯ್ಕ್ ಸಹಿತ ಅನೇಕ ಬಿಜೆಪಿ ಪ್ರಮುಖರು ಬಂಟ್ವಾಳ ಆಸ್ಪತ್ರೆಗೆ ಧಾವಿಸಿ ಬಂದಿದ್ದಾರೆ. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು , ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ,…

Read More

ಸುಳ್ಯ: ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಕೊಡಗು ಸೋಮವಾರಪೇಟೆಯ ಬಸವನಹಳ್ಳಿಯ ಸುಬ್ರಮಣಿ (26) ಬಂಧಿತ ಆರೋಪಿ.ಸೆ. 16ರಂದು ನಾಪತ್ತೆಯಾಗಿದ್ದ ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಸುಳ್ಯ ಪೊಲೀಸ್ ಉಪ ನಿರೀಕ್ಷಕರು ಮತ್ತು ಸಿಬ್ಬಂದಿ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕೆಲವೇ ಗಂಟೆಗಳಲ್ಲಿ ಸುಳ್ಯ ತಾಲೂಕು ಆಲಟ್ಟಿ ಗ್ರಾಮದ ಸರಳಿಕುಂಜ ಎಂಬಲ್ಲಿ ಆರೋಪಿಯನ್ನು ಪತ್ತೆ ಮಾಡಿದ್ದಾರೆ.

Read More

ಮಂಗಳೂರು:ಮಂಗಳೂರು ನಗರ ದಕ್ಷಿಣದ ಬಿಜೆಪಿ ಶಾಸಕ ಡಿ ವೇದವ್ಯಾಸ ಕಾಮತ್ ಅವರು ಕರ್ನಾಟಕದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಭದ್ರತಾ ಕ್ರಮಗಳನ್ನು ಬಲಪಡಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. “ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇತ್ತೀಚೆಗೆ ಅರಾಫತ್ ಅಲಿ ಎಂಬ ವ್ಯಕ್ತಿಯನ್ನು ಬಂಧಿಸುವುದರೊಂದಿಗೆ, 2022 ರ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಮೊಹಮ್ಮದ್ ಶಾರಿಕ್ ಇಲ್ಲಿನ ಕದ್ರಿ ಶ್ರೀ ಮಂಜುನಾಥ ದೇವಸ್ಥಾನವನ್ನು ಗುರಿಯಾಗಿಸಿಕೊಂಡು ಐಇಡಿ ಸ್ಫೋಟಿಸಿದ್ದಾನೆ ಎಂಬುದು ಬಹಿರಂಗವಾಗಿದೆ “:ಎಂದು ಕಾಮತ್ ಭಾನುವಾರ ಇಲ್ಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕುಕ್ಕರ್ ಬಾಂಬ್ ಸ್ಫೋಟಿಸುವ ಯೋಜನೆಯ ಹಿಂದಿನ ಮಾಸ್ಟರ್ ಮೈಂಡ್ ಅರಾಫತ್ ಅಲಿ ಎಂದು ಎನ್‌ಐಎ ವಿಚಾರಣೆಯಿಂದ ತಿಳಿದುಬಂದಿದೆ. 2020 ರಲ್ಲಿ ಮಂಗಳೂರಿನಲ್ಲಿ ನಡೆದ ಎರಡು ಗೀಚುಬರಹ ಘಟನೆಗಳಿಗೂ ಸಂಸ್ಥೆ ಆತನನ್ನು ಸಂಪರ್ಕಿಸಿದೆ ಎಂದು ಕಾಮತ್ ಹೇಳಿದ್ದಾರೆ. ” ಕಾಂಗ್ರೆಸ್ ನಾಯಕರು ಮತಬ್ಯಾಂಕ್ ರಾಜಕಾರಣ ಮಾಡುವ ಬದಲು ಸಮಸ್ಯೆಯ ಗಂಭೀರತೆಯನ್ನು ಅರ್ಥಮಾಡಿಕೊಳ್ಳಬೇಕು ” ಎಂದರು.

Read More