Author: main-admin

ವಿಟ್ಲ: ಇಲ್ಲಿನ ಕುದ್ದುಪದವು ಎಂಬಲ್ಲಿನ ನಿವಾಸುಗಳಾದ ಸಹೋದರರಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಂದು ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೈರ ಮೂಲದ ಕುದ್ದುಪದವು ನಿವಾಸಿಗಳಾದ ಪವನ್ ಮತ್ತು ಪೃಥ್ವಿರಾಜ್ ವಿಷ ಸೇವಿಸಿ ಆತ್ಮಹತ್ಯೆಗೆತ್ನಿಸಿದ ಸಹೋದರರು. ವಿಷ ಸೇವನೆಯಿಂದ ತೀವ್ರ ಅಸ್ವಸ್ಥರಾದ ಇವರಿಬ್ಬರನ್ನು ವಿಟ್ಲ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಎರಡು ಪ್ರತ್ಯೇಕ ವಾಹನಗಳಲ್ಲಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ . ಇದರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಇವರ ತಂದೆ ಮೃತಪಟ್ಟಿದ್ದು, ತಾಯಿ ಮೈರ ಎಂಬಲ್ಲಿದ್ದಾರೆ. ಸಹೋದರರು ಅಜ್ಜಿ ಮನೆಯಲ್ಲಿ ವಾಸವಾಗಿದ್ದಾರೆ.

Read More

ಮಂಗಳೂರು : ಕೇರಳದಲ್ಲಿ ಇಬ್ಬರನ್ನು ಬಲಿ ಪಡೆದಿರುವ ನಿಫಾ ವೈರಸ್ ಬಗ್ಗೆ ದ.ಕ.ಜಿಲ್ಲೆಯ ಜನತೆಗೆ ಆತಂಕ ಬೇಡ. ಆದರೆ ಜಾಗ್ರತೆಯಿರಲಿ. ಜ್ವರ ಕಂಡು ಬಂದಲ್ಲಿ ನಿರ್ಲಕ್ಷ್ಯ ಬೇಡ. ತಕ್ಷಣ ವೈದ್ಯರನ್ನು ಕಾಣುವಂತೆ ದ.ಕ.ಜಿಲ್ಲಾ ಆರೋಗ್ಯಾಧಿಕಾರಿ ಡಾ‌.ಸುದರ್ಶನ್ ಸಲಹೆ ನೀಡಿದರು. ದ.ಕ.ಜಿಲ್ಲಾ ಆರೋಗ್ಯಾಧಿಕಾರಿಯವರ ಕಚೇರಿಯಲ್ಲಿ ಮಾತನಾಡಿದ ಅವರು, ನಿಫಾ ವೈರಸ್ ಸೋಂಕು ದ.ಕ.ಜಿಲ್ಲೆಗೆ ಹರಡಿಲ್ಲ. ಆದರೆ ಮುನ್ನೆಚ್ಚರಿಕಾ ಹಿನ್ನೆಲೆಯಲ್ಲಿ ಈಗಾಗಲೇ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವಿಶೇಷ ಜ್ವರ ಸಮೀಕ್ಷೆ ನಡೆಸಲಾಗುತ್ತದೆ. ಎಲ್ಲಾ ಆಸ್ಪತ್ರೆಗಳಲ್ಲಿ ಔಷಧಿ ದಾಸ್ತಾನು ಇರಿಸಲು ಸೂಚನೆ ನೀಡಲಾಗಿದೆ. ತಾಲೂಕು, ಆಸ್ಪತ್ರೆಗಳಲ್ಲಿ ಐಸೋಲೇಷನ್ ವ್ಯವಸ್ಥೆ ಮಾಡಲಾಗಿದೆ. ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಐಸಿಯು ವ್ಯವಸ್ಥೆಯನ್ನು ಮಾಡಲಾಗಿದೆ. ಸಾಮಾನ್ಯ ವೈರಲ್ ಜ್ವರದಂತೆ ನಿಫಾ ಲಕ್ಷಣವಿದ್ದರೂ, ಜ್ಞಾನ ತಪ್ಪುವುದು, ಮಾನಸಿಕ ಗೊಂದಲ ಮತ್ತು ಫಿಟ್ಸ್ ಲಕ್ಷಣವಿದ್ದಲ್ಲಿ ತಕ್ಷಣ ಆಸ್ಪತ್ರೆಗೆ ದಾಖಲಾಗಬೇಕು ಎಂದು ಸೂಚನೆ ನೀಡಿದರು. ಶಂಕಿತ ನಿಫಾ ಸೋಂಕಿತರಿದ್ದಲ್ಲಿ ಅವರನ್ನು ಪ್ರತ್ಯೇಕವಾಗಿಡುವುದು, ಹಸ್ತಲಾಘವ ಮಾಡಬಾರದು, ರೋಗಿಗಳ ಉಪಚಾರದ ವೇಳೆ ಮಾಸ್ಕ್ , ಗ್ಲೌಸ್ ಧರಿಸುವುದು ಕಡ್ಡಾಯ. ನಿಫಾ…

Read More

ಮಂಗಳೂರು: ಗಡಿಭಾಗದ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಉಪ್ಪಳ ಪಚ್ಚಂಪಾರೆಯಲ್ಲಿ ತಾಯಿ ತನ್ನ ಒಂದೂವರೆ ತಿಂಗಳ ಹೆಣ್ಣು ಮಗುವನ್ನು ಕೆಸರು ನೀರಿನಲ್ಲಿ ಮುಳುಗಿಸಿ ಕೊಲೆಗೈದ ಘಟನೆ ನಡೆದಿದೆ. ಮೃತ ಒಂದೂವರೆ ತಿಂಗಳ ಶಿಶು ಸುಮಂಗಲಿ-ಸತ್ಯನಾರಾಯಣ ದಂಪತಿಯ ಪುತ್ರಿ ಎಂದು ಗುರುತಿಸಲಾಗಿದ್ದು,ತಾಯಿ ಮತ್ತು ಮಗು ನಾಪತ್ತೆಯಾದುದರಿಂದ ಮನೆಯವರು ಹುಡುಕಾಡಿದಾಗ ತಾಯಿಯನ್ನು ಮನೆಯ ಅಲ್ಪದೂರದಿಂದ ಪತ್ತೆ ಹಚ್ಚಲಾಗಿದ್ದು, ಮಗು ನಾಪತ್ತೆಯಾಗಿತ್ತು, ಈ ಬಗ್ಗೆ ವಿಚಾರಿಸಿದಾಗ ಮಗುವನ್ನು ಸಮೀಪದ ಬಯಲಿನಲ್ಲಿ ಕೆಸರು ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿರುವುದಾಗಿ ತಿಳಿಸಿದ್ದಳು, ಕೂಡಲೇ ಮಗುವನ್ನು ಮೇಲಕ್ಕೆತ್ತಿ ಉಪ್ಪಳದ ಮಂಗಲ್ಪಾಡಿ ಆಸ್ಪತ್ರೆಗೆ ಕರೆದೊಯ್ದರೂ ಆಗಲೇ ಮೃತಪಟ್ಟಿದೆ. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮಹಿಳೆಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಮಹಿಳೆ ಮಾನಸಿಕ ಅಸ್ವಸ್ಥತೆಯಂತೆ ವರ್ತಿಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬೇರೆ ಯಾವುದಾದರೂ ಕಾರಣ ಇದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Read More

ನವದೆಹಲಿ: ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳು , ಸಿಬ್ಬಂದಿಗಳು ನಿಗದಿಪಡಿಸಿದ ಚುನಾವಣಾ ಕೇಂದ್ರದಲ್ಲಿ ನಿರ್ದಿಷ್ಟ ಮಾದರಿಯಲ್ಲೇ ಅಂಚೆ ಮತ ಚಲಾವಣೆ ಮಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದೆ. ಅಂಚೆ ಮತದಾನದ ದುರ್ಬಳಕೆ ತಡೆಯಲು ಕೇಂದ್ರ ಚುನಾವಣಾ ಆಯೋಗ ಪ್ರಸ್ತಾಪಿಸಿದ್ದ ಹಿನ್ನಲೆ ಶಿಫಾರಸ್ಸನ್ನು ಕೇಂದ್ರ ಕಾನೂನು ಸಚಿವಾಲಯ ಅಂಗೀಕರಿಸಿ ಅಧಿಸೂಚನೆ ಹೊರಡಿಸಿದೆ. ನಿಯೋಜಿಸಲಾದ ಅಧಿಕಾರಿಗಳಿಗೆ ಚುನಾವಣೆಯ ದಿನ ರಾತ್ರಿ 8ರ ವರೆಗೂ ಮತ ಚಲಾವಣೆಗೆ ಅವಕಾಶವಿದೆ.ಈ ವೇಳೆ ಅದನ್ನು ಮತಗಟ್ಟೆ ಹೊರಗೆ ಒಯ್ದು ನಂತರ ಚುನಾವಣಾಧಿಕಾರಿಗೆ ಮತದಾನ ಮಾಡಲು ಅವಕಾಶ ನೀಡುತ್ತಿದ್ದರು. ಆದರೆ ಹೆಚ್ಚಿನ ಸಮಯ ಮತ ಚೀಟಿ ಅವರ ಬಳಿ ಇದ್ದಷ್ಟೂ ಅವರು ರಾಜಕೀಯ ಪಕ್ಷಗಳ ಅಥವಾ ಅಭ್ಯರ್ಥಿಗಳ ಬೆದರಿಕೆ, ಲಂಚ, ಒತ್ತಡಕ್ಕೆ ಒಳಗಾಗಿ ಮತ ಚಲಾವಣೆ ಮಾಡುವ ಸಾಧ್ಯತೆ ಹೆಚ್ಚಿರುತ್ತದೆ. ಇದಕ್ಕಾಗಿ ಈ ಬದಲಾವಣೆ ತರಲಾಗಿದೆ ಎನ್ನಲಾಗಿದೆ.

Read More

ಮಂಗಳೂರು: ನಗರದ ಕೆಂಜಾರಿನಲ್ಲಿರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಅಕ್ರಮ ಸಾಗಾಟದ 14.50 ಲಕ್ಷ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಮಂಗಳವಾರ ಏರ್ ಇಂಡಿಯಾ ವಿಮಾನದಲ್ಲಿ ದುಬೈನಿಂದ ಆಗಮಿಸಿದ ಪ್ರಯಾಣಿಕ ಮಂಗಳೂರು ಏರ್ಪೋರ್ಟ್‌ನಲ್ಲಿ ಬಂದಿಳಿದಿದ್ದಾನೆ‌. ಈತನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ‌. ಈ ವೇಳೆ ಈತ ನಾಲ್ಕು ರಟ್ಟಿನ ಪೆಟ್ಟಿಗೆಯ ಒಳಭಾಗದಲ್ಲಿ ಇರಿಸಲಾಗಿದ್ದ ನಾಲ್ಕು ನೀಲಿ ಬಣ್ಣದ ಕಾರ್ಬನ್ ನ ದಪ್ಪದ ಕಾಗದದ ಹಾಳೆಗಳ ಎರಡು ಪದರಗಳ ನಡುವೆ ಬಚ್ಚಿಟ್ಟು ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ತಕ್ಷಣ ಕಸ್ಟಮ್ಸ್ ಅಧಿಕಾರಿಗಳು ಆತನನ್ನು ವಶಕ್ಕೆ ತೆಗೆದುಕೊಂಡು 242 ಗ್ರಾಂ ಚಿನ್ನದ ಪುಡಿಯನ್ನು ವಶಪಡಿಸಿಕೊಂಡಿದ್ದಾರೆ. ಇದರ ಮೌಲ್ಯ 14.50 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

Read More

ಉಡುಪಿ: ಬೈಂದೂರಿನ ಬಿಜೆಪಿ ಮುಖಂಡ, ಗೋವಿಂದ ಬಾಬು ಪೂಜಾರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಸಂಗಡಿಗರೊಂದಿಗೆ ಸೇರಿಕೊಂಡು ಸುಮಾರು 7 ಕೋಟಿ ವಂಚಿಸಿದ ಆರೋಪ ಎದುರಿಸುತ್ತಿರುವ ಚೈತ್ರ ಕುಂದಾಪುರ ತಡರಾತ್ರಿ ಬೆಂಗಳೂರು ಸಿಸಿಬಿ ಪೊಲೀಸರು ಬಲೆಗೆ ಬಿದ್ದಿದ್ದಾಳೆ. ಕಳೆದ ಕೆಲದಿನಗಳಿಂದ ತಲೆಮರೆಸಿಕೊಂಡಿದ್ದ ಚೈತ್ರ ಕುಂದಾಪುರಳನ್ನು ಉಡುಪಿಯ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಮಂಗಳವಾರ ರಾತ್ರಿ ಬೆಂಗಳೂರಿನ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಈಕೆಯ ಜೊತೆಗೆ ಮತ್ತಿಬ್ಬರು ಆರೋಪಿಗಳನ್ನೂ ವಶಕ್ಕೆ ಪಡೆಯಲಾಗಿದೆ. ಸದ್ಯ ಪ್ರಕರಣದಲ್ಲಿ ಚೈತ್ರ ಜೊತೆಗೆ ಪ್ರಸಾದ್, ಗಗನ್ ಕಡೂರು, ಪ್ರಜ್ವಲ್ ಶೆಟ್ಟಿ ಆರ್ ಎಸ್ ಧನರಾಜ್, ರಮೇಶ್, ಶ್ರೀಕಾಂತ್ ರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Read More

ಕೇರಳ: ನಿಫಾ ವೈರಸ್ ಸೋಂಕಿನಿಂದ ಶಂಕಿತ ಎರಡು ಅಸ್ವಾಭಾವಿಕ ಸಾವುಗಳ ನಂತರ ಕೇರಳದ ಆರೋಗ್ಯ ಇಲಾಖೆ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಆರೋಗ್ಯ ಎಚ್ಚರಿಕೆ ನೀಡಿದೆ. ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಉನ್ನತ ಮಟ್ಟದ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸಿದ್ದಾರೆ ಎಂದು ಆರೋಗ್ಯ ಇಲಾಖೆ ಸೋಮವಾರ ರಾತ್ರಿ ಪ್ರಕಟಣೆಯಲ್ಲಿ ತಿಳಿಸಿದೆ. ಜ್ವರದ ನಂತರ ಎರಡು ಅಸ್ವಾಭಾವಿಕ ಸಾವುಗಳು ಖಾಸಗಿ ಆಸ್ಪತ್ರೆಯಿಂದ ವರದಿಯಾಗಿದ್ದು, ಇವು ನಿಫಾ ವೈರಸ್‌ನಿಂದ ಉಂಟಾಗಿರಬಹುದು ಎಂದು ಶಂಕಿಸಲಾಗಿದೆ. ಮೃತರಲ್ಲಿ ಒಬ್ಬರ ಸಂಬಂಧಿಕರನ್ನೂ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ. 2018 ಮತ್ತು 2021 ರಲ್ಲಿ ಕೋಝಿಕ್ಕೋಡ್ ಜಿಲ್ಲೆಯಲ್ಲಿ ನಿಫಾ ವೈರಸ್ ಸೋಂಕಿನಿಂದ ಸಾವುಗಳು ವರದಿಯಾಗಿವೆ. ದಕ್ಷಿಣ ಭಾರತದಲ್ಲಿ ಮೊದಲ ನಿಫಾ ವೈರಸ್ ಏಕಾಏಕಿ ಕೋಝಿಕ್ಕೋಡ್‌ನಲ್ಲಿ ಮೇ 19, 2018 ರಂದು ವರದಿಯಾಗಿದೆ. ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ, ನಿಫಾ ವೈರಸ್ ಸೋಂಕು ಪ್ರಾಣಿಗಳಿಂದ ಜನರಿಗೆ ಹರಡುವ ಝೂನೋಟಿಕ್ ಕಾಯಿಲೆಯಾಗಿದೆ ಮತ್ತು ಕಲುಷಿತ ಆಹಾರದ ಮೂಲಕ ಅಥವಾ ನೇರವಾಗಿ ವ್ಯಕ್ತಿಯಿಂದ ವ್ಯಕ್ತಿಗೆ…

Read More

ಬೆಂಗಳೂರು: ಗ್ರಾಮ ಲೆಕ್ಕಿಗರು ಜನರ ಕೈಗೇ ಸಿಗುತ್ತಿಲ್ಲ. ಅವರು ಎಲ್ಲಿರುತ್ತಾರೆ ಎಂದು ಹುಡುಕಿಕೊಂಡು ಹೋಗುವುದೇ ಜನರಿಗೆ ಒಂದು ತಲೆ ನೋವಾಗಿದೆ. ಆದ್ದರಿಂದ ಗ್ರಾಮ‌ ಲೆಕ್ಕಿಗರು ಗ್ರಾಮ ಪಂಚಾಯ್ತಿಗಳಲ್ಲೇ ಕುಳಿತು ಕೆಲಸ ಮಾಡುವಂತಾಗಬೇಕು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.‌ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾಧಿಕಾರಿಗಳ ಮತ್ತು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಈ ರೀತಿ ಸೂಚನೆ ನೀಡಿದರು. ಗ್ರಾಮ ಲೆಕ್ಕಿಗರನ್ನು ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುವಂತೆ ಮತ್ತು ಅವರಿಗೆ ಗ್ರಾಮ ಪಂಚಾಯ್ತಿಯಲ್ಲೇ ಒಂದು ಕೊಠಡಿ ಇರುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಸಿಎಂ ನೀಡಿದ ಉಳಿದ ಸೂಚನೆಗಳು : ಸರ್ವೇ ಗೆ ಸಂಬಂಧಿಸಿದ ವ್ಯಾಜ್ಯಗಳು ಶೀಘ್ರ ವಿಲೇವಾರಿಗಾಗಿ ಕ್ರಮ, ಭೂ ಮಾಪಕರಿಂದ ಸರ್ವೇ ಪ್ರಕರಣಗಳು ಬಾಕಿ ಉಳಿಯಬಾರದು. ರೈತರು ಸರ್ವೇ ವ್ಯಾಜ್ಯಗಳಿಗಾಗಿ ಕಚೇರಿಗೆ ಅಲೆಯುವುದನ್ನು ತಕ್ಷಣದಿಂದ ತಪ್ಪಿಸಿ ಕಂದಾಯ ಇಲಾಖೆಯಲ್ಲಿ ಕಡತಗಳು ಅನಲೈನ ನಲ್ಲಿ 5-10 ದಿನದೊಳಗೆ ವಿಲೇವಾರಿ ಆಗಬೇಕು, ಸರ್ವೇ mismatch ಗಳನ್ನು ಭೂ ಮಾಪಕರು, ಎಸಿ, ತಹಸೀಲ್ದಾರ್…

Read More

ಉಡುಪಿ: ಕ್ಯೂ ಆರ್ ಕೋಡ್ ಬಳಸಿ ಗೂಗಲ್ ಪೇ ಮೂಲಕ ಖಾತೆಯಿಂದ ಹಣ ವರ್ಗಾಯಿಸಿ ವಂಚಿಸಿರುವ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ. ಉಷಾ ಕಿರಣ್ ಎಂಬವರು ಆಗಸ್ಟ್ 27ರಂದು ಸೊತ್ತು ಮಾರಾಟದ ಬಗ್ಗೆ ಓಎಲ್‌ಎಕ್ಸ್‌ನಲ್ಲಿ ಮಾಹಿತಿ ಹಾಕಿದ್ದು ಮಹಿಳೆಯೊಬ್ಬರು ಕರೆ ಮಾಡಿ ತಾನು ಸೊತ್ತುಗಳನ್ನು ಖರೀದಿಸುವುದಾಗಿ ತಿಳಿಸಿ, ಉಷಾ ಕಿರಣ್ ಅವರ ಗೂಗಲ್ ಪೇ ನಂಬರನ್ನು ಪಡೆದುಕೊಂಡಿದ್ದರು. ಬಳಿಕ ಉಷಾ ಕಿರಣ್ ಅವರ ಮೊಬೈಲ್‌ಗೆ ತುಂಬಾ ಕ್ಯೂ‌ ಕೋಡ್‌ಗಳು ಬಂದಿದ್ದು ಇದನ್ನು ತೆರೆದು ನೋಡಿದಾಗ ಉಷಾ ಕಿರಣ್ ಅವರ ಗೂಗಲ್ ಪೇ ಆಪ್ ತೆರೆದುಕೊಂಡಿತು. ಇದರಿಂದ ಆಗಸ್ಟ್ 27 ಮತ್ತು 28ರಂದು ಇವರ ಮೂರು ಬ್ಯಾಂಕ್‌ ಖಾತೆಗಳಿಂದ ಒಟ್ಟು 1,28,496ರೂ. ಹಣ ಬೇರೆ ಖಾತೆಗೆ ವರ್ಗಾವಣೆ ಆಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

Read More

ಬಂಟ್ವಾಳ: ತನ್ನ ಪತ್ನಿ ಮನೆಗೆ ಬಂದಿದ್ದ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದ ಕಳ್ಳಿಗೆ ಗ್ರಾಮದ ಪಚ್ಚಿನಡ್ಕದಲ್ಲಿ ನಡೆದಿದೆ. ಉಳ್ಳಾಲ ತಾಲೂಕು ಕೊಂಡಾಣ ಮಿತ್ರನಗರ ನಿವಾಸಿ ರವೀಂದ್ರ (35) ಆತ್ಮಹತ್ಯೆಗೈದ ವ್ಯಕ್ತಿ. ರವೀಂದ್ರ ಅವರು ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಪಚ್ಚಿನಡ್ಕದ ಪತ್ನಿಯ ಮನೆಗೆ ತೆರಳಿದ್ದು ಮಧ್ಯಾಹ್ನ 12 ಗಂಟೆಗೆ ತನ್ನ ಪತ್ನಿ ಮತ್ತು ಗಂಡು ಮಗುವನ್ನು ಸಂಬಂಧಿಕರ ಶುಭ ಕಾರ್ಯಕ್ಕೆ ಬಿಟ್ಟು ಮತ್ತೆ ಪತ್ನಿಯ ಮನೆ ವಾಪಸ್ಸಾಗಿದ್ದರು. ಸಂಜೆ ಪತ್ನಿ ಮೊಬೈಲ್ ಕರೆ ಮಾಡಿದಾಗ ರವೀಂದ್ರ ಅವರು ಕರೆ ಸ್ವೀಕರಿಸಿಲ್ಲ. ಗಾಬರಿಗೊಂಡ ಪತ್ನಿ ನೆರೆಮನೆಯವರಲ್ಲಿ ವಿಚಾರಿಸಿದ್ದಾರೆ. ಅವರು ಮನೆ ಕಡೆ ತೆರಳಿದಾಗ ಚಾವಡಿಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆಗೈದ ವಿಚಾರ ಬೆಳಕಿಗೆ ಬಂದಿದೆ. ಆರ್ಥಿಕವಾಗಿ ನೊಂದು ಕೃತ್ಯ ಎಸಗಿರುವ ಶಂಕೆಯಿದೆ. ಬಂಟ್ವಾಳ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More